Homeಅಂಕಣಗಳುಮಾಧ್ಯಮದ ವಿಪ್ರ ವೈರಸ್ಸನ್ನು ಲಂಕೇಶರು ಆಗಲೇ ಗುರುತಿಸಿದ್ದರು

ಮಾಧ್ಯಮದ ವಿಪ್ರ ವೈರಸ್ಸನ್ನು ಲಂಕೇಶರು ಆಗಲೇ ಗುರುತಿಸಿದ್ದರು

- Advertisement -
ಬ್ರಾಹ್ಮಣ ಮಾಧ್ಯಮ: ಪ್ರತಿಕ್ರಿಯೆ 2
| ಎಲ್.ಎನ್.ಮುಕುಂದರಾಜ್ |
ಜಗತ್ತಿನ ಚರಿತ್ರೆಯನ್ನು ಗಮನಿಸಿ ಸಾಮಾನ್ಯವಾಗಿ ಸರ್ವಾಧಿಕಾರಿಗಳು ಅಧಿಕಾರಕ್ಕೆ ಬಂದ ಕೂಡಲೇ ಎಲ್ಲಾ ಮಾಧ್ಯಮಗಳನ್ನು ತಮ್ಮ ಕೈವಶ ಮಾಡಿಕೊಳ್ಳುತ್ತಾರೆ. ನಮ್ಮ ದೇಶದಲ್ಲಿಯೂ ಈಗ ಅಂತಹುದೇ ವಾತಾವರಣ ನಿರ್ಮಾಣವಾಗಿದೆ.
ನಾನು ನನ್ನ ಪ್ರಾಯದ ದಿನಗಳಲ್ಲಿ ಬಿಜೆಪಿಯ ಬಹು ನಿಷ್ಠಾವಂತ ಬೆಂಬಲಿಗನಾಗಿದ್ದೆ. ನಾನು ಬಲ್ಲಂತೆ ಬಿಜೆಪಿ ಒಂದು ರಾಜಕೀಯ ಪಕ್ಷವೇ ಅಲ್ಲ. ಅದರ ಬೆನ್ನು ಕಟ್ಟಿ ನಿಲ್ಲಿಸಿದವರು ಪುರೋಹಿತರು. ಕಳೆದ ಎಪ್ಪತ್ತು ವರ್ಷಗಳಲ್ಲಿ ನಮ್ಮ ದೇಶದ ತಳ ಸಮುದಾಯ, ಮುಖ್ಯವಾಗಿ ನಮ್ಮ ಹೆಣ್ಣು ಮಕ್ಕಳು ವಿದ್ಯೆ, ಉದ್ಯೋಗಗಳನ್ನು ಪಡೆದು ನೆಮ್ಮದಿಯ ಬದುಕು ಕಟ್ಟಿಕೊಂಡರು. ಇದಕ್ಕೆ ಪೂರ್ವದಲ್ಲಿ ಸಾವಿರಾರು ವರ್ಷಗಳಿಂದ ಈ ದೇಶದ ಒಂದು ಮೇಲ್ಜಾತಿ ಮಾತ್ರ ವಿದ್ಯೆ, ಉದ್ಯೋಗದ ಅವಕಾಶ ಪಡೆದಿತ್ತು. ಈಗ ಎಲ್ಲಾ ಜಾತಿಯ ಜನ ವಿದ್ಯಾವಂತರಾಗಿ ಸುಖದ ಬದುಕಿನ ಕಡೆಗೆ ನಡೆದ ಪವಾಡವು ಅವರನ್ನು ಧಿಗ್ಭ್ರಾಂತಗೊಳಿಸಿದೆ. ಜೊತೆಗೆ ಅವರ ಹೊಟ್ಟೆಯುರಿಗೂ ಕಾರಣವಾಗಿದೆ.
ಇದನ್ನು ನಿಯಂತ್ರಿಸಲು ಸಂವಿಧಾನವನ್ನೇ ಬುಡಮೇಲು ಮಾಡಬೇಕಾದ ಅನಿವಾರ್ಯತೆ ವೈದಿಕರಿಗೆ ಇದೆ. ತಮ್ಮ ಈ ಒಳ ದುರುದ್ದೇಶವನ್ನು ಕಾರ್ಯರೂಪಕ್ಕೆ ತರಲು ಅವರು ಬಿಜೆಪಿ ಎಂಬ ಪಕ್ಷವನ್ನು ಕಟ್ಟಿದರು. 90% ಶೂದ್ರರ ಓಟು ಗಿಟ್ಟಿಸಲು ಮುಸ್ಲಿಮರೆಂಬ ಬೆದರು ಗೊಂಬೆಯನ್ನು ಮುಂದು ಮಾಡಿದರು. ತಮ್ಮ ನೀತಿಯನ್ನು ಶೂದ್ರರ ದಡ್ಡ ತಲೆಗಳಿಗೆ ತುಂಬುವ ಆಧುನಿಕ ಮಾಧ್ಯಮಗಳನ್ನು ಬಳಸಿಕೊಳ್ಳುವಲ್ಲಿ ಯಶಸ್ವಿಯಾದರು.
ಖಾಸಗಿ ಟಿ.ವಿ ವಾಹಿನಿಗಳಿಗೆ ಬಂಡವಾಳ ಹೂಡುವವರು ಶ್ರೀಮಂತ ಶೂದ್ರರು. ಆದರೆ ಅಲ್ಲಿ ಕೆಲಸ ಮಾಡುವವರು ಬಹುತೇಕ ಬ್ರಾಹ್ಮಣರು. ಇಂದಿನ 99% ಮಾಧ್ಯಮಗಳು ಬ್ರಾಹ್ಮಣರು ಹಿಡಿತದಲ್ಲಿವೆ. ಅವರು ಜಾತಿ ಮತ್ತು ಹಣದ ಕಾರಣಕ್ಕಾಗಿ ಸಂಪೂರ್ಣ ಬಿಜೆಪಿಯ ಬೆಂಬಲಿಗರಾಗಿ ಕೆಲಸ ಮಾಡುತ್ತಿದ್ದಾರೆ.
ರಾಮಕೃಷ್ಣ ಹೆಗಡೆಯಂತಹ ಗುಳ್ಳೆನರಿಯಂತಹ ರಾಜಕಾರಣಿಯನ್ನು ಬಹು ದೊಡ್ಡ ತತ್ವಜ್ಞಾನಿಯಂತೆ ಆ ಕಾಲದ ಪತ್ರಿಕೆಗಳು ಬಿಂಬಿಸಿದ್ದವು. ಇದಕ್ಕೆ ಏಕೈಕ ಕಾರಣ ಹೆಗಡೆ ಜಾತಿ. ಆಗಲೆ ವೈದಿಕ ವಿಕೃತತೆಯನ್ನು ಲಂಕೇಶರಂತಹ ಲೇಖಕರು ಗ್ರಹಿಸಿದ್ದರು. ನಂತರ ನಿಧಾನವಾಗಿ ಈ ವಿಕೃತ ವೈರಸ್ ಎಲ್ಲ ಮಾಧ್ಯಮಗಳನ್ನೂ ಆಕ್ರಮಿಸತೊಡಗಿತು.
ಬಿಜೆಪಿಯ ಸರ್ವಾಧಿಕಾರಿ ಆಡಳಿತಕ್ಕೆ ತಡೆಯೊಡ್ಡಲು ಪ್ರತಿಯೊಬ್ಬರು ಆಲೋಚಿಸಬೇಕು. ಟಿ.ವಿ ವಾಹಿನಿಗಳು ಸೇರಿದಂತೆ ಎಲ್ಲ ಮಾಧ್ಯಮಗಳಿಗೂ ದಲಿತ, ಶೂದ್ರ ಹುಡುಗರನ್ನು ಪತ್ರಕರ್ತರನ್ನಾಗಿ ಸೇರಿಸುವ ಬಗ್ಗೆ ಜಾತ್ಯತೀತರು ಪ್ರಯತ್ನ ಪಡಬೇಕು. ಆ ಮೂಲಕ ಮಾಧ್ಯಮಕ್ಕೆ ಹತ್ತಿದ ವಿಪ್ರ ವೈರಸ್ಸನ್ನು ನಾಶ ಮಾಡಬೇಕು.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋವಾ ನೈಟ್ ಕ್ಲಬ್ ಮಾಲೀಕರ ಮಧ್ಯಂತರ ಜಾಮೀನು ನಿರಾಕರಿಸಿದ ದೆಹಲಿ ನ್ಯಾಯಾಲಯ: ಥೈಲ್ಯಾಂಡ್‌ನಿಂದಲೂ ಗಡಿಪಾರು ಪ್ರಕ್ರಿಯೆ ಆರಂಭ 

ನವದೆಹಲಿ: ಕಳೆದ ವಾರ ಕನಿಷ್ಠ 25 ಜನರ ಸಾವಿಗೆ ಕಾರಣವಾಗಿದ್ದ, ಗೋವಾದ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಮತ್ತು ಗೌರವ್ ಲುಥ್ರಾಸ್ ಅವರ ಟ್ರಾನ್ಸಿಟ್ ನಿರೀಕ್ಷಣಾ ಜಾಮೀನು ಅರ್ಜಿಯನ್ನು...

ಮಾದಕ ದ್ರವ್ಯ ಬಳಕೆ-ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ ಜಾಗೃತಿ ಕಾರ್ಯಕ್ರಮ: ಪರಮೇಶ್ವರ್

ಮಾದಕ ದ್ರವ್ಯ ಬಳಕೆಯ ದುಷ್ಪರಿಣಾಮ, ಮಾರಾಟದ ಶಿಕ್ಷೆಯ ಕುರಿತು ಶಾಲಾ-ಕಾಲೇಜುಗಳಲ್ಲಿ, ಪೊಲೀಸ್ ಠಾಣೆಗಳಲ್ಲಿ ನಿಯಮಿತವಾಗಿ ಜಾಗೃತಿ ಕಾರ್ಯಕ್ರಮಗಳನ್ನು ಮಾಡಲಾಗಿರುತ್ತದೆ ಎಂದು ಗೃಹ ಸಚಿವ ಜಿ ಪರಮೇಶ್ವರ್ ಹೇಳಿದರು. ಗುರುವಾರ ವಿಧಾನ ಪರಿಷತ್ತಿನಲ್ಲಿ ಕಾಂಗ್ರೆಸ್ ಸದಸ್ಯ...

ದುಡ್ಡು ಕೊಟ್ಟವರಿಗೆ ರಾಜಾತಿಥ್ಯ, ಪೌರತ್ವಕ್ಕೆ ರಹದಾರಿ : ಏನಿದು ‘ಟ್ರಂಪ್ ಗೋಲ್ಡ್ ಕಾರ್ಡ್’

ಟ್ರಂಪ್ ಆಡಳಿತವು ಬುಧವಾರ (ಡಿಸೆಂಬರ್ 10) ಔಪಚಾರಿಕವಾಗಿ 'ಟ್ರಂಪ್ ಗೋಲ್ಡ್ ಕಾರ್ಡ್'ಗಾಗಿ ಅರ್ಜಿಗಳನ್ನು ಸ್ವೀಕರಿಸಲು ಪ್ರಾರಂಭಿಸಿದೆ. ಇದನ್ನು ಅಮೆರಿಕ ಸರ್ಕಾರ ಕನಿಷ್ಠ 1 ಮಿಲಿಯನ್ ಡಾಲರ್ ಪಾವತಿಸುವ ಜನರಿಗೆ ನೀಡಲು ಯೋಜಿಸಿದೆ. 'ಟ್ರಂಪ್ ಗೋಲ್ಡ್...

ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಜೈಲು ಶಿಕ್ಷೆ ಅಮಾನತು ಮನವಿ ನಿರಾಕರಿಸಿದ ಸುಪ್ರೀಂ ಕೋರ್ಟ್

1996 ರ ಮಾದಕ ದ್ರವ್ಯ ವಶ ಪ್ರಕರಣದಲ್ಲಿ ಮಾಜಿ ಐಪಿಎಸ್ ಅಧಿಕಾರಿ ಸಂಜೀವ್ ಭಟ್ ಅವರ 20 ವರ್ಷಗಳ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಲು ಸುಪ್ರೀಂ ಕೋರ್ಟ್ ನಿರಾಕರಿಸಿದ್ದರಿಂದ ಗುರುವಾರ ಅವರ ಬಿಡುಗಡೆಗಾಗಿನ ಪ್ರಯತ್ನ...

ಅರುಣಾಚಲ ಪ್ರದೇಶ: ಟ್ರಕ್ ಕಂದಕಕ್ಕೆ ಉರುಳಿ ಅಸ್ಸಾಂ ಮೂಲದ 21 ಕಾರ್ಮಿಕರು ಸಾವನ್ನಪ್ಪಿರುವ ಶಂಕೆ, 18 ಮೃತದೇಹಗಳು ಪತ್ತೆ

ಅರುಣಾಚಲ ಪ್ರದೇಶದ ಅಂಜಾವ್ ಜಿಲ್ಲೆಯಲ್ಲಿ ಅಸ್ಸಾಂನಿಂದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಟ್ರಕ್ ಆಳವಾದ ಕಂದಕಕ್ಕೆ ಉರುಳಿದ್ದು, 21 ಜನರು ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದೆ. ಇಲ್ಲಿಯವರೆಗೆ 18 ಶವಗಳನ್ನು ಹೊರತೆಗೆಯಲಾಗಿದೆ ಎಂಬ ಮಾಹಿತಿ ಸಿಕ್ಕಿದೆ.  ಡಿಸೆಂಬರ್ 8ನೇ...

ಜಾರ್ಖಂಡ್‌ನ 27 ಮಕ್ಕಳು ನೇಪಾಳಕ್ಕೆ ಕಳ್ಳಸಾಗಣೆ; ತನಿಖೆ ಆರಂಭಿಸಿದ ಪೊಲೀಸರು

ಉತ್ತಮ ಶಿಕ್ಷಣ ಒದಗಿಸುವ ನೆಪದಲ್ಲಿ 27 ಮಕ್ಕಳನ್ನು ನೇಪಾಳಕ್ಕೆ ಕಳ್ಳಸಾಗಣೆ ಮಾಡಲಾಗಿದೆ ಎಂಬ ಆರೋಪದ ಮೇಲೆ ಜಾರ್ಖಂಡ್‌ನ ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯ ಪೊಲೀಸರು ಗುರುವಾರ ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮಕ್ಕಳನ್ನು...

ಉಮರ್ ಖಾಲಿದ್‌ಗೆ 14 ದಿನಗಳ ಮಧ್ಯಂತರ ಜಾಮೀನು; ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಅವಕಾಶ

ಸಾಮಾಜಿಕ ಕಾರ್ಯಕರ್ತ ಉಮರ್ ಖಾಲಿದ್ ಅವರಿಗೆ ಡಿಸೆಂಬರ್ 27 ರಂದು ನಿಗದಿಯಾಗಿದ್ದ ತಮ್ಮ ಸಹೋದರಿಯ ಮದುವೆಯಲ್ಲಿ ಪಾಲ್ಗೊಳ್ಳಲು ಡಿಸೆಂಬರ್ 16 ರಿಂದ 29 ರವರೆಗೆ 14 ದಿನಗಳ ಕಾಲ ಮಧ್ಯಂತರ ಜಾಮೀನು ನೀಡಲಾಯಿತು....

ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ; ಕೋಮುವಾದವನ್ನಲ್ಲ: ಮಮತಾ ಬ್ಯಾನರ್ಜಿ

ನಾನು ಕೋಮುವಾದದಲ್ಲಿ ನಂಬಿಕೆ ಇಡುವುದಿಲ್ಲ. ಜಾತ್ಯತೀತತೆಯನ್ನು ಮಾತ್ರ ನಂಬುತ್ತೇನೆ. ಚುನಾವಣೆ ಸಮೀಪಿಸಿದಾಗಲೆಲ್ಲಾ, ಬಿಜೆಪಿ ಹಣವನ್ನು ಬಳಸಿ ಇತರ ರಾಜ್ಯಗಳಿಂದ ಜನರನ್ನು ಕರೆತಂದು ಸಾರ್ವಜನಿಕರನ್ನು ವಿಭಜಿಸಲು ಪ್ರಯತ್ನಿಸುತ್ತದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ...

ಅತ್ಯಾಚಾರ ಪ್ರಕರಣದ ವಿಚಾರಣೆ ವರ್ಗಾವಣೆ ಕೋರಿ ಪ್ರಜ್ವಲ್ ರೇವಣ್ಣ ಮನವಿ : ತಿರಸ್ಕರಿಸಿದ ಸುಪ್ರೀಂ ಕೋರ್ಟ್‌

ಬೆಂಗಳೂರಿನ 81ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಧೀಶರು ವಿಚಾರಣೆ ನಡೆಸುತ್ತಿರುವ ತಮ್ಮ ವಿರುದ್ಧದ ಎರಡು ಅತ್ಯಾಚಾರ ಪ್ರಕರಣಗಳನ್ನು ಬೇರೆ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಜೆಡಿಎಸ್‌ ಮಾಜಿ ಸಂಸದ ಪ್ರಜ್ವಲ್‌...

ಭಗವದ್ಗೀತೆ ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಮುಸ್ಲಿಂ ವ್ಯಾಪಾರಿಗೆ ಥಳಿತ : ಮೂವರ ಬಂಧನ

ಲಕ್ಷ ಕಂಠ ಗೀತಾ ಪಾರಾಯಣ (ಸುಮಾರು 5 ಲಕ್ಷ ಜನರಿಂದ ಭಗವದ್ಗೀತೆ ಪಾರಾಯಣ) ಕಾರ್ಯಕ್ರಮದಲ್ಲಿ ಚಿಕನ್ ಪಫ್ಸ್ ಮಾರಿದ ಬಡ ಮುಸ್ಲಿಂ ವ್ಯಾಪಾರಿಗೆ ಥಳಿಸಿದ ಘಟನೆ ಭಾನುವಾರ (ಡಿಸೆಂಬರ್ 7) ಕೋಲ್ಕತ್ತಾದ ಬ್ರಿಗೇಡ್...