Homeಅಂತರಾಷ್ಟ್ರೀಯರಾಜಕಾರಣದಲ್ಲಿ ನಲುಗಿದ ನಾವು: ಸ್ಟಾನ್ ಫೋರ್ಡ್ ಪ್ರಿಸನ್ ಎಕ್ಸ್‍ಪೆರಿಮೆಂಟ್

ರಾಜಕಾರಣದಲ್ಲಿ ನಲುಗಿದ ನಾವು: ಸ್ಟಾನ್ ಫೋರ್ಡ್ ಪ್ರಿಸನ್ ಎಕ್ಸ್‍ಪೆರಿಮೆಂಟ್

ಈ ಪ್ರಯೋಗದ ಬಗ್ಗೆ ಹಲವಾರು ಟೀಕೆ ವಿಮರ್ಶೆಗಳೆದುರು ಸಹ ಅಧಿಕಾರ ಮತ್ತು ‘ಪ್ರಭುತ್ವ’ವನ್ನು ಅರ್ಥ ಮಾಡಿಕೊಳ್ಳಲು ಇದು ಸ್ಪಷ್ಟವಾದ ನಿದರ್ಶನವಾಗಿದೆ.

- Advertisement -
- Advertisement -

| ಆರ್.ಜಗನ್ನಾಥ್ |

ಮನಶಾಸ್ತ್ರದ ಬಗ್ಗೆ ಪಾಠ ಮಾಡುವ ಪ್ರೊಫೆಸರ್ ಫಿಲಿಪ್ ಜಿಂಬರ್‍ಡೊ ಒಂದು ಅಸಾಧರಿವಾದ ಪ್ರಯೋಗವನ್ನು ದಿನಾಂಕ 1971 ಆಗಸ್ಟ್ 14 ರಿಂದ 21ರ ವರೆಗೆ ನಡೆಸಿದ್ದು ಇದಕ್ಕೆ (Stanford Prison Experiment) ಸ್ಟಾನ್‍ಫೋರ್ಡ್ ಪ್ರಿಸನ್ ಎಕ್ಸ್‍ಪೆರಿಮೆಂಟ್(ಎಸ್‍ಪಿಇ) ಎಂದು ಕರೆದಿರುತ್ತಾರೆ.

ಅಮೇರಿಕಾದ ನೌಕಾಪಡೆಯ ಸಂಶೋಧನೆಗಾಗಿ ನಡೆದ ಪ್ರಯೋಗದಲ್ಲಿ ಪ್ರೊ.ಫಿಲಿಪ್ ಜಿಂಬರ್‍ಡೊ ಪ್ರಯೋಗಕ್ಕಾಗಿ ಸೇರಿಸಿಕೊಂಡದ್ದು ತನ್ನ ಇಪ್ಪತ್ತನಾಲ್ಕು ಜನ ವಿದ್ಯಾರ್ಥಿಗಳನ್ನು. ಈ ಇಪ್ಪತ್ತನಾಲ್ಕು ಜನರನ್ನು ಆಯ್ಕೆ ಮಾಡಿಕೊಳ್ಳುವಾಗ ಆರೋಗ್ಯ ಸಮಸ್ಯೆ ಇಲ್ಲದ ಕ್ರಿಮಿನಲ್ ಹಿನ್ನೆಲೆಯಿಲ್ಲದ, ಮಾನಸಿಕ ಸಮಸ್ಯೆ ಇಲ್ಲದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿರುತ್ತದೆ.

ಇಪ್ಪತ್ನಾಲ್ಕು ಜನರನ್ನು ತಲಾ ಎರಡು ತಂಡಗಳಾಗಿ ವಿಭಜಿಸಿ 12 ಜನರ ಒಂದು ತಂಡವನ್ನು ಸೆರೆವಾಸಿಗಳಾಗಿ, ಮತ್ತೊಂದು 12 ಜನರ ತಂಡವನ್ನು ಜೈಲರ್‍ಗಳಾಗಿ ವಿಭಾಗಿಸಲಾಗುತ್ತದೆ. ಯೂನಿವರ್ಸಿಟಿಯ ಸೆಲ್ಲರ್‍ನ್ನು ನಿಜವಾದ ಜೈಲಿನ ರೀತಿಯಲ್ಲಿ ಪರಿವರ್ತಿಸಿ ಸದರಿ ಪ್ರಯೋಗಕ್ಕೆ ಬಳಸಿಕೊಳ್ಳಲಾಗುತ್ತದೆ.

ಹನ್ನೆರಡು ಜನರ ಸೆರೆವಾಸಿಗಳಿಗೆ ಹೆಸರಿನ ಬದಲಾಗಿ ನಂಬರ್‍ಗಳನ್ನು, ಸೆರೆವಾಸಿಗಳ ಯೂನಿಫಾರಂನ್ನು ನೀಡಲಾಗಿರುತ್ತದೆ. ಅದೇ ರೀತಿ ಜೈಲರ್‍ಗಳಿಗೂ ಸಹ ನಿಜವಾದ ಜೈಲರ್‍ಗಳಿಗೆ ನೀಡಲಾಗುವ ಸಮವಸ್ತ್ರ ಮತ್ತು ಪರಿಕರಗಳನ್ನು ನೀಡಲಾಗುತ್ತದೆ.

ಜೊತೆಯಲ್ಲಿ ಊಟ ಮಾಡುತ್ತಿದ್ದ, ಜೊತೆಯಲ್ಲಿ ಪಾಠ ಕೇಳುತ್ತಿದ್ದ, ಜೊತೆಯಲ್ಲಿ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಗಳಲ್ಲಿನ ಒಂದು ತಂಡಕ್ಕೆ ‘ಅಧಿಕಾರ’ ಸಿಕ್ಕಕೂಡಲೇ ಯಾವ ರೀತಿಯಲ್ಲಿ ವರ್ತಿಸತೊಡಗುತ್ತಾರೆ ಎಂಬುದೇ ಪ್ರಯೋಗದ ಉದ್ದೇಶ.

ಸ್ವತಃ ಪ್ರೊಫೆಸರ್ ಫಿಲಿಪ್ ಜಿಂಬರ್‍ಡೊ ಜೈಲಿನ ಸೂಪರಿಂಟೆಂಡೆಟ್ ಆಗಿ ಜೈಲರ್‍ಗಳನ್ನು ಮುನ್ನಡೆಸುತ್ತಿರುತ್ತಾನೆ. 15 ದಿನಗಳ ಕಾಲದ ಈ ಪ್ರಯೋಗ ಜೈಲರ್‍ಗಳ ಮಿತಿಮೀರಿದ ಅಧಿಕಾರದ ದುರ್ಬಳಕೆಯ ಕಾರಣ 6ನೇ ದಿವಸಕ್ಕೇ ಕೊನೆಯಾಗಬೇಕಾಗುತ್ತದೆ.

ಈ ಪ್ರಯೋಗದ ಬಗ್ಗೆ ಹಲವಾರು ಟೀಕೆ ವಿಮರ್ಶೆಗಳೆದುರು ಸಹ ಅಧಿಕಾರ ಮತ್ತು ‘ಪ್ರಭುತ್ವ’ವನ್ನು ಅರ್ಥ ಮಾಡಿಕೊಳ್ಳಲು ಇದು ಸ್ಪಷ್ಟವಾದ ನಿದರ್ಶನವಾಗಿದೆ.

ಇವತ್ತು ದೇಶದಲ್ಲಿ ಒಟ್ಟಿಗೆ ಬೆಳೆದ, ಒಟ್ಟಿಗೆ ಆಟವಾಡಿದ, ಒಟ್ಟಿಗೆ ಬದುಕು ಕಟ್ಟಿಕೊಂಡ ಸ್ನೇಹಿತರ ನಡುವೆ ಜೈಲರ್‍ಗಳು ಮತ್ತು ಸೆರೆವಾಸಿಗಳು ಎಂಬ ಸ್ಪಷ್ಟವಾದ ವಿಭಾಗ ಉಂಟಾಗಿದೆ.

ಈ ಸೊಕಾಲ್ಡ್ ಜೈಲರ್‍ಗಳು ತಮ್ಮನ್ನು ತಾವೇ ಅಪರಿಮಿತ ಅಧಿಕಾರವುಳ್ಳ ದೇಶಭಕ್ತರೆಂದು, ಗೋರಕ್ಷಕರೆಂದೂ, ಈ ದೇಶದ ನಿಜವಾದ ರಕ್ಷಕರೆಂದೂ ಬಿಂಬಿಸಿಕೊಂಡಿದ್ದಾರೆ. ವಾಟ್ಸಾಪ್, ಫೇಸ್‍ಬುಕ್, ಸಮಾಜ ಎಲ್ಲಾ ಕಡೆ ತನ್ನ ರಾಜಕೀಯ ವಿರೋಧಿಗಳನ್ನು ತನ್ನ ವಿಚಾರಧಾರೆಯ ವಿರೋಧಿಗಳನ್ನು ಸೆರೆಯಾಳುಗಳ ರೀತಿಯಲ್ಲಿ ಭಾವಿಸಿ ಬಗ್ಗುಬಡಿಯಲೆತ್ನಿಸುತ್ತಿದ್ದಾರೆ. ಅವರುಗಳ ವಿರುದ್ಧ ಸುಳ್ಳುಗಳನ್ನು ಸೃಷ್ಟಿಸಿ ದೇಶವಿರೋಧಿಗಳು, ತುಕಡೆ ತುಕಡೆ ಗ್ಯಾಂಗ್, ಕಾಂಗಿ, ಕಮ್ಮಿ, ಹುಸಿ ಜಾತ್ಯಾತೀತರೆಂದು ಕರೆದು ವಿವಿಧ ರೀತಿಯ ಮಾನಸಿಕ ಹಿಂಸೆ ಮತ್ತು ಒತ್ತಡ ಹೇರುವ ಕೆಲಸದಲ್ಲಿ ನಿರತವಾಗಿದೆ.

ಸ್ಟಾನ್‍ಫೋರ್ಡ್ ಪ್ರಿಸನ್ ಎಕ್ಸ್‍ಪೆರಿಮೆಂಟ್ (ಎಸ್.ಪಿ.ಎ) ಹದಿನೈದು ದಿನ ನಡೆಯಬೇಕಾದ ಪ್ರಯೋಗ ‘ಅಧಿಕಾರ’ದ ಅಪರಿಮಿತ ದುರ್ಬಳಕೆಯ ಕಾರಣ ಆರು ದಿವಸಕ್ಕೆ ಮುಕ್ತಾಯವಾಯಿತು. ಅದೇ ರೀತಿಯಲ್ಲಿ ಇಂದು ದೇಶದಲ್ಲಿ ನಡೆಯುತ್ತಿರುವ ಪ್ರಯೋಗ ಸಹ ಅದಷ್ಟು ಬೇಗ ಮುಕ್ತಾಯಗೊಳ್ಳಲಿ ಎಂಬುದಷ್ಟೇ ಸದ್ಯದ ಆಶಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...