Homeಸಿನಿಮಾಸಿನಿ ಸುದ್ದಿಮೋದಿಯನ್ನೂ ಸೋಲಿಸಿದ ಜಡೆಮಾಯಸಂದ್ರ ಜಗ್ಗಣ್ಣ!

ಮೋದಿಯನ್ನೂ ಸೋಲಿಸಿದ ಜಡೆಮಾಯಸಂದ್ರ ಜಗ್ಗಣ್ಣ!

- Advertisement -
- Advertisement -

ಗಿರೀಶ್ ತಾಳಿಕಟ್ಟೆ |

ನಟ ಜಗ್ಗಣ್ಣ ಯಶವಂತಪುರ ಕಾಳಗದಲ್ಲಿ ಸೋತಿರೋದು ಅಚ್ಚರಿಯೂ ಅಲ್ಲ, ಆಘಾತವೂ ಅಲ್ಲ. ಅಲ್ಲಿ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂಬುದು ನಿಕ್ಕಿಯಾದ ಮೇಲೆಯೇ ಬಿಜೆಪಿ ಕಾಮಿಡಿ ಕಿಲಾಡಿಯನ್ನು ಅಭ್ಯರ್ಥಿಯಾಗಿ ಅಖಾಡಕ್ಕಿಳಿಸಿದ್ದರ ಹಿಂದೆ ಇದ್ದದ್ದು ಒಂದೇ ಅಜೆಂಡಾ. ಕಾಂಗ್ರೆಸ್‍ನ ಎಸ್.ಟಿ.ಸೋಮಶೇಖರ್‍ಗೆ ಹೋಗಬಹುದಾಗಿದ್ದ ಒಕ್ಕಲಿಗ ಮತಗಳನ್ನು ಛಿದ್ರಗೊಳಿಸಿ, ಅದೇ ಸಮುದಾಯದ ಜೆಡಿಎಸ್‍ನ ಜವರಾಯಿ ಗೌಡರಿಗೆ ನೆರವಾಗುವುದಷ್ಟೇ ಆ ಸ್ಪರ್ಧೆಯ ಉದ್ದೇಶವಾಗಿತ್ತು. ಹಿಂದೊಮ್ಮೆ ಬಿಜೆಪಿಯ ಲೇಡಿ ಲೀಡರ್ ಶೋಭಕ್ಕ ಯಾನೆ ಶೋಭ ಕರಂದ್ಲಾಜೆ ಯಶವಂತಪುರದಿಂದ ಗೆದ್ದು ಈ ಕ್ಷೇತ್ರವನ್ನು ಅನಾಥವಾಗಿಸಿ ಹೋದ ತರುವಾಯ ಇಲ್ಲಿ ಬಿಜೆಪಿಗೆ ನೆಲೆಯೆಂಬುದೇ ಇಲ್ಲದಂತಾಗಿದೆ. ಇಲ್ಲದೇ ಹೋಗಿದ್ದರೆ ಉಳಿದಿಬ್ಬರು ತಲಾ ಒಂದು ಲಕ್ಷಕ್ಕೂ ಹೆಚ್ಚು ಮತಗಳನ್ನು ಕಬಳಿಸುವ ಕ್ಷೇತ್ರದಲ್ಲಿ ಬಿಜೆಪಿಯ ಜಗ್ಗಣ್ಣನಿಗೆ ಕೇವಲ ಐವತ್ತೊಂಬತ್ತು ಸಾವಿರ ಮತಗಳಷ್ಟೇ ಗಟ್ಟಿಯಾಗುತ್ತಿರಲಿಲ್ಲ. ಅದೂ ರಾಜ್ಯದ ಅತಿದೊಡ್ಡ ವಿಧಾನಸಭಾ ಕ್ಷೇತ್ರ ಎಂಬ ಹೆಗ್ಗಳಿಕೆಯ ಯಶವಂತಪುರದಲ್ಲಿ!

ಆದ್ರೆ ಜಗ್ಗಣ್ಣನ ಸೋಲು ಸುದ್ದಿಯಾಗುತ್ತಿರೋದು ಆ ವಿಚಾರಕ್ಕಲ್ಲ. ಈ ಮೊದಲು ಕಾಂಗ್ರೆಸ್‍ನಲ್ಲಿದ್ದ ಜಗ್ಗಣ್ಣ ಆಪರೇಷನ್ ಕಮಲದಲ್ಲಿ ಬಿಜೆಪಿಗೆ ಬಿಕರಿಗೊಂಡು ಕೇಸರಿ ಪಾಳೆಯ ಸೇರಿದ ತರುವಾಯ ಪಕ್ಕಾ ಹಿಂದೂತ್ವವಾದಿಯಂತೆ ಸೋಗುಹಾಕಲು ಶುರು ಮಾಡಿರೋದು ಹೊಸ ವಿಚಾರವೇನಲ್ಲ. ಅದೇ ಧಾಟಿಯಲ್ಲಿ ಮೊನ್ನೆ ಎಲೆಕ್ಷನ್‍ಗೆ ಸ್ಪರ್ಧಿಸಿದ್ದಾಗ `ಈ ಜಗ್ಗೇಶ್ ಗೆದ್ದರೆ ಮೋದಿ ಗೆದ್ದಂತೆ, ಮೋದಿ ಪರಿಕಲ್ಪನೆ ಗೆದ್ದಂತೆ, ಈ ಜಗ್ಗೇಶ್ ಗೆದ್ದರೆ ಹಿಂದೂ ಗೆದ್ದಂತೆ, ಪಾಂಡವರು ಗೆದ್ದಂತೆ…..’ ಎಂಬ ಡೈಲಾಗ್ ಟ್ವೀಟ್ ಮಾಡಿದ್ದರು. ಬಹಿರಂಗ ಪ್ರಚಾರ ಸಭೆಯಲ್ಲಿ ಮೋದಿ ಸೀಟಿನ ಹಿಂದೆ ಕೂರಲು ಜಾಗ ಸಿಕ್ಕಿದ್ದನ್ನೇ ಮ್ಯಾಗ್ಸೆಸ್ಸೆ ಅವಾರ್ಡ್ ಸಿಕ್ಕ ರೇಂಜಿಗೆ ಖುಷಿಯಿಂದ ಗೀಚಿಕೊಂಡಿದ್ದ ಜಗ್ಗಣ್ಣ ಹಿಂದೂತ್ವದ ಟ್ರಂಪ್ ಕಾರ್ಡ್ ಬಳಸಲು ಹೋಗಿ ಮುಗ್ಗರಿಸಿದ್ದಾರೆ. ಜೊತೆಗೆ ಸ್ವತಃ ಟ್ವಿಟ್ಟರ್‍ನಲ್ಲಿ ಗೀಚಿಕೊಂಡಂತೆ ತಾನು ಸೋಲೋದಲ್ಲದೆ ತನ್ನ ಜತೆ ಮೋದಿಯನ್ನೂ ಸೋಲಿಸಿ ಮುಗುಮ್ಮಾಗಿ ಕೂತಿದ್ದಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯೂಬಾ ಎಂದರೆ ಫಿಡೆಲ್, ಅಮೆರಿಕದ ಕುತಂತ್ರದ ವಿರುದ್ಧ ಪುಟ್ಟ ರಾಷ್ಟ್ರ ಕ್ಯೂಬಾದ ಸುದೀರ್ಘ ಕ್ರಾಂತಿ

ಆಗಸ್ಟ್ 13, 2026 ರಂದು ಕ್ಯೂಬಾ ತನ್ನ ಕ್ರಾಂತಿಕಾರಿ ನಾಯಕ, ಕಮಾಂಡರ್-ಇನ್-ಚೀಫ್ ಫಿಡೆಲ್ ಕ್ಯಾಸ್ಟ್ರೋ ರೂಜ್ ಅವರ ಜನ್ಮ ಶತಮಾನೋತ್ಸವವನ್ನು ಆಚರಿಸುತ್ತಿದೆ. ಐದು ದಶಕಗಳ ಕಾಲ ದೇಶವನ್ನು ಮುನ್ನಡೆಸಿದ ನಾಯಕನ ಶಾಶ್ವತ ಸಿದ್ಧಾಂತಗಳು...

‘ರೋಹಿತ್ ಕಾಯ್ದೆ’ ಜಾರಿಗೆ ಆಗ್ರಹ: ಚಾಲ್ತಿಯಲ್ಲಿರುವ ಅಧಿವೇಶನದಲ್ಲೇ ವಿಧೇಯಕ ಮಂಡಿಸಲು ಸರ್ಕಾರಕ್ಕೆ ‘ರೋಹಿತ್ ಕಾಯ್ದೆಗಾಗಿ ಜನಾಂದೋಲನ’ ಸಂಘಟನೆ ಒತ್ತಾಯ

ಬೆಂಗಳೂರು: ದೇಶದ ಉನ್ನತ ಶಿಕ್ಷಣ ಸಂಸ್ಥೆಗಳು ಹಾಗೂ ವಿಶ್ವವಿದ್ಯಾಲಯಗಳಲ್ಲಿ ದಲಿತ ಮತ್ತು ಆದಿವಾಸಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಸಾಂಸ್ಥಿಕ ಜಾತಿ ತಾರತಮ್ಯ, ಕಿರುಕುಳ ಹಾಗೂ ವಂಚನೆಯನ್ನು ತಡೆಗಟ್ಟಲು ಅತ್ಯಂತ ನಿರ್ಣಾಯಕವಾಗಿರುವ 'ಕರ್ನಾಟಕ ರೋಹಿತ್ ವೇಮುಲಾ...

SIR: ತೆಲಂಗಾಣ ಸರ್ಕಾರ ಮತದಾರರಿಗೆ ನೀಡಿದ್ದ FRC ಯನ್ನು , ನಿರಾಕರಿಸಿದ ಕೇಂದ್ರ ಚುನಾವಣಾ ಆಯೋಗ

ಮತದಾರರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ತೆಲಂಗಾಣ ಸರ್ಕಾರ ಇತ್ತೀಚೆಗೆ ಜಾರಿಗೆ ತಂದಿದ್ದ ‘ಫ್ಯಾಮಿಲಿ ರಿಜಿಸ್ಟರ್ ಸರ್ಟಿಫಿಕೇಟ್’ (FRC) ಅನ್ನು ಮತದಾರರ ದಾಖಲೆಯನ್ನಾಗಿ ಸ್ವೀಕರಿಸಲು ಕೇಂದ್ರ ಚುನಾವಣಾ ಆಯೋಗ ನಿರಾಕರಿಸಿದೆ. FRC...

ಬಿಹಾರ| ಗ್ರಾಮ ತೊರೆಯಿರಿ ಅಥವಾ ‘ಘರ್ ವಾಪ್ಸಿ’ಯಾಗಿ; ಹಿಂದುತ್ವ ಗುಂಪಿನಿಂದ ಕ್ರೈಸ್ತ ಕಟುಂಬಗಳಿಗೆ ಬೆದರಿಕೆ

ಬಿಹಾರದ ಭಾಗಲ್ಪುರ ಜಿಲ್ಲೆಯ ಗೋಪಾಲಪುರ ಗ್ರಾಮದ 42 ಕ್ರಿಶ್ಚಿಯನ್ ಕುಟುಂಬಗಳಿಗೆ ಹಿಂದುತ್ವ ಗುಂಪಿನ ಸದಸ್ಯರು ಬೆದರಿಕೆ ಹಾಕಿದ್ದಾರೆ ಎಂದು 'ಕ್ಲಾರಿಯನ್ ಇಂಡಿಯಾ' ನ್ಯೂಸ್‌ ಪೋರ್ಟ್ಲ್ ವರದಿ ಮಾಡಿದೆ. 'ಘರ್ ವಾಪ್ಸಿ'ಯಾಗಿ ಅಥವಾ ಗ್ರಾಮ...

ಭೂಮಾನಂದ ಹತ್ಯೆ: ಕೊಲೆಗಾರರ ಪರ ನಿಂತ ‘ವಾಲ್ಮೀಕಿ ನಾಯಕ ಸಂಘ’ದ ವಿರುದ್ಧ ಆಕ್ರೋಶ: ಆಗಸ್ಟ್ 15ಕ್ಕೆ ಕಪ್ಪುಪಟ್ಟಿ ಪ್ರದರ್ಶನ, ಬೈಕ್ ರ್ಯಾಲಿಗೆ ಕರೆ

ರಾಯಚೂರು: ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ಬಹುಜನ ಮುಖಂಡ ಭೂಮಾನಂದ ಅವರ ಬರ್ಬರ ಕಗ್ಗೋಲೆಯನ್ನು ಖಂಡಿಸಿ, ಕೊಲೆಗಡುಕರ ಪರವಾಗಿ ನಿಂತಿರುವ ಸಂಘಟನೆಗಳು ಹಾಗೂ ಮೌನ ವಹಿಸಿರುವ ಜನಪ್ರತಿನಿಧಿಗಳ ವಿರುದ್ಧ 'ಬಹುಜನ ಮುಖಂಡ ಭೂಮಾನಂದನ...

SIR ಅವಾಂತರ: ನಟ ಪ್ರಕಾಶ್ ರಾಜ್ ಹೆಸರೇ ವೋಟರ್ ಲಿಸ್ಟ್‌ನಿಂದ ನಾಪತ್ತೆ, ನಾಳೆ ಬೆಂಗಳೂರಲ್ಲಿ ಮಹತ್ವದ ಪತ್ರಿಕಾಗೋಷ್ಠಿ

ರಾಜ್ಯದಲ್ಲಿ ನಡೆಯುತ್ತಿರುವ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಅವಾಂತರಗಳು ದಿನಕ್ಕೊಂದು ಹೊಸ ತಿರುವು ಪಡೆದುಕೊಳ್ಳುತ್ತಿದ್ದು, ಇದೀಗ ಬಹುಭಾಷಾ ನಟ ಪ್ರಕಾಶ್ ರಾಜ್ ಅವರ ಹೆಸರೇ ಮತದಾರರ ಪಟ್ಟಿಯಿಂದ ನಾಪತ್ತೆಯಾಗಿದೆ. ವರ್ಷಗಳಿಂದ ಮತದಾನ...

ಹಳೆ ಮತದಾರರಲ್ಲಿ ಫಾರ್ಮ್ ನಂ.6 ಕೇಳುವುದೇ ಕಾನೂನು ಬಾಹಿರ; ಚುನಾವಣಾ ಆಯೋಗದ ನಿಯಮಗಳಿಗೆ ವಿರುದ್ಧ!

"ASDDO ಪಟ್ಟಿಯಲ್ಲಿ ಹೆಸರು ಬಂದಿದ್ದರೆ ಹೆದರಿಕೊಳ್ಳುವ ಅವಶ್ಯಕತೆ ಇಲ್ಲ, ಫಾರ್ಮ್ ನಂ.6 ಸಲ್ಲಿಸುವ ಮೂಲಕ ದಾಖಲೆಗಳನ್ನು ನೀಡಿ ಹೊಸದಾಗಿ ಮತದಾರರ ಪಟ್ಟಿಗೆ ಹೆಸರು ಸೇರಿಸಬಹುದು" ಎಂದು ಚುನಾವಣಾ ಆಯೋಗ ಹೇಳುತ್ತಿದೆ. ಆದರೆ, ಹಳೆ...

SIR: ಅರ್ಹ ಮತದಾರರನ್ನು ಹೊರಗಿಟ್ಟು 1,848 ಹೊಸ ಮತಗಟ್ಟೆ ಸ್ಥಾಪಿಸಲು ಮುಂದಾದ ಚುನಾವಣಾ ಆಯೋಗ

ಒಂದೆಡೆ ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ (SIR) ಹೆಸರಿನಲ್ಲಿ ಲಕ್ಷಾಂತರ ಅರ್ಹ ಮತದಾರರ ಹೆಸರುಗಳು ಡಿಲೀಟ್‌ ಆಗುವ ಭೀತಿ ಎದುರಾಗಿದ್ದರೆ, ಇನ್ನೊಂದೆಡೆ ರಾಜ್ಯದಲ್ಲಿ ಹೊಸದಾಗಿ 1,848 ಹೆಚ್ಚುವರಿ ಮತಗಟ್ಟೆಗಳನ್ನು ಸ್ಥಾಪಿಸಲು ಕೇಂದ್ರ ಚುನಾವಣಾ...

ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಭಾಷಣದ ಬೆನ್ನಲ್ಲೇ ವೇದಿಕೆ ‘ಶುದ್ಧೀಕರಣ’: ಕೇಂದ್ರ ಸರ್ಕಾರ ಹಾಗೂ ಬಿಜೆಪಿಗೆ ಪ್ರತಿಪಕ್ಷಗಳ ತೀವ್ರ ತರಾಟೆ 

ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ಹಲ್ದ್ವಾನಿಯಲ್ಲಿರುವ ರಾಮ್‌ಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ರಾಜ್ಯಸಭೆಯ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೆಲವೇ ದಿನಗಳಲ್ಲಿ, ಬಲಪಂಥೀಯ...

ನೀಟ್ ಪೇಪರ್ ಲೀಕ್ ಪ್ರಕರಣದ ಚಾರ್ಜ್ ಶೀಟ್ ಲೀಕ್ : ಕೋರ್ಟ್ ಕಳವಳ

ನೀಟ್ ಯುಜಿ- 2026ರ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣದ ವಿಚಾರಣೆಗಾಗಿ ಸ್ಥಾಪಿಸಲಾದ ವಿಶೇಷ ಫಾಸ್ಟ್ ಟ್ರ್ಯಾಕ್ (ಶೀಘ್ರ ಗತಿ) ನ್ಯಾಯಾಲಯವು, 13 ಆರೋಪಿಗಳ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಸಲ್ಲಿಸಿರುವ ದೋಷಾರೋಪ...