Homeಅಂಕಣಗಳುಯಾವ ಧರ್ಮವೂ ಮಹಿಳೆಯರ ಪರವಲ್ಲ....

ಯಾವ ಧರ್ಮವೂ ಮಹಿಳೆಯರ ಪರವಲ್ಲ….

- Advertisement -
- Advertisement -

ಕಳೆದ ವಾರ ತೀರಿಕೊಂಡ ಪೋಪ್ ಜಾನ್ ಪಾಲ್ ಬಗ್ಗೆ ಎಲ್ಲೆಡೆಯಿಂದ ಪ್ರಶಂಸೆಯ ಶ್ರದ್ಧಾಂಜಲಿಗಳೇ ಕೇಳಿಬರುತ್ತಿವೆ. ಆತ ಶಾಂತಿಪ್ರಿಯರಾಗಿದ್ದರು ಎಂದೂ, ಮಾನವತಾವಾದಿಯಾಗಿದ್ದರು ಎಂದೂ, ಶೋಷಿತರ ಪರವಾಗಿದ್ದರೆಂದೂ ಅವರನ್ನು ಎಲ್ಲರೂ ಹೊಗಳಿದ್ದೇ ಹೊಗಳಿದ್ದು. ಆದರೆ ಅದೇ ಜಾನ್ ಪಾಲ್ ಮಹಿಳಾ ಹಕ್ಕುಗಳ ವಿರೋಧಿಯಾಗಿದ್ದರೆಂದೂ, ಅಭಿವ್ಯಕ್ತಿ ಸ್ವಾತಂತ್ರ್ಯ ವನ್ನು ನಿರಾಕರಿಸಿದ್ದರೆಂದೂ, ಕ್ರಿಶ್ಚಿಯನ್ ಧರ್ಮದ ಮೂಲಭೂತವಾದಿಗಳಿಗೆ ಬೆಂಬಲ ನೀಡಿದ್ದರೆಂದೂ ಯಾರೂ ಹೇಳುತ್ತಿಲ್ಲ! ಹಾಗೆ ಯಾರಾದರೂ ಹೇಳಿದ್ದರೂ ಹೊಗಳುಭಟ್ಟರ ಆರ್ಭಟದಲ್ಲಿ ಈ `ಅಪಸ್ವರ’ ಗಳು ಯಾರ ಕಿವಿಗೂ ಬಿದ್ದಂತಿಲ್ಲ!

ಸಂಪ್ರದಾಯದ ಹೆಸರಿನಲ್ಲಿ ಮಹಿಳೆಯರ ಹಕ್ಕುಗಳನ್ನು ಕಿತ್ತುಕೊಂಡ ಧರ್ಮಾಧಿಕಾರಿಗಳಲ್ಲಿ ಪೋಪ್ ಮೊದಲನೆ ಯವರೂ ಅಲ್ಲ; ಖಂಡಿತವಾಗಿ ಕೊನೆಯವರೂ ಅಲ್ಲ. ಏಕೆಂದರೆ ಕ್ರಿಶ್ಚಿಯನ್ ಧರ್ಮ ಮಾತ್ರವಲ್ಲ, ಜಗತ್ತಿನ ಬಹಳಷ್ಟು ಪ್ರಮುಖ ಧರ್ಮಗಳೂ ಮಹಿಳಾ ವಿರೋಧಿಯೇ ಆಗಿವೆ.

ಪೈಗಂಬರದು ಮಹಿಳೆಯರನ್ನು ಬುರ್ಕಾಗಳಲ್ಲಿ ಇರಿಸಿ ಅವರನ್ನು ಎರಡನೆ ದರ್ಜೆಯ ಪ್ರಜೆಗಳಂತೆ ಕಾಣಿ ಎಂದು ಹೇಳಿರಲಿಲ್ಲ. ಒಂದು ದಿನ ಪೈಗಂಬರರು ಬಹಳ ದಣಿದಿದ್ದರೂ ಅವರೊಂದಿಗೆ ಮಾತುಕತೆಗೆಂದು ಬಂದಿದ್ದ ಇಬ್ಬರು ಅತಿಥಿ ಗಳು ಅದೆಷ್ಟೇ ಹೊತ್ತಾದರೂ ಹೊರಡಲಿಲ್ಲ ವಾದ್ದರಿಂದ, ಪೈಗಂಬರರು ತಮ್ಮ ಓರ್ವ ಮಡದಿ ಇದ್ದ ಕೋಣೆಯ ಬಾಗಿಲಿಗೆ ಪರದೆಯನ್ನು ಹಾಕಿ ನಿದ್ದೆಗೆ ಸಜ್ಜಾದರು. ಅದನ್ನೇ ನೆಪವಾಗಿಸಿಕೊಂಡು ಇವತ್ತು ಮುಸ್ಲಿಂ ಮಹಿಳೆಯರನ್ನು ಬುರ್ಕಾಗಳಲ್ಲಿ ಇರಿಸಿ ಅವರನ್ನು ಶೋಷಿಸಲಾಗುತ್ತಿದೆ.

ಅಂತಹ ಮೇಧಾವಿ ಗೌತಮ ಬುದ್ಧ ಕೂಡ ಒಂದು ರೀತಿಯಲ್ಲಿ ಮಹಿಳಯರ ಬಗ್ಗೆ ತಾರತಮ್ಯ ನೀತಿ ಅನುಸರಿಸಿದ್ದ. ಆತ ತನ್ನ ಮಡದಿ ಯಶೋಧರೆ ಸೇರಿದಂತೆ ಇತರ ಮಹಿಳೆಯರನ್ನು ಅನುಯಾಯಿ ಗಳಾಗಿ ಸ್ವೀಕರಿಸಿದರೂ, ಮಹಿಳೆಯರು ಬಿಕ್ಕುಗಳಾ ಗಲು ಪ್ರಾರಂಭದಲ್ಲಿ ಅನುಮತಿ ನೀಡಿರಲಿಲ್ಲ. ಬುದ್ಧನ ಚಿಕ್ಕಮ್ಮ ಮಹಾಪ್ರಜಾಪತಿ ತಾನು ಬಿಕ್ಕು ಆಗಬೇಕೆಂದು ಕೇಳಿಕೊಂಡಾಗ ಬುದ್ಧ ನಿರಾಕರಿಸಿದ. ಕೊನೆಗೆ ಬುದ್ಧನ ಆಪ್ತ ಶಿಷ್ಯ ಆನಂದ ಮಹಿಳೆಯರ ಪರವಾಗಿ ವಾದಿಸಿದ ನಂತರ “ಪುರುಷ ಬಿಕ್ಕುಗಳಿಗೆ ಮಹಿಳಾ ಬಿಕ್ಕುಗಳನ್ನು ಹಿರಿಯರು-ಕಿರಿಯರು ಎಂಬ ಭೇದಭಾವವಿಲ್ಲದೆ ಗೌರವಿಸಬೇಕು; ಪುರುಷ ಬಿಕ್ಕುಗಳನ್ನು ಯಾವುದೇ ಕಾರಣಕ್ಕೂ ಮಹಿಳಾ ಬಿಕ್ಕುಗಳು ಟೀಕಿಸಬಾರದು” ಎಂಬಂತಹ ಷರತ್ತುಗಳನ್ನು ಹೇರಿದ ನಂತರವೇ ಒಪ್ಪಿಗೆ ನೀಡಿದ್ದ ಗೌತಮ ಬುದ್ಧ.

ಇನ್ನು ಮನುವಾದಿ `ಹಿಂದೂ’ ಧರ್ಮದ ಬಗ್ಗೆ ಇಲ್ಲಿ ಹೇಳುವ ಅಗತ್ಯವಿಲ್ಲ ಎನಿಸುತ್ತದೆ. ಪುರೋಹಿತಶಾಹಿ ವ್ಯವಸ್ಥೆಯಲ್ಲಿ ಶೂದ್ರರಿಗೂ, ದಲಿತರಿಗೂ, ಮಹಿಳೆಯ ರಿಗೂ ಒಂದು ಸ್ಥಾನ, ಮೇಲುಜಾತಿಯ ಪುರುಷರಿಗೆ ಮಾತ್ರ ಮತ್ತೊಂದು ಸ್ಥಾನ….

ಹಾಗೆ ನೋಡಿದರೆ ಮಹಿಳೆಯರನ್ನು ಸಮಾನರೆಂದು ಕಾಣುವ ಒಂದೇ ಒಂದು ಧರ್ಮವೂ ಇದ್ದಂತಿಲ್ಲ. ಮಹಿಳಾ ಹಕ್ಕುಗಳು, ಸ್ವಾತಂತ್ರ್ಯ, ಸ್ವಾಭಿಮಾನ, ಸ್ವಾವಲಂಬಿ ತನ… ಇವೆಲ್ಲವನ್ನು ಗುರುತಿಸಿ, ಅವರನ್ನು ಸಮಾನರಾಗಿ ಕಾಣುವ ಒಂದೇ ಒಂದು ಗ್ರಂಥ ಯಾವುದು ಗೊತ್ತಾ?

ನಮ್ಮ ದೇಶದ ಸಂವಿಧಾನ! ಅದನ್ನೇ ಇನ್ನು ಮುಂದೆ ಎಲ್ಲಾ ಭಾರತೀಯ ನಾರಿಯರು ತಮ್ಮ ಧರ್ಮ ಗ್ರಂಥವನ್ನಾಗಿಸಿಕೊಂಡರೆ ಹೇಗೆ?!

ಗೌರಿ ಲಂಕೇಶ್
ಏಪ್ರಿಲ್ 20, 2005 (`ಕಂಡಹಾಗೆ’ ಸಂಪಾದಕೀಯದಿಂದ)

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...