Homeಸಿನಿಮಾಸಿನಿ ಸುದ್ದಿಮೋದಿಯನ್ನೂ ಸೋಲಿಸಿದ ಜಡೆಮಾಯಸಂದ್ರ ಜಗ್ಗಣ್ಣ!

ಮೋದಿಯನ್ನೂ ಸೋಲಿಸಿದ ಜಡೆಮಾಯಸಂದ್ರ ಜಗ್ಗಣ್ಣ!

- Advertisement -
- Advertisement -

ಗಿರೀಶ್ ತಾಳಿಕಟ್ಟೆ |

ನಟ ಜಗ್ಗಣ್ಣ ಯಶವಂತಪುರ ಕಾಳಗದಲ್ಲಿ ಸೋತಿರೋದು ಅಚ್ಚರಿಯೂ ಅಲ್ಲ, ಆಘಾತವೂ ಅಲ್ಲ. ಅಲ್ಲಿ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂಬುದು ನಿಕ್ಕಿಯಾದ ಮೇಲೆಯೇ ಬಿಜೆಪಿ ಕಾಮಿಡಿ ಕಿಲಾಡಿಯನ್ನು ಅಭ್ಯರ್ಥಿಯಾಗಿ ಅಖಾಡಕ್ಕಿಳಿಸಿದ್ದರ ಹಿಂದೆ ಇದ್ದದ್ದು ಒಂದೇ ಅಜೆಂಡಾ. ಕಾಂಗ್ರೆಸ್‍ನ ಎಸ್.ಟಿ.ಸೋಮಶೇಖರ್‍ಗೆ ಹೋಗಬಹುದಾಗಿದ್ದ ಒಕ್ಕಲಿಗ ಮತಗಳನ್ನು ಛಿದ್ರಗೊಳಿಸಿ, ಅದೇ ಸಮುದಾಯದ ಜೆಡಿಎಸ್‍ನ ಜವರಾಯಿ ಗೌಡರಿಗೆ ನೆರವಾಗುವುದಷ್ಟೇ ಆ ಸ್ಪರ್ಧೆಯ ಉದ್ದೇಶವಾಗಿತ್ತು. ಹಿಂದೊಮ್ಮೆ ಬಿಜೆಪಿಯ ಲೇಡಿ ಲೀಡರ್ ಶೋಭಕ್ಕ ಯಾನೆ ಶೋಭ ಕರಂದ್ಲಾಜೆ ಯಶವಂತಪುರದಿಂದ ಗೆದ್ದು ಈ ಕ್ಷೇತ್ರವನ್ನು ಅನಾಥವಾಗಿಸಿ ಹೋದ ತರುವಾಯ ಇಲ್ಲಿ ಬಿಜೆಪಿಗೆ ನೆಲೆಯೆಂಬುದೇ ಇಲ್ಲದಂತಾಗಿದೆ. ಇಲ್ಲದೇ ಹೋಗಿದ್ದರೆ ಉಳಿದಿಬ್ಬರು ತಲಾ ಒಂದು ಲಕ್ಷಕ್ಕೂ ಹೆಚ್ಚು ಮತಗಳನ್ನು ಕಬಳಿಸುವ ಕ್ಷೇತ್ರದಲ್ಲಿ ಬಿಜೆಪಿಯ ಜಗ್ಗಣ್ಣನಿಗೆ ಕೇವಲ ಐವತ್ತೊಂಬತ್ತು ಸಾವಿರ ಮತಗಳಷ್ಟೇ ಗಟ್ಟಿಯಾಗುತ್ತಿರಲಿಲ್ಲ. ಅದೂ ರಾಜ್ಯದ ಅತಿದೊಡ್ಡ ವಿಧಾನಸಭಾ ಕ್ಷೇತ್ರ ಎಂಬ ಹೆಗ್ಗಳಿಕೆಯ ಯಶವಂತಪುರದಲ್ಲಿ!

ಆದ್ರೆ ಜಗ್ಗಣ್ಣನ ಸೋಲು ಸುದ್ದಿಯಾಗುತ್ತಿರೋದು ಆ ವಿಚಾರಕ್ಕಲ್ಲ. ಈ ಮೊದಲು ಕಾಂಗ್ರೆಸ್‍ನಲ್ಲಿದ್ದ ಜಗ್ಗಣ್ಣ ಆಪರೇಷನ್ ಕಮಲದಲ್ಲಿ ಬಿಜೆಪಿಗೆ ಬಿಕರಿಗೊಂಡು ಕೇಸರಿ ಪಾಳೆಯ ಸೇರಿದ ತರುವಾಯ ಪಕ್ಕಾ ಹಿಂದೂತ್ವವಾದಿಯಂತೆ ಸೋಗುಹಾಕಲು ಶುರು ಮಾಡಿರೋದು ಹೊಸ ವಿಚಾರವೇನಲ್ಲ. ಅದೇ ಧಾಟಿಯಲ್ಲಿ ಮೊನ್ನೆ ಎಲೆಕ್ಷನ್‍ಗೆ ಸ್ಪರ್ಧಿಸಿದ್ದಾಗ `ಈ ಜಗ್ಗೇಶ್ ಗೆದ್ದರೆ ಮೋದಿ ಗೆದ್ದಂತೆ, ಮೋದಿ ಪರಿಕಲ್ಪನೆ ಗೆದ್ದಂತೆ, ಈ ಜಗ್ಗೇಶ್ ಗೆದ್ದರೆ ಹಿಂದೂ ಗೆದ್ದಂತೆ, ಪಾಂಡವರು ಗೆದ್ದಂತೆ…..’ ಎಂಬ ಡೈಲಾಗ್ ಟ್ವೀಟ್ ಮಾಡಿದ್ದರು. ಬಹಿರಂಗ ಪ್ರಚಾರ ಸಭೆಯಲ್ಲಿ ಮೋದಿ ಸೀಟಿನ ಹಿಂದೆ ಕೂರಲು ಜಾಗ ಸಿಕ್ಕಿದ್ದನ್ನೇ ಮ್ಯಾಗ್ಸೆಸ್ಸೆ ಅವಾರ್ಡ್ ಸಿಕ್ಕ ರೇಂಜಿಗೆ ಖುಷಿಯಿಂದ ಗೀಚಿಕೊಂಡಿದ್ದ ಜಗ್ಗಣ್ಣ ಹಿಂದೂತ್ವದ ಟ್ರಂಪ್ ಕಾರ್ಡ್ ಬಳಸಲು ಹೋಗಿ ಮುಗ್ಗರಿಸಿದ್ದಾರೆ. ಜೊತೆಗೆ ಸ್ವತಃ ಟ್ವಿಟ್ಟರ್‍ನಲ್ಲಿ ಗೀಚಿಕೊಂಡಂತೆ ತಾನು ಸೋಲೋದಲ್ಲದೆ ತನ್ನ ಜತೆ ಮೋದಿಯನ್ನೂ ಸೋಲಿಸಿ ಮುಗುಮ್ಮಾಗಿ ಕೂತಿದ್ದಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...

SIR: 43ಲಕ್ಷದಲ್ಲಿ ನೋಟಿಸ್ ತಲುಪಿರುವುದು 25ಲಕ್ಷ ಜನರಿಗೆ ಮಾತ್ರ, ಬಾಕಿ 18ಲಕ್ಷ ಜನರಿಗೆ ಇನ್ನು ನೋಟಿಸ್ಸೇ ತಲುಪಿಲ್ಲ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಆಡಳಿತಾತ್ಮಕ ಗೊಂದಲ ಹಾಗೂ ಯಾಂತ್ರಿಕ ಲೋಪಗಳ ಜಾಲದಲ್ಲಿ ಸಿಲುಕಿಬಿದ್ದಿದೆ. ಮುಖ್ಯ ಚುನಾವಣಾಧಿಕಾರಿಗಳ ಕಚೇರಿ ಬಿಡುಗಡೆ ಮಾಡಿರುವ ಇತ್ತೀಚಿನ ದತ್ತಾಂಶವೇ ಆಯೋಗದ...

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...