Homeಸಾಮಾಜಿಕನಾಗನ ಭಯದಲ್ಲಿ ಮೌಢ್ಯದ ಆಟಾಟೋಪ!

ನಾಗನ ಭಯದಲ್ಲಿ ಮೌಢ್ಯದ ಆಟಾಟೋಪ!

- Advertisement -
- Advertisement -

ಇತ್ತೀಚೆಗಷ್ಟೇ ನಾಗರಪಂಚಮಿ ಮುಗಿಯಿತು. ಕೆಲವು ಕಡೆ ಹಲ್ಲುಕಿತ್ತ ನಾಗನಿಗೆ ಬಲವಂತವಾಗಿ ಹಾಲು ಕುಡಿಸಲಾಯಿತು. ಮತ್ತೆ ಕೆಲವೆಡೆ ಹುತ್ತಕ್ಕೆ ಹಾಲು ಎರೆಯಲಾಯಿತು. ಕರಾವಳಿಯಲ್ಲಂತೂ ನಾಗಬನಗಳಲ್ಲಿ ಜನಜಾತ್ರೆ. ಹಾಲುಕುಡಿದ ನಿಜ ನಾಗನ ಗತಿ ಏನಾಯಿತು ಎಂದು ನಾಗನೇ ಬಲ್ಲ! ಆದರೆ ಪುರೋಹಿತರು ಮಾತ್ರ ದಕ್ಷಿಣೆ, ಪನಿವಾರ, ಫೀಸು ಎಂದು ಒಂದೇ ದಿನದಲ್ಲಿ ಲಕ್ಷಾಂತರ ರೂಪಾಯಿ ಸಂಪಾದಿಸಿದರು. ಒಂದೇ ದಿನ ಪೂಜೆಗಳನ್ನು ಮುಗಿಸಲಾಗದೇ ಮರುದಿನವೂ ಮುಂದುವರಿಯಿತು. ಆಯಿತು. ಇದನ್ನು ನಂಬಿಕೆ ಎಂದೇ ಕರೆಯೋಣ. ಈ ಒಂದು ದಿನದ ಪೂಜೆ ಮಾಡಿ, ನಂತರ ಆರಾಮವಾಗಿಬಹುದು ಎಂದುಕೊಂಡಿರಾ? ಇಲ್ಲ! ಹಲವಾರು ರೀತಿಯ ದೋಷಗಳಿಂದ ನಿಮ್ಮನ್ನು ಹೆದರಿಸುತ್ತಾರೆ. ಕೆಲವನ್ನು ಕಳೆದ ಸಂಚಿಕೆಯಲ್ಲಿ ನೋಡಿದ್ದೀರ. ಇನ್ನೂ ಕೆಲವನ್ನು ಈಗ ನೋಡೋಣ.
ನಂಬಿಕೆ ಎಂಬುದು ಖಾಸಗಿ ವಿಷಯ. ಆದರೆ, ಜನರಲ್ಲಿ ನಾಗನ ಕುರಿತು ಭಯಭಕ್ತಿ ಹುಟ್ಟಿಸಲು ಪ್ರಮುಖ ಮಾಧ್ಯಮಗಳಲ್ಲೇ ಎಂತಹ ಅಮೋಘ, ರಮ್ಯ ಕತೆಗಳನ್ನು ಕಟ್ಟಲಾಗಿದೆ ಎಂದು ನೋಡಿ!
“ನಮ್ಮ ಪೃಥ್ವಿಯನ್ನು ಮಹಾಶೇಷನೆಂಬ ಸರ್ಪವು ಧರಿಸಿಕೊಂಡಿರುತ್ತದೆ. ಸರ್ಪನೇ ಮಹಾವಿಷ್ಣುವಿಗೆ ಶಯ್ಯೆಯಾಗಿದ್ದಾನೆ. ಮಹಾವಿಷ್ಣುವು ಶ್ರೀ ರಾಮಚಂದ್ರನಾಗಿ ಅವತಾರವೆತ್ತಿದಾಗ, ಆತನ ಸಹೋದರ ಲಕ್ಷ್ಮಣನಾಗಿ, ಆತನನ್ನು ನೆರಳಿನಂತೆ ಹಿಂಬಾಲಿಸಿ, ಆತನಿಗೆ ಬೆಂಗಾವಲಾಗಿ ನಿಂತವನೂ ಅವನೇ. ಕೃಷ್ಣಾವತಾರದಲ್ಲಿ ಶ್ರೀ ಕೃಷ್ಣನು ಸೆರೆಮನೆಯಲ್ಲಿ ಜನ್ಮತಾಳಿ, ತಂದೆ ವಸುದೇವನಿಂದ ನಂದಗೋಕುಲಕ್ಕೆ ಒಯ್ಯಲ್ಪಡುತ್ತಿದ್ದಾಗ ಸುರಿದ ಮುಸಲ ಧಾರಾವರ್ಷದ ಒಂದು ಹನಿ ಜಲವೂ ಆ ಶಿಶುವಿಗೆ ತಗುಲದಂತೆ ತನ್ನ ಹೆಡೆಯನ್ನು ಛತ್ರದೋಪಾದಿಯಲ್ಲಿ ಹಿಡಿದು ಉಪಕರಿಸಿದವನೂ ಆತನೇ. ಮಹಾವಿಷ್ಣುವಿಗೆ ಪ್ರಿಯನಾದ ಮಹಾಶೇಷ, ಮಹಾಮಹಿಮನಾದ ಪರಶಿವನಿಗೂ ಪ್ರೀತಿಪಾತ್ರನಾಗಿ ಕಂಠಾಭರಣನಾದ. ಸಮುದ್ರ ಮಥನದಲ್ಲಿ ಉದ್ಭವಿಸಿದ ಹಾಲಾಹಲವೆಂಬ ಭಯಂಕರ ವಿಷವನ್ನು ಪಾನಮಾಡಿ ಶಿವನು ವಿಷಕಂಠನೆನಿಸಿದಾಗ ಆ ಮಹೇಶನ ಕಂಠವನ್ನು ಸುತ್ತಿಕೊಂಡು ಭಯಂಕರವಾದ ಉರಿಯನ್ನು ತಣಿಸಿದ. ಪಾರ್ವತೀ ಪುತ್ರನಾದ ಮಹಾಗಣಪತಿಗೆ ಕಟಿ ಬಂಧವಾಗಿಯೂ ಗಣೇಶನಿಗೆ ಪ್ರಿಯನಾದ. ಪಾರ್ವತೀ ಪರಮೇಶ್ವರರ ಪ್ರಿಯಪುತ್ರ ದೇವ ಸೇನಾನಿ ಸುಬ್ರಹ್ಮಣ್ಯನೊಡನೆ ಸಮೀಕರಿಸಲ್ಪಟ್ಟು ಪೂಜೆಗೊಳ್ಳುತ್ತಲೂ ಬಂದಿದ್ದಾನೆ. ಸಮುದ್ರ ಮಥನಕ್ಕೆ ಕಡಗೋಲಾಗಿದ್ದ ಮಂದರಗಿರಿಗೂ ರಜ್ಜುವಾಗಿ ಮಣಿದವÀನು ತ್ರಿಪುರ ಮಥನ ಕಾಲಕ್ಕೆ ಶಿವನ ಮಹಾ ಧನುಸ್ಸಿಗೂ ಹೆದೆಯಾಗಿ ಸೆಟೆದುನಿಂತು, ಹಗ್ಗವಾಗಿ ದೇವತೆಗಳಿಗೆ ಉಪಕರಿಸಿದನೀತ. ಕುಂಡಲಿನೀ ಎಂಬ ಪ್ರಾಣಾಕಾರ ಜೀವಶಕ್ತಿಯ ದಿವ್ಯ ಸಂಕೇತವೂ ಆತನೇ. ಕೃಷಿಕರಿಗೆ ಆತ ಕೃಷಿ ಪ್ರಧಾನ ದೇವತೆ. ಸಕಾಲದಲ್ಲಿ ಮಳೆ ಬೆಳೆಗಳನ್ನು ಅನುಗ್ರಹಿಸುವಾತ. ಸಂತಾನವಿಲ್ಲದೆ ಕೊರಗುವವರಿಗೆ ಸಂತಾನ ಭಾಗ್ಯ ಕರುಣಿಸಬಲ್ಲ ಮಹಾಮಹಿಮ, ಕರುಣಾಳು. ರೋಗ ರುಜಿನಗಳನ್ನು ತಡೆಯಬಲ್ಲ ವಿಶ್ವ ವೈದ್ಯನೀತ. ಈ ಲೋಕದ ರಜತಮಗಳನ್ನು ಹೀರಿ ವಿಷದ ರೂಪದಲ್ಲಿ ಸಂಗ್ರಹಿಸಿಟ್ಟುಕೊಂಡು ಭಕ್ತರಿಗೆ ರಕ್ಷಣೆ ನೀಡುವಾತ. ರೈತಾಪಿ ಜನರು ತಮ್ಮಲ್ಲಿರುವ ಧನಕನಕಗಳನ್ನು ಸಂರಕ್ಷಿಸಿಕೊಳ್ಳಲು ಭಧ್ರವಾದ ತಿಜೋರಿಗಳಿಲ್ಲದ ಕಾಲದಲ್ಲಿ ಅವುಗಳನ್ನು ಕುಡಿಕೆಗಳಲ್ಲಿ ತುಂಬಿಸಿ ಭೂಮಿಯಲ್ಲಿ ಹೂತಿಟ್ಟುದನ್ನು ರಕ್ಷಿಸುವ ನಿಧಿಸಂರಕ್ಷಕನೀತ.”
ಬ್ಯಾಂಕಿಂಗ್‍ನಲ್ಲೂ ನಾಗ ಪರಿಣಿತ. ಆತ ಪರಿಣಿತ ವೈದ್ಯ! ಇನ್ನೊಂದು ವಿಶೇಷ ಗಮನಿಸಿದಿರಾ? ಇಲ್ಲೆಲ್ಲೂ ನಾಗಿಣಿಯರ ಉಲ್ಲೇಖವಿಲ್ಲ. ಅವರೆಲ್ಲರೂ ಟಿವಿ ಧಾರಾವಾಹಿ, ಸಿನಿಮಾಗಳಲ್ಲಿ ಭಯಹುಟ್ಟಿಸುವ ಏಜೆಂಟರು ಮಾತ್ರ.
ನಗಬೇಡಿ! ಯಾವ ಸ್ಯಾಟಲೈಟಿನಲ್ಲೂ ಭೂಮಿಯನ್ನು ಆಧರಿಸಿದ ಮಹಾಶೇಷನ ಫೋಟೋ ಬಂದಿಲ್ಲದಿದ್ದರೆ ಏನಾಯಿತು? ಈ ನಾಗವಂಶದ ಹಿನ್ನೆಲೆಯೇನೆಂದು ಗೊತ್ತೆ! ಬಹಳ ಕುತೂಹಲಕಾರಿಯೂ, ರಂಜಕವೂ ಆಗಿರುವುದರಿಂದ ಪ್ರಸಿದ್ಧ ಮಾಧ್ಯಮಗಳಲ್ಲೇ ಬಂದ ಕೆಲವು ತುಣುಕುಗಳನ್ನು ನಿಮ್ಮ ಮುಂದಿಡುತ್ತಿದ್ದೇನೆ.
“ಕಶ್ಯಪ ಮಹರ್ಷಿಯ ಹದಿಮೂರು ಮಂದಿ ಪತ್ನಿಯರಲ್ಲಿ ಕದ್ರು ಎಂಬಾಕೆ ಸರ್ಪಗಳ ಮಾತೆ. ಅವಳ ಮಕ್ಕಳಲ್ಲಿ ತಕ್ಷಕ, ವಾಸುಕಿ ಪ್ರಧಾನರು. ಅನಂತ, ಮಹಾಶೇಷ, ಕಪಿಲ, ನಾಗ, ಕುಳಿಕ, ಶಂಖಪಾಲ, ಭೂಧರ, ತಕ್ಷಕ, ವಾಸುಕಿ ಇವರು ನವನಾಗರೆಂದು ಪ್ರಸಿದ್ಧರು. ಇವರಲ್ಲೇ 52 ಮಂದಿ ಸರ್ಪಶ್ರೇಷ್ಠರೂ, ಹದಿನಾರು ಸಾವಿರ ಪ್ರಕಾರಗಳ ಸರ್ಪಗಳೂ ಇವೆಯೆಂದು ಬ್ರಹ್ಮ ಪುರಾಣದಲ್ಲಿ ವರ್ಣಿತವಾಗಿದೆ. ವಿಷಮಯವಾದ ಹಲ್ಲುಗಳು, ಅಗ್ನಿ ಜ್ವಾಲೆಗಳನ್ನು ಹೊರಸೂಸುವಂತೆ ತೀಕ್ಷ್ಣವಾಗಿ ಹೊಳೆಯುವ ಕೆಂಗಣ್ಣುಗಳು, ಭಯಂಕರವಾದ ಕಡುಕೋಪ ಇವು ಸರ್ಪಗಳ ಮುಖ್ಯ ಲಕ್ಷಣಗಳು. ನಂಬಿ ಪೂಜಿಸಿದವರಿಗೆ ಅವು ತಾರಕ ಶಕ್ತಿಗಳು – ನಂಬದೆ ಹಾನಿಯುಂಟು ಮಾಡಿದವರಿಗೆ ಮಾರಕ ಶಕ್ತಿಗಳಾಗಿ ಪರಿಣಮಿಸುತ್ತವೆ. ಅದಕ್ಕಾಗಿಯೇ ಹಾವಿನ ದ್ವೇಷ ಹನ್ನೆರಡು ವರುಷ ಎಂಬ ನಾಣ್ಣುಡಿ ಪ್ರಚಲಿತವಾಗಿದೆ.” ವಿಜ್ಞಾನಕ್ಕೂ ಗೊತ್ತಿಲ್ಲದ ಆವಿಷ್ಕಾರಗಳನ್ನು ಈ ಜೋಯಿಸರು ಮಾಡಿರುವುದು ಗೊತ್ತಾಯಿತೆ?
ನಾಗಗಳ ರತಿಕ್ರೀಡೆ ನೋಡಿದರೆ, ಅದು ನಿಮ್ಮನ್ನೇ ದಿಟ್ಟಿಸಿನೋಡಿದರೆ, ಸತ್ತ ಹಾವನ್ನು ನೋಡಿದರೆ ನಿಮಗೆ ಗ್ರಹಚಾರ ಕಾದಿದೆ. ಜೋಯಿಸರು ಏನು ಹೇಳುತ್ತಾರೆ ನೋಡಿ!
“ಕೇವಲ ಹುಲು ಮಾನವನು ಮೃತಪಟ್ಟಾಗ ಔಧ್ರ್ವದೈಹಿಕ ಕ್ರಿಯಾಕರ್ಮಗಳನ್ನು ನೆರವೇರಿಸುವಂತೆಯೇ ಸರ್ಪ ನಾಶವಾದಾಗಲೂ ಯೋಗ್ಯವಾಗಿ ದೋಷ ಪರಿಹಾರಾತ್ಮಕ ಕ್ರಿಯಾಕರ್ಮಗಳನ್ನು ಮಾಡುವುದು ಮಾನವನ ಕರ್ತವ್ಯವಾಗಿದೆ.”
ವಾಸ್ತವವಾಗಿ ಮೊತ್ತಮೊದಲು ನನಗೆ ಈ ನಾಗನ ಬಗ್ಗೆ ಗೊತ್ತಾದುದು ತೀರಾ ಬಾಲ್ಯದಲ್ಲಿ! ಒಂದು ದಿನ ನನ್ನ ತಂದೆಯವರು ಗದ್ದೆಯಿಂದ ಓಡಿಬಂದರು. ಅವರು ಆತಂಕಗೊಂಡಿದ್ದರು! ನಮಗಿದ್ದ ತೋಟದ ಬದಿಯಲ್ಲಿ ಭಾರೀ ಗಾತ್ರದ ಮುದಿ ಹಾವು ಸತ್ತುಬಿದ್ದಿದೆ ಎಂದು ಸಾರಿದವರೇ ಅದಕ್ಕೀಗ ಅಂತ್ಯಸಂಸ್ಕಾರ ಆಗಬೇಕೆಂದೂ ಖರ್ಚಿಗೆ ಏನು ಮಾಡುವುದೆಂದು ಚಿಂತಾಕ್ರಾಂತರಾದರು. ಇದು ನಡೆದು ನಾಲ್ಕು ದಶಕಗಳೇ ಕಳೆದಿವೆ. ವಿದ್ಯಾವಂತರಾದ ನನ್ನ ತಂದೆಯವರಲ್ಲೇ ಇಷ್ಟೊಂದು ಭಯಹುಟ್ಟಿಸಿದ ಈ ಸರ್ಪವು ಅವಿದ್ಯಾವಂತ ಹಳ್ಳಿಗರ ತಲೆಯಲ್ಲಿ ಶತಮಾನಗಳಿಂದ ಹೊಕ್ಕುಕುಳಿತು ಹುಟ್ಟಿಸಿರುವ ಭಯ ಹೇಗಿದ್ದೀತು ಎಂದು ಊಹಿಸಿ. ಈ ಸರ್ಪ ಸಂಸ್ಕಾರದ ಬಗ್ಗೆಯೇ ಮುಂದೆ ನೋಡೋಣ.

– ನಿಖಿಲ್ ಕೋಲ್ಪೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೆಲಸದ ಅವಧಿ ಬಳಿಕ ಯಾವುದೇ ಕರೆಗಳು, ಇಮೇಲ್‌ಗಳಿಗೆ ಉತ್ತರಿಸಬೇಕಿಲ್ಲ : ಸಂಪರ್ಕ ಕಡಿತ ಹಕ್ಕು ಮಸೂದೆ ಹೇಳುವುದೇನು?

ದೇಶದಲ್ಲಿ ಕಾರ್ಪೋರೇಟ್ ಸಂಸ್ಥೆಗಳು ಉದ್ಯೋಗಿಗಳ ಮೇಲೆ ಅತೀವ ಕೆಲಸದ ಹೊರೆಯನ್ನು ಹೇರಿ ಅವರ ಖಾಸಗಿ ಜೀವನವನ್ನು ಕಿತ್ತುಕೊಳ್ಳುವ ಮೂಲಕ ಮಾನಸಿಕ ಒತ್ತಡಕ್ಕೆ ತಳ್ಳುತ್ತಿರುವ ಪರಿಸ್ಥಿತಿ ಗಂಭೀರ ಹಂತಕ್ಕೆ ತಲುಪಿದೆ. ಅದಾಗ್ಯೂ ಕೆಲ ಕಾರ್ಪೋರೇಟ್‌...

ಯುದ್ಧ ವಿರೋಧಿ ವಾಟ್ಸಾಪ್ ಸ್ಟೇಟಸ್ : ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿದ್ದ ದಲಿತ ಪ್ರಾಧ್ಯಾಪಕಿ ವಜಾ

ಭಾರತೀಯ ಸೇನೆಯ ಆಪರೇಷನ್ ಸಿಂಧೂರ್ ವೇಳೆ ಯುದ್ಧ ವಿರೋಧಿ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದ ಚೆನ್ನೈನ ಎಸ್‌ಆರ್‌ಎಂ ವಿಶ್ವವಿದ್ಯಾಲಯದ ಸಹಾಯಕ ಪ್ರಾಧ್ಯಾಪಕಿ ಲೋರಾ ಶಾಂತಕುಮಾರ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಎಸ್‌ಆರ್‌ಎಂನ ಆಂತರಿಕ ಸಮಿತಿಯ ವರದಿಯು ಲೋರಾ...

ಗಾಝಾದಲ್ಲಿ ಕದನ ವಿರಾಮ : ಎರಡು ವರ್ಷಗಳ ಬಳಿಕ ಬೆಥ್ಲೆಹೆಮ್‌ನಲ್ಲಿ ಮರುಕಳಿಸಿದ ಕ್ರಿಸ್‌ಮಸ್ ಸಂಭ್ರಮ

ಗಾಝಾದಲ್ಲಿ ಕದನ ವಿರಾಮ ಜಾರಿಯಾಗಿರುವ ಹಿನ್ನೆಲೆ, ಎರಡು ವರ್ಷಗಳ ನಂತರ ಈ ಬಾರಿ ಯೇಸು ಕ್ರಿಸ್ತನ ಜನ್ಮಸ್ಥಳ ಜೆರುಸಲೇಂನ ಬೆಥ್ಲೆಹೆಮ್‌ನಲ್ಲಿ ಕ್ರಿಸ್‌ಮಸ್‌ ಸಂಭ್ರಮಾಚರಣೆ ಮರುಕಳಿಸಿದೆ. ಶನಿವಾರ (ಡಿಸೆಂಬರ್ 6) ಬೆಥ್ಲೆಹೆಮ್‌ನ ಮ್ಯಾಂಗರ್ ಸ್ಕ್ವೇರ್‌ನಲ್ಲಿರುವ ಚರ್ಚ್...

ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟು : ಜೆಪಿಸಿ ವಿಚಾರಣೆ ಕೋರಿ ಪ್ರಧಾನಿಗೆ ಪತ್ರ ಬರೆದ ಸಂಸದ ಜಾನ್ ಬ್ರಿಟ್ಟಾಸ್

ಇಂಡಿಗೋ ವಿಮಾನಗಳ ಹಾರಾಟ ವ್ಯತ್ಯಯದಿಂದ ಉಂಟಾದ ರಾಷ್ಟ್ರವ್ಯಾಪಿ ವಿಮಾನಯಾನ ಬಿಕ್ಕಟ್ಟಿನ ಕುರಿತು ಜಂಟಿ ಸಂಸದೀಯ ಸಮಿತಿ (ಜೆಪಿಸಿ) ವಿಚಾರಣೆ ಅಥವಾ ನ್ಯಾಯಾಂಗ ತನಿಖೆ ಮಾಡಿಸುವಂತೆ ಕೋರಿ ರಾಜ್ಯಸಭಾ ಸಂಸದ ಜಾನ್ ಬ್ರಿಟ್ಟಾಸ್ ಪ್ರಧಾನಿ...

ಒಳಮೀಸಲಾತಿ : ಶೇ.17ರ ಪ್ರಮಾಣದಲ್ಲೇ ಮುಂದುವರಿಯಲು ಸರ್ಕಾರ ತೀರ್ಮಾನ?

ಒಳಮೀಸಲಾತಿಗೆ ಸಂಬಂಧಿಸಿದಂತೆ ಉಂಟಾಗಿರುವ ಕಗ್ಗಂಟನ್ನು ಎದುರಿಸಲು ಮುಂದಾಗಿರುವ ರಾಜ್ಯ ಸರ್ಕಾರ, ಶೇಕಡ 17ರ ಮೀಸಲಾತಿ ಪ್ರಮಾಣದಲ್ಲೇ ಮುಂದುವರಿಯಲು ತೀರ್ಮಾನಿಸಿರುವುದಾಗಿ ತಿಳಿದುಬಂದಿದೆ. ಶನಿವಾರ ಸಂಜೆ (ಡಿಸೆಂಬರ್ 6) ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ...

ಗೋವಾ ನೈಟ್ ಕ್ಲಬ್‌ನಲ್ಲಿ ಸಿಲಿಂಡರ್ ಸ್ಫೋಟ; 25 ಮಂದಿ ಸಾವು

ಉತ್ತರ ಗೋವಾದ ನೈಟ್‌ ಕ್ಲಬ್‌ವೊಂದರಲ್ಲಿ ಶನಿವಾರ (ಡಿಸೆಂಬರ್ 6) ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟದಲ್ಲಿ ಕನಿಷ್ಠ 25 ಜನರು ಸಾವನ್ನಪ್ಪಿದ್ದು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಸಾವಿಗೀಡಾದವರಲ್ಲಿ ಹೆಚ್ಚಿನವರು ಕ್ಲಬ್‌ನ ಅಡುಗೆ ಸಿಬ್ಬಂದಿಯಾಗಿದ್ದು,...

ಮೈಸೂರು| ಒಳಮೀಸಲಾತಿ ಹೋರಾಟ ಹತ್ತಿಕ್ಕಲು ನಿಷೇಧಾಜ್ಞೆ ಹೇರಿದ ಕಾಂಗ್ರೆಸ್ ಸರ್ಕಾರ

ಪೂರ್ಣ ಪ್ರಮಾಣದ ಒಳಮೀಸಲಾತಿ ಜಾರಿಗೆ ಆಗ್ರಹಿಸಿ 'ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ' ನಡೆಸುತ್ತಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸರು ಅನುಮತಿ ನಿರಾಕರಿಸಿದ್ದು, ಸಿದ್ದರಾಮನಹುಂಡಿಯಿಂದ ಮೈಸೂರಿಗೆ ಇಂದು ಪಾದಯಾತ್ರೆ ಆರಂಭಿಸಿದ ಹೋರಾಟಗಾರರನ್ನು...

‘ನಕಲಿ ಬ್ಯಾಂಕ್ ಗ್ಯಾರಂಟಿ’ ಪ್ರಕರಣ : ರಿಲಯನ್ಸ್ ಪವರ್, ಇತರ ಸಂಸ್ಥೆಗಳ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ ಇಡಿ

ರಿಲಯನ್ಸ್ ಪವರ್ ಕಂಪನಿಯು ಭಾರತೀಯ ಸೌರಶಕ್ತಿ ನಿಗಮಕ್ಕೆ (ಎಸ್‌ಇಸಿಐ) ಟೆಂಡರ್ ಪಡೆಯಲು ಸಲ್ಲಿಸಿದ 68 ಕೋಟಿ ರೂಪಾಯಿಗಳ ನಕಲಿ ಬ್ಯಾಂಕ್ ಗ್ಯಾರಂಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಿಲಯನ್ಸ್ ಪವರ್ ಲಿಮಿಟೆಡ್ ಮತ್ತು ರಿಲಯನ್ಸ್ ಇನ್ಫ್ರಾಸ್ಟ್ರಕ್ಚರ್‌ನ...

ಉತ್ತರ ಪ್ರದೇಶ| ಬಾಬರಿ ಮಸೀದಿ ಮೇಲಿನ ದಾಳಿಗೆ 33 ವರ್ಷ; ಅಯೋಧ್ಯೆ-ವಾರಣಾಸಿಯಲ್ಲಿ ಬಿಗಿ ಭದ್ರತೆ

ಬಾಬರಿ ಮಸೀದಿ ಧ್ವಂಸವಾಗಿ 33ನೇ ವರ್ಷ ತುಂಬುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಅಯೋಧ್ಯೆ ಮತ್ತು ಉತ್ತರ ಪ್ರದೇಶದ ಇತರ ಪ್ರದೇಶಗಳಲ್ಲಿ ಭದ್ರತಾ ಪಡೆಗಳು ಜಾಗರೂಕರಾಗಿದ್ದು, ಎಲ್ಲಾ ಮಾರ್ಗಗಳಲ್ಲಿ ವಾಹನಗಳ ಸಂಪೂರ್ಣ ತಪಾಸಣೆ ನಡೆಸುತ್ತಿವೆ. ಈ ಕುರಿತು...

ನ್ಯಾಷನಲ್ ಹೆರಾಲ್ಡ್‌ಗೆ ದೇಣಿಗೆ: ‘ಡಿಕೆ’ ಸಹೋದರರಿಗೆ ಇಡಿ-ದೆಹಲಿ ಪೊಲೀಸರಿಂದ ಸಮನ್ಸ್

ನ್ಯಾಷನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಸಂಸ್ಥೆಗಳಿಗೆ ನೀಡಿದ ದೇಣಿಗೆಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಕೈಗೊಂಡಿರುವ ತನಿಖೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಮತ್ತು ಜಾರಿ ನಿರ್ದೇಶನಾಲಯವು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಮತ್ತು...