Homeಸಿನಿಮಾಸಿನಿ ಸುದ್ದಿಮೋದಿಯನ್ನೂ ಸೋಲಿಸಿದ ಜಡೆಮಾಯಸಂದ್ರ ಜಗ್ಗಣ್ಣ!

ಮೋದಿಯನ್ನೂ ಸೋಲಿಸಿದ ಜಡೆಮಾಯಸಂದ್ರ ಜಗ್ಗಣ್ಣ!

- Advertisement -
- Advertisement -

ಗಿರೀಶ್ ತಾಳಿಕಟ್ಟೆ |

ನಟ ಜಗ್ಗಣ್ಣ ಯಶವಂತಪುರ ಕಾಳಗದಲ್ಲಿ ಸೋತಿರೋದು ಅಚ್ಚರಿಯೂ ಅಲ್ಲ, ಆಘಾತವೂ ಅಲ್ಲ. ಅಲ್ಲಿ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂಬುದು ನಿಕ್ಕಿಯಾದ ಮೇಲೆಯೇ ಬಿಜೆಪಿ ಕಾಮಿಡಿ ಕಿಲಾಡಿಯನ್ನು ಅಭ್ಯರ್ಥಿಯಾಗಿ ಅಖಾಡಕ್ಕಿಳಿಸಿದ್ದರ ಹಿಂದೆ ಇದ್ದದ್ದು ಒಂದೇ ಅಜೆಂಡಾ. ಕಾಂಗ್ರೆಸ್‍ನ ಎಸ್.ಟಿ.ಸೋಮಶೇಖರ್‍ಗೆ ಹೋಗಬಹುದಾಗಿದ್ದ ಒಕ್ಕಲಿಗ ಮತಗಳನ್ನು ಛಿದ್ರಗೊಳಿಸಿ, ಅದೇ ಸಮುದಾಯದ ಜೆಡಿಎಸ್‍ನ ಜವರಾಯಿ ಗೌಡರಿಗೆ ನೆರವಾಗುವುದಷ್ಟೇ ಆ ಸ್ಪರ್ಧೆಯ ಉದ್ದೇಶವಾಗಿತ್ತು. ಹಿಂದೊಮ್ಮೆ ಬಿಜೆಪಿಯ ಲೇಡಿ ಲೀಡರ್ ಶೋಭಕ್ಕ ಯಾನೆ ಶೋಭ ಕರಂದ್ಲಾಜೆ ಯಶವಂತಪುರದಿಂದ ಗೆದ್ದು ಈ ಕ್ಷೇತ್ರವನ್ನು ಅನಾಥವಾಗಿಸಿ ಹೋದ ತರುವಾಯ ಇಲ್ಲಿ ಬಿಜೆಪಿಗೆ ನೆಲೆಯೆಂಬುದೇ ಇಲ್ಲದಂತಾಗಿದೆ. ಇಲ್ಲದೇ ಹೋಗಿದ್ದರೆ ಉಳಿದಿಬ್ಬರು ತಲಾ ಒಂದು ಲಕ್ಷಕ್ಕೂ ಹೆಚ್ಚು ಮತಗಳನ್ನು ಕಬಳಿಸುವ ಕ್ಷೇತ್ರದಲ್ಲಿ ಬಿಜೆಪಿಯ ಜಗ್ಗಣ್ಣನಿಗೆ ಕೇವಲ ಐವತ್ತೊಂಬತ್ತು ಸಾವಿರ ಮತಗಳಷ್ಟೇ ಗಟ್ಟಿಯಾಗುತ್ತಿರಲಿಲ್ಲ. ಅದೂ ರಾಜ್ಯದ ಅತಿದೊಡ್ಡ ವಿಧಾನಸಭಾ ಕ್ಷೇತ್ರ ಎಂಬ ಹೆಗ್ಗಳಿಕೆಯ ಯಶವಂತಪುರದಲ್ಲಿ!

ಆದ್ರೆ ಜಗ್ಗಣ್ಣನ ಸೋಲು ಸುದ್ದಿಯಾಗುತ್ತಿರೋದು ಆ ವಿಚಾರಕ್ಕಲ್ಲ. ಈ ಮೊದಲು ಕಾಂಗ್ರೆಸ್‍ನಲ್ಲಿದ್ದ ಜಗ್ಗಣ್ಣ ಆಪರೇಷನ್ ಕಮಲದಲ್ಲಿ ಬಿಜೆಪಿಗೆ ಬಿಕರಿಗೊಂಡು ಕೇಸರಿ ಪಾಳೆಯ ಸೇರಿದ ತರುವಾಯ ಪಕ್ಕಾ ಹಿಂದೂತ್ವವಾದಿಯಂತೆ ಸೋಗುಹಾಕಲು ಶುರು ಮಾಡಿರೋದು ಹೊಸ ವಿಚಾರವೇನಲ್ಲ. ಅದೇ ಧಾಟಿಯಲ್ಲಿ ಮೊನ್ನೆ ಎಲೆಕ್ಷನ್‍ಗೆ ಸ್ಪರ್ಧಿಸಿದ್ದಾಗ `ಈ ಜಗ್ಗೇಶ್ ಗೆದ್ದರೆ ಮೋದಿ ಗೆದ್ದಂತೆ, ಮೋದಿ ಪರಿಕಲ್ಪನೆ ಗೆದ್ದಂತೆ, ಈ ಜಗ್ಗೇಶ್ ಗೆದ್ದರೆ ಹಿಂದೂ ಗೆದ್ದಂತೆ, ಪಾಂಡವರು ಗೆದ್ದಂತೆ…..’ ಎಂಬ ಡೈಲಾಗ್ ಟ್ವೀಟ್ ಮಾಡಿದ್ದರು. ಬಹಿರಂಗ ಪ್ರಚಾರ ಸಭೆಯಲ್ಲಿ ಮೋದಿ ಸೀಟಿನ ಹಿಂದೆ ಕೂರಲು ಜಾಗ ಸಿಕ್ಕಿದ್ದನ್ನೇ ಮ್ಯಾಗ್ಸೆಸ್ಸೆ ಅವಾರ್ಡ್ ಸಿಕ್ಕ ರೇಂಜಿಗೆ ಖುಷಿಯಿಂದ ಗೀಚಿಕೊಂಡಿದ್ದ ಜಗ್ಗಣ್ಣ ಹಿಂದೂತ್ವದ ಟ್ರಂಪ್ ಕಾರ್ಡ್ ಬಳಸಲು ಹೋಗಿ ಮುಗ್ಗರಿಸಿದ್ದಾರೆ. ಜೊತೆಗೆ ಸ್ವತಃ ಟ್ವಿಟ್ಟರ್‍ನಲ್ಲಿ ಗೀಚಿಕೊಂಡಂತೆ ತಾನು ಸೋಲೋದಲ್ಲದೆ ತನ್ನ ಜತೆ ಮೋದಿಯನ್ನೂ ಸೋಲಿಸಿ ಮುಗುಮ್ಮಾಗಿ ಕೂತಿದ್ದಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...