Homeಅಂಕಣಗಳು“ಯುವಜನರ ನಿಜವಾದ ನಾಯಕ “ಭಗತ್ ಸಿಂಗ್”

“ಯುವಜನರ ನಿಜವಾದ ನಾಯಕ “ಭಗತ್ ಸಿಂಗ್”

- Advertisement -
- Advertisement -

| ಸಂತೋಷ.ಎಚ್.ಎಂ, ಕನ್ನಡ ವಿ.ವಿ ಹಂಪಿ |

ದೇಶದ ಜನರ ವಿಮೋಚನೆಗಾಗಿ ನಗುನಗುತಲೇ ನೇಣುಗಂಬ ಏರಿದ ಧೀರೋದಾತ್ತ ನಾಯಕ, ದೇಶದ ಹಿತವೇ ತನ್ನ ಹಿತ, ಒಡೆದಾಳುವ ನೀತಿ, ಅಸಮಾನತೆ, ಸಾಮಜ್ಯವಾದವೇ ತನ್ನ ಪರಮ ಶತೃಗಳು ಎಂದು ಸಿಡಿಲಗುಂಡಿನಂತೆ ಮಿಂಚಿ ಮರೆಯಾದ ಭಗತ್‍ಸಿಂಗ್ ಅಕ್ಷರಶಃ ಯುವ ಸಮುದಾಯದ ದೃವತಾರೆ.

“ನನ್ನಲ್ಲೂ ಆಕಾಂಕ್ಷೆ, ಭರವಸೆ, ಬದುಕಿನ ಸೌಂದರ್ಯಗಳೆಲ್ಲ ತುಂಬಿದೆ ಎಂದು ಒತ್ತಿಹೇಳುತ್ತೇನೆ. ಆದರೆ ಅಗತ್ಯ ಬಿದ್ದಾಗ ಅದೆಲ್ಲವನ್ನೂ ತೊರೆಯಬಲ್ಲೆ. ಅದೇ ನಿಜವಾದ ತ್ಯಾಗ” “ನಾವು ಬದುಕನ್ನು ಪ್ರೀತಿಸುತ್ತೇವೆ, ಅದರ ಸೌಂದರ್ಯ ಕಾಪಾಡಲು ಹೋರಾಡುತ್ತೇವೆ’’ ಎನ್ನುವ ಮೂಲಕ ದೇಶದ ಯುವಜನರಿಗೆ ಅಗ್ರಪಂಕ್ತಿಯನ್ನು ಹಾಕಿಕೊಟ್ಟಿದ್ದಾರೆ. ಭಗತ್‍ಸಿಂಗ್ ಮತ್ತು ಸ್ನೇಹಿತರ ಸಮರಶೀಲ ಹೋರಾಟ ಎಂತವರಲ್ಲೂ ರೋಮಾಂಚನ ಉಂಟುಮಾಡುತ್ತದೆ. ಕೇವಲ 23 ವಯಸ್ಸಿನಲ್ಲೇ ಅದಮ್ಯ ಚೈತನ್ಯದೊಂದಿಗೆ ಇಡೀ ಸ್ವಾತಂತ್ರ್ಯ ಚಳವಳಿಗೆ ಹೊಸದಿಕ್ಕು ಕೊಡುವ ಮೂಲಕ ಭಾರತೀಯರ ಹೃದಗಳಲ್ಲಿ ಎಂದಿಗೂ ಅಳಿಸಲಾಗದ ಮುದ್ರೆಯನ್ನೊತ್ತಿದ್ದಾರೆ.

*ಭಗತ್‍ಸಿಂಗ್‍ರನ್ನು ಪ್ರಭಾವಿಸಿದ ಆ ಘಟನೆ:*

ಯಾರನ್ನಾದರೂ ವಿಚಾರಣೆಯಿಲ್ಲದೇ ಬಂಧಿಸುವ ಅಧಿಕಾರ ನೀಡಿದ ಬ್ರಿಟಿಷರ ರೌಲಟ್ ಕಾಯಿದೆಯನ್ನು ವಿರೋಧಿಸಿ 1919 ಏಪ್ರಿಲ್ 13ರಂದು ಪಂಜಾಬಿನ ಅಮೃತಸರದ ಉದ್ಯಾನದಲ್ಲಿ ಅಂದಾಜು 20 ಸಾವಿರಕ್ಕೂ ಹೆಚ್ಚು ಜನರು ಸೇರಿದ್ದರು. ಇದರಿಂದ ವಿಚಲಿತಗೊಂಡ ಬ್ರಿಗೇಡಿಯರ್ ಜನರಲ್ ರೇಜಿನಾಲ್ಡ್ ಡಯರ್ ತನ್ನ ಸೈನ್ಯವನ್ನು ಸುತ್ತುವರಿಸಿ ಯಾವುದೇ ಸೂಚನೆ ನೀಡದೇ ಗುಂಡಿನ ಮಳೆಗರಿಸಿದ. ಇದರಿಂದಾಗಿ ಮಾರಣಹೋಮವೇ ನಡೆಯಿತು. ಉದ್ಯಾನದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ರಕ್ತದ ಕೋಡಿಯೇ ಹರಿಯಿತು. ಈ ಸುದ್ದಿ ದೇಶಾದ್ಯಂತ ಕಾಡ್ಗಿಚ್ಚಿನಂತೆ ಹಬ್ಬಿ, ಅಲ್ಲೋಲ ಕಲ್ಲೋಲವನ್ನೇ ಸೃಷ್ಟಿಸಿತು.

ಈ ಘಟನೆಯಿಂದ ಬಾಲಕನೊಬ್ಬನಿಗೆ ಸಿಡಿಲಪ್ಪಳಿಸಿದ ಅನುಭವವಾಯಿತು. ಮಾರನೇ ದಿನವೇ ಆ ಬಾಲಕ ಶಾಲೆ ಮುಗಿದ ನಂತರ ಘಟನಾ ಸ್ಥಳಕ್ಕೆ ಹೋಗಿ, ದಿಟ್ಟತನ ಮೆರೆದು ಪ್ರಾಣಾರ್ಪಣೆಗೈದವರ ರಕ್ತದ ಕೋಡಿಯನ್ನು ಕಂಡು ಮಮ್ಮಲ ಮರಗಿದ. ಆ ಕ್ಷಣವೇ ಹೋರಾಟದ ಕಿಚ್ಚು ಆತನಲ್ಲಿ ಜಾಗೃತವಾಯಿತು. ಅಲ್ಲಿಗೆ ಸುಮ್ಮನಿರದ ಆ ಬಾಲಕ, ತಾನು ತಂದಿದ್ದ ಬುತ್ತಿಡಬ್ಬಿಯನ್ನು ತೆಗೆದು  ಹೋರಾಟಗಾರರ ರಕ್ತದಲ್ಲಿ ತೊಯ್ದ ಮಣ್ಣನ್ನು ಅದರಲ್ಲಿ ಸಂಗ್ರಹಿಸಿಟ್ಟುಕೊಂಡು ಮನೆ ಕಡೆ ಹೆಜ್ಜೆ ಇಟ್ಟ.

ಮನೆಯಲ್ಲಿ ಇಡೀ ಘಟನೆಯನ್ನು ತಿಳಿಸಿದ ಆತ ತಾನು ತಂದಿದ್ದ ಮಣ್ಣನ್ನು ತನ್ನ ತಾಯಿಗೆ ತೋರಿಸಿ “ನೋಡಿಲ್ಲಿ ಬ್ರಿಟೀಷರು ನಮ್ಮ ಜನರನ್ನು ಹತ್ಯೆಮಾಡಿದ ರಕ್ತಸಿಕ್ತ ಮಣ್ಣಿದು. ಇದಕ್ಕೆ ನಮಸ್ಕಾರ ಮಾಡು’’ ಎಂದು ಹೇಳುವ ಮೂಲಕ, ಅದನ್ನು ಒಂದೆಡೆಯಿಟ್ಟು ಪೂಜಿಸಿದ. ಈ ಘಟನೆ ಭಗತ್‍ಸಿಂಗ್‍ರನ್ನು ದೇಶದ ಸ್ವಾತಂತ್ರ್ಯಕ್ಕಾಗಿ ಕೊನೆವರೆಗೂ ಹೋರಾಟ ನಡೆಸಲು ಹುರಿಗೊಳಿಸಿತು.

*ಭಗತ್‍ಸಿಂಗ್‍ರ ಹಿನ್ನೆಲೆ*

ಭಗತ್‍ಸಿಂಗ್ ಸೆಪ್ಟೆಂಬರ್ 28, 1907ರಲ್ಲಿ ಕಿಷನ್‍ಸಿಂಗ್ ಮತ್ತು ವಿದ್ಯಾವತಿ ಕೌರ್ ದಂಪತಿಗಳ ಮಗನಾಗಿ ಜನಿಸಿದರು. ಅವರ ವ್ಯಕ್ತಿತ್ವ ರೂಪುಗೊಳ್ಳುವಲ್ಲಿ ಅವರ ಚಿಕ್ಕಪ್ಪನ ಮಾತುಗಳು ಸ್ಫೂತಿರ್ಯ ಸೆಲೆಯಾದವು. ಇದರಿಂದ ಭಗತ್‍ಸಿಂಗ್ ಚಿಕ್ಕವಯಸ್ಸಿನಲ್ಲೇ ಮಹಾತ್ಮಗಾಂಧೀಜಿಯವರ ಅಸಹಕಾರ ಚಳವಳಿಯಲ್ಲಿ ಭಾಗವಹಿಸಿ ಗಮನ ಸೆಳೆದರು. ತದನಂತರ ಸ್ಟಷ್ಟ ರಾಜಕೀಯ ಕಣ್ಣೋಟಕ್ಕಾಗಿ ಜಗತ್ತಿನಲ್ಲಿ ಘಟಿಸಿದ ಹಲವು ಕ್ರಾಂತಿಕಾರಿ ಹೋರಾಟಗಳ ಬಗ್ಗೆ ಓದಲು ಶುರುಮಾಡಿದರು. ಮಾರ್ಕ್ಸ್ ವಾದ, ಲೆನಿನ್ ಅವರ ಬರವಣಿಗೆ, ಕಮ್ಯುನಿಸ್ಟ್ ಚಳವಳಿಗಳು ಮತ್ತು ಅದರ ಜನವಿಮೋಚನೆಯ ಆಶಯಗಳು ಅವರನ್ನು ಬಹಳಷ್ಟು ಪ್ರಭಾವಗೊಳಿಸಿದವು.

ಸ್ವಾತಂತ್ರ್ಯಕ್ಕಾಗಿ ಚಳವಳಿಯನ್ನು ನಡೆಸಿ ಯುವಜನರ ಪ್ರೀತಿಗೆ ಪಾತ್ರರಾಗಿದ್ದ ಭಗತ್ ಸಿಂಗ್ ತನ್ನ 23ನೇ ವರ್ಷಕ್ಕೆ ದೇಶಕ್ಕಾಗಿ ಪ್ರಾಣಕೊಟ್ಟ ಮಹಾನ್ ಕ್ರಾಂತಿಕಾರಿ. ಇಂದಿಗೂ ಎಂದಿಗೂ ಯುವಜನರು ಮರೆಯಲಾಗದ ಚೈತನ್ಯ ಎಂದರೂ ತಪ್ಪಾಗಲಾರದು.

ಬ್ರಿಟಿಷರ ವಿರುದ್ಧ ಹೋರಾಟ ಹುರಿಗೊಳಿಸಿದ ಪರಿಣಾಮ ಭಗತ್‍ಸಿಂಗ್ ಮತ್ತು ಆತನ ಸ್ನೇಹಿತರು ಜೈಲಿನಲ್ಲಿ ಬಂಧಿಯಾಗುತ್ತಾರೆ. ಇದ್ಯಾವುದಕ್ಕೂ ಹೆದರದ ಅವರು ಮತ್ತಷ್ಟು ದಿಟ್ಟತನ ಪ್ರದರ್ಶಿಸುತ್ತಾರೆ. ಜೈಲಿನಲ್ಲಿದ್ದಾಗ ತಾಯಿಗೆ ಬರೆದ ಪತ್ರದಲ್ಲಿ ‘ ಅಮ್ಮಾ ನನ್ನ ದೇಶ ಒಂದಲ್ಲಾ ಒಂದು ದಿನ ಸ್ವಾತಂತ್ರ್ಯ ಪಡೆಯಲಿದೆ ಎಂಬ ಬಗ್ಗೆ ನನಗೆ ಸಂಶಯವೇ ಇಲ್ಲ. ಆದರೆ ಬಿಳಿಯ ಸಾಹೇಬರು ಖಾಲಿ ಮಾಡಿದ ಕುರ್ಚಿಯಲ್ಲಿ ಕಂದು ಸಾಹೇಬರು ಕುಳಿತುಕೊಳ್ಳುತ್ತಾರೆಂಬ’ ಆತಂಕವನ್ನು ವ್ಯಕ್ತಪಡಿಸುತ್ತಾರೆ. ಇದು ಅವರ ಸ್ಪಷ್ಟ ರಾಜಕೀಯ ತಿಳಿವಳಿಕೆ ಮತ್ತು ಸಮಾನತೆಯ ಆಶಯದ ಬಗ್ಗೆ ಇದ್ದ ಕಳಕಳಿಯ ಬಗ್ಗೆ ತೋರಿಸುತ್ತದೆ.

“ದೇಶದ ಇತಿಹಾಸದ ಸಂಕಷ್ಟಮಯ ಸನ್ನಿವೇಶದಲ್ಲಿ ಯುವಕರು ಒಂದು ಮಹಾನ್ ಜವಾಬ್ದಾರಿಯನ್ನು ಹೊರಬೇಕಾಗಿದೆ. ದೇಶದ ಮೂಲೆ ಮೂಲೆಗಳಿಗೆ ವಿದ್ಯಾರ್ಥಿಗಳು ಈ ಕ್ರಾಂತಿಕಾರಿ ಸಂದೇಶವನ್ನು ಕೊಂಡೊಯ್ಯಬೇಕು. ಕೈಗಾರಿಕಾ ಪ್ರದೇಶಗಳಲ್ಲಿರುವ ಕೋಟ್ಯಂತರ ಕೊಳಚೆ ಪ್ರದೇಶಗಳ ನಿವಾಸಿಗಳನ್ನು, ಮುರುಕು ಗುಡಿಸಲುಗಳಲ್ಲಿನ ಗ್ರಾಮೀಣ ಜನತೆಯನ್ನು ಅವರು ಬಡಿದೆಬ್ಬಿಸಬೇಕು. ಕೆಲವರು ಮನುಷ್ಯರು ಉಳಿದ ಜನಸಾಮಾನ್ಯರನ್ನು ಶೋಷಿಸುವಂಥ ಪರಿಸ್ಥಿತಿ ಅಸಾಧ್ಯವಾಗಬೇಕು’’ಎಂದು ಹೇಳುವ ಮೂಲಕ ಯುವಜನರನ್ನು ಎಚ್ಚರಿಸಿದ್ದಾರೆ.

ಬ್ರಿಟಿಷ್ ಸರಕಾರಕ್ಕೆ ಸಿಂಹಸ್ವಪ್ನವಾಗಿದ ಭಗತ್‍ಸಿಂಗ್‍ರನ್ನು ಹೇಗಾದರೂ ನಿವಾರಿಸಿಕೊಳ್ಳಲು, 1931ಮಾರ್ಚ್ 23ರಂದು ಭಗತ್ ಸಿಂಗ್, ರಾಜಗುರು, ಸುಖದೇವ್ ಈ ಮೂವರು ಹೋರಾಟಗಾರರನ್ನು ಗಲ್ಲಿಗೇರಿಸಲಾಯಿತು. ಭಗತ್‍ಸಿಂಗ್ ಅವರು ಒಂದು ಕಡೆ ಹೇಳಿದಂತೆ “ಅವರು ವ್ಯಕ್ತಿಗಳನ್ನು ಕೊಲ್ಲಬಹುದು ಅದರೆ ಅವರ ಆಲೋಚನೆಗಳನ್ನೂ ಕೊಲ್ಲಲು ಸಾಧ್ಯವಿಲ್ಲ” ಎನ್ನುವ ಹೇಳಿಕೆ ಇಂದಿಗೂ ನಿಜವಾಗಿದೆ. ಬ್ರಿಟಿಷರು ಭಗತ್‍ಸಿಂಗ್ ಅವರನ್ನು ಭೌತಿಕವಾಗಿ ಇಲ್ಲವಾಗಿಸಿದರು. ಆದರೆ ಅವರಿಂದ ಪ್ರೇರಣೆಗೊಂಡ ಯುವಕರು ಕೋಟ್ಯಂತರ.

ಅಂದು ಭಗತ್ ಸಿಂಗ್ ದೇಶಕ್ಕಾಗಿ ತನ್ನ ಪ್ರಾಣವನ್ನೇ ತ್ಯಾಗ ಮಾಡಿದರು ಅಂದೇ ಅಸಮಾನತೆ, ಸಾಮ್ರಾಜ್ಯಶಾಹಿ ನೀತಿ ವಿರುದ್ದ ಹೋರಾಡಿದರು. ಅದರೆ ಇಂದಿನ ಯುವಜನತೆ ಮತ್ತು ವಿದ್ಯಾರ್ಥಿಗಳು ದೇಶದಲ್ಲಿ ಅಗುತ್ತಿರುವ ಸಾಲು ಸಾಲು ಅತ್ಯಾಚಾರ. ಮಹಿಳೆಯರ ಮೇಲಿನ ದೌರ್ಜನ್ಯ, ಅಸಮಾನತೆ, ರೈತರ ಆತ್ಮಹತ್ಯೆ, ಅಲ್ಪಸಂಖ್ಯಾತರ ಮೇಲಿನ ದೌರ್ಜನ್ಯ ಮತ್ತು ಸಂವಿಧಾನದ ಮೇಲಿನ ನಿರಂತರ ದಾಳಿಗೆ ಪ್ರಬಲ ಧ್ವನಿ ಎತ್ತದಿರುವುದು ವಿಪರ್ಯಾಸವೇ ಸರಿ. ಬಡತನ, ನಿರುದ್ಯೋಗ, ಅನಾರೋಗ್ಯ, ಮೂಲ ಸೌಕರ್ಯ ಕೊರತೆ ಹೀಗೆ ಹತ್ತು ಹಲವು ಸಮಸ್ಯೆಗಳು ಇಡೀ ದೇಶವನ್ನು ಕಾಡುತ್ತಿರುವಾಗ ಯುವಜನತೆ ಸಂವಿಧಾನ ಮತ್ತು ಪ್ರಜಾಸತ್ತಾತ್ಮಕ ಆಶಯಗಳ ಉಳಿವಿಗಾಗಿ ಧ್ವನಿ ಎತ್ತಬೇಕಿದೆ. ಅಂದಾಗ ಮಾತ್ರ ಭಗತ್‍ಸಿಂಗ್ ಅವರಿಗೆ ನಾವು ನಿಜವಾದ ಗೌರವ ಕೊಟ್ಟಂತಾಗುತ್ತದೆ.

ಸಂತೋಷ.ಎಚ್.ಎಂ

ಕನ್ನಡ ವಿ.ವಿ ಹಂಪಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...