Homeಮುಖಪುಟಯುದ್ಧದಾಹಿ ಮೀಡಿಯಾಗಳನ್ನು ಸುಳ್ಳುಗಾರರನ್ನಾಗಿಸಿದ ಮೋದಿ ಚುನಾವಣಾ ಪ್ರಚಾರದಲ್ಲಿ!

ಯುದ್ಧದಾಹಿ ಮೀಡಿಯಾಗಳನ್ನು ಸುಳ್ಳುಗಾರರನ್ನಾಗಿಸಿದ ಮೋದಿ ಚುನಾವಣಾ ಪ್ರಚಾರದಲ್ಲಿ!

- Advertisement -
- Advertisement -

`ಯುದ್ಧ ಫಿಕ್ಸ್’, `ಪಾಪಿ ಪಾಕ್.ಗೆ ಯುದ್ಧವೊಂದೇ ಉತ್ತರ’ `ಯುದ್ಧ ಸನ್ನದ್ಧ’…. ಇವು ಪುಲ್ವಾಮಾ ಭಯೋತ್ಪಾದಕ ದಾಳಿ ನಂತರ ದಿನದ ಇಪ್ಪತ್ನಾಲ್ಕು ಗಂಟೆಯೂ ಮೀಡಿಯಾಗಳ ಪರದೆಗಳನ್ನು ಆವರಿಸುತ್ತಿರುವ ರಣೋತ್ಸಾಹದ ಟೈಟಲ್ಲುಗಳು. ಅದರಲ್ಲೂ ಬಾಲಕೋಟ್ ಮೇಲೆ ಭಾರತೀಯ ವಾಯುಸೇನೆ ದಾಳಿ ನಡೆಸಿದ ನಂತರವಂತೂ ಟೀವಿ ಆಂಕರುಗಳು ಕುರ್ಚಿ ಮೇಲೆ ಕೂರಲಾಗದಷ್ಟು ತುದಿಗಾಲಲ್ಲಿ ನಿಂತು ಪಾಕಿಸ್ತಾನದ ಮೇಲೆ ನಿರಂತರ ಯುದ್ಧ ನಡೆಸುತ್ತಿದ್ದಾರೆ! ಅವರ ಪ್ರಕಾರ ದೇಶಕ್ಕೆ ದೇಶವೇ ಯುದ್ಧಕ್ಕೆ ಸಜ್ಜಾಗಿ ಹೈಟೆನ್ಷನ್.ನಲ್ಲಿ ಕಾಯುತ್ತಿದೆ! ಅಂದರೆ ಈ ದೇಶದ ಪ್ರಧಾನಿಗೂ ಅದೇ ಟೆನ್ಷನ್ ಇರಬೇಕಲ್ಲವೇ?

ಆದರೆ, ಮೀಡಿಯಾದವರು ಯುದ್ಧ ಟೆನ್ಷನ್ನಿಂದ ಜನರನ್ನು ಬೆದರಿಸುತ್ತಿರುವ ಸಮಯದಲ್ಲೇ ಪ್ರಧಾನಿ ಮೋದಿಯವರು ಅಂತಹ ಯಾವ ಟೆನ್ಷನ್ನೂ ಇಲ್ಲದೆ ಮುಂಬರುವ ಎಲೆಕ್ಷನ್ನಿನ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ, ಅದೂ ತಮ್ಮ ಮೋದಿ ಆಪ್ ಮೂಲಕ! ಈ ವಿದ್ಯಮಾನ ಎರಡು ಸಾಧ್ಯತೆಗಳನ್ನ ನಮ್ಮ ಮುಂದೆ ತೆರದಿಡುತ್ತೆ. ಒಂದೋ, ಪ್ರಧಾನಿ ಮೋದಿಯವರಿಗೆ ದೇಶದ ಭದ್ರತೆ, ಸುರಕ್ಷತೆಗಿಂತ ಹೆಚ್ಚಾಗಿ ರಾಜಕೀಯವೇ ಮುಖ್ಯವಾಗಿರಬೇಕು. ಅಥವಾ ಅಂಥಾ ಪ್ರಧಾನಿ ಹುದ್ದೆಯಲ್ಲಿ ಕೂತಿರುವ ವ್ಯಕ್ತಿಯೇ ನಿರುಮ್ಮಳರಾಗಿದ್ದಾರೆಂದರೆ `ಯುದ್ಧ ಸನ್ನದ್ದ ಟೆನ್ಷನ್’ ಇದೆಯೆಂದು ಬೊಬ್ಬಿರಿಯುತ್ತಿರುವ ಈ ಮೀಡಿಯಾಗಳೇ ಬೊಗಳೆ ಬಿಡುತ್ತಿರಬೇಕು! ಹಾಗಾದರೆ, ಇವರೆಲ್ಲ ಕಡ್ಡಿಯನ್ನೇ ಗುಡ್ಡ ಮಾಡಿ ತೋರಿಸುತ್ತಿದ್ದಾರೆಯೇ?

ಸೈನಿಕರ ಬಲಿದಾನವನ್ನು ರಾಜಕೀಯಗೊಳಿಸಬಾರದು ಎನ್ನುವುದು ಯಾವುದೇ ದೇಶದಲ್ಲಿ ಪಾಲಿಸಬೇಕಾದ ಕನಿಷ್ಠ ನೈತಿಕ ನಿಯಮ. ಪುಲ್ವಾನಾ ದಾಳಿಯ ನಂತರ ಹಲವಾರು ರಾಜಕೀಯ ಪಕ್ಷಗಳವರು ಅಸಂಬದ್ಧ ಹೇಳಿಕೆಗಳನ್ನು ನೀಡಿದ್ದಾರೆ. ಆದರೆ ಸೈನಿಕರ ಹೆಸರಿನಲ್ಲಿ ಮತ್ತವರ ಸಾವಿನಲ್ಲಿ ಅತಿ ಹೆಚ್ಚು ರಾಜಕೀಯ ಮಾಡಿದವರು ಬಿಜೆಪಿಯವರೇ ಎನ್ನುವುದರಲ್ಲಿ ಯಾರಿಗೂ ಅನುಮಾನವಿಲ್ಲ. 2014ಕ್ಕೂ ಮೊದಲೂ ಸೈನಿಕರ ಬಲಿದಾನದ ಸಂದರ್ಭವನ್ನು ರಾಜಕೀಯಕ್ಕೆ ಬಳಸಿಕೊಂಡ ಮೋದಿಯವರ ಸಾಕಷ್ಟು ಭಾಷಣದ ವಿಡಿಯೋಗಳು ಇಂದಿಗೂ ಲಭ್ಯವಿದೆ. ಇನ್ನು ಪುಲ್ವಾಮ ದಾಳಿಯ ನಂತರದ ಬಿಜೆಪಿಯ ಪ್ರಚಾರ ನಾಚಿಕೆಯಿಲ್ಲದೆ ನಡೆಯುತ್ತಿದೆ.

ಇಂದು (ಫೆಬ್ರವರಿ 28) ಮೋದಿಯವರು ತಮ್ಮ ಮೋದಿ ಆಪ್ ಮೂಲಕ ದೇಶದ ಕೋಟ್ಯಾಂತರ ಜನರನ್ನು (ಸುಮಾರು 15 ಸಾವಿರ ಬೇರೆ ಬೇರೆ ಸ್ಥಳಗಳಲ್ಲಿ ಎಂದು ಬಿಜೆಪಿ ಪ್ರಚಾರದ ವೇಳೆ ಹೇಳಿಕೊಂಡಿದೆ) ಮುಂಬರುವ 2019ರ ಲೋಕಸಭಾ ಚುನಾವಣೆಗೆ ಆಡಳಿತಾರೂಢ ಪಕ್ಷದ ಪ್ರಚಾರಕ್ಕಾಗಿ ಜಗತ್ತಿನ ಅತ್ಯಂತ ದೊಡ್ಡ ವಿಡಿಯೋ ಕಾನ್ಫರೆನ್ಸ್ ಅನ್ನು ಬಿಜೆಪಿ ಪಕ್ಷದ ಕಾರ್ಯಕರ್ತರ ಜೊತೆ ನಡೆಸಿದ್ದಾರೆ. ಭಾರತದ ಗಡಿಯಲ್ಲಿ ಆತಂಕದ ವಾತಾವರಣವಿದ್ದು ಹಾಗೂ ಪಾಕಿಸ್ತಾನದಲ್ಲಿ ಬಂಧಿತರಾಗಿರುವ ಭಾರತದ ಏರ್ ವಿಂಗ್ ಕಮಾಂಡರ್ ಅಭಿನಂದನ್ ಇನ್ನೂ ಬಿಡುಗಡೆಯಾಗಿ ಭಾರತಕ್ಕೆ ವಾಪಾಸ್ ಆಗದೇ ಇರುವ ಪರಿಸ್ಥಿತಿಯಲ್ಲಿ ತಮ್ಮ ಪಕ್ಷದ ಪರ ಪ್ರಚಾರ ಮಾಡುವ ಅವಶ್ಯಕತೆಯಿದೆಯೇ ಎಂದು ಟಿವಿ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಜನಾಕ್ರೋಶ ವ್ಯಕ್ತವಾಗಿದೆ.

ಮೋದಿಗೆ ಭಾರತ ಮೊದಲಾ, ಇಲ್ಲವೇ ತನ್ನ ಪಕ್ಷದ ಸಂಕುಚಿತ ಹಿತಾಸಕ್ತಿಯೇ ಮೊದಲಾ? ಇದೊಂದು ಲಜ್ಜೆಗೆಟ್ಟ ಕೆಲಸ, ಸೂಕ್ಷ್ಮತೆ ಇಲ್ಲದವರು ಮಾಡುವ ಕೆಲಸ ಇನ್ನಿತ್ಯಾದಿ ಪದಗಳಿಂದ ವೆರಿಫೈಡ್ ಟ್ವಿಟ್ಟರ್ ಖಾತೆಗಳನ್ನೂ ಒಳಗೊಂಡಂತೆ ಸಹಸ್ರಾರು ಜನ ಟೀಕೆ ಮಾಡುತ್ತಿದ್ದಾರೆ. ಅಲ್ಲದೆ ಇದೇ ಫೆಬ್ರವರಿ 27ರಂದು ಖೇಲೋ ಇಂಡಿಯಾ (ಆಟವಾಡಿ ಭಾರತ) ಎನ್ನುವ ಮೊಬೈಲ್ ಆಪ್‌ಅನ್ನು ಉದ್ಘಾಟನೆ ಮಾಡಿದ್ದು, ಅದರಿಂದ ಸಹಾ ಮೋದಿ ಜನರ ಟೀಕೆಗೆ ಗುರಿಯಾಗಿದ್ದಾರೆ. ಈವರೆಗೂ ಒಂದೂ ಪತ್ರಿಕಾಗೋಷ್ಠಿ ನಡೆಸದ ಮೋದಿ ಅವರಿಗೆ ತಮ್ಮದೇ ಪಕ್ಷದ ಕಾರ್ಯಕರ್ತರೊಂದಿಗೆ ಜಗತ್ತಿನ ಅತ್ಯಂತ ಉದ್ದನೆಯ ವಿಡಿಯೋ ಸಂಭಾಷಣೆ ನಡೆಸಲು ಸಮಯ ಹೇಗೆ ಸಿಗುತ್ತದೆ ಎನ್ನುವುದು ಜನರ ಪ್ರಶ್ನೆಯಾಗಿದೆ. ಇದೆಲ್ಲದರ ಜೊತೆಜೊತೆಗೆ ಪುಲ್ವಾಮ ದಾಳಿ ನಂತರದಲ್ಲಿಯೂ ಹಲವು ಚುನಾವಣಾ ಪ್ರಚಾರದಲ್ಲಿ ಪಕ್ಷದ ಪರ ಮತ ಯಾಚನೆ ಮಾಡುವ ಕೆಲಸಗಳಲ್ಲಿ ಮೋದಿ ತೊಡಗಿಸಿಕೊಂಡಿದ್ದಾರೆ. ಇಂಡೋ-ಪಾಕ್ ವಿವಾದದ ಕುರಿತು ಮುಂದಿನ ಹೆಜ್ಜೆಗಳನ್ನು ಚರ್ಚಿಸಲು ಕರೆದಿದ್ದ ಸರ್ವಪಕ್ಷಗಳ ಎರಡೂ ಸಭೆಗೂ ಮೋದಿ ಗೈರು ಹಾಜರಾಗಿದ್ದು ಗಮನಾರ್ಹ! ಮೊದಲನೆಯದ್ದು ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದರೆ, ಮತ್ತೊಂದು ಸುಷ್ಮಾ ಸ್ವರಾಜ್ ನೇತೃತ್ವದಲ್ಲಿ ನಡೆದಿದೆ. ದೇಶದ ಭದ್ರತೆಗೆ ಎದುರಾಗಿರುವ ಆತಂಕದ ಬಗ್ಗೆ ಚರ್ಚಿಸಲು ಕರೆಯಲಾದ ಸಭೆಯಲ್ಲಿ ಭಾಗವಹಿಸಲು ಸಮಯವಿಲ್ಲದ ಮೋದಿಯವರಿಗೆ ಚುನಾವಣಾ ಪ್ರಚಾರದ ವೀಡಿಯೊ ಕಾನ್ಫರೆನ್ಸ್ ಮಾಡಲು, ಆಪ್ ಬಿಡುಗಡೆ ಮಾಡಲು ಹೇಗೆ ಸಮಯ ಸಿಕ್ಕಿತು? ಇದು ಜನ ಕೇಳುತ್ತಿರುವ ಪ್ರಶ್ನೆ.

ಇನ್ನು ದಾಳಿಯಾದ ದಿನದಿಂದ ಇವತ್ತಿನವರೆಗೂ ಅಮಿತ್ ಶಾ ಸೈನಿಕರ ದಾಳಿಯನ್ನ ರಾಜಕೀಯ ಪ್ರಚಾರಕ್ಕೆ ಬಳಸಿಕೊಳ್ಳುತ್ತಲೇ ಇದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ದಾಳಿಯಿಂದ ನಮಗೆ ಕರ್ನಾಟಕದಲ್ಲಿ 22 ಸೀಟು ಗೆಲ್ಲುವುದಕ್ಕೆ ಅನೂಕಲವಾಗಲಿದೆ ಎಂದು ಹೇಳಿ ರಾಷ್ಟ್ರ ಮಟ್ಟದಲ್ಲಿ ಟೀಕೆಗೆ ಒಳಗಾಗಿದ್ದಾರೆ. ಒಟ್ಟಾರೆ ಸೈನಿಕರ ಬಲಿದಾನ ದೇಶದ ರಕ್ಷಣೆಯ ವಿಚಾರವಾಗಿ ಕೇವಲ ಖಾಲಿ ಮಾತುಗಳನ್ನು ಇವರೆಲ್ಲಾ ಆಡುತ್ತಿದ್ದಾರೆಯೇ ಹೊರತು ದೇಶಕ್ಕಿಂತ ಚುನಾವಣೆಯಲ್ಲಿ ಅಧಿಕಾರ ಹಿಡಿಯುವುದೇ ಮೊದಲ ಆದ್ಯತೆ ನೀಡುತ್ತಿರುವುದು ವಾಸ್ತವ ಎಂಬುದು ಕೇವಲ ಆರೋಪವಲ್ಲ.

ಈ ಆಟದಲ್ಲಿ ಪ್ರಧಾನಿಯವರನ್ನೂ ಒಳಗೊಂಡಂತೆ ಸಮಸ್ತ ಬಿಜೆಪಿ ಮೀಡಿಯಾಗಳನ್ನು ಸುಳ್ಳುಗಾರರನ್ನಾಗಿ ಮಾಡುತ್ತಿರೋದು ವಿಪರ್ಯಾಸ. ದುರಂತವೆಂದರೆ ಇದು ಹೀಗೇ ಮುಂದುವರೆದರೆ ಜನರ ನಡುವೆ ತಮ್ಮ ಮೂಲಕ ಇಡಿಯಾಗಿ ಪತ್ರಿಕೋದ್ಯಮದ ವಿಶ್ವಾಸಾರ್ಹತೆ ಎಷ್ಟು ಪಾತಾಳಕ್ಕೆ ಕುಸಿಯಲಿದೆ ಎಂಬ ಅಂದಾಜೂ ಇಲ್ಲದ ಮೀಡಿಯಾಗಳು ತಮ್ಮ ಕಾಲ ಮೇಲೆ ತಾವೇ ಕಲ್ಲು ಎತ್ತಿ ಹಾಕಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆ : ಬಿಹಾರದ ಎಲ್ಲಾ ಐದು ಸ್ಥಾನಗಳು ಎನ್‌ಡಿಎ ಪಾಲು; ಒಡಿಶಾದ ಮೂರು ಸ್ಥಾನಗಳಲ್ಲಿ ಗೆಲುವು

ರಾಜ್ಯಸಭೆಯ 37 ಸ್ಥಾನಗಳಿಗೆ ಸೋಮವಾರ (ಮಾ.16) ನಡೆದ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟ 21 ಸ್ಥಾನಗಳನ್ನು ಗೆದ್ದುಕೊಂಡಿದೆ. ಈ ಪೈಕಿ ಬಿಜೆಪಿ ಮಾತ್ರ 11 ಸ್ಥಾನಗಳನ್ನು ಪಡೆದಿದೆ. ವಿಪಕ್ಷಗಳ ಇಂಡಿಯಾ ಮೈತ್ರಿಕೂಟ ಒಟ್ಟು 11 ಸ್ಥಾನಗಳನ್ನು...

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...