Homeಸಿನಿಮಾಸಿನಿ ಸುದ್ದಿಮೋದಿಯನ್ನೂ ಸೋಲಿಸಿದ ಜಡೆಮಾಯಸಂದ್ರ ಜಗ್ಗಣ್ಣ!

ಮೋದಿಯನ್ನೂ ಸೋಲಿಸಿದ ಜಡೆಮಾಯಸಂದ್ರ ಜಗ್ಗಣ್ಣ!

- Advertisement -
- Advertisement -

ಗಿರೀಶ್ ತಾಳಿಕಟ್ಟೆ |

ನಟ ಜಗ್ಗಣ್ಣ ಯಶವಂತಪುರ ಕಾಳಗದಲ್ಲಿ ಸೋತಿರೋದು ಅಚ್ಚರಿಯೂ ಅಲ್ಲ, ಆಘಾತವೂ ಅಲ್ಲ. ಅಲ್ಲಿ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂಬುದು ನಿಕ್ಕಿಯಾದ ಮೇಲೆಯೇ ಬಿಜೆಪಿ ಕಾಮಿಡಿ ಕಿಲಾಡಿಯನ್ನು ಅಭ್ಯರ್ಥಿಯಾಗಿ ಅಖಾಡಕ್ಕಿಳಿಸಿದ್ದರ ಹಿಂದೆ ಇದ್ದದ್ದು ಒಂದೇ ಅಜೆಂಡಾ. ಕಾಂಗ್ರೆಸ್‍ನ ಎಸ್.ಟಿ.ಸೋಮಶೇಖರ್‍ಗೆ ಹೋಗಬಹುದಾಗಿದ್ದ ಒಕ್ಕಲಿಗ ಮತಗಳನ್ನು ಛಿದ್ರಗೊಳಿಸಿ, ಅದೇ ಸಮುದಾಯದ ಜೆಡಿಎಸ್‍ನ ಜವರಾಯಿ ಗೌಡರಿಗೆ ನೆರವಾಗುವುದಷ್ಟೇ ಆ ಸ್ಪರ್ಧೆಯ ಉದ್ದೇಶವಾಗಿತ್ತು. ಹಿಂದೊಮ್ಮೆ ಬಿಜೆಪಿಯ ಲೇಡಿ ಲೀಡರ್ ಶೋಭಕ್ಕ ಯಾನೆ ಶೋಭ ಕರಂದ್ಲಾಜೆ ಯಶವಂತಪುರದಿಂದ ಗೆದ್ದು ಈ ಕ್ಷೇತ್ರವನ್ನು ಅನಾಥವಾಗಿಸಿ ಹೋದ ತರುವಾಯ ಇಲ್ಲಿ ಬಿಜೆಪಿಗೆ ನೆಲೆಯೆಂಬುದೇ ಇಲ್ಲದಂತಾಗಿದೆ. ಇಲ್ಲದೇ ಹೋಗಿದ್ದರೆ ಉಳಿದಿಬ್ಬರು ತಲಾ ಒಂದು ಲಕ್ಷಕ್ಕೂ ಹೆಚ್ಚು ಮತಗಳನ್ನು ಕಬಳಿಸುವ ಕ್ಷೇತ್ರದಲ್ಲಿ ಬಿಜೆಪಿಯ ಜಗ್ಗಣ್ಣನಿಗೆ ಕೇವಲ ಐವತ್ತೊಂಬತ್ತು ಸಾವಿರ ಮತಗಳಷ್ಟೇ ಗಟ್ಟಿಯಾಗುತ್ತಿರಲಿಲ್ಲ. ಅದೂ ರಾಜ್ಯದ ಅತಿದೊಡ್ಡ ವಿಧಾನಸಭಾ ಕ್ಷೇತ್ರ ಎಂಬ ಹೆಗ್ಗಳಿಕೆಯ ಯಶವಂತಪುರದಲ್ಲಿ!

ಆದ್ರೆ ಜಗ್ಗಣ್ಣನ ಸೋಲು ಸುದ್ದಿಯಾಗುತ್ತಿರೋದು ಆ ವಿಚಾರಕ್ಕಲ್ಲ. ಈ ಮೊದಲು ಕಾಂಗ್ರೆಸ್‍ನಲ್ಲಿದ್ದ ಜಗ್ಗಣ್ಣ ಆಪರೇಷನ್ ಕಮಲದಲ್ಲಿ ಬಿಜೆಪಿಗೆ ಬಿಕರಿಗೊಂಡು ಕೇಸರಿ ಪಾಳೆಯ ಸೇರಿದ ತರುವಾಯ ಪಕ್ಕಾ ಹಿಂದೂತ್ವವಾದಿಯಂತೆ ಸೋಗುಹಾಕಲು ಶುರು ಮಾಡಿರೋದು ಹೊಸ ವಿಚಾರವೇನಲ್ಲ. ಅದೇ ಧಾಟಿಯಲ್ಲಿ ಮೊನ್ನೆ ಎಲೆಕ್ಷನ್‍ಗೆ ಸ್ಪರ್ಧಿಸಿದ್ದಾಗ `ಈ ಜಗ್ಗೇಶ್ ಗೆದ್ದರೆ ಮೋದಿ ಗೆದ್ದಂತೆ, ಮೋದಿ ಪರಿಕಲ್ಪನೆ ಗೆದ್ದಂತೆ, ಈ ಜಗ್ಗೇಶ್ ಗೆದ್ದರೆ ಹಿಂದೂ ಗೆದ್ದಂತೆ, ಪಾಂಡವರು ಗೆದ್ದಂತೆ…..’ ಎಂಬ ಡೈಲಾಗ್ ಟ್ವೀಟ್ ಮಾಡಿದ್ದರು. ಬಹಿರಂಗ ಪ್ರಚಾರ ಸಭೆಯಲ್ಲಿ ಮೋದಿ ಸೀಟಿನ ಹಿಂದೆ ಕೂರಲು ಜಾಗ ಸಿಕ್ಕಿದ್ದನ್ನೇ ಮ್ಯಾಗ್ಸೆಸ್ಸೆ ಅವಾರ್ಡ್ ಸಿಕ್ಕ ರೇಂಜಿಗೆ ಖುಷಿಯಿಂದ ಗೀಚಿಕೊಂಡಿದ್ದ ಜಗ್ಗಣ್ಣ ಹಿಂದೂತ್ವದ ಟ್ರಂಪ್ ಕಾರ್ಡ್ ಬಳಸಲು ಹೋಗಿ ಮುಗ್ಗರಿಸಿದ್ದಾರೆ. ಜೊತೆಗೆ ಸ್ವತಃ ಟ್ವಿಟ್ಟರ್‍ನಲ್ಲಿ ಗೀಚಿಕೊಂಡಂತೆ ತಾನು ಸೋಲೋದಲ್ಲದೆ ತನ್ನ ಜತೆ ಮೋದಿಯನ್ನೂ ಸೋಲಿಸಿ ಮುಗುಮ್ಮಾಗಿ ಕೂತಿದ್ದಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...