Homeಮುಖಪುಟಮೋದಿ ಸ್ಯಾಟಲೈಟ್ ಭಾಷಣ : ಸಂಪ್ರದಾಯ ಮತ್ತು ಸಂಹಿತೆ ಎರಡನ್ನೂ ಉಲ್ಲಂಘಿಸಿದ ಮೋದಿ

ಮೋದಿ ಸ್ಯಾಟಲೈಟ್ ಭಾಷಣ : ಸಂಪ್ರದಾಯ ಮತ್ತು ಸಂಹಿತೆ ಎರಡನ್ನೂ ಉಲ್ಲಂಘಿಸಿದ ಮೋದಿ

- Advertisement -
- Advertisement -

ಕಳೆದ 70 ವರ್ಷಗಳಿಂದ ಭಾರತದ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಮತ್ತು ಇನ್ನಿತರ ರಕ್ಷಣಾ ಹಾಗೂ ವೈಜ್ಞಾನಿಕ ಸಂಸ್ಥೆಗಳು ಅಭೂತಪೂರ್ವ ಸಾಧನೆಗಳನ್ನು ಮಾಡುತ್ತಲೇ ಬಂದಿವೆ. ಪ್ರಪಂಚದಲ್ಲಿ ಅಮೆರಿಕಾ, ರಷ್ಯಾ ಮತ್ತು ಚೀನಾದ ನಂತರ ಭಾರತವೇ ಇದರಲ್ಲಿ ಮುಂಚೂಣಿಯಲ್ಲಿದೆ. ಅಂತಹ ಸಾಧನೆಗಳನ್ನು ಮಾಡಿದಾಗಲೆಲ್ಲಾ ಭಾರತದ ಜನತೆಗೆ ದೇಶದ ಶಕ್ತಿಯ ಕುರಿತ ಹೆಮ್ಮೆ ಎನಿಸಿದೆ. ಅದರಲ್ಲೂ ಉಪಗ್ರಹಗಳ ಉಡಾವಣೆಯು ದೇಶದ ಜನಸಾಮಾನ್ಯರ ಬದುಕಿಗೆ ಸಂಬಂಧಿಸಿದಂತೆಯೂ ಹಲವು ಅನುಕೂಲಗಳೂ ಆಗಿವೆ.

ಅಂತಹ ಸಾಧನೆ ಆದಾಗಲೆಲ್ಲಾ ಸಂಬಂಧಿಸಿದ ತಾಂತ್ರಿಕ ಸಂಸ್ಥೆಯ ಮುಖ್ಯಸ್ಥರುಗಳು ಪತ್ರಿಕಾಗೋಷ್ಠಿ ಮಾಡಿ ದೇಶದ ಜನರಿಗೆ ವಿವರಗಳನ್ನು ಹಂಚಿಕೊಂಡಿದ್ದಾರೆ. ಏಕೆಂದರೆ, ನಿಜವಾದ ಸಾಧನೆ ಮಾಡಿರುವವರು ಅವರೇ ಆಗಿರುತ್ತಾರೆ. ಒಂದೊಂದು ಸಾಧನೆಗೂ ದಶಕಗಳ ಕಾಲದ ಯೋಜನೆ, ಅಧ್ಯಯನ, ಸಂಶೋಧನೆ ಮತ್ತು ಇನ್ನಿತರ ತಾಂತ್ರಿಕ ಪ್ರಯೋಗಗಳು ನಡೆದಿರುತ್ತವೆ. ರಾಜಕಾರಣಿಗಳು 5 ವರ್ಷಕ್ಕೊಮ್ಮೆ ಬರುತ್ತಾರೆ, ಹೋಗುತ್ತಾರೆ.

ಆದರೆ, ಈ ಸಾರಿ ನರೇಂದ್ರ ಮೋದಿಯವರು ಆ ಸಂಪ್ರದಾಯವನ್ನು ಮುರಿದಿದ್ದಾರೆ. ಇದು ದೇಶದ ವಿಜ್ಞಾನಿಗಳ ಸಾಧನೆಯನ್ನೂ ರಾಜಕೀಯಕರಣಗೊಳಿಸುವ ತಪ್ಪು ನಡೆಯಾಗಿದ್ದು, ಮುಂದಿನ ದಿನಗಳಲ್ಲಿ ಇಂತಹ ಸಂಸ್ಥೆಗಳ ಒಳಗೂ ರಾಜಕೀಯವನ್ನು ಎಳೆದುಕೊಂಡು ಹೋಗಲಿದೆ. ಇದರ ಪರಿಣಾಮಗಳು ದೇಶದ ಹಿತದೃಷ್ಟಿಯಿಂದ ಅಷ್ಟು ಒಳ್ಳೆಯದಾಗಿರುವುದಿಲ್ಲ ಎಂಬುದರಲ್ಲಿ ಸಂಶಯವಿಲ್ಲ.

ಎರಡನೆಯದಾಗಿ, ಚುನಾವಣಾ ನೀತಿ ಸಂಹಿತೆ ಘೋಷಣೆಯಾಗಿದ್ದು ಈ ಸಂದರ್ಭದಲ್ಲಿ ಇಂತಹ ಘೋಷಣೆಯನ್ನು ರಾಜಕೀಯ ಅಧಿಕಾರದ ಸ್ಥಾನ ಹಿಡಿದಿರುವ ವ್ಯಕ್ತಿ ಮಾಡುವುದು ನೀತಿಯೂ ಅಲ್ಲ; ಸಂಹಿತೆಯೂ ಅಲ್ಲ. ಆದರೆ, ಐಆರ್‍ಎಸ್ (ರೆವಿನ್ಯೂ ಸರ್ವೀಸ್) ಇಲಾಖೆಯಲ್ಲಿದ್ದ ತಮ್ಮ ಪರವಾದ ವ್ಯಕ್ತಿಯೊಬ್ಬರನ್ನು ಚುನಾವಣಾ ಆಯುಕ್ತರನ್ನಾಗಿಸಿರುವ ಬಿಜೆಪಿಗೆ ಯಾವ ನಿಯಮಗಳೂ ಅನ್ವಯಿಸುವುದಿಲ್ಲ.

ಒಟ್ಟಿನಲ್ಲಿ ಇಂದು ದೇಶದ ಪಾಲಿಗೆ ಮತ್ತೊಂದು ದೊಡ್ಡ ಸಾಧನೆ ಸಂಭವಿಸಿದೆ – ದೇಶದ ವಿಜ್ಞಾನಿಗಳಿಗೆ ಅಭಿನಂದನೆ ಸಲ್ಲಿಸಬೇಕು

ದೇಶದ ಪ್ರಜಾತಾಂತ್ರಿಕ ನೀತಿ ಸಂಹಿತೆಯ ದೃಷ್ಟಿಯಿಂದ ಇನ್ನೊಂದು ಪೆಟ್ಟು ಬಿದ್ದಿದೆ – ದೇಶದ ವೈಜ್ಞಾನಿಕ ಇಲಾಖೆ, ತಂತ್ರಜ್ಞರನ್ನೂ ರಾಜಕೀಯಕ್ಕೆ ಬಳಸಿಕೊಳ್ಳುವ ಮೂಲಕ ಮತ್ತೊಮ್ಮೆ ಪ್ರಧಾನಿಯೇ ಎಡವಿದ್ದಾರೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...