Homeಅಂಕಣಗಳುರಾಜಕೀಯ ರಣಹದ್ದುಗಳಿಗೆ ಆಹಾರವಾಗಬೇಡಿ!

ರಾಜಕೀಯ ರಣಹದ್ದುಗಳಿಗೆ ಆಹಾರವಾಗಬೇಡಿ!

- Advertisement -
- Advertisement -

ಕುಮಾರಸ್ವಾಮಿಯವರ ನೇತೃತ್ವದಲ್ಲಿ ಆಡಳಿತ ನಡೆಸುತ್ತಿರುವ ಸಂಯುಕ್ತ ಸರ್ಕಾರ ದಕ್ಷತೆಯಿಂದ ನಡೆಯಬೇಕೆಂಬುದು ನಮ್ಮೆಲ್ಲರ ಬಯಕೆ. ಎರಡೂ ಪಕ್ಷಗಳು ಕ್ಯಾತೆ ತೆಗೆದು ಬೀದಿ ಹಗರಣ ಮಾಡುವುದನ್ನು ಕೂಡಲೆ ಬಂದ್ ಮಾಡಬೇಕು. ಪ್ರಣಾಳಿಕೆಗಳ ಅನುಷ್ಠಾನ ಸಮಿತಿ ಹಾಗೂ ಸಮನ್ವಯ ಸಮಿತಿಗಳು ಅನುಷ್ಠಾನಕ್ಕೆ ಬಂದಿವೆ. ಈ ಎರಡು ಸಮಿತಿಗಳು ಕಾಲಕಾಲಕ್ಕೆ ಸಭೆ ಸೇರಿ ಮುಖ್ಯಮಂತ್ರಿಯವರಿಗೆ ಸೂಕ್ತ ಸಲಹೆ, ಸೂಚನೆಗಳನ್ನು ನೀಡಿ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು. ಯಾವುದೇ ಕಾರಣಕ್ಕೆ ಶಾಸಕರಾಗಲಿ, ಮಂತ್ರಿಗಳಾಗಲಿ, ಪುಢಾರಿಗಳಾಗಲಿ ಸುದ್ದಿ ಮಾಧ್ಯಮ ಮತ್ತು ದೃಶ್ಯ ಮಾಧ್ಯಮಗಳಿಗೆ ದೂರುಕೊಡುವ ಹೇಳಿಕೆಗಳನ್ನು ನೀಡಬಾರದು. ಸಂಯುಕ್ತ ಸರ್ಕಾರದಲ್ಲಿ ತಪ್ಪುಗಳಾದಾಗ ಈ ಸಮಿತಿಗಳು ಮುಖ್ಯಮಂತ್ರಿಯವರನ್ನು ಕರೆದು ಕೂರಿಸಿಕೊಂಡು ಸೌಹಾರ್ದದಿಂದ ತಪ್ಪನ್ನು ಸರಿಪಡಿಸುವ ಕೆಲಸ ಆಗಬೇಕು.
ಈ ಸಂಯುಕ್ತ ಸರ್ಕಾರ ಆದರ್ಶ ರೀತಿಯಲ್ಲಿ ನಡೆಯಬೇಕು. ಉಭಯ ಪಕ್ಷಗಳಲ್ಲಿರುವ ಕಳಂಕಿತ ಶಾಸಕರಿಗೆ ಸರ್ಕಾರದ ಕೆಲಸದಲ್ಲಿ ಹಸ್ತಕ್ಷೇಪ ಮಾಡದಂತೆ ತಾಕೀತು ಮಾಡಬೇಕು. ಕ್ರಿಮಿನಲ್ ಕೇಸುಗಳಲ್ಲಿ ಸಿಕ್ಕಿಹಾಕಿಕೊಂಡಿರುವ ಸಚಿವರಿಗೆ ತಪ್ಪುದಾರಿಗೆ ಹೋದರೆ, ಭ್ರಷ್ಟಾಚಾರದಲ್ಲಿ ತೊಡಗಿದರೆ ಅಧಿಕಾರಿಗಳನ್ನು ದಾರಿತಪ್ಪಿಸಿದರೆ, ಅವರಿಗೆ ಮಾಡಬಾರದ್ದನ್ನು ಮಾಡಲು ಯತ್ನಿಸಿದರೆ ಕೂಡಲೇ ಅಂತಹ ಕಳಂಕಿತರನ್ನು ಮಂತ್ರಿಮಂಡಲದಿಂದ ಹೊರದೂಡಲು ಹಿಂದು-ಮುಂದು ನೋಡಬಾರದು. ಆಗ ರಾಜ್ಯಾಡಳಿತಕ್ಕೆ ಒಳ್ಳೆಯ ಹೆಸರು ಬರುತ್ತದೆ ಮತ್ತು ಈ ಎರಡೂ ಸಂಸ್ಥೆಗಳ ಬಗೆಗೆ ಮತದಾರರು ಒಲವು ತೋರಿಸುತ್ತಾರೆ.
ಮಂತ್ರಿಗಳ, ಶಾಸಕರ ತಪ್ಪುಗಳನ್ನು ಮುಚ್ಚಿ ಹಾಕಲು ಸರ್ಕಾರ ತೊಡಗಿದರೆ ಈ ಸರ್ಕಾರದ ಬಗೆಗೆ ಜನ ತಿರಸ್ಕಾರ ಸೂಚಿಸುತ್ತಾರೆ ಮತ್ತು ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ. ಇದು ಜ್ಞಾಪಕವಿರರಲಿ.
ಭಾರತೀಯ ಜನತಾ ಪಕ್ಷ ರಣಹದ್ದಿನಂತೆ ಕಾಯುತ್ತಿದೆ. ಸರ್ಕಾರದಲ್ಲಿ ಒಡಕು ಬಂದು ಛಿದ್ರವಾಗಿ ಬಿಡಲಿ ಎಂದು ಭಜನೆ ಮಾಡುತ್ತಿದ್ದಾರೆ. ಆ ರಣಹದ್ದುಗಳಿಗೆ ಆಹಾರವಾಗದಂತೆ ನಡೆÀದುಕೊಳ್ಳಿ. ನೀವು ಅಧಿಕಾರ ಕಳೆದುಕೊಳ್ಳುವುದಷ್ಟೇ ಆದರೆ ಪ್ರಜೆಗಳಿಗೆ ಅಷ್ಟೇನೂ ನಷ್ಟವಿಲ್ಲ. ಆದರೆ ನಿಮ್ಮ ಕಾರ್ಯವಿಧಾನದಿಂದ ಸಾರ್ವಜನಿಕರು ತಲೆತಗ್ಗಿಸಬೇಕಾಗುತ್ತದೆ. ಇದಕ್ಕೆ ಅವಕಾಶ ಕೊಡಬೇಡಿ.
ಮುಖ್ಯಮಂತ್ರಿಗಳಿಗೊಂದು ವಿನಂತಿ. ನೀವು ಯಾವುದೇ ಕಾರಣಕ್ಕೂ ನಿಮ್ಮ ಆಡಳಿತ ಕಳಂಕಿತವಾಗುವುದಕ್ಕೆ ಎಡೆ ಮಾಡಿಕೊಡಬೇಡಿ. ದುಷ್ಟ, ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ ನೀಡಬೇಡಿ. ಲೋಕಾಯುಕ್ತರು, ಎಸಿಬಿ ಹಲವಾರು ಭ್ರಷ್ಟ ಅಧಿಕಾರಿಗಳು ನ್ಯಾಯಯುತರಾದವರಿಗಿಂತ ಹೆಚ್ಚಿನ ಆಸ್ತಿಯನ್ನು ಹೊಂದಿರುವವರ ಮನೆಗಳ ಮೇಲೆ ದಾಳಿ ಮಾಡಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಈ ಅಧಿಕಾರಿಗಳ ಮೇಲೆ ಅಪರಾಧದ ಪಟ್ಟಿ ಸಿದ್ಧಮಾಡಿ ನ್ಯಾಯಾಲಯಕ್ಕೆ ಒಪ್ಪಿಸಲು ಸರ್ಕಾರದ ಅನುಮತಿ ಕೇಳಿದ್ದಾರೆ. ಲೋಕಾಯುಕ್ತರ ಈ ಪಟ್ಟಿ ಸರ್ಕಾರಕ್ಕೆ ತಲುಪಿ ನಾಲ್ಕು ವರ್ಷಗಳೇ ಆಗಿದ್ದರೂ ಅವುಗಳನ್ನು ತಮ್ಮಲ್ಲೇ ಇಟ್ಟುಕೊಂಡು ಆ ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ ನೀಡಲಾಗುತ್ತಿದೆ. ಆ ಫೈಲುಗಳನ್ನು ತರಿಸಿ ಪರಾಂಬರಿಸಿ ಶೀಘ್ರದಲ್ಲೇ ಲೋಕಾಯುಕ್ತರಿಗೆ ಅವರ ಮೇಲೆ ಖಟ್ಲೆ ಹೂಡಬಹುದೆಂದು ಪತ್ರ ಬರೆಯಿರಿ. ಈ ಕೆಲಸ ಕೂಡಲೇ ನೀವು ಮಾಡಲಿಲ್ಲವಾದರೆ…? ನೀವೂ ಕೂಡ ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ನಿಂತಿದ್ದೀರಿ ಎಂಬ ಕಳಂಕ ಹೊರಬೇಕಾದೀತು.
ಎ.ಟಿ ರಾಮಸ್ವಾಮಿ ವರದಿಯನ್ನು ಸರ್ಕಾರ ಅಂಗೀಕರಿಸಿದ್ದರೂ ವರದಿಯಲ್ಲಿ ಉಲ್ಲೇಖಿತವಾಗಿರುವ ಯಾವ ಭೂಗಳ್ಳರಿಗೂ ಇದುವರೆಗೆ ಶಿಕ್ಷೆಯಾಗಿಲ್ಲ. ಈ ಭೂಗಳ್ಳರಲ್ಲಿ ಶಾಸಕರಿದ್ದಾರೆ. ಸರ್ಕಾರದ ಉನ್ನತಾಧಿಕಾರಿಗಳಿದ್ದಾರೆ, ಬಿಲ್ಡರ್‍ಗಳಿದ್ದಾರೆ, ರಿಯಲ್‍ಎಸ್ಟೇಟ್ ಮಾಫಿಯಾದವರಿದ್ದಾರೆ. ಈ ಹತ್ತು ವರ್ಷಗಳ ಕಾಲದಿಂದ ಅಧಿಕಾರದಲ್ಲಿದ್ದ ಯಾವ ಮಂತ್ರಿಯಾಗಲಿ, ಮುಖ್ಯಮಂತ್ರಿಯಾಗÀಲಿ ಈ ಹಗರಣಗಳನ್ನು ತೀವ್ರವಾಗಿ ಗಮನಿಸಿಲ್ಲ. ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಕಾಲದಲ್ಲಿ ಎ.ಟಿ ರಾಮಸ್ವಾಮಿಯವರ ನೇತೃತ್ವದಲ್ಲಿ ನಾವು 39 ದಿನ ಸತತ ಧರಣಿ ನಡೆಸಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲು ಸಿದ್ದರಾಮಯ್ಯರನ್ನು ಒಪ್ಪಿಸಿದೆವು. ಅವರು ಅರೆಮನಸ್ಸಿನಿಂದ ನ್ಯಾಯಾಲಯ ಸ್ಥಾಪನೆ ಮಾಡಿಸಿ, ತಾವೇ ಅದರ ಉದ್ಘಾಟನೆಯನ್ನು ನೆರವೇರಿಸಿದರು. ಆದರೆ ಒಂದು ವರ್ಷಗಳ ಕಾಲ ನ್ಯಾಯಾಧೀಶರಿಗೆ ನೌಕರರಿಗೆ ಸಂಬಳವನ್ನೇ ನೀಡಲಿಲ್ಲ. ನ್ಯಾಯಾಲಯದ ಖರ್ಚಿಗೆ ಹಣ ಬಿಡುಗಡೆ ಮಾಡಲಿಲ್ಲ. ಅಷ್ಟೇ ಅಲ್ಲ, ಜಿಲ್ಲಾಧಿಕಾರಿಗಳು ಯಾವುದೇ ಕೇಸನ್ನು ಅವರ ಮುಂದೆ ಮಂಡಿಸಲಿಲ್ಲ. ಮೂರು ವರ್ಷದ ಅವಧಿಗೆ ನೇಮಕರಾದ ನ್ಯಾಯಾಧೀಶರು ಎರಡು ವರ್ಷಕಾಲ ನ್ಯಾಯಾಲಯವನ್ನು ನಡೆಸಲು ಸಾಧ್ಯವಾಯಿತು. ಈಗ ಈ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಅವಧಿ ಮುಗಿಯುತ್ತಾ ಬಂದಿದೆ. ಕುಮಾರಸ್ವಾಮಿಯವರು ಈ ಖಾಲಿಯಾಗುವ ಸ್ಥಾನಗಳಿಗೆ ದಕ್ಷರನ್ನು ಭರ್ತಿಮಾಡಿ ಎ.ಟಿ ರಾಮಸ್ವಾಮಿಯವರ ವರದಿಯಲ್ಲಿ ನಮೂದಾಗಿರುವ ಭೂಗಳ್ಳರ ವಿಚಾರಣೆಯನ್ನು ನಿಮ್ಮ ಅಧಿಕಾರದ ಅವಧಿಯಲ್ಲಿ ಮುಗಿಯಲು ಕ್ರಮ ಕೈಗೊಳ್ಳಬೇಕೆಂದು ಪ್ರಾರ್ಥನೆ.
ಭಾಜಪ ಸರ್ಕಾರ ನಡೆದಾಗ ವಿಶೇಷ ಜಿಲ್ಲಾಧಿಕಾರಿಗಳನ್ನು ಸರ್ಕಾರ ನೇಮಿಸಿತು. ಅವರೆಲ್ಲ ಬೆಂಗಳೂರು ನಗರ ಜಿಲ್ಲೆ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಸರ್ಕಾರಕ್ಕೆ ಸೇರಿದ ಸುಮಾರು 40 ಸಾವಿರ ಎಕರೆ ಹುಲ್ಲುಗಾವಲು, ಕೆರೆ ಅಂಗಳ, ಗುಂಡುತೋಪು, ಖರಾಬ್ ಜಮೀನು ಕೊನೆಗೆ ಸ್ಮಶಾನಗಳನ್ನೂ ಹಂಚಿಬಿಟ್ಟರು. ಉಚ್ಛನ್ಯಾಯಾಲಯಕ್ಕೆ ವಿಶೇಷ ಜಿಲ್ಲಾಧಿಕಾರಿಗಳನ್ನು ಸೃಷ್ಟಿಸಿ ಅವರಿಗೆ ಜಿಲ್ಲಾಧಿಕಾರಿಗಳ ಅಧಿಕಾರ ನೀಡುವ ಅಧಿಕಾರವೇ ಇಲ್ಲ. ಅಲ್ಲದೆ ಕಾನೂನು ಮೀರಿ ನಡೆಯುವ ಈ ವಿಶೇಷ ಜಿಲ್ಲಾಧಿಕಾರಿಗಳು, cordoned the limelight in a prominent way. The frequency of their indulgence in passing arbitrary, whimsical and utracious orders have been passed ಎಂದು ಕರ್ನಾಟಕ ಉಚ್ಛನ್ಯಾಯಾಲಯ ತಿಳಿಸಿದೆ.
ಈಗ ಈ ವಿಶೇಷ ಜಿಲ್ಲಾಧಿಕಾರಿಗಳ ಹುದ್ದೆಗಳು ರದ್ದಾಗಿವೆ, ಅವರ ಸ್ಥಾನದಲ್ಲಿ ಇಬ್ಬರು ವಿಶೇಷ ಜಿಲ್ಲಾಧಿಕಾರಿಗಳು ಜಿಲ್ಲಾಧಿಕಾರಿಗಳ ಜೊತೆಗೆ ಕೆಲಸ ಮಾಡುತ್ತಿದ್ದಾರೆ. ಅವರು ಮಂದಗತಿಯಲ್ಲಿ ತೆರವು ಕಾರ್ಯ ನಡೆಸುತ್ತಿದ್ದಾರೆ. ಅವರಿಗೆ ಒಂದು ನಿರ್ದಿಷ್ಟ ಕಾಲಾವಧಿಯಲ್ಲಿ ಈ ಕೆಲಸ ಮುಗಿಸಬೇಕೆಂದು ಕುಮಾರಸ್ವಾಮಿಯವರು ಅವರಿಗೆ ಆಜ್ಞೆ ಮಾಡಬೇಕು. ಈ ವಿಶೇಷ ಜಿಲ್ಲಾಧಿಕಾರಿಗಳನ್ನು ಪದೇಪದೇ ವರ್ಗಾವಣೆ ಮಾಡುತ್ತಿರುವುದೂ, ಶನಿವಾರ ದಿನ ಮಾತ್ರ ತೆರವುಗೊಳಿಸುವ ಕೆಲಸ ನಡೆಯುತ್ತಿರುವುದೂ ಈ ಕೆಲಸ ಸುಸೂತ್ರವಾಗಿ ನಡೆಯದಿರಲು ಕಾರಣವಾಗಿದೆ. ಈ ವಿಶೇಷ ಜಿಲ್ಲಾಧಿಕಾರಿಗಳನ್ನು ಈ ಕೆಲಸ ಮುಗಿಸುವವರೆಗೂ ವರ್ಗ ಮಾಡದೆ ಬಿಟ್ಟರೆ ಕ್ಷಿಪ್ರವಾಗಿ ಗುರಿಮುಟ್ಟಬಹುದು ಎಂಬುದು ನನ್ನ ಅನಿಸಿಕೆ.

– ಹೆಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...