Homeಸಿನಿಮಾಸಿನಿ ಸುದ್ದಿಮೋದಿಯನ್ನೂ ಸೋಲಿಸಿದ ಜಡೆಮಾಯಸಂದ್ರ ಜಗ್ಗಣ್ಣ!

ಮೋದಿಯನ್ನೂ ಸೋಲಿಸಿದ ಜಡೆಮಾಯಸಂದ್ರ ಜಗ್ಗಣ್ಣ!

- Advertisement -
- Advertisement -

ಗಿರೀಶ್ ತಾಳಿಕಟ್ಟೆ |

ನಟ ಜಗ್ಗಣ್ಣ ಯಶವಂತಪುರ ಕಾಳಗದಲ್ಲಿ ಸೋತಿರೋದು ಅಚ್ಚರಿಯೂ ಅಲ್ಲ, ಆಘಾತವೂ ಅಲ್ಲ. ಅಲ್ಲಿ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂಬುದು ನಿಕ್ಕಿಯಾದ ಮೇಲೆಯೇ ಬಿಜೆಪಿ ಕಾಮಿಡಿ ಕಿಲಾಡಿಯನ್ನು ಅಭ್ಯರ್ಥಿಯಾಗಿ ಅಖಾಡಕ್ಕಿಳಿಸಿದ್ದರ ಹಿಂದೆ ಇದ್ದದ್ದು ಒಂದೇ ಅಜೆಂಡಾ. ಕಾಂಗ್ರೆಸ್‍ನ ಎಸ್.ಟಿ.ಸೋಮಶೇಖರ್‍ಗೆ ಹೋಗಬಹುದಾಗಿದ್ದ ಒಕ್ಕಲಿಗ ಮತಗಳನ್ನು ಛಿದ್ರಗೊಳಿಸಿ, ಅದೇ ಸಮುದಾಯದ ಜೆಡಿಎಸ್‍ನ ಜವರಾಯಿ ಗೌಡರಿಗೆ ನೆರವಾಗುವುದಷ್ಟೇ ಆ ಸ್ಪರ್ಧೆಯ ಉದ್ದೇಶವಾಗಿತ್ತು. ಹಿಂದೊಮ್ಮೆ ಬಿಜೆಪಿಯ ಲೇಡಿ ಲೀಡರ್ ಶೋಭಕ್ಕ ಯಾನೆ ಶೋಭ ಕರಂದ್ಲಾಜೆ ಯಶವಂತಪುರದಿಂದ ಗೆದ್ದು ಈ ಕ್ಷೇತ್ರವನ್ನು ಅನಾಥವಾಗಿಸಿ ಹೋದ ತರುವಾಯ ಇಲ್ಲಿ ಬಿಜೆಪಿಗೆ ನೆಲೆಯೆಂಬುದೇ ಇಲ್ಲದಂತಾಗಿದೆ. ಇಲ್ಲದೇ ಹೋಗಿದ್ದರೆ ಉಳಿದಿಬ್ಬರು ತಲಾ ಒಂದು ಲಕ್ಷಕ್ಕೂ ಹೆಚ್ಚು ಮತಗಳನ್ನು ಕಬಳಿಸುವ ಕ್ಷೇತ್ರದಲ್ಲಿ ಬಿಜೆಪಿಯ ಜಗ್ಗಣ್ಣನಿಗೆ ಕೇವಲ ಐವತ್ತೊಂಬತ್ತು ಸಾವಿರ ಮತಗಳಷ್ಟೇ ಗಟ್ಟಿಯಾಗುತ್ತಿರಲಿಲ್ಲ. ಅದೂ ರಾಜ್ಯದ ಅತಿದೊಡ್ಡ ವಿಧಾನಸಭಾ ಕ್ಷೇತ್ರ ಎಂಬ ಹೆಗ್ಗಳಿಕೆಯ ಯಶವಂತಪುರದಲ್ಲಿ!

ಆದ್ರೆ ಜಗ್ಗಣ್ಣನ ಸೋಲು ಸುದ್ದಿಯಾಗುತ್ತಿರೋದು ಆ ವಿಚಾರಕ್ಕಲ್ಲ. ಈ ಮೊದಲು ಕಾಂಗ್ರೆಸ್‍ನಲ್ಲಿದ್ದ ಜಗ್ಗಣ್ಣ ಆಪರೇಷನ್ ಕಮಲದಲ್ಲಿ ಬಿಜೆಪಿಗೆ ಬಿಕರಿಗೊಂಡು ಕೇಸರಿ ಪಾಳೆಯ ಸೇರಿದ ತರುವಾಯ ಪಕ್ಕಾ ಹಿಂದೂತ್ವವಾದಿಯಂತೆ ಸೋಗುಹಾಕಲು ಶುರು ಮಾಡಿರೋದು ಹೊಸ ವಿಚಾರವೇನಲ್ಲ. ಅದೇ ಧಾಟಿಯಲ್ಲಿ ಮೊನ್ನೆ ಎಲೆಕ್ಷನ್‍ಗೆ ಸ್ಪರ್ಧಿಸಿದ್ದಾಗ `ಈ ಜಗ್ಗೇಶ್ ಗೆದ್ದರೆ ಮೋದಿ ಗೆದ್ದಂತೆ, ಮೋದಿ ಪರಿಕಲ್ಪನೆ ಗೆದ್ದಂತೆ, ಈ ಜಗ್ಗೇಶ್ ಗೆದ್ದರೆ ಹಿಂದೂ ಗೆದ್ದಂತೆ, ಪಾಂಡವರು ಗೆದ್ದಂತೆ…..’ ಎಂಬ ಡೈಲಾಗ್ ಟ್ವೀಟ್ ಮಾಡಿದ್ದರು. ಬಹಿರಂಗ ಪ್ರಚಾರ ಸಭೆಯಲ್ಲಿ ಮೋದಿ ಸೀಟಿನ ಹಿಂದೆ ಕೂರಲು ಜಾಗ ಸಿಕ್ಕಿದ್ದನ್ನೇ ಮ್ಯಾಗ್ಸೆಸ್ಸೆ ಅವಾರ್ಡ್ ಸಿಕ್ಕ ರೇಂಜಿಗೆ ಖುಷಿಯಿಂದ ಗೀಚಿಕೊಂಡಿದ್ದ ಜಗ್ಗಣ್ಣ ಹಿಂದೂತ್ವದ ಟ್ರಂಪ್ ಕಾರ್ಡ್ ಬಳಸಲು ಹೋಗಿ ಮುಗ್ಗರಿಸಿದ್ದಾರೆ. ಜೊತೆಗೆ ಸ್ವತಃ ಟ್ವಿಟ್ಟರ್‍ನಲ್ಲಿ ಗೀಚಿಕೊಂಡಂತೆ ತಾನು ಸೋಲೋದಲ್ಲದೆ ತನ್ನ ಜತೆ ಮೋದಿಯನ್ನೂ ಸೋಲಿಸಿ ಮುಗುಮ್ಮಾಗಿ ಕೂತಿದ್ದಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...

ವಂದೇ ಮಾತರಂ ಗೀತೆಯ 6 ಚರಣಕ್ಕೆ ಕರ್ನಾಟಕ ಸರ್ಕಾರದ ಬ್ರೇಕ್

ವಂದೇ ಮಾತರಂ ಗೀತೆಯ ಗಾಯನಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ನಿರ್ಧಾರ ಮತ್ತು ಕಡ್ಡಾಯ ನೀತಿಗೆ ಕರ್ನಾಟಕ ಸರ್ಕಾರ ನೇರವಾಗಿ ಸೆಡ್ಡು ಹೊಡೆದಿದೆ. ರಾಜ್ಯ ಸರ್ಕಾರದ ಅಧಿಕೃತ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಸಂಪೂರ್ಣ...

ಸಿಜೆಪಿ ಪ್ರತಿಭಟನೆಯಲ್ಲಿ ಬಾಲಕಿ ನಿಶು ಆಜಾದ್‌ಗೆ ಬೆದರಿಕೆ; ಕ್ರಮಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ 14 ವರ್ಷದ ನಿಶು ಆಜಾದ್‌ಗೆ ಕಿಡಿಗೇಡಿಗಳು ಅತ್ಯಾಚಾರದ ಬೆದರಿಕೆ ಹಾಕಿದ್ದಾರೆ ಹಾಗೂ ಅವರ ಮನೆ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂಬ...

ಜಾದವ್‌ಪುರ ವಿವಿ ವಿರುದ್ಧ ಸುವೇಂದು ಅಧಿಕಾರಿಯ ‘ಕೇಸರಿ ಯಾತ್ರೆ’: ‘ಆಜಾದಿ’, ‘ಲಾಲ್ ಸಲಾಂ’ ಕೂಗುವವರನ್ನು ಬೇರುಸಹಿತ ಕಿತ್ತುಹಾಕುತ್ತೇನೆ ಎಂದು ಬೆದರಿಕೆ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಹಾಗೂ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ಕೋಲ್ಕತ್ತಾದ ಜಾದವ್‌ಪುರ ವಿಶ್ವವಿದ್ಯಾಲಯದತ್ತ ನಡೆದ ‘ಗೆರುವಾ ಸಮ್ಮಾನ್ ಯಾತ್ರೆ’ (ಕೇಸರಿ ಗೌರವ ಮೆರವಣಿಗೆ) ಇದೀಗ ರಾಜ್ಯದ ರಾಜಕೀಯ ವಲಯದಲ್ಲಿ...

SIR : ಒಂದೇ ಮತಗಟ್ಟೆಯ 729 ಮತದಾರರಲ್ಲಿ 728 ಮಂದಿಯ ಹೆಸರು ಡಿಲೀಟ್!

ದೆಹಲಿಯ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್‌) ಮುನ್ನ, ಯಮುನಾ ನದಿ ಪಾತ್ರದ ಕೊಳಗೇರಿ ಪ್ರದೇಶವಾದ ಬೇಲಾ ಎಸ್ಟೇಟ್‌ನ ಭಾಗವೊಂದನ್ನು ಒಳಗೊಂಡಿರುವ ಮತಗಟ್ಟೆಯಲ್ಲಿ 729 ನೋಂದಾಯಿತ ಮತದಾರರಿದ್ದರು. ಆದರೆ, ಆಗಸ್ಟ್‌ನಲ್ಲಿ ಕರಡು...

ಬಂಗಾಳದ ನಾನ್‌ವೆಜ್ ವಿವಾದ: ಬಾಗೇಶ್ವರ್ ಬಾಬಾ ಹೇಳಿಕೆಗೆ ಹಿಂದೂ ವಲಯದಲ್ಲೇ ವಿರೋಧ; ‘ಹಿಂದೂ ಧರ್ಮ ಆಹಾರದ ಕೋಡ್ ಅಲ್ಲ!

ದುರ್ಗಾ ಪೂಜೆಯ ಸಂದರ್ಭದಲ್ಲಿ ಮೀನು, ಮಾಂಸ ಸೇವನೆ ಹಾಗೂ ಮಾರಾಟದ ವಿರುದ್ಧ ಬಾಗೇಶ್ವರ್ ಧಾಮದ ಮುಖ್ಯಸ್ಥ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿದ್ದ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ರಾಜಕೀಯ ವಿವಾದ ಹುಟ್ಟುಹಾಕಿದ ಬೆನ್ನಲ್ಲೇ, ಇದೀಗ...

SIR: ಪಂಜಾಬ್‌ ಮತದಾರರ ಪಟ್ಟಿಯಿಂದ ಡಿಲೀಟ್ ಆಗಿದ್ದ ರಾಘವ್ ಚಡ್ಡಾ ಹೆಸರು ದೆಹಲಿಯಲ್ಲಿ ಎಂಟ್ರಿ!

ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರು ಪಂಜಾಬ್‌ನ ಕರಡು ಮತದಾರರ ಪಟ್ಟಿಯಿಂದ ತೆಗೆದುಹಾಕಲ್ಪಟ್ಟ ಕೆಲವೇ ದಿನಗಳಲ್ಲಿ, ದೆಹಲಿಯ ಮತದಾರರ ಪಟ್ಟಿಯಲ್ಲಿ ದಿಢೀರನೆ ಪ್ರತ್ಯಕ್ಷವಾಗಿರುವುದು ದೇಶಾದ್ಯಂತ ಭಾರಿ ರಾಜಕೀಯ ಚರ್ಚೆಗೆ ಕಾರಣವಾಗಿದೆ. ಈ...

ರಾಜ್ಯ ಕಾಂಗ್ರೆಸ್‌ಗೆ 35 ನೂತನ ಜಿಲ್ಲಾಧ್ಯಕ್ಷರ ನೇಮಕ; ಹೈಕಮಾಂಡ್ ಪಟ್ಟಿಯಲ್ಲಿ ಮಹಿಳೆಯರಿಗಿಲ್ಲ ಪ್ರಾತಿನಿಧ್ಯ!

ಕರ್ನಾಟಕ ಕಾಂಗ್ರೆಸ್‌ನ ಬಹುನಿರೀಕ್ಷಿತ ಜಿಲ್ಲಾ ಪುನರ್‌ರಚನೆಗೆ ಕೊನೆಗೂ ಚಾಲನೆ ದೊರೆತಿದ್ದು, ರಾಜ್ಯದ 35 ಸಾಂಸ್ಥಿಕ ಜಿಲ್ಲಾ ಕಾಂಗ್ರೆಸ್ ಸಮಿತಿಗಳಿಗೆ (DCC) ನೂತನ ಅಧ್ಯಕ್ಷರನ್ನು ನೇಮಕ ಮಾಡಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ....

ತ್ರಿಪುರ| ಬಿಜೆಪಿ ಬೇಡಿಕೆಗೆ ಸ್ಪಂದಿಸಿದ ಇಸಿಐ; ಗ್ರಾಮ ಸಮಿತಿ ಚುನಾವಣೆ ಹಿನ್ನೆಲೆಯಲ್ಲಿ ಎಸ್‌ಐಆರ್ ಪ್ರಕ್ರಿಯೆ ಮುಂದೂಡಿಕೆ

ಆಡಳಿತರೂಢ ಭಾರತೀಯ ಜನತಾ ಪಕ್ಷ (ಬಿಜೆಪಿ) ಸೇರಿದಂತೆ ವಿವಿಧ ರಾಜಕೀಯ ಪಕ್ಷಗಳ ಬೇಡಿಕೆಗೆ ಸ್ಪಂದಿಸಿರುವ ಭಾರತೀಯ ಚುನಾವಣಾ ಆಯೋಗ (ಇಸಿಐ), ರಾಜ್ಯದ ಬುಡಕಟ್ಟು ಪ್ರದೇಶಗಳಲ್ಲಿ ಸೆಪ್ಟೆಂಬರ್ 28 ರಂದು ನಡೆಯಲಿರುವ ಗ್ರಾಮ ಸಮಿತಿ...

SIR: ಸ್ವತಃ BLO ಗೆ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ತಾಂತ್ರಿಕ ಎಡವಟ್ಟುಗಳು ಮತ್ತು ಗೊಂದಲಗಳು ಪ್ರತಿದಿನವೂ ಒಂದಲ್ಲ ಒಂದು ವಿಲಕ್ಷಣ ಘಟನೆಗಳಿಗೆ ಕಾರಣವಾಗುತ್ತಿದ್ದು, ಇದೀಗ ಸ್ವತಃ ಮತದಾರರ ಪಟ್ಟಿ ಪರಿಷ್ಕರಣೆ...