Homeಅಂಕಣಗಳುಮ್ಯೂಸಿಯಂನಾಗೆ ಪಕೋಡೇಂದ್ರನ ಫಿಟ್ನೆಸ್ ಪ್ರತಿಮೆ ಮಾಡಿಸಿದ್ರೆ ಹೆಂಗೆ

ಮ್ಯೂಸಿಯಂನಾಗೆ ಪಕೋಡೇಂದ್ರನ ಫಿಟ್ನೆಸ್ ಪ್ರತಿಮೆ ಮಾಡಿಸಿದ್ರೆ ಹೆಂಗೆ

- Advertisement -
- Advertisement -

ಕೇಳುಗರಿಗೆಲ್ಲ ಸ್ವಾಗತ, ಆಘಾತವಾಣಿ ವಾರ್ತೆಗಳಿಗೆ ಸ್ವಾಗತ, ಓದುತ್ತಿರುವವರು ನಿಮ್ಮ ಪ್ರೀತಿಯ ಅಟ್ಯಾಕ್ ಹನ್ಮಂತ. ಈಗ ವಾರ್ತೆಗಳ ವಿವರ..
ಈ ದೇಶ ಕಂಡ ಅತ್ಯುತ್ತಮ ಕಮಂಗಿ ಆಡಳಿತಗಾರ ಪಕೋಡತಾತನು ದೇಶವನ್ನಾಳಿದ ಪ್ರಧಾನಿಗಳ ಪ್ರತಿಮೆಗಳನ್ನು ಇಡಲು ಮ್ಯೂಸಿಯಂ ಸ್ಥಾಪನೆಗೆ ಮುಂದಾಗಿದ್ದು, ಈ ಮ್ಯೂಸಿಯಂನಲ್ಲಿ ನೆಹರು ಬಿಟ್ಟು ಉಳಿದೆಲ್ಲ ಪ್ರಧಾನಿಗಳ ಪ್ರತಿಕೃತಿಗಳು ಇರಲಿವೆಯಂತೆ. ನೆಹರು ಹೆಸರು ಕೇಳಿದರೆ ಮೂಲವ್ಯಾಧಿ ಪೀಡಿತರಂತೆ ಬುಳುಬುಳು ನರಳುವ ಸನಾತನಿಗಳ ಈ ಹೊಚ್ಚಹೊಸ ನವರಂಗಿ ನಾಟಕ ಕಂಡು ಕೈ ಪಕ್ಷದವರು ರೊಚ್ಚಿಗೆದ್ದಿದ್ದಾರೆ. ಪಾರ್ಲಿಮೆಂಟ್ ಡಿಸ್ಕೊಡ್ಯಾನ್ಸರ್ ಆಗಿರುವ ಪಕೋಡತಾತನ ಪ್ರತಿಮೆಯನ್ನು ಯಾವ ಬಗೆಯಲ್ಲಿ ಕೆತ್ತಬೇಕೆಂದು ಶಿಲ್ಪಿಗಳು ತಲೆಕೆಡಿಸಿಕೊಂಡಿದ್ದು, ಕನ್ಹಯ್ಯ ಕುಮಾರನ ಸಲಹೆಯಂತೆ “ಬಂಡೆ ಮೇಲೆ ಹೊಟ್ ಮಕಾಡೆ ದಬಾಕೊಂಡಿರೋ ಪಕೋಡತಾತನ” ವಿಗ್ರಹ ಕೆತ್ತಲು ನಿರಾಕರಿಸಿದ್ದಾರೆ ಎನ್ನಲಾಗಿದೆ. ಪಟ್ಟುಬಿಡದ ಕನ್ಹಯ್ಯ.. ‘ಬಂಡೆ ಮೇಲ್ ಮಕಾಡೆ’ ವಿಗ್ರಹ ಕೆತ್ತಲಾಗದಿದ್ದರೆ, ಪಕೋಡತಾತ ಪುಕ್ಕಲನಂತೆ ಬುಳುಬುಳನೆ ಅಳುತ್ತಾ ಭಾಷಣ ಬಿಗಿಯುತ್ತಿರುವ ವಿಗ್ರಹ ಕೆತ್ತಿ, ಪ್ರತಿಮೆಯ ಕಣ್ಣಿಂದ ಕಣ್ಣೀರು ಬರಲು ಎರಡೂ ಕಣ್ಣಿಗೆ ಗೋಮೂತ್ರದ ಪೈಪುಗಳನ್ನು ಫಿಕ್ಸು ಮಾಡಿ ಎಂದು ಇನ್ನೂ ಆಗ್ರಹಿಸಿಲ್ಲ ಎಂದು ವರದಿಯಾಗಿದೆ.
******
ಕಳ್ಳಕಾಕರು, ಮನೆಹಾಳ ರಾಜಕಾರಣಿಗಳನ್ನು ಕಂಡರೆ ಛಂಗನೆ ಎಗರಿ ಪಾದಕ್ಕೆ ಬೀಳುವ ಪೊಲೀಸರು ಜನಸಾಮಾನ್ಯರು, ಹೋರಾಟಗಾರರನ್ನು ಕಂಡರೆ ಮೂಗಿನೊಳಗೆ ಎರೆಹುಳ ಹೊಕ್ಕಂತಾಡುವುದು ಗೊತ್ತೇ ಇದೆ. ಇದಕ್ಕೆ ಹೊಸ ಉದಾಹರಣೆ ರಾಯಚೂರಿನಿಂದ ಬಂದಿದೆ. ಕಾರ್ಮಿಕರ ಪೀಡಕರ ವಿರುದ್ಧ ಮತ್ತು ವಿದ್ಯಾರ್ಥಿಗಳ ಪರವಾಗಿ ಹೋರಾಟ ನಡೆಸಿಕೊಂಡು ಬರುತ್ತಿದ್ದ ರಾಯಚೂರಿನ ಮಾನ್ವಿ ನಗರದ ಎಸ್.ಎಫ್.ಐ ಸಂಘಟನೆಯ ಹೋರಾಟಗಾರರನ್ನು ಅಲ್ಲಿನ ಹೇತ್ಲಾಂಡಿ ಪೊಲೀಸರು ಯಾವ ವಿಚಾರಣೆಯಿಲ್ಲದೆ ರೌಡಿಪಟ್ಟಿಗೆ ಸೇರಿಸಿದ್ದಾರೆ. ಇನ್ನೊಂದು ಕಡೆ ಹುಬ್ಬಳ್ಳಿಯ ಗುತ್ತಿಗೆ ಪೌರಕಾರ್ಮಿಕರ ಸಂಘಟನೆಯ ಅಧ್ಯಕ್ಷನನ್ನು ಜಿಲ್ಲೆಯಿಂದ ಗಡೀಪಾರು ಮಾಡಲು ಅಲ್ಲಿನ ಮೇಯರ್ ಮತ್ತು ಪೊಲೀಸರು ಹುನ್ನಾರ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ತಮ್ಮ ಅಸಲಿ ಸಾಹುಕಾರರು ನಡೆಸೋ ಗಂಡಾಗುಂಡಿ ಯವಾರಗಳ ತಂಟೆಗೆ ಯಾರೇ ಬಂದರೂ ಪ್ಯಾಂಟೇರಿಸಿಕೊಂಡು ಹೊರಡುವ ಈ ಟೋಪಿಧಾರಿ ಸರ್ಕಾರಿ ಗೂಂಡಾಗಳು, ಅಪ್ಲೈ ಆಗದ ಕಾನೂನುಗಳನ್ನು ಹೋರಾಟಗಾರರ ಮೇಲೆ ಸುರಿದು ಮೀಸೆಗಳನ್ನು ತಿರುವಿಕೊಳ್ಳುತ್ತಿದ್ದಾರೆ. ಪೊಲೀಸರು ತಮ್ಮ ಆಳುವ ಯಜಮಾನರುಗಳು ಕಾಲಲ್ಲಿ ತಳ್ಳುವ ಡಾಗ್ ಬಿಸ್ಕತ್ತುಗಳನ್ನು ನಾಲಿಗೆಯಲ್ಲಿ ಎತ್ತಿಕೊಂಡು ಸಂಭ್ರಮಿಸುತ್ತಿರುವುದರಲ್ಲಿ ಆಶ್ಚರ್ಯ ಪಡುವಂಥದ್ದೇನಿಲ್ಲ ಎಂದು ಮಾಜಿ ಹಾಸ್ಯನಟ ಶಾಂಗ್ಲಿಯಾನ ಒಂದೇ ಉಸಿರಿನಲ್ಲಿ ಒದರಿದ್ದಾರೆಂದು ತಿಳಿದು ಬಂದಿದೆ.
******
ರಾಜ್ಯವನ್ನು ಹರಿದು ಎರಡು ಭಾಗ ಮಾಡ್ತೀವಿ ಅಂತ ಹೊರಟಿದ್ದ ಛೀರಾಮುಲು & ಬ್ಲೂಜೆಪಿಯ ಸಿಳ್ಳೇಕ್ಯಾತಗಳು, ಜನರು ಕಾಲಲ್ಲಿದ್ದನ್ನು ಕಳಚಿ ಮೂತಿಗೆ ಪಟಪಟನೆ ಎಸೆಯಲು ಶುರು ಮಾಡುತ್ತಿದ್ದಂತೆ ಸುಯ್ ಟಪಕ್ ಅಂತ ಯೂ ಟರ್ನ್ ತೆಗೆದುಕೊಂಡಿರೋ ವರ್ತಮಾನ ಇದೀಗ ವರದಿಯಾಗಿದೆ. ರಾಜ್ಯಸಭಾ ಸದಸ್ಯತ್ವದ ಟಿಕೆಟುಗಳಲ್ಲಿ ಒಂದನ್ನೂ ಉತ್ತರ ಕರ್ನಾಟಕ ಭಾಗದವರಿಗೆ ಕೊಡದೆ ಆಂಧ್ರ, ಕೇರಳ, ತಮಿಳುನಾಡಿನ ಮುಷಂಡಿಗಳಿಗೆ ಹಾಫ್‍ರೇಟ್, ಚೀಪ್ ರೇಟಿನಲ್ಲಿ ಮಾರಿಕೊಂಡು ಯಂಜಾಯ್ ಮಾಡುತ್ತಿದ್ದ ಈ ಬ್ಲೂಜೆಪಿ ಭಡವ ರಾಸ್ಕಲ್‍ಗಳಿಗೆ ಇದೀಗ ಉತ್ತರ ಕರ್ನಾಟಕದ ಮೇಲೆ ಲವ್ವು ಕಿತ್ಕೊಂಡಿರುವುದು ನಾನಾ ಗುಮಾನಿಗೆ ಕಾರಣವಾಗಿದೆ. ಪಕ್ಷದಲ್ಲಿ ಇರುವ 17 ಸಂಸದರಲ್ಲಿ ಅರ್ಧಕ್ಕರ್ಧ ಮಂದಿ ಉತ್ತರ ಕರ್ನಾಟಕದವರೇ ಇದ್ದರೂ ತಮ್ಮ ಅಧಿಕಾರಾವಧಿಯಲ್ಲಿ ಆ ಭಾಗದ ಅಭಿವೃದ್ಧಿಗೆ ಮೂರುಕಾಸಿನ ಕೆಲಸ ಮಾಡದೆ, ಓತ್ಲಾ ಹೊಡೆದುಕೊಂಡು ತಿರುಗುತ್ತಿದ್ದ ಈ ಬ್ಲೂಜೆಪಿ ದಂಢಪಿಂಡಗಳು ಇದೀಗ ತಾವೇ ಹಾರಿಸಿದ ಪ್ರತ್ಯೇಕ ರಾಜ್ಯದ ಗೂಬೆಯನ್ನು ಆಕ್ಸಿಡೆಂಟಲ್ ಚೀಫ್ ಮಿನಿಸ್ಟರ್ ಕುಮಾರಣ್ಣನ ತಲೆಗೆ ಕಟ್ಟಲು ಹುನ್ನಾರ ನಡೆಸಿರುವುದು ಬಹಿರಂಗವಾಗಿದೆ. ಗಡ್ಡದೊಳಗೇ ಮುಖ ಬಚ್ಚಿಟ್ಟುಕೊಂಡು ತಿರುಗುವ ಛೀರಾಮುಲು, ಇದೀಗ ಪ್ರತ್ಯೇಕ ರಾಜ್ಯದ ಬಗ್ಗೆ ಯಾರಾದ್ರು ಮಾತಾಡಿದ್ರೆ ಅವರ ಎರಡೂ ಕೆನ್ನೆ ಕಚ್ಚುತ್ತೇನೆಂದು ಧಮಕಿ ಹಾಕುತ್ತಿರುವುದು ಹಾಸ್ಯಾಸ್ಪದವಾಗಿದೆ. ಒಟ್ಟಿನಲ್ಲಿ ರಾಜ್ಯದ ಜನರು ಇವರ ಸೆಗಣಿ ಬುರುಡೆಗಳತ್ತ ಗುರಿಯಿಟ್ಟು ಬೀಸಿದ ಹಳೇಕೆರಗಳು ಯಶಸ್ವಿಯಾಗಿ ಗುರಿ ತಲುಪಿವೆಯೆಂದು ತಲೆಗೆ ಬ್ಯಾಂಡೇಜು ಹಾಕಿಸಿಕೊಂಡ ಬ್ಲೂಜೆಪಿ ಮುಠ್ಠಾಳರು ಇನ್ನೂ ತಪ್ಪೊಪ್ಪಿಗೆ ಹೇಳಿಕೆ ಕೊಟ್ಟಿಲ್ಲವೆಂದು ವರದಿಯಾಗಿದೆ.
******
ಸುಮ್ಮನಿರಲಾರದೆ ಇರುವೆ ಬಿಟ್ಟುಕೊಳ್ಳೋರನ್ನು ನೀವು ನೋಡಿರ್ತೀರಿ, ಆದ್ರೆ ಇರಲಾರದೆ ಚೆಡ್ಡಿಯೊಳಗೆ ಹೆಬ್ಬಾವು ಬಿಟ್ಕೊಳೋರನ್ನ ನೀವು ನೋಡಿರಲಿಕ್ಕಿಲ್ಲ. ಮೀಟ್ ಮಿಸ್ಟರ್ ರಾಮ್ಸೇವಕ್ ಶರ್ಮ, ದೂರಸಂಪರ್ಕ ಇಲಾಖೆ ಟ್ರಾಯ್ ನ ಮುಖ್ಯಸ್ಥ. ಈ ಅರುಳುಮರುಳು ಮುದುಕಪ್ಪ ತನ್ನ ಟ್ವಿಟರಿನಲ್ಲಿ ತನ್ನ ಆಧಾರ್ ಕಾರ್ಡ್ ನಂಬರ್ ಹಾಕಿ, ತಾಕತ್ತಿದ್ರೆ ಹ್ಯಾಕ್ ಮಾಡಿ ಅಂತ ಚಾಲೆಂಜು ಹಾಕಿತ್ತು. ತಮ್ ಪಾಡಿಗೆ ತಾವಿದ್ದ ಕಂಪ್ಯೂಟರ್ ಹ್ಯಾಕರ್ ಗಳು ಮುದುಕಪ್ಪನ ಚಾಲೆಂಜಿಗೆ ರೊಚ್ಚಿಗೆದ್ದು ಆತನ ಸರ್ವ ಜಾತಕವನ್ನೆಲ್ಲ ಹ್ಯಾಕ್ ಮಾಡಿ ಅದಕ್ಕೆ ಉಪ್ಪು ಹುಣಸೆಹಣ್ಣು ಸವರಿ ತಗೋ ನೆಕ್ಕೊ ಅಂತ ವಾಪಸ್ ಬಿಸಾಕಿದ್ದಾರೆ. ಆಧಾರ್ ಕಾರ್ಡ್ ನಂಬರ್ ಮೂಲಕ ಮುದುಕಪ್ಪನ ಪರ್ಸನಲ್ ಫೋನಿಗೇ ಕನ್ನ ಕೊರೆದು ವಾಟ್ಸಾಪ್ ಡೀಟೈಲ್ ಎತ್ತಾಕಿ, ಆತನ ಬ್ಯಾಂಕ್ ಅಕೌಂಟಿಗೂ ತೂತ ಕೊರೆದು ಒಂದು ರುಪಾಯಿ ಡೆಪಾಸಿಟ್ ಮಾಡಿ, ಆತನ ಕ್ರೆಡಿಟ್ ಕಾರ್ಡಿಂದಲೇ ಒಂದು ಫೋನು ಬುಕ್ ಮಾಡಿ, ಅವನ ಮಬೆ ಅಡ್ರೆಸ್ಸಿಗೇ ಕಳಿಸಿ, ಹ್ಯಾಕು ಸಾಕಾ, ಇಲ್ಲಾ ಇನ್ನೂ ಬೇಕಾ ಎಂದು ಮುದುಕಪ್ಪನ ಪಂಚೆಯೆಳೆದುಬಿಟ್ಟಿದ್ದಾರೆ. ಇಷ್ಟು ಸಾಲದೆಂದು ಹ್ಯಾಕರ್ ಗಳು ಪಿ.ಎಮ್ ಪಕೋಡಪ್ಪನಿಗೆ ನಿಂದೂ ಆಧಾರ್ ಕಾರ್ಡ್ ನಂಬರ್ ಇದ್ರೆ ಕೊಡು ಒಂದು ಕಡೆಯಿಂದ ಕೆತ್ತಿ ಬಿಸಾಕುತ್ತೇವೆಂದು ಹೊಸ ಚಾಲೆಂಜನ್ನು ಎಸೆದಿದ್ದಾರೆ. ಈ ಮೂಲಕ ಆಧಾರ್ ಕಾರ್ಡ್ ಮಾಹಿತಿಯನ್ನು ಯಾರೂ ಕದಿಯಲಾಗದು, ಅವನ್ನು ಏಳು ಸಮುದ್ರದಾಚೆ ಇರೋ ದ್ವೀಪದಲ್ಲಿರೋ ರಾಕ್ಷಸನ ಅಂಡಿನೊಳಗೆ ಭದ್ರವಾಗಿಟ್ಟಿದ್ದೇವೆಂದು ಕೊಚ್ಚಿಕೊಳ್ಳುತ್ತಿದ್ದ ದ್ವೇಷಭಕ್ತ ಪಕೋಡಪ್ಪನ ಪಂಚೆಯು ಸಂತೆಯಲ್ಲಿ ಉದುರಿಹೋಗಿದೆ. ಯಾವುದೇ ಕಾರಣಕ್ಕು ತನ್ನ ಆಧಾರ್ ನಂಬರ್ ಹ್ಯಾಕರ್‍ಗಳ ಕೈಗೆ ಸಿಗದಂತೆ ನೋಡಿಕೊಳ್ಳಿ ಎಂದು ಎಚ್ಚರಿಸಿರೋ ಪಕೋಡಪ್ಪ ಅದೇನಾದರೂ ಲೀಕಾದರೆ ತಾನು ಕದ್ದುಮುಚ್ಚಿ ನೋಡೋ ಪಾರ್ನ್ ಸೈಟ್ ಡೀಟೈಲೆಲ್ಲ ಹೊರಬಿದ್ದು ಮಾನ ಹರಾಜಾಗುವ ಭಯದಲ್ಲಿದ್ದಾರೆಂದು ಮೂಲಗಳು ತಿಳಿಸಿವೆ.
******
ಬುದ್ದಿಜೀವಿಗಳಿಗೆ ಗುಂಡಿಟ್ಟು ಕೊಲ್ಲಿಸುತ್ತಿದ್ದೆ ಎಂದು ಕಯ್ಯಯ್ಯೋ ಅಂದ ಬಸನಘೋಡ ಪಾಟಿಲ್ ಮೇಲೆ ಕಾನೂನುಕ್ರಮ ಕೈಗೊಳ್ಳಲು ನರ ದೌರ್ಬಲ್ಯ ಸಮಸ್ಯೆಯಿಂದ ಬಳಲುತ್ತಿರೋ ಬೆರಕೆ ಸರ್ಕಾರ ಕಡೆಗೂ ಬಸನಘೋಡನನ್ನು ಕೊಚ್ಚೆ ಚರಂಡಿಯಲ್ಲಿ ಹೊರಳಾಡಲು ಬಿಟ್ಟು ತಾನೂ ಅವನೊಡನೆ ಉರುಳಾಡಲು ಯಾವ ಸಮಸ್ಯೆಯೂ ಇಲ್ಲವೆಂದು ಸ್ಪಷ್ಟಪಡಿಸಿದೆ. ಇನ್ನೊಂದು ಕಡೆಯಲ್ಲಿ ಹೈದರಾಬಾದಿನ ಬ್ಲೂಜೆಪಿ ಜನಪ್ರತಿನಿಧಿಯೊಬ್ಬ ಅಸ್ಸಾಂನಲ್ಲಿರೋ ವಲಸಿಗರ ಮೇಲೆ ಗುಂಡು ಹೊಡೆದು ಕೊಲ್ಲಲು ಕೇಂದ್ರ ಸರ್ಕಾರಕ್ಕೆ ಕೇಳಿಕೊಂಡಿದ್ದಾನೆ. ಮುಳ್ಳಂದಿಯ ಮುಖಕ್ಕೆ ಮೀಸೆ ಅಂಟಿಸಿದಂತಿರೋ ಈ ಗುಡಾಣಗಢವನ ಮೇಲೆ ಕಾನೂನು ಕ್ರಮ ಕೈಗೊಳ್ಳಲು ಹೈದರಾಬಾದಿನ ಸರ್ಕಾರಕ್ಕೂ ನರದೌರ್ಬಲ್ಯದ ಕೊರತೆ ಕಾಡುತ್ತಿದೆಯಂತೆ. ಮಗದೊಂದು ಕಡೆ ಮೇಕೆ ದೇವರ ಪ್ರತಿರೂಪ, ಆದ್ದರಿಂದ ಯಾರೂ ಮಟನ್ ತಿನ್ನಬಾರದೆಂದು ದ್ವೇಷಭಕ್ತರ ಪಕ್ಷದ ರಾಜ್ಯಾಧ್ಯಕ್ಷನೊಬ್ಬ ಜನರ ಮೇಲೆ ಬೆದರಿಕೆ ಹಾಕಿದ್ದಾನೆ. ಇವರನ್ನೆಲ್ಲ ನೋಡುತ್ತಿದ್ದರೆ ಈ ದ್ವೇಷಭಕ್ತ ಕುನ್ನಿಗಳನ್ನೆಲ್ಲ ಬ್ಲೂಜೆಪಿ ಪಕ್ಷವು “ ಆಲ್ ಇಂಡಿಯ ಬೆಸ್ಟ್ ಮುಠ್ಠಾಳ್ಸ್ ಎಕ್ಸಾಂ” ನಡೆಸಿ ಅದರಲ್ಲಿ ಪಾಸಾದ ಅತ್ತುತ್ತಮ ಮೆಂಟ್ಲುಗಳಿಗೆ ಟಿಕೆಟು ಕೊಟ್ಟು ಎಲೆಕ್ಷನ್‍ಗೆ ಕಳಿಸಿರಬಹುದೇ ಎಂಬ ಅನುಮಾನ ವ್ಯಕ್ತವಾಗುತ್ತಿದೆ. ತಲೆಯಲ್ಲಿ ಮಿದುಳಿರುವ ಜನರನ್ನು ಕಂಡರೆ ಉರಿದುಬೀಳುವ ಈ ಸನಾತನ ಪೀಡೆಗಳು ಸೆಗಣಿ ತಿನ್ನೋ ಜ್ಞಾನದಲ್ಲಿ ಪಿಎಚ್.ಡಿ ಲೆವೆಲ್ಲಿಗೆ ಪಳಗಿರುವುದು ಜನರಲ್ಲಿ ಆಶ್ಚರ್ಯ ಮೂಡಿಸಿದೆ.
ಇಲ್ಲಿಗೆ ಆಘಾತವಾಣಿ ವಾರ್ತೆಗಳು ಮುಕ್ತಾಯವಾಯಿತು. ಮತ್ತೆ ನಮ್ಮ ನಿಮ್ಮ ಬೇಟಿ ಮುಂದಿನವಾರ. ಅಲ್ಲೀತನಕ ನೀವೂ ನೆಮ್ದಿಯಾಗಿರಿ, ನಾವೂ ನೆಮ್ದಿಯಾಗಿರುತ್ತೇವೆ ಅಂತ ಹೇಳುತ್ತ, ವಾರ್ತಾಪ್ರಸಾರಕ್ಕೆ ಮಂಗಳ ಹಾಡುತ್ತಿದ್ದೇವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...