Homeಮುಖಪುಟಮೋದಿ ತನ್ನ ಆಸ್ತಿ ಕುರಿತು ಸುಳ್ಳು ಹೇಳಿದ್ದಾರೆ: ಸುಪ್ರೀಂಕೋರ್ಟ್‌ನಲ್ಲಿ ದಾಖಲಾದ ಪಿಐಎಲ್

ಮೋದಿ ತನ್ನ ಆಸ್ತಿ ಕುರಿತು ಸುಳ್ಳು ಹೇಳಿದ್ದಾರೆ: ಸುಪ್ರೀಂಕೋರ್ಟ್‌ನಲ್ಲಿ ದಾಖಲಾದ ಪಿಐಎಲ್

- Advertisement -
- Advertisement -

ಸಾಕೇತ್ ಗೋಖಲೆ ಎಂಬ ಮಾಜಿ ಪತ್ರಕರ್ತ ನಿನ್ನೆಯೇ ತನ್ನ ಫೇಸ್‌ಬುಕ್‌ನಲ್ಲಿ ಇಂದು ಮೋದಿಯವರ ವಿರುದ್ಧ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ದಾಖಲಿಸಲಿದ್ದೇನೆಂದು ಹೇಳಿದ್ದರು. ಅದರಲ್ಲಿ ಏನಿರುತ್ತದೆಂಬುದರ ಬಗ್ಗೆ ಕುತೂಹಲ ಮೂಡಿತ್ತು. ಇಂದು ಅದನ್ನು ದಾಖಲಿಸಿ ವಿವರಗಳನ್ನು ಹಂಚಿಕೊಂಡಿದ್ದಾರೆ. ವಿವರ ಇಂತಿದೆ.

ನಾನು ಕೊನೆಗೂ ಸುಪ್ರೀಮ್ ಕೋರ್ಟಿನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ ಪಿಐಎಲ್ ದಾಖಲಿಸುವಲ್ಲಿ ಯಶಸ್ವಿಯಾದೆ. ಇದು ಸಾಧ್ಯವಾಗಿದ್ದು ಎರಡು ತಿಂಗಳ ಕಠಿಣ ತನಿಖೆ ಮತ್ತು ಆಳವಾಗಿ ಅಗೆಯುವಿಕೆಯ ನಂತರ.

ಇದು ಪ್ರಧಾನಿ ಮೋದಿಯವರ ಅಫಿಡವಿಟ್‌ಗೆ ಸಂಬಂಧಿಸಿದ್ದು. ಅವರ ಅಫಿಡವಿಟ್ ಅತ್ಯಂತ ಗಂಭೀರವಾದ ಲೋಪಗಳಿಂದ ಕೂಡಿದೆ. 2012ರ ನಂತರ ಅವರ ಪ್ರಕಟಣೆಯಿಂದ ಕೋಟ್ಯಾಂತರ ರೂ. ಬೆಲೆಯ ಭೂಮಿಯು ಕಾಣೆಯಾಗಿದೆ.

ಮೇಲ್ನೋಟಕ್ಕೆ ಕಾಣುವುದೇನೆಂದರೆ, ಇದೊಂದು ದೊಡ್ಡ ಭೂಹಗರಣ ಆಗಿರುವ ಸಾಧ್ಯತೆ ಇದೆ, ಅದೂ ಚೌಕಿದಾರನೇ ಎಲ್ಲವನ್ನೂ ನೋಡಿಕೊಳ್ಳುತ್ತಿರುವಾಗ.

ಇದರ ಕೆಲವು ಸಂಕ್ಷಿಪ್ತ ಸತ್ಯಾಸತ್ಯತೆಗಳು ಇಂತಿವೆ.

2002ರಲ್ಲಿ ಗುಜರಾತಿನ ಆಗಿನ ಮುಖ್ಯಮಂತ್ರಿಯಾದ ನರೇಂದ್ರ ಮೋದಿ ಅವರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಅಂದರೆ, 1.3 ಲಕ್ಷ ರೂಪಾಯಿಗೆ ಒಂದು ಪ್ಲಾಟ್ ನೀಡಲಾಗಿತ್ತು; ಪ್ಲಾಟ್ ನಂಬರ್ 411, ಸೆಕ್ಟರ್ 1, ಗಾಂಧಿನಗರ. ಆ ಪ್ಲಾಟ್‌ನ ಅಳತೆ 330 ಚದರ ಮೀಟರ್‌ಗಳು.

2007ರಲ್ಲಿ ತಮ್ಮ ಅಫಿಡವಿಟ್‌ನಲ್ಲಿ ನರೇಂದ್ರ ಮೋದಿಯವರು ಇದನ್ನು ಪ್ರಕಟಿಸಿದರು.

ಆದರೆ 2012ರ ನಂತರ ಏನಾಯಿತೋ, ಆ ಪ್ಲಾಟ್ ಅನ್ನು ತಮ್ಮ ಅಫಿಡವಿಟ್‌ನಲ್ಲಿ ಹೆಸರಿಸುವುದನ್ನು ಕೈಬಿಟ್ಟರು. ಅದರ ಬದಲಿಗೆ, 401/ಏ, ಸೆಕ್ಟರ್ 1, ಗಾಂಧಿನಗರದ ಪ್ಲಾಟ್‌ನ ಕಾಲು ಭಾಗದಷ್ಟು ತಾವು ಹೊಂದಿರುವುದಾಗಿ ಘೋಷಿಸಿದರು.

ಪ್ರಾಸಂಗಿಕವಾಗಿ ಹೇಳಬೇಕಾದ್ದೆಂದರೆ, ಹಣಕಾಸು ಸಚಿವ ಅರುಣ್ ಜೇಟ್ಲಿ ಕೂಡ ಅದೇ ಪ್ಲಾಟ್ 401/ಏ ನಲ್ಲಿ ಕಾಲು ಭಾಗವನ್ನು ಹೊಂದಿದ್ದಾರೆ.

ಕುತೂಹಲಕಾರಿಯಾದ ಸಂಗತಿಯೆಂದರೆ, ಭೂದಾಖಲೆಗಳಲ್ಲಿ 401/ಏ ಪ್ಲಾಟ್ ಅಸ್ತಿತ್ವದಲ್ಲಿಯೇ ಇಲ್ಲ. ದಾಖಲೆಗಳ ಪ್ರಕಾರ ಪ್ಲಾಟ್ ನಂಬರ್ 411 ಸಂಪೂರ್ಣವಾಗಿ ಪ್ರಧಾನಿ ಮೋದಿಯವರ ಆಸ್ತಿ ಎಂದು ಹೇಳುತ್ತವೆ.

ಇನ್ನೂ ಅತ್ಯಂತ ಕುತೂಹಲಕಾರಿಯಾದ ಸಂಗತಿಯೆಂದರೆ, ಆ ಸ್ಥಳಕ್ಕೆ ಭೇಟಿ ನೀಡಿದಾಗ ಕಾಣುವುದೇನೆಂದರೆ, ಆ ಸ್ಥಳದ ಅಕ್ಕಪಕ್ಕದ 8 ಪ್ಲಾಟ್‌ಗಳನ್ನು ಮತ್ತು ಒಂದು ಸರಕಾರಿ ಮೈದಾನವನ್ನು ಸೇರಿಸಿ, ಒಂದು ಬೌಂಡರಿ ಗೋಡೆಯನ್ನು ನಿರ್ಮಿಸಿ, ಪ್ಲಾಟ್ 411 ಎಂಬ ಒಂದೇ ಕಂಪೌಂಡ್ ಕಾಣಸಿಗುತ್ತದೆ.

ಮಾನ್ಯ ಸುಪ್ರೀಮ್ ಕೋರ್ಟಿಗೆ ನನ್ನ ವಿನಂತಿಯೇನೆಂದರೆ, ಸಂಶಯಕ್ಕೀಡು ಮಾಡುತ್ತಿರುವ ಒಂದು ಸಲ ಕಾಣಿಸಿಕೊಳ್ಳುವ ಇನ್ನೊಂದು ಸಲ ಕಣ್ಮರೆಯಾಗುವ ಈ ಆಸ್ತಿಯ ಬಗ್ಗೆ ಎಸ್‌ಐಟಿ ತನಿಖೆ ಆಗಬೇಕು ಮತ್ತು ಇದೊಂದು ಸಂಘಟಿತ ಭೂಹಗರಣವಾಗಿದೆಯೋ ಇಲ್ಲವೋ ಎನ್ನುವುದನ್ನು ತನಿಖೆ ಮಾಡಬೇಕು.

ಈ ರೀತಿ ವಶಪಡಿಸಿಕೊಳ್ಳಲಾದ ಪ್ಲಾಟ್‌ಗಳ ಒಟ್ಟಾರೆ ಮೊತ್ತ 15 ಕೋಟಿಗಳಿಗಿಂತಲೂ ಹೆಚ್ಚು.

ಲೋಕ್ ಪ್ರಹಾರಿ ವರ್ಸಸ್ ಯುನಿಯನ್ ಆಫ್ ಇಂಡಿಯಾ ಪ್ರಕರಣದಲ್ಲಿ ಮಾನ್ಯ ಸುಪ್ರೀಮ್ ಕೋರ್ಟು ಆರ್ಥಿಕ ಆಸ್ತಿಯನ್ನು ಬಚ್ಚಿಡುವುದು ಒಬ್ಬ ಅಭ್ಯರ್ಥಿಯನ್ನು ಅನರ್ಹಗೊಳಿಸಲು ಖಂಡಿತವಾಗಿಯೂ ಪರಿಗಣಿಸಬಹುದು ಎಂದು ಹೇಳಿದೆ.

ಪ್ರಧಾನ ಮಂತ್ರಿ ಮೋದಿ 411 ಪ್ಲಾಟ್‌ನ ಒಡೆತನವನ್ನು 7 ವರ್ಷಗಳ ಕಾಲ ಬಚ್ಚಿಟ್ಟಿದ್ದೇಕೆ? 401/ಏ ಪ್ಲಾಟ್‌ನ ಭೂದಾಖಲೆಗಳು ಎಲ್ಲಿವೆ? ಹಾಗೂ ಮೋದಿ ಮತ್ತು ಜೇಟ್ಲಿ ಅವರೊಂದಿಗೆ ಇನ್ಯಾರು ಆ ಪ್ಲಾಟ್‌ನ ಒಡೆತನದಲ್ಲಿದೆ?

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಘೋಷಿಸಿದ ಆಸ್ತಿಯಲ್ಲಿ ಮತ್ತು ಗ್ರೌಂಡಿನಲ್ಲಿ ಪರಿಸ್ಥಿತಿಯ ನಡುವೆ ಇಂತಹ ವ್ಯತ್ಯಾಸ ಏಕೆ ಕಾಣುತ್ತಿದೆ?

ಇದಿಷ್ಟು ಕೇಸಿನ ಸಾರಾಂಶ. ಸುಪ್ರೀಂಕೋರ್ಟು ಈ ಕುರಿತು ಏನು ಹೇಳಲಿದೆ? ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸುವಾಗ ಮೋದಿಯವರು ಯಾವ ಆಸ್ತಿಯ ಕುರಿತು ಅಫಿಡವಿಟ್ ಸಲ್ಲಿಸುತ್ತಾರೆ? ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...