Homeಅಂಕಣಗಳುಮಾಧ್ಯಮದ ವಿಪ್ರ ವೈರಸ್ಸನ್ನು ಲಂಕೇಶರು ಆಗಲೇ ಗುರುತಿಸಿದ್ದರು

ಮಾಧ್ಯಮದ ವಿಪ್ರ ವೈರಸ್ಸನ್ನು ಲಂಕೇಶರು ಆಗಲೇ ಗುರುತಿಸಿದ್ದರು

- Advertisement -
ಬ್ರಾಹ್ಮಣ ಮಾಧ್ಯಮ: ಪ್ರತಿಕ್ರಿಯೆ 2
| ಎಲ್.ಎನ್.ಮುಕುಂದರಾಜ್ |
ಜಗತ್ತಿನ ಚರಿತ್ರೆಯನ್ನು ಗಮನಿಸಿ ಸಾಮಾನ್ಯವಾಗಿ ಸರ್ವಾಧಿಕಾರಿಗಳು ಅಧಿಕಾರಕ್ಕೆ ಬಂದ ಕೂಡಲೇ ಎಲ್ಲಾ ಮಾಧ್ಯಮಗಳನ್ನು ತಮ್ಮ ಕೈವಶ ಮಾಡಿಕೊಳ್ಳುತ್ತಾರೆ. ನಮ್ಮ ದೇಶದಲ್ಲಿಯೂ ಈಗ ಅಂತಹುದೇ ವಾತಾವರಣ ನಿರ್ಮಾಣವಾಗಿದೆ.
ನಾನು ನನ್ನ ಪ್ರಾಯದ ದಿನಗಳಲ್ಲಿ ಬಿಜೆಪಿಯ ಬಹು ನಿಷ್ಠಾವಂತ ಬೆಂಬಲಿಗನಾಗಿದ್ದೆ. ನಾನು ಬಲ್ಲಂತೆ ಬಿಜೆಪಿ ಒಂದು ರಾಜಕೀಯ ಪಕ್ಷವೇ ಅಲ್ಲ. ಅದರ ಬೆನ್ನು ಕಟ್ಟಿ ನಿಲ್ಲಿಸಿದವರು ಪುರೋಹಿತರು. ಕಳೆದ ಎಪ್ಪತ್ತು ವರ್ಷಗಳಲ್ಲಿ ನಮ್ಮ ದೇಶದ ತಳ ಸಮುದಾಯ, ಮುಖ್ಯವಾಗಿ ನಮ್ಮ ಹೆಣ್ಣು ಮಕ್ಕಳು ವಿದ್ಯೆ, ಉದ್ಯೋಗಗಳನ್ನು ಪಡೆದು ನೆಮ್ಮದಿಯ ಬದುಕು ಕಟ್ಟಿಕೊಂಡರು. ಇದಕ್ಕೆ ಪೂರ್ವದಲ್ಲಿ ಸಾವಿರಾರು ವರ್ಷಗಳಿಂದ ಈ ದೇಶದ ಒಂದು ಮೇಲ್ಜಾತಿ ಮಾತ್ರ ವಿದ್ಯೆ, ಉದ್ಯೋಗದ ಅವಕಾಶ ಪಡೆದಿತ್ತು. ಈಗ ಎಲ್ಲಾ ಜಾತಿಯ ಜನ ವಿದ್ಯಾವಂತರಾಗಿ ಸುಖದ ಬದುಕಿನ ಕಡೆಗೆ ನಡೆದ ಪವಾಡವು ಅವರನ್ನು ಧಿಗ್ಭ್ರಾಂತಗೊಳಿಸಿದೆ. ಜೊತೆಗೆ ಅವರ ಹೊಟ್ಟೆಯುರಿಗೂ ಕಾರಣವಾಗಿದೆ.
ಇದನ್ನು ನಿಯಂತ್ರಿಸಲು ಸಂವಿಧಾನವನ್ನೇ ಬುಡಮೇಲು ಮಾಡಬೇಕಾದ ಅನಿವಾರ್ಯತೆ ವೈದಿಕರಿಗೆ ಇದೆ. ತಮ್ಮ ಈ ಒಳ ದುರುದ್ದೇಶವನ್ನು ಕಾರ್ಯರೂಪಕ್ಕೆ ತರಲು ಅವರು ಬಿಜೆಪಿ ಎಂಬ ಪಕ್ಷವನ್ನು ಕಟ್ಟಿದರು. 90% ಶೂದ್ರರ ಓಟು ಗಿಟ್ಟಿಸಲು ಮುಸ್ಲಿಮರೆಂಬ ಬೆದರು ಗೊಂಬೆಯನ್ನು ಮುಂದು ಮಾಡಿದರು. ತಮ್ಮ ನೀತಿಯನ್ನು ಶೂದ್ರರ ದಡ್ಡ ತಲೆಗಳಿಗೆ ತುಂಬುವ ಆಧುನಿಕ ಮಾಧ್ಯಮಗಳನ್ನು ಬಳಸಿಕೊಳ್ಳುವಲ್ಲಿ ಯಶಸ್ವಿಯಾದರು.
ಖಾಸಗಿ ಟಿ.ವಿ ವಾಹಿನಿಗಳಿಗೆ ಬಂಡವಾಳ ಹೂಡುವವರು ಶ್ರೀಮಂತ ಶೂದ್ರರು. ಆದರೆ ಅಲ್ಲಿ ಕೆಲಸ ಮಾಡುವವರು ಬಹುತೇಕ ಬ್ರಾಹ್ಮಣರು. ಇಂದಿನ 99% ಮಾಧ್ಯಮಗಳು ಬ್ರಾಹ್ಮಣರು ಹಿಡಿತದಲ್ಲಿವೆ. ಅವರು ಜಾತಿ ಮತ್ತು ಹಣದ ಕಾರಣಕ್ಕಾಗಿ ಸಂಪೂರ್ಣ ಬಿಜೆಪಿಯ ಬೆಂಬಲಿಗರಾಗಿ ಕೆಲಸ ಮಾಡುತ್ತಿದ್ದಾರೆ.
ರಾಮಕೃಷ್ಣ ಹೆಗಡೆಯಂತಹ ಗುಳ್ಳೆನರಿಯಂತಹ ರಾಜಕಾರಣಿಯನ್ನು ಬಹು ದೊಡ್ಡ ತತ್ವಜ್ಞಾನಿಯಂತೆ ಆ ಕಾಲದ ಪತ್ರಿಕೆಗಳು ಬಿಂಬಿಸಿದ್ದವು. ಇದಕ್ಕೆ ಏಕೈಕ ಕಾರಣ ಹೆಗಡೆ ಜಾತಿ. ಆಗಲೆ ವೈದಿಕ ವಿಕೃತತೆಯನ್ನು ಲಂಕೇಶರಂತಹ ಲೇಖಕರು ಗ್ರಹಿಸಿದ್ದರು. ನಂತರ ನಿಧಾನವಾಗಿ ಈ ವಿಕೃತ ವೈರಸ್ ಎಲ್ಲ ಮಾಧ್ಯಮಗಳನ್ನೂ ಆಕ್ರಮಿಸತೊಡಗಿತು.
ಬಿಜೆಪಿಯ ಸರ್ವಾಧಿಕಾರಿ ಆಡಳಿತಕ್ಕೆ ತಡೆಯೊಡ್ಡಲು ಪ್ರತಿಯೊಬ್ಬರು ಆಲೋಚಿಸಬೇಕು. ಟಿ.ವಿ ವಾಹಿನಿಗಳು ಸೇರಿದಂತೆ ಎಲ್ಲ ಮಾಧ್ಯಮಗಳಿಗೂ ದಲಿತ, ಶೂದ್ರ ಹುಡುಗರನ್ನು ಪತ್ರಕರ್ತರನ್ನಾಗಿ ಸೇರಿಸುವ ಬಗ್ಗೆ ಜಾತ್ಯತೀತರು ಪ್ರಯತ್ನ ಪಡಬೇಕು. ಆ ಮೂಲಕ ಮಾಧ್ಯಮಕ್ಕೆ ಹತ್ತಿದ ವಿಪ್ರ ವೈರಸ್ಸನ್ನು ನಾಶ ಮಾಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...