Homeಅಂಕಣಗಳುಮುಳುಗು ದೋಣಿ ಮೋದಿಯೂ ನಾಜೂಕು ನಾವಿಕ ಸಂಘವೂ

ಮುಳುಗು ದೋಣಿ ಮೋದಿಯೂ ನಾಜೂಕು ನಾವಿಕ ಸಂಘವೂ

- Advertisement -
- Advertisement -

ಹೆಚ್.ಎಸ್.ದೊರೆಸ್ವಾಮಿ |

5 ರಾಜ್ಯಗಳ ಚುನಾವಣೆಯಲ್ಲಿ ಸೋಲುಂಡ ಭಾರತೀಯ ಜನತಾ ಪಕ್ಷ ಅರ್ಥಾತ್ ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೋಡಿ ಕೋಮಾ ತಲುಪಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಮಂತ್ರಿ ಮೋದಿಯ ಭವಿಷ್ಯವನ್ನು ತೀರ್ಮಾನಿಸುವಲ್ಲಿ ಈಗ ನಡೆದ ಚುನಾವಣೆಗಳು ನಿರ್ಣಾಯಕವಾಗಿದ್ದವು. ಜನರಿಗೆ ಮೋದಿ ಬಗೆಗೆ ಭ್ರಮಾನಿರಸನ ಆಗಿರುವುದರ ಮುನ್ಸೂಚನೆ ಇದರಿಂದ ಸಿಕ್ಕಂತಾಗಿದೆ.
ಜನಸಾಮಾನ್ಯರು ಆರೆಸ್ಸೆಸ್ ಅನ್ನು ಜನವಿರೋಧಿ ಸಂಸ್ಥೆ, ಹಿಂದೂತ್ವ ಪ್ರತಿಪಾದಕ ಸಂಸ್ಥೆ ಎಂಬ ಸಂಕುಚಿತ ಅರ್ಥದಲ್ಲಿ ಭಾವಿಸುತ್ತಿರುವುದು ಸ್ವತಃ ಸಂಘದ ಮುಖ್ಯಸ್ಥರಿಗೇ ಮನವರಿಕೆಯಾಗಿರುವುದರಿಂದ ಇನ್ಮುಂದೆ ತಮ್ಮ ಸಂಘಟನೆಗೆ ಭವಿಷ್ಯವಿಲ್ಲವೆಂದು ತಿಳಿದು ಸ್ಥಾಪಕ-ಅಧ್ಯಕ್ಷ ಹೆಡ್ಗೇವಾರರು ಬರೆದ ಪಕ್ಷದ ಸಂವಿಧಾನವನ್ನೇ ಪುನರ್‍ರಚಿಸಲು ತೀರ್ಮಾನ ಕೈಗೊಂಡಂತಿದೆ. ಅದಕ್ಕಾಗೆ ತಮ್ಮ ಪಕ್ಷದ ಸಿದ್ಧಾಂತಕ್ಕೆ ಒಗ್ಗದಿದ್ದರೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ತಮ್ಮ ಸಮಾರಂಭಕ್ಕೆ ಆಹ್ವಾನಿಸುವ ಮತ್ತು ಕಾಂಗ್ರೆಸ್ ನಾಯಕ, ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರನ್ನು ಬೈಠಕ್‍ಗೆ ಕರೆಸುವಂತಹ ನಾಟಕಗಳಿಗೆ ಮುಂದಾಗುತ್ತಿದೆ. ಅಂದರೆ ತನ್ನ ಸಿದ್ದಾಂತಗಳಿಂದ ಜನರನ್ನು ತಲುಪಬಹುದೇ ವಿನಾಃ ಹೆಚ್ಚು ದಿನ ಜನಮಾನಸದಲ್ಲಿ ಉಳಿಯಲಾಗದು ಎಂಬುದು ಅರ್ಥವಾಗಿ ಹೀಗೆಲ್ಲಾ ಮಾಡುತ್ತಿದ್ದಾರಾ? ಸ್ಪಷ್ಟವಿಲ್ಲ. ಆದರೆ, ಮೋದಿ ಸವಕಲು ನಾಣ್ಯವಾಗುತ್ತಿರುವುದು ಖಾತ್ರಿಯಾದ ಮೇಲೆ ಒಂದು ರಾಜಕೀಯ ಆಟ ಕಟ್ಟಲು ಆರೆಸ್ಸೆಸ್ ಚಾಣಕ್ಯರು ಹೆಣಗಾಡುತ್ತಿರುವುದು ಮಾತ್ರ ಸತ್ಯ.
ಮೋದಿ ಮತ್ತು ಅಮಿತ್ ಶಾ ಜೋಡಿಯನ್ನು ಪಂಚರಾಜ್ಯ ಫಲಿತಾಂಶಗಳಿಗಿಂತಲೂ ಹೆಚ್ಚು ಕಂಗಾಲು ಮಾಡಿರುವುದು ಸಂಘ ಪರಿವಾರದ ಆಂತರಿಕ ಬೆಳವಣಿಗೆಗಳು. ಸ್ಥಾಪನೆಯ ದಿನದಿಂದಲೂ ವಿಶ್ವ ಹಿಂದೂ ಪರಿಷತ್ತಿನ ಅಧ್ಯಕ್ಷನಾಗಿದ್ದ ತನ್ನನ್ನು ಆ ಸ್ಥಾನದಿಂದ ಕಿತ್ತೊಗೆದುದಕ್ಕೆ ತೊಗಾಡಿಯ ಆರ್.ಎಸ್.ಎಸ್, ಮೋದಿ ವಿರುದ್ಧವೇ ವ್ಯಗ್ರರಾಗಿದ್ದಾರೆ. ಆರೆಸ್ಸೆಸ್ ತನ್ನನ್ನು ತಾನು ಒಂದು ರಾಜಕೀಯೇತರ ಸಂಘಟನೆಯಾಗಿ ಗುರುತಿಸಿಕೊಂಡರು ಅದರ ಮೂಲ ಅಜೆಂಡಾ ರಾಜಕೀಯವೇ ಅನ್ನೋದು ಈಗ ಗೊಂದಲದ ವಿಷಯವೇನಲ್ಲ. ಬಿಜೆಪಿ ಅದರ ರಾಜಕೀಯ ಮುಖವಾಡ ಅಷ್ಟೆ. ಆ ಮುಖವಾಡವನ್ನು ಹೇಗೆ ಬಳಸಿಕೊಳ್ಳಬೇಕು, ಯಾರಿಂದ ದುಡಿಸಿಕೊಳ್ಳಬೇಕು ಎಂಬುದನ್ನು ಅದು ಚೆನ್ನಾಗಿ ಅರ್ಥ ಮಾಡಿಕೊಂಡಿದೆ. ಜೀವದ್ರೋಹಿ ರಥಯಾತ್ರೆಯ ಮೂಲಕ ಬಿಜೆಪಿಗೆ ಕೋಮುಧ್ರುವೀಕರಣ ಮಾಡಿಕೊಟ್ಟರೂ ಅಡ್ವಾಣಿಯವರಿಗೆ ಬದಲು ವಾಜಪೇಯಿಯನ್ನು ಪ್ರಧಾನಿಯಾಗಿ ಮುಂದಿಟ್ಟು ಮೈತ್ರಿಕೂಟದ ಸರ್ಕಾರ ರಚಿಸಿದ್ದಾಗಲಿ, ಕೊನೆಗೆ ಅದೇ ಅಡ್ವಾಣಿಯವರನ್ನೇ ಹೀನಾಯವಾಗಿ ಮೂಲೆಗುಂಪು ಮಾಡಿ ಮೋದಿಯವರನ್ನು ಬೆಳೆಸಿದ್ದಾಗಲಿ ಎಲ್ಲವೂ ಆರೆಸ್ಸೆಸ್‍ನ ರಾಜಕೀಯ ಆಟಗಳೇ ಆಗಿವೆ.
ಯಾರನ್ನು, ಯಾವಾಗ, ಹೇಗೆ `ಮಟ್ಟ’ ಹಾಕಬೇಕೆನ್ನುವ ಸೂತ್ರ ಆರೆಸ್ಸೆಸ್ ಕೈಯಲ್ಲಿರುವುದೇ ಇವತ್ತು ಮೋದಿ-ಶಾ ಜೋಡಿಗೆ ತಲೆನೋವಾಗಲಿದೆ. ಇಷ್ಟು ದಿನ ಹಲವು ಕಾರಣಗಳಿಂದ, ಹತ್ತಾರು ಕುತಂತ್ರಗಳಿಂದ ಮೋದಿ ಈ ದೇಶದಲ್ಲಿ ತನ್ನದೇ ಆದ ಹೈಪ್ ಸೃಷ್ಟಿಸಿಕೊಂಡಿದ್ದರು. ಸಂಘ ಪರಿವಾರಕ್ಕೆ ಆ ಹೈಪ್ ಬೇಕಾಗಿತ್ತು. ನೀರೆರೆದು ಪೋಷಿಸಿತ್ತು. ಸಂಘದ ಈ ಭರಪೂರ ಬೆಂಬಲ ಇದ್ದುದರಿಂದಲೇ ಮೋದಿ ಬಿಜೆಪಿಯೊಳಗೆ ಅಷ್ಟು ಬಲಿಷ್ಠವಾಗಿ, ಹಿರಿಯರನ್ನೇ ನಗಣ್ಯವಾಗಿಸುವಷ್ಟರಮಟ್ಟಿಗೆ ಬೆಳೆಯಲು ಸಾಧ್ಯವಾದದ್ದು. ಆದರೆ ಈಗ ಅದೇ ಮೋದಿಯ ವರ್ಚಸ್ಸು ಕುಸಿಯುತ್ತಿರುವುದನ್ನು ಪಂಚರಾಜ್ಯ ಚುನಾವಣೆಗಳು ಸಾಬೀತು ಮಾಡಿವೆ. ಇನ್ನು ಮೋದಿಯಂತಹ ಮುಳುಗುದೋಣಿಯನ್ನು ನೆಚ್ಚಿಕೊಂಡು ಕೂರುವಷ್ಟು ಸಂಘದ ಚಾಣಕ್ಯರು ದಡ್ಡರೇನಲ್ಲ. ಪರ್ಯಾಯಕ್ಕೆ ಒಳಗೊಳಗೇ ಸಿದ್ಧ ಮಾಡಿಕೊಳ್ಳತೊಡಗುತ್ತಾರೆ. ಮೋದಿಗೆ ಈ ವಾರ್ನಿಂಗ್ ಸಿಕ್ಕಿರುವುದರಿಂದಲೇ ತನ್ನ ಹಿಂಬಾಲಕರ ಮೂಲಕ ಶತಾಯಗತಾಯ ಮತ್ತೊಮ್ಮೆ ಮೋದಿಯನ್ನು ಪ್ರಧಾನಿ ಮಾಡಲೇಬೇಕು ಎನ್ನುವ ಲಜ್ಜೆಗೆಟ್ಟ ಅಭಿಯಾನಗಳನ್ನೆಲ್ಲ ಶುರು ಮಾಡಿಸಿದ್ದಾರೆ. ಇದು ಮುಳುಗುವ ದೋಣಿಯನ್ನು ಕೊನೆಯದಾಗಿ ಸರಿಪಡಿಸುವ ಒಂದು ಪ್ರಯತ್ನವಷ್ಟೆ. ಅದು ಯಶ ಕಾಣದು ಎಂದು ಗೊತ್ತಾದ ಕ್ಷಣವೇ ಮೋದಿಯವರು ಮತ್ತೊಬ್ಬ ಅಡ್ವಾಣಿಯಾಗಲಿದ್ದಾರೆ.
ತಾವು ಬೇರೆಬೇರೆ ಎಂದು ಎಷ್ಟು ಬೊಬ್ಬೆ ಹೊಡೆದುಕೊಂಡರೂ ಬಿಜೆಪಿ ಮತ್ತು ಸಂಘ ಪರಿವಾರವನ್ನು ಪ್ರತ್ಯೇಕಿಸಿ ನೋಡಲು ಸಾಧ್ಯವಿಲ್ಲ. ಅಷ್ಟರಮಟ್ಟಿಗೆ ಅವು ಬೆಸೆದುಕೊಂಡ ರಚನೆಗಳು. ಆದರೆ ಇದೇ ಮಾತನ್ನು ಮೋದಿ ಮತ್ತು ಸಂಘ ಪರಿವಾರಕ್ಕೆ ಅನ್ವಯಿಸಲಾಗದು. ಮೋದಿಗೆ ಸಂಘ ಅನಿವಾರ್ಯವೇ ಹೊರತು, ಸಂಘಕ್ಕೆ ಮೋದಿ ಅನಿವಾರ್ಯವಲ್ಲ. ಆದರೆ ಮಾತುಗಾರ ಮೋದಿಯವರು ಈ ಸೂಕ್ಷ್ಮವನ್ನು ಅರ್ಥ ಮಾಡಿಕೊಂಡಂತೆ ಕಾಣಿಸುವುದಿಲ್ಲ. ಅದು ಅರ್ಥವಾಗುವ ಕಾಲವೂ ದೂರವಿಲ್ಲ.
2014ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷ ದೇಶದ ಬಹುಭಾಗದಲ್ಲಿ ಪ್ರಚಂಡ ಜಯ ಗಳಿಸಿದ ಅನಂತರ ಆರ್‍ಎಸ್‍ಎಸ್ ಪರಿವಾರಗಳ ಸೊಕ್ಕು ಹೆಚ್ಚಾದದ್ದು ಸುಳ್ಳಲ್ಲ. ಮುಸ್ಲಿಂ ವಿರೋಧಿ ಮನಸ್ಥಿತಿಯ ಅಮಿತ್ ಶಾ ಮತ್ತು ಮೋದಿ ಜೋಡಿ ಕಾಂಗ್ರೆಸ್ಸನ್ನು ಹೇಳ ಹೆಸರಿಲ್ಲದಂತೆ ಮಾಡುತ್ತೇವೆ, ಭಾರತವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಅಂತ ಹೊರಟದ್ದು ಕೂಡಾ ಈ ಸೊಕ್ಕಿನಿಂದಲೇ. ಇಂಥಾ ಸೊಕ್ಕಿನ ಮಾತುಗಳು ಜನತೆಗೆ ಹಿಡಿಸಲಿಲ್ಲ ಎಂದು ಆರ್‍ಎಸ್‍ಎಸ್ ಕಾರ್ಯಕರ್ತರೂ ಆಗಿದ್ದ ಹಿರಿಯ ಪತ್ರಕರ್ತರೊಬ್ಬರು ಅಭಿಪ್ರಾಯ ಪಡುತ್ತಾರೆ.
ನರೇಂದ್ರಮೋದಿಯವರು ಮಂತ್ರಿಮಂಡಲದ ಯಾವ ಮಂತ್ರಿಯೂ ಸೊಲ್ಲೆತ್ತದಂತೆ ತಾನೇ ಏಕಮೇವಾದ್ವಿತೀಯ ನಾಯಕನಂತೆ ಬೆಳೆಯಲು ಯತ್ನಿಸಿದ್ದು ಕೂಡಾ ಪ್ರಜಾಪ್ರಭುತ್ವದ ತಂತುಗಳು ಬೆಸೆದುಹೋಗಿರುವ ನಮ್ಮ ದೇಶದ ಜನರಿಗೆ ಇಷ್ಟವಾಗಲಿಲ್ಲ. ಬಿಜೆಪಿಯ ಮಟ್ಟಿಗೆ ಸಮರ್ಥೆ ಎಂದು ಕೊಂಡಾಡಿಸಿಕೊಂಡಿದ್ದ ಸುಷ್ಮಾ ಸ್ವರಾಜ್‍ರಂಥ ವಿದೇಶಾಂಗ ಸಚಿವೆ ಇದ್ದಾಗ್ಯೂ ವಿದೇಶ ಪ್ರವಾಸ, ವಿದೇಶಾಂಗ ನೀತಿ, ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ತಾನೇ ವಿದೇಶಾಂಗ ಮಂತ್ರಿಯಂತೆ ಬಿಂಬಿಸಿಕೊಳ್ಳಲು ಮೋದಿ ಸತತ ಪ್ರಯತ್ನ ಮಾಡಿದ್ದು ಬಿಜೆಪಿಯೊಳಗೇ ಒಂದು ಗುಂಪಿನಿಂದ ಅವರನ್ನು ದೂರ ಮಾಡುತ್ತಾ ಬಂತು.
ಮೋದಿ ಇತರೆ ನಾಯಕರೊಂದಿಗೆ ಸೃಷ್ಟಿಸಿಕೊಳ್ಳುತ್ತಿರುವ ಅಂತರ ಕೇವಲ ಮೇಲ್‍ಸ್ತರದ ನಾಯಕರಿಗೆ ಮಾತ್ರ ಸೀಮಿತವಾಗಿಲ್ಲ. ಕಾರ್ಯಕರ್ತರು ಮತ್ತು ನಾಯಕರುಗಳ ನಡುವೆಯೂ ಬಿಜೆಪಿಯಲ್ಲಿ ಈಗ ಅಂತದ್ದೊಂದು ಅಂತರ ಸೃಷ್ಟಿಯಾಗುತ್ತಿದೆ. ಚುನಾವಣಾ ಸಮಾವೇಶಗಳಷ್ಟೇ ಈಗ ಮೋದಿ ಮತ್ತು ಇತರೆ ನಾಯಕರ ನಡುವೆ ಇರುವ ಸಂಪರ್ಕ ಸೇತುಗಳು. ಯಥಾ ರಾಜ ತಥಾ ಪ್ರಜಾ ಎನ್ನುವಂತೆ ಉಳಿಕೆ ಎರಡನೇ ಹಂತದ, ಮೂರನೇ ಹಂತದ ಹಾಗೂ ಸ್ಥಳೀಯ ನಾಯಕರುಗಳೂ ತಮ್ಮ ಕಾರ್ಯಕರ್ತರಿಂದ ದೂರವೇ ಉಳಿಯುತ್ತಿದ್ದಾರೆ.
ಕಾಲಾಳುಗಳ ಪಡೆ ಮತ್ತು ದಂಡನಾಯಕನ ಮಧ್ಯೆ ಈಗ ಕಂದಕ ಏರ್ಪಟ್ಟಿದೆ. ಬಿಜೆಪಿಯ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಹಾಗೂ ಸಂಘ ಪರಿವಾರದ ಅಂಗಸಂಸ್ಥೆಗಳಾದ ಭಾರತೀಯ ಮಜ್ದೂರ್ ಸಂಘ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್, ದುರ್ಗಾವಾಹಿನಿ ಮೊದಲಾದ ಪೂರಕ ಸಂಸ್ಥೆಗಳ ಸಂಪರ್ಕಸೇತು ಈಗ ಮುರಿದು ಬಿದ್ದಿದೆ.
ಈ ಸೂಕ್ಷ್ಮ ಬೆಳವಣಿಗೆ ಹೊರಜಗತ್ತಿಗೆ ಅಷ್ಟು ಸುಲಭವಾಗಿ ಕಾಣಲು ಸಾಧ್ಯವಿಲ್ಲ. ಯಾಕೆಂದರೆ ಮೀಡಿಯಾಗಳು ಮೋದಿಯವರ ಕಬ್ಜಾದಲ್ಲೇ ಇರುವುದರಿಂದ ಅವರಿಗೆ ಡ್ಯಾಮೇಜ್ ಮಾಡಬಹುದಾದ ಇಂತಹ ಸಂಗತಿಗಳನ್ನು ಚರ್ಚಿಸುವ ಗೋಜಿಗೇ ಹೋಗುವುದಿಲ್ಲ. ಬಿಜೆಪಿ ಮತ್ತು ಸಂಘ ಪರಿವಾರದೊಳಗೆ ಎಂಥಾ ಬಿರುಕೂ ಇಲ್ಲ ಎಂಬಂತೆ ಕಾಣಿಸಲಾಗುತ್ತಿದೆ. ಆದರೆ ಒಳಗೇ ಇರುವ ಆರೆಸ್ಸೆಸ್ ಇದರತ್ತ ಕುರುಡಾಗಿರಲು ಸಾಧ್ಯವಿಲ್ಲ. ಕಾರ್ಯಕರ್ತರಿಂದಲೂ ದೂರಾಗಿ, ಜನರಿಗೂ ಬೇಡವಾದ ಮೋದಿಯನ್ನು ಮುಂದಿಟ್ಟುಕೊಂಡು ಯುದ್ಧಕ್ಕೆ ಹೋದರೆ ಸೋಲು ಖಚಿತ ಎನ್ನುವ ಅಭಿಪ್ರಾಯಕ್ಕೆ ಅದು ಬಂದಂತಿದೆ.
ಒಂದುಕಡೆ, ಕಾಂಗ್ರೆಸ್ ಮತ್ತು ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ಮಹಾಘಟಬಂಧನ್ ದಿನದಿಂದ ದಿನಕ್ಕೆ ತನ್ನ ಶಕ್ತಿಯನ್ನು ಹಿಗ್ಗಿಸಿಕೊಳ್ಳುತ್ತಾ ಮೋದಿ ಮತ್ತು ಶಾ ತತ್ತರಿಸುವಂತೆ ಮಾಡುತ್ತಿದ್ದರೆ, ಮತ್ತೊಂದೆಡೆ ಆಂತರಿಕ ಲೆಕ್ಕಾಚಾರಗಳೂ ಅವರನ್ನು ಕಂಗಾಲಾಗಿಸುತ್ತಿವೆ.
ರಿಜರ್ವ್ ಬ್ಯಾಂಕಿನ ಗೌರ್ನರ್ ದಿಢೀರ್ ರಾಜೀನಾಮೆ ನೀಡಿದ್ದು, ಯೋಜನಾ ಆಯೋಗ ರದ್ದು ಮಾಡಿ ಮೋದಿಯವರು ರಚಿಸಿದ ನೀತಿ ಆಯೋಗ ನಿಷ್ಕ್ರಿಯವಾಗಿ ನಗೆಪಾಟಲಿಗೆ ಈಡಾಗಿರುವುದು, ಒಬ್ಬೊಬ್ಬರಾಗಿ ಪ್ರಧಾನಿ ಆರ್ಥಿಕ ಸಲಹೆಗಾರರು ಜಾಗ ಖಾಲಿ ಮಾಡುತ್ತಿರುವುದೆಲ್ಲ ಮೋದಿ ಒಬ್ಬ ಆಡಳಿತಗಾರನಾಗಿಯೂ ವೈಫಲ್ಯ ಕಂಡಿರೋದನ್ನು ಸಾಬೀತು ಮಾಡುತ್ತಿವೆ. ಇವೆಲ್ಲ ಜನರಿಗೆ ಅರ್ಥವಾಗದೆ ಹೋದರೂ ಕಾಳಧನ ತಂದು ಪ್ರತಿಯೊಬ್ಬರಿಗೂ 15 ಲಕ್ಷ ಕೊಡ್ತೀನಿ ಅಂದಿದ್ದು, ಅಗತ್ಯ ಬೆಲೆಗಳನ್ನು ಇಳಿಸಿ ಅಚ್ಚೇ ದಿನ್ ಮಾಡ್ತೀನಿ ಅಂದಿದ್ದು, ರೈತರ ಕಷ್ಟಗಳಿಗೆ ತಿರುಗಿ ನೋಡದಿದ್ದುದು ಇವೆಲ್ಲವೂ ಮೋದಿಯ ಮಾತು ಜಾಸ್ತಿ ಸಾಧನೆ ಶೂನ್ಯ ಎಂಬುದನ್ನು ಜನರಿಗೆ ಅರ್ಥ ಮಾಡಿಸಿವೆ. ಮೋದಿಗೆ ಮತದಾರರು ತಕ್ಕ ಪಾಠ ಕಲಿಸುವುದು ಅನುಮಾನವಿಲ್ಲ ಎಂಬುದು ಅರ್ಥವಾದ ಮೇಲೂ ಸಂಘ ಪರಿವಾರವೇಕೆ ಅವರನ್ನು ಮುದ್ದಾಡೀತು…?
ಮುಳುಗು ದೋಣಿ ಮೋದಿಯೂ ನಾಜೂಕು ನಾವಿಕ ಸಂಘವೂ
5 ರಾಜ್ಯಗಳ ಚುನಾವಣೆಯಲ್ಲಿ ಸೋಲುಂಡ ಭಾರತೀಯ ಜನತಾ ಪಕ್ಷ ಅರ್ಥಾತ್ ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೋಡಿ ಕೋಮಾ ತಲುಪಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಮಂತ್ರಿ ಮೋದಿಯ ಭವಿಷ್ಯವನ್ನು ತೀರ್ಮಾನಿಸುವಲ್ಲಿ ಈಗ ನಡೆದ ಚುನಾವಣೆಗಳು ನಿರ್ಣಾಯಕವಾಗಿದ್ದವು. ಜನರಿಗೆ ಮೋದಿ ಬಗೆಗೆ ಭ್ರಮಾನಿರಸನ ಆಗಿರುವುದರ ಮುನ್ಸೂಚನೆ ಇದರಿಂದ ಸಿಕ್ಕಂತಾಗಿದೆ.
ಜನಸಾಮಾನ್ಯರು ಆರೆಸ್ಸೆಸ್ ಅನ್ನು ಜನವಿರೋಧಿ ಸಂಸ್ಥೆ, ಹಿಂದೂತ್ವ ಪ್ರತಿಪಾದಕ ಸಂಸ್ಥೆ ಎಂಬ ಸಂಕುಚಿತ ಅರ್ಥದಲ್ಲಿ ಭಾವಿಸುತ್ತಿರುವುದು ಸ್ವತಃ ಸಂಘದ ಮುಖ್ಯಸ್ಥರಿಗೇ ಮನವರಿಕೆಯಾಗಿರುವುದರಿಂದ ಇನ್ಮುಂದೆ ತಮ್ಮ ಸಂಘಟನೆಗೆ ಭವಿಷ್ಯವಿಲ್ಲವೆಂದು ತಿಳಿದು ಸ್ಥಾಪಕ-ಅಧ್ಯಕ್ಷ ಹೆಡ್ಗೇವಾರರು ಬರೆದ ಪಕ್ಷದ ಸಂವಿಧಾನವನ್ನೇ ಪುನರ್‍ರಚಿಸಲು ತೀರ್ಮಾನ ಕೈಗೊಂಡಂತಿದೆ. ಅದಕ್ಕಾಗೆ ತಮ್ಮ ಪಕ್ಷದ ಸಿದ್ಧಾಂತಕ್ಕೆ ಒಗ್ಗದಿದ್ದರೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ತಮ್ಮ ಸಮಾರಂಭಕ್ಕೆ ಆಹ್ವಾನಿಸುವ ಮತ್ತು ಕಾಂಗ್ರೆಸ್ ನಾಯಕ, ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರನ್ನು ಬೈಠಕ್‍ಗೆ ಕರೆಸುವಂತಹ ನಾಟಕಗಳಿಗೆ ಮುಂದಾಗುತ್ತಿದೆ. ಅಂದರೆ ತನ್ನ ಸಿದ್ದಾಂತಗಳಿಂದ ಜನರನ್ನು ತಲುಪಬಹುದೇ ವಿನಾಃ ಹೆಚ್ಚು ದಿನ ಜನಮಾನಸದಲ್ಲಿ ಉಳಿಯಲಾಗದು ಎಂಬುದು ಅರ್ಥವಾಗಿ ಹೀಗೆಲ್ಲಾ ಮಾಡುತ್ತಿದ್ದಾರಾ? ಸ್ಪಷ್ಟವಿಲ್ಲ. ಆದರೆ, ಮೋದಿ ಸವಕಲು ನಾಣ್ಯವಾಗುತ್ತಿರುವುದು ಖಾತ್ರಿಯಾದ ಮೇಲೆ ಒಂದು ರಾಜಕೀಯ ಆಟ ಕಟ್ಟಲು ಆರೆಸ್ಸೆಸ್ ಚಾಣಕ್ಯರು ಹೆಣಗಾಡುತ್ತಿರುವುದು ಮಾತ್ರ ಸತ್ಯ.
ಮೋದಿ ಮತ್ತು ಅಮಿತ್ ಶಾ ಜೋಡಿಯನ್ನು ಪಂಚರಾಜ್ಯ ಫಲಿತಾಂಶಗಳಿಗಿಂತಲೂ ಹೆಚ್ಚು ಕಂಗಾಲು ಮಾಡಿರುವುದು ಸಂಘ ಪರಿವಾರದ ಆಂತರಿಕ ಬೆಳವಣಿಗೆಗಳು. ಸ್ಥಾಪನೆಯ ದಿನದಿಂದಲೂ ವಿಶ್ವ ಹಿಂದೂ ಪರಿಷತ್ತಿನ ಅಧ್ಯಕ್ಷನಾಗಿದ್ದ ತನ್ನನ್ನು ಆ ಸ್ಥಾನದಿಂದ ಕಿತ್ತೊಗೆದುದಕ್ಕೆ ತೊಗಾಡಿಯ ಆರ್.ಎಸ್.ಎಸ್, ಮೋದಿ ವಿರುದ್ಧವೇ ವ್ಯಗ್ರರಾಗಿದ್ದಾರೆ. ಆರೆಸ್ಸೆಸ್ ತನ್ನನ್ನು ತಾನು ಒಂದು ರಾಜಕೀಯೇತರ ಸಂಘಟನೆಯಾಗಿ ಗುರುತಿಸಿಕೊಂಡರು ಅದರ ಮೂಲ ಅಜೆಂಡಾ ರಾಜಕೀಯವೇ ಅನ್ನೋದು ಈಗ ಗೊಂದಲದ ವಿಷಯವೇನಲ್ಲ. ಬಿಜೆಪಿ ಅದರ ರಾಜಕೀಯ ಮುಖವಾಡ ಅಷ್ಟೆ. ಆ ಮುಖವಾಡವನ್ನು ಹೇಗೆ ಬಳಸಿಕೊಳ್ಳಬೇಕು, ಯಾರಿಂದ ದುಡಿಸಿಕೊಳ್ಳಬೇಕು ಎಂಬುದನ್ನು ಅದು ಚೆನ್ನಾಗಿ ಅರ್ಥ ಮಾಡಿಕೊಂಡಿದೆ. ಜೀವದ್ರೋಹಿ ರಥಯಾತ್ರೆಯ ಮೂಲಕ ಬಿಜೆಪಿಗೆ ಕೋಮುಧ್ರುವೀಕರಣ ಮಾಡಿಕೊಟ್ಟರೂ ಅಡ್ವಾಣಿಯವರಿಗೆ ಬದಲು ವಾಜಪೇಯಿಯನ್ನು ಪ್ರಧಾನಿಯಾಗಿ ಮುಂದಿಟ್ಟು ಮೈತ್ರಿಕೂಟದ ಸರ್ಕಾರ ರಚಿಸಿದ್ದಾಗಲಿ, ಕೊನೆಗೆ ಅದೇ ಅಡ್ವಾಣಿಯವರನ್ನೇ ಹೀನಾಯವಾಗಿ ಮೂಲೆಗುಂಪು ಮಾಡಿ ಮೋದಿಯವರನ್ನು ಬೆಳೆಸಿದ್ದಾಗಲಿ ಎಲ್ಲವೂ ಆರೆಸ್ಸೆಸ್‍ನ ರಾಜಕೀಯ ಆಟಗಳೇ ಆಗಿವೆ.
ಯಾರನ್ನು, ಯಾವಾಗ, ಹೇಗೆ `ಮಟ್ಟ’ ಹಾಕಬೇಕೆನ್ನುವ ಸೂತ್ರ ಆರೆಸ್ಸೆಸ್ ಕೈಯಲ್ಲಿರುವುದೇ ಇವತ್ತು ಮೋದಿ-ಶಾ ಜೋಡಿಗೆ ತಲೆನೋವಾಗಲಿದೆ. ಇಷ್ಟು ದಿನ ಹಲವು ಕಾರಣಗಳಿಂದ, ಹತ್ತಾರು ಕುತಂತ್ರಗಳಿಂದ ಮೋದಿ ಈ ದೇಶದಲ್ಲಿ ತನ್ನದೇ ಆದ ಹೈಪ್ ಸೃಷ್ಟಿಸಿಕೊಂಡಿದ್ದರು. ಸಂಘ ಪರಿವಾರಕ್ಕೆ ಆ ಹೈಪ್ ಬೇಕಾಗಿತ್ತು. ನೀರೆರೆದು ಪೋಷಿಸಿತ್ತು. ಸಂಘದ ಈ ಭರಪೂರ ಬೆಂಬಲ ಇದ್ದುದರಿಂದಲೇ ಮೋದಿ ಬಿಜೆಪಿಯೊಳಗೆ ಅಷ್ಟು ಬಲಿಷ್ಠವಾಗಿ, ಹಿರಿಯರನ್ನೇ ನಗಣ್ಯವಾಗಿಸುವಷ್ಟರಮಟ್ಟಿಗೆ ಬೆಳೆಯಲು ಸಾಧ್ಯವಾದದ್ದು. ಆದರೆ ಈಗ ಅದೇ ಮೋದಿಯ ವರ್ಚಸ್ಸು ಕುಸಿಯುತ್ತಿರುವುದನ್ನು ಪಂಚರಾಜ್ಯ ಚುನಾವಣೆಗಳು ಸಾಬೀತು ಮಾಡಿವೆ. ಇನ್ನು ಮೋದಿಯಂತಹ ಮುಳುಗುದೋಣಿಯನ್ನು ನೆಚ್ಚಿಕೊಂಡು ಕೂರುವಷ್ಟು ಸಂಘದ ಚಾಣಕ್ಯರು ದಡ್ಡರೇನಲ್ಲ. ಪರ್ಯಾಯಕ್ಕೆ ಒಳಗೊಳಗೇ ಸಿದ್ಧ ಮಾಡಿಕೊಳ್ಳತೊಡಗುತ್ತಾರೆ. ಮೋದಿಗೆ ಈ ವಾರ್ನಿಂಗ್ ಸಿಕ್ಕಿರುವುದರಿಂದಲೇ ತನ್ನ ಹಿಂಬಾಲಕರ ಮೂಲಕ ಶತಾಯಗತಾಯ ಮತ್ತೊಮ್ಮೆ ಮೋದಿಯನ್ನು ಪ್ರಧಾನಿ ಮಾಡಲೇಬೇಕು ಎನ್ನುವ ಲಜ್ಜೆಗೆಟ್ಟ ಅಭಿಯಾನಗಳನ್ನೆಲ್ಲ ಶುರು ಮಾಡಿಸಿದ್ದಾರೆ. ಇದು ಮುಳುಗುವ ದೋಣಿಯನ್ನು ಕೊನೆಯದಾಗಿ ಸರಿಪಡಿಸುವ ಒಂದು ಪ್ರಯತ್ನವಷ್ಟೆ. ಅದು ಯಶ ಕಾಣದು ಎಂದು ಗೊತ್ತಾದ ಕ್ಷಣವೇ ಮೋದಿಯವರು ಮತ್ತೊಬ್ಬ ಅಡ್ವಾಣಿಯಾಗಲಿದ್ದಾರೆ.
ತಾವು ಬೇರೆಬೇರೆ ಎಂದು ಎಷ್ಟು ಬೊಬ್ಬೆ ಹೊಡೆದುಕೊಂಡರೂ ಬಿಜೆಪಿ ಮತ್ತು ಸಂಘ ಪರಿವಾರವನ್ನು ಪ್ರತ್ಯೇಕಿಸಿ ನೋಡಲು ಸಾಧ್ಯವಿಲ್ಲ. ಅಷ್ಟರಮಟ್ಟಿಗೆ ಅವು ಬೆಸೆದುಕೊಂಡ ರಚನೆಗಳು. ಆದರೆ ಇದೇ ಮಾತನ್ನು ಮೋದಿ ಮತ್ತು ಸಂಘ ಪರಿವಾರಕ್ಕೆ ಅನ್ವಯಿಸಲಾಗದು. ಮೋದಿಗೆ ಸಂಘ ಅನಿವಾರ್ಯವೇ ಹೊರತು, ಸಂಘಕ್ಕೆ ಮೋದಿ ಅನಿವಾರ್ಯವಲ್ಲ. ಆದರೆ ಮಾತುಗಾರ ಮೋದಿಯವರು ಈ ಸೂಕ್ಷ್ಮವನ್ನು ಅರ್ಥ ಮಾಡಿಕೊಂಡಂತೆ ಕಾಣಿಸುವುದಿಲ್ಲ. ಅದು ಅರ್ಥವಾಗುವ ಕಾಲವೂ ದೂರವಿಲ್ಲ.
2014ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷ ದೇಶದ ಬಹುಭಾಗದಲ್ಲಿ ಪ್ರಚಂಡ ಜಯ ಗಳಿಸಿದ ಅನಂತರ ಆರ್‍ಎಸ್‍ಎಸ್ ಪರಿವಾರಗಳ ಸೊಕ್ಕು ಹೆಚ್ಚಾದದ್ದು ಸುಳ್ಳಲ್ಲ. ಮುಸ್ಲಿಂ ವಿರೋಧಿ ಮನಸ್ಥಿತಿಯ ಅಮಿತ್ ಶಾ ಮತ್ತು ಮೋದಿ ಜೋಡಿ ಕಾಂಗ್ರೆಸ್ಸನ್ನು ಹೇಳ ಹೆಸರಿಲ್ಲದಂತೆ ಮಾಡುತ್ತೇವೆ, ಭಾರತವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಅಂತ ಹೊರಟದ್ದು ಕೂಡಾ ಈ ಸೊಕ್ಕಿನಿಂದಲೇ. ಇಂಥಾ ಸೊಕ್ಕಿನ ಮಾತುಗಳು ಜನತೆಗೆ ಹಿಡಿಸಲಿಲ್ಲ ಎಂದು ಆರ್‍ಎಸ್‍ಎಸ್ ಕಾರ್ಯಕರ್ತರೂ ಆಗಿದ್ದ ಹಿರಿಯ ಪತ್ರಕರ್ತರೊಬ್ಬರು ಅಭಿಪ್ರಾಯ ಪಡುತ್ತಾರೆ.
ನರೇಂದ್ರಮೋದಿಯವರು ಮಂತ್ರಿಮಂಡಲದ ಯಾವ ಮಂತ್ರಿಯೂ ಸೊಲ್ಲೆತ್ತದಂತೆ ತಾನೇ ಏಕಮೇವಾದ್ವಿತೀಯ ನಾಯಕನಂತೆ ಬೆಳೆಯಲು ಯತ್ನಿಸಿದ್ದು ಕೂಡಾ ಪ್ರಜಾಪ್ರಭುತ್ವದ ತಂತುಗಳು ಬೆಸೆದುಹೋಗಿರುವ ನಮ್ಮ ದೇಶದ ಜನರಿಗೆ ಇಷ್ಟವಾಗಲಿಲ್ಲ. ಬಿಜೆಪಿಯ ಮಟ್ಟಿಗೆ ಸಮರ್ಥೆ ಎಂದು ಕೊಂಡಾಡಿಸಿಕೊಂಡಿದ್ದ ಸುಷ್ಮಾ ಸ್ವರಾಜ್‍ರಂಥ ವಿದೇಶಾಂಗ ಸಚಿವೆ ಇದ್ದಾಗ್ಯೂ ವಿದೇಶ ಪ್ರವಾಸ, ವಿದೇಶಾಂಗ ನೀತಿ, ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ತಾನೇ ವಿದೇಶಾಂಗ ಮಂತ್ರಿಯಂತೆ ಬಿಂಬಿಸಿಕೊಳ್ಳಲು ಮೋದಿ ಸತತ ಪ್ರಯತ್ನ ಮಾಡಿದ್ದು ಬಿಜೆಪಿಯೊಳಗೇ ಒಂದು ಗುಂಪಿನಿಂದ ಅವರನ್ನು ದೂರ ಮಾಡುತ್ತಾ ಬಂತು.
ಮೋದಿ ಇತರೆ ನಾಯಕರೊಂದಿಗೆ ಸೃಷ್ಟಿಸಿಕೊಳ್ಳುತ್ತಿರುವ ಅಂತರ ಕೇವಲ ಮೇಲ್‍ಸ್ತರದ ನಾಯಕರಿಗೆ ಮಾತ್ರ ಸೀಮಿತವಾಗಿಲ್ಲ. ಕಾರ್ಯಕರ್ತರು ಮತ್ತು ನಾಯಕರುಗಳ ನಡುವೆಯೂ ಬಿಜೆಪಿಯಲ್ಲಿ ಈಗ ಅಂತದ್ದೊಂದು ಅಂತರ ಸೃಷ್ಟಿಯಾಗುತ್ತಿದೆ. ಚುನಾವಣಾ ಸಮಾವೇಶಗಳಷ್ಟೇ ಈಗ ಮೋದಿ ಮತ್ತು ಇತರೆ ನಾಯಕರ ನಡುವೆ ಇರುವ ಸಂಪರ್ಕ ಸೇತುಗಳು. ಯಥಾ ರಾಜ ತಥಾ ಪ್ರಜಾ ಎನ್ನುವಂತೆ ಉಳಿಕೆ ಎರಡನೇ ಹಂತದ, ಮೂರನೇ ಹಂತದ ಹಾಗೂ ಸ್ಥಳೀಯ ನಾಯಕರುಗಳೂ ತಮ್ಮ ಕಾರ್ಯಕರ್ತರಿಂದ ದೂರವೇ ಉಳಿಯುತ್ತಿದ್ದಾರೆ.
ಕಾಲಾಳುಗಳ ಪಡೆ ಮತ್ತು ದಂಡನಾಯಕನ ಮಧ್ಯೆ ಈಗ ಕಂದಕ ಏರ್ಪಟ್ಟಿದೆ. ಬಿಜೆಪಿಯ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಹಾಗೂ ಸಂಘ ಪರಿವಾರದ ಅಂಗಸಂಸ್ಥೆಗಳಾದ ಭಾರತೀಯ ಮಜ್ದೂರ್ ಸಂಘ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್, ದುರ್ಗಾವಾಹಿನಿ ಮೊದಲಾದ ಪೂರಕ ಸಂಸ್ಥೆಗಳ ಸಂಪರ್ಕಸೇತು ಈಗ ಮುರಿದು ಬಿದ್ದಿದೆ.
ಈ ಸೂಕ್ಷ್ಮ ಬೆಳವಣಿಗೆ ಹೊರಜಗತ್ತಿಗೆ ಅಷ್ಟು ಸುಲಭವಾಗಿ ಕಾಣಲು ಸಾಧ್ಯವಿಲ್ಲ. ಯಾಕೆಂದರೆ ಮೀಡಿಯಾಗಳು ಮೋದಿಯವರ ಕಬ್ಜಾದಲ್ಲೇ ಇರುವುದರಿಂದ ಅವರಿಗೆ ಡ್ಯಾಮೇಜ್ ಮಾಡಬಹುದಾದ ಇಂತಹ ಸಂಗತಿಗಳನ್ನು ಚರ್ಚಿಸುವ ಗೋಜಿಗೇ ಹೋಗುವುದಿಲ್ಲ. ಬಿಜೆಪಿ ಮತ್ತು ಸಂಘ ಪರಿವಾರದೊಳಗೆ ಎಂಥಾ ಬಿರುಕೂ ಇಲ್ಲ ಎಂಬಂತೆ ಕಾಣಿಸಲಾಗುತ್ತಿದೆ. ಆದರೆ ಒಳಗೇ ಇರುವ ಆರೆಸ್ಸೆಸ್ ಇದರತ್ತ ಕುರುಡಾಗಿರಲು ಸಾಧ್ಯವಿಲ್ಲ. ಕಾರ್ಯಕರ್ತರಿಂದಲೂ ದೂರಾಗಿ, ಜನರಿಗೂ ಬೇಡವಾದ ಮೋದಿಯನ್ನು ಮುಂದಿಟ್ಟುಕೊಂಡು ಯುದ್ಧಕ್ಕೆ ಹೋದರೆ ಸೋಲು ಖಚಿತ ಎನ್ನುವ ಅಭಿಪ್ರಾಯಕ್ಕೆ ಅದು ಬಂದಂತಿದೆ.
ಒಂದುಕಡೆ, ಕಾಂಗ್ರೆಸ್ ಮತ್ತು ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ಮಹಾಘಟಬಂಧನ್ ದಿನದಿಂದ ದಿನಕ್ಕೆ ತನ್ನ ಶಕ್ತಿಯನ್ನು ಹಿಗ್ಗಿಸಿಕೊಳ್ಳುತ್ತಾ ಮೋದಿ ಮತ್ತು ಶಾ ತತ್ತರಿಸುವಂತೆ ಮಾಡುತ್ತಿದ್ದರೆ, ಮತ್ತೊಂದೆಡೆ ಆಂತರಿಕ ಲೆಕ್ಕಾಚಾರಗಳೂ ಅವರನ್ನು ಕಂಗಾಲಾಗಿಸುತ್ತಿವೆ.
ರಿಜರ್ವ್ ಬ್ಯಾಂಕಿನ ಗೌರ್ನರ್ ದಿಢೀರ್ ರಾಜೀನಾಮೆ ನೀಡಿದ್ದು, ಯೋಜನಾ ಆಯೋಗ ರದ್ದು ಮಾಡಿ ಮೋದಿಯವರು ರಚಿಸಿದ ನೀತಿ ಆಯೋಗ ನಿಷ್ಕ್ರಿಯವಾಗಿ ನಗೆಪಾಟಲಿಗೆ ಈಡಾಗಿರುವುದು, ಒಬ್ಬೊಬ್ಬರಾಗಿ ಪ್ರಧಾನಿ ಆರ್ಥಿಕ ಸಲಹೆಗಾರರು ಜಾಗ ಖಾಲಿ ಮಾಡುತ್ತಿರುವುದೆಲ್ಲ ಮೋದಿ ಒಬ್ಬ ಆಡಳಿತಗಾರನಾಗಿಯೂ ವೈಫಲ್ಯ ಕಂಡಿರೋದನ್ನು ಸಾಬೀತು ಮಾಡುತ್ತಿವೆ. ಇವೆಲ್ಲ ಜನರಿಗೆ ಅರ್ಥವಾಗದೆ ಹೋದರೂ ಕಾಳಧನ ತಂದು ಪ್ರತಿಯೊಬ್ಬರಿಗೂ 15 ಲಕ್ಷ ಕೊಡ್ತೀನಿ ಅಂದಿದ್ದು, ಅಗತ್ಯ ಬೆಲೆಗಳನ್ನು ಇಳಿಸಿ ಅಚ್ಚೇ ದಿನ್ ಮಾಡ್ತೀನಿ ಅಂದಿದ್ದು, ರೈತರ ಕಷ್ಟಗಳಿಗೆ ತಿರುಗಿ ನೋಡದಿದ್ದುದು ಇವೆಲ್ಲವೂ ಮೋದಿಯ ಮಾತು ಜಾಸ್ತಿ ಸಾಧನೆ ಶೂನ್ಯ ಎಂಬುದನ್ನು ಜನರಿಗೆ ಅರ್ಥ ಮಾಡಿಸಿವೆ. ಮೋದಿಗೆ ಮತದಾರರು ತಕ್ಕ ಪಾಠ ಕಲಿಸುವುದು ಅನುಮಾನವಿಲ್ಲ ಎಂಬುದು ಅರ್ಥವಾದ ಮೇಲೂ ಸಂಘ ಪರಿವಾರವೇಕೆ ಅವರನ್ನು ಮುದ್ದಾಡೀತು…?
ಮುಳುಗು ದೋಣಿ ಮೋದಿಯೂ ನಾಜೂಕು ನಾವಿಕ ಸಂಘವೂ
5 ರಾಜ್ಯಗಳ ಚುನಾವಣೆಯಲ್ಲಿ ಸೋಲುಂಡ ಭಾರತೀಯ ಜನತಾ ಪಕ್ಷ ಅರ್ಥಾತ್ ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೋಡಿ ಕೋಮಾ ತಲುಪಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಮಂತ್ರಿ ಮೋದಿಯ ಭವಿಷ್ಯವನ್ನು ತೀರ್ಮಾನಿಸುವಲ್ಲಿ ಈಗ ನಡೆದ ಚುನಾವಣೆಗಳು ನಿರ್ಣಾಯಕವಾಗಿದ್ದವು. ಜನರಿಗೆ ಮೋದಿ ಬಗೆಗೆ ಭ್ರಮಾನಿರಸನ ಆಗಿರುವುದರ ಮುನ್ಸೂಚನೆ ಇದರಿಂದ ಸಿಕ್ಕಂತಾಗಿದೆ.
ಜನಸಾಮಾನ್ಯರು ಆರೆಸ್ಸೆಸ್ ಅನ್ನು ಜನವಿರೋಧಿ ಸಂಸ್ಥೆ, ಹಿಂದೂತ್ವ ಪ್ರತಿಪಾದಕ ಸಂಸ್ಥೆ ಎಂಬ ಸಂಕುಚಿತ ಅರ್ಥದಲ್ಲಿ ಭಾವಿಸುತ್ತಿರುವುದು ಸ್ವತಃ ಸಂಘದ ಮುಖ್ಯಸ್ಥರಿಗೇ ಮನವರಿಕೆಯಾಗಿರುವುದರಿಂದ ಇನ್ಮುಂದೆ ತಮ್ಮ ಸಂಘಟನೆಗೆ ಭವಿಷ್ಯವಿಲ್ಲವೆಂದು ತಿಳಿದು ಸ್ಥಾಪಕ-ಅಧ್ಯಕ್ಷ ಹೆಡ್ಗೇವಾರರು ಬರೆದ ಪಕ್ಷದ ಸಂವಿಧಾನವನ್ನೇ ಪುನರ್‍ರಚಿಸಲು ತೀರ್ಮಾನ ಕೈಗೊಂಡಂತಿದೆ. ಅದಕ್ಕಾಗೆ ತಮ್ಮ ಪಕ್ಷದ ಸಿದ್ಧಾಂತಕ್ಕೆ ಒಗ್ಗದಿದ್ದರೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ತಮ್ಮ ಸಮಾರಂಭಕ್ಕೆ ಆಹ್ವಾನಿಸುವ ಮತ್ತು ಕಾಂಗ್ರೆಸ್ ನಾಯಕ, ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರನ್ನು ಬೈಠಕ್‍ಗೆ ಕರೆಸುವಂತಹ ನಾಟಕಗಳಿಗೆ ಮುಂದಾಗುತ್ತಿದೆ. ಅಂದರೆ ತನ್ನ ಸಿದ್ದಾಂತಗಳಿಂದ ಜನರನ್ನು ತಲುಪಬಹುದೇ ವಿನಾಃ ಹೆಚ್ಚು ದಿನ ಜನಮಾನಸದಲ್ಲಿ ಉಳಿಯಲಾಗದು ಎಂಬುದು ಅರ್ಥವಾಗಿ ಹೀಗೆಲ್ಲಾ ಮಾಡುತ್ತಿದ್ದಾರಾ? ಸ್ಪಷ್ಟವಿಲ್ಲ. ಆದರೆ, ಮೋದಿ ಸವಕಲು ನಾಣ್ಯವಾಗುತ್ತಿರುವುದು ಖಾತ್ರಿಯಾದ ಮೇಲೆ ಒಂದು ರಾಜಕೀಯ ಆಟ ಕಟ್ಟಲು ಆರೆಸ್ಸೆಸ್ ಚಾಣಕ್ಯರು ಹೆಣಗಾಡುತ್ತಿರುವುದು ಮಾತ್ರ ಸತ್ಯ.
ಮೋದಿ ಮತ್ತು ಅಮಿತ್ ಶಾ ಜೋಡಿಯನ್ನು ಪಂಚರಾಜ್ಯ ಫಲಿತಾಂಶಗಳಿಗಿಂತಲೂ ಹೆಚ್ಚು ಕಂಗಾಲು ಮಾಡಿರುವುದು ಸಂಘ ಪರಿವಾರದ ಆಂತರಿಕ ಬೆಳವಣಿಗೆಗಳು. ಸ್ಥಾಪನೆಯ ದಿನದಿಂದಲೂ ವಿಶ್ವ ಹಿಂದೂ ಪರಿಷತ್ತಿನ ಅಧ್ಯಕ್ಷನಾಗಿದ್ದ ತನ್ನನ್ನು ಆ ಸ್ಥಾನದಿಂದ ಕಿತ್ತೊಗೆದುದಕ್ಕೆ ತೊಗಾಡಿಯ ಆರ್.ಎಸ್.ಎಸ್, ಮೋದಿ ವಿರುದ್ಧವೇ ವ್ಯಗ್ರರಾಗಿದ್ದಾರೆ. ಆರೆಸ್ಸೆಸ್ ತನ್ನನ್ನು ತಾನು ಒಂದು ರಾಜಕೀಯೇತರ ಸಂಘಟನೆಯಾಗಿ ಗುರುತಿಸಿಕೊಂಡರು ಅದರ ಮೂಲ ಅಜೆಂಡಾ ರಾಜಕೀಯವೇ ಅನ್ನೋದು ಈಗ ಗೊಂದಲದ ವಿಷಯವೇನಲ್ಲ. ಬಿಜೆಪಿ ಅದರ ರಾಜಕೀಯ ಮುಖವಾಡ ಅಷ್ಟೆ. ಆ ಮುಖವಾಡವನ್ನು ಹೇಗೆ ಬಳಸಿಕೊಳ್ಳಬೇಕು, ಯಾರಿಂದ ದುಡಿಸಿಕೊಳ್ಳಬೇಕು ಎಂಬುದನ್ನು ಅದು ಚೆನ್ನಾಗಿ ಅರ್ಥ ಮಾಡಿಕೊಂಡಿದೆ. ಜೀವದ್ರೋಹಿ ರಥಯಾತ್ರೆಯ ಮೂಲಕ ಬಿಜೆಪಿಗೆ ಕೋಮುಧ್ರುವೀಕರಣ ಮಾಡಿಕೊಟ್ಟರೂ ಅಡ್ವಾಣಿಯವರಿಗೆ ಬದಲು ವಾಜಪೇಯಿಯನ್ನು ಪ್ರಧಾನಿಯಾಗಿ ಮುಂದಿಟ್ಟು ಮೈತ್ರಿಕೂಟದ ಸರ್ಕಾರ ರಚಿಸಿದ್ದಾಗಲಿ, ಕೊನೆಗೆ ಅದೇ ಅಡ್ವಾಣಿಯವರನ್ನೇ ಹೀನಾಯವಾಗಿ ಮೂಲೆಗುಂಪು ಮಾಡಿ ಮೋದಿಯವರನ್ನು ಬೆಳೆಸಿದ್ದಾಗಲಿ ಎಲ್ಲವೂ ಆರೆಸ್ಸೆಸ್‍ನ ರಾಜಕೀಯ ಆಟಗಳೇ ಆಗಿವೆ.
ಯಾರನ್ನು, ಯಾವಾಗ, ಹೇಗೆ `ಮಟ್ಟ’ ಹಾಕಬೇಕೆನ್ನುವ ಸೂತ್ರ ಆರೆಸ್ಸೆಸ್ ಕೈಯಲ್ಲಿರುವುದೇ ಇವತ್ತು ಮೋದಿ-ಶಾ ಜೋಡಿಗೆ ತಲೆನೋವಾಗಲಿದೆ. ಇಷ್ಟು ದಿನ ಹಲವು ಕಾರಣಗಳಿಂದ, ಹತ್ತಾರು ಕುತಂತ್ರಗಳಿಂದ ಮೋದಿ ಈ ದೇಶದಲ್ಲಿ ತನ್ನದೇ ಆದ ಹೈಪ್ ಸೃಷ್ಟಿಸಿಕೊಂಡಿದ್ದರು. ಸಂಘ ಪರಿವಾರಕ್ಕೆ ಆ ಹೈಪ್ ಬೇಕಾಗಿತ್ತು. ನೀರೆರೆದು ಪೋಷಿಸಿತ್ತು. ಸಂಘದ ಈ ಭರಪೂರ ಬೆಂಬಲ ಇದ್ದುದರಿಂದಲೇ ಮೋದಿ ಬಿಜೆಪಿಯೊಳಗೆ ಅಷ್ಟು ಬಲಿಷ್ಠವಾಗಿ, ಹಿರಿಯರನ್ನೇ ನಗಣ್ಯವಾಗಿಸುವಷ್ಟರಮಟ್ಟಿಗೆ ಬೆಳೆಯಲು ಸಾಧ್ಯವಾದದ್ದು. ಆದರೆ ಈಗ ಅದೇ ಮೋದಿಯ ವರ್ಚಸ್ಸು ಕುಸಿಯುತ್ತಿರುವುದನ್ನು ಪಂಚರಾಜ್ಯ ಚುನಾವಣೆಗಳು ಸಾಬೀತು ಮಾಡಿವೆ. ಇನ್ನು ಮೋದಿಯಂತಹ ಮುಳುಗುದೋಣಿಯನ್ನು ನೆಚ್ಚಿಕೊಂಡು ಕೂರುವಷ್ಟು ಸಂಘದ ಚಾಣಕ್ಯರು ದಡ್ಡರೇನಲ್ಲ. ಪರ್ಯಾಯಕ್ಕೆ ಒಳಗೊಳಗೇ ಸಿದ್ಧ ಮಾಡಿಕೊಳ್ಳತೊಡಗುತ್ತಾರೆ. ಮೋದಿಗೆ ಈ ವಾರ್ನಿಂಗ್ ಸಿಕ್ಕಿರುವುದರಿಂದಲೇ ತನ್ನ ಹಿಂಬಾಲಕರ ಮೂಲಕ ಶತಾಯಗತಾಯ ಮತ್ತೊಮ್ಮೆ ಮೋದಿಯನ್ನು ಪ್ರಧಾನಿ ಮಾಡಲೇಬೇಕು ಎನ್ನುವ ಲಜ್ಜೆಗೆಟ್ಟ ಅಭಿಯಾನಗಳನ್ನೆಲ್ಲ ಶುರು ಮಾಡಿಸಿದ್ದಾರೆ. ಇದು ಮುಳುಗುವ ದೋಣಿಯನ್ನು ಕೊನೆಯದಾಗಿ ಸರಿಪಡಿಸುವ ಒಂದು ಪ್ರಯತ್ನವಷ್ಟೆ. ಅದು ಯಶ ಕಾಣದು ಎಂದು ಗೊತ್ತಾದ ಕ್ಷಣವೇ ಮೋದಿಯವರು ಮತ್ತೊಬ್ಬ ಅಡ್ವಾಣಿಯಾಗಲಿದ್ದಾರೆ.
ತಾವು ಬೇರೆಬೇರೆ ಎಂದು ಎಷ್ಟು ಬೊಬ್ಬೆ ಹೊಡೆದುಕೊಂಡರೂ ಬಿಜೆಪಿ ಮತ್ತು ಸಂಘ ಪರಿವಾರವನ್ನು ಪ್ರತ್ಯೇಕಿಸಿ ನೋಡಲು ಸಾಧ್ಯವಿಲ್ಲ. ಅಷ್ಟರಮಟ್ಟಿಗೆ ಅವು ಬೆಸೆದುಕೊಂಡ ರಚನೆಗಳು. ಆದರೆ ಇದೇ ಮಾತನ್ನು ಮೋದಿ ಮತ್ತು ಸಂಘ ಪರಿವಾರಕ್ಕೆ ಅನ್ವಯಿಸಲಾಗದು. ಮೋದಿಗೆ ಸಂಘ ಅನಿವಾರ್ಯವೇ ಹೊರತು, ಸಂಘಕ್ಕೆ ಮೋದಿ ಅನಿವಾರ್ಯವಲ್ಲ. ಆದರೆ ಮಾತುಗಾರ ಮೋದಿಯವರು ಈ ಸೂಕ್ಷ್ಮವನ್ನು ಅರ್ಥ ಮಾಡಿಕೊಂಡಂತೆ ಕಾಣಿಸುವುದಿಲ್ಲ. ಅದು ಅರ್ಥವಾಗುವ ಕಾಲವೂ ದೂರವಿಲ್ಲ.
2014ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷ ದೇಶದ ಬಹುಭಾಗದಲ್ಲಿ ಪ್ರಚಂಡ ಜಯ ಗಳಿಸಿದ ಅನಂತರ ಆರ್‍ಎಸ್‍ಎಸ್ ಪರಿವಾರಗಳ ಸೊಕ್ಕು ಹೆಚ್ಚಾದದ್ದು ಸುಳ್ಳಲ್ಲ. ಮುಸ್ಲಿಂ ವಿರೋಧಿ ಮನಸ್ಥಿತಿಯ ಅಮಿತ್ ಶಾ ಮತ್ತು ಮೋದಿ ಜೋಡಿ ಕಾಂಗ್ರೆಸ್ಸನ್ನು ಹೇಳ ಹೆಸರಿಲ್ಲದಂತೆ ಮಾಡುತ್ತೇವೆ, ಭಾರತವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಅಂತ ಹೊರಟದ್ದು ಕೂಡಾ ಈ ಸೊಕ್ಕಿನಿಂದಲೇ. ಇಂಥಾ ಸೊಕ್ಕಿನ ಮಾತುಗಳು ಜನತೆಗೆ ಹಿಡಿಸಲಿಲ್ಲ ಎಂದು ಆರ್‍ಎಸ್‍ಎಸ್ ಕಾರ್ಯಕರ್ತರೂ ಆಗಿದ್ದ ಹಿರಿಯ ಪತ್ರಕರ್ತರೊಬ್ಬರು ಅಭಿಪ್ರಾಯ ಪಡುತ್ತಾರೆ.
ನರೇಂದ್ರಮೋದಿಯವರು ಮಂತ್ರಿಮಂಡಲದ ಯಾವ ಮಂತ್ರಿಯೂ ಸೊಲ್ಲೆತ್ತದಂತೆ ತಾನೇ ಏಕಮೇವಾದ್ವಿತೀಯ ನಾಯಕನಂತೆ ಬೆಳೆಯಲು ಯತ್ನಿಸಿದ್ದು ಕೂಡಾ ಪ್ರಜಾಪ್ರಭುತ್ವದ ತಂತುಗಳು ಬೆಸೆದುಹೋಗಿರುವ ನಮ್ಮ ದೇಶದ ಜನರಿಗೆ ಇಷ್ಟವಾಗಲಿಲ್ಲ. ಬಿಜೆಪಿಯ ಮಟ್ಟಿಗೆ ಸಮರ್ಥೆ ಎಂದು ಕೊಂಡಾಡಿಸಿಕೊಂಡಿದ್ದ ಸುಷ್ಮಾ ಸ್ವರಾಜ್‍ರಂಥ ವಿದೇಶಾಂಗ ಸಚಿವೆ ಇದ್ದಾಗ್ಯೂ ವಿದೇಶ ಪ್ರವಾಸ, ವಿದೇಶಾಂಗ ನೀತಿ, ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ತಾನೇ ವಿದೇಶಾಂಗ ಮಂತ್ರಿಯಂತೆ ಬಿಂಬಿಸಿಕೊಳ್ಳಲು ಮೋದಿ ಸತತ ಪ್ರಯತ್ನ ಮಾಡಿದ್ದು ಬಿಜೆಪಿಯೊಳಗೇ ಒಂದು ಗುಂಪಿನಿಂದ ಅವರನ್ನು ದೂರ ಮಾಡುತ್ತಾ ಬಂತು.
ಮೋದಿ ಇತರೆ ನಾಯಕರೊಂದಿಗೆ ಸೃಷ್ಟಿಸಿಕೊಳ್ಳುತ್ತಿರುವ ಅಂತರ ಕೇವಲ ಮೇಲ್‍ಸ್ತರದ ನಾಯಕರಿಗೆ ಮಾತ್ರ ಸೀಮಿತವಾಗಿಲ್ಲ. ಕಾರ್ಯಕರ್ತರು ಮತ್ತು ನಾಯಕರುಗಳ ನಡುವೆಯೂ ಬಿಜೆಪಿಯಲ್ಲಿ ಈಗ ಅಂತದ್ದೊಂದು ಅಂತರ ಸೃಷ್ಟಿಯಾಗುತ್ತಿದೆ. ಚುನಾವಣಾ ಸಮಾವೇಶಗಳಷ್ಟೇ ಈಗ ಮೋದಿ ಮತ್ತು ಇತರೆ ನಾಯಕರ ನಡುವೆ ಇರುವ ಸಂಪರ್ಕ ಸೇತುಗಳು. ಯಥಾ ರಾಜ ತಥಾ ಪ್ರಜಾ ಎನ್ನುವಂತೆ ಉಳಿಕೆ ಎರಡನೇ ಹಂತದ, ಮೂರನೇ ಹಂತದ ಹಾಗೂ ಸ್ಥಳೀಯ ನಾಯಕರುಗಳೂ ತಮ್ಮ ಕಾರ್ಯಕರ್ತರಿಂದ ದೂರವೇ ಉಳಿಯುತ್ತಿದ್ದಾರೆ.
ಕಾಲಾಳುಗಳ ಪಡೆ ಮತ್ತು ದಂಡನಾಯಕನ ಮಧ್ಯೆ ಈಗ ಕಂದಕ ಏರ್ಪಟ್ಟಿದೆ. ಬಿಜೆಪಿಯ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಹಾಗೂ ಸಂಘ ಪರಿವಾರದ ಅಂಗಸಂಸ್ಥೆಗಳಾದ ಭಾರತೀಯ ಮಜ್ದೂರ್ ಸಂಘ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್, ದುರ್ಗಾವಾಹಿನಿ ಮೊದಲಾದ ಪೂರಕ ಸಂಸ್ಥೆಗಳ ಸಂಪರ್ಕಸೇತು ಈಗ ಮುರಿದು ಬಿದ್ದಿದೆ.
ಈ ಸೂಕ್ಷ್ಮ ಬೆಳವಣಿಗೆ ಹೊರಜಗತ್ತಿಗೆ ಅಷ್ಟು ಸುಲಭವಾಗಿ ಕಾಣಲು ಸಾಧ್ಯವಿಲ್ಲ. ಯಾಕೆಂದರೆ ಮೀಡಿಯಾಗಳು ಮೋದಿಯವರ ಕಬ್ಜಾದಲ್ಲೇ ಇರುವುದರಿಂದ ಅವರಿಗೆ ಡ್ಯಾಮೇಜ್ ಮಾಡಬಹುದಾದ ಇಂತಹ ಸಂಗತಿಗಳನ್ನು ಚರ್ಚಿಸುವ ಗೋಜಿಗೇ ಹೋಗುವುದಿಲ್ಲ. ಬಿಜೆಪಿ ಮತ್ತು ಸಂಘ ಪರಿವಾರದೊಳಗೆ ಎಂಥಾ ಬಿರುಕೂ ಇಲ್ಲ ಎಂಬಂತೆ ಕಾಣಿಸಲಾಗುತ್ತಿದೆ. ಆದರೆ ಒಳಗೇ ಇರುವ ಆರೆಸ್ಸೆಸ್ ಇದರತ್ತ ಕುರುಡಾಗಿರಲು ಸಾಧ್ಯವಿಲ್ಲ. ಕಾರ್ಯಕರ್ತರಿಂದಲೂ ದೂರಾಗಿ, ಜನರಿಗೂ ಬೇಡವಾದ ಮೋದಿಯನ್ನು ಮುಂದಿಟ್ಟುಕೊಂಡು ಯುದ್ಧಕ್ಕೆ ಹೋದರೆ ಸೋಲು ಖಚಿತ ಎನ್ನುವ ಅಭಿಪ್ರಾಯಕ್ಕೆ ಅದು ಬಂದಂತಿದೆ.
ಒಂದುಕಡೆ, ಕಾಂಗ್ರೆಸ್ ಮತ್ತು ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ಮಹಾಘಟಬಂಧನ್ ದಿನದಿಂದ ದಿನಕ್ಕೆ ತನ್ನ ಶಕ್ತಿಯನ್ನು ಹಿಗ್ಗಿಸಿಕೊಳ್ಳುತ್ತಾ ಮೋದಿ ಮತ್ತು ಶಾ ತತ್ತರಿಸುವಂತೆ ಮಾಡುತ್ತಿದ್ದರೆ, ಮತ್ತೊಂದೆಡೆ ಆಂತರಿಕ ಲೆಕ್ಕಾಚಾರಗಳೂ ಅವರನ್ನು ಕಂಗಾಲಾಗಿಸುತ್ತಿವೆ.
ರಿಜರ್ವ್ ಬ್ಯಾಂಕಿನ ಗೌರ್ನರ್ ದಿಢೀರ್ ರಾಜೀನಾಮೆ ನೀಡಿದ್ದು, ಯೋಜನಾ ಆಯೋಗ ರದ್ದು ಮಾಡಿ ಮೋದಿಯವರು ರಚಿಸಿದ ನೀತಿ ಆಯೋಗ ನಿಷ್ಕ್ರಿಯವಾಗಿ ನಗೆಪಾಟಲಿಗೆ ಈಡಾಗಿರುವುದು, ಒಬ್ಬೊಬ್ಬರಾಗಿ ಪ್ರಧಾನಿ ಆರ್ಥಿಕ ಸಲಹೆಗಾರರು ಜಾಗ ಖಾಲಿ ಮಾಡುತ್ತಿರುವುದೆಲ್ಲ ಮೋದಿ ಒಬ್ಬ ಆಡಳಿತಗಾರನಾಗಿಯೂ ವೈಫಲ್ಯ ಕಂಡಿರೋದನ್ನು ಸಾಬೀತು ಮಾಡುತ್ತಿವೆ. ಇವೆಲ್ಲ ಜನರಿಗೆ ಅರ್ಥವಾಗದೆ ಹೋದರೂ ಕಾಳಧನ ತಂದು ಪ್ರತಿಯೊಬ್ಬರಿಗೂ 15 ಲಕ್ಷ ಕೊಡ್ತೀನಿ ಅಂದಿದ್ದು, ಅಗತ್ಯ ಬೆಲೆಗಳನ್ನು ಇಳಿಸಿ ಅಚ್ಚೇ ದಿನ್ ಮಾಡ್ತೀನಿ ಅಂದಿದ್ದು, ರೈತರ ಕಷ್ಟಗಳಿಗೆ ತಿರುಗಿ ನೋಡದಿದ್ದುದು ಇವೆಲ್ಲವೂ ಮೋದಿಯ ಮಾತು ಜಾಸ್ತಿ ಸಾಧನೆ ಶೂನ್ಯ ಎಂಬುದನ್ನು ಜನರಿಗೆ ಅರ್ಥ ಮಾಡಿಸಿವೆ. ಮೋದಿಗೆ ಮತದಾರರು ತಕ್ಕ ಪಾಠ ಕಲಿಸುವುದು ಅನುಮಾನವಿಲ್ಲ ಎಂಬುದು ಅರ್ಥವಾದ ಮೇಲೂ ಸಂಘ ಪರಿವಾರವೇಕೆ ಅವರನ್ನು ಮುದ್ದಾಡೀತು…?
ಮುಳುಗು ದೋಣಿ ಮೋದಿಯೂ ನಾಜೂಕು ನಾವಿಕ ಸಂಘವೂ
5 ರಾಜ್ಯಗಳ ಚುನಾವಣೆಯಲ್ಲಿ ಸೋಲುಂಡ ಭಾರತೀಯ ಜನತಾ ಪಕ್ಷ ಅರ್ಥಾತ್ ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೋಡಿ ಕೋಮಾ ತಲುಪಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಮಂತ್ರಿ ಮೋದಿಯ ಭವಿಷ್ಯವನ್ನು ತೀರ್ಮಾನಿಸುವಲ್ಲಿ ಈಗ ನಡೆದ ಚುನಾವಣೆಗಳು ನಿರ್ಣಾಯಕವಾಗಿದ್ದವು. ಜನರಿಗೆ ಮೋದಿ ಬಗೆಗೆ ಭ್ರಮಾನಿರಸನ ಆಗಿರುವುದರ ಮುನ್ಸೂಚನೆ ಇದರಿಂದ ಸಿಕ್ಕಂತಾಗಿದೆ.
ಜನಸಾಮಾನ್ಯರು ಆರೆಸ್ಸೆಸ್ ಅನ್ನು ಜನವಿರೋಧಿ ಸಂಸ್ಥೆ, ಹಿಂದೂತ್ವ ಪ್ರತಿಪಾದಕ ಸಂಸ್ಥೆ ಎಂಬ ಸಂಕುಚಿತ ಅರ್ಥದಲ್ಲಿ ಭಾವಿಸುತ್ತಿರುವುದು ಸ್ವತಃ ಸಂಘದ ಮುಖ್ಯಸ್ಥರಿಗೇ ಮನವರಿಕೆಯಾಗಿರುವುದರಿಂದ ಇನ್ಮುಂದೆ ತಮ್ಮ ಸಂಘಟನೆಗೆ ಭವಿಷ್ಯವಿಲ್ಲವೆಂದು ತಿಳಿದು ಸ್ಥಾಪಕ-ಅಧ್ಯಕ್ಷ ಹೆಡ್ಗೇವಾರರು ಬರೆದ ಪಕ್ಷದ ಸಂವಿಧಾನವನ್ನೇ ಪುನರ್‍ರಚಿಸಲು ತೀರ್ಮಾನ ಕೈಗೊಂಡಂತಿದೆ. ಅದಕ್ಕಾಗೆ ತಮ್ಮ ಪಕ್ಷದ ಸಿದ್ಧಾಂತಕ್ಕೆ ಒಗ್ಗದಿದ್ದರೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ತಮ್ಮ ಸಮಾರಂಭಕ್ಕೆ ಆಹ್ವಾನಿಸುವ ಮತ್ತು ಕಾಂಗ್ರೆಸ್ ನಾಯಕ, ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರನ್ನು ಬೈಠಕ್‍ಗೆ ಕರೆಸುವಂತಹ ನಾಟಕಗಳಿಗೆ ಮುಂದಾಗುತ್ತಿದೆ. ಅಂದರೆ ತನ್ನ ಸಿದ್ದಾಂತಗಳಿಂದ ಜನರನ್ನು ತಲುಪಬಹುದೇ ವಿನಾಃ ಹೆಚ್ಚು ದಿನ ಜನಮಾನಸದಲ್ಲಿ ಉಳಿಯಲಾಗದು ಎಂಬುದು ಅರ್ಥವಾಗಿ ಹೀಗೆಲ್ಲಾ ಮಾಡುತ್ತಿದ್ದಾರಾ? ಸ್ಪಷ್ಟವಿಲ್ಲ. ಆದರೆ, ಮೋದಿ ಸವಕಲು ನಾಣ್ಯವಾಗುತ್ತಿರುವುದು ಖಾತ್ರಿಯಾದ ಮೇಲೆ ಒಂದು ರಾಜಕೀಯ ಆಟ ಕಟ್ಟಲು ಆರೆಸ್ಸೆಸ್ ಚಾಣಕ್ಯರು ಹೆಣಗಾಡುತ್ತಿರುವುದು ಮಾತ್ರ ಸತ್ಯ.
ಮೋದಿ ಮತ್ತು ಅಮಿತ್ ಶಾ ಜೋಡಿಯನ್ನು ಪಂಚರಾಜ್ಯ ಫಲಿತಾಂಶಗಳಿಗಿಂತಲೂ ಹೆಚ್ಚು ಕಂಗಾಲು ಮಾಡಿರುವುದು ಸಂಘ ಪರಿವಾರದ ಆಂತರಿಕ ಬೆಳವಣಿಗೆಗಳು. ಸ್ಥಾಪನೆಯ ದಿನದಿಂದಲೂ ವಿಶ್ವ ಹಿಂದೂ ಪರಿಷತ್ತಿನ ಅಧ್ಯಕ್ಷನಾಗಿದ್ದ ತನ್ನನ್ನು ಆ ಸ್ಥಾನದಿಂದ ಕಿತ್ತೊಗೆದುದಕ್ಕೆ ತೊಗಾಡಿಯ ಆರ್.ಎಸ್.ಎಸ್, ಮೋದಿ ವಿರುದ್ಧವೇ ವ್ಯಗ್ರರಾಗಿದ್ದಾರೆ. ಆರೆಸ್ಸೆಸ್ ತನ್ನನ್ನು ತಾನು ಒಂದು ರಾಜಕೀಯೇತರ ಸಂಘಟನೆಯಾಗಿ ಗುರುತಿಸಿಕೊಂಡರು ಅದರ ಮೂಲ ಅಜೆಂಡಾ ರಾಜಕೀಯವೇ ಅನ್ನೋದು ಈಗ ಗೊಂದಲದ ವಿಷಯವೇನಲ್ಲ. ಬಿಜೆಪಿ ಅದರ ರಾಜಕೀಯ ಮುಖವಾಡ ಅಷ್ಟೆ. ಆ ಮುಖವಾಡವನ್ನು ಹೇಗೆ ಬಳಸಿಕೊಳ್ಳಬೇಕು, ಯಾರಿಂದ ದುಡಿಸಿಕೊಳ್ಳಬೇಕು ಎಂಬುದನ್ನು ಅದು ಚೆನ್ನಾಗಿ ಅರ್ಥ ಮಾಡಿಕೊಂಡಿದೆ. ಜೀವದ್ರೋಹಿ ರಥಯಾತ್ರೆಯ ಮೂಲಕ ಬಿಜೆಪಿಗೆ ಕೋಮುಧ್ರುವೀಕರಣ ಮಾಡಿಕೊಟ್ಟರೂ ಅಡ್ವಾಣಿಯವರಿಗೆ ಬದಲು ವಾಜಪೇಯಿಯನ್ನು ಪ್ರಧಾನಿಯಾಗಿ ಮುಂದಿಟ್ಟು ಮೈತ್ರಿಕೂಟದ ಸರ್ಕಾರ ರಚಿಸಿದ್ದಾಗಲಿ, ಕೊನೆಗೆ ಅದೇ ಅಡ್ವಾಣಿಯವರನ್ನೇ ಹೀನಾಯವಾಗಿ ಮೂಲೆಗುಂಪು ಮಾಡಿ ಮೋದಿಯವರನ್ನು ಬೆಳೆಸಿದ್ದಾಗಲಿ ಎಲ್ಲವೂ ಆರೆಸ್ಸೆಸ್‍ನ ರಾಜಕೀಯ ಆಟಗಳೇ ಆಗಿವೆ.
ಯಾರನ್ನು, ಯಾವಾಗ, ಹೇಗೆ `ಮಟ್ಟ’ ಹಾಕಬೇಕೆನ್ನುವ ಸೂತ್ರ ಆರೆಸ್ಸೆಸ್ ಕೈಯಲ್ಲಿರುವುದೇ ಇವತ್ತು ಮೋದಿ-ಶಾ ಜೋಡಿಗೆ ತಲೆನೋವಾಗಲಿದೆ. ಇಷ್ಟು ದಿನ ಹಲವು ಕಾರಣಗಳಿಂದ, ಹತ್ತಾರು ಕುತಂತ್ರಗಳಿಂದ ಮೋದಿ ಈ ದೇಶದಲ್ಲಿ ತನ್ನದೇ ಆದ ಹೈಪ್ ಸೃಷ್ಟಿಸಿಕೊಂಡಿದ್ದರು. ಸಂಘ ಪರಿವಾರಕ್ಕೆ ಆ ಹೈಪ್ ಬೇಕಾಗಿತ್ತು. ನೀರೆರೆದು ಪೋಷಿಸಿತ್ತು. ಸಂಘದ ಈ ಭರಪೂರ ಬೆಂಬಲ ಇದ್ದುದರಿಂದಲೇ ಮೋದಿ ಬಿಜೆಪಿಯೊಳಗೆ ಅಷ್ಟು ಬಲಿಷ್ಠವಾಗಿ, ಹಿರಿಯರನ್ನೇ ನಗಣ್ಯವಾಗಿಸುವಷ್ಟರಮಟ್ಟಿಗೆ ಬೆಳೆಯಲು ಸಾಧ್ಯವಾದದ್ದು. ಆದರೆ ಈಗ ಅದೇ ಮೋದಿಯ ವರ್ಚಸ್ಸು ಕುಸಿಯುತ್ತಿರುವುದನ್ನು ಪಂಚರಾಜ್ಯ ಚುನಾವಣೆಗಳು ಸಾಬೀತು ಮಾಡಿವೆ. ಇನ್ನು ಮೋದಿಯಂತಹ ಮುಳುಗುದೋಣಿಯನ್ನು ನೆಚ್ಚಿಕೊಂಡು ಕೂರುವಷ್ಟು ಸಂಘದ ಚಾಣಕ್ಯರು ದಡ್ಡರೇನಲ್ಲ. ಪರ್ಯಾಯಕ್ಕೆ ಒಳಗೊಳಗೇ ಸಿದ್ಧ ಮಾಡಿಕೊಳ್ಳತೊಡಗುತ್ತಾರೆ. ಮೋದಿಗೆ ಈ ವಾರ್ನಿಂಗ್ ಸಿಕ್ಕಿರುವುದರಿಂದಲೇ ತನ್ನ ಹಿಂಬಾಲಕರ ಮೂಲಕ ಶತಾಯಗತಾಯ ಮತ್ತೊಮ್ಮೆ ಮೋದಿಯನ್ನು ಪ್ರಧಾನಿ ಮಾಡಲೇಬೇಕು ಎನ್ನುವ ಲಜ್ಜೆಗೆಟ್ಟ ಅಭಿಯಾನಗಳನ್ನೆಲ್ಲ ಶುರು ಮಾಡಿಸಿದ್ದಾರೆ. ಇದು ಮುಳುಗುವ ದೋಣಿಯನ್ನು ಕೊನೆಯದಾಗಿ ಸರಿಪಡಿಸುವ ಒಂದು ಪ್ರಯತ್ನವಷ್ಟೆ. ಅದು ಯಶ ಕಾಣದು ಎಂದು ಗೊತ್ತಾದ ಕ್ಷಣವೇ ಮೋದಿಯವರು ಮತ್ತೊಬ್ಬ ಅಡ್ವಾಣಿಯಾಗಲಿದ್ದಾರೆ.
ತಾವು ಬೇರೆಬೇರೆ ಎಂದು ಎಷ್ಟು ಬೊಬ್ಬೆ ಹೊಡೆದುಕೊಂಡರೂ ಬಿಜೆಪಿ ಮತ್ತು ಸಂಘ ಪರಿವಾರವನ್ನು ಪ್ರತ್ಯೇಕಿಸಿ ನೋಡಲು ಸಾಧ್ಯವಿಲ್ಲ. ಅಷ್ಟರಮಟ್ಟಿಗೆ ಅವು ಬೆಸೆದುಕೊಂಡ ರಚನೆಗಳು. ಆದರೆ ಇದೇ ಮಾತನ್ನು ಮೋದಿ ಮತ್ತು ಸಂಘ ಪರಿವಾರಕ್ಕೆ ಅನ್ವಯಿಸಲಾಗದು. ಮೋದಿಗೆ ಸಂಘ ಅನಿವಾರ್ಯವೇ ಹೊರತು, ಸಂಘಕ್ಕೆ ಮೋದಿ ಅನಿವಾರ್ಯವಲ್ಲ. ಆದರೆ ಮಾತುಗಾರ ಮೋದಿಯವರು ಈ ಸೂಕ್ಷ್ಮವನ್ನು ಅರ್ಥ ಮಾಡಿಕೊಂಡಂತೆ ಕಾಣಿಸುವುದಿಲ್ಲ. ಅದು ಅರ್ಥವಾಗುವ ಕಾಲವೂ ದೂರವಿಲ್ಲ.
2014ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷ ದೇಶದ ಬಹುಭಾಗದಲ್ಲಿ ಪ್ರಚಂಡ ಜಯ ಗಳಿಸಿದ ಅನಂತರ ಆರ್‍ಎಸ್‍ಎಸ್ ಪರಿವಾರಗಳ ಸೊಕ್ಕು ಹೆಚ್ಚಾದದ್ದು ಸುಳ್ಳಲ್ಲ. ಮುಸ್ಲಿಂ ವಿರೋಧಿ ಮನಸ್ಥಿತಿಯ ಅಮಿತ್ ಶಾ ಮತ್ತು ಮೋದಿ ಜೋಡಿ ಕಾಂಗ್ರೆಸ್ಸನ್ನು ಹೇಳ ಹೆಸರಿಲ್ಲದಂತೆ ಮಾಡುತ್ತೇವೆ, ಭಾರತವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಅಂತ ಹೊರಟದ್ದು ಕೂಡಾ ಈ ಸೊಕ್ಕಿನಿಂದಲೇ. ಇಂಥಾ ಸೊಕ್ಕಿನ ಮಾತುಗಳು ಜನತೆಗೆ ಹಿಡಿಸಲಿಲ್ಲ ಎಂದು ಆರ್‍ಎಸ್‍ಎಸ್ ಕಾರ್ಯಕರ್ತರೂ ಆಗಿದ್ದ ಹಿರಿಯ ಪತ್ರಕರ್ತರೊಬ್ಬರು ಅಭಿಪ್ರಾಯ ಪಡುತ್ತಾರೆ.
ನರೇಂದ್ರಮೋದಿಯವರು ಮಂತ್ರಿಮಂಡಲದ ಯಾವ ಮಂತ್ರಿಯೂ ಸೊಲ್ಲೆತ್ತದಂತೆ ತಾನೇ ಏಕಮೇವಾದ್ವಿತೀಯ ನಾಯಕನಂತೆ ಬೆಳೆಯಲು ಯತ್ನಿಸಿದ್ದು ಕೂಡಾ ಪ್ರಜಾಪ್ರಭುತ್ವದ ತಂತುಗಳು ಬೆಸೆದುಹೋಗಿರುವ ನಮ್ಮ ದೇಶದ ಜನರಿಗೆ ಇಷ್ಟವಾಗಲಿಲ್ಲ. ಬಿಜೆಪಿಯ ಮಟ್ಟಿಗೆ ಸಮರ್ಥೆ ಎಂದು ಕೊಂಡಾಡಿಸಿಕೊಂಡಿದ್ದ ಸುಷ್ಮಾ ಸ್ವರಾಜ್‍ರಂಥ ವಿದೇಶಾಂಗ ಸಚಿವೆ ಇದ್ದಾಗ್ಯೂ ವಿದೇಶ ಪ್ರವಾಸ, ವಿದೇಶಾಂಗ ನೀತಿ, ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ತಾನೇ ವಿದೇಶಾಂಗ ಮಂತ್ರಿಯಂತೆ ಬಿಂಬಿಸಿಕೊಳ್ಳಲು ಮೋದಿ ಸತತ ಪ್ರಯತ್ನ ಮಾಡಿದ್ದು ಬಿಜೆಪಿಯೊಳಗೇ ಒಂದು ಗುಂಪಿನಿಂದ ಅವರನ್ನು ದೂರ ಮಾಡುತ್ತಾ ಬಂತು.
ಮೋದಿ ಇತರೆ ನಾಯಕರೊಂದಿಗೆ ಸೃಷ್ಟಿಸಿಕೊಳ್ಳುತ್ತಿರುವ ಅಂತರ ಕೇವಲ ಮೇಲ್‍ಸ್ತರದ ನಾಯಕರಿಗೆ ಮಾತ್ರ ಸೀಮಿತವಾಗಿಲ್ಲ. ಕಾರ್ಯಕರ್ತರು ಮತ್ತು ನಾಯಕರುಗಳ ನಡುವೆಯೂ ಬಿಜೆಪಿಯಲ್ಲಿ ಈಗ ಅಂತದ್ದೊಂದು ಅಂತರ ಸೃಷ್ಟಿಯಾಗುತ್ತಿದೆ. ಚುನಾವಣಾ ಸಮಾವೇಶಗಳಷ್ಟೇ ಈಗ ಮೋದಿ ಮತ್ತು ಇತರೆ ನಾಯಕರ ನಡುವೆ ಇರುವ ಸಂಪರ್ಕ ಸೇತುಗಳು. ಯಥಾ ರಾಜ ತಥಾ ಪ್ರಜಾ ಎನ್ನುವಂತೆ ಉಳಿಕೆ ಎರಡನೇ ಹಂತದ, ಮೂರನೇ ಹಂತದ ಹಾಗೂ ಸ್ಥಳೀಯ ನಾಯಕರುಗಳೂ ತಮ್ಮ ಕಾರ್ಯಕರ್ತರಿಂದ ದೂರವೇ ಉಳಿಯುತ್ತಿದ್ದಾರೆ.
ಕಾಲಾಳುಗಳ ಪಡೆ ಮತ್ತು ದಂಡನಾಯಕನ ಮಧ್ಯೆ ಈಗ ಕಂದಕ ಏರ್ಪಟ್ಟಿದೆ. ಬಿಜೆಪಿಯ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಹಾಗೂ ಸಂಘ ಪರಿವಾರದ ಅಂಗಸಂಸ್ಥೆಗಳಾದ ಭಾರತೀಯ ಮಜ್ದೂರ್ ಸಂಘ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್, ದುರ್ಗಾವಾಹಿನಿ ಮೊದಲಾದ ಪೂರಕ ಸಂಸ್ಥೆಗಳ ಸಂಪರ್ಕಸೇತು ಈಗ ಮುರಿದು ಬಿದ್ದಿದೆ.
ಈ ಸೂಕ್ಷ್ಮ ಬೆಳವಣಿಗೆ ಹೊರಜಗತ್ತಿಗೆ ಅಷ್ಟು ಸುಲಭವಾಗಿ ಕಾಣಲು ಸಾಧ್ಯವಿಲ್ಲ. ಯಾಕೆಂದರೆ ಮೀಡಿಯಾಗಳು ಮೋದಿಯವರ ಕಬ್ಜಾದಲ್ಲೇ ಇರುವುದರಿಂದ ಅವರಿಗೆ ಡ್ಯಾಮೇಜ್ ಮಾಡಬಹುದಾದ ಇಂತಹ ಸಂಗತಿಗಳನ್ನು ಚರ್ಚಿಸುವ ಗೋಜಿಗೇ ಹೋಗುವುದಿಲ್ಲ. ಬಿಜೆಪಿ ಮತ್ತು ಸಂಘ ಪರಿವಾರದೊಳಗೆ ಎಂಥಾ ಬಿರುಕೂ ಇಲ್ಲ ಎಂಬಂತೆ ಕಾಣಿಸಲಾಗುತ್ತಿದೆ. ಆದರೆ ಒಳಗೇ ಇರುವ ಆರೆಸ್ಸೆಸ್ ಇದರತ್ತ ಕುರುಡಾಗಿರಲು ಸಾಧ್ಯವಿಲ್ಲ. ಕಾರ್ಯಕರ್ತರಿಂದಲೂ ದೂರಾಗಿ, ಜನರಿಗೂ ಬೇಡವಾದ ಮೋದಿಯನ್ನು ಮುಂದಿಟ್ಟುಕೊಂಡು ಯುದ್ಧಕ್ಕೆ ಹೋದರೆ ಸೋಲು ಖಚಿತ ಎನ್ನುವ ಅಭಿಪ್ರಾಯಕ್ಕೆ ಅದು ಬಂದಂತಿದೆ.
ಒಂದುಕಡೆ, ಕಾಂಗ್ರೆಸ್ ಮತ್ತು ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ಮಹಾಘಟಬಂಧನ್ ದಿನದಿಂದ ದಿನಕ್ಕೆ ತನ್ನ ಶಕ್ತಿಯನ್ನು ಹಿಗ್ಗಿಸಿಕೊಳ್ಳುತ್ತಾ ಮೋದಿ ಮತ್ತು ಶಾ ತತ್ತರಿಸುವಂತೆ ಮಾಡುತ್ತಿದ್ದರೆ, ಮತ್ತೊಂದೆಡೆ ಆಂತರಿಕ ಲೆಕ್ಕಾಚಾರಗಳೂ ಅವರನ್ನು ಕಂಗಾಲಾಗಿಸುತ್ತಿವೆ.
ರಿಜರ್ವ್ ಬ್ಯಾಂಕಿನ ಗೌರ್ನರ್ ದಿಢೀರ್ ರಾಜೀನಾಮೆ ನೀಡಿದ್ದು, ಯೋಜನಾ ಆಯೋಗ ರದ್ದು ಮಾಡಿ ಮೋದಿಯವರು ರಚಿಸಿದ ನೀತಿ ಆಯೋಗ ನಿಷ್ಕ್ರಿಯವಾಗಿ ನಗೆಪಾಟಲಿಗೆ ಈಡಾಗಿರುವುದು, ಒಬ್ಬೊಬ್ಬರಾಗಿ ಪ್ರಧಾನಿ ಆರ್ಥಿಕ ಸಲಹೆಗಾರರು ಜಾಗ ಖಾಲಿ ಮಾಡುತ್ತಿರುವುದೆಲ್ಲ ಮೋದಿ ಒಬ್ಬ ಆಡಳಿತಗಾರನಾಗಿಯೂ ವೈಫಲ್ಯ ಕಂಡಿರೋದನ್ನು ಸಾಬೀತು ಮಾಡುತ್ತಿವೆ. ಇವೆಲ್ಲ ಜನರಿಗೆ ಅರ್ಥವಾಗದೆ ಹೋದರೂ ಕಾಳಧನ ತಂದು ಪ್ರತಿಯೊಬ್ಬರಿಗೂ 15 ಲಕ್ಷ ಕೊಡ್ತೀನಿ ಅಂದಿದ್ದು, ಅಗತ್ಯ ಬೆಲೆಗಳನ್ನು ಇಳಿಸಿ ಅಚ್ಚೇ ದಿನ್ ಮಾಡ್ತೀನಿ ಅಂದಿದ್ದು, ರೈತರ ಕಷ್ಟಗಳಿಗೆ ತಿರುಗಿ ನೋಡದಿದ್ದುದು ಇವೆಲ್ಲವೂ ಮೋದಿಯ ಮಾತು ಜಾಸ್ತಿ ಸಾಧನೆ ಶೂನ್ಯ ಎಂಬುದನ್ನು ಜನರಿಗೆ ಅರ್ಥ ಮಾಡಿಸಿವೆ. ಮೋದಿಗೆ ಮತದಾರರು ತಕ್ಕ ಪಾಠ ಕಲಿಸುವುದು ಅನುಮಾನವಿಲ್ಲ ಎಂಬುದು ಅರ್ಥವಾದ ಮೇಲೂ ಸಂಘ ಪರಿವಾರವೇಕೆ ಅವರನ್ನು ಮುದ್ದಾಡೀತು…?
ಮುಳುಗು ದೋಣಿ ಮೋದಿಯೂ ನಾಜೂಕು ನಾವಿಕ ಸಂಘವೂ
5 ರಾಜ್ಯಗಳ ಚುನಾವಣೆಯಲ್ಲಿ ಸೋಲುಂಡ ಭಾರತೀಯ ಜನತಾ ಪಕ್ಷ ಅರ್ಥಾತ್ ನರೇಂದ್ರ ಮೋದಿ ಮತ್ತು ಅಮಿತ್ ಶಾ ಜೋಡಿ ಕೋಮಾ ತಲುಪಿದೆ. 2019ರ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಮಂತ್ರಿ ಮೋದಿಯ ಭವಿಷ್ಯವನ್ನು ತೀರ್ಮಾನಿಸುವಲ್ಲಿ ಈಗ ನಡೆದ ಚುನಾವಣೆಗಳು ನಿರ್ಣಾಯಕವಾಗಿದ್ದವು. ಜನರಿಗೆ ಮೋದಿ ಬಗೆಗೆ ಭ್ರಮಾನಿರಸನ ಆಗಿರುವುದರ ಮುನ್ಸೂಚನೆ ಇದರಿಂದ ಸಿಕ್ಕಂತಾಗಿದೆ.
ಜನಸಾಮಾನ್ಯರು ಆರೆಸ್ಸೆಸ್ ಅನ್ನು ಜನವಿರೋಧಿ ಸಂಸ್ಥೆ, ಹಿಂದೂತ್ವ ಪ್ರತಿಪಾದಕ ಸಂಸ್ಥೆ ಎಂಬ ಸಂಕುಚಿತ ಅರ್ಥದಲ್ಲಿ ಭಾವಿಸುತ್ತಿರುವುದು ಸ್ವತಃ ಸಂಘದ ಮುಖ್ಯಸ್ಥರಿಗೇ ಮನವರಿಕೆಯಾಗಿರುವುದರಿಂದ ಇನ್ಮುಂದೆ ತಮ್ಮ ಸಂಘಟನೆಗೆ ಭವಿಷ್ಯವಿಲ್ಲವೆಂದು ತಿಳಿದು ಸ್ಥಾಪಕ-ಅಧ್ಯಕ್ಷ ಹೆಡ್ಗೇವಾರರು ಬರೆದ ಪಕ್ಷದ ಸಂವಿಧಾನವನ್ನೇ ಪುನರ್‍ರಚಿಸಲು ತೀರ್ಮಾನ ಕೈಗೊಂಡಂತಿದೆ. ಅದಕ್ಕಾಗೆ ತಮ್ಮ ಪಕ್ಷದ ಸಿದ್ಧಾಂತಕ್ಕೆ ಒಗ್ಗದಿದ್ದರೂ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿಯನ್ನು ತಮ್ಮ ಸಮಾರಂಭಕ್ಕೆ ಆಹ್ವಾನಿಸುವ ಮತ್ತು ಕಾಂಗ್ರೆಸ್ ನಾಯಕ, ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿಯವರನ್ನು ಬೈಠಕ್‍ಗೆ ಕರೆಸುವಂತಹ ನಾಟಕಗಳಿಗೆ ಮುಂದಾಗುತ್ತಿದೆ. ಅಂದರೆ ತನ್ನ ಸಿದ್ದಾಂತಗಳಿಂದ ಜನರನ್ನು ತಲುಪಬಹುದೇ ವಿನಾಃ ಹೆಚ್ಚು ದಿನ ಜನಮಾನಸದಲ್ಲಿ ಉಳಿಯಲಾಗದು ಎಂಬುದು ಅರ್ಥವಾಗಿ ಹೀಗೆಲ್ಲಾ ಮಾಡುತ್ತಿದ್ದಾರಾ? ಸ್ಪಷ್ಟವಿಲ್ಲ. ಆದರೆ, ಮೋದಿ ಸವಕಲು ನಾಣ್ಯವಾಗುತ್ತಿರುವುದು ಖಾತ್ರಿಯಾದ ಮೇಲೆ ಒಂದು ರಾಜಕೀಯ ಆಟ ಕಟ್ಟಲು ಆರೆಸ್ಸೆಸ್ ಚಾಣಕ್ಯರು ಹೆಣಗಾಡುತ್ತಿರುವುದು ಮಾತ್ರ ಸತ್ಯ.
ಮೋದಿ ಮತ್ತು ಅಮಿತ್ ಶಾ ಜೋಡಿಯನ್ನು ಪಂಚರಾಜ್ಯ ಫಲಿತಾಂಶಗಳಿಗಿಂತಲೂ ಹೆಚ್ಚು ಕಂಗಾಲು ಮಾಡಿರುವುದು ಸಂಘ ಪರಿವಾರದ ಆಂತರಿಕ ಬೆಳವಣಿಗೆಗಳು. ಸ್ಥಾಪನೆಯ ದಿನದಿಂದಲೂ ವಿಶ್ವ ಹಿಂದೂ ಪರಿಷತ್ತಿನ ಅಧ್ಯಕ್ಷನಾಗಿದ್ದ ತನ್ನನ್ನು ಆ ಸ್ಥಾನದಿಂದ ಕಿತ್ತೊಗೆದುದಕ್ಕೆ ತೊಗಾಡಿಯ ಆರ್.ಎಸ್.ಎಸ್, ಮೋದಿ ವಿರುದ್ಧವೇ ವ್ಯಗ್ರರಾಗಿದ್ದಾರೆ. ಆರೆಸ್ಸೆಸ್ ತನ್ನನ್ನು ತಾನು ಒಂದು ರಾಜಕೀಯೇತರ ಸಂಘಟನೆಯಾಗಿ ಗುರುತಿಸಿಕೊಂಡರು ಅದರ ಮೂಲ ಅಜೆಂಡಾ ರಾಜಕೀಯವೇ ಅನ್ನೋದು ಈಗ ಗೊಂದಲದ ವಿಷಯವೇನಲ್ಲ. ಬಿಜೆಪಿ ಅದರ ರಾಜಕೀಯ ಮುಖವಾಡ ಅಷ್ಟೆ. ಆ ಮುಖವಾಡವನ್ನು ಹೇಗೆ ಬಳಸಿಕೊಳ್ಳಬೇಕು, ಯಾರಿಂದ ದುಡಿಸಿಕೊಳ್ಳಬೇಕು ಎಂಬುದನ್ನು ಅದು ಚೆನ್ನಾಗಿ ಅರ್ಥ ಮಾಡಿಕೊಂಡಿದೆ. ಜೀವದ್ರೋಹಿ ರಥಯಾತ್ರೆಯ ಮೂಲಕ ಬಿಜೆಪಿಗೆ ಕೋಮುಧ್ರುವೀಕರಣ ಮಾಡಿಕೊಟ್ಟರೂ ಅಡ್ವಾಣಿಯವರಿಗೆ ಬದಲು ವಾಜಪೇಯಿಯನ್ನು ಪ್ರಧಾನಿಯಾಗಿ ಮುಂದಿಟ್ಟು ಮೈತ್ರಿಕೂಟದ ಸರ್ಕಾರ ರಚಿಸಿದ್ದಾಗಲಿ, ಕೊನೆಗೆ ಅದೇ ಅಡ್ವಾಣಿಯವರನ್ನೇ ಹೀನಾಯವಾಗಿ ಮೂಲೆಗುಂಪು ಮಾಡಿ ಮೋದಿಯವರನ್ನು ಬೆಳೆಸಿದ್ದಾಗಲಿ ಎಲ್ಲವೂ ಆರೆಸ್ಸೆಸ್‍ನ ರಾಜಕೀಯ ಆಟಗಳೇ ಆಗಿವೆ.
ಯಾರನ್ನು, ಯಾವಾಗ, ಹೇಗೆ `ಮಟ್ಟ’ ಹಾಕಬೇಕೆನ್ನುವ ಸೂತ್ರ ಆರೆಸ್ಸೆಸ್ ಕೈಯಲ್ಲಿರುವುದೇ ಇವತ್ತು ಮೋದಿ-ಶಾ ಜೋಡಿಗೆ ತಲೆನೋವಾಗಲಿದೆ. ಇಷ್ಟು ದಿನ ಹಲವು ಕಾರಣಗಳಿಂದ, ಹತ್ತಾರು ಕುತಂತ್ರಗಳಿಂದ ಮೋದಿ ಈ ದೇಶದಲ್ಲಿ ತನ್ನದೇ ಆದ ಹೈಪ್ ಸೃಷ್ಟಿಸಿಕೊಂಡಿದ್ದರು. ಸಂಘ ಪರಿವಾರಕ್ಕೆ ಆ ಹೈಪ್ ಬೇಕಾಗಿತ್ತು. ನೀರೆರೆದು ಪೋಷಿಸಿತ್ತು. ಸಂಘದ ಈ ಭರಪೂರ ಬೆಂಬಲ ಇದ್ದುದರಿಂದಲೇ ಮೋದಿ ಬಿಜೆಪಿಯೊಳಗೆ ಅಷ್ಟು ಬಲಿಷ್ಠವಾಗಿ, ಹಿರಿಯರನ್ನೇ ನಗಣ್ಯವಾಗಿಸುವಷ್ಟರಮಟ್ಟಿಗೆ ಬೆಳೆಯಲು ಸಾಧ್ಯವಾದದ್ದು. ಆದರೆ ಈಗ ಅದೇ ಮೋದಿಯ ವರ್ಚಸ್ಸು ಕುಸಿಯುತ್ತಿರುವುದನ್ನು ಪಂಚರಾಜ್ಯ ಚುನಾವಣೆಗಳು ಸಾಬೀತು ಮಾಡಿವೆ. ಇನ್ನು ಮೋದಿಯಂತಹ ಮುಳುಗುದೋಣಿಯನ್ನು ನೆಚ್ಚಿಕೊಂಡು ಕೂರುವಷ್ಟು ಸಂಘದ ಚಾಣಕ್ಯರು ದಡ್ಡರೇನಲ್ಲ. ಪರ್ಯಾಯಕ್ಕೆ ಒಳಗೊಳಗೇ ಸಿದ್ಧ ಮಾಡಿಕೊಳ್ಳತೊಡಗುತ್ತಾರೆ. ಮೋದಿಗೆ ಈ ವಾರ್ನಿಂಗ್ ಸಿಕ್ಕಿರುವುದರಿಂದಲೇ ತನ್ನ ಹಿಂಬಾಲಕರ ಮೂಲಕ ಶತಾಯಗತಾಯ ಮತ್ತೊಮ್ಮೆ ಮೋದಿಯನ್ನು ಪ್ರಧಾನಿ ಮಾಡಲೇಬೇಕು ಎನ್ನುವ ಲಜ್ಜೆಗೆಟ್ಟ ಅಭಿಯಾನಗಳನ್ನೆಲ್ಲ ಶುರು ಮಾಡಿಸಿದ್ದಾರೆ. ಇದು ಮುಳುಗುವ ದೋಣಿಯನ್ನು ಕೊನೆಯದಾಗಿ ಸರಿಪಡಿಸುವ ಒಂದು ಪ್ರಯತ್ನವಷ್ಟೆ. ಅದು ಯಶ ಕಾಣದು ಎಂದು ಗೊತ್ತಾದ ಕ್ಷಣವೇ ಮೋದಿಯವರು ಮತ್ತೊಬ್ಬ ಅಡ್ವಾಣಿಯಾಗಲಿದ್ದಾರೆ.
ತಾವು ಬೇರೆಬೇರೆ ಎಂದು ಎಷ್ಟು ಬೊಬ್ಬೆ ಹೊಡೆದುಕೊಂಡರೂ ಬಿಜೆಪಿ ಮತ್ತು ಸಂಘ ಪರಿವಾರವನ್ನು ಪ್ರತ್ಯೇಕಿಸಿ ನೋಡಲು ಸಾಧ್ಯವಿಲ್ಲ. ಅಷ್ಟರಮಟ್ಟಿಗೆ ಅವು ಬೆಸೆದುಕೊಂಡ ರಚನೆಗಳು. ಆದರೆ ಇದೇ ಮಾತನ್ನು ಮೋದಿ ಮತ್ತು ಸಂಘ ಪರಿವಾರಕ್ಕೆ ಅನ್ವಯಿಸಲಾಗದು. ಮೋದಿಗೆ ಸಂಘ ಅನಿವಾರ್ಯವೇ ಹೊರತು, ಸಂಘಕ್ಕೆ ಮೋದಿ ಅನಿವಾರ್ಯವಲ್ಲ. ಆದರೆ ಮಾತುಗಾರ ಮೋದಿಯವರು ಈ ಸೂಕ್ಷ್ಮವನ್ನು ಅರ್ಥ ಮಾಡಿಕೊಂಡಂತೆ ಕಾಣಿಸುವುದಿಲ್ಲ. ಅದು ಅರ್ಥವಾಗುವ ಕಾಲವೂ ದೂರವಿಲ್ಲ..
2014ರ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಭಾರತೀಯ ಜನತಾ ಪಕ್ಷ ದೇಶದ ಬಹುಭಾಗದಲ್ಲಿ ಪ್ರಚಂಡ ಜಯ ಗಳಿಸಿದ ಅನಂತರ ಆರ್‍ಎಸ್‍ಎಸ್ ಪರಿವಾರಗಳ ಸೊಕ್ಕು ಹೆಚ್ಚಾದದ್ದು ಸುಳ್ಳಲ್ಲ. ಮುಸ್ಲಿಂ ವಿರೋಧಿ ಮನಸ್ಥಿತಿಯ ಅಮಿತ್ ಶಾ ಮತ್ತು ಮೋದಿ ಜೋಡಿ ಕಾಂಗ್ರೆಸ್ಸನ್ನು ಹೇಳ ಹೆಸರಿಲ್ಲದಂತೆ ಮಾಡುತ್ತೇವೆ, ಭಾರತವನ್ನು ಕಾಂಗ್ರೆಸ್ ಮುಕ್ತ ಮಾಡುತ್ತೇವೆ ಅಂತ ಹೊರಟದ್ದು ಕೂಡಾ ಈ ಸೊಕ್ಕಿನಿಂದಲೇ. ಇಂಥಾ ಸೊಕ್ಕಿನ ಮಾತುಗಳು ಜನತೆಗೆ ಹಿಡಿಸಲಿಲ್ಲ ಎಂದು ಆರ್‍ಎಸ್‍ಎಸ್ ಕಾರ್ಯಕರ್ತರೂ ಆಗಿದ್ದ ಹಿರಿಯ ಪತ್ರಕರ್ತರೊಬ್ಬರು ಅಭಿಪ್ರಾಯ ಪಡುತ್ತಾರೆ.
ನರೇಂದ್ರಮೋದಿಯವರು ಮಂತ್ರಿಮಂಡಲದ ಯಾವ ಮಂತ್ರಿಯೂ ಸೊಲ್ಲೆತ್ತದಂತೆ ತಾನೇ ಏಕಮೇವಾದ್ವಿತೀಯ ನಾಯಕನಂತೆ ಬೆಳೆಯಲು ಯತ್ನಿಸಿದ್ದು ಕೂಡಾ ಪ್ರಜಾಪ್ರಭುತ್ವದ ತಂತುಗಳು ಬೆಸೆದುಹೋಗಿರುವ ನಮ್ಮ ದೇಶದ ಜನರಿಗೆ ಇಷ್ಟವಾಗಲಿಲ್ಲ. ಬಿಜೆಪಿಯ ಮಟ್ಟಿಗೆ ಸಮರ್ಥೆ ಎಂದು ಕೊಂಡಾಡಿಸಿಕೊಂಡಿದ್ದ ಸುಷ್ಮಾ ಸ್ವರಾಜ್‍ರಂಥ ವಿದೇಶಾಂಗ ಸಚಿವೆ ಇದ್ದಾಗ್ಯೂ ವಿದೇಶ ಪ್ರವಾಸ, ವಿದೇಶಾಂಗ ನೀತಿ, ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ತಾನೇ ವಿದೇಶಾಂಗ ಮಂತ್ರಿಯಂತೆ ಬಿಂಬಿಸಿಕೊಳ್ಳಲು ಮೋದಿ ಸತತ ಪ್ರಯತ್ನ ಮಾಡಿದ್ದು ಬಿಜೆಪಿಯೊಳಗೇ ಒಂದು ಗುಂಪಿನಿಂದ ಅವರನ್ನು ದೂರ ಮಾಡುತ್ತಾ ಬಂತು.
ಮೋದಿ ಇತರೆ ನಾಯಕರೊಂದಿಗೆ ಸೃಷ್ಟಿಸಿಕೊಳ್ಳುತ್ತಿರುವ ಅಂತರ ಕೇವಲ ಮೇಲ್‍ಸ್ತರದ ನಾಯಕರಿಗೆ ಮಾತ್ರ ಸೀಮಿತವಾಗಿಲ್ಲ. ಕಾರ್ಯಕರ್ತರು ಮತ್ತು ನಾಯಕರುಗಳ ನಡುವೆಯೂ ಬಿಜೆಪಿಯಲ್ಲಿ ಈಗ ಅಂತದ್ದೊಂದು ಅಂತರ ಸೃಷ್ಟಿಯಾಗುತ್ತಿದೆ. ಚುನಾವಣಾ ಸಮಾವೇಶಗಳಷ್ಟೇ ಈಗ ಮೋದಿ ಮತ್ತು ಇತರೆ ನಾಯಕರ ನಡುವೆ ಇರುವ ಸಂಪರ್ಕ ಸೇತುಗಳು. ಯಥಾ ರಾಜ ತಥಾ ಪ್ರಜಾ ಎನ್ನುವಂತೆ ಉಳಿಕೆ ಎರಡನೇ ಹಂತದ, ಮೂರನೇ ಹಂತದ ಹಾಗೂ ಸ್ಥಳೀಯ ನಾಯಕರುಗಳೂ ತಮ್ಮ ಕಾರ್ಯಕರ್ತರಿಂದ ದೂರವೇ ಉಳಿಯುತ್ತಿದ್ದಾರೆ.
ಕಾಲಾಳುಗಳ ಪಡೆ ಮತ್ತು ದಂಡನಾಯಕನ ಮಧ್ಯೆ ಈಗ ಕಂದಕ ಏರ್ಪಟ್ಟಿದೆ. ಬಿಜೆಪಿಯ ಕೇಂದ್ರ ಸರ್ಕಾರ, ರಾಜ್ಯ ಸರ್ಕಾರಗಳು ಹಾಗೂ ಸಂಘ ಪರಿವಾರದ ಅಂಗಸಂಸ್ಥೆಗಳಾದ ಭಾರತೀಯ ಮಜ್ದೂರ್ ಸಂಘ, ಅಖಿಲ ಭಾರತ ವಿದ್ಯಾರ್ಥಿ ಪರಿಷತ್, ದುರ್ಗಾವಾಹಿನಿ ಮೊದಲಾದ ಪೂರಕ ಸಂಸ್ಥೆಗಳ ಸಂಪರ್ಕಸೇತು ಈಗ ಮುರಿದು ಬಿದ್ದಿದೆ.
ಈ ಸೂಕ್ಷ್ಮ ಬೆಳವಣಿಗೆ ಹೊರಜಗತ್ತಿಗೆ ಅಷ್ಟು ಸುಲಭವಾಗಿ ಕಾಣಲು ಸಾಧ್ಯವಿಲ್ಲ. ಯಾಕೆಂದರೆ ಮೀಡಿಯಾಗಳು ಮೋದಿಯವರ ಕಬ್ಜಾದಲ್ಲೇ ಇರುವುದರಿಂದ ಅವರಿಗೆ ಡ್ಯಾಮೇಜ್ ಮಾಡಬಹುದಾದ ಇಂತಹ ಸಂಗತಿಗಳನ್ನು ಚರ್ಚಿಸುವ ಗೋಜಿಗೇ ಹೋಗುವುದಿಲ್ಲ. ಬಿಜೆಪಿ ಮತ್ತು ಸಂಘ ಪರಿವಾರದೊಳಗೆ ಎಂಥಾ ಬಿರುಕೂ ಇಲ್ಲ ಎಂಬಂತೆ ಕಾಣಿಸಲಾಗುತ್ತಿದೆ. ಆದರೆ ಒಳಗೇ ಇರುವ ಆರೆಸ್ಸೆಸ್ ಇದರತ್ತ ಕುರುಡಾಗಿರಲು ಸಾಧ್ಯವಿಲ್ಲ. ಕಾರ್ಯಕರ್ತರಿಂದಲೂ ದೂರಾಗಿ, ಜನರಿಗೂ ಬೇಡವಾದ ಮೋದಿಯನ್ನು ಮುಂದಿಟ್ಟುಕೊಂಡು ಯುದ್ಧಕ್ಕೆ ಹೋದರೆ ಸೋಲು ಖಚಿತ ಎನ್ನುವ ಅಭಿಪ್ರಾಯಕ್ಕೆ ಅದು ಬಂದಂತಿದೆ.
ಒಂದುಕಡೆ, ಕಾಂಗ್ರೆಸ್ ಮತ್ತು ಚಂದ್ರಬಾಬು ನಾಯ್ಡು ನೇತೃತ್ವದಲ್ಲಿ ಮಹಾಘಟಬಂಧನ್ ದಿನದಿಂದ ದಿನಕ್ಕೆ ತನ್ನ ಶಕ್ತಿಯನ್ನು ಹಿಗ್ಗಿಸಿಕೊಳ್ಳುತ್ತಾ ಮೋದಿ ಮತ್ತು ಶಾ ತತ್ತರಿಸುವಂತೆ ಮಾಡುತ್ತಿದ್ದರೆ, ಮತ್ತೊಂದೆಡೆ ಆಂತರಿಕ ಲೆಕ್ಕಾಚಾರಗಳೂ ಅವರನ್ನು ಕಂಗಾಲಾಗಿಸುತ್ತಿವೆ.
ರಿಜರ್ವ್ ಬ್ಯಾಂಕಿನ ಗೌರ್ನರ್ ದಿಢೀರ್ ರಾಜೀನಾಮೆ ನೀಡಿದ್ದು, ಯೋಜನಾ ಆಯೋಗ ರದ್ದು ಮಾಡಿ ಮೋದಿಯವರು ರಚಿಸಿದ ನೀತಿ ಆಯೋಗ ನಿಷ್ಕ್ರಿಯವಾಗಿ ನಗೆಪಾಟಲಿಗೆ ಈಡಾಗಿರುವುದು, ಒಬ್ಬೊಬ್ಬರಾಗಿ ಪ್ರಧಾನಿ ಆರ್ಥಿಕ ಸಲಹೆಗಾರರು ಜಾಗ ಖಾಲಿ ಮಾಡುತ್ತಿರುವುದೆಲ್ಲ ಮೋದಿ ಒಬ್ಬ ಆಡಳಿತಗಾರನಾಗಿಯೂ ವೈಫಲ್ಯ ಕಂಡಿರೋದನ್ನು ಸಾಬೀತು ಮಾಡುತ್ತಿವೆ. ಇವೆಲ್ಲ ಜನರಿಗೆ ಅರ್ಥವಾಗದೆ ಹೋದರೂ ಕಾಳಧನ ತಂದು ಪ್ರತಿಯೊಬ್ಬರಿಗೂ 15 ಲಕ್ಷ ಕೊಡ್ತೀನಿ ಅಂದಿದ್ದು, ಅಗತ್ಯ ಬೆಲೆಗಳನ್ನು ಇಳಿಸಿ ಅಚ್ಚೇ ದಿನ್ ಮಾಡ್ತೀನಿ ಅಂದಿದ್ದು, ರೈತರ ಕಷ್ಟಗಳಿಗೆ ತಿರುಗಿ ನೋಡದಿದ್ದುದು ಇವೆಲ್ಲವೂ ಮೋದಿಯ ಮಾತು ಜಾಸ್ತಿ ಸಾಧನೆ ಶೂನ್ಯ ಎಂಬುದನ್ನು ಜನರಿಗೆ ಅರ್ಥ ಮಾಡಿಸಿವೆ. ಮೋದಿಗೆ ಮತದಾರರು ತಕ್ಕ ಪಾಠ ಕಲಿಸುವುದು ಅನುಮಾನವಿಲ್ಲ ಎಂಬುದು ಅರ್ಥವಾದ ಮೇಲೂ ಸಂಘ ಪರಿವಾರವೇಕೆ ಅವರನ್ನು ಮುದ್ದಾಡೀತು…?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಸ್ಪೃಶ್ಯ ಅಲೆಮಾರಿ ಸಮುದಾಯಗಳನ್ನು ಪ್ರವರ್ಗ ಸಿಗೆ ಸೇರಿಸಿದ್ದನ್ನು ಕೋರ್ಟ್‌ನಲ್ಲಿ ಸಮರ್ಥಿಸಿಕೊಂಡ ರಾಜ್ಯ ಸರ್ಕಾರ

ಆಗಸ್ಟ್‌ 18 2025ರಂದು ರಾಜ್ಯ ಸರ್ಕಾರ ಒಳಮೀಸಲಾತಿ ವರ್ಗೀಕರಣ ಆದೇಶ ಹೊರಡಿಸಿತ್ತು. ಈ ಆದೇಶವನ್ನು ಪ್ರಶ್ನಿಸಿ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟವು ಕರ್ನಾಟಕ ಹೈಕೋರ್ಟ್‌ನಲ್ಲಿ ರಿಟ್‌ ಅರ್ಜಿಯನ್ನು ದಾಖಲಿಸಿತ್ತು. ರಾಜ್ಯ ಸರ್ಕಾರ...

ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ಪೌರತ್ವ ತ್ಯಜಿಸಿದ್ದಾರೆ: ಎಂಇಎ

ಕಳೆದ ಐದು ವರ್ಷಗಳಲ್ಲಿ ಸುಮಾರು ಒಂಬತ್ತು ಲಕ್ಷ ಜನರು ತಮ್ಮ ಭಾರತೀಯ ಪೌರತ್ವವನ್ನು ತ್ಯಜಿಸಿದ್ದಾರೆ. ಜಾಗತಿಕ ಚಲನಶೀಲತೆ ಹೆಚ್ಚಾದಂತೆ ಮತ್ತು ವೈಯಕ್ತಿಕ ಆಯ್ಕೆಗಳು ವಲಸೆ ಪ್ರವೃತ್ತಿಯನ್ನು ರೂಪಿಸುತ್ತಿರುವುದರಿಂದ ವಾರ್ಷಿಕವಾಗಿ ಸಂಖ್ಯೆಗಳು ಗಮನಾರ್ಹವಾಗಿ ಬದಲಾಗಿವೆ...

ನಟ ದಿಲೀಪ್ ಖುಲಾಸೆ: ನ್ಯಾಯಾಲಯದ ಕಲಾಪವನ್ನು ವಿರೂಪಗೊಳಿಸಬೇಡಿ ಎಂದು ಮಾಧ್ಯಮ ಮತ್ತು ವಕೀಲರಿಗೆ ಎಚ್ಚರಿಕೆ ನೀಡಿದ ನ್ಯಾಯಾದೀಶೆ ಹನಿ ವರ್ಗೀಸ್ 

2017 ರಲ್ಲಿ ದಕ್ಷಿಣ ಭಾರತದ ನಟಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಲಯಾಳಂ ನಟ ದಿಲೀಪ್ ಅವರನ್ನು ಖುಲಾಸೆಗೊಳಿಸಿದ ಎರ್ನಾಕುಲಂ ಪ್ರಧಾನ ಸೆಷನ್ಸ್ ನ್ಯಾಯಾಧೀಶೆ ಹನಿ ಎಂ ವರ್ಗೀಸ್, ತಮ್ಮ ತೀರ್ಪಿನ...

ರಾಜ್‌ಕೋಟ್‌ ಬಾಲಕಿ ಅತ್ಯಾಚಾರ ಪ್ರಕರಣ; ಆಕ್ರೋಶ ಹೊರಹಾಕಿದ ಶಾಸಕ ಜಿಗ್ನೇಶ್‌ ಮೇವಾನಿ; ಕಠಿಣ ಶಿಕ್ಷೆಗೆ ಆಗ್ರಹ

ಗುಜರಾತ್‌ನ ರಾಜ್‌ಕೋಟ್‌ನಲ್ಲಿ ಏಳು ವರ್ಷದ ಬಾಲಕಿ ಅತ್ಯಾಚಾರ ಹಾಗೂ ಗಂಭೀರ ಹಲ್ಲೆ ಪ್ರಕರಣಕ್ಕೆ ಸಂಬಧಿಸಿದಂತೆ ಆಕ್ರೋಶ ಹೊರಹಾಕಿರುವ ಕಾಂಗ್ರೆಸ್ ಶಾಸಕ ಜಿಗ್ನೇಶ್‌ ಮೇವಾನಿ; ಆರೋಪಿಯನ್ನು ಕಠಿಣ ಶಿಕ್ಷೆಗೆ ಗುರಿಪಡಿಸಬೇಕು ಎಂದು ಆಗ್ರಹಿಸಿದ್ದಾರೆ. ಘಟನೆ ಕುರಿತು...

ಯುವ ರೈತರನ್ನು ಮದುವೆಯಾಗುವ ಯುವತಿಯರಿಗೆ ₹5 ಲಕ್ಷ ಪ್ರೋತ್ಸಾಹಧನ ನೀಡಲು BJP ಕಾರ್ಯಕರ್ತರ ಮನವಿ

ಮಂಡ್ಯ:  ಕರ್ನಾಟಕ ಸರ್ಕಾರ ಜಾರಿಗೆ ತಂದಿರುವ ‘ಶಾದಿ ಭಾಗ್ಯ’ದಂತೆ ರೈತರನ್ನು ಮದುವೆಯಾಗುವ ಯುವತಿಯರಿಗೆ ಸರ್ಕಾರದ ವತಿಯಿಂದ ರೂ.5ಲಕ್ಷ ಪ್ರೋತ್ಸಾಹಧನ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಹೆಚ್ಚುವರಿ ಜಿಲ್ಲಾಧಿಕಾರಿ ಬಿ.ಸಿ. ಶಿವಾನಂದಮೂರ್ತಿ ಅವರ ಮೂಲಕ...

ನಿವೃತ್ತಿ ನಿರ್ಧಾರ ಹಿಂತೆಗೆದುಕೊಂಡ ವಿನೇಶ್ ಫೋಗಟ್; ಲಾಸ್ ಏಂಜಲೀಸ್ ಒಲಿಂಪಿಕ್ಸ್‌ಗೆ ತಯಾರಿ

ಕುಸ್ತಿಪಟು ವಿನೇಶ್ ಫೋಗಟ್ ಸ್ಪರ್ಧಾತ್ಮಕ ಕ್ರೀಡೆಗೆ ಮರಳುವುದಾಗಿ ಘೋಷಿಸುವ ಮೂಲಕ ತಮ್ಮ ನಿವೃತ್ತಿ ನಿರ್ಧಾರವನ್ನು ಹಿಂತೆಗೆದುಕೊಂಡಿದ್ದಾರೆ. 2028 ರ ಲಾಸ್ ಏಂಜಲೀಸ್ ಒಲಿಂಪಿಕ್ಸ್ ಅನ್ನು ಗುರಿಯಾಗಿಸಿಕೊಂಡಿರುವುದಾಗಿ ತಿಳಿಸಿದ್ದಾರೆ. ಈ ಕುರಿತ ಹೇಳಿಕೆ ಬಿಡುಗಡೆ ಮಾಡಿರುವ...

ಗುಜರಾತ್‌ನ ವಲ್ಸಾದ್‌ನಲ್ಲಿ ನಿರ್ಮಾಣ ಹಂತದ ಸೇತುವೆ ಕುಸಿದು ಐವರು ಕಾರ್ಮಿಕರಿಗೆ ಗಾಯ

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಔರಂಗ ನದಿಗೆ ನಿರ್ಮಾಣ ಹಂತದಲ್ಲಿರುವ ಸೇತುವೆಯ ಮೇಲಿನ ಗಿರ್ಡರ್ ಕುಸಿದಿದ್ದು, ಐವರು ಕಾರ್ಮಿಕರು ಗಾಯಗೊಂಡಿದ್ದಾರೆ.  ಹಳೆಯ ಸೇತುವೆಗೆ ಸಮಾನಾಂತರವಾಗಿ ಹೊಸ ಸೇತುವೆಯನ್ನು ನಿರ್ಮಿಸಲಾಗುತ್ತಿರುವ ಕೈಲಾಶ್ ರಸ್ತೆಯಲ್ಲಿ ಶುಕ್ರವಾರ ಬೆಳಿಗ್ಗೆ 8...

ಆಮದು ಸುಂಕ ಹೆಚ್ಚಿಸಿದ ಮೆಕ್ಸಿಕೊ: ಭಾರತದ ವಾಹನ-ಉಕ್ಕು ರಫ್ತಿನ ವೆಚ್ಚ ಹೆಚ್ಚಳ ಸಾಧ್ಯತೆ

ಸ್ಥಳೀಯ ಕೈಗಾರಿಕೆಗಳನ್ನು ರಕ್ಷಿಸುವ ಗುರಿಯ ಭಾಗವಾಗಿ, ಭಾರತ, ಚೀನಾ ಮತ್ತು ದಕ್ಷಿಣ ಕೊರಿಯಾ ಸೇರಿದಂತೆ ಏಷ್ಯಾದ ದೇಶಗಳಿಂದ ಆಮದು ಮಾಡಿಕೊಳ್ಳುವ ವಸ್ತುಗಳ ಮೇಲಿನ ಹೆಚ್ಚಿನ ಸುಂಕ ಹೆಚ್ಚಳ ನಿರ್ಧಾರವನ್ನು ಮೆಕ್ಸಿಕೋ ಅನುಮೋದಿಸಿದೆ. ಮೆಕ್ಸಿಕನ್...

Cognizant ಕಂಪನಿಗೆ 99 ಪೈಸೆಗೆ ಒಂದು ಎಕರೆ ಭೂಮಿ: ವಿಶಾಖಪಟ್ಟಣದಲ್ಲಿ ತಾತ್ಕಾಲಿಕ ಕಛೇರಿ ಉದ್ಘಾಟನೆ

ಕಳೆದ ಜೂನ್‌ ನಲ್ಲಿ ಸುದ್ದಿಗೆ ಗ್ರಾಸವಾಗಿದ್ದ ಆಂಧ್ರ ಪ್ರದೇಶದ ವಿಶಾಖಪಟ್ಟಣದಲ್ಲಿ Cognizant ಕಂಪನಿಯು 1582 ಕೋಟಿ ಹೂಡಿಕೆ ಮಾಡಿ 8 ಸಾವಿರ ಉದ್ಯೋಗ ಸೃಷ್ಠಿ ಮಾಡಲಾಗುವುದೆಂದು ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಸರ್ಕಾರ ಘೋಷಿಸಿತ್ತು....

ಅಲ್ಪಸಂಖ್ಯಾತ ಶಾಲೆಗಳಿಗೆ ಆರ್.ಟಿ.ಇ ಕಾಯ್ದೆಯಿಂದ ವಿನಾಯಿತಿ ತೀರ್ಪಿನ ವಿರುದ್ಧ ಅರ್ಜಿ; ಎನ್.ಜಿ.ಒಗೆ ದಂಡ ವಿಧಿಸಿದ ಸುಪ್ರೀಂ  

ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ನಿಬಂಧನೆಗಳಿಂದ ಅಲ್ಪಸಂಖ್ಯಾತ ಶಾಲೆಗಳಿಗೆ ವಿನಾಯಿತಿ ನೀಡಿದ್ದ, ತನ್ನ ಹಿಂದಿನ ತೀರ್ಪನ್ನು ಪ್ರಶ್ನಿಸಿ ಸಲ್ಲಿಸಲಾದ ರಿಟ್ ಅರ್ಜಿಯನ್ನು ಸುಪ್ರೀಂ ಕೋರ್ಟ್ ಶುಕ್ರವಾರ ತೀವ್ರವಾಗಿ ಖಂಡಿಸಿದೆ.  ಜಸ್ಟೀಸ್ ಬಿ.ವಿ. ನಾಗರತ್ನ ಮತ್ತು...