Homeಅಂಕಣಗಳುಯೆಮೆನ್ ಜಗತ್ತಿನ ಅತಿದೊಡ್ಡ ಮಾನವ ಬಿಕ್ಕಟ್ಟು

ಯೆಮೆನ್ ಜಗತ್ತಿನ ಅತಿದೊಡ್ಡ ಮಾನವ ಬಿಕ್ಕಟ್ಟು

- Advertisement -
- Advertisement -

ಹಳೆಯ ಕನ್ನಡ ಪೌರಾಣಿಕ ಸಿನಿಮಾಗಳಲ್ಲಿ ಕೇಡಿಗಳ ಪಾತ್ರ ಮಾಡಿದವರು ತಮ್ಮ ಶತ್ರುಗಳನ್ನು ಮತ್ತು ಎದುರಾಳಿಗಳನ್ನು ಆಕಾಶಕಾಯಗಳ ಮೂಲಕ ನಾಶ ಮಾಡುವುದನ್ನು ನೋಡುತ್ತಿದ್ದೆವು. 2017ರ ಮೇ ತಿಂಗಳಿನಲ್ಲಿ ಅಮೆರಿಕದ ಅಧ್ಯಕ್ಷ ಮತ್ತು ಥಿಯೇಟ್ರಿಕ್ಸ್‍ನ ದೊಡ್ಡ ಅಭಿಮಾನಿ ಡೊನಾಲ್ಡ್‍ಟ್ರಂಪ್ ಅವರು ಸೌದಿಯದೊರೆ ಸಲ್ಮಾನ್ ಬಿನ್ ಅಬ್ದುಲಜೀಜ್ ಹಾಗೂ ಈಜಿಪ್ಟಿನ ಅಧ್ಯಕ್ಷ ಅಬ್ದುಲ್ ಫತೇಹ್ ಅಲ್-ಸಿಸಿಯ ಆಕಾಶಕಾಯದ ಮೇಲೆ ಕೈ ಹಿಡಿದುಕೊಂಡು ರಿಯಾದ್‍ನ ಮಹತ್ವಾಕಾಂಕ್ಷೆಯ ತೀವ್ರವಾದಿ ಸಿದ್ಧಾಂತದ ವಿರುದ್ಧ ಹೋರಾಡುವ ಗ್ಲೋಬಲ್ ಸೆಂಟರ್ ಒಂದಕ್ಕೆ ಚಾಲನೆ ನೀಡಿದರು. ಅದು ದುಖಾಂತ್ಯ ಕಾಣದಿದ್ದರೆ ಬಹಳ ತಮಾಷೆಯಾಗಿರುತ್ತಿತ್ತು. ಅವರ ತಥಾಕಥಿತ ಭಯೋತ್ಪಾದನಾ ಮಧ್ಯಪ್ರವೇಶ ಎಂಬುದು ಇಂದು ಪ್ರಪಂಚದ ಇತಿಹಾಸದಲ್ಲೇ ಅತಿದೊಡ್ಡ ಮನುಷ್ಯ ನಿರ್ಮಿತ ಬಿಕ್ಕಟ್ಟನ್ನು ಸೃಷ್ಟಿಸಿದೆ. ಸೌದಿ ಅರೇಬಿಯಾದ ದಕ್ಷಿಣಕ್ಕಿರುವ ಯೆಮೆನ್ ಮಧ್ಯಪ್ರಾಚ್ಯದಲ್ಲೇ ಅತ್ಯಂತ ಬಡದೇಶ. 2015ರಲ್ಲಿ ಶುರುವಾದ ಈಗಿನ ಸಂಘರ್ಷಕ್ಕೆ ಮುನ್ನ ಅಲ್ಲಿನ ಜನಸಂಖ್ಯೆ 2.8 ಕೋಟಿಯಿತ್ತು. ಯೆಮೆನ್‍ನೊಂದಿಗೆ ಗಡಿ ಹಂಚಿಕೊಳ್ಳು ಸೌದಿ ಅರೇಬಿಯಾ ಮಧ್ಯಪ್ರಾಚ್ಯದ ಅತ್ಯಂತ ಶ್ರೀಮಂತ ದೇಶ. ಇಂದುಯೆಮೆನ್‍ನಲ್ಲಿರುವ ಬಿಕ್ಕಟ್ಟನ್ನು ಹೆಚ್ಚಿಸಿದ್ದು ಅಲ್ಲಿನ ವರ್ಷಾನುಗಟ್ಟಲೆಯ ನಿರುದ್ಯೋಗ, ಬಡತನ, ಬೆಲೆಯೇರಿಕೆ ಹಾಗೂ ಮುಸ್ಲಿಮರ ಭಿನ್ನ ಪಂಗಡಗಳ ನಡುವಿನ ತಾರತಮ್ಯಗಳು. ಶಿಯಾ ಹೌತಿಸ್ ಎಂದು ಕರೆಯಲಾಗುವ ಗುಂಪು ಚಾರಿತ್ರಿಕ ತಾರತಮ್ಯಕ್ಕೆ ಒಳಗಾಗಿದ್ದು ಸರ್ಕಾರದ ವಿರುದ್ಧ ಬಂಡಾಯ ಹೂಡಿದೆ. 2004ರಲ್ಲಿ ಈ ಪಂಗಡವು ತನ್ನ ನ್ಯಾಯಬದ್ಧಅಧಿಕಾರ ಹಂಚಿಕೆಗಾಗಿ ಸರಣಿ ಬಂಡಾಯಗಳನ್ನು ನಡೆಸಿತು. 2011ರಲ್ಲಿ ಅರಬ್‍ದಂಗೆಯ ತರುವಾಯ ಅಧ್ಯಕ್ಷ ಸಾಲೆಹ್ ಪದಚ್ಯುತನಾಗಿ 2012ರಲ್ಲಿ ಪ್ರಬಲ ಸೌದಿ ಅರೇಬಿಯಾ ಹಾಗೂ ಗಲ್ಫ್ ದೇಶಗಳ ಮೇಲ್ವಿಚಾರಣೆಯಲ್ಲಿ ಅಬ್ದ್-ರಬ್ಬು ಮನ್ಸೂರ್ ಹೌದಿ ನೇತೃತ್ವದ ಮಧ್ಯಂತರ ಸರ್ಕಾರ ರಚನೆಯಾಯಿತು. ಹೌತಿಸ್ ಬಣವು ಈ ಮಧ್ಯಂತರ ಸರ್ಕಾರವನ್ನು ನಿರಾಕರಿಸಿ ರಾಜಧಾನಿ ಸನಾ ನಗರಕ್ಕೆ ಮುತ್ತಿಗೆ ನಡೆಸಿ 2014ರ ಸೆಪ್ಟೆಂಬರ್‍ನಲ್ಲಿ ರಾಜಧಾನಿಯನ್ನು ವಶಕ್ಕೆ ಪಡೆದುಕೊಂಡಿತು. ಅಧ್ಯಕ್ಷ ಹೌದಿ ಸನಾದಿಂದ ಸುನ್ನಿಗಳ ಬಾಹುಳ್ಯದ ಅಡೆನ್ ನಗರಕ್ಕೆ ಪರಾರಿಯಾದರು. ಪರಿಸ್ಥಿತಿ ಇನ್ನೂ ವಿಕೋಪಕ್ಕೆ ಹೋಗುತ್ತಿದ್ದಂತೆ ಅವರು ಯೆಮೆನ್‍ನಿಂದಲೇ ಓಡಿ ಹೋದರು. ಅಂದಿನಿಂದಲೂ ಸೌದಿ ಅರೇಬಿಯಾ ನೇತೃತ್ವದ ಮೈತ್ರಿಕೂಟವು ನಿರಂತರವಾಗಿ ಹಿಂಸಾಚಾರದಲ್ಲಿ ತೊಡಗಿದೆ.
ಮೂರು ವರ್ಷಗಳ ಆಂತರಿಕ ಯುದ್ಧದ ನಂತರದಲ್ಲಿ ಯೆಮೆನ್ ಜನರು ದೊಡ್ಡ ಮಾನವ ಬಿಕ್ಕಟ್ಟನ್ನೆದುರಿಸುತ್ತಿದ್ದಾರೆ. ದೇಶದ 50 ಲಕ್ಷ ಮಕ್ಕಳು ಹಸಿವಿನ ದವಡೆಯಲ್ಲಿ ಸಿಲುಕಿದ್ದಾರೆ. ದೇಶದ ಪ್ರಮುಖ ಮೂಲಸೌಕರ್ಯ ವ್ಯವಸ್ಥೆ ಬಹುತೇಕ ನಾಶವಾಗಿದೆ. ದೇಶದ ಸಂಸ್ಕøತಿ ಪಾರಂಪರೆಯ ಗುರುತುಗಳೆಲ್ಲವೂ ಧ್ವಂಸಗೊಂಡಿವೆ. ಜಗತ್ತಿನ ಅತ್ಯಂತ ಹಳೆಯ ನಗರಗಳಲ್ಲಿ ಒಂದಾದ ಈಗಿನ ಯೆಮೆನ್ ರಾಜಧಾನಿ ಸನಾ ಮತ್ತು ಸದಾ ನಗರಗಳೂ ಇದರಲ್ಲಿ ಸೇರಿವೆ. ಯೆಮೆನ್‍ನ ನಾಗರಿಕ ಯುದ್ಧದ ಸೌದಿ ಮತ್ತು ಇರಾನ್‍ಗಳ ನಡುವಿನ ಬದಲಿ ಯುದ್ಧದಂತೆ (ಪ್ರಾಕ್ಸಿ ವಾರ್) ತೋರಿದರೂ ನಿಜವಾದ ಕಾರಣ ಬಹಳ ಸಂಕೀರ್ಣವಾಗಿದೆ. ಎರಡೂ ಕಡೆಯಿಂದ ಪರಸ್ಪರ ನಿಂದನೆಗಳು ನಡೆದು ಇಬ್ಬರೂ ಅಪರಾಧಿ ಸ್ಥಾನದಲ್ಲಿ ನಿಂತಿದ್ದರೂ ಈ ಯುದ್ಧಕ್ಕೆ ಯುಕೆ, ಅಮೆರಿಕ, ಫ್ರಾನ್ಸ್ ಮತ್ತು ಕೆನಡಾಗಳು ಒದಗಿಸಿರುವ ಶಸ್ತ್ರಾಸ್ತ್ರಗಳ ಪ್ರಮಾಣ ಬೆಚ್ಚಿ ಬೀಳಿಸುತ್ತದೆ. ಮುಖ್ಯವಾಹಿನಿ ಮಾಧ್ಯಮಗಳಿಂದ ನಿರ್ಲಕ್ಷ್ಯಗೊಳಗಾಗಿ ಅತ್ಯಂತ ಬಾಧಿತವಾಗಿರುವ ಯೆಮೆನ್ ನಾಗರಿಕರು ಮಾಧ್ಯಮಗಳ ಮೂಲಕ ಜಗತ್ತಿನ ಗಮನ ಸೆಳೆಯಲು ಸಾಧ್ಯವಾಗಲಿಲ್ಲ.
ಹೌತಿ ಬಂಡುಕೋರರ ನೆಲೆಗಳ ಮೇಲೆ ಸೌದಿ ಬೆಂಬಲಿತ ಮೈತ್ರಿಕೂಟವು ವಾಯುದಾಳಿಗಳನ್ನು ನಡೆಸಿತು. ಲೆಕ್ಕವಿಲ್ಲದಷ್ಟು ಅಮಾಯಕ ಜನರು ಕೊಲ್ಲಲ್ಪಟ್ಟರೆ, ಅಪಾರ ಮಟ್ಟದ ಆಸ್ತಿಪಾಸ್ತಿ ನಾಶವಾಯಿತು. ಈ ಮೈತ್ರಿಕೂಟದಲ್ಲಿ ಮುಖ್ಯವಾಗಿ ಸೌದಿ ಅರೇಬಿಯಾ ಹಾಗೂ ಸಂಯುಕ್ತ ಅರಬ್ ಸಂಸ್ಥಾನಗಳು, ಅಮೆರಿಕ, ಬ್ರಿಟನ್, ಕೆನಡಾ ಮತ್ತು ಫ್ರಾನ್ಸ್‍ಗಳ ಸೈನಾ ತರಬೇತಿ, ಶಸ್ತ್ರಾಸ್ತ್ರ ಪೂರೈಕೆಗಳಿವೆ. ಮಕ್ಕಳ ಮೇಲೆ ನಡೆಯುತ್ತಿರುವ ಅಪರಾಧಗಳ ಹಿನ್ನೆಲೆಯಲ್ಲಿ ಕಳೆದ ವರ್ಷ ವಿಶ್ವಸಂಸ್ಥೆಯು ಇದನ್ನು ಕಪ್ಪುಪಟ್ಟಿಗೆ ಸೇರಿಸಿದ ತರುವಾಯ ಹಾಲೆಂಡ್ ಮತ್ತು ನಾರ್ವೆಗಳು ಶಸ್ತ್ರಾಸ್ತ್ರಗಳ ಪೂರೈಕೆಯನ್ನು ನಿಲ್ಲಿಸಿದರೂ ಇತರ ದೇಶಗಳ ಮೇಲೆ ಸೌದಿ ಒತ್ತಡ ತಂದು ತನ್ನ ಹಿತಾಸಕ್ತಿ ಕಾಪಾಡಿಕೊಳ್ಳುವ ನಿಟ್ಟಿನಲ್ಲಿ ಶಸ್ತ್ರಾಸ್ತ್ರಗಳನ್ನು ಪಡೆದುಕೊಂಡಿತು. ಕಪ್ಪುಪಟ್ಟಿಗೆ ಸೇರಿಸಿದ ವಿಶ್ವಸಂಸ್ಥೆಯ ವರದಿಯಲ್ಲಿ ಹೇಳುವ ಪ್ರಕಾರ, ಸೌದಿ ನೇತೃತ್ವದ ಮಿತ್ರಕೂಟವು 10 ಆಸ್ಪತ್ರೆಗಳು, ಮದುವೆ ಸಮಾರಂಭಗಳು, ಶವಸಂಸ್ಕಾರಗಳು, ನಿರಾಶ್ರಿತರ ಶಿಬಿರಗಳು, ಆಹಾರ ಸರಬರಾಜು ಟ್ರಕ್‍ಗಳು, ಕಾರ್ಖಾನೆಗಳು, ಸಾರಿಗೆ ಮಾರ್ಗಗಳು, ಕೃಷಿ ಭೂಮಿಗಳು, ವಸತಿ ಪ್ರದೇಶಗಳು ಮತ್ತು ಶಾಲೆಗಳನ್ನು ಗುರಿಪಡಿಸಿ ದಾಳಿ ನಡೆಸಿದೆ. ಇವ್ಯಾವೂ ಭಯೋತ್ಪಾದಕರ ತಾಣಗಳಲ್ಲ. ಮಕ್ಕಳು, ಸಾಮಾನ್ಯಜನರು ಹೋಗುವ ಸ್ಥಳಗಳು. ತಮ್ಮನ್ನು ವಿಶ್ವಸಂಸ್ಥೆ ಕಪ್ಪುಪಟ್ಟಿಗೆ ಸೇರಿಸದ ಮೇಲೆ ಸೌದಿಯ ರಾಜಕುಮಾರ ಮಹಮದ್ ಬಿನ್ ಸಲ್ಮಾನ್ ತನ್ನ ಸೇನಾ ಪಡೆಗಳಿಗೆ `ಅಂತರರಾಷ್ಟ್ರೀಯ ಟೀಕೆಗೆಲ್ಲಾ ತಲೆಕೆಡಿಸಿಕೊಳ್ಳಬೇಡಿ. ಯೆಮೆನ್‍ನ ಮುಂದಿನ ಪೀಳಿಗೆಗಳ ಪ್ರಜ್ಞೆಯ ಮೇಲೆ ದೊಡ್ಡ ಪರಿಣಾಮವನ್ನು ನಾವು ಉಂಟು ಮಾಡಬೇಕಿದೆ. ಸೌದಿ ಅರೇಬಿಯಾ ಹೆಸರು ಕೇಳಿದರೇ ಅವರ ಹೆಂಗಸರು, ಮಕ್ಕಳು ಮತ್ತು ಗಂಡಸರೂ ಗಡಗಡ ನಡುಗುವಂತೆ ಮಾಡಬೇಕು’’ ಎಂದು ಹೇಳಿದ್ದಾನೆ. ಮಿತ್ರಕೂಟದ ವಾಯುಸೇನಾ ದಾಳಿಯು 1000ಕ್ಕಿಂತ ಹೆಚ್ಚು ಮಕ್ಕಳೂ ಸೇರಿದಂತೆ ಸುಮಾರು 10,000 ಜನರ ಕಗ್ಗೊಲೆಗೈದಿದೆ. 30 ಲಕ್ಷ ಯೆಮೆನ್ ನಾಗರಿಕರು ತಮ್ಮ ಮನೆ ಮಠ ಕಳೆದುಕೊಂಡು ಬೀದಿಗೆ ಬಿದ್ದಿದ್ದಾರೆ. ಆಕ್ಸ್‍ಫಾಮ್ ಬಿಡುಗಡೆ ಮಾಡಿರುವ ಇತ್ತೀಚಿನ ವರದಿಯ ಪ್ರಕಾರ ಈ ಯುದ್ಧವು ಯೆಮೆನ್‍ನನ್ನು ಸಂಪೂರ್ಣಕ್ಷಾಮದ ಸ್ಥಿತಿಗೆ ತಳ್ಳಿದೆ. ಇಲ್ಲಿನ ಜನರ ಪರಿಸ್ಥಿತಿ ಇಡೀ ಭೂ ಗ್ರಹದಲ್ಲಿಯೇ ಅತ್ಯಂತ ಹೀನ ಸ್ಥಿತಿಗೆ ಮುಟ್ಟಿದೆ ಎಂದು ಅದರಲ್ಲಿ ತಿಳಿಸಲಾಗಿದೆ. ದೇಶದ ಅರ್ಧಕ್ಕಿಂತ ಹೆಚ್ಚು ಜನಸಂಖ್ಯೆ, ಸುಮಾರು 1.7ಕೋಟಿ ಜನರಿಗೆ ಸರಿಯಾದ ಗಂಜಿ ನೀರಿಗೂ ತತ್ವಾರವಾಗಿದೆ. ಸು.70 ಲಕ್ಷಜನರು ಕ್ಷಾಮ ಸ್ಥಿತಿಗೆ ಒಂದು ಹೆಜ್ಜೆ ಹಿಂದಿದ್ದಾರಷ್ಟೆ. ಮನುಷ್ಯರು ಎಲೆಗಳನ್ನು ಮತ್ತು ಹುಲ್ಲನ್ನು ತಿನ್ನುವ ದಾರುಣ ಸ್ಥಿತಿ ಏರ್ಪಟ್ಟಿದೆ. ಮಿತ್ರಕೂಟವು ಯೆಮೆನ್‍ಗೆ ಆಹಾರ, ಔಷದಿ ಸಹಾಯದ 80% ಬರುತ್ತಿದ್ದ ಹೊಡೆದಾಹ್ ಬಂದರನ್ನು ಬಂದ್ ಮಾಡಿ ಯೆಮೆನ್‍ಗೆ ಯಾವುದೇ ಮಾನವಿಕ ನೆರವು ಸಿಗದಂತೆ ಮಾಡಿದೆ.
ಇಂಡಿಯಾದ ಮಾಧ್ಯಮಗಳಿಗೆ ಐಸಿಸ್ ಮತ್ತು ಕಿಮ್‍ಜಾಂಗ್ ವಿಷಯಗಳನ್ನು ಬಿಟ್ಟರೆ ಯೆಮೆನ್‍ನ ಬಿಕ್ಕಟ್ಟು ಕಾಣುತ್ತಿಲ್ಲ. ನಿರಾಶ್ರಿತರ ಸುದ್ದಿ ಎಂದಾಗ ಪ್ಯಾಲೆಸ್ತೀನ್ ಮತ್ತು ಸಿರಿಯಾಗಳ ಬಗ್ಗೆ ತಲೆಬರಹಗಳು ಕಾಣುತ್ತವೆಯೇ ಹೊರತು ಯೆಮೆನ್ ಕಾಣಿಸುವುದಿಲ್ಲ. ಯೆಮೆನ್‍ಗಾಗಿ ಯಾರೂ ಕಾಳಜಿ ವಹಿಸುತ್ತಿಲ್ಲ. ವಿಕಟ ವಿಪರ್ಯಾಸವೆಂದರೆ ಅನೇಕ ಅಂತರರಾಷ್ಟ್ರೀಯ ಸಂಸ್ಥೆಗಳು ಇಲ್ಲಿನ ಸ್ಥಿತಿಯ ಕುರಿತು ವರದಿ ನೀಡಿದ ಮೇಲೂ, ವಿಶ್ವಸಂಸ್ಥೆಯು ಕಪ್ಪುಪಟ್ಟಿಗೆ ಸೇರಿಸಿದ ಮೇಲೆಯೂ ವಿಶ್ವಸಂಸ್ಥೆಯ ಮಾನವ ಹಕ್ಕು ಆಯೋಗದ ಮುಖ್ಯಸ್ಥನಾಗಿ ಮುಂದುವರೆದಿರುವುದು ಸೌದಿ ಆರೇಬಿಯಾ!!

– ಭರತ್ ಹೆಬ್ಬಾಳ್
ಕನ್ನಡಕ್ಕೆ:
ಹರ್ಷಕುಮಾರ್ ಕುಗ್ವೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...