Homeರಾಜಕೀಯಮುಂಬೈ ಕರ್ನಾಟಕ: ಕಮಲ ಕೋಟೆಯಲ್ಲಿ ಕೈ ಮುನ್ನಡೆ

ಮುಂಬೈ ಕರ್ನಾಟಕ: ಕಮಲ ಕೋಟೆಯಲ್ಲಿ ಕೈ ಮುನ್ನಡೆ

- Advertisement -
- Advertisement -
  • ಸು-NIL |

ಬೆಳಗಾವಿ, ಧಾರವಾಡ, ಗದಗ, ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳನ್ನು ಒಳಗೊಂಡ ಮುಂಬೈ ಕರ್ನಾಟಕದಲ್ಲಿ 44 ವಿಧಾನಸಭೆ ಸೀಟುಗಳಿಗಾಗಿ ಜಿದ್ದಾಜಿದ್ದಿನ ಹೋರಾಟ ನಡೆದಿದೆ. ಲಿಂಗಾಯತ ಪ್ರಾಬಲ್ಯವಿರುವ ಇದು ಬಿಜೆಪಿಯು ನೆಚ್ಚಿನ ತಾಣ. ಆದರೆ ಬದಲಾದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ಪಕ್ಷ ತನ್ನ ಗತ ಹಿಡಿತವನ್ನು ಪುನರ್‍ಸ್ಥಾಪಿಸಲು ಪುನಃ ಗಳಿಸುವಲ್ಲಿ ತಕ್ಕಮಟ್ಟಿಗೆ ಯಶಸ್ಸು ಕಂಡಿದೆ…

ಕಾಂಗ್ರೆಸ್-ಮುಕ್ತ ಭಾರತ ಮಾಡಲು ಹೊರಟಿರುವ ಮೋದಿ ಗ್ಯಾಂಗಿನ ಕನಸು ನನಸಾಗಿ ದಕ್ಷಿಣ ಭಾರತದಲ್ಲಿ ಕೇಸರಿಧ್ವಜ ಹೊರಡಬೇಕಾದರೆ ಮುಂಬೈ ಕರ್ನಾಟಕದಲ್ಲಿ ಯಡ್ಡಿ ಗ್ಯಾಂಗ್ ಉತ್ತಮ ಪ್ರದರ್ಶನ ನೀಡಲೇಬೇಕು. ಆದರೆ ವಾಸ್ತವ ಸ್ಥಿತಿ ಹಾಗೇ ಕಂಡುಬರುವುದಿಲ್ಲ. ಇನ್ನು ಈ ಬಾರಿ ಅಧಿಕಾರ ಸಿಗದಿದ್ದರೆ ಪಕ್ಷವನ್ನು ಉಳಿಸಿಕೊಳ್ಳುವುದೇ ಕಷ್ಟವೆನ್ನುವ ಸ್ಥಿತಿಯಲ್ಲಿರುವ ದೇವೇಗೌಡರ ಜೆಡಿಎಸ್ ಬೆರಳೆಣಿಕೆ ಕ್ಷೇತ್ರಗಳಲ್ಲಿ ಗೆಲ್ಲುವ ಸ್ಥಿತಿಯಲ್ಲಿದೆ, ಇನ್ನು ಕೆಲವೆಡೆ ಮತ್ತೊಬ್ಬರ ಗೆಲುವು ಸೋಲಿನ ಆಟಕ್ಕೆ ಅಡ್ಡಿಯಾಗಲಿದೆ ಎನ್ನಬಹುದು.

2008ರ ಚುನಾವಣೆಯಲ್ಲಿ ಬಿಜೆಪಿಯ ನೂರರ ಗಡಿ ದಾಟಲು ಮುಂಬೈ ಕರ್ನಾಟಕದಲ್ಲಿನ ಪ್ರದರ್ಶನವೇ ಮುಖ್ಯ ಕಾರಣವಾಗಿತ್ತು. ಅಂದು ಬಿಜೆಪಿ 44ರಲ್ಲಿ 31 ಸೀಟುಗಳನ್ನು ಗೆದ್ದುಕೊಂಡಿದ್ದು ಕಾಂಗ್ರೆಸ್ ಹನ್ನೊಂದು ಮತ್ತು ಜೆಡಿಎಸ್ ನಾಲ್ಕು ಸೀಟುಗಳನ್ನು ಪಡೆದುಕೊಂಡಿದ್ದವು. ಆದರೆ 2013ರಲ್ಲಿ ಚಿತ್ರಣ ಸಂಪೂರ್ಣ ತಿರುವುಮುರುವಾಯಿತು ಬಿಜೆಪಿ ತನ್ನ ಅಂಗಳದಲ್ಲೇ ಶ್ರೇಷ್ಠ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು. ಇದಕ್ಕೆ ಲಿಂಗಾಯತ ನಾಯಕ ಯಡಿಯೂರಪ್ಪ ಪಕ್ಷ ತೊರೆದು ಕೆಜೆಪಿ ಸ್ಥಾಪಿಸಿದ್ದೆ ಕಾರಣ. ಕಳೆದ ಚುನಾವಣೆಯಲ್ಲಿ ಬಿಜೆಪಿ ಹನ್ನೆರಡು ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡರೆ ಕಾಂಗ್ರೆಸ್ 27 ಮತ್ತು ಜೆಡಿಎಸ್ ಒಂದು ಸ್ಥಾನಗಳನ್ನು ಗೆಲ್ಲುವಲ್ಲಿ ಸಫಲವಾದವು. ನಾಲ್ಕು ಸ್ಥಾನಗಳು ಇತರರ ಪಾಲಾದವು. ಈ ಬಾರಿ ಮೇಲ್ನೋಟಕ್ಕೆ ಜಿದ್ದಾಜಿದ್ದಿನ ಹೋರಾಟ ಕಂಡುಬಂದರೂ ಬಿಜೆಪಿ 2008ರ ಪ್ರದರ್ಶನ ಪುನರಾವರ್ತಿಸುತ್ತದೆ ಎಂದು ಹೇಳಲು ಯಾವುದೇ ಕಾರಣಗಳು ಕಾಣುತ್ತಿಲ್ಲ..

ಬೆಳಗಾವಿ

ಸತೀಶ್ ಜಾರಕಿಹೊಳಿ

ರಾಜ್ಯದಲ್ಲಿ ಹದಿನೆಂಟು ಕ್ಷೇತ್ರಗಳನ್ನು ಒಳಗೊಂಡ ದೊಡ್ಡ ಜಿಲ್ಲೆಯಾಗಿರುವ ಬೆಳಗಾವಿಯಲ್ಲಿ ಬಿಜೆಪಿ ಕೆಟ್ಟ ದಿನಗಳಲ್ಲೂ ಎಂಟು ಸೀಟು ಗೆದ್ದುಕೊಂಡಿತ್ತು. ಈ ಬಾರಿ ಅದು ಅಥಣಿ, ಕುಡಚಿ, ಅರಬಾವಿ, ಬೈಲಹೊಂಗಲ, ಸವದತ್ತಿ ಮತ್ತು ಕಿತ್ತೂರಿನಲ್ಲಿ ಸ್ಪಷ್ಟ ಮುನ್ನಡೆ ಪಡೆದಿದೆ. ಬಾಲಚಂದ್ರ ಜಾರಕಿಹೊಳಿ ಸುಲಭವಾಗಿ ಗೆಲ್ಲುವ ಹಾಗೆ ಕಂಡರೆ ಬಾಹುಬಲಿ ಉಮೇಶ್ ಕತ್ತಿ ಸೋಲುವ ಭೀತಿ ಎದುರಿಸುತ್ತಿದ್ದಾರೆ. ಕಾಂಗ್ರೆಸ್ ಚಿಕ್ಕೋಡಿ, ಕಾಗವಾಡ, ರಾಯಭಾಗ, ಹುಕ್ಕೇರಿ ಗೋಕಾಕ್, ಯಮಕನಮರಡಿ, ಬೆಳಗಾವಿ ಉತ್ತರ ಮತ್ತು ರಾಮದುರ್ಗದಲ್ಲಿ ಉತ್ತಮ ಸ್ಥಿತಿಯಲ್ಲಿದೆ. ಜಾರಕಿಹೊಳಿ ಸಹೋದರರು, ಗಣೇಶ್ ಹುಕ್ಕೇರಿ ಮತ್ತು ಫಿರೋಜ್ ಸೆಟ್ ಗೆಲ್ಲುವ ಸನಿಹದಲ್ಲಿದ್ದಾರೆ. ಉಳಿದ ಬೆಳಗಾವಿ ದಕ್ಷಿಣ, ಬೆಳಗಾವಿ ಗ್ರಾಮೀಣ ಮತ್ತು ಖಾನಾಪುರದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಎಂಇಎಸ್ ನಡುವೆ ತ್ರಿಕೋನ ಸ್ಪರ್ಧೆ ಇದ್ದು ಫೋಟೋ ಫಿನಿಷಿಂಗ್ ಕಾದಿದೆ. ಹೀಗಾಗಿ ಇಲ್ಲಿ ಕಾಂಗ್ರೆಸ್ಸಿಗೆ ಅಲ್ಪ ಲಾಭವಾಗಬಹುದೇ ಹೊರತು ಬಿಜೆಪಿಗೆ ಅಲ್ಲ. ಜೊತೆಗೆ ಜೆಡಿಎಸ್ ಇಲ್ಲಿ ಖಾತೆ ತೆರೆಯುವುದಿಲ್ಲ.

ವಿಜಯಪುರ

2008ರಲ್ಲಿ 8 ಸ್ಥಾನಗಳಲ್ಲಿ 5ರಲ್ಲಿ ಗೆದ್ದಿದ್ದ ಬಿಜೆಪಿ 2013ರಲ್ಲಿ ಒಂದಕ್ಕೆ ಕುಸಿದಿತ್ತು. ಕಾಂಗ್ರೆಸ್ ಮೂರರಿಂದ ಏಳಕ್ಕೆ ತನ್ನ ಬಲವನ್ನು ಹೆಚ್ಚಿಸಿಕೊಂಡಿತು. ಜೆಡಿಎಸ್ ಸಾಧನೆ ಶೂನ್ಯ. ಈ ಬಾರಿ ಲಿಂಗಾಯತ ಪ್ರತ್ಯೇಕ ಧರ್ಮದ ಲೆಕ್ಕಾಚಾರ, ಟಿಕೆಟ್ ಹಂಚಿಕೆಯ ಗೊಂದಲ, ರಾಜ್ಯ ಮಟ್ಟದ ಯಾವುದೇ ಅಲೆ ಇಲ್ಲದಿರುವುದು ಸ್ಥಳೀಯ ಮಟ್ಟಕ್ಕೆ ಹೋರಾಟವನ್ನು ತಂದು ನಿಲ್ಲಿಸಿದೆ. ರಾಷ್ಟ್ರೀಯ ನಾಯಕರ ಸತತ ಪ್ರಚಾರವೂ ಈ ಲೆಕ್ಕಾಚಾರವನ್ನು ಅಲುಗಾಡಿಸಿಲ್ಲ. ಒಟ್ಟು 8 ಸ್ಥಾನಗಳಲ್ಲಿ ಕಾಂಗ್ರೆಸ್ ಇಂಡಿ, ಬಬಲೇಶ್ವರ, ಬಿಜಾಪುರ ಸಿಟಿಯಲ್ಲಿ ಉತ್ತಮ ಸ್ಥಿತಿಯಲ್ಲಿದ್ದರೆ, ಮುದ್ದೇಬಿಹಾಳ ಮತ್ತು ದೇವರಹಿಪ್ಪರಗಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಜಿದ್ದಾಜಿದ್ದಿನ ಹೋರಾಟವಿದೆ. ನಾಗಠಾಣ ಮತ್ತು ಬಸವನಬಾಗೇವಾಡಿಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನಡುವೆ ಪೈಪೋಟಿ ಇದೆ.

ಎಸ್.ಕೆ.ಬೆಳ್ಳುಬ್ಬಿಯಂಥ ನಾಯಕರಿಗೆ ಟಿಕೆಟ್ ಕೊಡದೆ ಇರುವುದು ಬಿಜೆಪಿಗೆ ಎರಡು ಕ್ಷೇತ್ರಗಳಲ್ಲಿ ಹಾನಿ ಉಂಟುಮಾಡಿದೆ. ಇದರ ನೇರ ಲಾಭ ಕಾಂಗ್ರೆಸ್‍ಗೆ. ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್ ಮತ್ತು ಯಶವಂತರಾಯಗೌಡ ಪಾಟೀಲ್ ತಮ್ಮ ಕ್ಷೇತ್ರಗಳನ್ನು ಉಳಿಸಿಕೊಂಡರೆÀ ಕಾಂಗ್ರೆಸ್ 5, ಬಿಜೆಪಿ 02 ಮತ್ತು ಜೆಡಿಎಸ್ ಒಂದು ಸ್ಥಾನ ಗೆಲ್ಲುವ ಸಾಧ್ಯತೆ ಕಂಡುಬರುತ್ತದೆ. ಇದು ಮತ್ತೊಮ್ಮೆ ಮುಖ್ಯಮಂತ್ರಿಯಾಗುವ ಯಡ್ಡಿ ಕನಸಿಗೆ ಪೂರಕವಾಗಿಲ್ಲ.

ಬಾಗಲಕೋಟೆ

2008ರಲ್ಲಿ ಲಿಂಗಾಯತ ಪ್ರಾಬಲ್ಯದ ಬಸವಣ್ಣನ ನಾಡಿನಲ್ಲಿ ಬಿಜೆಪಿ ಏಳು ಸ್ಥಾನಗಳನ್ನು ಗೆದ್ದು ಕ್ಲೀನ್‍ಸ್ವೀಪ್ ಮಾಡಿತ್ತು. ಆದರೆ 2013 ರ ಹೊತ್ತಿಗೆ ಮೂರು ಹೋಳಾಗಿದ್ದ ಕೇಸರಿ ಪಕ್ಷ ಒಂದು ಸ್ಥಾನಕ್ಕೆ ಕುಸಿತ ಕಂಡಿತ್ತು. ಇಲ್ಲಿ ಜೆಡಿಎಸ್ ಕಳೆದೆರಡು ಚುನಾವಣೆಗಳಲ್ಲಿ ಖಾತೆ ತೆರೆದಿಲ್ಲ. ಈ ಬಾರಿಯೂ ಆ ಸಾಧ್ಯತೆಯಿಲ್ಲ. ಹಾಗಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರಾನೇರ ಹೋರಾಟ.

ಆರ್.ಬಿ.ತಿಮ್ಮಾಪುರಗೆ ಟಿಕೆಟ್ ತಪ್ಪಿದ್ದರಿಂದ ಮುಧೋಳದಲ್ಲಿ ಗೋವಿಂದ್ ಕಾರಜೋಳ ಗೆಲುವು ಸುಲಭವಾಗಿದೆ. ಉಳಿದಂತೆ ತೇರದಾಳದಲ್ಲಿ ಬಿಜೆಪಿಯ ಸಿದ್ದು ಸೌದಿ, ಹುನಗುಂದದಲ್ಲಿ ಅದೇ ಪಾರ್ಟಿಯ ದೊಡ್ಡನಗೌಡ ಪಾಟೀಲ್ ಗೆಲ್ಲುವ ಕುದುರೆಗಳು. ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಿರುವ ಬಾದಾಮಿಯಲ್ಲಿ ಬಿ ಶ್ರೀರಾಮುಲು ಪ್ರಬಲ ಪೈಪೋಟಿ ನೀಡುತ್ತಿದ್ದಾರಾದರೂ ಜಾತಿ ಲೆಕ್ಕಾಚಾರ, ಕಾಂಗ್ರೆಸ್ ನಾಯಕರ ಹೊಂದಾಣಿಕೆಯ ಪ್ರಚಾರ ಸಿಎಂ ಸಿದ್ದುರÀನ್ನು ಗೆಲುವಿನ ದಡ ಸೇರಿಸುತ್ತದೆ. ಅಂತಿಮವಾಗಿ ಬಾಗಲಕೋಟೆಯಲ್ಲಿ ಕಾಂಗ್ರೆಸ್ 4 ಮತ್ತು ಬಿಜೆಪಿ 3 ಸ್ಥಾನ ಗೆಲ್ಲುವ ಸಾಧ್ಯತೆ ಹೆಚ್ಚು.

ಗದಗ

ನಾಲ್ಕು ಕ್ಷೇತ್ರಗಳಿರುವ ಈ ಜಿಲ್ಲೆಯನ್ನು 2008ರಲ್ಲ್ಲಿ ಬಿಜೆಪಿ ಕ್ಲೀನ್‍ಸ್ವೀಪ್ ಮಾಡಿದ್ದರೆ, 2013ರಲ್ಲಿ ಕಾಂಗ್ರೆಸ್ ಆ ಸಾಧನೆ ಮಾಡಿತ್ತು. ಈ ಬಾರಿ ಮಾತ್ರ ಉಭಯ ಪಕ್ಷಗಳಿಗೂ ಈ ಸಾಧ್ಯತೆ ಇಲ.್ಲ ಗದಗನಲ್ಲಿ ಎಚ್.ಕೆ.ಪಾಟೀಲ್ ಗೆಲುವಿನ ಸವಾರಿ ಮುಂದುವರಿಸಿದರೆ, ಶಿರಹಟ್ಟಿಯಲ್ಲಿ ಬಿಜೆಪಿಯ ಲಮಾಣಿ ಮುನ್ನಡೆಯಲಿದ್ದಾರೆ. ಇನ್ನು ನರಗುಂದದಲ್ಲಿ ಬಿಆರ್ ಯಾವಗಲ್ ಮತ್ತು ಬಿಜೆಪಿಯ ಬ್ಲ್ಯೂ ಫಿಲ್ಮ್ ಹೀರೋ ಸಿಸಿ ಪಾಟೀಲ್ ನಡುವೆ ಹಾಗೂ ರೋಣದಲ್ಲಿ ಜಿಎಸ್ ಪಾಟೀಲ್ ಮತ್ತು ಕಳಕಪ್ಪ ಬಂಡಿ ಮಧ್ಯೆ ಸಮಬಲದ ಹೋರಾಟ ಕಂಡುಬರುತ್ತಿದೆ. ನರಗುಂದದಲ್ಲಿ ಮುತ್ಸದ್ಧಿ ಹೋರಾಟಗಾರ ಬಿಆರ್ ಯಾವಗಲ್ ಗೆಲ್ಲುವ ಅವಶ್ಯಕತೆ ಇದೆ. ಗದಗದಲ್ಲಿ ಉಭಯ ಪಕ್ಷಗಳು ಸಮ ಸ್ಥಾನ ಪಡೆಯುವ ಸಾಧ್ಯತೆ ಹೆಚ್ಚಿದೆ.

ಧಾರವಾಡ

2008ರಲ್ಲಿ ವಚನಭ್ರಷ್ಟ ಅಲೆಯಲ್ಲಿ ಬಿಜೆಪಿ ಇಲ್ಲಿನ ಆರು ಸ್ಥಾನ ಗೆಲ್ಲುವಲ್ಲಿ ಸಫಲವಾಗಿತ್ತು. ಆದರೆ 2013ರಲ್ಲಿ ಅದರ ಸಾಧನೆ ಎರಡು ಸ್ಥಾನಕ್ಕೆ ಕುಸಿದಿತ್ತು. ಜೆಡಿಎಸ್ ನವಲಗುಂದದಲ್ಲಿ ಕೋನಾರೆಡ್ಡಿ ಮೂಲಕ ಖಾತೆ ತೆರೆದಿತ್ತು. ಕಾಂಗ್ರೆಸ್ ನಾಲ್ಕರಲ್ಲಿ ನಗೆಬೀರಿತ್ತು. ಈ ಬಾರಿ ಜಿಲ್ಲೆಯ ಪ್ರಬಲ ನಾಯಕರಾದ ಬಿಜೆಪಿಯ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಮತ್ತು ಕಾಂಗ್ರೆಸ್‍ನ ಸಚಿವ ವಿನಯ್ ಕುಲಕರ್ಣಿ ಹಾಗೂ ಗಣಿಧಣಿ ಸಂತೋಷ್ ಲಾಡ್ ಸೋಲಿನ ಭೀತಿ ಎದುರಿಸುತ್ತಿದ್ದಾರೆ. ಜೆಡಿಎಸ್ ತನ್ನ ಸ್ಥಾನ ಉಳಿಸಿಕೊಳ್ಳುವ ಹೋರಾಟದಲ್ಲಿದೆ.

ಉಳಿದಂತೆ ಹುಬ್ಬಳ್ಳಿ-ಧಾರವಾಡ ಪೂರ್ವದಲ್ಲಿ ಕಾಂಗ್ರೆಸ್‍ನ ಪ್ರಸಾದ ಅಬ್ಬಯ್ಯ, ಹುಬ್ಬಳ್ಳಿ-ಧಾರವಾಡ ಪಶ್ಚಿಮದಲ್ಲಿ ಕಾಂಗ್ರೆಸ್‍ನ ತಮಟಗಾರ ಗೆಲುವಿನ ಸನಿಹದಲ್ಲಿದ್ದಾರೆ. ಕುಂದಗೋಳದಲ್ಲಿ ಬಿಜೆಪಿಯ ಚಿಕ್ಕನಗೌಡರ ಮತ್ತು ಕಾಂಗ್ರೆಸ್‍ನ ಶಿವಳ್ಳಿ ನಡುವಿನ ಫೋಟೋ ಫಿನಿಷ್ ಇದ್ದರೆ, ಕಲಘಟಗಿಯಲ್ಲಿ ಗಣಿದಣಿ ಸಂತೋಷ್ ಲಾಡ್ ಬಿಜೆಪಿ ನಿಂಬಣ್ಣನವರಿಗಿಂತ ಹಿನ್ನಡೆಯಲ್ಲಿದ್ದಾರೆ.

ಅಂತಿಮವಾಗಿ ಕಳೆದ ಬಾರಿಯಂತೆ ಕಾಂಗ್ರೆಸ್ ನಾಲ್ಕು ಬಿಜೆಪಿ ಎರಡು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. ಮುಂಬೈ ಕರ್ನಾಟಕದಲ್ಲಿ ಜೆಡಿಎಸ್‍ಗೆ ವಿಜಯಪುರ ಬಿಟ್ಟರೆ ಖಾತೆ ತೆರೆಯಲು ಸಾಧ್ಯತೆ ಇರುವುದು ಇಲ್ಲಿ ಮಾತ್ರ.

ಒಟ್ಟಾರೆ ನಲವತ್ತು ನಾಲ್ಕರಲ್ಲಿ ಬಿಜೆಪಿ 15 ರಿಂದ 17, ಕಾಂಗ್ರೆಸ್ 20 ರಿಂದ 23 ಮತ್ತು ಜೆಡಿಎಸ್ 2 ರಿಂದ 3 ಸ್ಥಾನ ಗೆಲ್ಲುವ ಸಾಧ್ಯತೆ ಇದೆ. ಹೀಗಾಗಿ ಯಡ್ಡಿ ಮತ್ತು ಗ್ಯಾಂಗಿನ ಸ್ಪಷ್ಟ ಬಹುಮತದ ಸಾಧ್ಯತೆ ಕಂಡುಬರುತ್ತಿಲ್ಲ. ಅದೇರೀತಿ ಮೋದಿ ಗ್ಯಾಂಗ್‍ನ ಕಾಂಗ್ರೆಸ್-ಮುಕ್ತ ಭಾರತ ಮಾಡುವ ಕನಸಿಗೂ ಪೂರಕವಾಗುವ ಅಲೆ ಮುಂಬೈ ಕರ್ನಾಟಕದಲ್ಲಿ ಕಂಡುಬರುತ್ತಿಲ್ಲ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...