Homeಮುಖಪುಟಯುದ್ಧದಾಹಿ ಮೀಡಿಯಾಗಳನ್ನು ಸುಳ್ಳುಗಾರರನ್ನಾಗಿಸಿದ ಮೋದಿ ಚುನಾವಣಾ ಪ್ರಚಾರದಲ್ಲಿ!

ಯುದ್ಧದಾಹಿ ಮೀಡಿಯಾಗಳನ್ನು ಸುಳ್ಳುಗಾರರನ್ನಾಗಿಸಿದ ಮೋದಿ ಚುನಾವಣಾ ಪ್ರಚಾರದಲ್ಲಿ!

- Advertisement -
- Advertisement -

`ಯುದ್ಧ ಫಿಕ್ಸ್’, `ಪಾಪಿ ಪಾಕ್.ಗೆ ಯುದ್ಧವೊಂದೇ ಉತ್ತರ’ `ಯುದ್ಧ ಸನ್ನದ್ಧ’…. ಇವು ಪುಲ್ವಾಮಾ ಭಯೋತ್ಪಾದಕ ದಾಳಿ ನಂತರ ದಿನದ ಇಪ್ಪತ್ನಾಲ್ಕು ಗಂಟೆಯೂ ಮೀಡಿಯಾಗಳ ಪರದೆಗಳನ್ನು ಆವರಿಸುತ್ತಿರುವ ರಣೋತ್ಸಾಹದ ಟೈಟಲ್ಲುಗಳು. ಅದರಲ್ಲೂ ಬಾಲಕೋಟ್ ಮೇಲೆ ಭಾರತೀಯ ವಾಯುಸೇನೆ ದಾಳಿ ನಡೆಸಿದ ನಂತರವಂತೂ ಟೀವಿ ಆಂಕರುಗಳು ಕುರ್ಚಿ ಮೇಲೆ ಕೂರಲಾಗದಷ್ಟು ತುದಿಗಾಲಲ್ಲಿ ನಿಂತು ಪಾಕಿಸ್ತಾನದ ಮೇಲೆ ನಿರಂತರ ಯುದ್ಧ ನಡೆಸುತ್ತಿದ್ದಾರೆ! ಅವರ ಪ್ರಕಾರ ದೇಶಕ್ಕೆ ದೇಶವೇ ಯುದ್ಧಕ್ಕೆ ಸಜ್ಜಾಗಿ ಹೈಟೆನ್ಷನ್.ನಲ್ಲಿ ಕಾಯುತ್ತಿದೆ! ಅಂದರೆ ಈ ದೇಶದ ಪ್ರಧಾನಿಗೂ ಅದೇ ಟೆನ್ಷನ್ ಇರಬೇಕಲ್ಲವೇ?

ಆದರೆ, ಮೀಡಿಯಾದವರು ಯುದ್ಧ ಟೆನ್ಷನ್ನಿಂದ ಜನರನ್ನು ಬೆದರಿಸುತ್ತಿರುವ ಸಮಯದಲ್ಲೇ ಪ್ರಧಾನಿ ಮೋದಿಯವರು ಅಂತಹ ಯಾವ ಟೆನ್ಷನ್ನೂ ಇಲ್ಲದೆ ಮುಂಬರುವ ಎಲೆಕ್ಷನ್ನಿನ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ, ಅದೂ ತಮ್ಮ ಮೋದಿ ಆಪ್ ಮೂಲಕ! ಈ ವಿದ್ಯಮಾನ ಎರಡು ಸಾಧ್ಯತೆಗಳನ್ನ ನಮ್ಮ ಮುಂದೆ ತೆರದಿಡುತ್ತೆ. ಒಂದೋ, ಪ್ರಧಾನಿ ಮೋದಿಯವರಿಗೆ ದೇಶದ ಭದ್ರತೆ, ಸುರಕ್ಷತೆಗಿಂತ ಹೆಚ್ಚಾಗಿ ರಾಜಕೀಯವೇ ಮುಖ್ಯವಾಗಿರಬೇಕು. ಅಥವಾ ಅಂಥಾ ಪ್ರಧಾನಿ ಹುದ್ದೆಯಲ್ಲಿ ಕೂತಿರುವ ವ್ಯಕ್ತಿಯೇ ನಿರುಮ್ಮಳರಾಗಿದ್ದಾರೆಂದರೆ `ಯುದ್ಧ ಸನ್ನದ್ದ ಟೆನ್ಷನ್’ ಇದೆಯೆಂದು ಬೊಬ್ಬಿರಿಯುತ್ತಿರುವ ಈ ಮೀಡಿಯಾಗಳೇ ಬೊಗಳೆ ಬಿಡುತ್ತಿರಬೇಕು! ಹಾಗಾದರೆ, ಇವರೆಲ್ಲ ಕಡ್ಡಿಯನ್ನೇ ಗುಡ್ಡ ಮಾಡಿ ತೋರಿಸುತ್ತಿದ್ದಾರೆಯೇ?

ಸೈನಿಕರ ಬಲಿದಾನವನ್ನು ರಾಜಕೀಯಗೊಳಿಸಬಾರದು ಎನ್ನುವುದು ಯಾವುದೇ ದೇಶದಲ್ಲಿ ಪಾಲಿಸಬೇಕಾದ ಕನಿಷ್ಠ ನೈತಿಕ ನಿಯಮ. ಪುಲ್ವಾನಾ ದಾಳಿಯ ನಂತರ ಹಲವಾರು ರಾಜಕೀಯ ಪಕ್ಷಗಳವರು ಅಸಂಬದ್ಧ ಹೇಳಿಕೆಗಳನ್ನು ನೀಡಿದ್ದಾರೆ. ಆದರೆ ಸೈನಿಕರ ಹೆಸರಿನಲ್ಲಿ ಮತ್ತವರ ಸಾವಿನಲ್ಲಿ ಅತಿ ಹೆಚ್ಚು ರಾಜಕೀಯ ಮಾಡಿದವರು ಬಿಜೆಪಿಯವರೇ ಎನ್ನುವುದರಲ್ಲಿ ಯಾರಿಗೂ ಅನುಮಾನವಿಲ್ಲ. 2014ಕ್ಕೂ ಮೊದಲೂ ಸೈನಿಕರ ಬಲಿದಾನದ ಸಂದರ್ಭವನ್ನು ರಾಜಕೀಯಕ್ಕೆ ಬಳಸಿಕೊಂಡ ಮೋದಿಯವರ ಸಾಕಷ್ಟು ಭಾಷಣದ ವಿಡಿಯೋಗಳು ಇಂದಿಗೂ ಲಭ್ಯವಿದೆ. ಇನ್ನು ಪುಲ್ವಾಮ ದಾಳಿಯ ನಂತರದ ಬಿಜೆಪಿಯ ಪ್ರಚಾರ ನಾಚಿಕೆಯಿಲ್ಲದೆ ನಡೆಯುತ್ತಿದೆ.

ಇಂದು (ಫೆಬ್ರವರಿ 28) ಮೋದಿಯವರು ತಮ್ಮ ಮೋದಿ ಆಪ್ ಮೂಲಕ ದೇಶದ ಕೋಟ್ಯಾಂತರ ಜನರನ್ನು (ಸುಮಾರು 15 ಸಾವಿರ ಬೇರೆ ಬೇರೆ ಸ್ಥಳಗಳಲ್ಲಿ ಎಂದು ಬಿಜೆಪಿ ಪ್ರಚಾರದ ವೇಳೆ ಹೇಳಿಕೊಂಡಿದೆ) ಮುಂಬರುವ 2019ರ ಲೋಕಸಭಾ ಚುನಾವಣೆಗೆ ಆಡಳಿತಾರೂಢ ಪಕ್ಷದ ಪ್ರಚಾರಕ್ಕಾಗಿ ಜಗತ್ತಿನ ಅತ್ಯಂತ ದೊಡ್ಡ ವಿಡಿಯೋ ಕಾನ್ಫರೆನ್ಸ್ ಅನ್ನು ಬಿಜೆಪಿ ಪಕ್ಷದ ಕಾರ್ಯಕರ್ತರ ಜೊತೆ ನಡೆಸಿದ್ದಾರೆ. ಭಾರತದ ಗಡಿಯಲ್ಲಿ ಆತಂಕದ ವಾತಾವರಣವಿದ್ದು ಹಾಗೂ ಪಾಕಿಸ್ತಾನದಲ್ಲಿ ಬಂಧಿತರಾಗಿರುವ ಭಾರತದ ಏರ್ ವಿಂಗ್ ಕಮಾಂಡರ್ ಅಭಿನಂದನ್ ಇನ್ನೂ ಬಿಡುಗಡೆಯಾಗಿ ಭಾರತಕ್ಕೆ ವಾಪಾಸ್ ಆಗದೇ ಇರುವ ಪರಿಸ್ಥಿತಿಯಲ್ಲಿ ತಮ್ಮ ಪಕ್ಷದ ಪರ ಪ್ರಚಾರ ಮಾಡುವ ಅವಶ್ಯಕತೆಯಿದೆಯೇ ಎಂದು ಟಿವಿ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಜನಾಕ್ರೋಶ ವ್ಯಕ್ತವಾಗಿದೆ.

ಮೋದಿಗೆ ಭಾರತ ಮೊದಲಾ, ಇಲ್ಲವೇ ತನ್ನ ಪಕ್ಷದ ಸಂಕುಚಿತ ಹಿತಾಸಕ್ತಿಯೇ ಮೊದಲಾ? ಇದೊಂದು ಲಜ್ಜೆಗೆಟ್ಟ ಕೆಲಸ, ಸೂಕ್ಷ್ಮತೆ ಇಲ್ಲದವರು ಮಾಡುವ ಕೆಲಸ ಇನ್ನಿತ್ಯಾದಿ ಪದಗಳಿಂದ ವೆರಿಫೈಡ್ ಟ್ವಿಟ್ಟರ್ ಖಾತೆಗಳನ್ನೂ ಒಳಗೊಂಡಂತೆ ಸಹಸ್ರಾರು ಜನ ಟೀಕೆ ಮಾಡುತ್ತಿದ್ದಾರೆ. ಅಲ್ಲದೆ ಇದೇ ಫೆಬ್ರವರಿ 27ರಂದು ಖೇಲೋ ಇಂಡಿಯಾ (ಆಟವಾಡಿ ಭಾರತ) ಎನ್ನುವ ಮೊಬೈಲ್ ಆಪ್‌ಅನ್ನು ಉದ್ಘಾಟನೆ ಮಾಡಿದ್ದು, ಅದರಿಂದ ಸಹಾ ಮೋದಿ ಜನರ ಟೀಕೆಗೆ ಗುರಿಯಾಗಿದ್ದಾರೆ. ಈವರೆಗೂ ಒಂದೂ ಪತ್ರಿಕಾಗೋಷ್ಠಿ ನಡೆಸದ ಮೋದಿ ಅವರಿಗೆ ತಮ್ಮದೇ ಪಕ್ಷದ ಕಾರ್ಯಕರ್ತರೊಂದಿಗೆ ಜಗತ್ತಿನ ಅತ್ಯಂತ ಉದ್ದನೆಯ ವಿಡಿಯೋ ಸಂಭಾಷಣೆ ನಡೆಸಲು ಸಮಯ ಹೇಗೆ ಸಿಗುತ್ತದೆ ಎನ್ನುವುದು ಜನರ ಪ್ರಶ್ನೆಯಾಗಿದೆ. ಇದೆಲ್ಲದರ ಜೊತೆಜೊತೆಗೆ ಪುಲ್ವಾಮ ದಾಳಿ ನಂತರದಲ್ಲಿಯೂ ಹಲವು ಚುನಾವಣಾ ಪ್ರಚಾರದಲ್ಲಿ ಪಕ್ಷದ ಪರ ಮತ ಯಾಚನೆ ಮಾಡುವ ಕೆಲಸಗಳಲ್ಲಿ ಮೋದಿ ತೊಡಗಿಸಿಕೊಂಡಿದ್ದಾರೆ. ಇಂಡೋ-ಪಾಕ್ ವಿವಾದದ ಕುರಿತು ಮುಂದಿನ ಹೆಜ್ಜೆಗಳನ್ನು ಚರ್ಚಿಸಲು ಕರೆದಿದ್ದ ಸರ್ವಪಕ್ಷಗಳ ಎರಡೂ ಸಭೆಗೂ ಮೋದಿ ಗೈರು ಹಾಜರಾಗಿದ್ದು ಗಮನಾರ್ಹ! ಮೊದಲನೆಯದ್ದು ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದರೆ, ಮತ್ತೊಂದು ಸುಷ್ಮಾ ಸ್ವರಾಜ್ ನೇತೃತ್ವದಲ್ಲಿ ನಡೆದಿದೆ. ದೇಶದ ಭದ್ರತೆಗೆ ಎದುರಾಗಿರುವ ಆತಂಕದ ಬಗ್ಗೆ ಚರ್ಚಿಸಲು ಕರೆಯಲಾದ ಸಭೆಯಲ್ಲಿ ಭಾಗವಹಿಸಲು ಸಮಯವಿಲ್ಲದ ಮೋದಿಯವರಿಗೆ ಚುನಾವಣಾ ಪ್ರಚಾರದ ವೀಡಿಯೊ ಕಾನ್ಫರೆನ್ಸ್ ಮಾಡಲು, ಆಪ್ ಬಿಡುಗಡೆ ಮಾಡಲು ಹೇಗೆ ಸಮಯ ಸಿಕ್ಕಿತು? ಇದು ಜನ ಕೇಳುತ್ತಿರುವ ಪ್ರಶ್ನೆ.

ಇನ್ನು ದಾಳಿಯಾದ ದಿನದಿಂದ ಇವತ್ತಿನವರೆಗೂ ಅಮಿತ್ ಶಾ ಸೈನಿಕರ ದಾಳಿಯನ್ನ ರಾಜಕೀಯ ಪ್ರಚಾರಕ್ಕೆ ಬಳಸಿಕೊಳ್ಳುತ್ತಲೇ ಇದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ದಾಳಿಯಿಂದ ನಮಗೆ ಕರ್ನಾಟಕದಲ್ಲಿ 22 ಸೀಟು ಗೆಲ್ಲುವುದಕ್ಕೆ ಅನೂಕಲವಾಗಲಿದೆ ಎಂದು ಹೇಳಿ ರಾಷ್ಟ್ರ ಮಟ್ಟದಲ್ಲಿ ಟೀಕೆಗೆ ಒಳಗಾಗಿದ್ದಾರೆ. ಒಟ್ಟಾರೆ ಸೈನಿಕರ ಬಲಿದಾನ ದೇಶದ ರಕ್ಷಣೆಯ ವಿಚಾರವಾಗಿ ಕೇವಲ ಖಾಲಿ ಮಾತುಗಳನ್ನು ಇವರೆಲ್ಲಾ ಆಡುತ್ತಿದ್ದಾರೆಯೇ ಹೊರತು ದೇಶಕ್ಕಿಂತ ಚುನಾವಣೆಯಲ್ಲಿ ಅಧಿಕಾರ ಹಿಡಿಯುವುದೇ ಮೊದಲ ಆದ್ಯತೆ ನೀಡುತ್ತಿರುವುದು ವಾಸ್ತವ ಎಂಬುದು ಕೇವಲ ಆರೋಪವಲ್ಲ.

ಈ ಆಟದಲ್ಲಿ ಪ್ರಧಾನಿಯವರನ್ನೂ ಒಳಗೊಂಡಂತೆ ಸಮಸ್ತ ಬಿಜೆಪಿ ಮೀಡಿಯಾಗಳನ್ನು ಸುಳ್ಳುಗಾರರನ್ನಾಗಿ ಮಾಡುತ್ತಿರೋದು ವಿಪರ್ಯಾಸ. ದುರಂತವೆಂದರೆ ಇದು ಹೀಗೇ ಮುಂದುವರೆದರೆ ಜನರ ನಡುವೆ ತಮ್ಮ ಮೂಲಕ ಇಡಿಯಾಗಿ ಪತ್ರಿಕೋದ್ಯಮದ ವಿಶ್ವಾಸಾರ್ಹತೆ ಎಷ್ಟು ಪಾತಾಳಕ್ಕೆ ಕುಸಿಯಲಿದೆ ಎಂಬ ಅಂದಾಜೂ ಇಲ್ಲದ ಮೀಡಿಯಾಗಳು ತಮ್ಮ ಕಾಲ ಮೇಲೆ ತಾವೇ ಕಲ್ಲು ಎತ್ತಿ ಹಾಕಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖರ್ಗೆ ಭಾಷಣ ಸ್ಥಳದ ‘ಶುದ್ಧೀಕರಣ’: ಬಿಜೆಪಿ-RSS, ಸಂಘ ಪರಿವಾರದ ವಿಷಪೂರಿತ ಮನಸ್ಥಿತಿ ಮಾಜಿ ಸಿಎಂ ಸಿದ್ದರಾಮಯ್ಯ

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಮಾವೇಶದಲ್ಲಿ ಪಾಲ್ಗೊಂಡ ಬಳಿಕ, ಬಲಪಂಥೀಯ ಸಂಘಟನೆಯೊಂದು ಆ ಮೈದಾನದಲ್ಲಿ 'ಶುದ್ಧೀಕರಣ' ಕೈಗೊಂಡಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತೀವ್ರ ಆಕ್ರೋಶ...

ಸೋನಿಯಾ ಗಾಂಧಿ ಆತ್ಮಕಥೆ ವಿವಾದ | ಮೋದಿ, ಆರ್‌ಎಸ್‌ಎಸ್, ಚೀನಾ ನುಸುಳುವಿಕೆ ಕುರಿತ ಭಾಗಗಳನ್ನು ತೆಗೆದುಹಾಕಲು ಪೆಂಗ್ವಿನ್ ಇಂಡಿಯಾ ಕೋರಿತ್ತು : ಕಾಂಗ್ರೆಸ್ ಆರೋಪ

ಪ್ರಧಾನಿ ನರೇಂದ್ರ ಮೋದಿ, ಆರ್‌ಎಸ್‌ಎಸ್ ಮತ್ತು ಅವರ ಅಧಿಕಾರಾವಧಿಯಲ್ಲಿ ನಡೆದ ಭಾರತೀಯ ಭೂಪ್ರದೇಶದ ಮೇಲಿನ ಚೀನಾದ ಆಕ್ರಮಣದ ನಿರ್ವಹಣೆಗೆ ಸಂಬಂಧಿಸಿದ ಭಾಗಗಳನ್ನು ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ "ಬೆಲಾಂಗಿಂಗ್: ಎ ಜರ್ನಿ...

ಪಶ್ಚಿಮ ಬಂಗಾಳ| ದುರ್ಗಾಪೂಜೆ ಸಂದರ್ಭದಲ್ಲಿ ಮಾಂಸ ಮಾರಾಟ ನಿಷೇಧ ಆದೇಶ ಹೊರಡಿಸಿದ ವಿಎಚ್‌ಪಿ; ಬಲಪಂಥೀಯ ಸಂಘನೆಯ ಅಧಿಕಾರ ಪ್ರಶ್ನಿಸಿದ ವಿಪಕ್ಷಗಳು

ಪಶ್ಚಿಮ ಬಂಗಾಳದಲ್ಲಿ ದುರ್ಗಾಪೂಜೆ ಆಚರಣೆಗೆ ಸಂಬಂಧಿಸಿದಂತೆ ಬಲಪಂಥೀಯ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಹೊರಡಿಸಿರುವ ಮಾರ್ಗಸೂಚಿಯು ರಾಜಕೀಯ ಚರ್ಚೆಗೆ ಗ್ರಾಸವಾಗಿದೆ. ಪೂಜಾ ಮಂಟಪಗಳ ಸುತ್ತಮುತ್ತ ಸಸ್ಯಾಹಾರಿ ಅಲ್ಲದ ಮಾಂಸ ಮತ್ತು ಮೀನು...

ನ್ಯೂಯಾರ್ಕ್‌ನಲ್ಲಿ ಮೋಹನ್ ಭಾಗವತ್ ಕಾರ್ಯಕ್ರಮ: RSS ಮತ್ತು ಸಂಸ್ಥೆಯ ನಂಟಿನ ರಹಸ್ಯ ಬಯಲು

ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರು ಶನಿವಾರ ನ್ಯೂಯಾರ್ಕ್‌ನ ಪ್ರಸಿದ್ಧ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ ‘ಯೂನಿವರ್ಸಲ್ ಒನ್‌ನೆಸ್ ಸೆಲೆಬ್ರೇಷನ್ಸ್’ ಎಂಬ ಬೃಹತ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ವರದಿಗಳ ಪ್ರಕಾರ,...

ಮೋಹನ್ ಭಾಗವತ್ ನ್ಯೂಯಾರ್ಕ್ ಕಾರ್ಯಕ್ರಮಕ್ಕೆ ವಿರೋಧ : ಅಮೆರಿಕದ 61 ಸಂಘಟನೆಗಳಿಂದ ಪ್ರತಿಭಟನೆ

ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್ ಭಾಗವತ್ ಭಾಷಣ ಮಾಡಲಿರುವ, ಶನಿವಾರ (ಆ.29) ನ್ಯೂಯಾರ್ಕ್‌ನ ಮ್ಯಾಡಿಸನ್ ಸ್ಕ್ವೇರ್ ಗಾರ್ಡನ್‌ನಲ್ಲಿ ಆಯೋಜಿಸಲಾಗಿರುವ 'ಯೂನಿವರ್ಸಲ್ ಒನ್ನೆಸ್ ಸೆಲೆಬ್ರೇಷನ್ಸ್' ಕಾರ್ಯಕ್ರಮಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. ನ್ಯೂಯಾರ್ಕ್ ಮೇಯರ್ ಝೊಹ್ರಾನ್ ಮಮ್ದಾನಿ ಅವರು...

ಶಿವಮೊಗ್ಗ| ಈದ್-ಎ-ಮಿಲಾದ್ ರ್‍ಯಾಲಿಯಲ್ಲಿ ಪ್ಯಾಲೆಸ್ತೀನ್ ಧ್ವಜ ಪ್ರದರ್ಶನ: ಮೂವರ ವಿರುದ್ಧ ಪ್ರಕರಣ ದಾಖಲು

ಶಿವಮೊಗ್ಗದ ಆರ್‌ಎಂಎಲ್ ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಗಾಗಿ ನಿರ್ಮಿಸಲಾಗಿದ್ದ ಕಟೌಟ್ ಒಂದರ ಮೇಲೆ ಫೆಲೆಸ್ತೀನ್ ಧ್ವಜವನ್ನು ಪ್ರದರ್ಶಿಸಿದ ಆರೋಪದ ಮೇಲೆ ಪೊಲೀಸರು ಮೂವರು ಮುಸ್ಲಿಂ ಯುವಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿಗಳನ್ನು ನಿಹಾಲ್ ಉರುಫ್ ಬೆಕ್ಕು,...

ಕೋಲ್ಕತ್ತಾದಲ್ಲಿ ಮಮತಾ ಬ್ಯಾನರ್ಜಿ ವಿರುದ್ಧ FIR: ಹೈಕೋರ್ಟ್ ಆದೇಶ ಉಲ್ಲಂಘನೆ ಆರೋಪ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ವಿರುದ್ಧ ಕೋಲ್ಕತ್ತಾ ಪೊಲೀಸರು ಸ್ವಯಂಪ್ರೇರಿತ (Suo Motu) ದೂರು ದಾಖಲಿಸಿಕೊಂಡಿದ್ದಾರೆ. ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಟಿಎಂಸಿ ವಿದ್ಯಾರ್ಥಿ...

ಈದ್ ಮಿಲಾದ್ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನ; ಭಜರಂಗದಳ ಕಾರ್ಯಕರ್ತನ ವಿರುದ್ಧ ಪ್ರಕರಣ ದಾಖಲು

ಈದ್-ಎ-ಮಿಲಾದ್ ಪೋಸ್ಟರ್‌ಗಳ ವಿಚಾರವಾಗಿ ಗುಂಪುಗಳ ನಡುವೆ ಶತ್ರುತ್ವ ಸೃಷ್ಟಿಸಲು ಮತ್ತು ಸಾರ್ವಜನಿಕ ಶಾಂತಿಗೆ ಭಂಗ ತರಲು ಯತ್ನಿಸಿದ ಆರೋಪದ ಮೇಲೆ ಕಲಬುರಗಿಯಲ್ಲಿ ಭಜರಂಗದಳದ ಕಾರ್ಯಕರ್ತನೊಬ್ಬನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ನಗರದಲ್ಲಿ ಈದ್-ಎ-ಮಿಲಾದ್ ಆಚರಣೆಯ ಭಾಗವಾಗಿ...

ವೆನೆಜುವೆಲಾ ತೈಲ ನಿಕ್ಷೇಪಗಳ ಮೇಲೆ ಅಮೆರಿಕ ನಿಯಂತ್ರಣ: ಜಾಗತಿಕ ರಾಜಕಾರಣದಲ್ಲಿ ತಲ್ಲಣ!

ವಾಷಿಂಗ್ಟನ್/ಕಾರಕಾಸ್: ವಿಶ್ವದಲ್ಲೇ ಅತಿ ಹೆಚ್ಚು ಕಚ್ಚಾ ತೈಲ ನಿಕ್ಷೇಪ ಹೊಂದಿರುವ ವೆನೆಜುವೆಲಾ ದೇಶದ 65 ಬಿಲಿಯನ್ ಬ್ಯಾರೆಲ್‌ಗಿಂತ ಹೆಚ್ಚು ಸಾಬೀತಾದ ತೈಲ ನಿಕ್ಷೇಪಗಳ ಮೇಲೆ ಬಹುಮತ ನಿಯಂತ್ರಣ ಸಾಧಿಸುವ ಒಪ್ಪಂದವನ್ನು ಅಮೆರಿಕ ಮಾಡಿಕೊಂಡಿದೆ....

ನೈತಿಕ ಹೊಣೆ ಹೊತ್ತು ನಾಗೇಂದ್ರ ರಾಜೀನಾಮೆ ನೀಡಿದ್ದಾರೆ; ಇದು ಬಿಜೆಪಿಯ ಗೆಲುವಲ್ಲ: ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್

ಸಚಿವರಾಗಿದ್ದ ಬಿ. ನಾಗೇಂದ್ರ ಅವರು ಸಾರ್ವಜನಿಕ ಜೀವನದಲ್ಲಿ ನೈತಿಕ ಹೊಣೆಗಾರಿಕೆ ಹೊತ್ತು ರಾಜೀನಾಮೆ ನೀಡಿದ್ದಾರೆ. ಇದು ಬಿಜೆಪಿಯ ಗೆಲುವೂ ಅಲ್ಲ, ವಿಪಕ್ಷ ನಾಯಕರ ಹೋರಾಟದ ಗೆಲುವೂ ಅಲ್ಲ. ಇದೊಂದು ದಲಿತ ಸಮುದಾಯ ನಾಯಕರ...