Homeಅಂಕಣಗಳುಯುವ ಮತದಾರರಿಗೆ ಒಂದು ಕಿವಿಮಾತು

ಯುವ ಮತದಾರರಿಗೆ ಒಂದು ಕಿವಿಮಾತು

- Advertisement -
* ಎಚ್.ಎಸ್.ದೊರೆಸ್ವಾಮಿ |
ಈಗ 18 ತುಂಬಿ ಹೊಸದಾಗಿ ಮತದಾನದ ಹಕ್ಕನ್ನು ಪಡೆದಿರುವ ಯುವಕ ಯುವತಿಯರಿಗೆ ನನ್ನ ಅಭಿನಂದನೆಗಳು.
ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆ ಇನ್ನೆರೆಡು ದಿನಗಳಲ್ಲಿ ನಡೆಯಲಿದೆ. ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಪಕ್ಷಗಳು ಪ್ರಧಾನವಾಗಿ ಈ ಚುನಾವಣೆಯಲ್ಲಿ ಭಾಗವಹಿಸುತ್ತಿವೆ. ನೀವು ಪತ್ರಿಕೆಗಳಲ್ಲಿ, ಟಿವಿಗಳಲ್ಲಿ ಇವರ ಪ್ರಚಾರದ ಅಬ್ಬರವನ್ನು ಒಂದೆರಡು ವಾರದಿಂದ ಕೇಳುತ್ತಾ ಬಂದಿದ್ದೀರಿ. ಈ ಅಬ್ಬರಕ್ಕೆ ಹೊಸದಾಗಿ ಮತದಾನ ಅರ್ಹತೆಯನ್ನು ಪಡೆದವರು ಗಾಬರಿಗೊಂಡಿರಬಹುದು, ಸಿಡಿಮಿಡಿಗೊಂಡಿರಬಹುದು.
ನೀವು ಗಮನಿಸಿರಬಹುದು, ಪ್ರಧಾನಮಂತ್ರಿ ಮೋದಿಯವರು, ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಎದುರಾಳಿಗಳಾದ ಕಾಂಗ್ರೆಸ್ಸಿನ ಸಿದ್ದರಾಮಯ್ಯ ಹಾಗೂ ಜಾತ್ಯತೀತ ಜನತಾದಳದ ದೇವೇಗೌಡರನ್ನು ವೈಯಕ್ತಿಕವಾಗಿ ಟೀಕೆ ಮಾಡುತ್ತಿರುವುದನ್ನು ನೀವು ಗಮನಿಸಿರಬಹುದು. ಬಿಜೆಪಿಯ ಈ ಇಬ್ಬರು ಮಹನೀಯರು ಇಷ್ಟು ಕೆಟ್ಟದಾಗಿ ಮಾತಾಡಿದಾಗ, ಎದುರಾಳಿಗಳೂ ಇದಕ್ಕೆ ಉತ್ತರ ನೀಡಬೇಕಾದ್ದು ಅನಿವಾರ್ಯವಾಗುತ್ತದೆ. ಹೀಗಾಗಿ ಇಡೀ ಚುನಾವಣೆಯ ಸಂದರ್ಭದಲ್ಲಿ ಈ ದಾಳಿ ಮತ್ತು ಪ್ರತಿದಾಳಿ ಮತದಾರರ ತಿರಸ್ಕಾರಕ್ಕೆ ಒಳಗಾಗಿದೆ.
ನೀವು ಹೊಸದಾಗಿ ಮತ ಹಾಕಲು ಬಂದವರು ಇದಕ್ಕೆಲ್ಲ ತಲೆಕೆಡಿಸಿಕೊಳ್ಳಬೇಡಿ. ಮೋದಿ ಕರ್ನಾಟಕವನ್ನು ಕಬ್ಜಾ ಮಾಡಲು, ಕಾಂಗ್ರೆಸ್ಸನ್ನು ನಾಮಾವಶೇಷ ಮಾಡಲು ಹೊರಟಿರುವುದಾಗಿ ಘೋಷಣೆ ಮಾಡಿದ್ದಾರೆ. ಆದರೆ ಈ ರೀತಿ ಮೂದಲಿಕೆ ಮಾಡುವ ಮೋದಿ ತನ್ನ ಈ 4 ವರ್ಷಗಳ ಆಡಳಿತದ ಅವಧಿಯಲ್ಲಿ ಏನು ಸಾಧಿಸಿದ್ದಾರೆ ಎಂಬುದನ್ನು ಹೊಸ ಮತದಾರರಾದ ನೀವು ಅರಿಯಬೇಕು. ಈಗಾಗಲೇ ಈ ವಿಷಯ ಕುರಿತು ಅನೇಕರು ಮಾತನಾಡಿದ್ದಾರೆ. ನೀವೂ ಗಮನಿಸಿರಬಹುದು. ಇದನ್ನು ಗಮನಿಸದವರ ಗಮನ ಸೆಳೆಯಲು ಮೋದಿಯವರ ವೈಫಲ್ಯದ ಪ್ರಮುಖ ಪ್ರಕರಣಗಳನ್ನು ನಿಮ್ಮ ಗಮನಕ್ಕೆ ತರ ಬಯಸುತ್ತೇನೆ.
1. ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ 100 ದಿನಗಳ ಒಳಗಾಗಿ ಸ್ವಿಸ್ ಬ್ಯಾಂಕ್‍ನಲ್ಲಿರುವ ಭಾರತೀಯರ ಎಲ್ಲಾ ಕಪ್ಪು ಹಣವನ್ನೂ ಒಳಗೊಂಡಂತೆ ಭಾರತದಲ್ಲೇ ಅಡಗಿಸಿಟ್ಟಿರುವ ಹಣವನ್ನೂ ಹೊರತೆಗೆಸಿ ಪ್ರತಿಯೊಬ್ಬರ ಖಾತೆಗೆ ತಲಾ 15 ಲಕ್ಷ ರೂಪಾಯಿ ಹಾಕುವುದಾಗಿ 2014ರ ಲೋಕಸಭೆಯ ಚುನಾವಣಾ ವೇಳೆಯಲ್ಲಿ ಮೋದಿಯವರು ಘೋಷಣೆ ಮಾಡಿದ್ದರು. ಆದರೆ ನಯಾ ಪೈಸೆಯೂ ಬರಲಿಲ್ಲ. ಜನರ ಖಾತೆಗಳಿಗೆ ತಲಾ 15 ಲಕ್ಷ ಹಾಕುವ ಬೊಗಳೆ ಮಾತು ಹುಸಿಯಾಯಿತು. ಇದರಿಂದ ಬಡಜನರಿಗೆ ನಿರಾಸೆಯೂ ಆಯಿತು.
2. ತಾವು ಅಧಿಕಾರಕ್ಕೆ ಬಂದನಂತರ ಪ್ರತಿ ವರ್ಷ 1 ಕೋಟಿ ಉದ್ಯೋಗ ಸೃಷ್ಟಿಸಿ, ನಿರುದ್ಯೋಗ ಸಮಸ್ಯೆ ಬಗೆಹರಿಸುವುದಾಗಿ ಬೂಸಿ ಬಿಟ್ಟರು. ಹೊಸ ಉದ್ಯೋಗ ಸೃಷ್ಟಿ ಮಾಡುವುದಿರಲಿ, ಕೇಂದ್ರ ಸರ್ಕಾರದ ವಿವಿಧ ಇಲಾಖೆಗಳಲ್ಲಿ ಅಪಾರ ಸಂಖ್ಯೆಯಲ್ಲಿ ಹುದ್ದೆಗಳು ಖಾಲಿಯಿದ್ದು ಅವುಗಳನ್ನೆಲ್ಲ ಭರ್ತಿ ಮಾಡುವ ಮೂಲಕ ಲಕ್ಷಾಂತರ ವಿದ್ಯಾವಂತರಿಗೆ ಉದ್ಯೋಗ ಒದಗಿಸಬಹುದಾಗಿತ್ತು. ಭಾರತ ಸರ್ಕಾರ ನೀಡಿರುವ ಅಂಕಿಅಂಶಗಳ ಪ್ರಕಾರ. ಕೇಂದ್ರ ಸಚಿವಾಲಯದಲ್ಲೇ 60,235 ಹುದ್ದೆಗಳು ಖಾಲಿಯಿವೆ. ರೈಲ್ವೆ ಇಲಾಖೆಯಲ್ಲಿ 2.35 ಲಕ್ಷ ಹುದ್ದೆಗಳಿವೆ. ಸಶಸ್ತ್ರ ಪೊಲೀಸ್ ಪಡೆಯಲ್ಲಿ 65,709 ಹುದ್ದೆಗಳು ಖಾಲಿಯಿವೆ. ಸರ್ಕಾರಿ ಹುದ್ದೆಗಳನ್ನು ಭರ್ತಿ ಮಾಡಿ ನಿರುದ್ಯೋಗ ಸಮಸ್ಯೆ ಬಗೆಹರಿಸುವ ಕೆಲಸವಂತೂ ಮಾಡುತ್ತಿಲ್ಲ. ಬದಲಿಗೆ ಶ್ರೀಮಂತ ಉದ್ದಿಮೆಪತಿಗಳ ಪರವಾಗಿ hiಡಿe ಚಿಟಿಜ ಜಿiಡಿe ನೀತಿಯನ್ನು ಜಾರಿಗೆ ತಂದು, ಕಾಯಂ ಉದ್ಯೋಗಗಳೇ ಇಲ್ಲದಂತೆ ಮಾಡಲು ಹೊರಟಿದ್ದಾರೆ.
3. 500 ಮತ್ತು 1000 ರೂಪಾಯಿ ನೋಟುಗಳನ್ನು ಅನಾಣ್ಯೀಕರಣ ಮಾಡಿದ ಮೋದಿಯವರು ಈ ಮೂಲಕ ಕಪ್ಪುಹಣವನ್ನು ನಿರ್ನಾಮ ಮಾಡುತ್ತೇವೆಂದು ಘೋಷಿಸಿದರು. ಆದರೆ ವಾಸ್ತವದಲ್ಲಿ ಏನಾಯಿತು? ತಮಗೆ ಬೇಕಾದ ಕಪ್ಪುಹಣದ ಕುಳಗಳು ಬ್ಯಾಂಕುಗಳನ್ನು ದುರ್ಬಳಕೆ ಮಾಡಿಕೊಂಡು ಕೋಟ್ಯಾಂತರ ರೂಪಾಯಿಗಳ ಕಪ್ಪು ಹಣವನ್ನು ಸಕ್ರಮ ಮಾಡಿಕೊಳ್ಳಲು ಅವಕಾಶ ಮಾಡಿಕೊಟ್ಟರು. ಈ ನೋಟುಗಳ ಅಪಮೌಲ್ಯೀಕರಣದಿಂದ ತೊಂದರೆಗೆ ಒಳಗಾದವರು ಶ್ರೀಮಂತರಲ್ಲ, ಕಾಳಧನ ಇಟ್ಟುಕೊಂಡವರಲ್ಲ; ಜನಸಾಮಾನ್ಯರು, ಮಧ್ಯಮವರ್ಗದವರು ಮತ್ತು ಸಣ್ಣ ವ್ಯಾಪಾರಿಗಳು. ಈ ದಿಢೀರ್ ಹೊಡೆತದಿಂದಾಗಿ ನೂರಕ್ಕೂ ಹೆಚ್ಚು ಮಂದಿ ಪ್ರಾಣ ಕಳೆದುಕೊಂಡರು. ಕೈಲಿದ್ದ ನೋಟುಗಳಿಗೆ ಬೆಲೆಯಿಲ್ಲದೆ, ಹೊಸದಾಗಿ ಪ್ರಿಂಟಾದ 500 ಮತ್ತು 2000 ನೋಟುಗಳು ಕೈಗೆ ಸಿಗದೆ ಅನೇಕ ಸಣ್ಣಪುಟ್ಟ ವ್ಯಾಪಾರಿಗಳು ಬೀದಿ ಪಾಲಾದರು. ದಿನನಿತ್ಯ ಕೂಲಿ ಮಾಡಿ ಹೊಟ್ಟೆತುಂಬಿಸಿಕೊಳ್ಳುತ್ತಿದ್ದ ಕೂಲಿಕಾರ್ಮಿಕರಿಗೆ ಕೆಲಸ ಸಿಗದೆ ಕಂಗಾಲಾದರು. ಇಷ್ಟೆಲ್ಲಾ ಅನಾಹುತಗಳಾಗಿ ಕಪ್ಪು ಹಣ ವಾಪಸ್ ಬಂತೇ ಎಂದರೆ ಅದೂ ಇಲ್ಲ. ಎಷ್ಟು ನೋಟುಗಳು ಬ್ಯಾಂಕಿಗೆ ಜಮೆಯಾಗಿದೆಯೆಂಬ ಲೆಕ್ಕವನ್ನೇ ರಿಸರ್ವ್ ಬ್ಯಾಂಕ್ ಇನ್ನೂ ಕೊಟ್ಟಿಲ್ಲ.
4. ಬಿಜೆಪಿ ಪಕ್ಷ ಮತ್ತು ಅದಕ್ಕೆ ಸಂಬಂಧಿತ ಸಂಘಟನೆಗಳು ಸಂಸ್ಕøತಿ ರಕ್ಷಕರ ಹೆಸರಿನಲ್ಲಿ ಯುವಕ-ಯುವತಿಯರ ಮೇಲೆ ಹಲ್ಲೆ ಮಾಡುತ್ತಿರುವ ದಾರುಣ ಘಟನೆಗಳು ದೇಶಾದ್ಯಂತ ನಡೆಯುತ್ತಿವೆ. ಈ ಸಂಘಟನೆಗಳು ಸಕ್ರಿಯವಾಗಿರುವ ಕಡೆಗಳಲ್ಲಿ ಕಾಲೇಜು ವಿದ್ಯಾರ್ಥಿ-ವಿದ್ಯಾರ್ಥಿನಿಯರು ತಮ್ಮ ಸಹಪಾಠಿಗಳ ಜೊತೆ ಮಾತಾಡಲಿಕ್ಕೂ ಭಯ ಬೀಳಬೇಕಾದ ವಾತಾವರಣ ಸೃಷ್ಟಿಯಾಗಿದೆ.
5. ನಮ್ಮ ಬ್ಯಾಂಕುಗಳ ಲಕ್ಷಾಂತರ ಕೋಟಿ ಹಣವನ್ನು ತಮ್ಮ ನೆಚ್ಚಿನ ಉದ್ಯಮಿಗಳ ಒಡಲಿಗೆ ಹಾಕಿ, ಅವರು ಅಸಲು ಬಡ್ಡಿ ಯಾವುದೂ ಕಟ್ಟದೆ ನಮ್ಮ ಬ್ಯಾಂಕುಗಳಿಗೆ ಪಂಗನಾಮ ಹಾಕಿ ಓಡಿಹೋಗಿದ್ದಾರೆ. ವಿಜಯ ಮಲ್ಯ, ಲಲಿತ್ ಮೋದಿ, ನೀರವ್ ಮೋದಿ, ಮೆಹುಲ್ ಚೋಕ್ಸಿ, ಜತಿನ್ ಮೆಹ್ತಾ ಮುಂತಾದ ಖದೀಮರು ದೇಶ ಬಿಟ್ಟು ವಿದೇಶಕ್ಕೆ ಹಾರಿಹೋಗಲು ಅವಕಾಶ ಮಾಡಿಕೊಟ್ಟು ನಂತರ ನೋಟಿಸ್ ಕೊಡುವ, ಕೇಸು ಹಾಕುವ ನಾಟಕವಾಡುತ್ತಿರುವುದು ನಮ್ಮ ಕಣ್ಣೆದುರಿಗಿದೆ.
6. ಅತ್ಯಾಚಾರ, ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ತಡೆಗಟ್ಟುತ್ತೇವೆಂದು ಉದ್ದುದ್ದ ಭಾಷಣ ಮಾಡಿ ಅಧಿಕಾರಕ್ಕೆ ಬಂದ ಈ ಪಕ್ಷದ ಶಾಸಕರು, ಸಚಿವರು ಹಾಗೂ ಕಾರ್ಯಕರ್ತರು ವಿವಿಧ ರಾಜ್ಯಗಳಲ್ಲಿ ಹೆಣ್ಣುಮಕ್ಕಳ ಪಾಲಿಗೆ ಕಂಟಕಪ್ರಾಯರಾಗಿದ್ದಾರೆ. ಅತ್ಯಾಚಾರದ ಆರೋಪದಲ್ಲಿ, ಇತರೆ ಕ್ರಿಮಿನಲ್ ಕೇಸುಗಳಲ್ಲಿ ಜೈಲು ಸೇರಿದವರಲ್ಲಿ ಹೆಚ್ಚಿನವರು ಮೋದಿಯ ಪಕ್ಷದವರೇ.
ವಾಸ್ತವ ಸತ್ಯಗಳು ಹೀಗಿವೆ. ಮೋದಿಯವರು ತಮ್ಮ ಎಲೆಯಲ್ಲಿ ಕತ್ತೆ ಸತ್ತು ಬಿದ್ದಿರುವುದನ್ನು ಮರೆಮಾಚಿ, ಬೇರೆಯವರ ಎಲೆಯಲ್ಲಿ ನೊಣ ಸತ್ತು ಬಿದ್ದಿರುವುದನ್ನು ದೊಡ್ಡದು ಮಾಡಿ ಕೂಗು ಹಾಕುತ್ತಿದ್ದಾರೆ. ತಮ್ಮ ವಾಕ್ಚಾತುರ್ಯದಿಂದ ದೇಶವನ್ನು ಮರುಳು ಮಾಡಿಬಿಡಬಹುದು ಎಂದುಕೊಂಡಿದ್ದಾರೆ. ಇದನ್ನು ಹೊಸ ಮತದಾರರಾದ ಯುವಕ ಯುವತಿಯರು ಗಮನಿಸಬೇಕು. ಮೋದಿ ಮತ್ತು ಅಮಿತ್ ಶಾ ಅವರ ಪೊಳ್ಳು ಆರ್ಭಟಕ್ಕೆ ಸೊಪ್ಪು ಹಾಕಬೇಡಿ.
ಭಾರತ ದೇಶದಲ್ಲಿ ಸಾವಿರಾರು ವರ್ಷಗಳಿಂದ ಕ್ರಿಶ್ಚಿಯನ್ನರು, ಮುಸ್ಲಿಮರು, ಸಿಖ್ಖರು, ಪಾರ್ಸಿಗಳು ನೆಲೆಸಿದ್ದಾರೆ. ನಮ್ಮ ಈ ಎಲ್ಲ ಪೂರ್ವಿಕರು ದೇಶ ನಿರ್ಮಾಣ ಕಾರ್ಯದಲ್ಲಿ ಕೈಜೋಡಿಸಿದ್ದಾರೆ. ಆದರೆ ಇತ್ತೀಚಿನ ವರ್ಷಗಳಲ್ಲಿ ಆರೆಸ್ಸೆಸ್, ವಿಶ್ವಹಿಂದೂ ಪರಿಷತ್, ಭಜರಂಗದಳ ಮುಂತಾದ ಹಿಂದೂತ್ವ ಮತಾಂಧ ಸಂಸ್ಥೆಗಳು ಎಲ್ಲೆಡೆ ವಿಜೃಂಭಿಸುತ್ತಿದ್ದು, ತಮ್ಮ ಮತೀಯವಾದಿ agendaಗಳಿಗೆ ಪೂರಕವಾಗಿ ಸಂವಿಧಾನವನ್ನು ತಿದ್ದಬೇಕೆಂದು ಬೊಬ್ಬೆ ಎಬ್ಬಿಸಿದ್ದಾರೆ. ಇದೇನಾದರು ಕಾರ್ಯಗತವಾದರೆ, ಭಾರತದಲ್ಲಿ ಶಾಂತಿ, ಸೌಹಾರ್ದತೆ, ಭ್ರಾತೃತ್ವ ಯಾವುದೂ ಉಳಿಯುವ ಸಂಭವವಿಲ್ಲ. ಭಾರತ ದೇಶ ಆಫ್ಘಾನಿಸ್ತಾನದಂತೆ ಈ ಹಿಂದೂ ತಾಲಿಬಾನಿಗಳ ತಾಣವಾಗಲಿದೆ.
ನಿಮ್ಮಲ್ಲಿ ನನ್ನ ವಿನಂತಿ ಇಷ್ಟೆ. ಬಿಜೆಪಿಯ ನಿಜವಾದ hidden agendaವನ್ನು ಅಧ್ಯಯನ ಮಾಡಿ. ಪ್ರಜಾಪ್ರಭುತ್ವವನ್ನು ಮತ್ತು ಸಂವಿಧಾನವನ್ನು ಭಾರತೀಯ ಜನತಾ ಪಕ್ಷದ ಹೆಸರಿನಲ್ಲಿ ಮೋದಿ ಧೂಳೀಪಟ ಮಾಡಲು ಬಿಡಬೇಡಿ. ಈ ಬಾರಿಯ ವಿಧಾನಸಭಾ ಚುನಾವಣೆ ಮೋದಿ ವರ್ಸಸ್ ಕರ್ನಾಟಕದ ಮಧ್ಯೆ ನಡೆಯುತ್ತಿದೆ. ನಿಮ್ಮ ಮತವನ್ನು ವಿವೇಕದಿಂದ ಚಲಾಯಿಸಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

ಬಳ್ಳಾರಿ ಜಿಲ್ಲೆಯ ಬಂಡಿಹಟ್ಟಿ-ದಾನಪ್ಪ ಬೀದಿಯ ಬಡರೈತರ ಮೇಲೆ ದೌರ್ಜನ್ಯ ಎಸಗುತ್ತಿರುವ ಎನ್‌.ಪ್ರತಾಪ ರೆಡ್ಡಿ ವಿರುದ್ಧ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು 'ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ' ಮುಖಂಡರು ಆಗ್ರಹಿಸಿದರು....

ರೋಹಿತ್ ವೇಮುಲಾ 10ನೇ ಶಹಾದತ್ ದಿನ: ಜ.17ರಂದು ಹೈದರಾಬಾದ್ ವಿವಿಯಲ್ಲಿ ರೋಹಿತ್ ಕಾಯ್ದೆಯ ‘ಜನತಾ ಕರಡು’ ಅನಾವರಣ

ಹೈದರಾಬಾದ್ ಕೇಂದ್ರ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ವಾಂಸ ಮತ್ತು ಅಂಬೇಡ್ಕರ್ ವಿದ್ಯಾರ್ಥಿ ಸಂಘದ (ASA) ನಾಯಕ ರೋಹಿತ್ ವೇಮುಲ ಅವರ ಮರಣದ ಹತ್ತು ವರ್ಷಗಳ ನಂತರ, ವಿದ್ಯಾರ್ಥಿ ಗುಂಪುಗಳು ಮತ್ತು ಸಾಮಾಜಿಕ ನ್ಯಾಯ...

ಮಹಾರಾಷ್ಟ್ರವು ಪ್ರಧಾನಿ ಮೋದಿಯನ್ನು ಹೆಚ್ಚು ಅವಲಂಬಿಸಿದೆ: ಸಿಎಂ ಫಡ್ನವೀಸ್

ನಗರ ಪಾಲಿಕೆ ಚುನಾವಣೆಯಲ್ಲಿ ಮಹಾಯುತಿ ಭರ್ಜರಿ ಜಯ ಸಾಧಿಸಿದ ನಂತರ ಮಹಾರಾಷ್ಟ್ರದ ಜನರಿಗೆ ಧನ್ಯವಾದ ಅರ್ಪಿಸಿದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್, ವಿಜಯವನ್ನು ಭಾರತೀಯ ಜನತಾ ಪಕ್ಷದ (ಬಿಜೆಪಿ) ಕಾರ್ಯಕರ್ತರಿಗೆ ಅರ್ಪಿಸಿದರು. ರಾಜ್ಯವು ಪ್ರಧಾನಿ...

ಮೆಹುಲ್ ಚೋಕ್ಸಿ ಪುತ್ರ ಕೂಡ ಹಣ ವರ್ಗಾವಣೆಯಲ್ಲಿ ಭಾಗಿಯಾಗಿದ್ದಾರೆ: ಜಾರಿ ನಿರ್ದೇಶನಾಲಯ

ಪರಾರಿಯಾಗಿರುವ ಉದ್ಯಮಿ ಮೆಹುಲ್ ಚೋಕ್ಸಿ ವಿರುದ್ಧದ ಹಣ ವರ್ಗಾವಣೆ ಪ್ರಕರಣದಲ್ಲಿ, ಅವರ ಮಗ ರೋಹನ್ ಚೋಕ್ಸಿ ಕೂಡ ಈ ಅಪರಾಧದಲ್ಲಿ ಸಕ್ರಿಯವಾಗಿ ಭಾಗಿಯಾಗಿದ್ದಾರೆ ಎಂದು ಜಾರಿ ನಿರ್ದೇಶನಾಲಯ (ಇಡಿ) ಮೊದಲ ಬಾರಿಗೆ ಹೇಳಿಕೊಂಡಿದೆ....

‘ವೋಟ್ ಚೋರಿ ಒಂದು ರಾಷ್ಟ್ರವಿರೋಧಿ ಕೃತ್ಯ..’; ಬಿಎಂಸಿ ಫಲಿತಾಂಶದ ಬಗ್ಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಹಾರಾಷ್ಟ್ರ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಚುನಾವಣೆಯಲ್ಲಿ ಎಣಿಕೆ ವೇಗ ಪಡೆಯುತ್ತಿದ್ದಂತೆ, ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಚುನಾವಣಾ ಆಯೋಗವನ್ನು ಗುರಿಯಾಗಿಸಿಕೊಂಡು ತಮ್ಮ ಮೊದಲ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ....

ಪುನರಾಭಿವೃದ್ಧಿ ಹೆಸರಿನಲ್ಲಿ ಮಣಿಕರ್ಣಿಕಾ ಘಾಟ್ ಬಳಿ ದೇಗುಲಗಳ ಧ್ವಂಸ: ಮೋದಿ ವಿರುದ್ಧ ಖರ್ಗೆ ಆಕ್ರೋಶ!

ನವದೆಹಲಿ: ವಾರಣಾಸಿಯ ಮಣಿಕರ್ಣಿಕಾ ಘಾಟ್‌ನಲ್ಲಿ ಪುನರಾಭಿವೃದ್ಧಿ ಕಾರ್ಯದ ಭಾಗವಾಗಿ ಬುಲ್ಡೋಜರ್‌ಗಳನ್ನು ಏಕೆ ಓಡಿಸಲಾಗುತ್ತಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಗುರುವಾರ ಪ್ರಧಾನಿಯವರನ್ನು ಪ್ರಶ್ನಿಸಿದ್ದಾರೆ. ಮತ್ತು ಐತಿಹಾಸಿಕ ಪರಂಪರೆಯ ಅನೇಕ ಸ್ಥಳಗಳನ್ನು ಈ...

ಒಡಿಶಾ| ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ನಕಲಿ ಗೋರಕ್ಷಕರು; ಐವರ ಬಂಧನ

ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಬುಧವಾರ (ಜ.14) ನಕಲಿ ಗೋರಕ್ಷಕರು 35 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಜಾನುವಾರುಗಳನ್ನು ಹೊತ್ತ ವ್ಯಾನ್ ನಿಲ್ಲಿಸಿ ಪ್ರಾಣಿಗಳ ಸಾಗಣೆ ಆರೋಪದ ಮೇಲೆ ಹಲ್ಲೆ ನಡೆಸಿ ಕೊಂದಿದ್ದಾರೆ. ಜಿಲ್ಲಾ ಆಸ್ಪತ್ರೆಗೆ...

ರಾಜಸ್ಥಾನ: ಬಿಜೆಪಿ ಅತಿ ಕಡಿಮೆ ಅಂತರದಿಂದ ಗೆದ್ದ ಸ್ಥಾನದಲ್ಲಿ ಮುಸ್ಲಿಂ ಮತಗಳನ್ನು ಅಳಿಸುವಂತೆ ಒತ್ತಡ: ಆತ್ಮಹತ್ಯೆ ಬೆದರಿಕೆ ಹಾಕಿದ ಬಿಎಲ್ಒ

ಜೈಪುರದ ಹವಾ ಮಹಲ್ ವಿಧಾನಸಭಾ ಕ್ಷೇತ್ರದ ಬೂತ್ ಮಟ್ಟದ ಅಧಿಕಾರಿಯೊಬ್ಬರು ( ಬಿಎಲ್‌ಒ ) ನೂರಾರು ಮತದಾರರನ್ನು, ಅವರಲ್ಲಿ ಹೆಚ್ಚಿನವರು ಮುಸ್ಲಿಮರನ್ನು ಮತದಾರರ ಪಟ್ಟಿಯಿಂದ ಅಳಿಸಲು ಒತ್ತಡ ಹೇರಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ಈ...

ಇಡಿ ಕಚೇರಿ ಮೇಲೆ ರಾಜ್ಯ ಪೊಲೀಸರಿಂದ ಪೂರ್ವಯೋಜಿತ ದಾಳಿ: ಜಾರ್ಖಂಡ್ ಹೈಕೋರ್ಟ್

ಜನವರಿ 16 ರಂದು ಜಾರಿ ನಿರ್ದೇಶನಾಲಯ (ಇಡಿ) ಕಚೇರಿಯ ಮೇಲೆ ಇತ್ತೀಚೆಗೆ ನಡೆದ ಪೊಲೀಸ್ ದಾಳಿಯು ಪ್ರಾಥಮಿಕವಾಗಿ ಪೂರ್ವಯೋಜಿತ ಎಂದು ಕಾಣುತ್ತಿದೆ ಎಂದು ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಹೇಳಿದೆ. ಇಡಿ ಸಲ್ಲಿಸಿದ ರಿಟ್ ಅರ್ಜಿಯನ್ನು...

ಮಹಾರಾಷ್ಟ್ರ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕರ್ನಾಟಕದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಆರೋಪಿ ಗೆಲುವು

ಕರ್ನಾಟಕದ ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್, ಮಹಾರಾಷ್ಟ್ರದ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆಲುವು ಸಾಧಿಸಿದ್ದಾರೆ. ಪಂಗಾರ್ಕರ್ ವಾರ್ಡ್ 13 ರಿಂದ ಕಣದಲ್ಲಿದ್ದರು. ಅವರ...