Homeಕರ್ನಾಟಕಒಂದು ಬಟನ್ ಒತ್ತಿದ್ರೆ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುತ್ತೆ ಎಂದು ಬೂಸಿ ಬಿಟ್ಟ ಸುವರ್ಣ...

ಒಂದು ಬಟನ್ ಒತ್ತಿದ್ರೆ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುತ್ತೆ ಎಂದು ಬೂಸಿ ಬಿಟ್ಟ ಸುವರ್ಣ ಟಿವಿ!

- Advertisement -
| ನಾನುಗೌರಿ ಡೆಸ್ಕ್ |
ಕಳೆದ ನಾಲ್ಕೈದು ವರ್ಷಗಳಿಂದ ಮಾಧ್ಯಮಗಳು ಬಿಜೆಪಿ ವಕ್ತಾರರಂತೆ ಕಾರ್ಯನಿರ್ವಹಿಸುತ್ತಿರುವುದು ಸರ್ವೇಸಾಮಾನ್ಯವಾಗೊ ಜಗಜ್ಜಾಹೀರಾಗಿರುವ ಸಂಗತಿ. ಅದರಲ್ಲೂ ಕನ್ನಡ ಮಾಧ್ಯಮಗಳಂತೂ ತಮಗೆ ಸರಿಸಾಟಿ ಯಾರು ಇಲ್ಲವೆಂಬಂತೆ ಮೋದಿಯ ಗುಣಗಾನ ಮಾಡುವುದಕ್ಕೆ ಪೈಪೋಟಿಗೆ ಬಿದ್ದಿವೆ. ಬೆಳಗ್ಗೆಯ ಸಮಯದಲ್ಲಿ ಸುಪ್ರಭಾತ, ಭಕ್ತಿದೇಗುಲಗಳಂತ ಮೌಢ್ಯತುಂಬುವ ಕಾರ್ಯಕ್ರಮ ಕೊಡುತ್ತಿದ್ದ ಮಾಧ್ಯಮಗಳು ಈಗ ಮೋದಿಯ ಮೌಢ್ಯವನ್ನು ತುಂಬಲು ಶುರುವಿಟ್ಟಿವೆ. ಇದರಲ್ಲಿ ಸುವರ್ಣ ಟಿವಿಯಂತೂ ಮೋದಿಯ ಹೆಸರನೇ ಜಪಿಸುವುದರಲ್ಲಿ ತಲ್ಲೀನವಾಗಿವೆ.
ಅಂದಹಾಗೆ ಮೊನ್ನೆ ಸುವರ್ಣ ನ್ಯೂಸ್‍ನಲ್ಲಿ ರಾತ್ರಿಯ ಸುವರ್ಣ ಫೋಕಸ್ ಕಾರ್ಯಕ್ರಮದ ಬಗ್ಗೆ ಬೆಳಗ್ಗೆ ಇಂದಲೇ ಜಾಹೀರಾತು ನೀಡಲು ಆರಂಭಿಸಿದ್ದರು. ಅಂತದ್ದೇನಿದೆ ಎಂದು ನೋಡಿದ್ರೆ ಅದರ ಟೈಟಲ್ ‘ಬಾಹುಬಲಿ ಮೋದಿ’ ಎಂದಿತ್ತು.
ಅಬ್ಬಾ… ನಮ್ ಪ್ರಧಾನಿ ಮೋದಿ ಏನಾದ್ರು ಬಾಹುಬಲಿ 3 ಸಿನಿಮಾ ಏನಾದ್ರು ಮಾಡಿದ್ದಾರ ಅಥವಾ ಬಂಡೆ ಮೇಲೆ ಮಲಗಿ ಯೋಗ ಮಾಡ್ತಿದ್ದೋರು ಆ ಬಂಡೆನೇನಾದ್ರು ಎತ್ತಿ ಹೆಗಲ ಮೇಲೆ ಇಟ್ಕೊಬಿಟ್ರಾ ಅಂತ ರಾತ್ರಿವರೆಗೆ ಕಾದು ನೋಡಿದ್ವಿ. ಅಲ್ಲಿ ನೋಡಿದ್ರ ಆ ವಿಷ್ಯಕ್ಕೂ ಮೋದಿಗೂ ಸಂಬಂಧನೇ ಇರಲಿಲ್ಲ. ಆದ್ರು ಮೋದಿ ಕಾರ್ಯಕ್ರಮದ ಹೀರೋ ಆಗಿದ್ದು ಸೋಜಿಗ.
ಆ ಕಾರ್ಯಕ್ರಮದ ವಿಷಯ ಬಾಹ್ಯಾಕಾಶ ಸಮರದ ಬಗ್ಗೆ ಇತ್ತು. ಒಂದು ಬಟನ್ ಒತ್ತಿದ್ರೆ ಇಡೀ ದೇಶವೇ ಅಲ್ಲೋಲ ಕಲ್ಲೋಲ ಆಗುತ್ತೆ. ಸೂಪರ್ ಸುಪ್ರಿಂ ರಾಷ್ಟ್ರಗಳಿಗೆ ಮೋದಿ ಹಾಕ್ತಿದ್ದಾರೆ ಚಾಲೆಂಜ್ ಎಂದೆಲ್ಲಾ ಬಿಲ್ಡಪ್ ಕೊಡಲಾಗುತ್ತಿತ್ತು. ನೋಡುಗರಲ್ಲಿ ಅದೆಂತಾ ಬಟನ್ ಇರಬಹುದು ಅದು, ಮೋದಿ ಏನಾದ್ರು ಕಂಡುಹಿಡಿದ್ರಾ ಎಂಬ ಕುತೂಹಲ ಕೆರಳಿಸಿತ್ತು.
ಮೊದಲನೆಯದಾಗಿ ಇಂದು ಎಲ್ಲಾ ದೇಶಗಳು ಯುದ್ಧ ಸಾಮಗ್ರಿಗಳಿಗೆ ಹೆಚ್ಚು ಹಣವನ್ನು ವ್ಯಯಿಸುತ್ತಿರುವುದು ಗೊತ್ತೇ ಇದೆ. ಅದರಲ್ಲಿ ಭಾರತವೂ ಒಂದು. ಭಾರತವು ಪ್ರಾನ್ಸ್, ರಷ್ಯಾದಂತಹ ದೇಶಗಳಿಂದ ಯುದ್ಧ ವಿಮಾನಗಳು, ತಂತ್ರಜ್ಞಾನಗಳನ್ನು ಪಡೆದುಕೊಳ್ಳುತ್ತಿದೆ. ಅಂತದ್ದೇ ವಿಮಾನ ಖರೀದಿಯ ಡೀಲ್‍ನಲ್ಲಿ ಮೋದಿ ಸಾಹೇಬರ ಪಾತ್ರ ಎಂತದ್ದು ಅಂತ ಇಡೀ ಜಗತ್ತೇ ನೋಡಿದೆ.
ಇತ್ತೀಚೆಗೆ ಯುದ್ದ ತಂತ್ರಜ್ಞಾನಗಳಲ್ಲೂ ಸಾಕಷ್ಟು ಬದಲಾವಣೆಗಳಾಗಿದ್ದು ಸಾವಿರಾರು ಕಿಲೋ ಮೀಟರ್ ದೂರದ ಸ್ಥಳಗಳಿಗೆ ತಾವಿರುವ ಜಾಗದಿಂದಲೇ ಬಾಂಬ್ ಉಡಾಯಿಸುವ ತಂತ್ರಜ್ಞಾನ ಬಂದು ವರ್ಷಗಳೇ ಕಳೆದಿವೆ. ಅಂತಹ ತಂತ್ರಜ್ಞಾನವನ್ನು ಭಾರತ ಕೂಡ ಪಡೆದುಕೊಂಡಿದೆ. ಇದರಲ್ಲಿ ಅಂತಹ ತಂತ್ರಜ್ಞಾನವನ್ನು ಕಂಡುಹಿಡಿದವರಿಗೆ ಅದರ ಕ್ರೆಡಿಟ್ ಕೊಡುವುದು ಸಾಮಾನ್ಯ. ಆದರೆ ಒಂದು ಬಟನ್ ಒತ್ತಿದ್ರೆ ಸಾಕು ಅಂತ ಹೇಳುವಾಗ ಅಲ್ಲಿ ಮೋದಿಯ ಪಾತ್ರವೇನೂ ಇಲ್ಲ. ಅದರ ಕ್ರೆಡಿಟ್ ಅಂತಹ ತಂತ್ರ ಸಂಶೋಧಿಸಿದವರಿಗೆ ಸೇರಿದ್ದು.
ಇನ್ನು ಸುಪ್ರಿಂ ರಾಷ್ಟ್ರಗಳಿಗೆ ಚಾಲೆಂಜ್ ಹಾಕ್ತಿದ್ದಾರೆ ಮೋದಿ ಎಂದು ಬೇರೆ ಹೇಳಲಾಗಿತ್ತು. ಇಂದಿಗೂ ನೆರೆ ರಾಷ್ಟ್ರಗಳಿಂದ ಯುದ್ದ ಅಸ್ತ್ರಗಳನ್ನ ಕೊಂಡುಕೊಳ್ಳುತ್ತಿರುವಾಗ, ಇಡೀ ವಿಶ್ವಕ್ಕೆ ಯುದ್ದಾಸ್ತ್ರಗಳನ್ನ ಸಪ್ಲೇ ಮಾಡುತ್ತಿರುವ ರಾಷ್ಟ್ರಗಳಲ್ಲಿ ಅಂತಹ ಅಸ್ತ್ರಗಳು ಅದೆಷ್ಟಿರಬಹುದು ಎಂಬ ಅರಿವೂ ಈ ಸುವರ್ಣ ಚಾನೆಲ್‍ನವರಿಗೆ ಇದ್ದಂತಿಲ್ಲ.
ಯುದ್ದ ವಿಚಾರ ನೋಡುವುದಾದರೆ ಅದರಲ್ಲಿ ಸೈನ್ಯದ ಪಾತ್ರದ ಮಹತ್ವದ್ದು, ಯುದ್ದ ಮಾಡಿ ಎಂದು ಹೇಳುವಷ್ಟು ಸುಲಭವಾಗಿ ಯುದ್ದ ಮಾಡಲು ಸಾಧ್ಯವಿಲ್ಲ. ಆದರೆ ಅಂತಹ ಯುದ್ದವನ್ನು ಗೆಲ್ಲುವ ಸೈನಿಕರಿಗೆ ಆ ಕಾರ್ಯಕ್ರಮದಲ್ಲಿ ಯಾವ ಕ್ರೆಡಿಟ್ಟೂ ಇರಲಿಲ್ಲ.
ಇಷ್ಟೆಲ್ಲಾ ಇದ್ದರೂ ಕೂಡ ಸುವರ್ಣ ಚಾನೆಲ್ ಮೋದಿಯೇ ಯುದ್ಧಭೂಮಿಯಲ್ಲಿ ನಿಂತು ಯುದ್ಧ ಮಾಡಿ ಗೆದ್ದಿರುವಂತೆ, ಮೋದಿಯೇ ಹೊಸ ತಂತ್ರಜ್ಞಾನವನ್ನು ಕಂಡುಹಿಡಿದಂತೆ ಮೋದಿಯ ಬಗ್ಗೆ ಬಿಲ್ಡಪ್ ಕೊಡುತ್ತಿರುವುದು ಸೈನ್ಯಕ್ಕೆ ಮಾಡುವ ಅವಮಾನವೂ ಹೌದು. ವಿಶ್ಲೇಷಣೆ, ಮೌಲ್ಯಮಾಪನ, ಪ್ರತಿಕಾ ನೀತಿಗಳನ್ನೇ ಮರೆತಿರುವ ಇಂತಹ ನ್ಯೂಸ್ ಚಾನೆಲ್‍ಗಳು ಇನ್ನೆಂಥಾ ಸುದ್ದಿಯನ್ನು ಬಿತ್ತರಿಸಲು ಸಾಧ್ಯ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. Super news from Nanu gouri it is an excellent news paper and it should cover all district of karnataka because other papers baise papers and TV channels…..

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...