Homeಅಂಕಣಗಳುಮೋದಿಯ ಅವಸಾನ ಕರ್ನಾಟಕದಿಂದ ಆರಂಭವಾಗಲಿದೆ

ಮೋದಿಯ ಅವಸಾನ ಕರ್ನಾಟಕದಿಂದ ಆರಂಭವಾಗಲಿದೆ

- Advertisement -
- Advertisement -

ಎಚ್.ಎಸ್.ದೊರೆಸ್ವಾಮಿ |

ರಾಜಕೀಯದಲ್ಲಿ chaotic meltdown ಆಗುತ್ತಿದೆ. ರಾಜಕೀಯ ಪಕ್ಷಗಳು ತಮ್ಮ ಅಸ್ತಿತ್ವದ ಉಳಿವಿಗಾಗಿ ಹೋರಾಡುತ್ತಿವೆ. ಈ ಹೋರಾಟ ಸ್ವಪ್ರತಿಷ್ಠೆಗೆ, ಅನಾಗರಿಕ ನಡವಳಿಕೆಗೆ ಎಡೆಮಾಡಿದೆ. ರಾಜಕೀಯ ವ್ಯಕ್ತಿಗಳು ಪ್ರಾಥಮಿಕ ಮಾನವೀಯ instinctಗಳನ್ನು ಗಾಳಿಗೆ ತೂರಿವೆ. ಅನಾಗರಿಕರಿಗಿಂತ ಕೀಳುಮಟ್ಟದಲ್ಲಿ ಚುನಾವಣಾ ಪ್ರಚಾರ ನಡೆಯುತ್ತಿದೆ. ಚುನಾವಣೆಗೆ ನಿಲ್ಲುವ ಅಭ್ಯರ್ಥಿ ಸಮಾಜಕ್ಕೆ ತನ್ನಿಂದ ಆಗಬೇಕಾಗಿರುವ ಸೇವೆಯ ಬಗೆಗೆ ಆಲೋಚನೆ ಮಾಡುತ್ತಿಲ್ಲ. ಸ್ವಲಾಭದ ಕಡೆಗೇ ಅವನ ಗಮನವೆಲ್ಲ ರಾಜಕೀಯ ನಾಯಕರು ರಾಜಕೀಯ ಮೌಲ್ಯಗಳನ್ನು ಕುರಿತು ಮಾತನಾಡುತ್ತಿಲ್ಲ. ವಕೀಲರು ಕಾನೂನನ್ನು ಎತ್ತಿ ಹಿಡಿಯುವವರಾಗಿ ಉಳಿದಿಲ್ಲ. ನ್ಯಾಯಾಧಿಪತಿಗಳು ಕೇಂದ್ರ ಸರ್ಕಾರದ ರಕ್ಷಣೆಗೆ ನಿಲ್ಲುತ್ತಿದ್ದಾರೆ. ಸರ್ಕಾರ ಸಿಬಿ, ಆದಾಯ ತೆರಿಗೆ ಇಲಾಖೆ ಮುಂತಾದವನ್ನು ತನ್ನ ಕೈಗೊಂಬೆ ಮಾಡಿಕೊಂಡು ತಮ್ಮ ರಾಜಕೀಯ ವಿರೋಧಿಗಳನ್ನು ಹಣ್ಣು ಮಾಡಲು ಬಳಸುತ್ತಿದೆ. ಶಾಸಕರು, ಪಾರ್ಲಿಮೆಂಟ್ ಸದಸ್ಯರು ಶಾಸನ ರೂಪಿಸುವ ಕೆಲಸ ಬಿಟ್ಟು ತಮ್ಮ ಕರ್ತವ್ಯಗಳನ್ನು ಮರೆತು, ಶಾಸನಸಭೆ ಮತ್ತು ಪಾರ್ಲಿಮೆಂಟ್ ಸಭೆಗಳು, ಕಾರ್ಯಕಲಾಪಗಳನ್ನು ನಡೆಸಲು ಬಿಡದೆ, ಜನದ್ರೋಹದ ಕೆಲಸದಲ್ಲಿ ತೊಡಗಿಕೊಳ್ಳುತ್ತಿದ್ದಾರೆ.

ಹಿಂದೆಂದೂ ಕೇಳರಿಯದ ಮಟ್ಟದಲ್ಲಿ ಭಾರತದ ಎಲ್ಲ ಕಡೆಗಳಲ್ಲಿ ಹಿಂಸಾಚಾರ, ಗೂಂಡಾಗಿರಿ, ಮಹಿಳೆಯರ ಹಾಗೂ ಮಕ್ಕಳ ಮೇಲಿನ ಅತ್ಯಾಚಾರ, ಕೊಲೆ ನಡೆಯುತ್ತಲೇ ಇವೆ. ದೇಶ ಇಂತಹ ಘೋರ ವಿಪತ್ತುಗಳನ್ನು ಎದುರಿಸುತ್ತಿರುವ ಈ ಸಂದರ್ಭದಲ್ಲಿ ಚುನಾವಣೆ ಬಂದಿದೆ.

ಚುನಾವಣೆ ಕರ್ನಾಟಕ ವಿಧಾನಸಭೆಗೆ ನಡೆಯುತ್ತಿರುವುದರಿಂದ, ಸೀಟು ಸಿಕ್ಕದವರು ಒಂದು ಪಕ್ಷದಿಂದ ಇನ್ನೊಂದು ಪಕ್ಷಕ್ಕೆ ಹಾರುತ್ತಿದ್ದಾರೆ. ಇವರಿಗೆ ನಾಚಿಕೆಯೂ ಇಲ್ಲ, ಮತದಾರರ ಭಯವೂ ಇಲ್ಲ. ಪಕ್ಷ ಇರುವುದು ಇವರ ದೃಷ್ಟಿಯಲ್ಲಿ ತಮ್ಮ ಸ್ವಾರ್ಥಸಾಧನೆಗೆ ಅವಕಾಶ ಮಾಡಿಕೊಡಲು ಮಾತ್ರ. ಮತದಾರನೂ ಕೂಡ ಇಂಗುತಿಂದ ಮಂಗನಂತೆ ಈ ಸಮಯಸಾಧಕ ಸ್ವಾರ್ಥಿಗಳ ಹುಚ್ಚಾಟವನ್ನು ಮೂಕಪ್ರೇಕ್ಷಕನಂತೆ ನೋಡುತ್ತಾ ಕೂತಿದ್ದಾನೆ.

ಸೀಟು ಆಕಾಂಕ್ಷಿಗಳ ಅನೀತಿಯುತ ಗೆಯ್ಮೆಯನ್ನು ತಡೆಗಟ್ಟಬೇಕಾದ ರಾಜಕೀಯ ಪಕ್ಷಗಳು, ಅವರಿಗೆ ಮಣೆ ಹಾಕಿ ಬರಮಾಡಿಕೊಳ್ಳುತ್ತಿವೆ. ಹೀಗೆ ಅನೀತಿಯನ್ನು ಪ್ರೋತ್ಸಾಹಿಸುವ ರಾಜಕೀಯ ಪಕ್ಷಗಳು ನಮಗೆ ಬೇಕೇ ಎಂದು ಮತದಾರ ವಿಚಾರ ಮಾಡಬೇಕು. ರಾಜಕೀಯ ಪಕ್ಷಗಳಿಗೆ ಸರಿಯಾದ ಪಾಠ ಕಲಿಸಬೇಕು. ಆದರೆ ನಮ್ಮ ಮತದಾರ ಗರಬಡಿದವನಂತೆ ಇದ್ದಾನೆ. ನಡೆಯುತ್ತಿರುವ ವಿದ್ಯಮಾನಗಳನ್ನು ವಿಶ್ಲೇಷಣೆ ಮಾಡಲಾರದಷ್ಟು ಜಡವಾಗಿ ಬಿಟ್ಟಿದ್ದಾನೆ.

ಯಶ್ವಂತ್‍ಸಿನ್ಹಾ, ಶತ್ರುಘ್ನಸಿನ್ಹಾ ಮೊದಲಾದ ನಿಷ್ಠಾವಂತ ಬಿಜೆಪಿ ನಾಯಕರು ಮೋದಿಯ ಹುಚ್ಚಾಟಗಳಿಗೆ ರೋಸಿಹೋಗಿ, ಪಕ್ಷವನ್ನು ಬಿಟ್ಟುಹೋಗುವ ನಿರ್ಧಾರಕ್ಕೆ ಬಂದಿದ್ದಾರೆ. ಅಷ್ಟೇ ಅಲ್ಲ, ಪಕ್ಷವನ್ನು ಸರಿದಾರಿಗೆ ತರಲು ಶಾಂತಿಯುತ ಹೋರಾಟ ನಡೆಸಲೂ ನಿರ್ಧರಿಸಿದ್ದಾರೆ.

ಯಡಿಯೂರಪ್ಪನವರಿಗೆ ಚುನಾವಣೆ ವಿಷಯದಲ್ಲಿ ಸಂಪೂರ್ಣ ಜವಾಬ್ದಾರಿ ವಹಿಸಲು ತೀರ್ಮಾನಿಸಿದ್ದ ಹೈಕಮಾಂಡ್, ಸೀಟು ಹಂಚಿಕೆಯಲ್ಲಿ ಪ್ರಮಾದವೆಸಗಿದ್ದ ಯಡಿಯೂರಪ್ಪನವರ ಅಧಿಕಾರವನ್ನೂ ಮೊಟಕು ಮಾಡಿ, ಯಡಿಯೂರಪ್ಪನವರ ಮಗನಿಗೆ, ಕರಂದ್ಲಾಜೆಯವರಿಗೆ ಸೀಟು ಕೊಡಲು ನಿರಾಕರಿಸಿದೆ. ಮೊದಲು ಎಲ್ಲಾ ಸೀಟುಗಳನ್ನು ಹಂಚಲು ಯಡಿಯೂರಪ್ಪನವರಿಗೆ ಸಂಪೂರ್ಣ ಅಧಿಕಾರ ಕೊಟ್ಟಿದ್ದ ಹೈಕಮಾಂಡ್ ಅದನ್ನು 40ಕ್ಕೆ ಇಳಿಸಿ, ಈಗ 16 ಸೀಟುಗಳನ್ನು ಮಾತ್ರ ತಮಗೆ ಬೇಕಾದವರಿಗೆ ನೀಡಲು ಅವಕಾಶ ಕೊಟ್ಟು ಉಳಿದದ್ದನ್ನು ತಾನೇ ಭರ್ತಿ ಮಾಡಿದೆ.

ಬಳ್ಳಾರಿ ಜನಾರ್ದನ ರೆಡ್ಡಿಯನ್ನು ಯಡಿಯೂರಪ್ಪನವರು ಬಿಜೆಪಿ ಚುನಾವಣಾ ಪ್ರಚಾರಕ್ಕೆ ಕರೆದಿದ್ದಕ್ಕಾಗಿ ಮೋದಿ ಮತ್ತು ಶಾ ಮುನಿಸಿಕೊಂಡಿದ್ದಾರೆ. ಮೋದಿ ಬಿಜೆಪಿ ಪರವಾಗಿ ಪ್ರಚಾರಕ್ಕೆ ಹೋಗುವ ಕಾರ್ಯಕ್ರಮವನ್ನು ರದ್ದುಗೊಳಿಸಿದ್ದಾರೆ.

ಈ chaotic situation ನಲ್ಲಿ, ಮತದಾರ ತಾನೇನು ಮಾಡಬೇಕು ಎಂದು ತಿಳಿಯದೆ ದಿಗ್ಭ್ರಾಂತನಾಗಿದ್ದಾನೆ. ಮತದಾರನಿಗೆ ದಿಕ್ಸೂಚಿ ಮಾಡುವ ಕೆಲಸವನ್ನು ಯಾರೂ ಮಾಡುತ್ತಿಲ್ಲ.

ಈ ಕೆಲಸವನ್ನು ಈಗ ಕೋಮು ಸೌಹಾರ್ದ ವೇದಿಕೆಯಂತಹ ಸಂಸ್ಥೆ ಇತರ ಎಲ್ಲ ಪ್ರಗತಿಪರ ಕೋಮು ವಿರೋಧಿ ಶಕ್ತಿಗಳನ್ನೂ ಕೂಡಿಕೊಂಡು, ಸಂವಿಧಾನ ವಿರೋಧಿಗಳನ್ನು ಕೊಟ್ಟ ಮಾತಿನಂತೆ ನಡೆದುಕೊಳ್ಳದ ಮೋದಿಯನ್ನೂ ಪರಾಭವಗೊಳಿಸಲು ನಿರ್ಧರಿಸಿದ್ದಾರೆ.

ಭಾರತೀಯ ಜನತಾ ಪಕ್ಷಕ್ಕೆ ಈಗ ಮೋದಿ ಒಬ್ಬನೇ ನಾಯಕ. ಆ ನಾಯಕನ ಪರಿಸ್ಥಿತಿ ಏನಾಗಿದೆ ನೋಡಿ 2014ರ ಲೋಕಸಭೆ ಚುನಾವಣೆಗೆ ಮೋದಿ ಹಠಾತ್ತನೆ ಇಳಿದರು. ಅಂದಿನ ದಿನಗಳಲ್ಲಿ ಕಾಂಗ್ರೆಸ್ ಅನೇಕ ಹಗರಣಗಳಲ್ಲಿ ಸಿಕ್ಕಿ ಹಾಕಿಕೊಂಡಿತ್ತು. ಮತದಾರರಿಗೂ ಇದು ಬೇಸರ ತಂದಿತ್ತು. ಮೋದಿ ಕಾಂಗ್ರೆಸ್ಸಿನ ಹಗರಣಗಳನ್ನೆಲ್ಲ ಬಿಚ್ಚಿ ಮತ್ತು ಅದನ್ನು ಪ್ರಬಲ ಅಸ್ತ್ರವಾಗಿ ಚುನಾವಣೆಗೆ ಬಳಸಿಕೊಂಡರು. ರೋಸಿದ್ದ ಜನ ಕಾಂಗ್ರೆಸ್ಸಿನ ವಿರುದ್ಧವಾಗಿ ಮೋದಿಗೆ ಮತಹಾಕಿ ಗೆಲ್ಲಿಸಿದರು.

ಮೋದಿ ಆಡಳಿತವನ್ನು 4 ವರ್ಷಗಳಿಂದ ನೋಡುತ್ತಿರುವ ಮತದಾರನಿಗೆ ಭ್ರಮನಿರಸನ ಆಗಿದೆ. ಮೋದಿ ಹೆಜ್ಜೆಹೆಜ್ಜೆಗೂ ಮಾತು ತಪ್ಪಿದ್ದಾರೆ. ಕಾಳಹಣವನ್ನು 100 ದಿನಗಳ ಒಳಗೆ ಸ್ವಿಸ್‍ಬ್ಯಾಂಕಿನಿಂದ ತಂದು ಪ್ರತಿ ಬಡವನ ಹೆಸರಿನಲ್ಲೂ ಒಂದು ಉಳಿತಾಯ ಖಾತೆ ತೆರೆದು ಬ್ಯಾಂಕಿನಲ್ಲಿ ಅವರ ಹೆಸರಿಗೆ 15 ಲಕ್ಷ ರೂಪಾಯಿ ಹಾಕುವುದಾಗಿ ಹೇಳಿ ಬಡವರ ಮತ ಕಿತ್ತುಕೊಂಡರು. ಭಾರತದಲ್ಲಿ ಒಂದು ವರ್ಷದಲ್ಲಿ 5 ಲಕ್ಷ ಹುದ್ದೆಗಳನ್ನು ಸೃಷ್ಟಿ ಮಾಡಿ ಯುವಕರಿಗೆ ನೀಡುವುದಾಗಿ ಬೊಗಳೆಬಿಟ್ಟರು. ಅದೂ ಕೈಗೂಡಲಿಲ್ಲ. 1000 ಹಾಗೂ ಐದು ನೂರು ರೂಪಾಯಿ ನೋಟುಗಳನ್ನು ಅಪಮೌಲ್ಯ ಮಾಡಿ ಕಾಳಧನವನ್ನು ಹೊರತೆಗೆಯುವುದಾಗಿ ಹೇಳಿದರು. ಈ ಅಪಮೌಲ್ಯ ಮಾಡಿ ಹೊಸ 2000 ಹಾಗೂ 500 ರೂ.ಗಳ ನೋಟುಗಳನ್ನು ಪ್ರಿಂಟ್ ಮಾಡಿದ್ದು. ಕಾಳಹಣ ಸಂಗ್ರಹಿಸಿದ್ದ ಖದೀಮರು, ಕಪ್ಪುಹಣವನ್ನೆಲ್ಲ ಬಿಳಿಯ ಹಣ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟಂತಾಯಿತು. ರಾಷ್ಟ್ರೀಕೃತ ಬ್ಯಾಂಕುಗಳು ಈ ಕಾಳಹಣದ ಖದೀಮರಿಗೆ ತಮ್ಮ ಬಳಿ ಇದ್ದ ಕಪು ್ಪಹಣವನ್ನು ಬಿಳಿ ಹಣ ಮಾಡಿಕೊಳ್ಳುವುದಕ್ಕೆ ನೆರವಾದವು.

ಹೀಗಾಗಿ ಮೋದಿಯವರ ವರ್ಚಸ್ಸು ಕ್ಷೀಣವಾಯಿತು. ಅವರು ಬರೀ ಬಾಯ್ಬಡಕ ಎಂಬುದು ಜನತೆಗೆ ಈ ನಾಲ್ಕು ವರ್ಷದಲ್ಲಿ ಅರಿವಾಯಿತು.
ಮೋದಿ ಮೇಲಿನ ಪ್ರತೀಕಾರ ಕರ್ನಾಟಕದಿಂದ ಆರಂಭವಾಗಲಿದೆ. ಮೋದಿಗೆ ಇದು ಫೈನಲ್ಸ್. 2019ರಲ್ಲಿ ನಡೆಯುವ ಲೋಕಸಭೆ ಚುನಾವಣೆ ಅವರ ಭಾಗಕ್ಕೆ ಫೈನಲ್ಸ್. ಮೋದಿಯವರ ವಿರೋಧವಾಗಿ ರಾಜಕೀಯ ಪಕ್ಷಗಳ ಧ್ರುವೀಕರಣ ಈಗಾಗಲೇ ಆರಂಭವಾಗಿದೆ.

ಈ ಫೈನಲ್ಸ್‍ಗೆ ಮುಂಚೆಯೇ ಕರ್ನಾಟಕದಲ್ಲಿ ನಡೆಯುವ ವಿಧಾನಸಭೆಯ ಚುನಾವಣೆಯಲ್ಲಿ ಮೋದಿಗೆ ಶಾಕ್ ಕೊಡಲು ಕರ್ನಾಟಕ ಜನ ಸಂಕಲ್ಪ ಮಾಡಿದ್ದಾರೆ.

ಮೋದಿಯ ಅಲೆಯ ಅಬ್ಬರ ಇಳಿದು ಎಷ್ಟೋ ದಿನಗಳಾದವು. ಈಗ ಜನ ಅವರ ಬೊಗಳೆ ಮಾತುಗಳಿಗೆ ಬೇಸರಗೊಂಡಿದ್ದಾರೆ. ಬಿಜೆಪಿ ವಿರೋಧದ ಅಲೆ ಕರ್ನಾಟಕದ ಬಿಜೆಪಿಯನ್ನು ಅಪ್ಪಳಿಸಲು ಸನ್ನದ್ಧವಾಗಿದೆ.

ಮೋದಿ, ಅಮಿತ್ ಶಾ ಹೋದಲ್ಲೆಲ್ಲ ಕಪ್ಪುಬಾವುಟ ಪ್ರದರ್ಶನ ಆಗುತ್ತಿದೆ. ಜನಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಅವರ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಬಿಜೆಪಿಗೆ ವಿರುದ್ಧವಾಗಿ ಮತ ಹಾಕಲು ಬಡವರು, ಶ್ರಮಿಕರು, ಕಾರ್ಮಿಕರು, ದಲಿತರು, ನಿರುದ್ಯೋಗಿ ಯುವಕರು, ಸ್ತ್ರೀಯರು, ಮುಸ್ಲಿಮರು, ಕ್ರಿಶ್ಚಿಯನ್ನರು ಮತಾಂಧ ಬಿಜೆಪಿ ಹಿಂದುಗಳನ್ನುಳಿದು ಇತರ ಹಿಂದುಗಳು ಒಮ್ಮತದಿಂದ ಮೋದಿ ಹಠಾವ್ ಮಾಡಬೇಕೆಂದು ಸಂಕಲ್ಪ ಮಾಡಿದ್ದಾರೆ.

ಒಟ್ಟಿನಲ್ಲಿ ಹೇಳುವುದಾದರೆ ಕರ್ನಾಟಕದಲ್ಲಿ ಮೋದಿಯ ಮೋಡಿಗೆ ಒಳಗಾಗುವ ಜನರ ಸಂಖ್ಯೆ ಗಣನೀಯವಾಗಿ ಕಡಿಮೆಯಾಗಿದೆ. ಈ ಸಾರಿ ನಡೆಯುವ ಚುನಾವಣೆಯಲ್ಲಿ ಅದು ಪ್ರಕಟವಾಗಲಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...