Homeಸಿನಿಮಾಸಿನಿ ಸುದ್ದಿಮೋದಿಯನ್ನೂ ಸೋಲಿಸಿದ ಜಡೆಮಾಯಸಂದ್ರ ಜಗ್ಗಣ್ಣ!

ಮೋದಿಯನ್ನೂ ಸೋಲಿಸಿದ ಜಡೆಮಾಯಸಂದ್ರ ಜಗ್ಗಣ್ಣ!

- Advertisement -
- Advertisement -

ಗಿರೀಶ್ ತಾಳಿಕಟ್ಟೆ |

ನಟ ಜಗ್ಗಣ್ಣ ಯಶವಂತಪುರ ಕಾಳಗದಲ್ಲಿ ಸೋತಿರೋದು ಅಚ್ಚರಿಯೂ ಅಲ್ಲ, ಆಘಾತವೂ ಅಲ್ಲ. ಅಲ್ಲಿ ಬಿಜೆಪಿಗೆ ಸೋಲು ಕಟ್ಟಿಟ್ಟ ಬುತ್ತಿ ಎಂಬುದು ನಿಕ್ಕಿಯಾದ ಮೇಲೆಯೇ ಬಿಜೆಪಿ ಕಾಮಿಡಿ ಕಿಲಾಡಿಯನ್ನು ಅಭ್ಯರ್ಥಿಯಾಗಿ ಅಖಾಡಕ್ಕಿಳಿಸಿದ್ದರ ಹಿಂದೆ ಇದ್ದದ್ದು ಒಂದೇ ಅಜೆಂಡಾ. ಕಾಂಗ್ರೆಸ್‍ನ ಎಸ್.ಟಿ.ಸೋಮಶೇಖರ್‍ಗೆ ಹೋಗಬಹುದಾಗಿದ್ದ ಒಕ್ಕಲಿಗ ಮತಗಳನ್ನು ಛಿದ್ರಗೊಳಿಸಿ, ಅದೇ ಸಮುದಾಯದ ಜೆಡಿಎಸ್‍ನ ಜವರಾಯಿ ಗೌಡರಿಗೆ ನೆರವಾಗುವುದಷ್ಟೇ ಆ ಸ್ಪರ್ಧೆಯ ಉದ್ದೇಶವಾಗಿತ್ತು. ಹಿಂದೊಮ್ಮೆ ಬಿಜೆಪಿಯ ಲೇಡಿ ಲೀಡರ್ ಶೋಭಕ್ಕ ಯಾನೆ ಶೋಭ ಕರಂದ್ಲಾಜೆ ಯಶವಂತಪುರದಿಂದ ಗೆದ್ದು ಈ ಕ್ಷೇತ್ರವನ್ನು ಅನಾಥವಾಗಿಸಿ ಹೋದ ತರುವಾಯ ಇಲ್ಲಿ ಬಿಜೆಪಿಗೆ ನೆಲೆಯೆಂಬುದೇ ಇಲ್ಲದಂತಾಗಿದೆ. ಇಲ್ಲದೇ ಹೋಗಿದ್ದರೆ ಉಳಿದಿಬ್ಬರು ತಲಾ ಒಂದು ಲಕ್ಷಕ್ಕೂ ಹೆಚ್ಚು ಮತಗಳನ್ನು ಕಬಳಿಸುವ ಕ್ಷೇತ್ರದಲ್ಲಿ ಬಿಜೆಪಿಯ ಜಗ್ಗಣ್ಣನಿಗೆ ಕೇವಲ ಐವತ್ತೊಂಬತ್ತು ಸಾವಿರ ಮತಗಳಷ್ಟೇ ಗಟ್ಟಿಯಾಗುತ್ತಿರಲಿಲ್ಲ. ಅದೂ ರಾಜ್ಯದ ಅತಿದೊಡ್ಡ ವಿಧಾನಸಭಾ ಕ್ಷೇತ್ರ ಎಂಬ ಹೆಗ್ಗಳಿಕೆಯ ಯಶವಂತಪುರದಲ್ಲಿ!

ಆದ್ರೆ ಜಗ್ಗಣ್ಣನ ಸೋಲು ಸುದ್ದಿಯಾಗುತ್ತಿರೋದು ಆ ವಿಚಾರಕ್ಕಲ್ಲ. ಈ ಮೊದಲು ಕಾಂಗ್ರೆಸ್‍ನಲ್ಲಿದ್ದ ಜಗ್ಗಣ್ಣ ಆಪರೇಷನ್ ಕಮಲದಲ್ಲಿ ಬಿಜೆಪಿಗೆ ಬಿಕರಿಗೊಂಡು ಕೇಸರಿ ಪಾಳೆಯ ಸೇರಿದ ತರುವಾಯ ಪಕ್ಕಾ ಹಿಂದೂತ್ವವಾದಿಯಂತೆ ಸೋಗುಹಾಕಲು ಶುರು ಮಾಡಿರೋದು ಹೊಸ ವಿಚಾರವೇನಲ್ಲ. ಅದೇ ಧಾಟಿಯಲ್ಲಿ ಮೊನ್ನೆ ಎಲೆಕ್ಷನ್‍ಗೆ ಸ್ಪರ್ಧಿಸಿದ್ದಾಗ `ಈ ಜಗ್ಗೇಶ್ ಗೆದ್ದರೆ ಮೋದಿ ಗೆದ್ದಂತೆ, ಮೋದಿ ಪರಿಕಲ್ಪನೆ ಗೆದ್ದಂತೆ, ಈ ಜಗ್ಗೇಶ್ ಗೆದ್ದರೆ ಹಿಂದೂ ಗೆದ್ದಂತೆ, ಪಾಂಡವರು ಗೆದ್ದಂತೆ…..’ ಎಂಬ ಡೈಲಾಗ್ ಟ್ವೀಟ್ ಮಾಡಿದ್ದರು. ಬಹಿರಂಗ ಪ್ರಚಾರ ಸಭೆಯಲ್ಲಿ ಮೋದಿ ಸೀಟಿನ ಹಿಂದೆ ಕೂರಲು ಜಾಗ ಸಿಕ್ಕಿದ್ದನ್ನೇ ಮ್ಯಾಗ್ಸೆಸ್ಸೆ ಅವಾರ್ಡ್ ಸಿಕ್ಕ ರೇಂಜಿಗೆ ಖುಷಿಯಿಂದ ಗೀಚಿಕೊಂಡಿದ್ದ ಜಗ್ಗಣ್ಣ ಹಿಂದೂತ್ವದ ಟ್ರಂಪ್ ಕಾರ್ಡ್ ಬಳಸಲು ಹೋಗಿ ಮುಗ್ಗರಿಸಿದ್ದಾರೆ. ಜೊತೆಗೆ ಸ್ವತಃ ಟ್ವಿಟ್ಟರ್‍ನಲ್ಲಿ ಗೀಚಿಕೊಂಡಂತೆ ತಾನು ಸೋಲೋದಲ್ಲದೆ ತನ್ನ ಜತೆ ಮೋದಿಯನ್ನೂ ಸೋಲಿಸಿ ಮುಗುಮ್ಮಾಗಿ ಕೂತಿದ್ದಾರೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...

ತಿರುವನಂತಪುರಂ | 20 ಬಿಜೆಪಿ ಕೌನ್ಸಿಲರ್‌ಗಳ ಪ್ರಮಾಣವಚನ ಅಸಿಂಧು : ಹೈಕೋರ್ಟ್ ಮಹತ್ವದ ಆದೇಶ

ತಿರುವನಂತಪುರಂ ಮಹಾನಗರ ಪಾಲಿಕೆಯ 20 ಬಿಜೆಪಿ ಕೌನ್ಸಿಲರ್‌ಗಳಿಗೆ ನಾಲ್ಕು ವಾರಗಳ ಒಳಗೆ ಮತ್ತೊಮ್ಮೆ ಪ್ರಮಾಣವಚನ ಸ್ವೀಕರಿಸುವಂತೆ ಕೇರಳ ಹೈಕೋರ್ಟ್ ಬುಧವಾರ (ಜೂ.24) ಆದೇಶಿಸಿದೆ. ಜನವರಿ ತಿಂಗಳಲ್ಲಿ ಕೌನ್ಸಿಲರ್‌ಗಳ ಪ್ರಮಾಣವಚನ ನಡೆದಿತ್ತು. ಡೆಪ್ಯುಟಿ ಮೇಯರ್...

ಎಸ್‌ಐಆರ್‌ನಿಂದ ಹೊರಗಿಡಲಾದ ಜನರಿಗೆ ಪಡಿತರ ನಿರಾಕರಣೆ ಪ್ರಶ್ನಿಸಿದ ಅರ್ಜಿ ತಿರಸ್ಕರಿಸಿದ ಸುಪ್ರೀಂ; ಕಲ್ಕತ್ತಾ ಹೈಕೋರ್ಟ್‌ಗೆ ಹೋಗಲು ಸೂಚನೆ

ನವದೆಹಲಿ: ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಡಲಾದ ವ್ಯಕ್ತಿಗಳಿಗೆ ಸಾರ್ವಜನಿಕ ವಿತರಣಾ ವ್ಯವಸ್ಥೆಯ (ಪಿಡಿಎಸ್) ಪಡಿತರ ಸೌಲಭ್ಯ ಸೇರಿದಂತೆ ಇತರೆ ಕಲ್ಯಾಣ ಯೋಜನೆಗಳನ್ನು ನಿರಾಕರಿಸುತ್ತಿರುವ ಪಶ್ಚಿಮ ಬಂಗಾಳ...

ಪಶ್ಚಿಮ ಬಂಗಾಳ: ಸರ್ಕಾರಿ ಶಾಲಾ ಬಿಸಿಯೂಟದ ಜವಾಬ್ದಾರಿ ಇಸ್ಕಾನ್‌ಗೆ, ಊಟದಿಂದ ‘ಮೊಟ್ಟೆ’ ಔಟ್

ಪಶ್ಚಿಮ ಬಂಗಾಳದ ಸರ್ಕಾರಿ ಶಾಲೆಗಳ ಬಿಸಿಯೂಟದ ಮೆನುವಿನಲ್ಲಿ ಇನ್ಮೇಲೆ ಮೊಟ್ಟೆಗಳು ಇರುವುದಿಲ್ಲ. ಅವುಗಳ ಬದಲಿಗೆ ಮಕ್ಕಳಿಗೆ ಪನೀರ್ ಮತ್ತು ರಾಜ್ಮಾವನ್ನು ನೀಡಲಾಗುತ್ತದೆ. ಕೋಲ್ಕತ್ತಾ ಮಹಾನಗರ ಪಾಲಿಕೆ ವ್ಯಾಪ್ತಿಯ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ...

ಕಿರಣ್ ರಿಜಿಜು ‘ಸೇಫ್‌’ವಾದ ಅಲ್ಲಗಳೆದ ಸರಣಿ ಮುಸ್ಲಿಂ ವಿರೋಧಿ ಹಿಂಸಾಚಾರಾಗಳು

ಜೂನ್ 15, 2026ರಂದು ಪ್ರಕಟಗೊಂಡ ಇಂಡಿಯನ್ ಎಕ್ಸ್‌ಪ್ರೆಸ್‌ನ 'ಐಡಿಯಾ ಎಕ್ಸ್‌ಚೇಂಜ್' ಕಾರ್ಯಕ್ರಮದ ಸಂದರ್ಶನವೊಂದರಲ್ಲಿ ಕೇಂದ್ರ ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಅವರು, “ಭಾರತದಲ್ಲಿ ಮುಸ್ಲಿಮರು ಸುರಕ್ಷಿತವಾಗಿಲ್ಲ ಎಂದು ಹೇಳುವ ಮೂಲಕ ನೀವು ದೇಶದ ಚಾರಿತ್ರ್ಯಕ್ಕೆ...

ರಾಮ ಮಂದಿರ ದೇಣಿಗೆ ದುರುಪಯೋಗ ವಿವಾದ; ಪ್ರಾಥಮಿಕ ವರದಿ ಸಲ್ಲಿಸಿದ ಎಸ್‌ಐಟಿ

ಅಯೋಧ್ಯೆಯ ರಾಮ ಮಂದಿರದಲ್ಲಿ ಸ್ವೀಕರಿಸಿದ ದೇಣಿಗೆಯ ದುರುಪಯೋಗದ ಆರೋಪದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ಜೂನ್ 23 ಮಂಗಳವಾರ ಉತ್ತರ ಪ್ರದೇಶ ಸರ್ಕಾರಕ್ಕೆ ತನ್ನ ಪ್ರಾಥಮಿಕ ತನಿಖಾ ವರದಿಯನ್ನು ಸಲ್ಲಿಸಿದೆ...

ಮುಖ್ಯಮಂತ್ರಿ ಸುವೇಂದು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ ಕಲ್ಕತ್ತಾ ಹೈಕೋರ್ಟ್

ಭವಾನಿಪುರ ವಿಧಾನಸಭಾ ಕ್ಷೇತ್ರದ ಇತ್ತೀಚಿನ ಚುನಾವಣೆಯಲ್ಲಿ ಸುವೇಂದು ಅಧಿಕಾರಿ ಅವರ ಆಯ್ಕೆಯನ್ನು ಪ್ರಶ್ನಿಸಿ ಮಾಜಿ ಮುಖ್ಯಮಂತ್ರಿ ಹಾಗೂ ಟಿಎಂಸಿ (TMC) ನಾಯಕಿ ಮಮತಾ ಬ್ಯಾನರ್ಜಿ ಸಲ್ಲಿಕೆ ಮಾಡಿರುವ ಚುನಾವಣಾ ಅರ್ಜಿಗೆ ಸಂಬಂಧಿಸಿದಂತೆ ಕಲ್ಕತ್ತಾ...

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...