Homeಸಿನಿಮಾಸಿನಿ ಸುದ್ದಿಮೋದಿಯನ್ನೂ ಸೋಲಿಸಿದ ಜಡೆಮಾಯಸಂದ್ರ ಜಗ್ಗಣ್ಣ!

ಮೋದಿಯನ್ನೂ ಸೋಲಿಸಿದ ಜಡೆಮಾಯಸಂದ್ರ ಜಗ್ಗಣ್ಣ!

- Advertisement -
- Advertisement -

ಗಿರೀಶ್ ತಾಳಿಕಟ್ಟೆ |

ನಟ ಜಗ್ಗಣ್ಣ ಯಶವಂತಪುರ ಕಾಳಗದಲ್ಲಿ ಸೋತಿರೋದು ಅಚ್ಚರಿಯೂ ಅಲ್ಲ, ಆಘಾತವೂ ಅಲ್ಲ. ಅಲ್ಲಿ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂಬುದು ನಿಕ್ಕಿಯಾದ ಮೇಲೆಯೇ ಬಿಜೆಪಿ ಕಾಮಿಡಿ ಕಿಲಾಡಿಯನ್ನು ಅಭ್ಯರ್ಥಿಯಾಗಿ ಅಖಾಡಕ್ಕಿಳಿಸಿದ್ದರ ಹಿಂದೆ ಇದ್ದದ್ದು ಒಂದೇ ಅಜೆಂಡಾ. ಕಾಂಗ್ರೆಸ್‍ನ ಎಸ್.ಟಿ.ಸೋಮಶೇಖರ್‍ಗೆ ಹೋಗಬಹುದಾಗಿದ್ದ ಒಕ್ಕಲಿಗ ಮತಗಳನ್ನು ಛಿದ್ರಗೊಳಿಸಿ, ಅದೇ ಸಮುದಾಯದ ಜೆಡಿಎಸ್‍ನ ಜವರಾಯಿ ಗೌಡರಿಗೆ ನೆರವಾಗುವುದಷ್ಟೇ ಆ ಸ್ಪರ್ಧೆಯ ಉದ್ದೇಶವಾಗಿತ್ತು. ಹಿಂದೊಮ್ಮೆ ಬಿಜೆಪಿಯ ಲೇಡಿ ಲೀಡರ್ ಶೋಭಕ್ಕ ಯಾನೆ ಶೋಭ ಕರಂದ್ಲಾಜೆ ಯಶವಂತಪುರದಿಂದ ಗೆದ್ದು ಈ ಕ್ಷೇತ್ರವನ್ನು ಅನಾಥವಾಗಿಸಿ ಹೋದ ತರುವಾಯ ಇಲ್ಲಿ ಬಿಜೆಪಿಗೆ ನೆಲೆಯೆಂಬುದೇ ಇಲ್ಲದಂತಾಗಿದೆ. ಇಲ್ಲದೇ ಹೋಗಿದ್ದರೆ ಉಳಿದಿಬ್ಬರು ತಲಾ ಒಂದು ಲಕ್ಷಕ್ಕೂ ಹೆಚ್ಚು ಮತಗಳನ್ನು ಕಬಳಿಸುವ ಕ್ಷೇತ್ರದಲ್ಲಿ ಬಿಜೆಪಿಯ ಜಗ್ಗಣ್ಣನಿಗೆ ಕೇವಲ ಐವತ್ತೊಂಬತ್ತು ಸಾವಿರ ಮತಗಳಷ್ಟೇ ಗಟ್ಟಿಯಾಗುತ್ತಿರಲಿಲ್ಲ. ಅದೂ ರಾಜ್ಯದ ಅತಿದೊಡ್ಡ ವಿಧಾನಸಭಾ ಕ್ಷೇತ್ರ ಎಂಬ ಹೆಗ್ಗಳಿಕೆಯ ಯಶವಂತಪುರದಲ್ಲಿ!

ಆದ್ರೆ ಜಗ್ಗಣ್ಣನ ಸೋಲು ಸುದ್ದಿಯಾಗುತ್ತಿರೋದು ಆ ವಿಚಾರಕ್ಕಲ್ಲ. ಈ ಮೊದಲು ಕಾಂಗ್ರೆಸ್‍ನಲ್ಲಿದ್ದ ಜಗ್ಗಣ್ಣ ಆಪರೇಷನ್ ಕಮಲದಲ್ಲಿ ಬಿಜೆಪಿಗೆ ಬಿಕರಿಗೊಂಡು ಕೇಸರಿ ಪಾಳೆಯ ಸೇರಿದ ತರುವಾಯ ಪಕ್ಕಾ ಹಿಂದೂತ್ವವಾದಿಯಂತೆ ಸೋಗುಹಾಕಲು ಶುರು ಮಾಡಿರೋದು ಹೊಸ ವಿಚಾರವೇನಲ್ಲ. ಅದೇ ಧಾಟಿಯಲ್ಲಿ ಮೊನ್ನೆ ಎಲೆಕ್ಷನ್‍ಗೆ ಸ್ಪರ್ಧಿಸಿದ್ದಾಗ `ಈ ಜಗ್ಗೇಶ್ ಗೆದ್ದರೆ ಮೋದಿ ಗೆದ್ದಂತೆ, ಮೋದಿ ಪರಿಕಲ್ಪನೆ ಗೆದ್ದಂತೆ, ಈ ಜಗ್ಗೇಶ್ ಗೆದ್ದರೆ ಹಿಂದೂ ಗೆದ್ದಂತೆ, ಪಾಂಡವರು ಗೆದ್ದಂತೆ…..’ ಎಂಬ ಡೈಲಾಗ್ ಟ್ವೀಟ್ ಮಾಡಿದ್ದರು. ಬಹಿರಂಗ ಪ್ರಚಾರ ಸಭೆಯಲ್ಲಿ ಮೋದಿ ಸೀಟಿನ ಹಿಂದೆ ಕೂರಲು ಜಾಗ ಸಿಕ್ಕಿದ್ದನ್ನೇ ಮ್ಯಾಗ್ಸೆಸ್ಸೆ ಅವಾರ್ಡ್ ಸಿಕ್ಕ ರೇಂಜಿಗೆ ಖುಷಿಯಿಂದ ಗೀಚಿಕೊಂಡಿದ್ದ ಜಗ್ಗಣ್ಣ ಹಿಂದೂತ್ವದ ಟ್ರಂಪ್ ಕಾರ್ಡ್ ಬಳಸಲು ಹೋಗಿ ಮುಗ್ಗರಿಸಿದ್ದಾರೆ. ಜೊತೆಗೆ ಸ್ವತಃ ಟ್ವಿಟ್ಟರ್‍ನಲ್ಲಿ ಗೀಚಿಕೊಂಡಂತೆ ತಾನು ಸೋಲೋದಲ್ಲದೆ ತನ್ನ ಜತೆ ಮೋದಿಯನ್ನೂ ಸೋಲಿಸಿ ಮುಗುಮ್ಮಾಗಿ ಕೂತಿದ್ದಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಮಿಯಾ ಮುಸ್ಲಿಮರು ನಮ್ಮ ಶತ್ರುಗಳಲ್ಲ..’; ಚುನಾವಣೆ ಸನಿಹದಲ್ಲಿ ಮಾತು ಬದಲಿಸಿದ ಅಸ್ಸಾಂ ಸಿಎಂ

ಭಾರತೀಯ ಜನತಾ ಪಕ್ಷವು (ಬಿಜೆಪಿ) ಅಸ್ಸಾಂನಲ್ಲಿರುವ ಬಂಗಾಳಿ ಮೂಲದ ಮುಸ್ಲಿಂ ಸಮುದಾಯವಾದ ಮಿಯಾ ಮುಸ್ಲಿಮರನ್ನು ತನ್ನ ಶತ್ರುಗಳೆಂದು ಪರಿಗಣಿಸುವುದಿಲ್ಲ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಗುರುವಾರ ಹೇಳಿದ್ದಾರೆ. ಇದೇ ವರ್ಷದ...

ಜೈಲಿನಲ್ಲಿರುವ ಪಿಎಫ್‌ಐ ನಾಯಕ ಇ ಅಬೂಬಕರ್ ಆರೋಗ್ಯ ಸ್ಥಿತಿ ಗಂಭೀರ

ಸುಮಾರು ನಾಲ್ಕು ವರ್ಷಗಳ ಕಾಲ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಸ್ಥಾಪಕ ಅಧ್ಯಕ್ಷ ಎರಪ್ಪುಂಗಲ್ ಅಬೂಬಕರ್ ಅವರ ಆರೋಗ್ಯ ಹದಗೆಟ್ಟ ನಂತರ ಬುಧವಾರದಿಂದ ಆಸ್ಪತ್ರೆಯಲ್ಲಿ ತೀವ್ರ ನಿಗಾ...

‘ಭಾರತ ನಮ್ಮನ್ನು ಹಿಂದುಕ್ಕುವುದಕ್ಕೆ ಬಿಡಲ್ಲ; ಅಮೆರಿಕದ ಹಿತಾಸಕ್ತಿಗಳಿಗೆ ಮೊದಲ ಆದ್ಯತೆ..’; ಕ್ರಿಸ್ಟೋಫರ್ ಲ್ಯಾಂಡೌ

ನಮ್ಮ ಪ್ರಮುಖ ಪ್ರತಿಸ್ಪರ್ಧಿಯಾಗಿ ಹೊರಹೊಮ್ಮಲು ಚೀನಾಗೆ ಮಾಡಿಕೊಟ್ಟ ಆರ್ಥಿಕ ಅನುಕೂಲಗಳನ್ನು ನಾವು ಭಾರತಕ್ಕೆ ನೀಡುವುದಿಲ್ಲ ಎಂದು ಯುನೈಟೆಡ್ ಸ್ಟೇಟ್ಸ್‌ (ಯುಎಸ್‌) ಉಪ ಕಾರ್ಯದರ್ಶಿ ಕ್ರಿಸ್ಟೋಫರ್ ಲ್ಯಾಂಡೌ ಗುರುವಾರ ಹೇಳಿದ್ದಾರೆ. ಅಮೆರಿಕ ಮತ್ತು ಭಾರತ...

ರೋಹಿತ್ ಆ್ಯಕ್ಟ್| ಸರ್ಕಾರದ ನಿರ್ಧಾರ ಸ್ವಾಗತಿಸಿದ ಹೋರಾಟಗಾರರು; ಕಾಯ್ದೆ ಪರಿಣಾಮಕಾರಿ ಜಾರಿಗೆ ಆಗ್ರಹ

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು...

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು. "ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ...

Karnataka Budget 2026| ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲು; ದೇವದಾಸಿ-ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಅರಿಯಲು ಸಮೀಕ್ಷೆ

2026-27 ಸಾಲಿನ ಆಯವ್ಯಯ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಸಾಕಷ್ಟು ಅನುದಾನ ಘೋಷಣೆ ಮಾಡಿದ್ದಾರೆ. ಗೃಹಲಕ್ಷ್ಮಿ ಯೋಜನೆಗೆ 28,608 ಕೋಟಿ ರೂ. ಮೀಸಲಿಡಲಾಗಿದ್ದು, ಮಾಜಿ ದೇವದಾಸಿ ಮಹಿಳೆಯರು...

ಬಂಗಾಳ ರಾಜ್ಯಪಾಲ ಸಿ.ವಿ. ಆನಂದ ಬೋಸ್ ವಿಧಾನಸಭಾ ಚುನಾವಣೆಗೆ ಮುನ್ನ ರಾಜೀನಾಮೆ; ರಾಜಕೀಯ ಒತ್ತಡದ ಆರೋಪ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ ಬೋಸ್ ಅವರು ಸುಮಾರು ಮೂರುವರೆ ವರ್ಷಗಳ ಕಾಲ ಅಧಿಕಾರದಲ್ಲಿದ್ದ ನಂತರ ಗುರುವಾರ ರಾಜೀನಾಮೆ ನೀಡಿದ್ದಾರೆ. ಈ ಕ್ರಮವು ರಾಜ್ಯದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಮುನ್ನ ರಾಜಕೀಯ...

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು. ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ...

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

"ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು" ಎಂದು...

ಕರ್ನಾಟಕ ಬಜೆಟ್ 2026: 16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಮಾಧ್ಯಮ ನಿಷೇಧ – ಸಿಎಂ ಸಿದ್ದರಾಮಯ್ಯ ಘೋಷಣೆ

ಮಾರ್ಚ್ 6, ಶುಕ್ರವಾರದಂದು 2026 ರ ರಾಜ್ಯ ಬಜೆಟ್ ಮಂಡಿಸಿದ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಮಾಧ್ಯಮ ಬಳಸುವುದನ್ನು ನಿಷೇಧಿಸುವುದಾಗಿ ಘೋಷಿಸಿದರು. "ಮಕ್ಕಳ ಮೇಲೆ ಹೆಚ್ಚುತ್ತಿರುವ ಮೊಬೈಲ್...