Homeಮುಖಪುಟಯುದ್ಧದಾಹಿ ಮೀಡಿಯಾಗಳನ್ನು ಸುಳ್ಳುಗಾರರನ್ನಾಗಿಸಿದ ಮೋದಿ ಚುನಾವಣಾ ಪ್ರಚಾರದಲ್ಲಿ!

ಯುದ್ಧದಾಹಿ ಮೀಡಿಯಾಗಳನ್ನು ಸುಳ್ಳುಗಾರರನ್ನಾಗಿಸಿದ ಮೋದಿ ಚುನಾವಣಾ ಪ್ರಚಾರದಲ್ಲಿ!

- Advertisement -
- Advertisement -

`ಯುದ್ಧ ಫಿಕ್ಸ್’, `ಪಾಪಿ ಪಾಕ್.ಗೆ ಯುದ್ಧವೊಂದೇ ಉತ್ತರ’ `ಯುದ್ಧ ಸನ್ನದ್ಧ’…. ಇವು ಪುಲ್ವಾಮಾ ಭಯೋತ್ಪಾದಕ ದಾಳಿ ನಂತರ ದಿನದ ಇಪ್ಪತ್ನಾಲ್ಕು ಗಂಟೆಯೂ ಮೀಡಿಯಾಗಳ ಪರದೆಗಳನ್ನು ಆವರಿಸುತ್ತಿರುವ ರಣೋತ್ಸಾಹದ ಟೈಟಲ್ಲುಗಳು. ಅದರಲ್ಲೂ ಬಾಲಕೋಟ್ ಮೇಲೆ ಭಾರತೀಯ ವಾಯುಸೇನೆ ದಾಳಿ ನಡೆಸಿದ ನಂತರವಂತೂ ಟೀವಿ ಆಂಕರುಗಳು ಕುರ್ಚಿ ಮೇಲೆ ಕೂರಲಾಗದಷ್ಟು ತುದಿಗಾಲಲ್ಲಿ ನಿಂತು ಪಾಕಿಸ್ತಾನದ ಮೇಲೆ ನಿರಂತರ ಯುದ್ಧ ನಡೆಸುತ್ತಿದ್ದಾರೆ! ಅವರ ಪ್ರಕಾರ ದೇಶಕ್ಕೆ ದೇಶವೇ ಯುದ್ಧಕ್ಕೆ ಸಜ್ಜಾಗಿ ಹೈಟೆನ್ಷನ್.ನಲ್ಲಿ ಕಾಯುತ್ತಿದೆ! ಅಂದರೆ ಈ ದೇಶದ ಪ್ರಧಾನಿಗೂ ಅದೇ ಟೆನ್ಷನ್ ಇರಬೇಕಲ್ಲವೇ?

ಆದರೆ, ಮೀಡಿಯಾದವರು ಯುದ್ಧ ಟೆನ್ಷನ್ನಿಂದ ಜನರನ್ನು ಬೆದರಿಸುತ್ತಿರುವ ಸಮಯದಲ್ಲೇ ಪ್ರಧಾನಿ ಮೋದಿಯವರು ಅಂತಹ ಯಾವ ಟೆನ್ಷನ್ನೂ ಇಲ್ಲದೆ ಮುಂಬರುವ ಎಲೆಕ್ಷನ್ನಿನ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ, ಅದೂ ತಮ್ಮ ಮೋದಿ ಆಪ್ ಮೂಲಕ! ಈ ವಿದ್ಯಮಾನ ಎರಡು ಸಾಧ್ಯತೆಗಳನ್ನ ನಮ್ಮ ಮುಂದೆ ತೆರದಿಡುತ್ತೆ. ಒಂದೋ, ಪ್ರಧಾನಿ ಮೋದಿಯವರಿಗೆ ದೇಶದ ಭದ್ರತೆ, ಸುರಕ್ಷತೆಗಿಂತ ಹೆಚ್ಚಾಗಿ ರಾಜಕೀಯವೇ ಮುಖ್ಯವಾಗಿರಬೇಕು. ಅಥವಾ ಅಂಥಾ ಪ್ರಧಾನಿ ಹುದ್ದೆಯಲ್ಲಿ ಕೂತಿರುವ ವ್ಯಕ್ತಿಯೇ ನಿರುಮ್ಮಳರಾಗಿದ್ದಾರೆಂದರೆ `ಯುದ್ಧ ಸನ್ನದ್ದ ಟೆನ್ಷನ್’ ಇದೆಯೆಂದು ಬೊಬ್ಬಿರಿಯುತ್ತಿರುವ ಈ ಮೀಡಿಯಾಗಳೇ ಬೊಗಳೆ ಬಿಡುತ್ತಿರಬೇಕು! ಹಾಗಾದರೆ, ಇವರೆಲ್ಲ ಕಡ್ಡಿಯನ್ನೇ ಗುಡ್ಡ ಮಾಡಿ ತೋರಿಸುತ್ತಿದ್ದಾರೆಯೇ?

ಸೈನಿಕರ ಬಲಿದಾನವನ್ನು ರಾಜಕೀಯಗೊಳಿಸಬಾರದು ಎನ್ನುವುದು ಯಾವುದೇ ದೇಶದಲ್ಲಿ ಪಾಲಿಸಬೇಕಾದ ಕನಿಷ್ಠ ನೈತಿಕ ನಿಯಮ. ಪುಲ್ವಾನಾ ದಾಳಿಯ ನಂತರ ಹಲವಾರು ರಾಜಕೀಯ ಪಕ್ಷಗಳವರು ಅಸಂಬದ್ಧ ಹೇಳಿಕೆಗಳನ್ನು ನೀಡಿದ್ದಾರೆ. ಆದರೆ ಸೈನಿಕರ ಹೆಸರಿನಲ್ಲಿ ಮತ್ತವರ ಸಾವಿನಲ್ಲಿ ಅತಿ ಹೆಚ್ಚು ರಾಜಕೀಯ ಮಾಡಿದವರು ಬಿಜೆಪಿಯವರೇ ಎನ್ನುವುದರಲ್ಲಿ ಯಾರಿಗೂ ಅನುಮಾನವಿಲ್ಲ. 2014ಕ್ಕೂ ಮೊದಲೂ ಸೈನಿಕರ ಬಲಿದಾನದ ಸಂದರ್ಭವನ್ನು ರಾಜಕೀಯಕ್ಕೆ ಬಳಸಿಕೊಂಡ ಮೋದಿಯವರ ಸಾಕಷ್ಟು ಭಾಷಣದ ವಿಡಿಯೋಗಳು ಇಂದಿಗೂ ಲಭ್ಯವಿದೆ. ಇನ್ನು ಪುಲ್ವಾಮ ದಾಳಿಯ ನಂತರದ ಬಿಜೆಪಿಯ ಪ್ರಚಾರ ನಾಚಿಕೆಯಿಲ್ಲದೆ ನಡೆಯುತ್ತಿದೆ.

ಇಂದು (ಫೆಬ್ರವರಿ 28) ಮೋದಿಯವರು ತಮ್ಮ ಮೋದಿ ಆಪ್ ಮೂಲಕ ದೇಶದ ಕೋಟ್ಯಾಂತರ ಜನರನ್ನು (ಸುಮಾರು 15 ಸಾವಿರ ಬೇರೆ ಬೇರೆ ಸ್ಥಳಗಳಲ್ಲಿ ಎಂದು ಬಿಜೆಪಿ ಪ್ರಚಾರದ ವೇಳೆ ಹೇಳಿಕೊಂಡಿದೆ) ಮುಂಬರುವ 2019ರ ಲೋಕಸಭಾ ಚುನಾವಣೆಗೆ ಆಡಳಿತಾರೂಢ ಪಕ್ಷದ ಪ್ರಚಾರಕ್ಕಾಗಿ ಜಗತ್ತಿನ ಅತ್ಯಂತ ದೊಡ್ಡ ವಿಡಿಯೋ ಕಾನ್ಫರೆನ್ಸ್ ಅನ್ನು ಬಿಜೆಪಿ ಪಕ್ಷದ ಕಾರ್ಯಕರ್ತರ ಜೊತೆ ನಡೆಸಿದ್ದಾರೆ. ಭಾರತದ ಗಡಿಯಲ್ಲಿ ಆತಂಕದ ವಾತಾವರಣವಿದ್ದು ಹಾಗೂ ಪಾಕಿಸ್ತಾನದಲ್ಲಿ ಬಂಧಿತರಾಗಿರುವ ಭಾರತದ ಏರ್ ವಿಂಗ್ ಕಮಾಂಡರ್ ಅಭಿನಂದನ್ ಇನ್ನೂ ಬಿಡುಗಡೆಯಾಗಿ ಭಾರತಕ್ಕೆ ವಾಪಾಸ್ ಆಗದೇ ಇರುವ ಪರಿಸ್ಥಿತಿಯಲ್ಲಿ ತಮ್ಮ ಪಕ್ಷದ ಪರ ಪ್ರಚಾರ ಮಾಡುವ ಅವಶ್ಯಕತೆಯಿದೆಯೇ ಎಂದು ಟಿವಿ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಜನಾಕ್ರೋಶ ವ್ಯಕ್ತವಾಗಿದೆ.

ಮೋದಿಗೆ ಭಾರತ ಮೊದಲಾ, ಇಲ್ಲವೇ ತನ್ನ ಪಕ್ಷದ ಸಂಕುಚಿತ ಹಿತಾಸಕ್ತಿಯೇ ಮೊದಲಾ? ಇದೊಂದು ಲಜ್ಜೆಗೆಟ್ಟ ಕೆಲಸ, ಸೂಕ್ಷ್ಮತೆ ಇಲ್ಲದವರು ಮಾಡುವ ಕೆಲಸ ಇನ್ನಿತ್ಯಾದಿ ಪದಗಳಿಂದ ವೆರಿಫೈಡ್ ಟ್ವಿಟ್ಟರ್ ಖಾತೆಗಳನ್ನೂ ಒಳಗೊಂಡಂತೆ ಸಹಸ್ರಾರು ಜನ ಟೀಕೆ ಮಾಡುತ್ತಿದ್ದಾರೆ. ಅಲ್ಲದೆ ಇದೇ ಫೆಬ್ರವರಿ 27ರಂದು ಖೇಲೋ ಇಂಡಿಯಾ (ಆಟವಾಡಿ ಭಾರತ) ಎನ್ನುವ ಮೊಬೈಲ್ ಆಪ್‌ಅನ್ನು ಉದ್ಘಾಟನೆ ಮಾಡಿದ್ದು, ಅದರಿಂದ ಸಹಾ ಮೋದಿ ಜನರ ಟೀಕೆಗೆ ಗುರಿಯಾಗಿದ್ದಾರೆ. ಈವರೆಗೂ ಒಂದೂ ಪತ್ರಿಕಾಗೋಷ್ಠಿ ನಡೆಸದ ಮೋದಿ ಅವರಿಗೆ ತಮ್ಮದೇ ಪಕ್ಷದ ಕಾರ್ಯಕರ್ತರೊಂದಿಗೆ ಜಗತ್ತಿನ ಅತ್ಯಂತ ಉದ್ದನೆಯ ವಿಡಿಯೋ ಸಂಭಾಷಣೆ ನಡೆಸಲು ಸಮಯ ಹೇಗೆ ಸಿಗುತ್ತದೆ ಎನ್ನುವುದು ಜನರ ಪ್ರಶ್ನೆಯಾಗಿದೆ. ಇದೆಲ್ಲದರ ಜೊತೆಜೊತೆಗೆ ಪುಲ್ವಾಮ ದಾಳಿ ನಂತರದಲ್ಲಿಯೂ ಹಲವು ಚುನಾವಣಾ ಪ್ರಚಾರದಲ್ಲಿ ಪಕ್ಷದ ಪರ ಮತ ಯಾಚನೆ ಮಾಡುವ ಕೆಲಸಗಳಲ್ಲಿ ಮೋದಿ ತೊಡಗಿಸಿಕೊಂಡಿದ್ದಾರೆ. ಇಂಡೋ-ಪಾಕ್ ವಿವಾದದ ಕುರಿತು ಮುಂದಿನ ಹೆಜ್ಜೆಗಳನ್ನು ಚರ್ಚಿಸಲು ಕರೆದಿದ್ದ ಸರ್ವಪಕ್ಷಗಳ ಎರಡೂ ಸಭೆಗೂ ಮೋದಿ ಗೈರು ಹಾಜರಾಗಿದ್ದು ಗಮನಾರ್ಹ! ಮೊದಲನೆಯದ್ದು ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದರೆ, ಮತ್ತೊಂದು ಸುಷ್ಮಾ ಸ್ವರಾಜ್ ನೇತೃತ್ವದಲ್ಲಿ ನಡೆದಿದೆ. ದೇಶದ ಭದ್ರತೆಗೆ ಎದುರಾಗಿರುವ ಆತಂಕದ ಬಗ್ಗೆ ಚರ್ಚಿಸಲು ಕರೆಯಲಾದ ಸಭೆಯಲ್ಲಿ ಭಾಗವಹಿಸಲು ಸಮಯವಿಲ್ಲದ ಮೋದಿಯವರಿಗೆ ಚುನಾವಣಾ ಪ್ರಚಾರದ ವೀಡಿಯೊ ಕಾನ್ಫರೆನ್ಸ್ ಮಾಡಲು, ಆಪ್ ಬಿಡುಗಡೆ ಮಾಡಲು ಹೇಗೆ ಸಮಯ ಸಿಕ್ಕಿತು? ಇದು ಜನ ಕೇಳುತ್ತಿರುವ ಪ್ರಶ್ನೆ.

ಇನ್ನು ದಾಳಿಯಾದ ದಿನದಿಂದ ಇವತ್ತಿನವರೆಗೂ ಅಮಿತ್ ಶಾ ಸೈನಿಕರ ದಾಳಿಯನ್ನ ರಾಜಕೀಯ ಪ್ರಚಾರಕ್ಕೆ ಬಳಸಿಕೊಳ್ಳುತ್ತಲೇ ಇದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ದಾಳಿಯಿಂದ ನಮಗೆ ಕರ್ನಾಟಕದಲ್ಲಿ 22 ಸೀಟು ಗೆಲ್ಲುವುದಕ್ಕೆ ಅನೂಕಲವಾಗಲಿದೆ ಎಂದು ಹೇಳಿ ರಾಷ್ಟ್ರ ಮಟ್ಟದಲ್ಲಿ ಟೀಕೆಗೆ ಒಳಗಾಗಿದ್ದಾರೆ. ಒಟ್ಟಾರೆ ಸೈನಿಕರ ಬಲಿದಾನ ದೇಶದ ರಕ್ಷಣೆಯ ವಿಚಾರವಾಗಿ ಕೇವಲ ಖಾಲಿ ಮಾತುಗಳನ್ನು ಇವರೆಲ್ಲಾ ಆಡುತ್ತಿದ್ದಾರೆಯೇ ಹೊರತು ದೇಶಕ್ಕಿಂತ ಚುನಾವಣೆಯಲ್ಲಿ ಅಧಿಕಾರ ಹಿಡಿಯುವುದೇ ಮೊದಲ ಆದ್ಯತೆ ನೀಡುತ್ತಿರುವುದು ವಾಸ್ತವ ಎಂಬುದು ಕೇವಲ ಆರೋಪವಲ್ಲ.

ಈ ಆಟದಲ್ಲಿ ಪ್ರಧಾನಿಯವರನ್ನೂ ಒಳಗೊಂಡಂತೆ ಸಮಸ್ತ ಬಿಜೆಪಿ ಮೀಡಿಯಾಗಳನ್ನು ಸುಳ್ಳುಗಾರರನ್ನಾಗಿ ಮಾಡುತ್ತಿರೋದು ವಿಪರ್ಯಾಸ. ದುರಂತವೆಂದರೆ ಇದು ಹೀಗೇ ಮುಂದುವರೆದರೆ ಜನರ ನಡುವೆ ತಮ್ಮ ಮೂಲಕ ಇಡಿಯಾಗಿ ಪತ್ರಿಕೋದ್ಯಮದ ವಿಶ್ವಾಸಾರ್ಹತೆ ಎಷ್ಟು ಪಾತಾಳಕ್ಕೆ ಕುಸಿಯಲಿದೆ ಎಂಬ ಅಂದಾಜೂ ಇಲ್ಲದ ಮೀಡಿಯಾಗಳು ತಮ್ಮ ಕಾಲ ಮೇಲೆ ತಾವೇ ಕಲ್ಲು ಎತ್ತಿ ಹಾಕಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನರಿಗೆ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿ

ಹಿರಿಯ ಜಾನಪದ ಕಲಾವಿದ ಡಿಂಗ್ರಿ ನರಸಪ್ಪ, ಬೆಂಗಳೂರಿನ ಚಂದ್ರಮ್ಮ ಸೇರಿದಂತೆ ಐದು ಜನ ಹಿರಿಯ ಸಾಧಕರು 2026ನೇ ಸಾಲಿನ ಬಾಬು ಜಗಜೀವನ್‌ ರಾಮ್‌ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರಾಯಚೂರು ಜಿಲ್ಲೆಯ ಹಿರಿಯ ದಲಿತ ಹೋರಾಟಗಾರ...

ಗಾಜಾ; ಗೊಂಬೆಯೊಂದಿಗೆ ‘ಅಂತ್ಯಕ್ರಿಯೆ’ ಆಟ ಆಡುವ ಎಳೆಯ ಮಕ್ಕಳ ವಿಡಿಯೋ ವೈರಲ್; ಸುತ್ತಲಿನ ಘಟನೆಯನ್ನು ಪುನರಾವರ್ತಿಸುವ ಮಕ್ಕಳು

ಅಕ್ಟೋಬರ್ 2023 ರಲ್ಲಿ ಇಸ್ರೇಲಿ ಮಿಲಿಟರಿ ದಾಳಿಯನ್ನು ಪ್ರಾರಂಭಿಸಿದ ನಂತರ ಗಾಜಾದಿಂದ ದುಃಖಕರ ದೃಶ್ಯಗಳು ಹೊರಹೊಮ್ಮುತ್ತಿವೆ. ಇತ್ತೀಚಿನ ಒಂದು ಘಟನೆಯಲ್ಲಿ, ಚಿಕ್ಕ ಮಕ್ಕಳು ಅಂತ್ಯಕ್ರಿಯೆಗಾಗಿ ಗೊಂಬೆಯನ್ನು ಹೊತ್ತುಕೊಂಡು ಹೋಗುವುದನ್ನು ಕಾಣಬಹುದು - ಇದು ಅವರು...

ದೆಹಲಿ| ಆಳವಾದ ಚರಂಡಿಗೆ ಬಿದ್ದು ನೈರ್ಮಲ್ಯ ಕಾರ್ಮಿಕ ಸಾವು; ನ್ಯಾಯಕ್ಕೆ ಆಗ್ರಹಿಸಿದ ಮೃತನ ಕುಟುಂಬ

ಮಾರ್ಚ್ 30 ರಂದು ಪೂರ್ವ ದೆಹಲಿಯ ದಿಲ್ಶಾದ್ ಗಾರ್ಡನ್ ಪ್ರದೇಶದಲ್ಲಿ ಸುರಕ್ಷತಾ ಸಾಧನಗಳಿಲ್ಲದೆ ಆಳವಾದ ಚರಂಡಿ ಸ್ವಚ್ಛಗೊಳಿಸುವ ಸಮಯದಲ್ಲಿ ಯುವ ನೈರ್ಮಲ್ಯ ಕಾರ್ಮಿಕ ರಾಹುಲ್ ಎಂಬುವವರು ಸಾವನ್ನಪ್ಪಿದ್ದಾರೆ. ಮಧ್ಯಾಹ್ನ 2:00 ರ ಸುಮಾರಿಗೆ...

ನಿವೃತ್ತ ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ ಆಸ್ಪತ್ರೆಗೆ ದಾಖಲು; ಕಾರ್ಯಕ್ರಮದಲ್ಲಿ ಏಕಾಏಕಿ ಕುಸಿದು ಬಿದ್ದು ಅಸ್ವಸ್ಥ

ಬೆಂಗಳೂರು: ಕರ್ನಾಟಕದ ನಿವೃತ್ತ ಲೋಕಾಯುಕ್ತ ಎನ್‌.ಸಂತೋಷ್‌ ಹೆಗ್ಡೆ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಭಾಷಣದ ವೇಳೆ ಕುಸಿದು ಬಿದ್ದು ಅಸ್ವಸ್ಥರಾಗಿದ್ದ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಏಪ್ರಿಲ್ 4ರ, ಶುಕ್ರವಾರ ಬೆಂಗಳೂರಿನ ಕೊಂಡಜಿ ಬಸಪ್ಪ ಸಭಾಂಗಣದಲ್ಲಿ...

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...