Homeಮುಖಪುಟಯುದ್ಧದಾಹಿ ಮೀಡಿಯಾಗಳನ್ನು ಸುಳ್ಳುಗಾರರನ್ನಾಗಿಸಿದ ಮೋದಿ ಚುನಾವಣಾ ಪ್ರಚಾರದಲ್ಲಿ!

ಯುದ್ಧದಾಹಿ ಮೀಡಿಯಾಗಳನ್ನು ಸುಳ್ಳುಗಾರರನ್ನಾಗಿಸಿದ ಮೋದಿ ಚುನಾವಣಾ ಪ್ರಚಾರದಲ್ಲಿ!

- Advertisement -
- Advertisement -

`ಯುದ್ಧ ಫಿಕ್ಸ್’, `ಪಾಪಿ ಪಾಕ್.ಗೆ ಯುದ್ಧವೊಂದೇ ಉತ್ತರ’ `ಯುದ್ಧ ಸನ್ನದ್ಧ’…. ಇವು ಪುಲ್ವಾಮಾ ಭಯೋತ್ಪಾದಕ ದಾಳಿ ನಂತರ ದಿನದ ಇಪ್ಪತ್ನಾಲ್ಕು ಗಂಟೆಯೂ ಮೀಡಿಯಾಗಳ ಪರದೆಗಳನ್ನು ಆವರಿಸುತ್ತಿರುವ ರಣೋತ್ಸಾಹದ ಟೈಟಲ್ಲುಗಳು. ಅದರಲ್ಲೂ ಬಾಲಕೋಟ್ ಮೇಲೆ ಭಾರತೀಯ ವಾಯುಸೇನೆ ದಾಳಿ ನಡೆಸಿದ ನಂತರವಂತೂ ಟೀವಿ ಆಂಕರುಗಳು ಕುರ್ಚಿ ಮೇಲೆ ಕೂರಲಾಗದಷ್ಟು ತುದಿಗಾಲಲ್ಲಿ ನಿಂತು ಪಾಕಿಸ್ತಾನದ ಮೇಲೆ ನಿರಂತರ ಯುದ್ಧ ನಡೆಸುತ್ತಿದ್ದಾರೆ! ಅವರ ಪ್ರಕಾರ ದೇಶಕ್ಕೆ ದೇಶವೇ ಯುದ್ಧಕ್ಕೆ ಸಜ್ಜಾಗಿ ಹೈಟೆನ್ಷನ್.ನಲ್ಲಿ ಕಾಯುತ್ತಿದೆ! ಅಂದರೆ ಈ ದೇಶದ ಪ್ರಧಾನಿಗೂ ಅದೇ ಟೆನ್ಷನ್ ಇರಬೇಕಲ್ಲವೇ?

ಆದರೆ, ಮೀಡಿಯಾದವರು ಯುದ್ಧ ಟೆನ್ಷನ್ನಿಂದ ಜನರನ್ನು ಬೆದರಿಸುತ್ತಿರುವ ಸಮಯದಲ್ಲೇ ಪ್ರಧಾನಿ ಮೋದಿಯವರು ಅಂತಹ ಯಾವ ಟೆನ್ಷನ್ನೂ ಇಲ್ಲದೆ ಮುಂಬರುವ ಎಲೆಕ್ಷನ್ನಿನ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ, ಅದೂ ತಮ್ಮ ಮೋದಿ ಆಪ್ ಮೂಲಕ! ಈ ವಿದ್ಯಮಾನ ಎರಡು ಸಾಧ್ಯತೆಗಳನ್ನ ನಮ್ಮ ಮುಂದೆ ತೆರದಿಡುತ್ತೆ. ಒಂದೋ, ಪ್ರಧಾನಿ ಮೋದಿಯವರಿಗೆ ದೇಶದ ಭದ್ರತೆ, ಸುರಕ್ಷತೆಗಿಂತ ಹೆಚ್ಚಾಗಿ ರಾಜಕೀಯವೇ ಮುಖ್ಯವಾಗಿರಬೇಕು. ಅಥವಾ ಅಂಥಾ ಪ್ರಧಾನಿ ಹುದ್ದೆಯಲ್ಲಿ ಕೂತಿರುವ ವ್ಯಕ್ತಿಯೇ ನಿರುಮ್ಮಳರಾಗಿದ್ದಾರೆಂದರೆ `ಯುದ್ಧ ಸನ್ನದ್ದ ಟೆನ್ಷನ್’ ಇದೆಯೆಂದು ಬೊಬ್ಬಿರಿಯುತ್ತಿರುವ ಈ ಮೀಡಿಯಾಗಳೇ ಬೊಗಳೆ ಬಿಡುತ್ತಿರಬೇಕು! ಹಾಗಾದರೆ, ಇವರೆಲ್ಲ ಕಡ್ಡಿಯನ್ನೇ ಗುಡ್ಡ ಮಾಡಿ ತೋರಿಸುತ್ತಿದ್ದಾರೆಯೇ?

ಸೈನಿಕರ ಬಲಿದಾನವನ್ನು ರಾಜಕೀಯಗೊಳಿಸಬಾರದು ಎನ್ನುವುದು ಯಾವುದೇ ದೇಶದಲ್ಲಿ ಪಾಲಿಸಬೇಕಾದ ಕನಿಷ್ಠ ನೈತಿಕ ನಿಯಮ. ಪುಲ್ವಾನಾ ದಾಳಿಯ ನಂತರ ಹಲವಾರು ರಾಜಕೀಯ ಪಕ್ಷಗಳವರು ಅಸಂಬದ್ಧ ಹೇಳಿಕೆಗಳನ್ನು ನೀಡಿದ್ದಾರೆ. ಆದರೆ ಸೈನಿಕರ ಹೆಸರಿನಲ್ಲಿ ಮತ್ತವರ ಸಾವಿನಲ್ಲಿ ಅತಿ ಹೆಚ್ಚು ರಾಜಕೀಯ ಮಾಡಿದವರು ಬಿಜೆಪಿಯವರೇ ಎನ್ನುವುದರಲ್ಲಿ ಯಾರಿಗೂ ಅನುಮಾನವಿಲ್ಲ. 2014ಕ್ಕೂ ಮೊದಲೂ ಸೈನಿಕರ ಬಲಿದಾನದ ಸಂದರ್ಭವನ್ನು ರಾಜಕೀಯಕ್ಕೆ ಬಳಸಿಕೊಂಡ ಮೋದಿಯವರ ಸಾಕಷ್ಟು ಭಾಷಣದ ವಿಡಿಯೋಗಳು ಇಂದಿಗೂ ಲಭ್ಯವಿದೆ. ಇನ್ನು ಪುಲ್ವಾಮ ದಾಳಿಯ ನಂತರದ ಬಿಜೆಪಿಯ ಪ್ರಚಾರ ನಾಚಿಕೆಯಿಲ್ಲದೆ ನಡೆಯುತ್ತಿದೆ.

ಇಂದು (ಫೆಬ್ರವರಿ 28) ಮೋದಿಯವರು ತಮ್ಮ ಮೋದಿ ಆಪ್ ಮೂಲಕ ದೇಶದ ಕೋಟ್ಯಾಂತರ ಜನರನ್ನು (ಸುಮಾರು 15 ಸಾವಿರ ಬೇರೆ ಬೇರೆ ಸ್ಥಳಗಳಲ್ಲಿ ಎಂದು ಬಿಜೆಪಿ ಪ್ರಚಾರದ ವೇಳೆ ಹೇಳಿಕೊಂಡಿದೆ) ಮುಂಬರುವ 2019ರ ಲೋಕಸಭಾ ಚುನಾವಣೆಗೆ ಆಡಳಿತಾರೂಢ ಪಕ್ಷದ ಪ್ರಚಾರಕ್ಕಾಗಿ ಜಗತ್ತಿನ ಅತ್ಯಂತ ದೊಡ್ಡ ವಿಡಿಯೋ ಕಾನ್ಫರೆನ್ಸ್ ಅನ್ನು ಬಿಜೆಪಿ ಪಕ್ಷದ ಕಾರ್ಯಕರ್ತರ ಜೊತೆ ನಡೆಸಿದ್ದಾರೆ. ಭಾರತದ ಗಡಿಯಲ್ಲಿ ಆತಂಕದ ವಾತಾವರಣವಿದ್ದು ಹಾಗೂ ಪಾಕಿಸ್ತಾನದಲ್ಲಿ ಬಂಧಿತರಾಗಿರುವ ಭಾರತದ ಏರ್ ವಿಂಗ್ ಕಮಾಂಡರ್ ಅಭಿನಂದನ್ ಇನ್ನೂ ಬಿಡುಗಡೆಯಾಗಿ ಭಾರತಕ್ಕೆ ವಾಪಾಸ್ ಆಗದೇ ಇರುವ ಪರಿಸ್ಥಿತಿಯಲ್ಲಿ ತಮ್ಮ ಪಕ್ಷದ ಪರ ಪ್ರಚಾರ ಮಾಡುವ ಅವಶ್ಯಕತೆಯಿದೆಯೇ ಎಂದು ಟಿವಿ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಜನಾಕ್ರೋಶ ವ್ಯಕ್ತವಾಗಿದೆ.

ಮೋದಿಗೆ ಭಾರತ ಮೊದಲಾ, ಇಲ್ಲವೇ ತನ್ನ ಪಕ್ಷದ ಸಂಕುಚಿತ ಹಿತಾಸಕ್ತಿಯೇ ಮೊದಲಾ? ಇದೊಂದು ಲಜ್ಜೆಗೆಟ್ಟ ಕೆಲಸ, ಸೂಕ್ಷ್ಮತೆ ಇಲ್ಲದವರು ಮಾಡುವ ಕೆಲಸ ಇನ್ನಿತ್ಯಾದಿ ಪದಗಳಿಂದ ವೆರಿಫೈಡ್ ಟ್ವಿಟ್ಟರ್ ಖಾತೆಗಳನ್ನೂ ಒಳಗೊಂಡಂತೆ ಸಹಸ್ರಾರು ಜನ ಟೀಕೆ ಮಾಡುತ್ತಿದ್ದಾರೆ. ಅಲ್ಲದೆ ಇದೇ ಫೆಬ್ರವರಿ 27ರಂದು ಖೇಲೋ ಇಂಡಿಯಾ (ಆಟವಾಡಿ ಭಾರತ) ಎನ್ನುವ ಮೊಬೈಲ್ ಆಪ್‌ಅನ್ನು ಉದ್ಘಾಟನೆ ಮಾಡಿದ್ದು, ಅದರಿಂದ ಸಹಾ ಮೋದಿ ಜನರ ಟೀಕೆಗೆ ಗುರಿಯಾಗಿದ್ದಾರೆ. ಈವರೆಗೂ ಒಂದೂ ಪತ್ರಿಕಾಗೋಷ್ಠಿ ನಡೆಸದ ಮೋದಿ ಅವರಿಗೆ ತಮ್ಮದೇ ಪಕ್ಷದ ಕಾರ್ಯಕರ್ತರೊಂದಿಗೆ ಜಗತ್ತಿನ ಅತ್ಯಂತ ಉದ್ದನೆಯ ವಿಡಿಯೋ ಸಂಭಾಷಣೆ ನಡೆಸಲು ಸಮಯ ಹೇಗೆ ಸಿಗುತ್ತದೆ ಎನ್ನುವುದು ಜನರ ಪ್ರಶ್ನೆಯಾಗಿದೆ. ಇದೆಲ್ಲದರ ಜೊತೆಜೊತೆಗೆ ಪುಲ್ವಾಮ ದಾಳಿ ನಂತರದಲ್ಲಿಯೂ ಹಲವು ಚುನಾವಣಾ ಪ್ರಚಾರದಲ್ಲಿ ಪಕ್ಷದ ಪರ ಮತ ಯಾಚನೆ ಮಾಡುವ ಕೆಲಸಗಳಲ್ಲಿ ಮೋದಿ ತೊಡಗಿಸಿಕೊಂಡಿದ್ದಾರೆ. ಇಂಡೋ-ಪಾಕ್ ವಿವಾದದ ಕುರಿತು ಮುಂದಿನ ಹೆಜ್ಜೆಗಳನ್ನು ಚರ್ಚಿಸಲು ಕರೆದಿದ್ದ ಸರ್ವಪಕ್ಷಗಳ ಎರಡೂ ಸಭೆಗೂ ಮೋದಿ ಗೈರು ಹಾಜರಾಗಿದ್ದು ಗಮನಾರ್ಹ! ಮೊದಲನೆಯದ್ದು ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದರೆ, ಮತ್ತೊಂದು ಸುಷ್ಮಾ ಸ್ವರಾಜ್ ನೇತೃತ್ವದಲ್ಲಿ ನಡೆದಿದೆ. ದೇಶದ ಭದ್ರತೆಗೆ ಎದುರಾಗಿರುವ ಆತಂಕದ ಬಗ್ಗೆ ಚರ್ಚಿಸಲು ಕರೆಯಲಾದ ಸಭೆಯಲ್ಲಿ ಭಾಗವಹಿಸಲು ಸಮಯವಿಲ್ಲದ ಮೋದಿಯವರಿಗೆ ಚುನಾವಣಾ ಪ್ರಚಾರದ ವೀಡಿಯೊ ಕಾನ್ಫರೆನ್ಸ್ ಮಾಡಲು, ಆಪ್ ಬಿಡುಗಡೆ ಮಾಡಲು ಹೇಗೆ ಸಮಯ ಸಿಕ್ಕಿತು? ಇದು ಜನ ಕೇಳುತ್ತಿರುವ ಪ್ರಶ್ನೆ.

ಇನ್ನು ದಾಳಿಯಾದ ದಿನದಿಂದ ಇವತ್ತಿನವರೆಗೂ ಅಮಿತ್ ಶಾ ಸೈನಿಕರ ದಾಳಿಯನ್ನ ರಾಜಕೀಯ ಪ್ರಚಾರಕ್ಕೆ ಬಳಸಿಕೊಳ್ಳುತ್ತಲೇ ಇದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ದಾಳಿಯಿಂದ ನಮಗೆ ಕರ್ನಾಟಕದಲ್ಲಿ 22 ಸೀಟು ಗೆಲ್ಲುವುದಕ್ಕೆ ಅನೂಕಲವಾಗಲಿದೆ ಎಂದು ಹೇಳಿ ರಾಷ್ಟ್ರ ಮಟ್ಟದಲ್ಲಿ ಟೀಕೆಗೆ ಒಳಗಾಗಿದ್ದಾರೆ. ಒಟ್ಟಾರೆ ಸೈನಿಕರ ಬಲಿದಾನ ದೇಶದ ರಕ್ಷಣೆಯ ವಿಚಾರವಾಗಿ ಕೇವಲ ಖಾಲಿ ಮಾತುಗಳನ್ನು ಇವರೆಲ್ಲಾ ಆಡುತ್ತಿದ್ದಾರೆಯೇ ಹೊರತು ದೇಶಕ್ಕಿಂತ ಚುನಾವಣೆಯಲ್ಲಿ ಅಧಿಕಾರ ಹಿಡಿಯುವುದೇ ಮೊದಲ ಆದ್ಯತೆ ನೀಡುತ್ತಿರುವುದು ವಾಸ್ತವ ಎಂಬುದು ಕೇವಲ ಆರೋಪವಲ್ಲ.

ಈ ಆಟದಲ್ಲಿ ಪ್ರಧಾನಿಯವರನ್ನೂ ಒಳಗೊಂಡಂತೆ ಸಮಸ್ತ ಬಿಜೆಪಿ ಮೀಡಿಯಾಗಳನ್ನು ಸುಳ್ಳುಗಾರರನ್ನಾಗಿ ಮಾಡುತ್ತಿರೋದು ವಿಪರ್ಯಾಸ. ದುರಂತವೆಂದರೆ ಇದು ಹೀಗೇ ಮುಂದುವರೆದರೆ ಜನರ ನಡುವೆ ತಮ್ಮ ಮೂಲಕ ಇಡಿಯಾಗಿ ಪತ್ರಿಕೋದ್ಯಮದ ವಿಶ್ವಾಸಾರ್ಹತೆ ಎಷ್ಟು ಪಾತಾಳಕ್ಕೆ ಕುಸಿಯಲಿದೆ ಎಂಬ ಅಂದಾಜೂ ಇಲ್ಲದ ಮೀಡಿಯಾಗಳು ತಮ್ಮ ಕಾಲ ಮೇಲೆ ತಾವೇ ಕಲ್ಲು ಎತ್ತಿ ಹಾಕಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...