Homeಅಂಕಣಗಳುಯಾವ ಧರ್ಮವೂ ಮಹಿಳೆಯರ ಪರವಲ್ಲ....

ಯಾವ ಧರ್ಮವೂ ಮಹಿಳೆಯರ ಪರವಲ್ಲ….

- Advertisement -
- Advertisement -

ಕಳೆದ ವಾರ ತೀರಿಕೊಂಡ ಪೋಪ್ ಜಾನ್ ಪಾಲ್ ಬಗ್ಗೆ ಎಲ್ಲೆಡೆಯಿಂದ ಪ್ರಶಂಸೆಯ ಶ್ರದ್ಧಾಂಜಲಿಗಳೇ ಕೇಳಿಬರುತ್ತಿವೆ. ಆತ ಶಾಂತಿಪ್ರಿಯರಾಗಿದ್ದರು ಎಂದೂ, ಮಾನವತಾವಾದಿಯಾಗಿದ್ದರು ಎಂದೂ, ಶೋಷಿತರ ಪರವಾಗಿದ್ದರೆಂದೂ ಅವರನ್ನು ಎಲ್ಲರೂ ಹೊಗಳಿದ್ದೇ ಹೊಗಳಿದ್ದು. ಆದರೆ ಅದೇ ಜಾನ್ ಪಾಲ್ ಮಹಿಳಾ ಹಕ್ಕುಗಳ ವಿರೋಧಿಯಾಗಿದ್ದರೆಂದೂ, ಅಭಿವ್ಯಕ್ತಿ ಸ್ವಾತಂತ್ರ್ಯ ವನ್ನು ನಿರಾಕರಿಸಿದ್ದರೆಂದೂ, ಕ್ರಿಶ್ಚಿಯನ್ ಧರ್ಮದ ಮೂಲಭೂತವಾದಿಗಳಿಗೆ ಬೆಂಬಲ ನೀಡಿದ್ದರೆಂದೂ ಯಾರೂ ಹೇಳುತ್ತಿಲ್ಲ! ಹಾಗೆ ಯಾರಾದರೂ ಹೇಳಿದ್ದರೂ ಹೊಗಳುಭಟ್ಟರ ಆರ್ಭಟದಲ್ಲಿ ಈ `ಅಪಸ್ವರ’ ಗಳು ಯಾರ ಕಿವಿಗೂ ಬಿದ್ದಂತಿಲ್ಲ!

ಸಂಪ್ರದಾಯದ ಹೆಸರಿನಲ್ಲಿ ಮಹಿಳೆಯರ ಹಕ್ಕುಗಳನ್ನು ಕಿತ್ತುಕೊಂಡ ಧರ್ಮಾಧಿಕಾರಿಗಳಲ್ಲಿ ಪೋಪ್ ಮೊದಲನೆ ಯವರೂ ಅಲ್ಲ; ಖಂಡಿತವಾಗಿ ಕೊನೆಯವರೂ ಅಲ್ಲ. ಏಕೆಂದರೆ ಕ್ರಿಶ್ಚಿಯನ್ ಧರ್ಮ ಮಾತ್ರವಲ್ಲ, ಜಗತ್ತಿನ ಬಹಳಷ್ಟು ಪ್ರಮುಖ ಧರ್ಮಗಳೂ ಮಹಿಳಾ ವಿರೋಧಿಯೇ ಆಗಿವೆ.

ಪೈಗಂಬರದು ಮಹಿಳೆಯರನ್ನು ಬುರ್ಕಾಗಳಲ್ಲಿ ಇರಿಸಿ ಅವರನ್ನು ಎರಡನೆ ದರ್ಜೆಯ ಪ್ರಜೆಗಳಂತೆ ಕಾಣಿ ಎಂದು ಹೇಳಿರಲಿಲ್ಲ. ಒಂದು ದಿನ ಪೈಗಂಬರರು ಬಹಳ ದಣಿದಿದ್ದರೂ ಅವರೊಂದಿಗೆ ಮಾತುಕತೆಗೆಂದು ಬಂದಿದ್ದ ಇಬ್ಬರು ಅತಿಥಿ ಗಳು ಅದೆಷ್ಟೇ ಹೊತ್ತಾದರೂ ಹೊರಡಲಿಲ್ಲ ವಾದ್ದರಿಂದ, ಪೈಗಂಬರರು ತಮ್ಮ ಓರ್ವ ಮಡದಿ ಇದ್ದ ಕೋಣೆಯ ಬಾಗಿಲಿಗೆ ಪರದೆಯನ್ನು ಹಾಕಿ ನಿದ್ದೆಗೆ ಸಜ್ಜಾದರು. ಅದನ್ನೇ ನೆಪವಾಗಿಸಿಕೊಂಡು ಇವತ್ತು ಮುಸ್ಲಿಂ ಮಹಿಳೆಯರನ್ನು ಬುರ್ಕಾಗಳಲ್ಲಿ ಇರಿಸಿ ಅವರನ್ನು ಶೋಷಿಸಲಾಗುತ್ತಿದೆ.

ಅಂತಹ ಮೇಧಾವಿ ಗೌತಮ ಬುದ್ಧ ಕೂಡ ಒಂದು ರೀತಿಯಲ್ಲಿ ಮಹಿಳಯರ ಬಗ್ಗೆ ತಾರತಮ್ಯ ನೀತಿ ಅನುಸರಿಸಿದ್ದ. ಆತ ತನ್ನ ಮಡದಿ ಯಶೋಧರೆ ಸೇರಿದಂತೆ ಇತರ ಮಹಿಳೆಯರನ್ನು ಅನುಯಾಯಿ ಗಳಾಗಿ ಸ್ವೀಕರಿಸಿದರೂ, ಮಹಿಳೆಯರು ಬಿಕ್ಕುಗಳಾ ಗಲು ಪ್ರಾರಂಭದಲ್ಲಿ ಅನುಮತಿ ನೀಡಿರಲಿಲ್ಲ. ಬುದ್ಧನ ಚಿಕ್ಕಮ್ಮ ಮಹಾಪ್ರಜಾಪತಿ ತಾನು ಬಿಕ್ಕು ಆಗಬೇಕೆಂದು ಕೇಳಿಕೊಂಡಾಗ ಬುದ್ಧ ನಿರಾಕರಿಸಿದ. ಕೊನೆಗೆ ಬುದ್ಧನ ಆಪ್ತ ಶಿಷ್ಯ ಆನಂದ ಮಹಿಳೆಯರ ಪರವಾಗಿ ವಾದಿಸಿದ ನಂತರ “ಪುರುಷ ಬಿಕ್ಕುಗಳಿಗೆ ಮಹಿಳಾ ಬಿಕ್ಕುಗಳನ್ನು ಹಿರಿಯರು-ಕಿರಿಯರು ಎಂಬ ಭೇದಭಾವವಿಲ್ಲದೆ ಗೌರವಿಸಬೇಕು; ಪುರುಷ ಬಿಕ್ಕುಗಳನ್ನು ಯಾವುದೇ ಕಾರಣಕ್ಕೂ ಮಹಿಳಾ ಬಿಕ್ಕುಗಳು ಟೀಕಿಸಬಾರದು” ಎಂಬಂತಹ ಷರತ್ತುಗಳನ್ನು ಹೇರಿದ ನಂತರವೇ ಒಪ್ಪಿಗೆ ನೀಡಿದ್ದ ಗೌತಮ ಬುದ್ಧ.

ಇನ್ನು ಮನುವಾದಿ `ಹಿಂದೂ’ ಧರ್ಮದ ಬಗ್ಗೆ ಇಲ್ಲಿ ಹೇಳುವ ಅಗತ್ಯವಿಲ್ಲ ಎನಿಸುತ್ತದೆ. ಪುರೋಹಿತಶಾಹಿ ವ್ಯವಸ್ಥೆಯಲ್ಲಿ ಶೂದ್ರರಿಗೂ, ದಲಿತರಿಗೂ, ಮಹಿಳೆಯ ರಿಗೂ ಒಂದು ಸ್ಥಾನ, ಮೇಲುಜಾತಿಯ ಪುರುಷರಿಗೆ ಮಾತ್ರ ಮತ್ತೊಂದು ಸ್ಥಾನ….

ಹಾಗೆ ನೋಡಿದರೆ ಮಹಿಳೆಯರನ್ನು ಸಮಾನರೆಂದು ಕಾಣುವ ಒಂದೇ ಒಂದು ಧರ್ಮವೂ ಇದ್ದಂತಿಲ್ಲ. ಮಹಿಳಾ ಹಕ್ಕುಗಳು, ಸ್ವಾತಂತ್ರ್ಯ, ಸ್ವಾಭಿಮಾನ, ಸ್ವಾವಲಂಬಿ ತನ… ಇವೆಲ್ಲವನ್ನು ಗುರುತಿಸಿ, ಅವರನ್ನು ಸಮಾನರಾಗಿ ಕಾಣುವ ಒಂದೇ ಒಂದು ಗ್ರಂಥ ಯಾವುದು ಗೊತ್ತಾ?

ನಮ್ಮ ದೇಶದ ಸಂವಿಧಾನ! ಅದನ್ನೇ ಇನ್ನು ಮುಂದೆ ಎಲ್ಲಾ ಭಾರತೀಯ ನಾರಿಯರು ತಮ್ಮ ಧರ್ಮ ಗ್ರಂಥವನ್ನಾಗಿಸಿಕೊಂಡರೆ ಹೇಗೆ?!

ಗೌರಿ ಲಂಕೇಶ್
ಏಪ್ರಿಲ್ 20, 2005 (`ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...