Homeಸಿನಿಮಾಸಿನಿ ಸುದ್ದಿಮೋದಿಯನ್ನೂ ಸೋಲಿಸಿದ ಜಡೆಮಾಯಸಂದ್ರ ಜಗ್ಗಣ್ಣ!

ಮೋದಿಯನ್ನೂ ಸೋಲಿಸಿದ ಜಡೆಮಾಯಸಂದ್ರ ಜಗ್ಗಣ್ಣ!

- Advertisement -
- Advertisement -

ಗಿರೀಶ್ ತಾಳಿಕಟ್ಟೆ |

ನಟ ಜಗ್ಗಣ್ಣ ಯಶವಂತಪುರ ಕಾಳಗದಲ್ಲಿ ಸೋತಿರೋದು ಅಚ್ಚರಿಯೂ ಅಲ್ಲ, ಆಘಾತವೂ ಅಲ್ಲ. ಅಲ್ಲಿ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂಬುದು ನಿಕ್ಕಿಯಾದ ಮೇಲೆಯೇ ಬಿಜೆಪಿ ಕಾಮಿಡಿ ಕಿಲಾಡಿಯನ್ನು ಅಭ್ಯರ್ಥಿಯಾಗಿ ಅಖಾಡಕ್ಕಿಳಿಸಿದ್ದರ ಹಿಂದೆ ಇದ್ದದ್ದು ಒಂದೇ ಅಜೆಂಡಾ. ಕಾಂಗ್ರೆಸ್‍ನ ಎಸ್.ಟಿ.ಸೋಮಶೇಖರ್‍ಗೆ ಹೋಗಬಹುದಾಗಿದ್ದ ಒಕ್ಕಲಿಗ ಮತಗಳನ್ನು ಛಿದ್ರಗೊಳಿಸಿ, ಅದೇ ಸಮುದಾಯದ ಜೆಡಿಎಸ್‍ನ ಜವರಾಯಿ ಗೌಡರಿಗೆ ನೆರವಾಗುವುದಷ್ಟೇ ಆ ಸ್ಪರ್ಧೆಯ ಉದ್ದೇಶವಾಗಿತ್ತು. ಹಿಂದೊಮ್ಮೆ ಬಿಜೆಪಿಯ ಲೇಡಿ ಲೀಡರ್ ಶೋಭಕ್ಕ ಯಾನೆ ಶೋಭ ಕರಂದ್ಲಾಜೆ ಯಶವಂತಪುರದಿಂದ ಗೆದ್ದು ಈ ಕ್ಷೇತ್ರವನ್ನು ಅನಾಥವಾಗಿಸಿ ಹೋದ ತರುವಾಯ ಇಲ್ಲಿ ಬಿಜೆಪಿಗೆ ನೆಲೆಯೆಂಬುದೇ ಇಲ್ಲದಂತಾಗಿದೆ. ಇಲ್ಲದೇ ಹೋಗಿದ್ದರೆ ಉಳಿದಿಬ್ಬರು ತಲಾ ಒಂದು ಲಕ್ಷಕ್ಕೂ ಹೆಚ್ಚು ಮತಗಳನ್ನು ಕಬಳಿಸುವ ಕ್ಷೇತ್ರದಲ್ಲಿ ಬಿಜೆಪಿಯ ಜಗ್ಗಣ್ಣನಿಗೆ ಕೇವಲ ಐವತ್ತೊಂಬತ್ತು ಸಾವಿರ ಮತಗಳಷ್ಟೇ ಗಟ್ಟಿಯಾಗುತ್ತಿರಲಿಲ್ಲ. ಅದೂ ರಾಜ್ಯದ ಅತಿದೊಡ್ಡ ವಿಧಾನಸಭಾ ಕ್ಷೇತ್ರ ಎಂಬ ಹೆಗ್ಗಳಿಕೆಯ ಯಶವಂತಪುರದಲ್ಲಿ!

ಆದ್ರೆ ಜಗ್ಗಣ್ಣನ ಸೋಲು ಸುದ್ದಿಯಾಗುತ್ತಿರೋದು ಆ ವಿಚಾರಕ್ಕಲ್ಲ. ಈ ಮೊದಲು ಕಾಂಗ್ರೆಸ್‍ನಲ್ಲಿದ್ದ ಜಗ್ಗಣ್ಣ ಆಪರೇಷನ್ ಕಮಲದಲ್ಲಿ ಬಿಜೆಪಿಗೆ ಬಿಕರಿಗೊಂಡು ಕೇಸರಿ ಪಾಳೆಯ ಸೇರಿದ ತರುವಾಯ ಪಕ್ಕಾ ಹಿಂದೂತ್ವವಾದಿಯಂತೆ ಸೋಗುಹಾಕಲು ಶುರು ಮಾಡಿರೋದು ಹೊಸ ವಿಚಾರವೇನಲ್ಲ. ಅದೇ ಧಾಟಿಯಲ್ಲಿ ಮೊನ್ನೆ ಎಲೆಕ್ಷನ್‍ಗೆ ಸ್ಪರ್ಧಿಸಿದ್ದಾಗ `ಈ ಜಗ್ಗೇಶ್ ಗೆದ್ದರೆ ಮೋದಿ ಗೆದ್ದಂತೆ, ಮೋದಿ ಪರಿಕಲ್ಪನೆ ಗೆದ್ದಂತೆ, ಈ ಜಗ್ಗೇಶ್ ಗೆದ್ದರೆ ಹಿಂದೂ ಗೆದ್ದಂತೆ, ಪಾಂಡವರು ಗೆದ್ದಂತೆ…..’ ಎಂಬ ಡೈಲಾಗ್ ಟ್ವೀಟ್ ಮಾಡಿದ್ದರು. ಬಹಿರಂಗ ಪ್ರಚಾರ ಸಭೆಯಲ್ಲಿ ಮೋದಿ ಸೀಟಿನ ಹಿಂದೆ ಕೂರಲು ಜಾಗ ಸಿಕ್ಕಿದ್ದನ್ನೇ ಮ್ಯಾಗ್ಸೆಸ್ಸೆ ಅವಾರ್ಡ್ ಸಿಕ್ಕ ರೇಂಜಿಗೆ ಖುಷಿಯಿಂದ ಗೀಚಿಕೊಂಡಿದ್ದ ಜಗ್ಗಣ್ಣ ಹಿಂದೂತ್ವದ ಟ್ರಂಪ್ ಕಾರ್ಡ್ ಬಳಸಲು ಹೋಗಿ ಮುಗ್ಗರಿಸಿದ್ದಾರೆ. ಜೊತೆಗೆ ಸ್ವತಃ ಟ್ವಿಟ್ಟರ್‍ನಲ್ಲಿ ಗೀಚಿಕೊಂಡಂತೆ ತಾನು ಸೋಲೋದಲ್ಲದೆ ತನ್ನ ಜತೆ ಮೋದಿಯನ್ನೂ ಸೋಲಿಸಿ ಮುಗುಮ್ಮಾಗಿ ಕೂತಿದ್ದಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...