Homeಸಿನಿಮಾಸಿನಿ ಸುದ್ದಿಮೋದಿಯನ್ನೂ ಸೋಲಿಸಿದ ಜಡೆಮಾಯಸಂದ್ರ ಜಗ್ಗಣ್ಣ!

ಮೋದಿಯನ್ನೂ ಸೋಲಿಸಿದ ಜಡೆಮಾಯಸಂದ್ರ ಜಗ್ಗಣ್ಣ!

- Advertisement -
- Advertisement -

ಗಿರೀಶ್ ತಾಳಿಕಟ್ಟೆ |

ನಟ ಜಗ್ಗಣ್ಣ ಯಶವಂತಪುರ ಕಾಳಗದಲ್ಲಿ ಸೋತಿರೋದು ಅಚ್ಚರಿಯೂ ಅಲ್ಲ, ಆಘಾತವೂ ಅಲ್ಲ. ಅಲ್ಲಿ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂಬುದು ನಿಕ್ಕಿಯಾದ ಮೇಲೆಯೇ ಬಿಜೆಪಿ ಕಾಮಿಡಿ ಕಿಲಾಡಿಯನ್ನು ಅಭ್ಯರ್ಥಿಯಾಗಿ ಅಖಾಡಕ್ಕಿಳಿಸಿದ್ದರ ಹಿಂದೆ ಇದ್ದದ್ದು ಒಂದೇ ಅಜೆಂಡಾ. ಕಾಂಗ್ರೆಸ್‍ನ ಎಸ್.ಟಿ.ಸೋಮಶೇಖರ್‍ಗೆ ಹೋಗಬಹುದಾಗಿದ್ದ ಒಕ್ಕಲಿಗ ಮತಗಳನ್ನು ಛಿದ್ರಗೊಳಿಸಿ, ಅದೇ ಸಮುದಾಯದ ಜೆಡಿಎಸ್‍ನ ಜವರಾಯಿ ಗೌಡರಿಗೆ ನೆರವಾಗುವುದಷ್ಟೇ ಆ ಸ್ಪರ್ಧೆಯ ಉದ್ದೇಶವಾಗಿತ್ತು. ಹಿಂದೊಮ್ಮೆ ಬಿಜೆಪಿಯ ಲೇಡಿ ಲೀಡರ್ ಶೋಭಕ್ಕ ಯಾನೆ ಶೋಭ ಕರಂದ್ಲಾಜೆ ಯಶವಂತಪುರದಿಂದ ಗೆದ್ದು ಈ ಕ್ಷೇತ್ರವನ್ನು ಅನಾಥವಾಗಿಸಿ ಹೋದ ತರುವಾಯ ಇಲ್ಲಿ ಬಿಜೆಪಿಗೆ ನೆಲೆಯೆಂಬುದೇ ಇಲ್ಲದಂತಾಗಿದೆ. ಇಲ್ಲದೇ ಹೋಗಿದ್ದರೆ ಉಳಿದಿಬ್ಬರು ತಲಾ ಒಂದು ಲಕ್ಷಕ್ಕೂ ಹೆಚ್ಚು ಮತಗಳನ್ನು ಕಬಳಿಸುವ ಕ್ಷೇತ್ರದಲ್ಲಿ ಬಿಜೆಪಿಯ ಜಗ್ಗಣ್ಣನಿಗೆ ಕೇವಲ ಐವತ್ತೊಂಬತ್ತು ಸಾವಿರ ಮತಗಳಷ್ಟೇ ಗಟ್ಟಿಯಾಗುತ್ತಿರಲಿಲ್ಲ. ಅದೂ ರಾಜ್ಯದ ಅತಿದೊಡ್ಡ ವಿಧಾನಸಭಾ ಕ್ಷೇತ್ರ ಎಂಬ ಹೆಗ್ಗಳಿಕೆಯ ಯಶವಂತಪುರದಲ್ಲಿ!

ಆದ್ರೆ ಜಗ್ಗಣ್ಣನ ಸೋಲು ಸುದ್ದಿಯಾಗುತ್ತಿರೋದು ಆ ವಿಚಾರಕ್ಕಲ್ಲ. ಈ ಮೊದಲು ಕಾಂಗ್ರೆಸ್‍ನಲ್ಲಿದ್ದ ಜಗ್ಗಣ್ಣ ಆಪರೇಷನ್ ಕಮಲದಲ್ಲಿ ಬಿಜೆಪಿಗೆ ಬಿಕರಿಗೊಂಡು ಕೇಸರಿ ಪಾಳೆಯ ಸೇರಿದ ತರುವಾಯ ಪಕ್ಕಾ ಹಿಂದೂತ್ವವಾದಿಯಂತೆ ಸೋಗುಹಾಕಲು ಶುರು ಮಾಡಿರೋದು ಹೊಸ ವಿಚಾರವೇನಲ್ಲ. ಅದೇ ಧಾಟಿಯಲ್ಲಿ ಮೊನ್ನೆ ಎಲೆಕ್ಷನ್‍ಗೆ ಸ್ಪರ್ಧಿಸಿದ್ದಾಗ `ಈ ಜಗ್ಗೇಶ್ ಗೆದ್ದರೆ ಮೋದಿ ಗೆದ್ದಂತೆ, ಮೋದಿ ಪರಿಕಲ್ಪನೆ ಗೆದ್ದಂತೆ, ಈ ಜಗ್ಗೇಶ್ ಗೆದ್ದರೆ ಹಿಂದೂ ಗೆದ್ದಂತೆ, ಪಾಂಡವರು ಗೆದ್ದಂತೆ…..’ ಎಂಬ ಡೈಲಾಗ್ ಟ್ವೀಟ್ ಮಾಡಿದ್ದರು. ಬಹಿರಂಗ ಪ್ರಚಾರ ಸಭೆಯಲ್ಲಿ ಮೋದಿ ಸೀಟಿನ ಹಿಂದೆ ಕೂರಲು ಜಾಗ ಸಿಕ್ಕಿದ್ದನ್ನೇ ಮ್ಯಾಗ್ಸೆಸ್ಸೆ ಅವಾರ್ಡ್ ಸಿಕ್ಕ ರೇಂಜಿಗೆ ಖುಷಿಯಿಂದ ಗೀಚಿಕೊಂಡಿದ್ದ ಜಗ್ಗಣ್ಣ ಹಿಂದೂತ್ವದ ಟ್ರಂಪ್ ಕಾರ್ಡ್ ಬಳಸಲು ಹೋಗಿ ಮುಗ್ಗರಿಸಿದ್ದಾರೆ. ಜೊತೆಗೆ ಸ್ವತಃ ಟ್ವಿಟ್ಟರ್‍ನಲ್ಲಿ ಗೀಚಿಕೊಂಡಂತೆ ತಾನು ಸೋಲೋದಲ್ಲದೆ ತನ್ನ ಜತೆ ಮೋದಿಯನ್ನೂ ಸೋಲಿಸಿ ಮುಗುಮ್ಮಾಗಿ ಕೂತಿದ್ದಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭೋಪಾಲ್‌| ಪುರಸಭೆಯ ಕಸಾಯಿಖಾನೆಯಲ್ಲಿ ಗೋಮಾಂಸ ಪತ್ತೆ; ಕಾಂಗ್ರೆಸ್‌-ಬಿಜೆಪಿ ಪ್ರತಿಭಟನೆ

ಪುರಸಭೆಯ ಕಸಾಯಿಖಾನೆಯಲ್ಲಿ ಗೋಹತ್ಯೆ ನಡೆದಿದೆ ಎಂಬುದನ್ನು ಅಧಿಕಾರಿಗಳು ಮತ್ತೆಹಚ್ಚಿದ ನಂತರ ದೊಡ್ಡ ವಿವಾದ ಭುಗಿಲೆದ್ದಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಹಿಂದೂ ಬಲಪಂಥೀಯ ಸಂಘಟನೆಗಳು ಮತ್ತು ವಿರೋಧ ಪಕ್ಷದ ಕಾಂಗ್ರೆಸ್ ಕಾರ್ಯಕರ್ತರಿಂದ...

ಇರಾನ್‌ ದಂಗೆ | ಹತ್ಯೆಗಳು ನಿಂತಿವೆ ಎಂದ ಟ್ರಂಪ್ : ಪ್ರತಿಭಟನಾಕಾರರನ್ನು ಗಲ್ಲಿಗೇರಿಸುವ ವರದಿ ತಳ್ಳಿಹಾಕಿದ ವಿದೇಶಾಂಗ ಸಚಿವ

ಇರಾನ್‌ನಲ್ಲಿ ಆಡಳಿತ ವಿರೋಧಿ ಪ್ರತಿಭಟನಾಕಾರರ 'ಹತ್ಯೆಗಳು ನಿಂತಿವೆ' ಎಂದು ಬುಧವಾರ (ಜ.14) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯೆ ಎಂಬಂತೆ ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಕೂಡ ಪ್ರತಿಭಟನಾಕಾರರನ್ನು...

ಮುಂಬೈ ಬಿಎಂಸಿ ಚುನಾವಣೆ 2026: ಚುನಾವಣಾ ಆಯೋಗದ ವೆಬ್‌ಸೈಟ್ ಸ್ಥಗಿತ! ಮತದಾನ ಮಾಡಲು ಸಾಧ್ಯವಾಗದೆ ಪರದಾಡಿದ ನಾಗರಿಕರು

ಮುಂಬೈ: ಬಹು ಕುತೂಹಲಕಾರಿ ಬೃಹನ್ಮುಂಬೈ ಮಹಾನಗರ ಪಾಲಿಕೆ (ಬಿಎಂಸಿ) ಚುನಾವಣೆಗೆ ಜನವರಿ 15, 2026 ರ ಗುರುವಾರ ಬೆಳಿಗ್ಗೆ 7:30 ಕ್ಕೆ ಮತದಾನ ಪ್ರಾರಂಭವಾಯಿತು, ಮುಂಬೈನಲ್ಲಿ ಚುನಾಯಿತ ನಾಗರಿಕ ಸಂಸ್ಥೆ ಇಲ್ಲದೆ ಸುಮಾರು...

ಮೀರತ್| ದಲಿತ ಮಹಿಳೆ ಕೊಲೆ-ಮಗಳ ಅಪಹರಣ; ಸಂತ್ರಸ್ತ ಕುಟುಂಬವನ್ನು ಸಾರ್ವಜನಿಕ ಸಂಪರ್ಕದಿಂದ ದೂರವಿಟ್ಟ ಪೊಲೀಸರು

ಮೀರತ್‌ನಲ್ಲಿ ಪ್ರಬಲ ಜಾತಿ ಪುರುಷರ ಗುಂಪೊಂದು ದಲಿತ ಮಹಿಳೆಯನ್ನು ಅಪಹರಿಸಿ ಹತ್ಯೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು, "ಪೊಲೀಸರು ಮತ್ತು ಬಿಜೆಪಿ ಮುಖಂಡರು ತಮ್ಮನ್ನು ಹೊರಗಿನ ಪ್ರಪಂಚದಿಂದ ಸಂಪರ್ಕ ಕಡಿತಗೊಳಿಸಲು ಪ್ರಯತ್ನಿಸುತ್ತಿದೆ, ಪ್ರಮುಖ...

ಮಸೀದಿ, ದರ್ಗಾಗಳನ್ನು ಗುರಿಯಾಗಿಸಿಕೊಂಡು ಪದೇ ಪದೇ ಪಿಐಎಲ್‌ : ಎನ್‌ಜಿಒಗೆ ಹೈಕೋರ್ಟ್ ತರಾಟೆ

ರಾಷ್ಟ್ರ ರಾಜಧಾನಿಯಲ್ಲಿ ಮಸೀದಿ ಮತ್ತು ದರ್ಗಾಗಳು ಅತಿಕ್ರಮಣ ಮಾಡುತ್ತಿವೆ ಎಂದು ಆರೋಪಿಸಿ ಪದೇ ಪದೇ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದಕ್ಕಾಗಿ ಸೇವ್ ಇಂಡಿಯಾ ಫೌಂಡೇಶನ್ ಎಂಬ ಸಂಸ್ಥೆಯನ್ನು ದೆಹಲಿ ಹೈಕೋರ್ಟ್ ಬುಧವಾರ...

ಕಾಂಗ್ರೆಸ್‌ಗೆ ಮರಳಲು ಮುಂದಾದ ಬಿಜೆಪಿ ನಾಯಕನ ಮನೆ ಮೇಲೆ ಎಸಿಬಿ ದಾಳಿ

ಕಾಂಗ್ರೆಸ್‌ಗೆ ಮರಳುವ ಇಂಗಿತ ವ್ಯಕ್ತಪಡಿಸಿದ ಎರಡು ದಿನಗಳ ಬಳಿಕ ಬಿಜೆಪಿ ನಾಯಕ ಮತ್ತು ಮಾಜಿ ಸಚಿವ ಮಹೇಂದ್ರಜೀತ್ ಸಿಂಗ್ ಮಾಳವೀಯ ಅವರ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದಾಳಿ ನಡೆಸಿದೆ...

ಬೀದರ್: ಗಾಳಿಪಟದ ದಾರ ಕುತ್ತಿಗೆ ಸೀಳಿ ಸ್ಥಳದಲ್ಲಿ ಪ್ರಾಣ ಬಿಟ್ಟ 48 ವರ್ಷದ ಬೈಕ್ ಸವಾರ

ಬೀದರ್ ಜಿಲ್ಲೆಯ ತಲಮಡಗಿ ಸೇತುವೆ ಬಳಿಯ ರಸ್ತೆಯಲ್ಲಿ ಮಗಳನ್ನು ಕರೆತರಲು ಬೈಕ್ ನಲ್ಲಿ ತೆರಳುತ್ತಿದ್ದ 48 ವರ್ಷದ ವ್ಯಕ್ತಿ ಕೊರಳಿಗೆ ಗಾಳಿ ಪಟದ ದಾರ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ.  ಮೃತ...

ಐ-ಪ್ಯಾಕ್ ಮೇಲಿನ ದಾಳಿ: ಟಿಎಂಸಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಕಲ್ಕತ್ತಾ ಹೈಕೋರ್ಟ್

ಐ-ಪಿಎಸಿಗೆ ಸಂಬಂಧಿಸಿದ ಇತ್ತೀಚಿನ ದಾಳಿಗಳ ಸಂದರ್ಭದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಪಕ್ಷದ ಫೈಲ್‌ಗಳು ಮತ್ತು ಚುನಾವಣಾ ಸಂಬಂಧಿತ ಡೇಟಾವನ್ನು ವಶಪಡಿಸಿಕೊಂಡಿದೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಲ್ಲಿಸಿದ್ದ ಅರ್ಜಿಯನ್ನು ಕಲ್ಕತ್ತಾ ಹೈಕೋರ್ಟ್...

ತೆಲಂಗಾಣ| ಪಂಚಾಯತ್ ಚುನಾವಣೆಯ ನಂತರ 500 ಬೀದಿ ನಾಯಿಗಳ ಸಾಮೂಹಿಕ ಕೊಲೆ; ‘ನಾಯಿ ಮುಕ್ತ ಗ್ರಾಮ’ದ ಭರವಸೆ ನೀಡಿದ್ದ ಅಭ್ಯರ್ಥಿಗಳು

ತೆಲಂಗಾಣದ ಹನಮಕೊಂಡ ಮತ್ತು ಕಾಮರೆಡ್ಡಿ ಜಿಲ್ಲೆಗಳಿಂದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದ್ದು, ಜನವರಿಯ ಮೊದಲ ಎರಡು ವಾರಗಳಲ್ಲಿ ಸುಮಾರು 500 ನಾಯಿಗಳನ್ನು ವಿಷ ಹಾಕಿ ಕೊಂದಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ವರದಿ ಮಾಡಿವೆ....

ಕಾನ್ಪುರ ದೇಹತ್‌ನಲ್ಲಿ ನೆರೆಯವರ ಹಲ್ಲೆಯಿಂದ ದಲಿತ ರೈತ ಸಾವು; ಆರು ಮಂದಿ ಬಂಧನ

ಉತ್ತರ ಪ್ರದೇಶದ ಕಾನ್ಪುರ ದೇಹತ್ ಜಿಲ್ಲೆಯಲ್ಲಿ 50 ವರ್ಷದ ದಲಿತ ರೈತನೊಬ್ಬ ತನ್ನ ನೆರೆಹೊರೆಯವರು ಮತ್ತು ಅವರ ಸಂಬಂಧಿಕರಿಂದ ಥಳಿತಕ್ಕೊಳಗಾಗಿ ಸಾವನ್ನಪ್ಪಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಮತ್ತು ಆತನ...