Homeಅಂಕಣಗಳುಯಾವ ಧರ್ಮವೂ ಮಹಿಳೆಯರ ಪರವಲ್ಲ....

ಯಾವ ಧರ್ಮವೂ ಮಹಿಳೆಯರ ಪರವಲ್ಲ….

- Advertisement -
- Advertisement -

ಕಳೆದ ವಾರ ತೀರಿಕೊಂಡ ಪೋಪ್ ಜಾನ್ ಪಾಲ್ ಬಗ್ಗೆ ಎಲ್ಲೆಡೆಯಿಂದ ಪ್ರಶಂಸೆಯ ಶ್ರದ್ಧಾಂಜಲಿಗಳೇ ಕೇಳಿಬರುತ್ತಿವೆ. ಆತ ಶಾಂತಿಪ್ರಿಯರಾಗಿದ್ದರು ಎಂದೂ, ಮಾನವತಾವಾದಿಯಾಗಿದ್ದರು ಎಂದೂ, ಶೋಷಿತರ ಪರವಾಗಿದ್ದರೆಂದೂ ಅವರನ್ನು ಎಲ್ಲರೂ ಹೊಗಳಿದ್ದೇ ಹೊಗಳಿದ್ದು. ಆದರೆ ಅದೇ ಜಾನ್ ಪಾಲ್ ಮಹಿಳಾ ಹಕ್ಕುಗಳ ವಿರೋಧಿಯಾಗಿದ್ದರೆಂದೂ, ಅಭಿವ್ಯಕ್ತಿ ಸ್ವಾತಂತ್ರ್ಯ ವನ್ನು ನಿರಾಕರಿಸಿದ್ದರೆಂದೂ, ಕ್ರಿಶ್ಚಿಯನ್ ಧರ್ಮದ ಮೂಲಭೂತವಾದಿಗಳಿಗೆ ಬೆಂಬಲ ನೀಡಿದ್ದರೆಂದೂ ಯಾರೂ ಹೇಳುತ್ತಿಲ್ಲ! ಹಾಗೆ ಯಾರಾದರೂ ಹೇಳಿದ್ದರೂ ಹೊಗಳುಭಟ್ಟರ ಆರ್ಭಟದಲ್ಲಿ ಈ `ಅಪಸ್ವರ’ ಗಳು ಯಾರ ಕಿವಿಗೂ ಬಿದ್ದಂತಿಲ್ಲ!

ಸಂಪ್ರದಾಯದ ಹೆಸರಿನಲ್ಲಿ ಮಹಿಳೆಯರ ಹಕ್ಕುಗಳನ್ನು ಕಿತ್ತುಕೊಂಡ ಧರ್ಮಾಧಿಕಾರಿಗಳಲ್ಲಿ ಪೋಪ್ ಮೊದಲನೆ ಯವರೂ ಅಲ್ಲ; ಖಂಡಿತವಾಗಿ ಕೊನೆಯವರೂ ಅಲ್ಲ. ಏಕೆಂದರೆ ಕ್ರಿಶ್ಚಿಯನ್ ಧರ್ಮ ಮಾತ್ರವಲ್ಲ, ಜಗತ್ತಿನ ಬಹಳಷ್ಟು ಪ್ರಮುಖ ಧರ್ಮಗಳೂ ಮಹಿಳಾ ವಿರೋಧಿಯೇ ಆಗಿವೆ.

ಪೈಗಂಬರದು ಮಹಿಳೆಯರನ್ನು ಬುರ್ಕಾಗಳಲ್ಲಿ ಇರಿಸಿ ಅವರನ್ನು ಎರಡನೆ ದರ್ಜೆಯ ಪ್ರಜೆಗಳಂತೆ ಕಾಣಿ ಎಂದು ಹೇಳಿರಲಿಲ್ಲ. ಒಂದು ದಿನ ಪೈಗಂಬರರು ಬಹಳ ದಣಿದಿದ್ದರೂ ಅವರೊಂದಿಗೆ ಮಾತುಕತೆಗೆಂದು ಬಂದಿದ್ದ ಇಬ್ಬರು ಅತಿಥಿ ಗಳು ಅದೆಷ್ಟೇ ಹೊತ್ತಾದರೂ ಹೊರಡಲಿಲ್ಲ ವಾದ್ದರಿಂದ, ಪೈಗಂಬರರು ತಮ್ಮ ಓರ್ವ ಮಡದಿ ಇದ್ದ ಕೋಣೆಯ ಬಾಗಿಲಿಗೆ ಪರದೆಯನ್ನು ಹಾಕಿ ನಿದ್ದೆಗೆ ಸಜ್ಜಾದರು. ಅದನ್ನೇ ನೆಪವಾಗಿಸಿಕೊಂಡು ಇವತ್ತು ಮುಸ್ಲಿಂ ಮಹಿಳೆಯರನ್ನು ಬುರ್ಕಾಗಳಲ್ಲಿ ಇರಿಸಿ ಅವರನ್ನು ಶೋಷಿಸಲಾಗುತ್ತಿದೆ.

ಅಂತಹ ಮೇಧಾವಿ ಗೌತಮ ಬುದ್ಧ ಕೂಡ ಒಂದು ರೀತಿಯಲ್ಲಿ ಮಹಿಳಯರ ಬಗ್ಗೆ ತಾರತಮ್ಯ ನೀತಿ ಅನುಸರಿಸಿದ್ದ. ಆತ ತನ್ನ ಮಡದಿ ಯಶೋಧರೆ ಸೇರಿದಂತೆ ಇತರ ಮಹಿಳೆಯರನ್ನು ಅನುಯಾಯಿ ಗಳಾಗಿ ಸ್ವೀಕರಿಸಿದರೂ, ಮಹಿಳೆಯರು ಬಿಕ್ಕುಗಳಾ ಗಲು ಪ್ರಾರಂಭದಲ್ಲಿ ಅನುಮತಿ ನೀಡಿರಲಿಲ್ಲ. ಬುದ್ಧನ ಚಿಕ್ಕಮ್ಮ ಮಹಾಪ್ರಜಾಪತಿ ತಾನು ಬಿಕ್ಕು ಆಗಬೇಕೆಂದು ಕೇಳಿಕೊಂಡಾಗ ಬುದ್ಧ ನಿರಾಕರಿಸಿದ. ಕೊನೆಗೆ ಬುದ್ಧನ ಆಪ್ತ ಶಿಷ್ಯ ಆನಂದ ಮಹಿಳೆಯರ ಪರವಾಗಿ ವಾದಿಸಿದ ನಂತರ “ಪುರುಷ ಬಿಕ್ಕುಗಳಿಗೆ ಮಹಿಳಾ ಬಿಕ್ಕುಗಳನ್ನು ಹಿರಿಯರು-ಕಿರಿಯರು ಎಂಬ ಭೇದಭಾವವಿಲ್ಲದೆ ಗೌರವಿಸಬೇಕು; ಪುರುಷ ಬಿಕ್ಕುಗಳನ್ನು ಯಾವುದೇ ಕಾರಣಕ್ಕೂ ಮಹಿಳಾ ಬಿಕ್ಕುಗಳು ಟೀಕಿಸಬಾರದು” ಎಂಬಂತಹ ಷರತ್ತುಗಳನ್ನು ಹೇರಿದ ನಂತರವೇ ಒಪ್ಪಿಗೆ ನೀಡಿದ್ದ ಗೌತಮ ಬುದ್ಧ.

ಇನ್ನು ಮನುವಾದಿ `ಹಿಂದೂ’ ಧರ್ಮದ ಬಗ್ಗೆ ಇಲ್ಲಿ ಹೇಳುವ ಅಗತ್ಯವಿಲ್ಲ ಎನಿಸುತ್ತದೆ. ಪುರೋಹಿತಶಾಹಿ ವ್ಯವಸ್ಥೆಯಲ್ಲಿ ಶೂದ್ರರಿಗೂ, ದಲಿತರಿಗೂ, ಮಹಿಳೆಯ ರಿಗೂ ಒಂದು ಸ್ಥಾನ, ಮೇಲುಜಾತಿಯ ಪುರುಷರಿಗೆ ಮಾತ್ರ ಮತ್ತೊಂದು ಸ್ಥಾನ….

ಹಾಗೆ ನೋಡಿದರೆ ಮಹಿಳೆಯರನ್ನು ಸಮಾನರೆಂದು ಕಾಣುವ ಒಂದೇ ಒಂದು ಧರ್ಮವೂ ಇದ್ದಂತಿಲ್ಲ. ಮಹಿಳಾ ಹಕ್ಕುಗಳು, ಸ್ವಾತಂತ್ರ್ಯ, ಸ್ವಾಭಿಮಾನ, ಸ್ವಾವಲಂಬಿ ತನ… ಇವೆಲ್ಲವನ್ನು ಗುರುತಿಸಿ, ಅವರನ್ನು ಸಮಾನರಾಗಿ ಕಾಣುವ ಒಂದೇ ಒಂದು ಗ್ರಂಥ ಯಾವುದು ಗೊತ್ತಾ?

ನಮ್ಮ ದೇಶದ ಸಂವಿಧಾನ! ಅದನ್ನೇ ಇನ್ನು ಮುಂದೆ ಎಲ್ಲಾ ಭಾರತೀಯ ನಾರಿಯರು ತಮ್ಮ ಧರ್ಮ ಗ್ರಂಥವನ್ನಾಗಿಸಿಕೊಂಡರೆ ಹೇಗೆ?!

ಗೌರಿ ಲಂಕೇಶ್
ಏಪ್ರಿಲ್ 20, 2005 (`ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪರಿಶಿಷ್ಟ ಜಾತಿ ಪಟ್ಟಿಗೆ ಜಮ್ಮು-ಕಾಶ್ಮೀರದ ವಾಲ್ಮೀಕಿ ಸಮುದಾಯ: ಒಕ್ಕೂಟ ಸರ್ಕಾರ

ಜಮ್ಮು ಮತ್ತು ಕಾಶ್ಮೀರದ ವಾಲ್ಮೀಕಿ ಸಮುದಾಯವನ್ನು ಈಗ ಅಧಿಕೃತವಾಗಿ ಪರಿಶಿಷ್ಟ ಜಾತಿ ಪಟ್ಟಿಗೆ ಸೇರಿಸಲಾಗಿದೆ ಎಂದು ಕೇಂದ್ರ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಸಚಿವಾಲಯ ಬುಧವಾರ ಸಂಸತ್ತಿಗೆ ತಿಳಿಸಿದೆ. ಇತ್ತೀಚಿನ ವರ್ಷಗಳಲ್ಲಿ ಪ್ರಕ್ರಿಯೆಗೊಳಿಸಲಾದ...

ತಿರುಪತಿ ದೇಣಿಗೆ ಕಳ್ಳತನ ಪ್ರಕರಣ: ಕಾನೂನು ಕ್ರಮ ತೆಗೆದುಕೊಳ್ಳವಂತೆ ‘ಸಿಐಡಿ-ಎಸಿಬಿ’ಗೆ ಹೈಕೋರ್ಟ್ ನಿರ್ದೇಶನ

ತಿರುಮಲ ತಿರುಪತಿ ದೇವಸ್ಥಾನದ ಪರಕಮಣಿ (ದೇಣಿಗೆ ಪೆಟ್ಟಿಗೆ) ಕಳ್ಳತನ ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಆಂಧ್ರಪ್ರದೇಶ ಹೈಕೋರ್ಟ್ ರಾಜ್ಯದ ಅಪರಾಧ ತನಿಖಾ ಇಲಾಖೆ (ಸಿಐಡಿ) ಮತ್ತು ಭ್ರಷ್ಟಾಚಾರ ನಿಗ್ರಹ ದಳ...

ದಲಿತರ ಮನೆಯಲ್ಲಿ ಊಟ ಮಾಡಿದ ಆರ್‌ಎಸ್‌ಎಸ್‌ ಕಾರ್ಯಕರ್ತನ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ

ಗ್ರಾಮೀಣ ಭಾರತದ ಕೆಲವು ಭಾಗಗಳಲ್ಲಿ ಜಾತಿ ಪೂರ್ವಾಗ್ರಹಗಳು ಎಷ್ಟು ಆಳವಾಗಿ ಉಳಿದಿವೆ ಎಂಬುದನ್ನು ನೆನಪಿಸುವ ರೀತಿಯಲ್ಲಿ, ಮಧ್ಯಪ್ರದೇಶದ ರೈಸೇನ್ ಜಿಲ್ಲೆಯ ಹಳ್ಳಿಯೊಂದರಿಂದ ಸಾಮಾಜಿಕ ಬಹಿಷ್ಕಾರ ಮತ್ತು ಅಸ್ಪೃಶ್ಯತೆಯ ಪ್ರಕರಣ ಬೆಳಕಿಗೆ ಬಂದಿದೆ. ಆರ್‌ಎಸ್‌ಎಸ್...

ಅಸ್ಸಾಮಿ ಗಾಯಕನ ಬಂಧನ ಬಗ್ಗೆ ಟೈಮ್ಸ್ ನೌ ನವಭಾರತ್‌ ಪೂರ್ವಾಗ್ರಹ ಪೀಡಿತ ವರದಿ : ವಾರದೊಳಗೆ ತೆಗೆದು ಹಾಕಲು ಎನ್‌ಬಿಡಿಎಸ್‌ಎ ಆದೇಶ

ಸೆಪ್ಟೆಂಬರ್ 2024ರಲ್ಲಿ ಅಸ್ಸಾಮಿ ಗಾಯಕ ಅಲ್ತಾಫ್ ಹುಸೇನ್ ಬಂಧನದ ಬಗ್ಗೆ ಪ್ರಸಾರವಾದ ಕಾರ್ಯಕ್ರಮದ ಭಾಗಗಳನ್ನು ತೆಗೆದುಹಾಕುವಂತೆ ಸುದ್ದಿ ಪ್ರಸಾರ ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರವು (ಎನ್‌ಬಿಡಿಎಸ್‌ಎ) ಟೈಮ್ಸ್ ನೌ ನವಭಾರತ್‌ಗೆ ನಿರ್ದೇಶನ ನೀಡಿದೆ. ಡಿಸೆಂಬರ್...

ಸಾವರ್ಕರ್ ಪ್ರಶಸ್ತಿ ಬಗ್ಗೆ ನನಗೆ ಗೊತ್ತೂ ಇಲ್ಲ, ಸ್ವೀಕರಿಸುವುದೂ ಇಲ್ಲ : ಶಶಿ ತರೂರ್

ಹಿಂದುತ್ವವಾದಿ ವಿ.ಡಿ ಸಾವರ್ಕರ್ ಹೆಸರಿನಲ್ಲಿ ಪ್ರಶಸ್ತಿ ಘೋಷಣೆಯಾದ ಬಗ್ಗೆ ನನಗೆ ಗೊತ್ತೂ ಇಲ್ಲ, ಅಂತಹ ಪ್ರಶಸ್ತಿ ಸ್ವೀಕರಿಸುವುದೂ ಇಲ್ಲ ಎಂದು ಕಾಂಗ್ರೆಸ್ ನಾಯಕ ಹಾಗೂ ತಿರುವನಂತಪುರಂ ಸಂಸದ ಶಶಿ ತರೂರ್ ಬುಧವಾರ (ಡಿಸೆಂಬರ್...

ಮಧ್ಯಪ್ರದೇಶ| ಯುವಕನನ್ನು ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸಿಲುಕಿಸಿದ ಪೊಲೀಸರು

18 ವರ್ಷದ ಯುವಕನನ್ನು ಬಸ್ಸಿನಿಂದ ಅಪಹರಿಸಿ ಮಾದಕವಸ್ತು ಕಳ್ಳಸಾಗಣೆ ಪ್ರಕರಣದಲ್ಲಿ ಸುಳ್ಳು ಆರೋಪ ಹೊರಿಸಿದ ಆರೋಪದ ಮೇಲೆ ಮಧ್ಯಪ್ರದೇಶದ ಆರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ತನಿಖೆಯ ಸಮಗ್ರತೆ ಮತ್ತು ಕಾನೂನುಬದ್ಧತೆಯನ್ನು ಪ್ರಶ್ನಿಸಿದ ಇಂದೋರ್...

ಮುಟ್ಟಿನ ರಜೆ ನೀತಿ ಬಲವಾಗಿ ಸಮರ್ಥಿಸಿಕೊಂಡ ಸರ್ಕಾರ : ಅಧಿಸೂಚನೆ ತಡೆ ತೆರವುಗೊಳಿಸಿದ ಹೈಕೋರ್ಟ್

ಮಹಿಳಾ ಉದ್ಯೋಗಿಗಳಿಗೆ ಪ್ರತಿ ತಿಂಗಳು ಒಂದು ದಿನ ವೇತನ ಸಹಿತ ಮುಟ್ಟಿನ ರಜೆ ನೀಡುವ ಸಂಬಂಧ ಹೊರಡಿಸಿದ್ದ ತನ್ನ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೈಕೋರ್ಟ್‌ನಲ್ಲಿ ಬಲವಾಗಿ ಸಮರ್ಥಿಸಿಕೊಂಡಿದೆ. ಸರ್ಕಾರದ ವಾದ ಆಲಿಸಿದ ಹೈಕೋರ್ಟ್, ಅಧಿಸೂಚನೆಗೆ...

ದೆಹಲಿ ಗಲಭೆ ಪ್ರಕರಣ : ಉಮರ್ ಖಾಲಿದ್, ಶಾರ್ಜೀಲ್ ಇಮಾಮ್ ಮತ್ತಿತರರ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ಸುಪ್ರೀಂ ಕೋರ್ಟ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್, ಶಾರ್ಜೀಲ್ ಇಮಾಮ್, ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್, ಮೊಹಮ್ಮದ್ ಸಲೀಮ್ ಖಾನ್ ಮತ್ತು ಶಾದಾಬ್ ಅಹ್ಮದ್ ಸಲ್ಲಿಸಿದ್ದ ಅರ್ಜಿಗಳ...

ಪಕ್ಷಪಾತ ಆರೋಪದಿಂದ ದೀಪಸ್ತಂಭದವರೆಗೆ..ಕಟಕಟೆಯಲ್ಲಿರುವ ನ್ಯಾಯಮೂರ್ತಿ ಸ್ವಾಮಿನಾಥನ್ ಯಾರು?

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಮಂಗಳವಾರ (ಡಿಸೆಂಬರ್ 9) ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ ಅವರಿಗೆ ನೋಟಿಸ್ ಸಲ್ಲಿಸಲಾಗಿದೆ. ತಮಿಳುನಾಡಿನ ಡಿಎಂಕೆ ಸೇರಿದಂತೆ ವಿವಿಧ...

ಗುಜರಾತ್‌| 6 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಗಂಭೀರವಾಗಿ ಹಲ್ಲೆ ನಡೆಸಿದವನ ಬಂಧನ

ಆರು ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ ನಂತರ ಆಕೆಯ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಗುಜರಾತ್‌ನ ರಾಜ್‌ಕೋಟ್‌ನಲ್ಲಿ ನಡೆದಿದೆ. ಈ ಪ್ರಕರಣ ವ್ಯಾಪಕ ಆಕ್ರೋಶ ವ್ಯಕ್ತವಾಗಿದ್ದು, 35 ವರ್ಷದ...