Homeಸಿನಿಮಾಸಿನಿ ಸುದ್ದಿಮೋದಿಯನ್ನೂ ಸೋಲಿಸಿದ ಜಡೆಮಾಯಸಂದ್ರ ಜಗ್ಗಣ್ಣ!

ಮೋದಿಯನ್ನೂ ಸೋಲಿಸಿದ ಜಡೆಮಾಯಸಂದ್ರ ಜಗ್ಗಣ್ಣ!

- Advertisement -
- Advertisement -

ಗಿರೀಶ್ ತಾಳಿಕಟ್ಟೆ |

ನಟ ಜಗ್ಗಣ್ಣ ಯಶವಂತಪುರ ಕಾಳಗದಲ್ಲಿ ಸೋತಿರೋದು ಅಚ್ಚರಿಯೂ ಅಲ್ಲ, ಆಘಾತವೂ ಅಲ್ಲ. ಅಲ್ಲಿ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂಬುದು ನಿಕ್ಕಿಯಾದ ಮೇಲೆಯೇ ಬಿಜೆಪಿ ಕಾಮಿಡಿ ಕಿಲಾಡಿಯನ್ನು ಅಭ್ಯರ್ಥಿಯಾಗಿ ಅಖಾಡಕ್ಕಿಳಿಸಿದ್ದರ ಹಿಂದೆ ಇದ್ದದ್ದು ಒಂದೇ ಅಜೆಂಡಾ. ಕಾಂಗ್ರೆಸ್‍ನ ಎಸ್.ಟಿ.ಸೋಮಶೇಖರ್‍ಗೆ ಹೋಗಬಹುದಾಗಿದ್ದ ಒಕ್ಕಲಿಗ ಮತಗಳನ್ನು ಛಿದ್ರಗೊಳಿಸಿ, ಅದೇ ಸಮುದಾಯದ ಜೆಡಿಎಸ್‍ನ ಜವರಾಯಿ ಗೌಡರಿಗೆ ನೆರವಾಗುವುದಷ್ಟೇ ಆ ಸ್ಪರ್ಧೆಯ ಉದ್ದೇಶವಾಗಿತ್ತು. ಹಿಂದೊಮ್ಮೆ ಬಿಜೆಪಿಯ ಲೇಡಿ ಲೀಡರ್ ಶೋಭಕ್ಕ ಯಾನೆ ಶೋಭ ಕರಂದ್ಲಾಜೆ ಯಶವಂತಪುರದಿಂದ ಗೆದ್ದು ಈ ಕ್ಷೇತ್ರವನ್ನು ಅನಾಥವಾಗಿಸಿ ಹೋದ ತರುವಾಯ ಇಲ್ಲಿ ಬಿಜೆಪಿಗೆ ನೆಲೆಯೆಂಬುದೇ ಇಲ್ಲದಂತಾಗಿದೆ. ಇಲ್ಲದೇ ಹೋಗಿದ್ದರೆ ಉಳಿದಿಬ್ಬರು ತಲಾ ಒಂದು ಲಕ್ಷಕ್ಕೂ ಹೆಚ್ಚು ಮತಗಳನ್ನು ಕಬಳಿಸುವ ಕ್ಷೇತ್ರದಲ್ಲಿ ಬಿಜೆಪಿಯ ಜಗ್ಗಣ್ಣನಿಗೆ ಕೇವಲ ಐವತ್ತೊಂಬತ್ತು ಸಾವಿರ ಮತಗಳಷ್ಟೇ ಗಟ್ಟಿಯಾಗುತ್ತಿರಲಿಲ್ಲ. ಅದೂ ರಾಜ್ಯದ ಅತಿದೊಡ್ಡ ವಿಧಾನಸಭಾ ಕ್ಷೇತ್ರ ಎಂಬ ಹೆಗ್ಗಳಿಕೆಯ ಯಶವಂತಪುರದಲ್ಲಿ!

ಆದ್ರೆ ಜಗ್ಗಣ್ಣನ ಸೋಲು ಸುದ್ದಿಯಾಗುತ್ತಿರೋದು ಆ ವಿಚಾರಕ್ಕಲ್ಲ. ಈ ಮೊದಲು ಕಾಂಗ್ರೆಸ್‍ನಲ್ಲಿದ್ದ ಜಗ್ಗಣ್ಣ ಆಪರೇಷನ್ ಕಮಲದಲ್ಲಿ ಬಿಜೆಪಿಗೆ ಬಿಕರಿಗೊಂಡು ಕೇಸರಿ ಪಾಳೆಯ ಸೇರಿದ ತರುವಾಯ ಪಕ್ಕಾ ಹಿಂದೂತ್ವವಾದಿಯಂತೆ ಸೋಗುಹಾಕಲು ಶುರು ಮಾಡಿರೋದು ಹೊಸ ವಿಚಾರವೇನಲ್ಲ. ಅದೇ ಧಾಟಿಯಲ್ಲಿ ಮೊನ್ನೆ ಎಲೆಕ್ಷನ್‍ಗೆ ಸ್ಪರ್ಧಿಸಿದ್ದಾಗ `ಈ ಜಗ್ಗೇಶ್ ಗೆದ್ದರೆ ಮೋದಿ ಗೆದ್ದಂತೆ, ಮೋದಿ ಪರಿಕಲ್ಪನೆ ಗೆದ್ದಂತೆ, ಈ ಜಗ್ಗೇಶ್ ಗೆದ್ದರೆ ಹಿಂದೂ ಗೆದ್ದಂತೆ, ಪಾಂಡವರು ಗೆದ್ದಂತೆ…..’ ಎಂಬ ಡೈಲಾಗ್ ಟ್ವೀಟ್ ಮಾಡಿದ್ದರು. ಬಹಿರಂಗ ಪ್ರಚಾರ ಸಭೆಯಲ್ಲಿ ಮೋದಿ ಸೀಟಿನ ಹಿಂದೆ ಕೂರಲು ಜಾಗ ಸಿಕ್ಕಿದ್ದನ್ನೇ ಮ್ಯಾಗ್ಸೆಸ್ಸೆ ಅವಾರ್ಡ್ ಸಿಕ್ಕ ರೇಂಜಿಗೆ ಖುಷಿಯಿಂದ ಗೀಚಿಕೊಂಡಿದ್ದ ಜಗ್ಗಣ್ಣ ಹಿಂದೂತ್ವದ ಟ್ರಂಪ್ ಕಾರ್ಡ್ ಬಳಸಲು ಹೋಗಿ ಮುಗ್ಗರಿಸಿದ್ದಾರೆ. ಜೊತೆಗೆ ಸ್ವತಃ ಟ್ವಿಟ್ಟರ್‍ನಲ್ಲಿ ಗೀಚಿಕೊಂಡಂತೆ ತಾನು ಸೋಲೋದಲ್ಲದೆ ತನ್ನ ಜತೆ ಮೋದಿಯನ್ನೂ ಸೋಲಿಸಿ ಮುಗುಮ್ಮಾಗಿ ಕೂತಿದ್ದಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘168 ಮಕ್ಕಳನ್ನು ಕೊಂದವರ ನೆನಪಿಡಿ’ : ಇರಾನ್‌ನಿಂದ ಅಮೆರಿಕ ಅಧಿಕಾರಿಗಳ ಫೋಟೋ ಬಿಡುಗಡೆ

ಬರೋಬ್ಬರಿ 168 ಕಂದಮ್ಮಗಳ ಸಾವಿಗೆ ಕಾರಣವಾದ, ಮಿನಾಬ್‌ನ ಶಾಲೆ ಮೇಲಿನ ಕ್ಷಿಪಣಿ ದಾಳಿಗೆ ಅಮೆರಿಕದ ನೌಕಾಪಡೆಯ ಅಧಿಕಾರಿಗಳಾದ ಕಮಾಂಡರ್ ಲೀ ಆರ್. ಟೇಟ್ ಮತ್ತು ಯುಎಸ್ಎಸ್ ಸ್ಪ್ರೂಯನ್ಸ್‌ನ ಎಕ್ಸಿಕ್ಯೂಟಿವ್ ಆಫೀಸರ್ ಜೆಫ್ರಿ ಇ....

ಕೇರಳ ವಿಧಾನಸಭಾ ಚುನಾವಣೆ 2026 | ‘ಎಲ್‌ಡಿಎಫ್, ಯುಡಿಎಫ್ ದಶಕಗಳಿಂದ ರಾಜ್ಯವನ್ನು ಲೂಟಿ ಮಾಡಿವೆ’: ಪ್ರಧಾನಿ ಮೋದಿ

ಕೇರಳ ವಿಧಾನಸಭಾ ಚುನಾವಣೆ 2026 ರ ಹಿನ್ನೆಲೆಯಲ್ಲಿ ಪಾಲಕ್ಕಾಡ್‌ನಲ್ಲಿ ಭಾನುವಾರ ಬೃಹತ್ ಚುನಾವಣಾ ರ್ಯಾಲಿ ನಡೆಸಿದ ಪ್ರಧಾನಿ ನರೇಂದ್ರ ಮೋದಿ, ಯುಡಿಎಫ್ ಮತ್ತು ಎಲ್‌ಡಿಎಫ್ ಎರಡರ ಮೇಲೂ ತೀವ್ರ ದಾಳಿ ನಡೆಸಿದ್ದಾರೆ. ಈ...

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ವೈಮಾನಿಕ ದಾಳಿ : ಮೂವರು ಪತ್ರಕರ್ತರು, 9 ಪ್ಯಾರಾಮೆಡಿಕಲ್ ಸಿಬ್ಬಂದಿ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಶನಿವಾರ (ಮಾ.28) ಇಸ್ರೇಲ್ ನಡೆಸಿದ ವೈಮಾನಿಕ ದಾಳಿಗಳಲ್ಲಿ ಮೂವರು ಪತ್ರಕರ್ತರು ಮತ್ತು ಒಂಬತ್ತು ಅರೆವೈದ್ಯಕೀಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಸುದ್ದಿ ಸಂಸ್ಥೆ ಅಲ್‌-ಜಝೀರಾ ವರದಿ ಮಾಡಿದೆ. ಜೆಝೈನ್ ರಸ್ತೆಯಲ್ಲಿ ಪತ್ರಕರ್ತರ...

ಉತ್ತರ ಪ್ರದೇಶ: 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ತಲೆ ಕತ್ತರಿಸಿ, ಮನೆಗೆ ತೆಗೆದುಕೊಂಡು ಹೋಗಿದ್ದ ವ್ಯಕ್ತಿ ಬಂಧನ 

ಬಾರಾಬಂಕಿ: ಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಶನಿವಾರ 25 ವರ್ಷದ ಐಸ್ ಕ್ರೀಮ್ ಮಾರಾಟಗಾರನ ಶಿರಚ್ಛೇದ ಮಾಡಲಾಗಿತ್ತು. 50 ವರ್ಷದ ಕೊಲೆಗಾರ, ಆ ವ್ಯಕ್ತಿಯ ಗಂಟಲು ಕತ್ತರಿಸಿ, ತಲೆ ಕತ್ತರಿಸಿ, ನಂತರ ಅದನ್ನು ತನ್ನ...

ಗ್ಯಾಸ್‌ ಸಿಲಿಂಡರ್‌ಗಾಗಿ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ ವ್ಯಕ್ತಿ : ಕುಸಿದು ಬಿದ್ದು ಸ್ಥಳದಲ್ಲೇ ಸಾವು!

ಎಲ್‌ಪಿಜಿ ಸಿಲಿಂಡರ್ ಪಡೆಯಲು 41.2 ಡಿಗ್ರಿ ಸೆಲ್ಸಿಯಸ್ ಸುಡು ಬಿಸಿಲಿನಲ್ಲಿ 4 ಗಂಟೆ ಕಾದ 55 ವರ್ಷದ ವ್ಯಕ್ತಿ, ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಹಾರಾಷ್ಟ್ರದ ಅಕೋಲಾ ಬಳಿ ನಡೆದಿದೆ. ಅಕೋಲಾದಿಂದ...

ಮುರ್ಷಿದಾಬಾದ್ ರಾಮನವಮಿ ಹಿಂಸಾಚಾರ: ಆರ್‌ಎಸ್‌ಎಸ್ ನಾಯಕ ಸೇರಿ 30 ಮಂದಿ ಬಂಧನ, ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಪೊಲೀಸರು

ಶುಕ್ರವಾರ ಮುರ್ಷಿದಾಬಾದ್ ಜಿಲ್ಲೆಯ ಜಂಗಿಪುರ ಉಪವಿಭಾಗದ ರಘುನಾಥಗಂಜ್‌ನಲ್ಲಿ ಹಿಂದೂತ್ವ ಗುಂಪುಗಳು ನಡೆಸಿದ ರಾಮನವಮಿ ಮೆರವಣಿಗೆಯಲ್ಲಿ ಮುಸ್ಲಿಂ ಅಂಗಡಿಗಳು ಮತ್ತು ಆಸ್ತಿಗಳನ್ನು ಗುರಿಯಾಗಿಸಿಕೊಂಡು ನಡೆದ ದಾಳಿಯಲ್ಲಿ ಸುಮಾರು 30 ಜನರು ಗಾಯಗೊಂಡು, ಆ ಪ್ರದೇಶದಲ್ಲಿ...

ಅತ್ಯಾಚಾರ ಪ್ರಕರಣ: ಸ್ವಘೋಷಿತ ‘ದೇವಮಾನವ’ ಅಶೋಕ್ ಖರತ್ ಪೊಲೀಸ್ ಕಸ್ಟಡಿಯನ್ನು ಏಪ್ರಿಲ್ 1 ರವರೆಗೆ ವಿಸ್ತರಿಸಿದ ನಾಸಿಕ್ ಕೋರ್ಟ್

ನಾಸಿಕ್: ಅತ್ಯಾಚಾರ ಪ್ರಕರಣದಲ್ಲಿ ಬಂಧಿತನಾಗಿರುವ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರ ಪೊಲೀಸ್ ಕಸ್ಟಡಿಯನ್ನು ನಾಸಿಕ್ ನ್ಯಾಯಾಲಯವು ಭಾನುವಾರ ಏಪ್ರಿಲ್ 1 ರವರೆಗೆ ವಿಸ್ತರಿಸಿ ಆದೇಶ ನೀಡಿದೆ. ನಾಶಿಕ್ ಜಿಲ್ಲೆಯ ಮಿರ್ಗಾಂವ್‌ನಲ್ಲಿರುವ ದೇವಾಲಯ...

ಚೊಚ್ಚಲ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಿಸಿದ ಟಿವಿಕೆ : ಎರಡು ಕ್ಷೇತ್ರಗಳಿಂದ ನಟ ವಿಜಯ್ ಸ್ಪರ್ಧೆ

ಮುಂಬರುವ ತಮಿಳುನಾಡು ವಿಧಾನಸಭಾ ಚುನಾವಣೆಗೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಎರಡು ಕ್ಷೇತ್ರಗಳಿಂದ ಸ್ಪರ್ಧೆ ಮಾಡಲಿದ್ದಾರೆ. ಚೆನ್ನೈ ಜಿಲ್ಲೆಯ ಪೆರಂಬೂರು ಮತ್ತು ತಿರುಚಿರಾಪಳ್ಳಿ...

ಲೈಂಗಿಕ ಪ್ರಕರಣದ ಆರೋಪಿ ಅಶೋಕ್ ಖರತ್ ಅವರನ್ನು ರಕ್ಷಣೆಯಲ್ಲಿ ಇಡಬೇಕು; ಕಸ್ಟಡಿಯಲ್ಲಿ ಕೊಲೆಯಾಗುವ ಸಾಧ್ಯತೆ ಹೆಚ್ಚಿದೆ: ಪ್ರಕಾಶ್ ಅಂಬೇಡ್ಕರ್

ಮುಂಬೈ: ಕಾಂಗ್ರೆಸ್ ನಂತರ, ವಂಚಿತ್ ಬಹುಜನ ಅಘಾಡಿ ಸ್ಥಾಪಕ-ಅಧ್ಯಕ್ಷ ಪ್ರಕಾಶ್ ಅಂಬೇಡ್ಕರ್ ಅವರು, ಲೈಂಗಿಕ ದೌರ್ಜನ್ಯ ಪ್ರಕರಣಗಳ ಸರಣಿಯಲ್ಲಿ ಬಂಧಿಸಲ್ಪಟ್ಟಿರುವ ಸ್ವಯಂ ಘೋಷಿತ ದೇವಮಾನವ 'ಕ್ಯಾಪ್ಟನ್' ಅಶೋಕ್ ಖರತ್ ಅವರನ್ನು ಪೊಲೀಸ್ ಮತ್ತು...

ಇಸ್ರೇಲ್‌ನ ಹಲವೆಡೆ ಯುದ್ಧ ವಿರೋಧಿ ಪ್ರತಿಭಟನೆ : ನೆತನ್ಯಾಹು ಆಡಳಿತದ ವಿರುದ್ಧ ಭುಗಿಲೆದ್ದ ಜನಾಕ್ರೋಶ

ಪಶ್ಚಿಮ ಏಷ್ಯಾ ಸಂಘರ್ಷವು ಎರಡನೇ ತಿಂಗಳಿಗೆ ಕಾಲಿಡುತ್ತಿದ್ದಂತೆ, ಇಸ್ರೇಲ್‌ನಲ್ಲಿ ನೆತನ್ಯಾಹು ಆಡಳಿತದ ವಿರುದ್ದ ಜನಾಕ್ರೋಶ ಭುಗಿಲೆದ್ದಿದೆ. ಪ್ರಮುಖ ನಗರಗಳಾದ ಟೆಲ್ ಅವಿವ್, ಜೆರುಸಲೇಂ ಮತ್ತು ಹೈಫಾದಲ್ಲಿ ಸಾವಿರಾರು ಜನರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ....