Homeಮುಖಪುಟಯುದ್ಧದಾಹಿ ಮೀಡಿಯಾಗಳನ್ನು ಸುಳ್ಳುಗಾರರನ್ನಾಗಿಸಿದ ಮೋದಿ ಚುನಾವಣಾ ಪ್ರಚಾರದಲ್ಲಿ!

ಯುದ್ಧದಾಹಿ ಮೀಡಿಯಾಗಳನ್ನು ಸುಳ್ಳುಗಾರರನ್ನಾಗಿಸಿದ ಮೋದಿ ಚುನಾವಣಾ ಪ್ರಚಾರದಲ್ಲಿ!

- Advertisement -
- Advertisement -

`ಯುದ್ಧ ಫಿಕ್ಸ್’, `ಪಾಪಿ ಪಾಕ್.ಗೆ ಯುದ್ಧವೊಂದೇ ಉತ್ತರ’ `ಯುದ್ಧ ಸನ್ನದ್ಧ’…. ಇವು ಪುಲ್ವಾಮಾ ಭಯೋತ್ಪಾದಕ ದಾಳಿ ನಂತರ ದಿನದ ಇಪ್ಪತ್ನಾಲ್ಕು ಗಂಟೆಯೂ ಮೀಡಿಯಾಗಳ ಪರದೆಗಳನ್ನು ಆವರಿಸುತ್ತಿರುವ ರಣೋತ್ಸಾಹದ ಟೈಟಲ್ಲುಗಳು. ಅದರಲ್ಲೂ ಬಾಲಕೋಟ್ ಮೇಲೆ ಭಾರತೀಯ ವಾಯುಸೇನೆ ದಾಳಿ ನಡೆಸಿದ ನಂತರವಂತೂ ಟೀವಿ ಆಂಕರುಗಳು ಕುರ್ಚಿ ಮೇಲೆ ಕೂರಲಾಗದಷ್ಟು ತುದಿಗಾಲಲ್ಲಿ ನಿಂತು ಪಾಕಿಸ್ತಾನದ ಮೇಲೆ ನಿರಂತರ ಯುದ್ಧ ನಡೆಸುತ್ತಿದ್ದಾರೆ! ಅವರ ಪ್ರಕಾರ ದೇಶಕ್ಕೆ ದೇಶವೇ ಯುದ್ಧಕ್ಕೆ ಸಜ್ಜಾಗಿ ಹೈಟೆನ್ಷನ್.ನಲ್ಲಿ ಕಾಯುತ್ತಿದೆ! ಅಂದರೆ ಈ ದೇಶದ ಪ್ರಧಾನಿಗೂ ಅದೇ ಟೆನ್ಷನ್ ಇರಬೇಕಲ್ಲವೇ?

ಆದರೆ, ಮೀಡಿಯಾದವರು ಯುದ್ಧ ಟೆನ್ಷನ್ನಿಂದ ಜನರನ್ನು ಬೆದರಿಸುತ್ತಿರುವ ಸಮಯದಲ್ಲೇ ಪ್ರಧಾನಿ ಮೋದಿಯವರು ಅಂತಹ ಯಾವ ಟೆನ್ಷನ್ನೂ ಇಲ್ಲದೆ ಮುಂಬರುವ ಎಲೆಕ್ಷನ್ನಿನ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ, ಅದೂ ತಮ್ಮ ಮೋದಿ ಆಪ್ ಮೂಲಕ! ಈ ವಿದ್ಯಮಾನ ಎರಡು ಸಾಧ್ಯತೆಗಳನ್ನ ನಮ್ಮ ಮುಂದೆ ತೆರದಿಡುತ್ತೆ. ಒಂದೋ, ಪ್ರಧಾನಿ ಮೋದಿಯವರಿಗೆ ದೇಶದ ಭದ್ರತೆ, ಸುರಕ್ಷತೆಗಿಂತ ಹೆಚ್ಚಾಗಿ ರಾಜಕೀಯವೇ ಮುಖ್ಯವಾಗಿರಬೇಕು. ಅಥವಾ ಅಂಥಾ ಪ್ರಧಾನಿ ಹುದ್ದೆಯಲ್ಲಿ ಕೂತಿರುವ ವ್ಯಕ್ತಿಯೇ ನಿರುಮ್ಮಳರಾಗಿದ್ದಾರೆಂದರೆ `ಯುದ್ಧ ಸನ್ನದ್ದ ಟೆನ್ಷನ್’ ಇದೆಯೆಂದು ಬೊಬ್ಬಿರಿಯುತ್ತಿರುವ ಈ ಮೀಡಿಯಾಗಳೇ ಬೊಗಳೆ ಬಿಡುತ್ತಿರಬೇಕು! ಹಾಗಾದರೆ, ಇವರೆಲ್ಲ ಕಡ್ಡಿಯನ್ನೇ ಗುಡ್ಡ ಮಾಡಿ ತೋರಿಸುತ್ತಿದ್ದಾರೆಯೇ?

ಸೈನಿಕರ ಬಲಿದಾನವನ್ನು ರಾಜಕೀಯಗೊಳಿಸಬಾರದು ಎನ್ನುವುದು ಯಾವುದೇ ದೇಶದಲ್ಲಿ ಪಾಲಿಸಬೇಕಾದ ಕನಿಷ್ಠ ನೈತಿಕ ನಿಯಮ. ಪುಲ್ವಾನಾ ದಾಳಿಯ ನಂತರ ಹಲವಾರು ರಾಜಕೀಯ ಪಕ್ಷಗಳವರು ಅಸಂಬದ್ಧ ಹೇಳಿಕೆಗಳನ್ನು ನೀಡಿದ್ದಾರೆ. ಆದರೆ ಸೈನಿಕರ ಹೆಸರಿನಲ್ಲಿ ಮತ್ತವರ ಸಾವಿನಲ್ಲಿ ಅತಿ ಹೆಚ್ಚು ರಾಜಕೀಯ ಮಾಡಿದವರು ಬಿಜೆಪಿಯವರೇ ಎನ್ನುವುದರಲ್ಲಿ ಯಾರಿಗೂ ಅನುಮಾನವಿಲ್ಲ. 2014ಕ್ಕೂ ಮೊದಲೂ ಸೈನಿಕರ ಬಲಿದಾನದ ಸಂದರ್ಭವನ್ನು ರಾಜಕೀಯಕ್ಕೆ ಬಳಸಿಕೊಂಡ ಮೋದಿಯವರ ಸಾಕಷ್ಟು ಭಾಷಣದ ವಿಡಿಯೋಗಳು ಇಂದಿಗೂ ಲಭ್ಯವಿದೆ. ಇನ್ನು ಪುಲ್ವಾಮ ದಾಳಿಯ ನಂತರದ ಬಿಜೆಪಿಯ ಪ್ರಚಾರ ನಾಚಿಕೆಯಿಲ್ಲದೆ ನಡೆಯುತ್ತಿದೆ.

ಇಂದು (ಫೆಬ್ರವರಿ 28) ಮೋದಿಯವರು ತಮ್ಮ ಮೋದಿ ಆಪ್ ಮೂಲಕ ದೇಶದ ಕೋಟ್ಯಾಂತರ ಜನರನ್ನು (ಸುಮಾರು 15 ಸಾವಿರ ಬೇರೆ ಬೇರೆ ಸ್ಥಳಗಳಲ್ಲಿ ಎಂದು ಬಿಜೆಪಿ ಪ್ರಚಾರದ ವೇಳೆ ಹೇಳಿಕೊಂಡಿದೆ) ಮುಂಬರುವ 2019ರ ಲೋಕಸಭಾ ಚುನಾವಣೆಗೆ ಆಡಳಿತಾರೂಢ ಪಕ್ಷದ ಪ್ರಚಾರಕ್ಕಾಗಿ ಜಗತ್ತಿನ ಅತ್ಯಂತ ದೊಡ್ಡ ವಿಡಿಯೋ ಕಾನ್ಫರೆನ್ಸ್ ಅನ್ನು ಬಿಜೆಪಿ ಪಕ್ಷದ ಕಾರ್ಯಕರ್ತರ ಜೊತೆ ನಡೆಸಿದ್ದಾರೆ. ಭಾರತದ ಗಡಿಯಲ್ಲಿ ಆತಂಕದ ವಾತಾವರಣವಿದ್ದು ಹಾಗೂ ಪಾಕಿಸ್ತಾನದಲ್ಲಿ ಬಂಧಿತರಾಗಿರುವ ಭಾರತದ ಏರ್ ವಿಂಗ್ ಕಮಾಂಡರ್ ಅಭಿನಂದನ್ ಇನ್ನೂ ಬಿಡುಗಡೆಯಾಗಿ ಭಾರತಕ್ಕೆ ವಾಪಾಸ್ ಆಗದೇ ಇರುವ ಪರಿಸ್ಥಿತಿಯಲ್ಲಿ ತಮ್ಮ ಪಕ್ಷದ ಪರ ಪ್ರಚಾರ ಮಾಡುವ ಅವಶ್ಯಕತೆಯಿದೆಯೇ ಎಂದು ಟಿವಿ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಜನಾಕ್ರೋಶ ವ್ಯಕ್ತವಾಗಿದೆ.

ಮೋದಿಗೆ ಭಾರತ ಮೊದಲಾ, ಇಲ್ಲವೇ ತನ್ನ ಪಕ್ಷದ ಸಂಕುಚಿತ ಹಿತಾಸಕ್ತಿಯೇ ಮೊದಲಾ? ಇದೊಂದು ಲಜ್ಜೆಗೆಟ್ಟ ಕೆಲಸ, ಸೂಕ್ಷ್ಮತೆ ಇಲ್ಲದವರು ಮಾಡುವ ಕೆಲಸ ಇನ್ನಿತ್ಯಾದಿ ಪದಗಳಿಂದ ವೆರಿಫೈಡ್ ಟ್ವಿಟ್ಟರ್ ಖಾತೆಗಳನ್ನೂ ಒಳಗೊಂಡಂತೆ ಸಹಸ್ರಾರು ಜನ ಟೀಕೆ ಮಾಡುತ್ತಿದ್ದಾರೆ. ಅಲ್ಲದೆ ಇದೇ ಫೆಬ್ರವರಿ 27ರಂದು ಖೇಲೋ ಇಂಡಿಯಾ (ಆಟವಾಡಿ ಭಾರತ) ಎನ್ನುವ ಮೊಬೈಲ್ ಆಪ್‌ಅನ್ನು ಉದ್ಘಾಟನೆ ಮಾಡಿದ್ದು, ಅದರಿಂದ ಸಹಾ ಮೋದಿ ಜನರ ಟೀಕೆಗೆ ಗುರಿಯಾಗಿದ್ದಾರೆ. ಈವರೆಗೂ ಒಂದೂ ಪತ್ರಿಕಾಗೋಷ್ಠಿ ನಡೆಸದ ಮೋದಿ ಅವರಿಗೆ ತಮ್ಮದೇ ಪಕ್ಷದ ಕಾರ್ಯಕರ್ತರೊಂದಿಗೆ ಜಗತ್ತಿನ ಅತ್ಯಂತ ಉದ್ದನೆಯ ವಿಡಿಯೋ ಸಂಭಾಷಣೆ ನಡೆಸಲು ಸಮಯ ಹೇಗೆ ಸಿಗುತ್ತದೆ ಎನ್ನುವುದು ಜನರ ಪ್ರಶ್ನೆಯಾಗಿದೆ. ಇದೆಲ್ಲದರ ಜೊತೆಜೊತೆಗೆ ಪುಲ್ವಾಮ ದಾಳಿ ನಂತರದಲ್ಲಿಯೂ ಹಲವು ಚುನಾವಣಾ ಪ್ರಚಾರದಲ್ಲಿ ಪಕ್ಷದ ಪರ ಮತ ಯಾಚನೆ ಮಾಡುವ ಕೆಲಸಗಳಲ್ಲಿ ಮೋದಿ ತೊಡಗಿಸಿಕೊಂಡಿದ್ದಾರೆ. ಇಂಡೋ-ಪಾಕ್ ವಿವಾದದ ಕುರಿತು ಮುಂದಿನ ಹೆಜ್ಜೆಗಳನ್ನು ಚರ್ಚಿಸಲು ಕರೆದಿದ್ದ ಸರ್ವಪಕ್ಷಗಳ ಎರಡೂ ಸಭೆಗೂ ಮೋದಿ ಗೈರು ಹಾಜರಾಗಿದ್ದು ಗಮನಾರ್ಹ! ಮೊದಲನೆಯದ್ದು ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದರೆ, ಮತ್ತೊಂದು ಸುಷ್ಮಾ ಸ್ವರಾಜ್ ನೇತೃತ್ವದಲ್ಲಿ ನಡೆದಿದೆ. ದೇಶದ ಭದ್ರತೆಗೆ ಎದುರಾಗಿರುವ ಆತಂಕದ ಬಗ್ಗೆ ಚರ್ಚಿಸಲು ಕರೆಯಲಾದ ಸಭೆಯಲ್ಲಿ ಭಾಗವಹಿಸಲು ಸಮಯವಿಲ್ಲದ ಮೋದಿಯವರಿಗೆ ಚುನಾವಣಾ ಪ್ರಚಾರದ ವೀಡಿಯೊ ಕಾನ್ಫರೆನ್ಸ್ ಮಾಡಲು, ಆಪ್ ಬಿಡುಗಡೆ ಮಾಡಲು ಹೇಗೆ ಸಮಯ ಸಿಕ್ಕಿತು? ಇದು ಜನ ಕೇಳುತ್ತಿರುವ ಪ್ರಶ್ನೆ.

ಇನ್ನು ದಾಳಿಯಾದ ದಿನದಿಂದ ಇವತ್ತಿನವರೆಗೂ ಅಮಿತ್ ಶಾ ಸೈನಿಕರ ದಾಳಿಯನ್ನ ರಾಜಕೀಯ ಪ್ರಚಾರಕ್ಕೆ ಬಳಸಿಕೊಳ್ಳುತ್ತಲೇ ಇದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ದಾಳಿಯಿಂದ ನಮಗೆ ಕರ್ನಾಟಕದಲ್ಲಿ 22 ಸೀಟು ಗೆಲ್ಲುವುದಕ್ಕೆ ಅನೂಕಲವಾಗಲಿದೆ ಎಂದು ಹೇಳಿ ರಾಷ್ಟ್ರ ಮಟ್ಟದಲ್ಲಿ ಟೀಕೆಗೆ ಒಳಗಾಗಿದ್ದಾರೆ. ಒಟ್ಟಾರೆ ಸೈನಿಕರ ಬಲಿದಾನ ದೇಶದ ರಕ್ಷಣೆಯ ವಿಚಾರವಾಗಿ ಕೇವಲ ಖಾಲಿ ಮಾತುಗಳನ್ನು ಇವರೆಲ್ಲಾ ಆಡುತ್ತಿದ್ದಾರೆಯೇ ಹೊರತು ದೇಶಕ್ಕಿಂತ ಚುನಾವಣೆಯಲ್ಲಿ ಅಧಿಕಾರ ಹಿಡಿಯುವುದೇ ಮೊದಲ ಆದ್ಯತೆ ನೀಡುತ್ತಿರುವುದು ವಾಸ್ತವ ಎಂಬುದು ಕೇವಲ ಆರೋಪವಲ್ಲ.

ಈ ಆಟದಲ್ಲಿ ಪ್ರಧಾನಿಯವರನ್ನೂ ಒಳಗೊಂಡಂತೆ ಸಮಸ್ತ ಬಿಜೆಪಿ ಮೀಡಿಯಾಗಳನ್ನು ಸುಳ್ಳುಗಾರರನ್ನಾಗಿ ಮಾಡುತ್ತಿರೋದು ವಿಪರ್ಯಾಸ. ದುರಂತವೆಂದರೆ ಇದು ಹೀಗೇ ಮುಂದುವರೆದರೆ ಜನರ ನಡುವೆ ತಮ್ಮ ಮೂಲಕ ಇಡಿಯಾಗಿ ಪತ್ರಿಕೋದ್ಯಮದ ವಿಶ್ವಾಸಾರ್ಹತೆ ಎಷ್ಟು ಪಾತಾಳಕ್ಕೆ ಕುಸಿಯಲಿದೆ ಎಂಬ ಅಂದಾಜೂ ಇಲ್ಲದ ಮೀಡಿಯಾಗಳು ತಮ್ಮ ಕಾಲ ಮೇಲೆ ತಾವೇ ಕಲ್ಲು ಎತ್ತಿ ಹಾಕಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BREAKING NEWS: ಚನ್ನರಾಯಪಟ್ಟಣ ರೈತ ಹೋರಾಟಕ್ಕೆ ‘ತಾಂತ್ರಿಕ’ ಅಂತ್ಯ: 1777 ಎಕರೆ ಡಿನೋಟಿಫೈಗೆ ಒಪ್ಪಿದ ಸಚಿವ ಸಂಪುಟ

ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಹೋರಾಟಕ್ಕೆ ಅಂತಿಮವಾಗಿ ತಾಂತ್ರಿಕ ಜಯವೂ ಸಿಕ್ಕಿದೆ. ಡಿಸೆಂಬರ್ 4, ಗುರುವಾರ ಮಧ್ಯಾಹ್ನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ...

ಲೈಂಗಿಕ ಕಿರುಕುಳ ಆರೋಪ: ಪಾಲಕ್ಕಾಡ್ ಶಾಸಕನ ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕಾರದ ಬೆನ್ನಲ್ಲೇ, ಪಕ್ಷದಿಂದ ಉಚ್ಛಾಟಿಸಿದ ಕಾಂಗ್ರೆಸ್ 

ತಿರುವನಂತಪುರಂ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪಾಲಕ್ಕಾಡ್ ಶಾಸಕ ರಾಹುಲ್ ಮಮ್‌ಕೂಟತಿಲ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ನ್ಯಾಯಾಲಯ ತಿರಸ್ಕರಿಸಿದ ನಂತರ ಕೇರಳ ಕಾಂಗ್ರೆಸ್ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ.  ರಾಹುಲ್ ಮಮ್‌ಕೂಟತಿಲ್ ತಮ್ಮ ಶಾಸಕ...

ದಲಿತರು ಒಗ್ಗಟ್ಟಾಗದೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ: ಸಚಿವ ಸತೀಶ್ ಜಾರಕಿಹೊಳಿ

ದಲಿತರು ಒಗ್ಗಟ್ಟಾಗದೆ ಇದ್ದರೆ ಮುನುವಾದಿಗಳ ವಿರುದ್ಧ ಶಕ್ತಿ ಪ್ರದರ್ಶನ ಸಾಧ್ಯವಿಲ್ಲ; ನಾವು ನೂರಿನ್ನೂರು ಜನ ಪ್ರತ್ಯೇಕ ಹೋರಾಟ ಮಾಡಿದರೆ ಪ್ರಯೋಜನವಿಲ್ಲ, ಒಂದು ಕರೆ ಕೊಟ್ಟರೆ ಲಕ್ಷಾಂತರ ಜನರು ಸೇರುವಂತಾಗಬೇಕು ಎಂದು ಲೋಕೋಪಯೋಗಿ ಸಚಿವ...

ದಲಿತ ಚಳವಳಿ ಎಲ್ಲ ಶೋಷಿತರನ್ನೂ ಒಳಗೊಂಡಿದೆ; ನಮ್ಮಲ್ಲಿ ಹೊಲೆ-ಮಾದಿಗ ಎಂಬ ಬೇಧವಿಲ್ಲ: ದಸಂಸ ಸಂಚಾಲಕ ಹೆಣ್ಣೂರು ಶ್ರೀನಿವಾಸ್

"ದಲಿತ ಚಳವಳಿ ಯಾವುದೇ ಒಂದು ಜಾತಿಯ ಪರವಾಗಿಲ್ಲ.. ಪೌರ ಕಾರ್ಮಿಕನ ಮಗನನ್ನ ರಾಜ್ಯ ಸಂಚಾಲಕನನ್ನಾಗಿ ಮಾಡಿದೆ. ನಮ್ಮಲ್ಲಿ ಹೊಲೆಯ-ಮಾದಿಗ ಎಂಬ ಬೇಧವಿಲ್ಲ. ಈ ಚಳವಳಿ ಎಲ್ಲ ಶೋಷಿತ ಸಮುದಾಯಗಳನ್ನೂ ಒಳಗೊಂಡಿದೆ" ಎಂದು ಕರ್ನಾಟಕ...

ಚಳಿಗಾಲದ ಅಧಿವೇಶನ: ಸಂಸತ್ತಿನ ಹೊರಗೆ ‘ವಾಯು ಮಾಲಿನ್ಯದ ಕುರಿತು ಚರ್ಚೆಗೆ ಒತ್ತಾಯಿಸಿ ವಿರೋಧ ಪಕ್ಷಗಳಿಂದ ಪ್ರತಿಭಟನೆ

2025 ರ ಸಂಸತ್ತಿನ ಚಳಿಗಾಲದ ಅಧಿವೇಶನವು ನಾಲ್ಕನೇ ದಿನಕ್ಕೆ ಕಾಲಿಡುತ್ತಿದ್ದಂತೆ, ದೆಹಲಿ-ಎನ್‌ಸಿಆರ್ ಮತ್ತು ಉತ್ತರ ಭಾರತದಾದ್ಯಂತ ಹದಗೆಡುತ್ತಿರುವ ವಾಯು ಮಾಲಿನ್ಯದ ಕುರಿತು ತುರ್ತು ಚರ್ಚೆಗೆ ಒತ್ತಾಯಿಸಿ ಕಾಂಗ್ರೆಸ್ ಸಂಸದರು ಗುರುವಾರ ಲೋಕಸಭೆಯಲ್ಲಿ ಮುಂದೂಡಿಕೆ...

ಭೀಮಾ ಕೋರೆಗಾಂವ್ ಪ್ರಕರಣ: ದೆಹಲಿ ವಿವಿ ಪ್ರಾಧ್ಯಾಪಕ ಹನಿ ಬಾಬುಗೆ ಜಾಮೀನು

ಭೀಮಾ ಕೋರೆಗಾಂವ್ ಪ್ರಕರಣಕ್ಕೆ ಸಂಬಂಧಿಸಿದಂತೆ 2020 ರಲ್ಲಿ ಬಂಧಿಸಲ್ಪಟ್ಟು ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ (ಯುಎಪಿಎ) ಅಡಿಯಲ್ಲಿ ಆರೋಪ ಎದುರಿಸುತ್ತಿರುವ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಮತ್ತು ಖ್ಯಾತ ಶಿಕ್ಷಣ ತಜ್ಞ ಡಾ....

ಕೇಂದ್ರ ಸರ್ಕಾರ ಗಣ್ಯರು ನಮ್ಮನ್ನು ಭೇಟಿ ಮಾಡುವುದನ್ನು ನಿರಾಕರಿಸುತ್ತದೆ: ಪುಟಿನ್ ಭಾರತ ಭೇಟಿಗೂ ಮುನ್ನ ರಾಹುಲ್ ಗಾಂಧಿ ಆರೋಪ

ವಿದೇಶಿ ನಾಯಕರು ವಿರೋಧ ಪಕ್ಷದ ನಾಯಕರನ್ನು ಭೇಟಿ ಮಾಡುವುದು ಬಹಳ ಹಿಂದಿನಿಂದಲೂ ನಡೆದು ಬಂದಿರುವ ಸಂಪ್ರದಾಯವಾಗಿದೆ, ಆದರೆ ಪ್ರಧಾನಿ ಮೋದಿ ಮತ್ತು ವಿದೇಶಾಂಗ ಸಚಿವಾಲಯ ಈ ನಿಯಮವನ್ನು ಪಾಲಿಸುತ್ತಿಲ್ಲ ಎಂದು ರಾಹುಲ್ ಗಾಂಧಿ...

ಪ್ರತಿಭಟನೆಗಿದ್ದ ಏಕೈಕ ಜಾಗ ‘ಬೆಂಗಳೂರಿನ ಫ್ರೀಡಂ ಪಾರ್ಕ್’ ತಾತ್ಕಾಲಿಕ ಬಂದ್, ಹೋರಾಟಗಾರರ ಪರದಾಟ

ಕರ್ನಾಟಕದ ಎಲ್ಲೆಡೆಯಿಂದ ರಾಜಧಾನಿ ಬೆಂಗಳೂರಿಗೆ ಬಂದು ಹೋರಾಟಗಾರರು ಹೋರಾಟ ಮಾಡುವ ಏಕೈಕ ಜಾಗ ಫ್ರೀಡಂ ಪಾರ್ಕ್. ಅಂಥಾ ಫ್ರೀಡಂ ಪಾರ್ಕ್‌ ಅನ್ನು ಈಗ ಬಂದ್ ಮಾಡಲಾಗಿದೆ. ಅಭಿವೃದ್ಧಿ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ ತಾತ್ಕಾಲಿಕವಾಗಿ...

ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಎರಡು ದಿನಗಳ ಭಾರತ ಭೇಟಿ: ದೆಹಲಿಯಲ್ಲಿ ಬಹುಹಂತದ ಭದ್ರತಾ ವ್ಯವಸ್ಥೆ ಜಾರಿ

ನವದೆಹಲಿ: ಎರಡು ದಿನಗಳ ಭಾರತ ಭೇಟಿಗಾಗಿ ಇಂದು ಸಂಜೆ ದೆಹಲಿಗೆ ಆಗಮಿಸುತ್ತಿರುವ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರಿಗೆ ಗುರುವಾರ ಬಹು ಹಂತದ ಭದ್ರತಾ ವ್ಯವಸ್ಥೆಯನ್ನು ಜಾರಿಗೊಳಿಸಲಾಗಿದ್ದು, ರಾಷ್ಟ್ರ ರಾಜಧಾನಿಯಲ್ಲಿ ಗುರುವಾರ ಕಟ್ಟೆಚ್ಚರ...

ಬೆಳಗಾವಿ ಚಳಿಗಾಲ ಅಧಿವೇಶನಕ್ಕೆ ಸಿದ್ಧತೆ: ಇಂದು ಸಚಿವರೊಂದಿಗೆ ಸಭೆ ನಡೆಸಲಿರುವ ಸಿಎಂ ಸಿದ್ದರಾಮಯ್ಯ 

ಬೆಳಗಾವಿ ಚಳಿಗಾಲ ಅಧಿವೇಶನ ಡಿಸೆಂಬರ್ 8ರಿಂದ ಆರಂಭವಾಗಲಿದ್ದು, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ವಿಪಕ್ಷಗಳು ತಂತ್ರರೂಪಿಸಿವೆ, ಈ ತಂತ್ರಗಳಿಗೆ ಸರಿಯಾದ ಉತ್ತರ ನೀಡುವ ಮತ್ತು ಸರ್ಕಾರದ ನಿಲುವುಗಳನ್ನು ಸ್ಪಷ್ಟಪಡೆಸುವ ಕುರಿತು ಚರ್ಚಿಸುವ ಸಲುವಾಗಿ...