Homeರಾಜಕೀಯರಫೇಲ್: ಕೇಂದ್ರಕ್ಕೆ ಮುಳುವಾದ ಮುಚ್ಚಿದ ಲಕೋಟೆ ಮತ್ತು ಬಿಜೆಪಿಯ ದ್ವಂದ್ವ ನಿಲುವು

ರಫೇಲ್: ಕೇಂದ್ರಕ್ಕೆ ಮುಳುವಾದ ಮುಚ್ಚಿದ ಲಕೋಟೆ ಮತ್ತು ಬಿಜೆಪಿಯ ದ್ವಂದ್ವ ನಿಲುವು

- Advertisement -
- Advertisement -

ಏನಿದು ಮುಚ್ಚಿಟ್ಟ ಲಕೋಟೆ?
ಕೆಲವೊಮ್ಮೆ ಸಾರ್ವಜನಿಕವಾಗಿ ಬಹಿರಂಗಪಡಿಸಲಾಗದ ಸಂಗತಿಗಳನ್ನು ಕೋರ್ಟು ಮುಚ್ಚಿದ ಲಕೋಟೆಯಲ್ಲಿ ಕೊಡಲು ಕೇಳುತ್ತದೆ. ಅಥವಾ ಸರ್ಕಾರ ಯಾ ಕೇಸು ದಾಖಲಿಸಿದ ವಾದಿಯೇ ಅಂತಹ ಮುಚ್ಚಿದ ಲಕೋಟೆಯನ್ನು ಕೋರ್ಟಿಗೆ ನೀಡುತ್ತದೆ. ಈ ವಿಧಾನವನ್ನು ಒಪ್ಪುವುದೂ ಕಷ್ಟ. ಏಕೆಂದರೆ, ಅದೇ ಕೇಸಿನಲ್ಲಿ ಇರುವ ಎದುರುದಾರರಿಗೂ ನಿರಾಕರಿಸಲ್ಪಟ್ಟ ದಾಖಲೆಗಳು ನ್ಯಾಯಾಧೀಶರಿಗೆ ಮಾತ್ರ ಲಭ್ಯವಾಗುತ್ತದೆ. ಅಂತಿಮವಾಗಿ ನ್ಯಾಯಾಧೀಶರಿಗೆ ಲಭ್ಯವಾಗಿರುವ ‘ಪುರಾವೆ’ಗಳು ಸುಳ್ಳೂ ಇರಬಹುದು. ಅದರ ಕುರಿತು ತಮ್ಮ ವಿವರಣೆ ಹೇಳುವ ಅವಕಾಶವೂ ಎದುರುದಾರರಿಗಿಲ್ಲದೇ ತಪ್ಪು ತೀರ್ಪೂ ಸಹಾ ಬರಬಹುದು.
ಈ ಪ್ರಕರಣವು ಹಾಗೆಯೇ ಆಗಿರುವ ಎಲ್ಲಾ ಲಕ್ಷಣಗಳೂ ಇವೆ.

ತೀರ್ಪನ್ನು ತಿದ್ದುಪಡಿ ಮಾಡುವಂತೆ ಸುಪ್ರೀಂ ಕೋರ್ಟಿಗೆ ಕೇಂದ್ರ ಸಲ್ಲಿಸಿರುವ ಅಫಿಡವಿಟ್

ರಾಫೇಲ್ ಡೀಲ್‌ನಲ್ಲಿ ಮೂರು ಅಂಶಗಳು ಕೋರ್ಟಿನ ಮುಂದೆ ಇದ್ದವು. ಮೂಲ ಒಪ್ಪಂದಕ್ಕಿಂತ ಮೂರು ಪಟ್ಟು ಹೆಚ್ಚು ದರ ನೀಡಿ ಖರೀದಿ ಮಾಡಲು ಮೋದಿ ಸರ್ಕಾರ ಹೊರಟಿರುವುದು, ಈ ಡೀಲ್‌ನಲ್ಲಿ ಆಫ್‌ಸೆಟ್ ಪಾಲುದಾರನನ್ನಾಗಿ 7 ದಿನಗಳ ಹಿಂದಷ್ಟೇ ಹುಟ್ಟಿಕೊಂಡ ಅನಿಲ್ ಅಂಬಾನಿಯ ಕಂಪೆನಿಯನ್ನು ಒಳಗೊಂಡಿರುವುದು ಮತ್ತು ಸೂಕ್ತ ಪ್ರಕ್ರಿಯೆ ಅಳವಡಿಸದೇ ಖರೀದಿ ವ್ಯವಹಾರ ಒಪ್ಪಂದ ಮಾಡಿಕೊಂಡಿರುವುದು. ಮೊದಲೆರಡು ಅಂಶಗಳು ಯಾವುದೇ ಸರ್ಕಾರ ಅಥವಾ ಕಂಪೆನಿಯ ಆಂತರಿಕ ವ್ಯವಹಾರದಂತೆಯೂ ತೋರಬಹುದಾದ್ದರಿಂದ ಆ ಕುರಿತು ತಾನೇನೂ ಹೇಳಲು ಇಲ್ಲ ಎಂದು ನ್ಯಾಯಾಲಯವು ಹೇಳಬಹುದು; ಹೇಳಿದೆ. ಆದರೂ, ನ್ಯಾಯಾಲಯವು ಈ ಬಗ್ಗೆ ಖಚಿತವಾಗಿರಲು ಮುಚ್ಚಿದ ಲಕೋಟೆಯಲ್ಲಿ ವಿವರಗಳನ್ನು ಕೇಳಿತು. ಅದರಲ್ಲಿ ದರಗಳ ವಿವರದ ಜೊತೆಗೆ, ಸೂಕ್ತ ಪ್ರಕ್ರಿಯೆಯನ್ನು ಅಳವಡಿಸಿರುವ ಕುರಿತು ಸರ್ಕಾರವು ವಿವರಗಳನ್ನು ನೀಡಿತು.

ಅದರಲ್ಲೇ ಸಿಎಜಿಗೂ ವಿವರ ನೀಡಿದ್ದೇವೆ; ಸಿಎಜಿಯ ವರದಿಯನ್ನು ಪಿಎಸಿ (ಸಂಸತ್ತಿನ ಲೆಕ್ಕ ಪತ್ರಗಳ ಸಮಿತಿ)ಗೂ ಸಲ್ಲಿಸಲಾಗಿದೆ ಇತ್ಯಾದಿ ಸುಳ್ಳುಗಳನ್ನು ಸರ್ಕಾರವು ಹೇಳಿತು. ಬಹುಶಃ ಮುಚ್ಚಿದ ಲಕೋಟೆಯಲ್ಲಿನ ವಿವರಗಳನ್ನು ನ್ಯಾಯಾಲಯವು ತೀರ್ಪಿನಲ್ಲಿ ಉಲ್ಲೇಖಿಸಲಿಕ್ಕಿಲ್ಲ ಎಂದು ಸರ್ಕಾರದ ಆಲೋಚನೆಯಾಗಿರಬೇಕು. ಆದರೆ, ಸೂಕ್ತ ಪ್ರಕ್ರಿಯೆ ನಡೆದಿರುವುದು ತನಗೆ ಮನವರಿಕೆಯಾದ್ದರಿಂದಲೂ ‘ತಾನು ಮಧ್ಯಪ್ರವೇಶಿಸುವುದಿಲ್ಲ’ ಎಂದು ನ್ಯಾಯಾಲಯವು ಹೇಳಬಯಸಿತು. ಹಾಗಾಗಿ ಅದನ್ನು ತೀರ್ಪಿನಲ್ಲಿ ಉಲ್ಲೇಖಿಸಿಬಿಟ್ಟಿತು.

ಈ ಮೊಕದ್ದಮೆಯಲ್ಲಿ ಭಾಗಿಯಾಗಿರುವ ನ್ಯಾಯವಾದಿ ಪ್ರಶಾಂತ್‌ಭೂಷಣ್ ಅವರು ಮೊದಲಿಗೆ ಈ ವಿವರಗಳು ನಮಗೆ ಗೊತ್ತೇ ಇರಲಿಲ್ಲವಲ್ಲಾ ಎಂದು ಆಶ್ಚರ್ಯವ್ಯಕ್ತಪಡಿಸಿದರು. ನಂತರ ಆಶ್ಚರ್ಯವ್ಯಕ್ತಪಡಿಸುವ ಸರದಿ ಪಿಎಸಿ ಅಧ್ಯಕ್ಷರದ್ದಾಗಿತ್ತು. ಅಂತಹ ಯಾವ ವರದಿಯೂ ತಮಗೂ ಸಿಕ್ಕಿಲ್ಲವಲ್ಲಾ ಎಂದು ಅದರ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಲ್ಲದೇ, ಸಿಎಜಿ ಮತ್ತು ಸುಪ್ರೀಂಕೋರ್ಟಿಗೆ ಸರ್ಕಾರದ ಪರವಾಗಿ ಸುಳ್ಳನ್ನು ಹೇಳಿದ ಅಟಾರ್ನಿ ಜನರಲ್ ಇಬ್ಬರನ್ನೂ ಪಿಎಸಿ ಕರೆಸುತ್ತದೆಂದು ಹೇಳಿದರು.

ಇಷ್ಟು ಸಣ್ಣ ವಿಚಾರ ಸರ್ಕಾರಕ್ಕೆ ಗೊತ್ತಿಲ್ಲದೇನಲ್ಲ. ಆದರೆ, ತಾನು ಮುಚ್ಚಿದ ಲಕೋಟೆಯಲ್ಲಿ ಕೊಟ್ಟ ಅಂಶವು ಹೊರಗೆ ಬರಲಾರದು ಎಂಬ ತಪ್ಪು ಲೆಕ್ಕಾಚಾರ ಅದರದ್ದಾಗಿತ್ತು. ಈಗ ಬೇರೆ ದಾರಿಯೇ ಇಲ್ಲ. ಹಾಗಾಗಿ ಸಿಎಜಿ ವರದಿಯನ್ನು ಸಾಮಾನ್ಯವಾಗಿ ಪಿಎಸಿ ಪರಿಶೀಲಿಸುತ್ತದೆ ಎಂದು ತಾನು ಹೇಳಬಯಸಿದ್ದೆ, ಅದು ಈಗಾಗಲೇ ಪರಿಶೀಲಿಸಿದೆ ಎಂಬರ್ಥದಲ್ಲಿ ಟೈಪಿಂಗ್ ಎಡವಟ್ಟು ಅಷ್ಟೇ ಎಂದು ಸುಪ್ರೀಂಕೋರ್ಟಿಗೆ ಅಫಿಡವಿಟ್ ಹಾಕಿದೆ.

ಒಂದು ವೇಳೆ ಇದನ್ನು ಟೈಪಿಂಗ್ ಎಡವಟ್ಟು ಎಂದೇ ಇಟ್ಟುಕೊಂಡರೆ, ಸಿಎಜಿ ಹಾಗೂ ಪಿಎಸಿ ಪರಿಶೀಲಿಸಿದ ಮೇಲೆ ಪ್ರಕ್ರಿಯೆಯ ಕುರಿತು ಆಕ್ಷೇಪಣೆ ಸಲ್ಲಿಸುವ ಅಗತ್ಯವಿಲ್ಲ ಎಂದು ಹೇಳಿದ್ದ ಸುಪ್ರೀಂಕೋರ್ಟು, ಈಗ ಅದರಲ್ಲಿ ಲೋಪವನ್ನು ಕಾಣಲೇಬೇಕು. ಆಗ ಕೇಂದ್ರ ಸರ್ಕಾರದ ಪರಿಸ್ಥಿತಿ ಏನಾಗುತ್ತದೆ ಎಂಬುದನ್ನು ನಾವು ಕಾದು ನೋಡಬೇಕಷ್ಟೇ.

ಅದೇನೇ ಇರಲಿ, ದೇಶದ ರಕ್ಷಣಾ ಇಲಾಖೆಗೆ ಸೇರಿದ ಇಂತಹ ದೊಡ್ಡ ಡೀಲ್‌ನ ಕುರಿತು ಇಷ್ಟೊಂದು ತಪ್ಪುಗಳ ನಡೆದಿರುವಾಗ, ಉನ್ನತ ಮಟ್ಟದ ತನಿಖೆ ಆಗದೇ ಹೋದರೆ ಅದಕ್ಕಿಂತ ದೊಡ್ಡ ದುರಂತ ಇನ್ನೊಂದಿರಲಾರದು.

ಜಂಟಿ ಸಂಸದೀಯ ಸಮಿತಿ: ಬಿಜೆಪಿಯ ದ್ವಂದ್ವ ನಿಲುವು

ಯುಪಿಎ ಅವಧಿಯ 2 ಜಿ ಸ್ಪೆಕ್ಟ್ರಂ ಹಗರಣ ಎಲ್ಲರಿಗೂ ಗೊತ್ತಿದೆ. ಆ ವಿಚಾರದಲ್ಲಿ ತನಿಖೆಯೂ ನಡೆಯಿತು; ಕೇಂದ್ರದಲ್ಲಿ ಮಂತ್ರಿಯಾಗಿದ್ದವರೊಬ್ಬರು ಜೈಲಿಗೂ ಹೋಗಿ ಬಂದರು. ಆ ಹಗರಣದ ಕುರಿತು ಜಂಟಿ ಸಂಸದೀಯ ಸಮಿತಿಯೇ ರಚನೆಯಾಗಬೇಕು ಎಂದು ಬಿಜೆಪಿಯು ಪಟ್ಟು ಹಿಡಿಯಿತು. ಆಗಿನ ಅದರ ಸರ್ವೋಚ್ಚ ನಾಯಕ ಎಲ್.ಕೆ.ಅಡ್ವಾಣಿಯವರ ನೇತೃತ್ವದಲ್ಲಿ ಪ್ರತಿಭಟನೆಗಳೂ ನಡೆದವು.

ಅದರ ನಂತರ ಭ್ರಷ್ಟಾಚಾರವೇ ಪ್ರಮುಖ ಇಶ್ಯೂ ಎಂದು ಬಿಜೆಪಿಯು ಹೇಳಿತು. ಎಲ್.ಕೆ.ಅಡ್ವಾಣಿಯವರು ದೇಶಾದ್ಯಂತ ಪ್ರವಾಸ ಹೊರಟರು. ಅಂತಹ ಒಂದು ಪ್ರವಾಸದ ಭಾಗವಾಗಿ ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಮೈದಾನದಲ್ಲೂ ಒಂದು ಬೃಹತ್ ಸಭೆ ಆಯೋಜನೆಯಾಯಿತು. ಆ ಹೊತ್ತಿಗೆ ಜೈಲಿಗೆ ಹೋಗಿದ್ದ ಯಡಿಯೂರಪ್ಪನವರ ವಿಚಾರವನ್ನು ದೂರವಿಟ್ಟಿದ್ದಲ್ಲದೇ, ಯಡಿಯೂರಪ್ಪನವರ ಸಮೀಪವರ್ತಿಗಳನ್ನೂ ದೂರವಿಡಲಾಗಿತ್ತು.

ಅದೇನೇ ಇರಲಿ, ಜಂಟಿ ಸಂಸದೀಯ ಸಮಿತಿಯಿಂದ ಮಾತ್ರ ಇದರ ಸರಿಯಾದ ತನಿಖೆ ಸಾಧ್ಯ ಎಂದು ಆಗ ಬಿಜೆಪಿ ಹೇಳಿತ್ತು. ಈಗ ಖರ್ಗೆಯವರು ಅಧ್ಯಕ್ಷರಾಗಿರುವ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯಿಂದ ಪರಿಶೀಲನೆ ಆಗಿದೆ ಎಂದು ಆಗ ಯುಪಿಎ ಸರ್ಕಾರವು ಹೇಳಿತ್ತು. ಆದರೆ, ಇವೆರಡರ ಪಾತ್ರ ಬೇರೆ ಬೇರೆಯಾಗಿದ್ದು, ಜೆಪಿಸಿ (ಜಂಟಿ ಸಂಸದೀಯ ಸಮಿತಿ)ಯೇ ಇದಕ್ಕೆ ಸರಿ ಎಂದು ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದರು.

‘ನಮ್ಮ ಬೇಡಿಕೆ – ಜೆಪಿಸಿ’ ಎಂದು ಹೇಳುವ ಪ್ಲಕಾರ್ಡ್ಗಳನ್ನು ಇಟ್ಟುಕೊಂಡು ಆಗ ಬಿಜೆಪಿ ದೊಡ್ಡ ಪ್ರತಿಭಟನೆ ನಡೆಸಿತ್ತು. ಈಗ ರಾಫೇಲ್ ಡೀಲ್‌ನ ವಿಚಾರದಲ್ಲಿ ಮಾತ್ರ ಜಂಟಿ ಸಂಸದೀಯ ಸಮಿತಿಯ ರಚನೆ ಸಾಧ್ಯವಿಲ್ಲ ಎಂದು ಆಡಳಿತ ಪಕ್ಷವಾದ ಬಿಜೆಪಿಯು ಪಟ್ಟು ಹಿಡಿದಿದೆ. ಅದರಲ್ಲೂ ನೇರವಾಗಿ ಪ್ರಧಾನಿ ನರೇಂದ್ರ ಮೋದಿಯವರೇ ಖುದ್ದಾಗಿ ಈ ಡೀಲ್‌ನಲ್ಲಿ ಭಾಗಿ ಎಂಬ ಆರೋಪವನ್ನು ಮಾಡಲಾಗಿದೆ ಹಾಗೂ ಮೇಲ್ನೋಟಕ್ಕೆ ಹಲವು ಅಂಶಗಳನ್ನು ಅದನ್ನು ಸಮರ್ಥಿಸುವಂತೆ ಇರುವಾಗ ಬಿಜೆಪಿಯ ಈ ಹಿಂದೇಟು ಅನುಮಾನಗಳನ್ನು ದೃಢೀಕರಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...