Homeಅಂಕಣಗಳುಮಾಧ್ಯಮದ ವಿಪ್ರ ವೈರಸ್ಸನ್ನು ಲಂಕೇಶರು ಆಗಲೇ ಗುರುತಿಸಿದ್ದರು

ಮಾಧ್ಯಮದ ವಿಪ್ರ ವೈರಸ್ಸನ್ನು ಲಂಕೇಶರು ಆಗಲೇ ಗುರುತಿಸಿದ್ದರು

- Advertisement -
ಬ್ರಾಹ್ಮಣ ಮಾಧ್ಯಮ: ಪ್ರತಿಕ್ರಿಯೆ 2
| ಎಲ್.ಎನ್.ಮುಕುಂದರಾಜ್ |
ಜಗತ್ತಿನ ಚರಿತ್ರೆಯನ್ನು ಗಮನಿಸಿ ಸಾಮಾನ್ಯವಾಗಿ ಸರ್ವಾಧಿಕಾರಿಗಳು ಅಧಿಕಾರಕ್ಕೆ ಬಂದ ಕೂಡಲೇ ಎಲ್ಲಾ ಮಾಧ್ಯಮಗಳನ್ನು ತಮ್ಮ ಕೈವಶ ಮಾಡಿಕೊಳ್ಳುತ್ತಾರೆ. ನಮ್ಮ ದೇಶದಲ್ಲಿಯೂ ಈಗ ಅಂತಹುದೇ ವಾತಾವರಣ ನಿರ್ಮಾಣವಾಗಿದೆ.
ನಾನು ನನ್ನ ಪ್ರಾಯದ ದಿನಗಳಲ್ಲಿ ಬಿಜೆಪಿಯ ಬಹು ನಿಷ್ಠಾವಂತ ಬೆಂಬಲಿಗನಾಗಿದ್ದೆ. ನಾನು ಬಲ್ಲಂತೆ ಬಿಜೆಪಿ ಒಂದು ರಾಜಕೀಯ ಪಕ್ಷವೇ ಅಲ್ಲ. ಅದರ ಬೆನ್ನು ಕಟ್ಟಿ ನಿಲ್ಲಿಸಿದವರು ಪುರೋಹಿತರು. ಕಳೆದ ಎಪ್ಪತ್ತು ವರ್ಷಗಳಲ್ಲಿ ನಮ್ಮ ದೇಶದ ತಳ ಸಮುದಾಯ, ಮುಖ್ಯವಾಗಿ ನಮ್ಮ ಹೆಣ್ಣು ಮಕ್ಕಳು ವಿದ್ಯೆ, ಉದ್ಯೋಗಗಳನ್ನು ಪಡೆದು ನೆಮ್ಮದಿಯ ಬದುಕು ಕಟ್ಟಿಕೊಂಡರು. ಇದಕ್ಕೆ ಪೂರ್ವದಲ್ಲಿ ಸಾವಿರಾರು ವರ್ಷಗಳಿಂದ ಈ ದೇಶದ ಒಂದು ಮೇಲ್ಜಾತಿ ಮಾತ್ರ ವಿದ್ಯೆ, ಉದ್ಯೋಗದ ಅವಕಾಶ ಪಡೆದಿತ್ತು. ಈಗ ಎಲ್ಲಾ ಜಾತಿಯ ಜನ ವಿದ್ಯಾವಂತರಾಗಿ ಸುಖದ ಬದುಕಿನ ಕಡೆಗೆ ನಡೆದ ಪವಾಡವು ಅವರನ್ನು ಧಿಗ್ಭ್ರಾಂತಗೊಳಿಸಿದೆ. ಜೊತೆಗೆ ಅವರ ಹೊಟ್ಟೆಯುರಿಗೂ ಕಾರಣವಾಗಿದೆ.
ಇದನ್ನು ನಿಯಂತ್ರಿಸಲು ಸಂವಿಧಾನವನ್ನೇ ಬುಡಮೇಲು ಮಾಡಬೇಕಾದ ಅನಿವಾರ್ಯತೆ ವೈದಿಕರಿಗೆ ಇದೆ. ತಮ್ಮ ಈ ಒಳ ದುರುದ್ದೇಶವನ್ನು ಕಾರ್ಯರೂಪಕ್ಕೆ ತರಲು ಅವರು ಬಿಜೆಪಿ ಎಂಬ ಪಕ್ಷವನ್ನು ಕಟ್ಟಿದರು. 90% ಶೂದ್ರರ ಓಟು ಗಿಟ್ಟಿಸಲು ಮುಸ್ಲಿಮರೆಂಬ ಬೆದರು ಗೊಂಬೆಯನ್ನು ಮುಂದು ಮಾಡಿದರು. ತಮ್ಮ ನೀತಿಯನ್ನು ಶೂದ್ರರ ದಡ್ಡ ತಲೆಗಳಿಗೆ ತುಂಬುವ ಆಧುನಿಕ ಮಾಧ್ಯಮಗಳನ್ನು ಬಳಸಿಕೊಳ್ಳುವಲ್ಲಿ ಯಶಸ್ವಿಯಾದರು.
ಖಾಸಗಿ ಟಿ.ವಿ ವಾಹಿನಿಗಳಿಗೆ ಬಂಡವಾಳ ಹೂಡುವವರು ಶ್ರೀಮಂತ ಶೂದ್ರರು. ಆದರೆ ಅಲ್ಲಿ ಕೆಲಸ ಮಾಡುವವರು ಬಹುತೇಕ ಬ್ರಾಹ್ಮಣರು. ಇಂದಿನ 99% ಮಾಧ್ಯಮಗಳು ಬ್ರಾಹ್ಮಣರು ಹಿಡಿತದಲ್ಲಿವೆ. ಅವರು ಜಾತಿ ಮತ್ತು ಹಣದ ಕಾರಣಕ್ಕಾಗಿ ಸಂಪೂರ್ಣ ಬಿಜೆಪಿಯ ಬೆಂಬಲಿಗರಾಗಿ ಕೆಲಸ ಮಾಡುತ್ತಿದ್ದಾರೆ.
ರಾಮಕೃಷ್ಣ ಹೆಗಡೆಯಂತಹ ಗುಳ್ಳೆನರಿಯಂತಹ ರಾಜಕಾರಣಿಯನ್ನು ಬಹು ದೊಡ್ಡ ತತ್ವಜ್ಞಾನಿಯಂತೆ ಆ ಕಾಲದ ಪತ್ರಿಕೆಗಳು ಬಿಂಬಿಸಿದ್ದವು. ಇದಕ್ಕೆ ಏಕೈಕ ಕಾರಣ ಹೆಗಡೆ ಜಾತಿ. ಆಗಲೆ ವೈದಿಕ ವಿಕೃತತೆಯನ್ನು ಲಂಕೇಶರಂತಹ ಲೇಖಕರು ಗ್ರಹಿಸಿದ್ದರು. ನಂತರ ನಿಧಾನವಾಗಿ ಈ ವಿಕೃತ ವೈರಸ್ ಎಲ್ಲ ಮಾಧ್ಯಮಗಳನ್ನೂ ಆಕ್ರಮಿಸತೊಡಗಿತು.
ಬಿಜೆಪಿಯ ಸರ್ವಾಧಿಕಾರಿ ಆಡಳಿತಕ್ಕೆ ತಡೆಯೊಡ್ಡಲು ಪ್ರತಿಯೊಬ್ಬರು ಆಲೋಚಿಸಬೇಕು. ಟಿ.ವಿ ವಾಹಿನಿಗಳು ಸೇರಿದಂತೆ ಎಲ್ಲ ಮಾಧ್ಯಮಗಳಿಗೂ ದಲಿತ, ಶೂದ್ರ ಹುಡುಗರನ್ನು ಪತ್ರಕರ್ತರನ್ನಾಗಿ ಸೇರಿಸುವ ಬಗ್ಗೆ ಜಾತ್ಯತೀತರು ಪ್ರಯತ್ನ ಪಡಬೇಕು. ಆ ಮೂಲಕ ಮಾಧ್ಯಮಕ್ಕೆ ಹತ್ತಿದ ವಿಪ್ರ ವೈರಸ್ಸನ್ನು ನಾಶ ಮಾಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...