Homeಮುಖಪುಟಯುದ್ಧದಾಹಿ ಮೀಡಿಯಾಗಳನ್ನು ಸುಳ್ಳುಗಾರರನ್ನಾಗಿಸಿದ ಮೋದಿ ಚುನಾವಣಾ ಪ್ರಚಾರದಲ್ಲಿ!

ಯುದ್ಧದಾಹಿ ಮೀಡಿಯಾಗಳನ್ನು ಸುಳ್ಳುಗಾರರನ್ನಾಗಿಸಿದ ಮೋದಿ ಚುನಾವಣಾ ಪ್ರಚಾರದಲ್ಲಿ!

- Advertisement -
- Advertisement -

`ಯುದ್ಧ ಫಿಕ್ಸ್’, `ಪಾಪಿ ಪಾಕ್.ಗೆ ಯುದ್ಧವೊಂದೇ ಉತ್ತರ’ `ಯುದ್ಧ ಸನ್ನದ್ಧ’…. ಇವು ಪುಲ್ವಾಮಾ ಭಯೋತ್ಪಾದಕ ದಾಳಿ ನಂತರ ದಿನದ ಇಪ್ಪತ್ನಾಲ್ಕು ಗಂಟೆಯೂ ಮೀಡಿಯಾಗಳ ಪರದೆಗಳನ್ನು ಆವರಿಸುತ್ತಿರುವ ರಣೋತ್ಸಾಹದ ಟೈಟಲ್ಲುಗಳು. ಅದರಲ್ಲೂ ಬಾಲಕೋಟ್ ಮೇಲೆ ಭಾರತೀಯ ವಾಯುಸೇನೆ ದಾಳಿ ನಡೆಸಿದ ನಂತರವಂತೂ ಟೀವಿ ಆಂಕರುಗಳು ಕುರ್ಚಿ ಮೇಲೆ ಕೂರಲಾಗದಷ್ಟು ತುದಿಗಾಲಲ್ಲಿ ನಿಂತು ಪಾಕಿಸ್ತಾನದ ಮೇಲೆ ನಿರಂತರ ಯುದ್ಧ ನಡೆಸುತ್ತಿದ್ದಾರೆ! ಅವರ ಪ್ರಕಾರ ದೇಶಕ್ಕೆ ದೇಶವೇ ಯುದ್ಧಕ್ಕೆ ಸಜ್ಜಾಗಿ ಹೈಟೆನ್ಷನ್.ನಲ್ಲಿ ಕಾಯುತ್ತಿದೆ! ಅಂದರೆ ಈ ದೇಶದ ಪ್ರಧಾನಿಗೂ ಅದೇ ಟೆನ್ಷನ್ ಇರಬೇಕಲ್ಲವೇ?

ಆದರೆ, ಮೀಡಿಯಾದವರು ಯುದ್ಧ ಟೆನ್ಷನ್ನಿಂದ ಜನರನ್ನು ಬೆದರಿಸುತ್ತಿರುವ ಸಮಯದಲ್ಲೇ ಪ್ರಧಾನಿ ಮೋದಿಯವರು ಅಂತಹ ಯಾವ ಟೆನ್ಷನ್ನೂ ಇಲ್ಲದೆ ಮುಂಬರುವ ಎಲೆಕ್ಷನ್ನಿನ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ, ಅದೂ ತಮ್ಮ ಮೋದಿ ಆಪ್ ಮೂಲಕ! ಈ ವಿದ್ಯಮಾನ ಎರಡು ಸಾಧ್ಯತೆಗಳನ್ನ ನಮ್ಮ ಮುಂದೆ ತೆರದಿಡುತ್ತೆ. ಒಂದೋ, ಪ್ರಧಾನಿ ಮೋದಿಯವರಿಗೆ ದೇಶದ ಭದ್ರತೆ, ಸುರಕ್ಷತೆಗಿಂತ ಹೆಚ್ಚಾಗಿ ರಾಜಕೀಯವೇ ಮುಖ್ಯವಾಗಿರಬೇಕು. ಅಥವಾ ಅಂಥಾ ಪ್ರಧಾನಿ ಹುದ್ದೆಯಲ್ಲಿ ಕೂತಿರುವ ವ್ಯಕ್ತಿಯೇ ನಿರುಮ್ಮಳರಾಗಿದ್ದಾರೆಂದರೆ `ಯುದ್ಧ ಸನ್ನದ್ದ ಟೆನ್ಷನ್’ ಇದೆಯೆಂದು ಬೊಬ್ಬಿರಿಯುತ್ತಿರುವ ಈ ಮೀಡಿಯಾಗಳೇ ಬೊಗಳೆ ಬಿಡುತ್ತಿರಬೇಕು! ಹಾಗಾದರೆ, ಇವರೆಲ್ಲ ಕಡ್ಡಿಯನ್ನೇ ಗುಡ್ಡ ಮಾಡಿ ತೋರಿಸುತ್ತಿದ್ದಾರೆಯೇ?

ಸೈನಿಕರ ಬಲಿದಾನವನ್ನು ರಾಜಕೀಯಗೊಳಿಸಬಾರದು ಎನ್ನುವುದು ಯಾವುದೇ ದೇಶದಲ್ಲಿ ಪಾಲಿಸಬೇಕಾದ ಕನಿಷ್ಠ ನೈತಿಕ ನಿಯಮ. ಪುಲ್ವಾನಾ ದಾಳಿಯ ನಂತರ ಹಲವಾರು ರಾಜಕೀಯ ಪಕ್ಷಗಳವರು ಅಸಂಬದ್ಧ ಹೇಳಿಕೆಗಳನ್ನು ನೀಡಿದ್ದಾರೆ. ಆದರೆ ಸೈನಿಕರ ಹೆಸರಿನಲ್ಲಿ ಮತ್ತವರ ಸಾವಿನಲ್ಲಿ ಅತಿ ಹೆಚ್ಚು ರಾಜಕೀಯ ಮಾಡಿದವರು ಬಿಜೆಪಿಯವರೇ ಎನ್ನುವುದರಲ್ಲಿ ಯಾರಿಗೂ ಅನುಮಾನವಿಲ್ಲ. 2014ಕ್ಕೂ ಮೊದಲೂ ಸೈನಿಕರ ಬಲಿದಾನದ ಸಂದರ್ಭವನ್ನು ರಾಜಕೀಯಕ್ಕೆ ಬಳಸಿಕೊಂಡ ಮೋದಿಯವರ ಸಾಕಷ್ಟು ಭಾಷಣದ ವಿಡಿಯೋಗಳು ಇಂದಿಗೂ ಲಭ್ಯವಿದೆ. ಇನ್ನು ಪುಲ್ವಾಮ ದಾಳಿಯ ನಂತರದ ಬಿಜೆಪಿಯ ಪ್ರಚಾರ ನಾಚಿಕೆಯಿಲ್ಲದೆ ನಡೆಯುತ್ತಿದೆ.

ಇಂದು (ಫೆಬ್ರವರಿ 28) ಮೋದಿಯವರು ತಮ್ಮ ಮೋದಿ ಆಪ್ ಮೂಲಕ ದೇಶದ ಕೋಟ್ಯಾಂತರ ಜನರನ್ನು (ಸುಮಾರು 15 ಸಾವಿರ ಬೇರೆ ಬೇರೆ ಸ್ಥಳಗಳಲ್ಲಿ ಎಂದು ಬಿಜೆಪಿ ಪ್ರಚಾರದ ವೇಳೆ ಹೇಳಿಕೊಂಡಿದೆ) ಮುಂಬರುವ 2019ರ ಲೋಕಸಭಾ ಚುನಾವಣೆಗೆ ಆಡಳಿತಾರೂಢ ಪಕ್ಷದ ಪ್ರಚಾರಕ್ಕಾಗಿ ಜಗತ್ತಿನ ಅತ್ಯಂತ ದೊಡ್ಡ ವಿಡಿಯೋ ಕಾನ್ಫರೆನ್ಸ್ ಅನ್ನು ಬಿಜೆಪಿ ಪಕ್ಷದ ಕಾರ್ಯಕರ್ತರ ಜೊತೆ ನಡೆಸಿದ್ದಾರೆ. ಭಾರತದ ಗಡಿಯಲ್ಲಿ ಆತಂಕದ ವಾತಾವರಣವಿದ್ದು ಹಾಗೂ ಪಾಕಿಸ್ತಾನದಲ್ಲಿ ಬಂಧಿತರಾಗಿರುವ ಭಾರತದ ಏರ್ ವಿಂಗ್ ಕಮಾಂಡರ್ ಅಭಿನಂದನ್ ಇನ್ನೂ ಬಿಡುಗಡೆಯಾಗಿ ಭಾರತಕ್ಕೆ ವಾಪಾಸ್ ಆಗದೇ ಇರುವ ಪರಿಸ್ಥಿತಿಯಲ್ಲಿ ತಮ್ಮ ಪಕ್ಷದ ಪರ ಪ್ರಚಾರ ಮಾಡುವ ಅವಶ್ಯಕತೆಯಿದೆಯೇ ಎಂದು ಟಿವಿ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಜನಾಕ್ರೋಶ ವ್ಯಕ್ತವಾಗಿದೆ.

ಮೋದಿಗೆ ಭಾರತ ಮೊದಲಾ, ಇಲ್ಲವೇ ತನ್ನ ಪಕ್ಷದ ಸಂಕುಚಿತ ಹಿತಾಸಕ್ತಿಯೇ ಮೊದಲಾ? ಇದೊಂದು ಲಜ್ಜೆಗೆಟ್ಟ ಕೆಲಸ, ಸೂಕ್ಷ್ಮತೆ ಇಲ್ಲದವರು ಮಾಡುವ ಕೆಲಸ ಇನ್ನಿತ್ಯಾದಿ ಪದಗಳಿಂದ ವೆರಿಫೈಡ್ ಟ್ವಿಟ್ಟರ್ ಖಾತೆಗಳನ್ನೂ ಒಳಗೊಂಡಂತೆ ಸಹಸ್ರಾರು ಜನ ಟೀಕೆ ಮಾಡುತ್ತಿದ್ದಾರೆ. ಅಲ್ಲದೆ ಇದೇ ಫೆಬ್ರವರಿ 27ರಂದು ಖೇಲೋ ಇಂಡಿಯಾ (ಆಟವಾಡಿ ಭಾರತ) ಎನ್ನುವ ಮೊಬೈಲ್ ಆಪ್‌ಅನ್ನು ಉದ್ಘಾಟನೆ ಮಾಡಿದ್ದು, ಅದರಿಂದ ಸಹಾ ಮೋದಿ ಜನರ ಟೀಕೆಗೆ ಗುರಿಯಾಗಿದ್ದಾರೆ. ಈವರೆಗೂ ಒಂದೂ ಪತ್ರಿಕಾಗೋಷ್ಠಿ ನಡೆಸದ ಮೋದಿ ಅವರಿಗೆ ತಮ್ಮದೇ ಪಕ್ಷದ ಕಾರ್ಯಕರ್ತರೊಂದಿಗೆ ಜಗತ್ತಿನ ಅತ್ಯಂತ ಉದ್ದನೆಯ ವಿಡಿಯೋ ಸಂಭಾಷಣೆ ನಡೆಸಲು ಸಮಯ ಹೇಗೆ ಸಿಗುತ್ತದೆ ಎನ್ನುವುದು ಜನರ ಪ್ರಶ್ನೆಯಾಗಿದೆ. ಇದೆಲ್ಲದರ ಜೊತೆಜೊತೆಗೆ ಪುಲ್ವಾಮ ದಾಳಿ ನಂತರದಲ್ಲಿಯೂ ಹಲವು ಚುನಾವಣಾ ಪ್ರಚಾರದಲ್ಲಿ ಪಕ್ಷದ ಪರ ಮತ ಯಾಚನೆ ಮಾಡುವ ಕೆಲಸಗಳಲ್ಲಿ ಮೋದಿ ತೊಡಗಿಸಿಕೊಂಡಿದ್ದಾರೆ. ಇಂಡೋ-ಪಾಕ್ ವಿವಾದದ ಕುರಿತು ಮುಂದಿನ ಹೆಜ್ಜೆಗಳನ್ನು ಚರ್ಚಿಸಲು ಕರೆದಿದ್ದ ಸರ್ವಪಕ್ಷಗಳ ಎರಡೂ ಸಭೆಗೂ ಮೋದಿ ಗೈರು ಹಾಜರಾಗಿದ್ದು ಗಮನಾರ್ಹ! ಮೊದಲನೆಯದ್ದು ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದರೆ, ಮತ್ತೊಂದು ಸುಷ್ಮಾ ಸ್ವರಾಜ್ ನೇತೃತ್ವದಲ್ಲಿ ನಡೆದಿದೆ. ದೇಶದ ಭದ್ರತೆಗೆ ಎದುರಾಗಿರುವ ಆತಂಕದ ಬಗ್ಗೆ ಚರ್ಚಿಸಲು ಕರೆಯಲಾದ ಸಭೆಯಲ್ಲಿ ಭಾಗವಹಿಸಲು ಸಮಯವಿಲ್ಲದ ಮೋದಿಯವರಿಗೆ ಚುನಾವಣಾ ಪ್ರಚಾರದ ವೀಡಿಯೊ ಕಾನ್ಫರೆನ್ಸ್ ಮಾಡಲು, ಆಪ್ ಬಿಡುಗಡೆ ಮಾಡಲು ಹೇಗೆ ಸಮಯ ಸಿಕ್ಕಿತು? ಇದು ಜನ ಕೇಳುತ್ತಿರುವ ಪ್ರಶ್ನೆ.

ಇನ್ನು ದಾಳಿಯಾದ ದಿನದಿಂದ ಇವತ್ತಿನವರೆಗೂ ಅಮಿತ್ ಶಾ ಸೈನಿಕರ ದಾಳಿಯನ್ನ ರಾಜಕೀಯ ಪ್ರಚಾರಕ್ಕೆ ಬಳಸಿಕೊಳ್ಳುತ್ತಲೇ ಇದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ದಾಳಿಯಿಂದ ನಮಗೆ ಕರ್ನಾಟಕದಲ್ಲಿ 22 ಸೀಟು ಗೆಲ್ಲುವುದಕ್ಕೆ ಅನೂಕಲವಾಗಲಿದೆ ಎಂದು ಹೇಳಿ ರಾಷ್ಟ್ರ ಮಟ್ಟದಲ್ಲಿ ಟೀಕೆಗೆ ಒಳಗಾಗಿದ್ದಾರೆ. ಒಟ್ಟಾರೆ ಸೈನಿಕರ ಬಲಿದಾನ ದೇಶದ ರಕ್ಷಣೆಯ ವಿಚಾರವಾಗಿ ಕೇವಲ ಖಾಲಿ ಮಾತುಗಳನ್ನು ಇವರೆಲ್ಲಾ ಆಡುತ್ತಿದ್ದಾರೆಯೇ ಹೊರತು ದೇಶಕ್ಕಿಂತ ಚುನಾವಣೆಯಲ್ಲಿ ಅಧಿಕಾರ ಹಿಡಿಯುವುದೇ ಮೊದಲ ಆದ್ಯತೆ ನೀಡುತ್ತಿರುವುದು ವಾಸ್ತವ ಎಂಬುದು ಕೇವಲ ಆರೋಪವಲ್ಲ.

ಈ ಆಟದಲ್ಲಿ ಪ್ರಧಾನಿಯವರನ್ನೂ ಒಳಗೊಂಡಂತೆ ಸಮಸ್ತ ಬಿಜೆಪಿ ಮೀಡಿಯಾಗಳನ್ನು ಸುಳ್ಳುಗಾರರನ್ನಾಗಿ ಮಾಡುತ್ತಿರೋದು ವಿಪರ್ಯಾಸ. ದುರಂತವೆಂದರೆ ಇದು ಹೀಗೇ ಮುಂದುವರೆದರೆ ಜನರ ನಡುವೆ ತಮ್ಮ ಮೂಲಕ ಇಡಿಯಾಗಿ ಪತ್ರಿಕೋದ್ಯಮದ ವಿಶ್ವಾಸಾರ್ಹತೆ ಎಷ್ಟು ಪಾತಾಳಕ್ಕೆ ಕುಸಿಯಲಿದೆ ಎಂಬ ಅಂದಾಜೂ ಇಲ್ಲದ ಮೀಡಿಯಾಗಳು ತಮ್ಮ ಕಾಲ ಮೇಲೆ ತಾವೇ ಕಲ್ಲು ಎತ್ತಿ ಹಾಕಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...