Homeಕರ್ನಾಟಕಒಂದು ಬಟನ್ ಒತ್ತಿದ್ರೆ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುತ್ತೆ ಎಂದು ಬೂಸಿ ಬಿಟ್ಟ ಸುವರ್ಣ...

ಒಂದು ಬಟನ್ ಒತ್ತಿದ್ರೆ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುತ್ತೆ ಎಂದು ಬೂಸಿ ಬಿಟ್ಟ ಸುವರ್ಣ ಟಿವಿ!

- Advertisement -
| ನಾನುಗೌರಿ ಡೆಸ್ಕ್ |
ಕಳೆದ ನಾಲ್ಕೈದು ವರ್ಷಗಳಿಂದ ಮಾಧ್ಯಮಗಳು ಬಿಜೆಪಿ ವಕ್ತಾರರಂತೆ ಕಾರ್ಯನಿರ್ವಹಿಸುತ್ತಿರುವುದು ಸರ್ವೇಸಾಮಾನ್ಯವಾಗೊ ಜಗಜ್ಜಾಹೀರಾಗಿರುವ ಸಂಗತಿ. ಅದರಲ್ಲೂ ಕನ್ನಡ ಮಾಧ್ಯಮಗಳಂತೂ ತಮಗೆ ಸರಿಸಾಟಿ ಯಾರು ಇಲ್ಲವೆಂಬಂತೆ ಮೋದಿಯ ಗುಣಗಾನ ಮಾಡುವುದಕ್ಕೆ ಪೈಪೋಟಿಗೆ ಬಿದ್ದಿವೆ. ಬೆಳಗ್ಗೆಯ ಸಮಯದಲ್ಲಿ ಸುಪ್ರಭಾತ, ಭಕ್ತಿದೇಗುಲಗಳಂತ ಮೌಢ್ಯತುಂಬುವ ಕಾರ್ಯಕ್ರಮ ಕೊಡುತ್ತಿದ್ದ ಮಾಧ್ಯಮಗಳು ಈಗ ಮೋದಿಯ ಮೌಢ್ಯವನ್ನು ತುಂಬಲು ಶುರುವಿಟ್ಟಿವೆ. ಇದರಲ್ಲಿ ಸುವರ್ಣ ಟಿವಿಯಂತೂ ಮೋದಿಯ ಹೆಸರನೇ ಜಪಿಸುವುದರಲ್ಲಿ ತಲ್ಲೀನವಾಗಿವೆ.
ಅಂದಹಾಗೆ ಮೊನ್ನೆ ಸುವರ್ಣ ನ್ಯೂಸ್‍ನಲ್ಲಿ ರಾತ್ರಿಯ ಸುವರ್ಣ ಫೋಕಸ್ ಕಾರ್ಯಕ್ರಮದ ಬಗ್ಗೆ ಬೆಳಗ್ಗೆ ಇಂದಲೇ ಜಾಹೀರಾತು ನೀಡಲು ಆರಂಭಿಸಿದ್ದರು. ಅಂತದ್ದೇನಿದೆ ಎಂದು ನೋಡಿದ್ರೆ ಅದರ ಟೈಟಲ್ ‘ಬಾಹುಬಲಿ ಮೋದಿ’ ಎಂದಿತ್ತು.
ಅಬ್ಬಾ… ನಮ್ ಪ್ರಧಾನಿ ಮೋದಿ ಏನಾದ್ರು ಬಾಹುಬಲಿ 3 ಸಿನಿಮಾ ಏನಾದ್ರು ಮಾಡಿದ್ದಾರ ಅಥವಾ ಬಂಡೆ ಮೇಲೆ ಮಲಗಿ ಯೋಗ ಮಾಡ್ತಿದ್ದೋರು ಆ ಬಂಡೆನೇನಾದ್ರು ಎತ್ತಿ ಹೆಗಲ ಮೇಲೆ ಇಟ್ಕೊಬಿಟ್ರಾ ಅಂತ ರಾತ್ರಿವರೆಗೆ ಕಾದು ನೋಡಿದ್ವಿ. ಅಲ್ಲಿ ನೋಡಿದ್ರ ಆ ವಿಷ್ಯಕ್ಕೂ ಮೋದಿಗೂ ಸಂಬಂಧನೇ ಇರಲಿಲ್ಲ. ಆದ್ರು ಮೋದಿ ಕಾರ್ಯಕ್ರಮದ ಹೀರೋ ಆಗಿದ್ದು ಸೋಜಿಗ.
ಆ ಕಾರ್ಯಕ್ರಮದ ವಿಷಯ ಬಾಹ್ಯಾಕಾಶ ಸಮರದ ಬಗ್ಗೆ ಇತ್ತು. ಒಂದು ಬಟನ್ ಒತ್ತಿದ್ರೆ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುತ್ತೆ. ಸೂಪರ್ ಸುಪ್ರಿಂ ರಾಷ್ಟ್ರಗಳಿಗೆ ಮೋದಿ ಹಾಕ್ತಿದ್ದಾರೆ ಚಾಲೆಂಜ್ ಎಂದೆಲ್ಲಾ ಬಿಲ್ಡಪ್ ಕೊಡಲಾಗುತ್ತಿತ್ತು. ನೋಡುಗರಲ್ಲಿ ಅದೆಂತಾ ಬಟನ್ ಇರಬಹುದು ಅದು, ಮೋದಿ ಏನಾದ್ರು ಕಂಡುಹಿಡಿದ್ರಾ ಎಂಬ ಕುತೂಹಲ ಕೆರಳಿಸಿತ್ತು.
ಮೊದಲನೆಯದಾಗಿ ಇಂದು ಎಲ್ಲಾ ದೇಶಗಳು ಯುದ್ಧ ಸಾಮಗ್ರಿಗಳಿಗೆ ಹೆಚ್ಚು ಹಣವನ್ನು ವ್ಯಯಿಸುತ್ತಿರುವುದು ಗೊತ್ತೇ ಇದೆ. ಅದರಲ್ಲಿ ಭಾರತವೂ ಒಂದು. ಭಾರತವು ಪ್ರಾನ್ಸ್, ರಷ್ಯಾದಂತಹ ದೇಶಗಳಿಂದ ಯುದ್ಧ ವಿಮಾನಗಳು, ತಂತ್ರಜ್ಞಾನಗಳನ್ನು ಪಡೆದುಕೊಳ್ಳುತ್ತಿದೆ. ಅಂತದ್ದೇ ವಿಮಾನ ಖರೀದಿಯ ಡೀಲ್‍ನಲ್ಲಿ ಮೋದಿ ಸಾಹೇಬರ ಪಾತ್ರ ಎಂತದ್ದು ಅಂತ ಇಡೀ ಜಗತ್ತೇ ನೋಡಿದೆ.
ಇತ್ತೀಚೆಗೆ ಯುದ್ದ ತಂತ್ರಜ್ಞಾನಗಳಲ್ಲೂ ಸಾಕಷ್ಟು ಬದಲಾವಣೆಗಳಾಗಿದ್ದು ಸಾವಿರಾರು ಕಿಲೋ ಮೀಟರ್ ದೂರದ ಸ್ಥಳಗಳಿಗೆ ತಾವಿರುವ ಜಾಗದಿಂದಲೇ ಬಾಂಬ್ ಉಡಾಯಿಸುವ ತಂತ್ರಜ್ಞಾನ ಬಂದು ವರ್ಷಗಳೇ ಕಳೆದಿವೆ. ಅಂತಹ ತಂತ್ರಜ್ಞಾನವನ್ನು ಭಾರತ ಕೂಡ ಪಡೆದುಕೊಂಡಿದೆ. ಇದರಲ್ಲಿ ಅಂತಹ ತಂತ್ರಜ್ಞಾನವನ್ನು ಕಂಡುಹಿಡಿದವರಿಗೆ ಅದರ ಕ್ರೆಡಿಟ್ ಕೊಡುವುದು ಸಾಮಾನ್ಯ. ಆದರೆ ಒಂದು ಬಟನ್ ಒತ್ತಿದ್ರೆ ಸಾಕು ಅಂತ ಹೇಳುವಾಗ ಅಲ್ಲಿ ಮೋದಿಯ ಪಾತ್ರವೇನೂ ಇಲ್ಲ. ಅದರ ಕ್ರೆಡಿಟ್ ಅಂತಹ ತಂತ್ರ ಸಂಶೋಧಿಸಿದವರಿಗೆ ಸೇರಿದ್ದು.
ಇನ್ನು ಸುಪ್ರಿಂ ರಾಷ್ಟ್ರಗಳಿಗೆ ಚಾಲೆಂಜ್ ಹಾಕ್ತಿದ್ದಾರೆ ಮೋದಿ ಎಂದು ಬೇರೆ ಹೇಳಲಾಗಿತ್ತು. ಇಂದಿಗೂ ನೆರೆ ರಾಷ್ಟ್ರಗಳಿಂದ ಯುದ್ದ ಅಸ್ತ್ರಗಳನ್ನ ಕೊಂಡುಕೊಳ್ಳುತ್ತಿರುವಾಗ, ಇಡೀ ವಿಶ್ವಕ್ಕೆ ಯುದ್ದಾಸ್ತ್ರಗಳನ್ನ ಸಪ್ಲೇ ಮಾಡುತ್ತಿರುವ ರಾಷ್ಟ್ರಗಳಲ್ಲಿ ಅಂತಹ ಅಸ್ತ್ರಗಳು ಅದೆಷ್ಟಿರಬಹುದು ಎಂಬ ಅರಿವೂ ಈ ಸುವರ್ಣ ಚಾನೆಲ್‍ನವರಿಗೆ ಇದ್ದಂತಿಲ್ಲ.
ಯುದ್ದ ವಿಚಾರ ನೋಡುವುದಾದರೆ ಅದರಲ್ಲಿ ಸೈನ್ಯದ ಪಾತ್ರದ ಮಹತ್ವದ್ದು, ಯುದ್ದ ಮಾಡಿ ಎಂದು ಹೇಳುವಷ್ಟು ಸುಲಭವಾಗಿ ಯುದ್ದ ಮಾಡಲು ಸಾಧ್ಯವಿಲ್ಲ. ಆದರೆ ಅಂತಹ ಯುದ್ದವನ್ನು ಗೆಲ್ಲುವ ಸೈನಿಕರಿಗೆ ಆ ಕಾರ್ಯಕ್ರಮದಲ್ಲಿ ಯಾವ ಕ್ರೆಡಿಟ್ಟೂ ಇರಲಿಲ್ಲ.
ಇಷ್ಟೆಲ್ಲಾ ಇದ್ದರೂ ಕೂಡ ಸುವರ್ಣ ಚಾನೆಲ್ ಮೋದಿಯೇ ಯುದ್ಧಭೂಮಿಯಲ್ಲಿ ನಿಂತು ಯುದ್ಧ ಮಾಡಿ ಗೆದ್ದಿರುವಂತೆ, ಮೋದಿಯೇ ಹೊಸ ತಂತ್ರಜ್ಞಾನವನ್ನು ಕಂಡುಹಿಡಿದಂತೆ ಮೋದಿಯ ಬಗ್ಗೆ ಬಿಲ್ಡಪ್ ಕೊಡುತ್ತಿರುವುದು ಸೈನ್ಯಕ್ಕೆ ಮಾಡುವ ಅವಮಾನವೂ ಹೌದು. ವಿಶ್ಲೇಷಣೆ, ಮೌಲ್ಯಮಾಪನ, ಪ್ರತಿಕಾ ನೀತಿಗಳನ್ನೇ ಮರೆತಿರುವ ಇಂತಹ ನ್ಯೂಸ್ ಚಾನೆಲ್‍ಗಳು ಇನ್ನೆಂಥಾ ಸುದ್ದಿಯನ್ನು ಬಿತ್ತರಿಸಲು ಸಾಧ್ಯ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Super news from Nanu gouri it is an excellent news paper and it should cover all district of karnataka because other papers baise papers and TV channels…..

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...