Homeಮುಖಪುಟಯುದ್ಧದಾಹಿ ಮೀಡಿಯಾಗಳನ್ನು ಸುಳ್ಳುಗಾರರನ್ನಾಗಿಸಿದ ಮೋದಿ ಚುನಾವಣಾ ಪ್ರಚಾರದಲ್ಲಿ!

ಯುದ್ಧದಾಹಿ ಮೀಡಿಯಾಗಳನ್ನು ಸುಳ್ಳುಗಾರರನ್ನಾಗಿಸಿದ ಮೋದಿ ಚುನಾವಣಾ ಪ್ರಚಾರದಲ್ಲಿ!

- Advertisement -
- Advertisement -

`ಯುದ್ಧ ಫಿಕ್ಸ್’, `ಪಾಪಿ ಪಾಕ್.ಗೆ ಯುದ್ಧವೊಂದೇ ಉತ್ತರ’ `ಯುದ್ಧ ಸನ್ನದ್ಧ’…. ಇವು ಪುಲ್ವಾಮಾ ಭಯೋತ್ಪಾದಕ ದಾಳಿ ನಂತರ ದಿನದ ಇಪ್ಪತ್ನಾಲ್ಕು ಗಂಟೆಯೂ ಮೀಡಿಯಾಗಳ ಪರದೆಗಳನ್ನು ಆವರಿಸುತ್ತಿರುವ ರಣೋತ್ಸಾಹದ ಟೈಟಲ್ಲುಗಳು. ಅದರಲ್ಲೂ ಬಾಲಕೋಟ್ ಮೇಲೆ ಭಾರತೀಯ ವಾಯುಸೇನೆ ದಾಳಿ ನಡೆಸಿದ ನಂತರವಂತೂ ಟೀವಿ ಆಂಕರುಗಳು ಕುರ್ಚಿ ಮೇಲೆ ಕೂರಲಾಗದಷ್ಟು ತುದಿಗಾಲಲ್ಲಿ ನಿಂತು ಪಾಕಿಸ್ತಾನದ ಮೇಲೆ ನಿರಂತರ ಯುದ್ಧ ನಡೆಸುತ್ತಿದ್ದಾರೆ! ಅವರ ಪ್ರಕಾರ ದೇಶಕ್ಕೆ ದೇಶವೇ ಯುದ್ಧಕ್ಕೆ ಸಜ್ಜಾಗಿ ಹೈಟೆನ್ಷನ್.ನಲ್ಲಿ ಕಾಯುತ್ತಿದೆ! ಅಂದರೆ ಈ ದೇಶದ ಪ್ರಧಾನಿಗೂ ಅದೇ ಟೆನ್ಷನ್ ಇರಬೇಕಲ್ಲವೇ?

ಆದರೆ, ಮೀಡಿಯಾದವರು ಯುದ್ಧ ಟೆನ್ಷನ್ನಿಂದ ಜನರನ್ನು ಬೆದರಿಸುತ್ತಿರುವ ಸಮಯದಲ್ಲೇ ಪ್ರಧಾನಿ ಮೋದಿಯವರು ಅಂತಹ ಯಾವ ಟೆನ್ಷನ್ನೂ ಇಲ್ಲದೆ ಮುಂಬರುವ ಎಲೆಕ್ಷನ್ನಿನ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ, ಅದೂ ತಮ್ಮ ಮೋದಿ ಆಪ್ ಮೂಲಕ! ಈ ವಿದ್ಯಮಾನ ಎರಡು ಸಾಧ್ಯತೆಗಳನ್ನ ನಮ್ಮ ಮುಂದೆ ತೆರದಿಡುತ್ತೆ. ಒಂದೋ, ಪ್ರಧಾನಿ ಮೋದಿಯವರಿಗೆ ದೇಶದ ಭದ್ರತೆ, ಸುರಕ್ಷತೆಗಿಂತ ಹೆಚ್ಚಾಗಿ ರಾಜಕೀಯವೇ ಮುಖ್ಯವಾಗಿರಬೇಕು. ಅಥವಾ ಅಂಥಾ ಪ್ರಧಾನಿ ಹುದ್ದೆಯಲ್ಲಿ ಕೂತಿರುವ ವ್ಯಕ್ತಿಯೇ ನಿರುಮ್ಮಳರಾಗಿದ್ದಾರೆಂದರೆ `ಯುದ್ಧ ಸನ್ನದ್ದ ಟೆನ್ಷನ್’ ಇದೆಯೆಂದು ಬೊಬ್ಬಿರಿಯುತ್ತಿರುವ ಈ ಮೀಡಿಯಾಗಳೇ ಬೊಗಳೆ ಬಿಡುತ್ತಿರಬೇಕು! ಹಾಗಾದರೆ, ಇವರೆಲ್ಲ ಕಡ್ಡಿಯನ್ನೇ ಗುಡ್ಡ ಮಾಡಿ ತೋರಿಸುತ್ತಿದ್ದಾರೆಯೇ?

ಸೈನಿಕರ ಬಲಿದಾನವನ್ನು ರಾಜಕೀಯಗೊಳಿಸಬಾರದು ಎನ್ನುವುದು ಯಾವುದೇ ದೇಶದಲ್ಲಿ ಪಾಲಿಸಬೇಕಾದ ಕನಿಷ್ಠ ನೈತಿಕ ನಿಯಮ. ಪುಲ್ವಾನಾ ದಾಳಿಯ ನಂತರ ಹಲವಾರು ರಾಜಕೀಯ ಪಕ್ಷಗಳವರು ಅಸಂಬದ್ಧ ಹೇಳಿಕೆಗಳನ್ನು ನೀಡಿದ್ದಾರೆ. ಆದರೆ ಸೈನಿಕರ ಹೆಸರಿನಲ್ಲಿ ಮತ್ತವರ ಸಾವಿನಲ್ಲಿ ಅತಿ ಹೆಚ್ಚು ರಾಜಕೀಯ ಮಾಡಿದವರು ಬಿಜೆಪಿಯವರೇ ಎನ್ನುವುದರಲ್ಲಿ ಯಾರಿಗೂ ಅನುಮಾನವಿಲ್ಲ. 2014ಕ್ಕೂ ಮೊದಲೂ ಸೈನಿಕರ ಬಲಿದಾನದ ಸಂದರ್ಭವನ್ನು ರಾಜಕೀಯಕ್ಕೆ ಬಳಸಿಕೊಂಡ ಮೋದಿಯವರ ಸಾಕಷ್ಟು ಭಾಷಣದ ವಿಡಿಯೋಗಳು ಇಂದಿಗೂ ಲಭ್ಯವಿದೆ. ಇನ್ನು ಪುಲ್ವಾಮ ದಾಳಿಯ ನಂತರದ ಬಿಜೆಪಿಯ ಪ್ರಚಾರ ನಾಚಿಕೆಯಿಲ್ಲದೆ ನಡೆಯುತ್ತಿದೆ.

ಇಂದು (ಫೆಬ್ರವರಿ 28) ಮೋದಿಯವರು ತಮ್ಮ ಮೋದಿ ಆಪ್ ಮೂಲಕ ದೇಶದ ಕೋಟ್ಯಾಂತರ ಜನರನ್ನು (ಸುಮಾರು 15 ಸಾವಿರ ಬೇರೆ ಬೇರೆ ಸ್ಥಳಗಳಲ್ಲಿ ಎಂದು ಬಿಜೆಪಿ ಪ್ರಚಾರದ ವೇಳೆ ಹೇಳಿಕೊಂಡಿದೆ) ಮುಂಬರುವ 2019ರ ಲೋಕಸಭಾ ಚುನಾವಣೆಗೆ ಆಡಳಿತಾರೂಢ ಪಕ್ಷದ ಪ್ರಚಾರಕ್ಕಾಗಿ ಜಗತ್ತಿನ ಅತ್ಯಂತ ದೊಡ್ಡ ವಿಡಿಯೋ ಕಾನ್ಫರೆನ್ಸ್ ಅನ್ನು ಬಿಜೆಪಿ ಪಕ್ಷದ ಕಾರ್ಯಕರ್ತರ ಜೊತೆ ನಡೆಸಿದ್ದಾರೆ. ಭಾರತದ ಗಡಿಯಲ್ಲಿ ಆತಂಕದ ವಾತಾವರಣವಿದ್ದು ಹಾಗೂ ಪಾಕಿಸ್ತಾನದಲ್ಲಿ ಬಂಧಿತರಾಗಿರುವ ಭಾರತದ ಏರ್ ವಿಂಗ್ ಕಮಾಂಡರ್ ಅಭಿನಂದನ್ ಇನ್ನೂ ಬಿಡುಗಡೆಯಾಗಿ ಭಾರತಕ್ಕೆ ವಾಪಾಸ್ ಆಗದೇ ಇರುವ ಪರಿಸ್ಥಿತಿಯಲ್ಲಿ ತಮ್ಮ ಪಕ್ಷದ ಪರ ಪ್ರಚಾರ ಮಾಡುವ ಅವಶ್ಯಕತೆಯಿದೆಯೇ ಎಂದು ಟಿವಿ ಮಾಧ್ಯಮಗಳಲ್ಲಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಜನಾಕ್ರೋಶ ವ್ಯಕ್ತವಾಗಿದೆ.

ಮೋದಿಗೆ ಭಾರತ ಮೊದಲಾ, ಇಲ್ಲವೇ ತನ್ನ ಪಕ್ಷದ ಸಂಕುಚಿತ ಹಿತಾಸಕ್ತಿಯೇ ಮೊದಲಾ? ಇದೊಂದು ಲಜ್ಜೆಗೆಟ್ಟ ಕೆಲಸ, ಸೂಕ್ಷ್ಮತೆ ಇಲ್ಲದವರು ಮಾಡುವ ಕೆಲಸ ಇನ್ನಿತ್ಯಾದಿ ಪದಗಳಿಂದ ವೆರಿಫೈಡ್ ಟ್ವಿಟ್ಟರ್ ಖಾತೆಗಳನ್ನೂ ಒಳಗೊಂಡಂತೆ ಸಹಸ್ರಾರು ಜನ ಟೀಕೆ ಮಾಡುತ್ತಿದ್ದಾರೆ. ಅಲ್ಲದೆ ಇದೇ ಫೆಬ್ರವರಿ 27ರಂದು ಖೇಲೋ ಇಂಡಿಯಾ (ಆಟವಾಡಿ ಭಾರತ) ಎನ್ನುವ ಮೊಬೈಲ್ ಆಪ್‌ಅನ್ನು ಉದ್ಘಾಟನೆ ಮಾಡಿದ್ದು, ಅದರಿಂದ ಸಹಾ ಮೋದಿ ಜನರ ಟೀಕೆಗೆ ಗುರಿಯಾಗಿದ್ದಾರೆ. ಈವರೆಗೂ ಒಂದೂ ಪತ್ರಿಕಾಗೋಷ್ಠಿ ನಡೆಸದ ಮೋದಿ ಅವರಿಗೆ ತಮ್ಮದೇ ಪಕ್ಷದ ಕಾರ್ಯಕರ್ತರೊಂದಿಗೆ ಜಗತ್ತಿನ ಅತ್ಯಂತ ಉದ್ದನೆಯ ವಿಡಿಯೋ ಸಂಭಾಷಣೆ ನಡೆಸಲು ಸಮಯ ಹೇಗೆ ಸಿಗುತ್ತದೆ ಎನ್ನುವುದು ಜನರ ಪ್ರಶ್ನೆಯಾಗಿದೆ. ಇದೆಲ್ಲದರ ಜೊತೆಜೊತೆಗೆ ಪುಲ್ವಾಮ ದಾಳಿ ನಂತರದಲ್ಲಿಯೂ ಹಲವು ಚುನಾವಣಾ ಪ್ರಚಾರದಲ್ಲಿ ಪಕ್ಷದ ಪರ ಮತ ಯಾಚನೆ ಮಾಡುವ ಕೆಲಸಗಳಲ್ಲಿ ಮೋದಿ ತೊಡಗಿಸಿಕೊಂಡಿದ್ದಾರೆ. ಇಂಡೋ-ಪಾಕ್ ವಿವಾದದ ಕುರಿತು ಮುಂದಿನ ಹೆಜ್ಜೆಗಳನ್ನು ಚರ್ಚಿಸಲು ಕರೆದಿದ್ದ ಸರ್ವಪಕ್ಷಗಳ ಎರಡೂ ಸಭೆಗೂ ಮೋದಿ ಗೈರು ಹಾಜರಾಗಿದ್ದು ಗಮನಾರ್ಹ! ಮೊದಲನೆಯದ್ದು ರಾಜನಾಥ್ ಸಿಂಗ್ ನೇತೃತ್ವದಲ್ಲಿ ನಡೆದರೆ, ಮತ್ತೊಂದು ಸುಷ್ಮಾ ಸ್ವರಾಜ್ ನೇತೃತ್ವದಲ್ಲಿ ನಡೆದಿದೆ. ದೇಶದ ಭದ್ರತೆಗೆ ಎದುರಾಗಿರುವ ಆತಂಕದ ಬಗ್ಗೆ ಚರ್ಚಿಸಲು ಕರೆಯಲಾದ ಸಭೆಯಲ್ಲಿ ಭಾಗವಹಿಸಲು ಸಮಯವಿಲ್ಲದ ಮೋದಿಯವರಿಗೆ ಚುನಾವಣಾ ಪ್ರಚಾರದ ವೀಡಿಯೊ ಕಾನ್ಫರೆನ್ಸ್ ಮಾಡಲು, ಆಪ್ ಬಿಡುಗಡೆ ಮಾಡಲು ಹೇಗೆ ಸಮಯ ಸಿಕ್ಕಿತು? ಇದು ಜನ ಕೇಳುತ್ತಿರುವ ಪ್ರಶ್ನೆ.

ಇನ್ನು ದಾಳಿಯಾದ ದಿನದಿಂದ ಇವತ್ತಿನವರೆಗೂ ಅಮಿತ್ ಶಾ ಸೈನಿಕರ ದಾಳಿಯನ್ನ ರಾಜಕೀಯ ಪ್ರಚಾರಕ್ಕೆ ಬಳಸಿಕೊಳ್ಳುತ್ತಲೇ ಇದ್ದಾರೆ. ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಈ ದಾಳಿಯಿಂದ ನಮಗೆ ಕರ್ನಾಟಕದಲ್ಲಿ 22 ಸೀಟು ಗೆಲ್ಲುವುದಕ್ಕೆ ಅನೂಕಲವಾಗಲಿದೆ ಎಂದು ಹೇಳಿ ರಾಷ್ಟ್ರ ಮಟ್ಟದಲ್ಲಿ ಟೀಕೆಗೆ ಒಳಗಾಗಿದ್ದಾರೆ. ಒಟ್ಟಾರೆ ಸೈನಿಕರ ಬಲಿದಾನ ದೇಶದ ರಕ್ಷಣೆಯ ವಿಚಾರವಾಗಿ ಕೇವಲ ಖಾಲಿ ಮಾತುಗಳನ್ನು ಇವರೆಲ್ಲಾ ಆಡುತ್ತಿದ್ದಾರೆಯೇ ಹೊರತು ದೇಶಕ್ಕಿಂತ ಚುನಾವಣೆಯಲ್ಲಿ ಅಧಿಕಾರ ಹಿಡಿಯುವುದೇ ಮೊದಲ ಆದ್ಯತೆ ನೀಡುತ್ತಿರುವುದು ವಾಸ್ತವ ಎಂಬುದು ಕೇವಲ ಆರೋಪವಲ್ಲ.

ಈ ಆಟದಲ್ಲಿ ಪ್ರಧಾನಿಯವರನ್ನೂ ಒಳಗೊಂಡಂತೆ ಸಮಸ್ತ ಬಿಜೆಪಿ ಮೀಡಿಯಾಗಳನ್ನು ಸುಳ್ಳುಗಾರರನ್ನಾಗಿ ಮಾಡುತ್ತಿರೋದು ವಿಪರ್ಯಾಸ. ದುರಂತವೆಂದರೆ ಇದು ಹೀಗೇ ಮುಂದುವರೆದರೆ ಜನರ ನಡುವೆ ತಮ್ಮ ಮೂಲಕ ಇಡಿಯಾಗಿ ಪತ್ರಿಕೋದ್ಯಮದ ವಿಶ್ವಾಸಾರ್ಹತೆ ಎಷ್ಟು ಪಾತಾಳಕ್ಕೆ ಕುಸಿಯಲಿದೆ ಎಂಬ ಅಂದಾಜೂ ಇಲ್ಲದ ಮೀಡಿಯಾಗಳು ತಮ್ಮ ಕಾಲ ಮೇಲೆ ತಾವೇ ಕಲ್ಲು ಎತ್ತಿ ಹಾಕಿಕೊಳ್ಳುತ್ತಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...