Homeಅಂಕಣಗಳುಮೆರಿಟ್, ಮೀಸಲಾತಿ ಮತ್ತು ವೈದ್ಯಕೀಯ ಶಿಕ್ಷಣ ವಾಸ್ತವಗಳೇನು?

ಮೆರಿಟ್, ಮೀಸಲಾತಿ ಮತ್ತು ವೈದ್ಯಕೀಯ ಶಿಕ್ಷಣ ವಾಸ್ತವಗಳೇನು?

- Advertisement -
- Advertisement -

ಜರ್ವೇಶನ್‍ನಿಂದ ಡಾಕ್ಟರಾದೋರು ಎಂಥಾ ಚಿಕಿತ್ಸೆ ಕೊಡ್ತಾರೆ?’ ‘35% ಮಾಕ್ರ್ಸ್ ತಗೊಂಡು ಡಾಕ್ಟರ್ ಆದೋನು ಅವನೆಂಥಾ ಡಾಕ್ಟರ್?’ ಎಂಬ ಮಾತುಗಳು ಈಗ ಹಾದಿಬೀದಿಯಲ್ಲಿ ಕೇಳಿಬರುತ್ತಿವೆ. ಇಂಥಾ ವಾದವನ್ನು ಮುಂದಿಡುವ `ಮೆರಿಟ್‍ಪಂಥೀಯ’ ಜನ ತಮ್ಮ ವಾದಕ್ಕೆ ಯಾವ ಸೂಕ್ತ ಆಧಾರಗಳನ್ನೂ ಕೊಡದಿದ್ದರೂ, ತಮ್ಮ ಒಣತರ್ಕಗಳನ್ನು ಮಾತ್ರ ತೇಲಿ ಬಿಡುತ್ತಿದ್ದಾರೆ. ಕಾರ್ಪೊರೇಟ್ ಮೀಡಿಯಾಗಳು ಮಾತ್ರ ಇಂಥ ಪರಮಸತ್ಯವನ್ನು ಪದೇಪದೇ ಬಿತ್ತರಿಸುವುದರಿಂದ ಈ ಬಗ್ಗೆ ಸಹಜವಾಗಿ ಸಮಾಜದಲ್ಲಿ ಒಂದಷ್ಟು ಗೊಂದಲ ಏರ್ಪಟ್ಟಿದೆ.
ಕಟುಸತ್ಯಗಳನ್ನು ಸಾರಿ ಹೇಳುತ್ತಿರುವ ವಾಸ್ತವಗಳನ್ನು ನೋಡೋಣ. ಮುಖ್ಯವಾಹಿನಿ ಪತ್ರಿಕೆಯಾದ ಟೈಮ್ಸ್ ಆಫ್ ಇಂಡಿಯಾ ಕಳೆದ ವರ್ಷ ಮೆಡಿಕಲ್‍ಗೆ ಪ್ರವೇಶ ಪಡೆದ ವಿದ್ಯಾರ್ಥಿಗಳ ನೀಟ್ ಪರೀಕ್ಷೆಯ ಅಂಕಗಳ ಮಾಹಿತಿ ಪಡೆದು ವಿಶ್ಲೇಷಣೆಗೆ ಒಳಪಡಿಸಿ ವರದಿಯೊಂದನ್ನು ತಯಾರಿಸಿದೆ. ಆ ವರದಿ ಪ್ರಕಾರ ದೇಶಾದ್ಯಂತ 409 ಕಾಲೇಜುಗಳಲ್ಲಿ ಒಟ್ಟು 56,000 ವಿದ್ಯಾರ್ಥಿಗಳು ಮೆಡಿಕಲ್‍ಗೆ ದಾಖಲಾಗಿದ್ದಾರೆ. ಅದರಲ್ಲಿ 39,000 ವಿದ್ಯಾರ್ಥಿಗಳು ಸರಕಾರಿ ಕೋಟಾದಡಿಯಲ್ಲೂ, 17,000 ಜನ ವಿದ್ಯಾರ್ಥಿಗಳು ಖಾಸಗಿ ಕೋಟಾದಲ್ಲಿ ದಾಖಲಾತಿ ಪಡೆದಿದ್ದಾರೆ. ಸರಕಾರಿ ಕೋಟಾದಲ್ಲಿ(ಅಂದರೆ ಮೀಸಲಾತಿಯನ್ನೂ ಒಳಗೊಂಡಿದ್ದು) ಪ್ರವೇಶ ಪಡೆದ ವೈದ್ಯಕೀಯ ವಿದ್ಯಾರ್ಥಿಗಳ ಶೈಕ್ಷಣಿಕ ಗುಣಮಟ್ಟಕ್ಕೂ, ಹೆಚ್ಚು ಶುಲ್ಕ ಪಾವತಿಸಿ ಆಯ್ಕೆಯಾದ ಶ್ರೀಮಂತ ಮತ್ತು ಅನಿವಾಸಿ ಭಾರತೀಯ ವಿದ್ಯಾರ್ಥಿಗಳ ಗುಣಮಟ್ಟಕ್ಕೂ ಅಜಗಜಾಂತರ ವ್ಯತ್ಯಾಸಗಳಿವೆ. ಸಂಬಂಧಿತ ನೀಟ್ ಪರೀಕ್ಷೆಯಲ್ಲಿ ಗರಿಷ್ಟ ಒಟ್ಟು 720 ಅಂಕಗಳಲ್ಲಿ ಸರಕಾರಿ ಕೋಟಾದಡಿ ಆಯ್ಕೆಯಾದ ವಿದ್ಯಾರ್ಥಿಗಳು ಸರಾಸರಿ 448 ಅಂಕಗಳನ್ನು(62%) ಪಡೆದಿದ್ದರೆ, ಮ್ಯಾನೇಜ್‍ಮೆಂಟ್ ಕೋಟಾದ ವಿದ್ಯಾರ್ಥಿಗಳು ಸರಾಸರಿ 306(42%) ಅಂಕಗಳನ್ನು ಪಡೆದಿದ್ದಾರೆ. ಹಣಬಲದಿಂದ ಮೆಡಿಕಲ್ ಸೀಟು ಪಡೆದವರು ಸರ್ಕಾರಿ ಕೋಟಾದಡಿ ಆಯ್ಕೆಯಾದವರಿಗಿಂತ 20% ಕಡಿಮೆ ಅಂಕ ಗಳಿಸಿದ್ದಾರೆ ಎಂಬ ಸತ್ಯ ಆಶ್ಚರ್ಯವಾದರೂ ಅದೇ ಕಹಿಸತ್ಯ. ಇನ್ನು ಅನಿವಾಸಿ ಭಾರತೀಯ ವಿದ್ಯಾರ್ಥಿಗಳ ಸ್ಥಿತಿ ಮತ್ತಷ್ಟು ಹೀನಾಯ. ನೀಟ್ ಪರೀಕ್ಷೆಯಲ್ಲಿ ಎನ್‍ಆರ್‍ಐಗಳು ಗಳಿಸಿರುವ ಸರಾಸರಿ ಕೇವಲ 221 ಅಂಕಗಳು(29%).
ಒಟ್ಟು ಸರ್ಕಾರಿ ಕೋಟಾದ ವಿವರಣೆಗಳಿಗೆ ಹೋದರೆ ಮತ್ತಷ್ಟು ಕಣ್ಣು ತೆರೆಸುವ ಮಾಹಿತಿ ಸಿಗುತ್ತದೆ. ಉದಾಹರಣೆಗೆ ಪರಿಶಿಷ್ಟ ಜಾತಿ, ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳ ಸರಾಸರಿ ಅಂಕ 398(53%). ಮ್ಯಾನೇಜ್‍ಮೆಂಟ್ ಕೋಟಾದಡಿ ಬಂದ ವಿದ್ಯಾರ್ಥಿಗಳ ಸರಾಸರಿ 306 ಅಂಕ(42%). ಅಂದರೆ ಮೀಸಲಾತಿಯಲ್ಲಿ ಬಂದ ಪರಿಶಿಷ್ಟ ವಿದ್ಯಾರ್ಥಿಗಳು ಹಣಬಲದ ವಿದ್ಯಾರ್ಥಿಗಳಿಗಿಂತಲೂ 11% ಹೆಚ್ಚು ಅಂಕಗಳನ್ನು ಪಡೆದಿದ್ದಾರೆ.

ಪಂಜಾಬ್‍ನ ನೀಟ್ ಪರೀಕ್ಷೆಯ ವಿಶ್ಲೇಷಣೆಯೂ ಇದೇ ಕತೆಯನ್ನು ಹೇಳುತ್ತಿದೆ. ಇಲ್ಲಿ ಸರ್ಕಾರಿ ಕೋಟಾದ ವಿದ್ಯಾರ್ಥಿಗಳು ಗಳಿಸಿದ್ದ ಅಂಕ ಗರಿಷ್ಟ 86% ರಿಂದ ಕನಿಷ್ಟ 75%. ಆದರೆ ಖಾಸಗಿ ಕೋಟಾದಡಿಯ ವಿದ್ಯಾರ್ಥಿಗಳ ಅಂಕ 73% ರಿಂದ 65% ಮಾತ್ರ. ಪ್ರೈವೇಟ್ ಯೂನಿವರ್ಸಿಟಿಗಳೆಂದು ಕರೆದುಕೊಳ್ಳುವ ಸಂಸ್ಥೆಗಳ ಸ್ಥಿತಿ ಇನ್ನೂ ಅಧ್ವಾನ. ಕನಿಷ್ಟ 41% ಅಂಕ ಗಳಿಸಿದವರಿಗೂ ಇಲ್ಲಿ ಮೆಡಿಕಲ್ ಸೀಟ್ ಲಭ್ಯವಾಗಿದೆ. ಈ ಅಂಕಿ ಅಂಶಗಳು ಏನನ್ನು ಹೇಳುತ್ತಿವೆ? ಅನಾದಿಯಿಂದಲೂ `ಮೆರಿಟ್‍ಪಂಥೀಯ’ ವಾಕ್ಪಟುಗಳು ಹೇಳುತ್ತಿರುವುದು ಅಪ್ಪಟ ಸುಳ್ಳು ಎಂಬುದನ್ನು ಮೇಲಿನ ಅಂಕಿಅಂಶಗಳು ಅನುಮಾನಕ್ಕೆಡೆಯಿಲ್ಲದಂತೆ ಸಾರಿ ಹೇಳುತ್ತಿವೆ.
ದೇಶಿಯ ಮತ್ತು ಅಂತರರಾಷ್ಟ್ರೀಯ ಕಾರ್ಪೊರೇಟ್ ಸಂಸ್ಥೆಗಳು ದೇಶದುದ್ದಕ್ಕೂ ಆರೋಗ್ಯ ಸೇವೆಯ ಹೆಸರಲ್ಲಿ ಹಲವು ಖಾಸಗಿ ಕಾಲೇಜು ಮತ್ತು ಆಸ್ಪತ್ರೆಗಳನ್ನು ತೆರೆದು ಕೂತಿವೆ. ಇದರ ಪರಿಣಾಮವೆಂಬಂತೆ 1974ರಲ್ಲಿ ಶೇ.18ರಷ್ಟಿದ್ದ ಖಾಸಗಿ ಆಸ್ಪತ್ರೆಗಳು 2014 ಹೊತ್ತಿಗೆ ಶೇ.75ರಷ್ಟು ಹೆಚ್ಚಾಗಿವೆ. 1974ರಲ್ಲಿ ಶೇ.21ರಷ್ಟು ಹಾಸಿಗೆಗಳನ್ನು ಹೊಂದಿದ್ದ ಖಾಸಗಿ ಆಸ್ಪತ್ರೆಗಳು 2014 ರಷ್ಟೊತ್ತಿಗೆ ಶೇ.54ಕ್ಕೇರಿಸಿಕೊಂಡಿವೆ. ಶೇ.75ರಷ್ಟು ಔಷಧಾಲಯಗಳು, ಶೇ.80 ರಷ್ಟು ಅರ್ಹ ವೈದ್ಯರನ್ನು ಖಾಸಗಿ ಆಸ್ಪತ್ರೆಗಳು ಹೊಂದಿವೆ. ಶೇ.60ರಷ್ಟು ಒಳರೋಗಿಗಳು, ಶೇ.80ರಷ್ಟು ಹೊರರೋಗಿಗಳು ಖಾಸಗಿ ಆಸ್ಪತ್ರೆಯ ಸಂಪರ್ಕದಲ್ಲಿದ್ದಾರೆ. ಇಲ್ಲಿಂದ ಮುಂದೆ ಇದು ದೊಡ್ಡ ಬಂಡವಾಳ ಹೂಡುವ ಕ್ಷೇತ್ರವಾಗಿ ಮಾರ್ಪಟ್ಟು ಲಾಭ ಮತ್ತು ಅತಿಲಾಭದ ಲೆಕ್ಕಾಚಾರದಲ್ಲಿ ಕಾರ್ಪೊರೇಟ್ ಸಂಸ್ಥೆಗಳು ತೊಡಗಿವೆ. ಇದಕ್ಕೆ ಬೇಕಾದ ಸಂಪನ್ಮೂಲವನ್ನು ಸೃಷ್ಟಿಸುವ ನಿಟ್ಟಿನಲ್ಲಿ ವೈದ್ಯಕೀಯ ವಿದ್ಯಾಸಂಸ್ಥೆಗಳು ರೂಪುಗೊಂಡವು. ಅದರಲ್ಲೂ ಸರ್ಕಾರಿ ವೈದ್ಯಕೀಯ ವಿದ್ಯಾಸಂಸ್ಥೆಗಳನ್ನು ದೂರತಳ್ಳಿ ಖಾಸಗಿ ಸಂಸ್ಥೆಗಳು ಬೇರುಬಿಡತೊಡಗಿದವು. ಇದರ ಫಲವೆಂಬಂತೆ 1950ರಲ್ಲಿ ಶೇ.4ರಷ್ಟಿದ್ದ ಖಾಸಗಿ ವೈದ್ಯಕೀಯ ವಿದ್ಯಾಸಂಸ್ಥೆಗಳು 2014ರಲ್ಲಿ ಶೇ.54ರಷ್ಟು ಹೆಚ್ಚಾದವು. ಈ ಖಾಸಗಿ ಮೆಡಿಕಲ್ ಕಾಲೇಜುಗಳು ಪ್ರಾರಂಭವಾದಾಗಿನಿಂದ ಇಲ್ಲಿಯವರೆಗೆ ತಮ್ಮ ಶುಲ್ಕವನ್ನು ಹತ್ತಾರು ಪಟ್ಟು ಹೆಚ್ಚು ಮಾಡುತ್ತಲೇ ಬಂದಿವೆ. ಇದರಿಂದ ‘ವೈದ್ಯಸೇವೆ’ ಎಂಬ ಪದವನ್ನು ಅಚ್ಚುಕಟ್ಟಾಗಿ ದೂರಸರಿಸಿ ವೈದ್ಯಲೋಕವನ್ನು ಹಣ ಹೂಡಿ ಹಣ ಗಳಿಸುವ ದಂಧೆಯನ್ನಾಗಿ ಪರಿವರ್ತಿಸುವಲ್ಲಿ ಯಶಸ್ವಿಯಾಗಿವೆ.
ಮೀಸಲಾತಿಯಿಂದ ಪ್ರತಿಭೆಗೆ ಧಕ್ಕೆ ಒದಗುತ್ತಿದೆ ಎನ್ನುವವರು ಇದಕ್ಕೆ ಏನು ಹೇಳುತ್ತಿದ್ದಾರೆ. ಸರಾಸರಿ ಅಂಕ ಗಳಿಕೆಯಲ್ಲೂ ಕಡಿಮೆ ಇರುವ ಅನೇಕ ವಿದ್ಯಾರ್ಥಿಗಳು ಖಾಸಗಿ ವಿದ್ಯಾಲಯಗಳಲ್ಲಿ ಪ್ರವೇಶ ಪಡೆದು ವೈದ್ಯಕೀಯ ಪದವಿಯನ್ನು ಪಡೆಯುತ್ತಿದ್ದಾರೆ. ಹಾಗಿದ್ದರೆ ಇವರೆಲ್ಲ ಪ್ರತಿಭಾವಂತರೆ? ಅರ್ಹತೆಯನ್ನು ಅಂಕಗಳಲ್ಲಿ ಅಳೆದು ‘ಮೀಸಲಾತಿಯಿಂದ ಕಡಿಮೆ ಅಂಕಗಳಿಸಿ ಬಂದವರು ವೈದ್ಯ ವೃತ್ತಿಯನ್ನು ಸರಿಯಾಗಿ ನಿಭಾಯಿಸಬಲ್ಲರೆ’ ಎನ್ನುವವರೇನೂ ಇಲ್ಲಿ ಕಡಿಮೆಯಿಲ್ಲ. ಕಡಿಮೆ ಅಂಕ ಗಳಿಸಿ ದುಡ್ಡಿನಿಂದ ಸೀಟು ಖರೀದಿಸುತ್ತಿರುವ ಹಣವಂತ ಪಡೆಗೆ ಅರ್ಹತೆಯ ಮಾನದಂಡವನ್ನು ಇವರೆಲ್ಲ ಹಿಡಿಯಬಲ್ಲರೆ? ಇವರ ಯಾವ ಮನಸ್ಸುಗಳೂ ಇದರ ಬಗ್ಗೆ ಚಕಾರ ಎತ್ತುವುದಿಲ್ಲ. ಹೋಗಲಿ, ಇಂತಹ ವಿದ್ಯಾರ್ಥಿಗಳಿಂದ ಎಂತಹ ಸಾರ್ವಜನಿಕ ಸೇವೆಯನ್ನು ನಿರೀಕ್ಷಿಸಲು ಸಾಧ್ಯ? ಈ ಪ್ರಶ್ನೆಯನ್ನು ಇವರಿಗೆ ಕೇಳುವ ಬದಲು ಮೀಸಲಾತಿಯಿಂದ ಬಂದವರಿಗೆ ಕೇಳಲಾಗುತ್ತಿದೆ. ದುಡ್ಡು ಕೊಟ್ಟು ಬಂದವರು ದುಡ್ಡನ್ನು ಸಂಪಾದಿಸಲಷ್ಟೇ ಯೋಚಿಸುತ್ತಾರೆ. ದುಡ್ಡು ಗಳಿಸಬೇಕು ಎನ್ನುವುದರ ಕಡೆ ಇವರ ತುಡಿತವಿದೆ. ಇಲ್ಲಿ ಹಣವೇ ಮೆರಿಟ್ ಆಗುತ್ತಿದೆ. ಇಂತವರಿಂದ ಗುಣಮಟ್ಟವನ್ನು ಅಪೇಕ್ಷಿಸಲು ಸಾಧ್ಯವೇ? ಅಪೇಕ್ಷಿಸಿದರೆ ಎಂತಹ ಗುಣಮಟ್ಟವನ್ನು ಅಪೇಕ್ಷಿಸಬಹುದು. ಇದೊಂದು ರೀತಿಯಲ್ಲಿ ಹಗಲು ದರೋಡೆಗೆ ಪ್ರೇರಣೆ ನೀಡಿದಂತೆಯೇ ಸರಿ. ಹಣವನ್ನು ದ್ವಿಗುಣಗೊಳಿಸುವ ಕಾರಣದಿಂದಾಗಿಯೇ ಕಾರ್ಪೊರೇಟ್ ಸಂಸ್ಥೆಗಳು ವೈದ್ಯಕೀಯ ಕ್ಷೇತ್ರದ ಮೇಲೆ ಅಪಾರ ಬಂಡವಾಳ ಹೂಡಿ, `ಮೀಸಲಾತಿ ವರ್ಸಸ್ ಮೆರಿಟ್’ ಎಂಬ ಅಪ್ಪಟ ಜನವಿರೋಧಿ ಸುಳ್ಳನ್ನು ಹರಡುತ್ತಿದೆ. ಆದರೆ ಭಾರತದ ವಾಸ್ತವಗಳು ಇವರ ದುರ್ಬಲ ಕಲ್ಪನೆಗಳನ್ನು ಮೀರಿ ಬೆಳೆಯುತ್ತಿವೆ. ಈ ದೇಶದ ಜನತಂತ್ರ, ಸಾಮಾಜಿಕ ನ್ಯಾಯ ಮತ್ತು ಜಾತ್ಯತೀತೆಯನ್ನು ಉಳಿಸುವುದೆಂದರೆ ವಾಸ್ತವಗಳನ್ನು ಅರ್ಥ ಮಾಡಿಕೊಳ್ಳುವುದು, ಆ ವಾಸ್ತವಗಳ ಬೆಳಕಲ್ಲಿ ಹೊಸ ಭಾರತವನ್ನು ಕಟ್ಟುವುದೇ ಆಗಿದೆ.
ಯಾವ ಕ್ಷೇತ್ರದಲ್ಲಿ ಪದೇ ಪದೇ ಮೀಸಲಾತಿಯ ವಿರೋಧಿ ಹೇಳಿಕೆಗಳು ಹೊರಬಂದು ಪ್ರತಿಭೆ ಪ್ರಶ್ನೆಯನ್ನು ಮುಂದಿಡಲಾಗುತ್ತಿದೆಯೋ ಆ ಕ್ಷೇತ್ರದಲ್ಲಿಯೇ ದುಡ್ಡಿನಿಂದ ಪದವಿಯನ್ನು ಕೊಳ್ಳುವ ದಂಧೆ ಎಗ್ಗಿಲ್ಲದೇ ಸಾಗಿದೆ. ಈ ಪಿಡುಗು ವೈದ್ಯಕೀಯ ಶಿಕ್ಷಣಕ್ಕೆ ಮಾತ್ರ ಸೀಮಿತವಾದುದಲ್ಲ; ಪೇಮೆಂಟ್ ಕೋಟಾ ಹೆಸರಿನಲ್ಲಿ ಯಾವ ಪದವಿಯ ಅಂಕಗಳಿಗೂ ಮಾನ್ಯತೆ ಕೊಡದೆ ತುಂಬಲಾಗುತ್ತಿದೆ. ಅಂಕ ಕಡಿಮೆ ಇದ್ದರೂ ಹಣ ಕೊಟ್ಟು ಯಾವ ಪದವಿಗಾದರೂ ಸೇರಬಹುದು. ಆದರೆ ಸಾಮಾಜಿಕ ನ್ಯಾಯದ ಹಿತದೃಷ್ಟಿಯಿಂದ ಸರಾಸರಿ ಅಂಕ ಹೊಂದಿರುವ ವಿದ್ಯಾರ್ಥಿಗಳು ಮೀಸಲಾತಿ ಕೋಟಾದಲ್ಲಿ ಬಂದರೆ ಅರ್ಹತೆ, ಪ್ರತಿಭೆ ಮಾನದಂಡದ ಪ್ರಶ್ನೆಯನ್ನು ಮುಂಚೂಣಿಗೆ ತಂದು ಹುಯಿಲೆಬ್ಬಿಸಲಾಗುತ್ತದೆ. ಇನ್ನೊಂದು ಅಂಶವನ್ನು ಸ್ಪಷ್ಟಪಡಿಸುವುದಾದರೆ ಇಂದು ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವ ಸಂದರ್ಭದಲ್ಲಿ ಸಾಮಾನ್ಯ ವರ್ಗಕ್ಕೆ ನಿಗದಿಯಾಗುವ ಅಂಕಗಳಿಗಿಂತ, ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಗೆ ನಿಗದಿತಗೊಳ್ಳುವ ಅಂಕ ಒಂದೆರಡು ಕಡಿಮೆ ಅಂಕಗಳಷ್ಟು ಮಾತ್ರ. ಈ ಸತ್ಯ ನಮ್ಮೆಲ್ಲರ ಕಣ್ಣೆದುರಿಗೇ ಇದ್ದರೂ ಪೂರ್ವಗ್ರಹಪೀಡಿತ ಮನಸ್ಥಿತಿಯವರು ಕಣ್ಣುತೆರೆಯಲು ಸಿದ್ಧರಿಲ್ಲ. ಅದಕ್ಕೇನು ಮಾಡುವುದು?

– ಡಾ. ಉಮಾಶಂಕರ್ ಹೆಚ್.ಡಿ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ಪೊಲೀಸರಿಂದ ಬೈಕ್ ಸೀಝ್‌; ಠಾಣೆ ಮುಂದೆ ಬೆಂಕಿ ಹಚ್ಚಿಕೊಂಡ ‘ಗಿಗ್’ ಕಾರ್ಮಿಕ

ಪೊಲೀಸರು ತನ್ನ ಬೈಕ್‌ ವಶಪಡಿಸಿಕೊಂಡ ನಂತರ 32 ವರ್ಷದ ಗಿಗ್ ಕಾರ್ಮಿಕನೊಬ್ಬ ಠಾಣೆಯ ಹೊರಗೆ ಬೆಂಕಿಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದ ಬರೇಲಿಯಲ್ಲಿ ನಡೆದಿದೆ. ಅಕ್ಷಯ್ ಕಶ್ಯಪ್ ಎಂದು ಗುರುತಿಸಲ್ಪಟ್ಟ ಯುವಕನಿಗೆ ದೇಹದ...

ಎಪ್‌ಸ್ಟೀನ್ ಫೈಲ್ಸ್ ನಲ್ಲಿ ಹೆಸರು ಪ್ರಸ್ತಾಪ; ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ ಬಿಲ್ ಗೇಟ್ಸ್: ವರದಿ 

ನ್ಯೂಯಾರ್ಕ್: ಅಮೆರಿಕದ ತಂತ್ರಜ್ಞಾನ ಉದ್ಯಮಿ ಬಿಲ್ ಗೇಟ್ಸ್, ಲೈಂಗಿಕ ಅಪರಾಧಿ ಜೆಫ್ರಿ ಎಪ್‌ಸ್ಟೈನ್‌ನೊಂದಿಗಿನ ಹಳೆಯ ಸಂಪರ್ಕಕ್ಕಾಗಿ ಗೇಟ್ಸ್ ಫೌಂಡೇಶನ್ ಸಿಬ್ಬಂದಿಗೆ ಕ್ಷಮೆಯಾಚಿಸಿದ್ದಾರೆ ಎಂದು ವರದಿಯಾಗಿದೆ. ವಾಲ್ ಸ್ಟ್ರೀಟ್ ಜರ್ನಲ್ ವರದಿಯ ಪ್ರಕಾರ, ಫೌಂಡೇಶನ್‌ನ ಟೌನ್...

ಕೆಎಸ್‌ಯು-ಐಯುಎಂಎಲ್ ಪ್ರತಿಭಟನೆಯಲ್ಲಿ ಘರ್ಷಣೆ; ಗಾಯಗೊಂಡ ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್

ಕಣ್ಣೂರು ರೈಲ್ವೆ ನಿಲ್ದಾಣದಲ್ಲಿ ಬುಧವಾರ ಪೊಲೀಸರು ಮತ್ತು ಕೇರಳ ವಿದ್ಯಾರ್ಥಿ ಸಂಘ (ಕೆಎಸ್‌ಯು)-ಐಯುಎಂಎಲ್ ಯುವ ಘಟಕದ ಪ್ರತಿಭಟನಾಕಾರರ ನಡುವೆ ನಡೆದ ಘರ್ಷಣೆಯಲ್ಲಿ ಆರೋಗ್ಯ ಸಚಿವೆ ವೀಣಾ ಜಾರ್ಜ್ ಕುತ್ತಿಗೆ ಮತ್ತು ಕೈಗೆ ಗಾಯಗಳಾಗಿದೆ. ಕಾಂಗ್ರೆಸ್-ಕೆಎಸ್‌ಯು...

ಉತ್ತರಾಖಂಡ| ದೇವಸ್ಥಾನದ ಸಮೀಪ ಖಾಲಿ ಜಾಗದಲ್ಲಿ ನಮಾಜ್; ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ

ಉತ್ತರಾಖಂಡದ ಜಗತ್ಪುರದ ಅತ್ರಿಯ ದೇವಸ್ಥಾನದ ಮುಂಭಾಗದಲ್ಲಿರುವ ಖಾಲಿ ಜಾಗದಲ್ಲಿ ನಮಾಜ್ ಮಾಡಿದ ನಂತರ ಶಾಹಿದ್ ಎಂದು ಗುರುತಿಸಲಾದ ವೃದ್ಧ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಧಾರ್ಮಿಕ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು...

ಮುಝಫ್ಫರ್‌ನಗರ ಗಲಭೆ ಪ್ರಕರಣ : 37 ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

ಉತ್ತರ ಪ್ರದೇಶದ ಮುಝಫ್ಫರ್‌ನಗರದ ನ್ಯಾಯಾಲಯ 2013ರ ಕೋಮು ಗಲಭೆಗೆ ಸಂಬಂಧಿಸಿದ ಎಂಟು ಜನರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಗಳ ಕೊರತೆಯನ್ನು ಉಲ್ಲೇಖಿಸಿ 37 ಆರೋಪಿಗಳನ್ನು ಮಂಗಳವಾರ (ಫೆ.25) ಖುಲಾಸೆಗೊಳಿಸಿದೆ ಎಂದು ವರದಿಯಾಗಿದೆ. ತೀರ್ಪು ಪ್ರಕಟಿಸಿದ ಹೆಚ್ಚುವರಿ...

ಇಸ್ರೇಲ್ ಸಂಸತ್ತಿನಲ್ಲಿ ಭಾಷಣದ ವೇಳೆ ಪ್ರಧಾನಿ ಮೋದಿ ಗಾಝಾ ನರಮೇಧ ಉಲ್ಲೇಖಿಸಲಿ : ಪ್ರಿಯಾಂಕಾ ಗಾಂಧಿ ಆಗ್ರಹ

ಇಸ್ರೇಲ್‌ಗೆ ಭೇಟಿ ನೀಡಿರುವ ಪ್ರಧಾನಿ ನರೇಂದ್ರ ಮೋದಿ, ಅಲ್ಲಿನ ಸಂಸತ್ತಾದ ನೆಸೆಟ್ ಅನ್ನು ಉದ್ದೇಶಿಸಿ ಮಾತನಾಡುವಾಗ ಗಾಝಾ ನರಮೇಧವನ್ನು ಉಲ್ಲೇಖಿಸಿ ನ್ಯಾಯಕ್ಕಾಗಿ ಆಗ್ರಹಿಸಬೇಕು ಎಂದು ಎಐಸಿಸಿ ಕಾರ್ಯದರ್ಶಿ ಹಾಗೂ ವಯನಾಡ್ ಸಂಸದೆ ಪ್ರಿಯಾಂಕಾ...

ಕೇಂದ್ರ ಸಚಿವರ ಸಮ್ಮುಖದಲ್ಲಿ ‘ಮುಸ್ಲಿಂ ವಿರೋಧಿ ಹೇಳಿಕೆ’ ನೀಡಿದ ಹಿಂದುತ್ವವಾದಿ ವ್ಯಕ್ತಿ

ಉತ್ತರಾಖಂಡದಲ್ಲಿ ನಡೆದ ಸಾರ್ವಜನಿಕ ಹಿಂದೂ ಧಾರ್ಮಿಕ ಕಾರ್ಯಕ್ರಮದಲ್ಲಿ, ಕೇಂದ್ರ ಸಚಿವರ ಸಮ್ಮುಖದಲ್ಲಿಯೇ ಹಿಂದುತ್ವವಾದಿ ಮುಖಂಡನೊಬ್ಬ ಮುಸ್ಲಿಮರ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿದ್ದು ರಾಜಕೀಯ ಮತ್ತು ಸಾಮಾಜಿಕ ವಿವಾದಕ್ಕೆ ಕಾರಣವಾಗಿದೆ. ಇದು ಪೊಲೀಸ್ ಕ್ರಮ...

ಎನ್‌ಸಿಇಆರ್‌ಟಿ ಪಠ್ಯಪುಸ್ತಕದ ‘ನ್ಯಾಯಾಂಗದಲ್ಲಿನ ಭ್ರಷ್ಟಾಚಾರ’ ವಿಷಯಕ್ಕೆ ಸುಪ್ರೀಂ ಕೋರ್ಟ್ ತೀವ್ರ ಆಕ್ಷೇಪ

ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಪ್ರಕಟಿಸಿದ 8ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ "ನ್ಯಾಯಾಂಗದಲ್ಲಿನ ಭ್ರಷ್ಟಾಚಾರ" ಎಂಬ ವಿಷಯ ಉಲ್ಲೇಖಿಸಿರುವುದಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಫೆ.25) ತೀವ್ರ...

ಮಧ್ಯಪ್ರದೇಶ: ಡಾ. ಹರಿಸಿಂಗ್ ಗೌರ್ ವಿವಿಯಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ ದುಷ್ಕರ್ಮಿಗಳಿಂದ ವಿದ್ಯಾರ್ಥಿಗಳ ಮೇಲೆ ದಾಳಿ, ಜೀವಬೆದರಿಕೆ;  ಎಫ್‌ಐಆರ್ ದಾಖಲು

ಮಧ್ಯಪ್ರದೇಶದ ಸಾಗರ್‌ನಲ್ಲಿರುವ ಡಾ. ಹರಿ ಸಿಂಗ್ ಗೌರ್ ವಿಶ್ವವಿದ್ಯಾಲಯದಲ್ಲಿ ನಡೆದ ಸರಣಿ ಹಿಂಸಾತ್ಮಕ ಘಟನೆಗಳು ಕ್ಯಾಂಪಸ್ ಸುರಕ್ಷತೆಯ ಬಗ್ಗೆ ಗಂಭೀರ ಕಳವಳವನ್ನು ಉಂಟುಮಾಡಿವೆ. ಐದು ದಿನಗಳಲ್ಲಿ ಎಬಿವಿಪಿ-ಆರ್‌ಎಸ್‌ಎಸ್‌ಗೆ ಸಂಬಂಧಿಸಿದ ವ್ಯಕ್ತಿಗಳಿಂದ ಎರಡು ಜೀವ...

ಅಜೀಂ ಪ್ರೇಮ್‌ ಜಿ ವಿವಿಯಲ್ಲಿ ದಾಂಧಲೆ : ಎಬಿವಿಪಿ ಸದಸ್ಯರ ವಿರುದ್ಧ ಕಠಿಣ ಕ್ರಮಕ್ಕೆ ಕೆವಿಎಸ್‌ ಆಗ್ರಹ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ ನುಗ್ಗಿ ದಾಂಧಲೆ ನಡೆಸಿದ ಎಬಿವಿಪಿ ಸದಸ್ಯರ ವಿರುದ್ದ ಕಠಿಣ ಕ್ರಮ ಕೈಗೊಳ್ಳುವಂತೆ ಕರ್ನಾಟಕ ವಿದ್ಯಾರ್ಥಿ ಸಂಘಟನೆ (ಕೆವಿಎಸ್‌) ಆಗ್ರಹಿಸಿದೆ. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಸಂಘಟನೆಯ ರಾಜ್ಯ...