Homeಸುಳ್ಳಪ್ಪೋ ಸುಳ್ಳುಚಲಾನಾ... ಜಲಾನಾ... ನೋಡಿದಿರಾ ‘ಬೆಂಕಿ ಹಚ್ಚುವ’ ಚಾನೆಲ್‌ನಾ?

ಚಲಾನಾ… ಜಲಾನಾ… ನೋಡಿದಿರಾ ‘ಬೆಂಕಿ ಹಚ್ಚುವ’ ಚಾನೆಲ್‌ನಾ?

- Advertisement -
- Advertisement -

ಮಿಥ್ಯ: ‘ಹಮ್ ಭಾರತ್ ಬಂದ್ ಕರನಾ ಜಾನತೆ ಹೈ, ತೊ ಹಮ್ ಭಾರತ್ ಜಲಾನಾ ಭೀ ಜಾನತೆ ಹೈ’
(ಭಾರತ್ ಬಂದ್ ಮಾಡುವುದು ಗೊತ್ತಿರುವ ನಮಗೆ ಭಾರತವನ್ನು ಸುಡುವುದೂ ಗೊತ್ತು)

ಭಾರತ ಸುಡುವ ಇಂತಹ ಪ್ರಚೋದನಾತ್ಮಕ ಹೇಳಿಕೆಯನ್ನು ಭೀಮ್ ಆರ್ಮಿ ಸಂಸ್ಥಾಪಕ, ದಲಿತ ನಾಯಕ ಚಂದ್ರಶೇಖರ್ ಅಜಾದ್ ರಾವಣ್ ಬಹಿರಂಗ ಸಭೆಯಲ್ಲಿ ಆಡಿರುವರೆಂದು ಮೂರು ದಿನಗಳ ಹಿಂದೆ ಝೀ ನ್ಯೂಸ್ (ಹಿಂದಿ) ಮತ್ತು ನ್ಯೂಸ್ 18 ಚಾನೆಲ್‌ಗಳು ಅಪಾದಿಸಿವೆ. ತಮ್ಮ ವೆಬ್‌ಸೈಟಿನಲ್ಲಿನ ಲೇಖನ ಮತ್ತು ಟ್ವಿಟರ್‌ನಲ್ಲಿ ಅವು, ‘ಮುಝಾಫರ್ ನಗರದಲ್ಲಿ ದಲಿತ ಸಭೆಯೊಂದರಲ್ಲಿ ಮಾತನಾಡುವಾಗ ಚಂದ್ರಶೇಖರ್ ಅವರು, ಜನರು ನನ್ನ ಸಿಗ್ನಲ್‌ಗೆ ಕಾಯುತ್ತಿದ್ದಾರೆ, ನಾವು ಭಾರತ್ ಬಂದ್ ಮಾಡಬಲ್ಲೆವಾದರೆ, ಭಾರತವನ್ನು ಸುಡಲೂಬಲ್ಲೆವು…,ನಮ್ಮ ಸಹನೆಗೂ ಒಂದು ಮಿತಿಯಿದೆ, ದೌರ್ಜನ್ಯಗಳಿಗೂ ಒಂದು ಮಿತಿ ಇದೆ ಎಂದು ಹೇಳಿಕೆ ನೀಡಿದರು’ ಎಂದಿವೆ.

ಸತ್ಯ: ಸತ್ಯ ಬೇರೇನೇ ಇದೆ. ಅದಕ್ಕೂ ಮೊದಲು ಝೀ ನ್ಯೂಸ್, ನ್ಯೂಸ್ 18ಗಳ ಈ ಸುದ್ದಿಗೆ ‘ಹಿಂದುತ್ವವಾದಿಗಳು’ ಸ್ಪಂದಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಚಂದ್ರಶೇಖರ್ ವಿರುದ್ಧ ವಿಪರೀತ ಆಕ್ರೋಶ ವ್ಯಕ್ತಪಡಿಸಿದ್ದಲ್ಲದೇ, ಅತ್ಯಂತ ಪ್ರಚೋದನಾಕಾರಿ ಸಂದೇಶಗಳನ್ನು ಹಾಕಿದ್ದನ್ನು ನೋಡೋಣ.

ತನ್ನನ್ನು ರಾಷ್ಟ್ರೀಯವಾದಿ ಎಂದುಕೊಳ್ಳುವ ‘ಭಯ್ಯಾಜಿ’ (ಟ್ವಿಟರ್ ಹ್ಯಾಂಡಲ್ @shiraloksharma) ಎಂಬ ವ್ಯಕ್ತಿ ಟ್ವೀಟ್ ಮಾಡಿ, ‘ಹಾಗೆ ಭಾರತ ಸುಡುತ್ತೇನೆ ಎಂದು ಬೆದರಿಸುವವರನ್ನು ಅದೇ ಬೆಂಕಿಯಲ್ಲಿ ಹಾಕಿ ಬರ‍್ಯಾನಿ ಮಾಡಿ, ಬೀದಿನಾಯಿಗಳಿಗೆ ಹಾಕುತ್ತೇವೆ. ಪ್ರಯತ್ನ ಮಾಡಿ ನೋಡಿ, ಪರಿಣಾಮ ಏನಾಗುತ್ತೆ ನೋಡಿ’ ಎಂದು ಬೆದರಿಸುತ್ತಾನೆ. ಇದೇ ಬಗೆಯಲ್ಲಿ ಹಲವಾರು ‘ದೇಶಭಕ್ತರು’ ಚಂದ್ರಶೇಖರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅಬ್ಬರಿಸುತ್ತಿದ್ದಾರೆ.

‘ಭಯ್ಯಾಜಿ’ ಎನ್ನುವಾತನ ಆಕ್ರೋಶಭರಿತ, ದಲಿತವಿರೋಧಿ ಟ್ವೀಟ್

ಆದರೆ, ಆ ಸಭೆಯ ವಿಡಿಯೋವನ್ನು ಪಡೆದು ಪರೀಕ್ಷಿಸಿದಾಗ, ಚಂದ್ರಶೇಖರ್ ಹೇಳಿದ್ದು: ‘ಭಾರತ್ ಚಲಾನಾ’ (ಭಾರತ ನಡೆಸುವುದು, ಭಾರತ ಆಳುವುದು, ರನ್ನಿಂಗ್ ಇಂಡಿಯಾ) ಎಂದೇ ಹೊರತು, ‘ಭಾರತ್ ಜಲಾನಾ’ (ಭಾರತ ಸುಡುವುದು, ಬರ್ನಿಂಗ್ ಇಂಡಿಯಾ) ಎಂದು ಅಲ್ಲವೇ ಅಲ್ಲ.

ಝೀ ನ್ಯೂಸ್, ನ್ಯೂಸ್18 ಮಾಧ್ಯಮಗಳು ಬೇಕೆಂತಲೇ ‘ಚಲಾನಾ’ ಎಂಬುದನ್ನು ‘ಜಲಾನಾ’ ಎಂದು ತಿರುಚಿ ಜನರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡಿವೆ. ಇಂತಹ ಬಹುತೇಕ ಮಾಧ್ಯಮಗಳ ಮಾಲಿಕರು ಮತ್ತು ಮ್ಯಾನೇಜ್‌ಮೆಂಟ್ ದಲಿತ ವಿರೋಧಿ ಆಗಿರುವುದೇ ಇದಕ್ಕೆಲ್ಲ ಕಾರಣ….

ವಿಡಿಯೊ ಲಿಂಕ್ ವಿಳಾಸ:  https://vimeo.com/315073201 (ವಿಡಿಯೊವನ್ನು ಸ್ಲೋ ಮಾಡಿ ಪರೀಕ್ಷಿಸಿದ್ದು)
ಇದಕ್ಕೆ ಪ್ರತಿಕ್ರಿಯಿಸಿರುವ ಚಂದ್ರಶೇಖರ್, ‘ಬೇಕೆಂತಲೇ ವಿಷಯ ತಿರುಚಿ ಗದ್ದಲ ಎಬ್ಬಿಸಲು ನೋಡಿದ ಈ ದಲಿತ ವಿರೋಧಿ ಮಾಧ್ಯಮಗಳ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವೆ’ ಎಂದಿದ್ದಾರೆ.

ಮಾನಗೇಡಿ ಚಾನೆಲ್‌ಗಳ ವಿರುದ್ಧ ಚಂದ್ರಶೇಖರ್ ಟ್ವೀಟ್

ಚಲಾನಾ ಎಂಬುದನ್ನು ಜಲಾನಾ ಮಾಡಿ ‘ಬೆಂಕಿ ಹಚ್ಚುವ’ ಇಂತಹ ಮಾಧ್ಯಮಗಳಿಗೆ ನಮ್ಮ ಧಿಕ್ಕಾರವಿರಲಿ. ಅಂದಂತೆ, ಜೆಎನ್‌ಯುನಲ್ಲಿ ಕನ್ಹಯ್ಯಕುಮಾರ್ ಮಾಡಿದ ಭಾಷಣದ ತಿರುಚಿದ ವಿಡಿಯೋವನ್ನು ಮೊದಲು ಪ್ರಸಾರ ಮಾಡಿದ್ದೇ ಇದೇ ಝೀ ನ್ಯೂಸ್ (ಹಿಂದಿ) ಚಾನೆಲ್. ಇದು ಮೋದಿ ಮತ್ತು ಬಿಜೆಪಿಯ ಕಾಲು ನೆಕ್ಕುವ ಚಾನೆಲ್ ಎಂದು ಪದೇ ಪದೇ ಸಾಬೀತಾಗಿದೆ.

(ಕೃಪೆ: ಅಲ್ಟ್ನ್ಯೂಸ್.ಕಾಮ್)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...