Homeಅಂತರಾಷ್ಟ್ರೀಯರಾಜಕಾರಣದಲ್ಲಿ ನಲುಗಿದ ನಾವು: ಸ್ಟಾನ್ ಫೋರ್ಡ್ ಪ್ರಿಸನ್ ಎಕ್ಸ್‍ಪೆರಿಮೆಂಟ್

ರಾಜಕಾರಣದಲ್ಲಿ ನಲುಗಿದ ನಾವು: ಸ್ಟಾನ್ ಫೋರ್ಡ್ ಪ್ರಿಸನ್ ಎಕ್ಸ್‍ಪೆರಿಮೆಂಟ್

ಈ ಪ್ರಯೋಗದ ಬಗ್ಗೆ ಹಲವಾರು ಟೀಕೆ ವಿಮರ್ಶೆಗಳೆದುರು ಸಹ ಅಧಿಕಾರ ಮತ್ತು ‘ಪ್ರಭುತ್ವ’ವನ್ನು ಅರ್ಥ ಮಾಡಿಕೊಳ್ಳಲು ಇದು ಸ್ಪಷ್ಟವಾದ ನಿದರ್ಶನವಾಗಿದೆ.

- Advertisement -
- Advertisement -

| ಆರ್.ಜಗನ್ನಾಥ್ |

ಮನಶಾಸ್ತ್ರದ ಬಗ್ಗೆ ಪಾಠ ಮಾಡುವ ಪ್ರೊಫೆಸರ್ ಫಿಲಿಪ್ ಜಿಂಬರ್‍ಡೊ ಒಂದು ಅಸಾಧರಿವಾದ ಪ್ರಯೋಗವನ್ನು ದಿನಾಂಕ 1971 ಆಗಸ್ಟ್ 14 ರಿಂದ 21ರ ವರೆಗೆ ನಡೆಸಿದ್ದು ಇದಕ್ಕೆ (Stanford Prison Experiment) ಸ್ಟಾನ್‍ಫೋರ್ಡ್ ಪ್ರಿಸನ್ ಎಕ್ಸ್‍ಪೆರಿಮೆಂಟ್(ಎಸ್‍ಪಿಇ) ಎಂದು ಕರೆದಿರುತ್ತಾರೆ.

ಅಮೇರಿಕಾದ ನೌಕಾಪಡೆಯ ಸಂಶೋಧನೆಗಾಗಿ ನಡೆದ ಪ್ರಯೋಗದಲ್ಲಿ ಪ್ರೊ.ಫಿಲಿಪ್ ಜಿಂಬರ್‍ಡೊ ಪ್ರಯೋಗಕ್ಕಾಗಿ ಸೇರಿಸಿಕೊಂಡದ್ದು ತನ್ನ ಇಪ್ಪತ್ತನಾಲ್ಕು ಜನ ವಿದ್ಯಾರ್ಥಿಗಳನ್ನು. ಈ ಇಪ್ಪತ್ತನಾಲ್ಕು ಜನರನ್ನು ಆಯ್ಕೆ ಮಾಡಿಕೊಳ್ಳುವಾಗ ಆರೋಗ್ಯ ಸಮಸ್ಯೆ ಇಲ್ಲದ ಕ್ರಿಮಿನಲ್ ಹಿನ್ನೆಲೆಯಿಲ್ಲದ, ಮಾನಸಿಕ ಸಮಸ್ಯೆ ಇಲ್ಲದ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗಿರುತ್ತದೆ.

ಇಪ್ಪತ್ನಾಲ್ಕು ಜನರನ್ನು ತಲಾ ಎರಡು ತಂಡಗಳಾಗಿ ವಿಭಜಿಸಿ 12 ಜನರ ಒಂದು ತಂಡವನ್ನು ಸೆರೆವಾಸಿಗಳಾಗಿ, ಮತ್ತೊಂದು 12 ಜನರ ತಂಡವನ್ನು ಜೈಲರ್‍ಗಳಾಗಿ ವಿಭಾಗಿಸಲಾಗುತ್ತದೆ. ಯೂನಿವರ್ಸಿಟಿಯ ಸೆಲ್ಲರ್‍ನ್ನು ನಿಜವಾದ ಜೈಲಿನ ರೀತಿಯಲ್ಲಿ ಪರಿವರ್ತಿಸಿ ಸದರಿ ಪ್ರಯೋಗಕ್ಕೆ ಬಳಸಿಕೊಳ್ಳಲಾಗುತ್ತದೆ.

ಹನ್ನೆರಡು ಜನರ ಸೆರೆವಾಸಿಗಳಿಗೆ ಹೆಸರಿನ ಬದಲಾಗಿ ನಂಬರ್‍ಗಳನ್ನು, ಸೆರೆವಾಸಿಗಳ ಯೂನಿಫಾರಂನ್ನು ನೀಡಲಾಗಿರುತ್ತದೆ. ಅದೇ ರೀತಿ ಜೈಲರ್‍ಗಳಿಗೂ ಸಹ ನಿಜವಾದ ಜೈಲರ್‍ಗಳಿಗೆ ನೀಡಲಾಗುವ ಸಮವಸ್ತ್ರ ಮತ್ತು ಪರಿಕರಗಳನ್ನು ನೀಡಲಾಗುತ್ತದೆ.

ಜೊತೆಯಲ್ಲಿ ಊಟ ಮಾಡುತ್ತಿದ್ದ, ಜೊತೆಯಲ್ಲಿ ಪಾಠ ಕೇಳುತ್ತಿದ್ದ, ಜೊತೆಯಲ್ಲಿ ಸಹ ಜೀವನ ನಡೆಸುತ್ತಿದ್ದ ವ್ಯಕ್ತಿಗಳಲ್ಲಿನ ಒಂದು ತಂಡಕ್ಕೆ ‘ಅಧಿಕಾರ’ ಸಿಕ್ಕಕೂಡಲೇ ಯಾವ ರೀತಿಯಲ್ಲಿ ವರ್ತಿಸತೊಡಗುತ್ತಾರೆ ಎಂಬುದೇ ಪ್ರಯೋಗದ ಉದ್ದೇಶ.

ಸ್ವತಃ ಪ್ರೊಫೆಸರ್ ಫಿಲಿಪ್ ಜಿಂಬರ್‍ಡೊ ಜೈಲಿನ ಸೂಪರಿಂಟೆಂಡೆಟ್ ಆಗಿ ಜೈಲರ್‍ಗಳನ್ನು ಮುನ್ನಡೆಸುತ್ತಿರುತ್ತಾನೆ. 15 ದಿನಗಳ ಕಾಲದ ಈ ಪ್ರಯೋಗ ಜೈಲರ್‍ಗಳ ಮಿತಿಮೀರಿದ ಅಧಿಕಾರದ ದುರ್ಬಳಕೆಯ ಕಾರಣ 6ನೇ ದಿವಸಕ್ಕೇ ಕೊನೆಯಾಗಬೇಕಾಗುತ್ತದೆ.

ಈ ಪ್ರಯೋಗದ ಬಗ್ಗೆ ಹಲವಾರು ಟೀಕೆ ವಿಮರ್ಶೆಗಳೆದುರು ಸಹ ಅಧಿಕಾರ ಮತ್ತು ‘ಪ್ರಭುತ್ವ’ವನ್ನು ಅರ್ಥ ಮಾಡಿಕೊಳ್ಳಲು ಇದು ಸ್ಪಷ್ಟವಾದ ನಿದರ್ಶನವಾಗಿದೆ.

ಇವತ್ತು ದೇಶದಲ್ಲಿ ಒಟ್ಟಿಗೆ ಬೆಳೆದ, ಒಟ್ಟಿಗೆ ಆಟವಾಡಿದ, ಒಟ್ಟಿಗೆ ಬದುಕು ಕಟ್ಟಿಕೊಂಡ ಸ್ನೇಹಿತರ ನಡುವೆ ಜೈಲರ್‍ಗಳು ಮತ್ತು ಸೆರೆವಾಸಿಗಳು ಎಂಬ ಸ್ಪಷ್ಟವಾದ ವಿಭಾಗ ಉಂಟಾಗಿದೆ.

ಈ ಸೊಕಾಲ್ಡ್ ಜೈಲರ್‍ಗಳು ತಮ್ಮನ್ನು ತಾವೇ ಅಪರಿಮಿತ ಅಧಿಕಾರವುಳ್ಳ ದೇಶಭಕ್ತರೆಂದು, ಗೋರಕ್ಷಕರೆಂದೂ, ಈ ದೇಶದ ನಿಜವಾದ ರಕ್ಷಕರೆಂದೂ ಬಿಂಬಿಸಿಕೊಂಡಿದ್ದಾರೆ. ವಾಟ್ಸಾಪ್, ಫೇಸ್‍ಬುಕ್, ಸಮಾಜ ಎಲ್ಲಾ ಕಡೆ ತನ್ನ ರಾಜಕೀಯ ವಿರೋಧಿಗಳನ್ನು ತನ್ನ ವಿಚಾರಧಾರೆಯ ವಿರೋಧಿಗಳನ್ನು ಸೆರೆಯಾಳುಗಳ ರೀತಿಯಲ್ಲಿ ಭಾವಿಸಿ ಬಗ್ಗುಬಡಿಯಲೆತ್ನಿಸುತ್ತಿದ್ದಾರೆ. ಅವರುಗಳ ವಿರುದ್ಧ ಸುಳ್ಳುಗಳನ್ನು ಸೃಷ್ಟಿಸಿ ದೇಶವಿರೋಧಿಗಳು, ತುಕಡೆ ತುಕಡೆ ಗ್ಯಾಂಗ್, ಕಾಂಗಿ, ಕಮ್ಮಿ, ಹುಸಿ ಜಾತ್ಯಾತೀತರೆಂದು ಕರೆದು ವಿವಿಧ ರೀತಿಯ ಮಾನಸಿಕ ಹಿಂಸೆ ಮತ್ತು ಒತ್ತಡ ಹೇರುವ ಕೆಲಸದಲ್ಲಿ ನಿರತವಾಗಿದೆ.

ಸ್ಟಾನ್‍ಫೋರ್ಡ್ ಪ್ರಿಸನ್ ಎಕ್ಸ್‍ಪೆರಿಮೆಂಟ್ (ಎಸ್.ಪಿ.ಎ) ಹದಿನೈದು ದಿನ ನಡೆಯಬೇಕಾದ ಪ್ರಯೋಗ ‘ಅಧಿಕಾರ’ದ ಅಪರಿಮಿತ ದುರ್ಬಳಕೆಯ ಕಾರಣ ಆರು ದಿವಸಕ್ಕೆ ಮುಕ್ತಾಯವಾಯಿತು. ಅದೇ ರೀತಿಯಲ್ಲಿ ಇಂದು ದೇಶದಲ್ಲಿ ನಡೆಯುತ್ತಿರುವ ಪ್ರಯೋಗ ಸಹ ಅದಷ್ಟು ಬೇಗ ಮುಕ್ತಾಯಗೊಳ್ಳಲಿ ಎಂಬುದಷ್ಟೇ ಸದ್ಯದ ಆಶಯ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...