Homeಸಾಹಿತ್ಯ-ಸಂಸ್ಕೃತಿಕವನಯುದ್ಧೋನ್ಮಾದಿಗಳ ಕಣ್ತೆರೆಸುವ ಒಂದು ಕವಿತೆ

ಯುದ್ಧೋನ್ಮಾದಿಗಳ ಕಣ್ತೆರೆಸುವ ಒಂದು ಕವಿತೆ

- Advertisement -
- Advertisement -

1920ರಲ್ಲಿ ಜನಿಸಿದ ಅಬ್ದುಲ್ ಹಯೀ ಅವರ ಕಾವ್ಯನಾಮ ಸಾಹಿರ್ ಲುಧಿಯಾನ್ವಿ. ಭಾರತದ ಪಂಜಾಬಿನ ಲುಧಿಯಾನಾದಲ್ಲಿ ಜನಿಸಿದ ಇವರು 1943ರಲ್ಲಿ ಲಾಹೋರಿನಲ್ಲಿ ಹೋಗಿ ನೆಲೆಸಿದರು. ಅದೇ ವರ್ಷ ತಮ್ಮ ಮೊದಲ ಕವನ ಸಂಕಲನವನ್ನೂ ಪ್ರಕಟಿಸಿದರು. ಅಲ್ಲಿ ಅವರು ಪ್ರೊಗ್ರೆಸಿವ್ ರೈಟರ್ಸ ಅಸೋಸಿಯೇಷನ್ ಸೇರಿ ಸಕ್ರಿಯವಾದರು. ಸ್ವಾತಂತ್ರೋತ್ತರದಲ್ಲಿ ಅವರು ಅವರು ದೆಹಲಿಗೆ ಬಂದು, ಅಲ್ಲಿ ಕೆಲ ದಿನಗಳನ್ನು ಕಳೆದು ನಂತರ ಅವರ ಕರ್ಮಭೂಮಿಯಾದ ಬಾಂಬೆಗೆ ಬಂದು ಸೇರಿದರು. ಪಾಕಿಸ್ತಾನದ ನಷ್ಟ, ಭಾರತದ ಲಾಭವಾಯಿತು. ಪಾಕಿಸ್ತಾನ ತನ್ನನ್ನು ತಾನು ಒಂದು ಧಾರ್ಮಿಕ ದೇಶವೆಂದು ಘೋಷಿಸಿಕೊಂಡಿದ್ದಾಗ ಭಾರತ ಜಾತ್ಯತೀತವಾಗಿ, ಪ್ರಗತಿಪರವಾಗಿ, ಸಿನೆಮಾ, ಸಂಗೀತ ಮುಂತಾದ ಕಲೆಗಳನ್ನು ಉತ್ತುಂಗಕ್ಕೆ ಕೊಂಡೊಯ್ಯುವ ಪ್ರಯತ್ನದಲ್ಲಿತ್ತು. ಸ್ವಾಭಾವಿಕವಾಗಿಯೇ ಸಾಹಿರ್ ಅವರನ್ನು ಬಾಂಬೇ ಚಿತ್ರರಂಗ ತೆರೆದ ಹೃದಯದಿಂದ ಸ್ವಾಗತಿಸಿತು. ಅವರ ಮತ್ತು ಎಸ್.ಡಿ. ಬರ್ಮನ್ ಅವರ ಜೋಡಿ ಭಾರತೀಯ ಚಿತ್ರರಂಗದ ದಂತಕತೆ.

ದೋಸ್ತೋವ್‌ಸ್ಕಿ ಅವರ ಕಾದಂಬರಿ ಕ್ರೈಮ್ ಆಂಡ್ ಪನಿಶ್‌ಮೆಂಟ್ ಆಧಾರಿತ ಚಿತ್ರ ಮಾಡುತ್ತಿರುವಾಗ, ಆ ದಿನದ ಖ್ಯಾತ ಸಂಗೀತ ನಿರ್ದೇಶಕ ಜೋಡಿಯು ಸಂಗೀತ ನೀಡುವುದೆಂದು ನಿರ್ಧಾರವಾಯಿತು. ಆಗ ಅವರಿಗೆ ಸಮಾಜದ ಆಳದ ಅರಿವಿಲ್ಲ, ಆ ಜೋಡಿ ಬೇಡವೇ ಬೇಡ ಎಂದು ಸಾಹಿರ್ ಪಟ್ಟುಹಿಡಿದರು. ಅದರ ಪರಿಣಾಮವಾಗಿ ಫಿರ್ ಸುಬಹ್ ಹೋಗಿ ಚಿತ್ರವು ಖಯ್ಯಾಮ್ ಅವರ ಸಂಗೀತ ನಿರ್ದೇಶನದಲ್ಲಿ ಬಂದಿತು. ಆ ಚಿತ್ರದಲ್ಲಿ ರಾಜ್‌ಕಪೂರ್ ಮತ್ತು ಮಾಲಾ ಸಿನ್ಹ ಅವರ ನಟನೆಯಲ್ಲಿ ಬಂದ ಹಾಡು ವೋ ಸುಬಹ ಕಭಿ ತೊ ಆಯೇಗಿ ಭಾರತದ ಆ ಕಾಲದ ಹಿಂದೆ ಸಿನೆಮಾ ಪ್ರಿಯರ ಮನದಲ್ಲಿ ಅಚ್ಚಳಿಯದೇ ಉಳಿದಿದೆ.

ಎಸ್.ಡಿ.ಬರ್ಮನ್ ಅವರೊಂದಿಗೆ ಸಾಹಿರ್ ಅವರ ಕೊನೆಯ ಚಿತ್ರ ಗುರು ದತ್ ಅವರ ಪ್ಯಾಸಾ. ಅಲ್ಲಿ ಅವರು ಯೆಹ್ ದುನಿಯಾ ಅಗರ್ ಮಿಲ್ ಭಿ ಜಾಯೇಂ ತೊ ಕ್ಯಾ ಹೈ ಎಂದು ಈ ಜಗತ್ತನ್ನೇ ಧಿಕ್ಕರಿಸಿದವರು. ಸಮಾಜದ ಆಳವನ್ನರಿತು ತಮ್ಮ ಕವಿತೆಗಳಲ್ಲಿ ಕನ್ನಡಿ ತೋರಿಸಿದ ಸಾಹಿರ್ ಅವರು ಭಾರತೀಯ ಚಿತ್ರರಂಗವನ್ನು ೧೯೮೦ರವರೆಗೆ ಆಳಿದರು. ಅವರ ಒಂದು ಕವಿತೆಯ ಅನುವಾದ ಇಲ್ಲಿದೆ.

ರಕ್ತ ನಮ್ಮದಾದರೇನು? ಅವರದಾದರೇನು?

ರಕ್ತ ನಮ್ಮದಾದರೇನು? ಅವರದಾದರೇನು?
ಒಟ್ಟಿನಲ್ಲದು ಮನುಷ್ಯರದ್ದೇ..
ಯುದ್ಧ ಪೂರ್ವದಲ್ಲಾದರೇನು? ಪಶ್ಚಿಮದಲ್ಲಾದರೇನು?
ಒಟ್ಟಿನಲ್ಲಿ ಕುಸಿಯುವುದು ಶಾಂತಿನಿಕೇತನವೇ..

ಬಾಂಬುಗಳು ಮನೆಯ ಮೇಲೆ ಬಿದ್ದರೇನು?
ದೂರದ ಗಡಿಯಲ್ಲಾದರೇನು?
ಭೂಮಿಯ ಹೊಲಿಗೆಗಳು ಘಾಸಿಗೊಳ್ಳುತ್ತವೆ
ಬೆಂಕಿಬಿದ್ದ ಹೊಲ ನಮ್ಮದಾದರೇನು? ಅವರದಾದರೇನು?
ಸುಡುಬೆಂಕಿಗೆ ಸಕಲ ಜೀವಗಳು ತತ್ತರಿಸುತ್ತವೆ

ಟ್ಯಾಂಕುಗಳು ಮುನ್ನುಗ್ಗಿದರೇನು?
ಹಿಂದೆ ಸರಿದರೇನು?
ಭೂತಾಯಿ ಒಡಲು ಬರಿದಾಗುತ್ತದೆ
ವಿಜಯದ ಸಂಭ್ರಮವಾದರೇನು? ಸೋಲಿನ ಸೂತಕವಾದರೇನು?
ಬದುಕು ಗೋರಿಯಲ್ಲಿ ಅವಿತು ಕಣ್ಣೀರಿಡುತ್ತದೆ.

ಯುದ್ಧವೇ ಸಮಸ್ಯೆಯಾಗಿರುವಾಗ
ಯುದ್ಧ ಹೇಗೆ ಸಮಸ್ಯೆಗಳ ಬಗೆಹರಿಸೀತು
ಇಂದು ರಕ್ತ ಮತ್ತು ಬೆಂಕಿಗಳ ಮಳೆ ಸುರಿಸುತ್ತವೆ
ನಾಳೆ ಹಸಿವು ಮತ್ತು ಕ್ಷಾಮಗಳು ಬೆಳೆಯುತ್ತವೆ
ಆದ್ದರಿಂದ ಸಜ್ಜನರೇ
ಯುದ್ಧವು ಹಿಂದೆ ಸರಿದು ಇಲ್ಲವಾದರೆ ಚಂದ
ನಮ್ಮ ನಿಮ್ಮ ಅಂಗಳದಲ್ಲಿ ದೀಪ ಬೆಳಗಿದರೆ ಚಂದ

ಹಿಂದಿ ಮೂಲ- ಸಾಹಿರ್ ಲೂಧಿಯಾನ್ವಿ
ಅನುವಾದ- ಶಿವಸುಂದರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...