Homeರಾಜಕೀಯರಫೇಲ್: ಕೇಂದ್ರಕ್ಕೆ ಮುಳುವಾದ ಮುಚ್ಚಿದ ಲಕೋಟೆ ಮತ್ತು ಬಿಜೆಪಿಯ ದ್ವಂದ್ವ ನಿಲುವು

ರಫೇಲ್: ಕೇಂದ್ರಕ್ಕೆ ಮುಳುವಾದ ಮುಚ್ಚಿದ ಲಕೋಟೆ ಮತ್ತು ಬಿಜೆಪಿಯ ದ್ವಂದ್ವ ನಿಲುವು

- Advertisement -
- Advertisement -

ಏನಿದು ಮುಚ್ಚಿಟ್ಟ ಲಕೋಟೆ?
ಕೆಲವೊಮ್ಮೆ ಸಾರ್ವಜನಿಕವಾಗಿ ಬಹಿರಂಗಪಡಿಸಲಾಗದ ಸಂಗತಿಗಳನ್ನು ಕೋರ್ಟು ಮುಚ್ಚಿದ ಲಕೋಟೆಯಲ್ಲಿ ಕೊಡಲು ಕೇಳುತ್ತದೆ. ಅಥವಾ ಸರ್ಕಾರ ಯಾ ಕೇಸು ದಾಖಲಿಸಿದ ವಾದಿಯೇ ಅಂತಹ ಮುಚ್ಚಿದ ಲಕೋಟೆಯನ್ನು ಕೋರ್ಟಿಗೆ ನೀಡುತ್ತದೆ. ಈ ವಿಧಾನವನ್ನು ಒಪ್ಪುವುದೂ ಕಷ್ಟ. ಏಕೆಂದರೆ, ಅದೇ ಕೇಸಿನಲ್ಲಿ ಇರುವ ಎದುರುದಾರರಿಗೂ ನಿರಾಕರಿಸಲ್ಪಟ್ಟ ದಾಖಲೆಗಳು ನ್ಯಾಯಾಧೀಶರಿಗೆ ಮಾತ್ರ ಲಭ್ಯವಾಗುತ್ತದೆ. ಅಂತಿಮವಾಗಿ ನ್ಯಾಯಾಧೀಶರಿಗೆ ಲಭ್ಯವಾಗಿರುವ ‘ಪುರಾವೆ’ಗಳು ಸುಳ್ಳೂ ಇರಬಹುದು. ಅದರ ಕುರಿತು ತಮ್ಮ ವಿವರಣೆ ಹೇಳುವ ಅವಕಾಶವೂ ಎದುರುದಾರರಿಗಿಲ್ಲದೇ ತಪ್ಪು ತೀರ್ಪೂ ಸಹಾ ಬರಬಹುದು.
ಈ ಪ್ರಕರಣವು ಹಾಗೆಯೇ ಆಗಿರುವ ಎಲ್ಲಾ ಲಕ್ಷಣಗಳೂ ಇವೆ.

ತೀರ್ಪನ್ನು ತಿದ್ದುಪಡಿ ಮಾಡುವಂತೆ ಸುಪ್ರೀಂ ಕೋರ್ಟಿಗೆ ಕೇಂದ್ರ ಸಲ್ಲಿಸಿರುವ ಅಫಿಡವಿಟ್

ರಾಫೇಲ್ ಡೀಲ್‌ನಲ್ಲಿ ಮೂರು ಅಂಶಗಳು ಕೋರ್ಟಿನ ಮುಂದೆ ಇದ್ದವು. ಮೂಲ ಒಪ್ಪಂದಕ್ಕಿಂತ ಮೂರು ಪಟ್ಟು ಹೆಚ್ಚು ದರ ನೀಡಿ ಖರೀದಿ ಮಾಡಲು ಮೋದಿ ಸರ್ಕಾರ ಹೊರಟಿರುವುದು, ಈ ಡೀಲ್‌ನಲ್ಲಿ ಆಫ್‌ಸೆಟ್ ಪಾಲುದಾರನನ್ನಾಗಿ 7 ದಿನಗಳ ಹಿಂದಷ್ಟೇ ಹುಟ್ಟಿಕೊಂಡ ಅನಿಲ್ ಅಂಬಾನಿಯ ಕಂಪೆನಿಯನ್ನು ಒಳಗೊಂಡಿರುವುದು ಮತ್ತು ಸೂಕ್ತ ಪ್ರಕ್ರಿಯೆ ಅಳವಡಿಸದೇ ಖರೀದಿ ವ್ಯವಹಾರ ಒಪ್ಪಂದ ಮಾಡಿಕೊಂಡಿರುವುದು. ಮೊದಲೆರಡು ಅಂಶಗಳು ಯಾವುದೇ ಸರ್ಕಾರ ಅಥವಾ ಕಂಪೆನಿಯ ಆಂತರಿಕ ವ್ಯವಹಾರದಂತೆಯೂ ತೋರಬಹುದಾದ್ದರಿಂದ ಆ ಕುರಿತು ತಾನೇನೂ ಹೇಳಲು ಇಲ್ಲ ಎಂದು ನ್ಯಾಯಾಲಯವು ಹೇಳಬಹುದು; ಹೇಳಿದೆ. ಆದರೂ, ನ್ಯಾಯಾಲಯವು ಈ ಬಗ್ಗೆ ಖಚಿತವಾಗಿರಲು ಮುಚ್ಚಿದ ಲಕೋಟೆಯಲ್ಲಿ ವಿವರಗಳನ್ನು ಕೇಳಿತು. ಅದರಲ್ಲಿ ದರಗಳ ವಿವರದ ಜೊತೆಗೆ, ಸೂಕ್ತ ಪ್ರಕ್ರಿಯೆಯನ್ನು ಅಳವಡಿಸಿರುವ ಕುರಿತು ಸರ್ಕಾರವು ವಿವರಗಳನ್ನು ನೀಡಿತು.

ಅದರಲ್ಲೇ ಸಿಎಜಿಗೂ ವಿವರ ನೀಡಿದ್ದೇವೆ; ಸಿಎಜಿಯ ವರದಿಯನ್ನು ಪಿಎಸಿ (ಸಂಸತ್ತಿನ ಲೆಕ್ಕ ಪತ್ರಗಳ ಸಮಿತಿ)ಗೂ ಸಲ್ಲಿಸಲಾಗಿದೆ ಇತ್ಯಾದಿ ಸುಳ್ಳುಗಳನ್ನು ಸರ್ಕಾರವು ಹೇಳಿತು. ಬಹುಶಃ ಮುಚ್ಚಿದ ಲಕೋಟೆಯಲ್ಲಿನ ವಿವರಗಳನ್ನು ನ್ಯಾಯಾಲಯವು ತೀರ್ಪಿನಲ್ಲಿ ಉಲ್ಲೇಖಿಸಲಿಕ್ಕಿಲ್ಲ ಎಂದು ಸರ್ಕಾರದ ಆಲೋಚನೆಯಾಗಿರಬೇಕು. ಆದರೆ, ಸೂಕ್ತ ಪ್ರಕ್ರಿಯೆ ನಡೆದಿರುವುದು ತನಗೆ ಮನವರಿಕೆಯಾದ್ದರಿಂದಲೂ ‘ತಾನು ಮಧ್ಯಪ್ರವೇಶಿಸುವುದಿಲ್ಲ’ ಎಂದು ನ್ಯಾಯಾಲಯವು ಹೇಳಬಯಸಿತು. ಹಾಗಾಗಿ ಅದನ್ನು ತೀರ್ಪಿನಲ್ಲಿ ಉಲ್ಲೇಖಿಸಿಬಿಟ್ಟಿತು.

ಈ ಮೊಕದ್ದಮೆಯಲ್ಲಿ ಭಾಗಿಯಾಗಿರುವ ನ್ಯಾಯವಾದಿ ಪ್ರಶಾಂತ್‌ಭೂಷಣ್ ಅವರು ಮೊದಲಿಗೆ ಈ ವಿವರಗಳು ನಮಗೆ ಗೊತ್ತೇ ಇರಲಿಲ್ಲವಲ್ಲಾ ಎಂದು ಆಶ್ಚರ್ಯವ್ಯಕ್ತಪಡಿಸಿದರು. ನಂತರ ಆಶ್ಚರ್ಯವ್ಯಕ್ತಪಡಿಸುವ ಸರದಿ ಪಿಎಸಿ ಅಧ್ಯಕ್ಷರದ್ದಾಗಿತ್ತು. ಅಂತಹ ಯಾವ ವರದಿಯೂ ತಮಗೂ ಸಿಕ್ಕಿಲ್ಲವಲ್ಲಾ ಎಂದು ಅದರ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ಹೇಳಿದ್ದಲ್ಲದೇ, ಸಿಎಜಿ ಮತ್ತು ಸುಪ್ರೀಂಕೋರ್ಟಿಗೆ ಸರ್ಕಾರದ ಪರವಾಗಿ ಸುಳ್ಳನ್ನು ಹೇಳಿದ ಅಟಾರ್ನಿ ಜನರಲ್ ಇಬ್ಬರನ್ನೂ ಪಿಎಸಿ ಕರೆಸುತ್ತದೆಂದು ಹೇಳಿದರು.

ಇಷ್ಟು ಸಣ್ಣ ವಿಚಾರ ಸರ್ಕಾರಕ್ಕೆ ಗೊತ್ತಿಲ್ಲದೇನಲ್ಲ. ಆದರೆ, ತಾನು ಮುಚ್ಚಿದ ಲಕೋಟೆಯಲ್ಲಿ ಕೊಟ್ಟ ಅಂಶವು ಹೊರಗೆ ಬರಲಾರದು ಎಂಬ ತಪ್ಪು ಲೆಕ್ಕಾಚಾರ ಅದರದ್ದಾಗಿತ್ತು. ಈಗ ಬೇರೆ ದಾರಿಯೇ ಇಲ್ಲ. ಹಾಗಾಗಿ ಸಿಎಜಿ ವರದಿಯನ್ನು ಸಾಮಾನ್ಯವಾಗಿ ಪಿಎಸಿ ಪರಿಶೀಲಿಸುತ್ತದೆ ಎಂದು ತಾನು ಹೇಳಬಯಸಿದ್ದೆ, ಅದು ಈಗಾಗಲೇ ಪರಿಶೀಲಿಸಿದೆ ಎಂಬರ್ಥದಲ್ಲಿ ಟೈಪಿಂಗ್ ಎಡವಟ್ಟು ಅಷ್ಟೇ ಎಂದು ಸುಪ್ರೀಂಕೋರ್ಟಿಗೆ ಅಫಿಡವಿಟ್ ಹಾಕಿದೆ.

ಒಂದು ವೇಳೆ ಇದನ್ನು ಟೈಪಿಂಗ್ ಎಡವಟ್ಟು ಎಂದೇ ಇಟ್ಟುಕೊಂಡರೆ, ಸಿಎಜಿ ಹಾಗೂ ಪಿಎಸಿ ಪರಿಶೀಲಿಸಿದ ಮೇಲೆ ಪ್ರಕ್ರಿಯೆಯ ಕುರಿತು ಆಕ್ಷೇಪಣೆ ಸಲ್ಲಿಸುವ ಅಗತ್ಯವಿಲ್ಲ ಎಂದು ಹೇಳಿದ್ದ ಸುಪ್ರೀಂಕೋರ್ಟು, ಈಗ ಅದರಲ್ಲಿ ಲೋಪವನ್ನು ಕಾಣಲೇಬೇಕು. ಆಗ ಕೇಂದ್ರ ಸರ್ಕಾರದ ಪರಿಸ್ಥಿತಿ ಏನಾಗುತ್ತದೆ ಎಂಬುದನ್ನು ನಾವು ಕಾದು ನೋಡಬೇಕಷ್ಟೇ.

ಅದೇನೇ ಇರಲಿ, ದೇಶದ ರಕ್ಷಣಾ ಇಲಾಖೆಗೆ ಸೇರಿದ ಇಂತಹ ದೊಡ್ಡ ಡೀಲ್‌ನ ಕುರಿತು ಇಷ್ಟೊಂದು ತಪ್ಪುಗಳ ನಡೆದಿರುವಾಗ, ಉನ್ನತ ಮಟ್ಟದ ತನಿಖೆ ಆಗದೇ ಹೋದರೆ ಅದಕ್ಕಿಂತ ದೊಡ್ಡ ದುರಂತ ಇನ್ನೊಂದಿರಲಾರದು.

ಜಂಟಿ ಸಂಸದೀಯ ಸಮಿತಿ: ಬಿಜೆಪಿಯ ದ್ವಂದ್ವ ನಿಲುವು

ಯುಪಿಎ ಅವಧಿಯ 2 ಜಿ ಸ್ಪೆಕ್ಟ್ರಂ ಹಗರಣ ಎಲ್ಲರಿಗೂ ಗೊತ್ತಿದೆ. ಆ ವಿಚಾರದಲ್ಲಿ ತನಿಖೆಯೂ ನಡೆಯಿತು; ಕೇಂದ್ರದಲ್ಲಿ ಮಂತ್ರಿಯಾಗಿದ್ದವರೊಬ್ಬರು ಜೈಲಿಗೂ ಹೋಗಿ ಬಂದರು. ಆ ಹಗರಣದ ಕುರಿತು ಜಂಟಿ ಸಂಸದೀಯ ಸಮಿತಿಯೇ ರಚನೆಯಾಗಬೇಕು ಎಂದು ಬಿಜೆಪಿಯು ಪಟ್ಟು ಹಿಡಿಯಿತು. ಆಗಿನ ಅದರ ಸರ್ವೋಚ್ಚ ನಾಯಕ ಎಲ್.ಕೆ.ಅಡ್ವಾಣಿಯವರ ನೇತೃತ್ವದಲ್ಲಿ ಪ್ರತಿಭಟನೆಗಳೂ ನಡೆದವು.

ಅದರ ನಂತರ ಭ್ರಷ್ಟಾಚಾರವೇ ಪ್ರಮುಖ ಇಶ್ಯೂ ಎಂದು ಬಿಜೆಪಿಯು ಹೇಳಿತು. ಎಲ್.ಕೆ.ಅಡ್ವಾಣಿಯವರು ದೇಶಾದ್ಯಂತ ಪ್ರವಾಸ ಹೊರಟರು. ಅಂತಹ ಒಂದು ಪ್ರವಾಸದ ಭಾಗವಾಗಿ ಬೆಂಗಳೂರಿನ ನ್ಯಾಷನಲ್ ಕಾಲೇಜಿನ ಮೈದಾನದಲ್ಲೂ ಒಂದು ಬೃಹತ್ ಸಭೆ ಆಯೋಜನೆಯಾಯಿತು. ಆ ಹೊತ್ತಿಗೆ ಜೈಲಿಗೆ ಹೋಗಿದ್ದ ಯಡಿಯೂರಪ್ಪನವರ ವಿಚಾರವನ್ನು ದೂರವಿಟ್ಟಿದ್ದಲ್ಲದೇ, ಯಡಿಯೂರಪ್ಪನವರ ಸಮೀಪವರ್ತಿಗಳನ್ನೂ ದೂರವಿಡಲಾಗಿತ್ತು.

ಅದೇನೇ ಇರಲಿ, ಜಂಟಿ ಸಂಸದೀಯ ಸಮಿತಿಯಿಂದ ಮಾತ್ರ ಇದರ ಸರಿಯಾದ ತನಿಖೆ ಸಾಧ್ಯ ಎಂದು ಆಗ ಬಿಜೆಪಿ ಹೇಳಿತ್ತು. ಈಗ ಖರ್ಗೆಯವರು ಅಧ್ಯಕ್ಷರಾಗಿರುವ ಸಾರ್ವಜನಿಕ ಲೆಕ್ಕಪತ್ರಗಳ ಸಮಿತಿಯಿಂದ ಪರಿಶೀಲನೆ ಆಗಿದೆ ಎಂದು ಆಗ ಯುಪಿಎ ಸರ್ಕಾರವು ಹೇಳಿತ್ತು. ಆದರೆ, ಇವೆರಡರ ಪಾತ್ರ ಬೇರೆ ಬೇರೆಯಾಗಿದ್ದು, ಜೆಪಿಸಿ (ಜಂಟಿ ಸಂಸದೀಯ ಸಮಿತಿ)ಯೇ ಇದಕ್ಕೆ ಸರಿ ಎಂದು ಸುಷ್ಮಾ ಸ್ವರಾಜ್ ಟ್ವೀಟ್ ಮಾಡಿದ್ದರು.

‘ನಮ್ಮ ಬೇಡಿಕೆ – ಜೆಪಿಸಿ’ ಎಂದು ಹೇಳುವ ಪ್ಲಕಾರ್ಡ್ಗಳನ್ನು ಇಟ್ಟುಕೊಂಡು ಆಗ ಬಿಜೆಪಿ ದೊಡ್ಡ ಪ್ರತಿಭಟನೆ ನಡೆಸಿತ್ತು. ಈಗ ರಾಫೇಲ್ ಡೀಲ್‌ನ ವಿಚಾರದಲ್ಲಿ ಮಾತ್ರ ಜಂಟಿ ಸಂಸದೀಯ ಸಮಿತಿಯ ರಚನೆ ಸಾಧ್ಯವಿಲ್ಲ ಎಂದು ಆಡಳಿತ ಪಕ್ಷವಾದ ಬಿಜೆಪಿಯು ಪಟ್ಟು ಹಿಡಿದಿದೆ. ಅದರಲ್ಲೂ ನೇರವಾಗಿ ಪ್ರಧಾನಿ ನರೇಂದ್ರ ಮೋದಿಯವರೇ ಖುದ್ದಾಗಿ ಈ ಡೀಲ್‌ನಲ್ಲಿ ಭಾಗಿ ಎಂಬ ಆರೋಪವನ್ನು ಮಾಡಲಾಗಿದೆ ಹಾಗೂ ಮೇಲ್ನೋಟಕ್ಕೆ ಹಲವು ಅಂಶಗಳನ್ನು ಅದನ್ನು ಸಮರ್ಥಿಸುವಂತೆ ಇರುವಾಗ ಬಿಜೆಪಿಯ ಈ ಹಿಂದೇಟು ಅನುಮಾನಗಳನ್ನು ದೃಢೀಕರಿಸುತ್ತದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್.ನಿಜಲಿಂಗಪ್ಪನವರು ಕರ್ನಾಟಕ ಕಂಡ ಅಪರೂಪದ ರಾಜಕಾರಣಿ: ಸಿಎಂ ಸಿದ್ದರಾಮಯ್ಯ

ಬೆಳಗಾವಿ: ಎಸ್. ನಿಜಲಿಂಗಪ್ಪನವರು ಒಬ್ಬ ದಕ್ಷ, ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.  ಡಿಸೆಂಬರ್ 10ರಂದು, ಮಾಜಿ ಮುಖ್ಯಮಂತ್ರಿ ದಿ| ಎಸ್. ನಿಜಲಿಂಗಪ್ಪರವರ...

ನಕಲಿ ತುಪ್ಪ ವಿವಾದದ ಬಳಿಕ ಮತ್ತೊಂದು ಹಗರಣ; ತಿರುಮಲ ದೇವಸ್ಥಾನಕ್ಕೆ ರೇಷ್ಮೆ ಹೆಸರಿನಲ್ಲಿ ‘ಪಾಲಿಯೆಸ್ಟರ್‌’ ದುಪಟ್ಟಾ ಪೂರೈಕೆ

ಲಡ್ಡು ಪ್ರಸಾದಕ್ಕೆ ನಕಲಿ ತುಪ್ಪ ಪೂರೈಕೆ ವಿವಾದದ ಬಳಿಕ ತಿರುಪತಿ ತಿರುಮಲ ದೇವಸ್ಥಾನದಲ್ಲಿ ಹೊಸ ಹಗರಣವೊಂದು ಬೆಳಕಿಗೆ ಬಂದಿದೆ. 2015 ರಿಂದ 2025 ರವರೆಗಿನ ಹತ್ತು ವರ್ಷಗಳ ಅವಧಿಯಲ್ಲಿ ರೇಷ್ಮೆ ದುಪಟ್ಟಾಗಳ ಖರೀದಿಯಲ್ಲಿ...

‘ಶಾಶ್ವತ ವಿಪತ್ತು ನಿಧಿಯನ್ನು ಏಕೆ ರಚಿಸಿಲ್ಲ’: ಸಿಎಂ ಸಿದ್ದರಾಮಯ್ಯ ಅವರಿಗೆ ಆರ್. ಅಶೋಕ್ ಪ್ರಶ್ನೆ

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಮಾತನ್ನು ಉಳಿಸಿಕೊಳ್ಳಲು ವಿಫಲರಾಗಿದ್ದಾರೆ ಮತ್ತು ರೈತರಿಗೆ 'ದ್ರೋಹ' ಮಾಡಿದ್ದಾರೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ (ಎಲ್‌ಒಪಿ) ಆರ್. ಅಶೋಕ ಮಂಗಳವಾರ ಆರೋಪಿಸಿದ್ದಾರೆ. ಉತ್ತರ ಕರ್ನಾಟಕವನ್ನು ಕಾಡುತ್ತಿರುವ...

ಆಂಧ್ರ ಪ್ರದೇಶ| ದಲಿತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಾಧ್ಯಾಪಕರ ಬಂಧನ; ಭುಗಿಲೆದ್ದ ಪ್ರತಿಭಟನೆ

ಆಂಧ್ರಪ್ರದೇಶದ ತಿರುಪತಿಯಲ್ಲಿರುವ ರಾಷ್ಟ್ರೀಯ ಸಂಸ್ಕೃತ ವಿಶ್ವವಿದ್ಯಾಲಯದಲ್ಲಿ ಪ್ರಥಮ ವರ್ಷದ ಬಿ.ಇಡಿ ದಲಿತ ವಿದ್ಯಾರ್ಥಿನಿಯೊಬ್ಬಳು ಇಬ್ಬರು ಸಹಾಯಕ ಪ್ರಾಧ್ಯಾಪಕರಾದ ಲಕ್ಷ್ಮಣ್ ಕುಮಾರ್ ಮತ್ತು ಶೇಖರ್ ರೆಡ್ಡಿ ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದಾರೆ. ಈ...

ಝೀ ನ್ಯೂಸ್‌ನಿಂದ 18 ಕೋಟಿ ರೂ. ಪರಿಹಾರ ಕೇಳಿದ ಫೋಟೋಗ್ರಾಫರ್…ಕಾರಣ?

ಆಫ್ರಿಕಾದಿಂದ ಭಾರತಕ್ಕೆ ಚಿರತೆಗಳ ಸಾಗಣೆಯನ್ನು ದಾಖಲಿಸಿರುವ ತನ್ನ ಅತ್ಯಮೂಲ್ಯ ವಿಡಿಯೋವನ್ನು ಅನುಮತಿಯಿಲ್ಲದೆ ಬಳಸಿಕೊಂಡಿದ್ದಕ್ಕೆ ಝೀ ನ್ಯೂಸ್‌ ಚಾನೆಲ್‌ ವಿರುದ್ದ ಎಮ್ಮಿ ಪ್ರಶಸ್ತಿಗೆ ನಾಮನಿರ್ದೇಶಿತರಾದ ಚಲನಚಿತ್ರ ನಿರ್ಮಾಪಕ ಮತ್ತು ಛಾಯಾಗ್ರಾಹಕ ರೋನಿ ಸೇನ್ ಹಕ್ಕುಸ್ವಾಮ್ಯ...

ನ್ಯಾ. ಗವಾಯಿ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್‌ಗೆ ಚಪ್ಪಲಿಯಿಂದ ಹಲ್ಲೆ

ಭಾರತದ ಮಾಜಿ ಮುಖ್ಯ ನ್ಯಾಯಮೂರ್ತಿ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿದ್ದ ವಕೀಲ ರಾಕೇಶ್ ಕಿಶೋರ್ ಅವರಿಗೆ ಮಂಗಳವಾರ (ಡಿಸೆಂಬರ್ 9) ದೆಹಲಿಯ ಕರ್ಕಾರ್ಡೂಮಾ ನ್ಯಾಯಾಲಯದ ಸಂಕೀರ್ಣದೊಳಗೆ ಅಪರಿಚಿತ ವ್ಯಕ್ತಿಗಳು...

ಚುನಾವಣಾ ಆಯುಕ್ತರ ನೇಮಕ ಸಮಿತಿಯಿಂದ ಸಿಜೆಐ ಅವರನ್ನು ಹೊರಗಿಟ್ಟಿದ್ದನ್ನು ಪ್ರಶ್ನಿಸಿದ ರಾಹುಲ್ ಗಾಂಧಿ 

ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸಂಸತ್ತಿನಲ್ಲಿ ಮೋದಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತರು (CEC) ಮತ್ತು ಇತರ ಚುನಾವಣಾ ಆಯುಕ್ತರ ನೇಮಕಾತಿಯನ್ನು ಶಿಫಾರಸು ಮಾಡುವ ಆಯ್ಕೆ...

ಪೌರತ್ವಕ್ಕೂ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು : ಸೋನಿಯಾ ಗಾಂಧಿಗೆ ದೆಹಲಿ ಕೋರ್ಟ್ ನೋಟಿಸ್

ಭಾರತದ ಪೌರತ್ವ ಪಡೆಯುವ ಮುನ್ನವೇ ಮತದಾರರ ಪಟ್ಟಿಯಲ್ಲಿ ಹೆಸರು ಹೊಂದಿದ್ದರು ಎನ್ನುವ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ಮತ್ತು ದೆಹಲಿ ಪೊಲೀಸರಿಗೆ ದೆಹಲಿಯ ವಿಶೇಷ ನ್ಯಾಯಾಲಯ ಮಂಗಳವಾರ (ಡಿಸೆಂಬರ್...

‘ಕಾನೂನುಗಳು ನಾಗರಿಕರ ಅನುಕೂಲಕ್ಕಾಗಿ ಇರಬೇಕು, ಕಿರುಕುಳ ನೀಡಬಾರದು’: ಪ್ರಧಾನಿ ಮೋದಿ 

ಪ್ರಧಾನಿ ನರೇಂದ್ರ ಮೋದಿ ಅವರು ಶಾಸಕರು ಜನರಿಗೆ ಹೊರೆಯಾಗದಂತೆ ನೋಡಿಕೊಳ್ಳುವ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಸುಧಾರಣೆಗಳನ್ನು ಕೈಗೊಳ್ಳುವಂತೆ ಕರೆ ನೀಡಿದ್ದಾರೆ. ‘ದೇಶದ ಯಾವುದೇ ವ್ಯಕ್ತಿ ಕಾನೂನು ಅಥವಾ ನಿಯಮಗಳಿಂದಾಗಿ ಕಿರುಕುಳ, ಅನಾನುಕೂಲತೆಯನ್ನು ಎದುರಿಸಬಾರದು. ಅಂತಹ...

ನ್ಯಾಯಮೂರ್ತಿ ಸ್ವಾಮಿನಾಥನ್ ಪದಚ್ಯುತಿಗೆ ಪ್ರಸ್ತಾವ ಮಂಡಿಸಿದ ವಿಪಕ್ಷ ಸಂಸದರು

ಮದ್ರಾಸ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ ಅವರ ಪದಚ್ಯುತಿ ಕೋರಿ ಡಿಎಂಕೆ ಮತ್ತು ಇತರ ವಿರೋಧ ಪಕ್ಷಗಳ ಸಂಸದರು ಲೋಕಸಭಾ ಸ್ಪೀಕರ್ ಮುಂದೆ ಪ್ರಸ್ತಾವ ಮಂಡಿಸಿದ್ದಾರೆ. ಡಿಸೆಂಬರ್ 9ರಂದು ಸಂವಿಧಾನದ 124ನೇ ವಿಧಿಯೊಂದಿಗೆ...