Homeಅಂಕಣಗಳುರಾಜಕೀಯ ರಣಹದ್ದುಗಳಿಗೆ ಆಹಾರವಾಗಬೇಡಿ!

ರಾಜಕೀಯ ರಣಹದ್ದುಗಳಿಗೆ ಆಹಾರವಾಗಬೇಡಿ!

- Advertisement -
- Advertisement -

ಕುಮಾರಸ್ವಾಮಿಯವರ ನೇತೃತ್ವದಲ್ಲಿ ಆಡಳಿತ ನಡೆಸುತ್ತಿರುವ ಸಂಯುಕ್ತ ಸರ್ಕಾರ ದಕ್ಷತೆಯಿಂದ ನಡೆಯಬೇಕೆಂಬುದು ನಮ್ಮೆಲ್ಲರ ಬಯಕೆ. ಎರಡೂ ಪಕ್ಷಗಳು ಕ್ಯಾತೆ ತೆಗೆದು ಬೀದಿ ಹಗರಣ ಮಾಡುವುದನ್ನು ಕೂಡಲೆ ಬಂದ್ ಮಾಡಬೇಕು. ಪ್ರಣಾಳಿಕೆಗಳ ಅನುಷ್ಠಾನ ಸಮಿತಿ ಹಾಗೂ ಸಮನ್ವಯ ಸಮಿತಿಗಳು ಅನುಷ್ಠಾನಕ್ಕೆ ಬಂದಿವೆ. ಈ ಎರಡು ಸಮಿತಿಗಳು ಕಾಲಕಾಲಕ್ಕೆ ಸಭೆ ಸೇರಿ ಮುಖ್ಯಮಂತ್ರಿಯವರಿಗೆ ಸೂಕ್ತ ಸಲಹೆ, ಸೂಚನೆಗಳನ್ನು ನೀಡಿ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು. ಯಾವುದೇ ಕಾರಣಕ್ಕೆ ಶಾಸಕರಾಗಲಿ, ಮಂತ್ರಿಗಳಾಗಲಿ, ಪುಢಾರಿಗಳಾಗಲಿ ಸುದ್ದಿ ಮಾಧ್ಯಮ ಮತ್ತು ದೃಶ್ಯ ಮಾಧ್ಯಮಗಳಿಗೆ ದೂರುಕೊಡುವ ಹೇಳಿಕೆಗಳನ್ನು ನೀಡಬಾರದು. ಸಂಯುಕ್ತ ಸರ್ಕಾರದಲ್ಲಿ ತಪ್ಪುಗಳಾದಾಗ ಈ ಸಮಿತಿಗಳು ಮುಖ್ಯಮಂತ್ರಿಯವರನ್ನು ಕರೆದು ಕೂರಿಸಿಕೊಂಡು ಸೌಹಾರ್ದದಿಂದ ತಪ್ಪನ್ನು ಸರಿಪಡಿಸುವ ಕೆಲಸ ಆಗಬೇಕು.
ಈ ಸಂಯುಕ್ತ ಸರ್ಕಾರ ಆದರ್ಶ ರೀತಿಯಲ್ಲಿ ನಡೆಯಬೇಕು. ಉಭಯ ಪಕ್ಷಗಳಲ್ಲಿರುವ ಕಳಂಕಿತ ಶಾಸಕರಿಗೆ ಸರ್ಕಾರದ ಕೆಲಸದಲ್ಲಿ ಹಸ್ತಕ್ಷೇಪ ಮಾಡದಂತೆ ತಾಕೀತು ಮಾಡಬೇಕು. ಕ್ರಿಮಿನಲ್ ಕೇಸುಗಳಲ್ಲಿ ಸಿಕ್ಕಿಹಾಕಿಕೊಂಡಿರುವ ಸಚಿವರಿಗೆ ತಪ್ಪುದಾರಿಗೆ ಹೋದರೆ, ಭ್ರಷ್ಟಾಚಾರದಲ್ಲಿ ತೊಡಗಿದರೆ ಅಧಿಕಾರಿಗಳನ್ನು ದಾರಿತಪ್ಪಿಸಿದರೆ, ಅವರಿಗೆ ಮಾಡಬಾರದ್ದನ್ನು ಮಾಡಲು ಯತ್ನಿಸಿದರೆ ಕೂಡಲೇ ಅಂತಹ ಕಳಂಕಿತರನ್ನು ಮಂತ್ರಿಮಂಡಲದಿಂದ ಹೊರದೂಡಲು ಹಿಂದು-ಮುಂದು ನೋಡಬಾರದು. ಆಗ ರಾಜ್ಯಾಡಳಿತಕ್ಕೆ ಒಳ್ಳೆಯ ಹೆಸರು ಬರುತ್ತದೆ ಮತ್ತು ಈ ಎರಡೂ ಸಂಸ್ಥೆಗಳ ಬಗೆಗೆ ಮತದಾರರು ಒಲವು ತೋರಿಸುತ್ತಾರೆ.
ಮಂತ್ರಿಗಳ, ಶಾಸಕರ ತಪ್ಪುಗಳನ್ನು ಮುಚ್ಚಿ ಹಾಕಲು ಸರ್ಕಾರ ತೊಡಗಿದರೆ ಈ ಸರ್ಕಾರದ ಬಗೆಗೆ ಜನ ತಿರಸ್ಕಾರ ಸೂಚಿಸುತ್ತಾರೆ ಮತ್ತು ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ. ಇದು ಜ್ಞಾಪಕವಿರರಲಿ.
ಭಾರತೀಯ ಜನತಾ ಪಕ್ಷ ರಣಹದ್ದಿನಂತೆ ಕಾಯುತ್ತಿದೆ. ಸರ್ಕಾರದಲ್ಲಿ ಒಡಕು ಬಂದು ಛಿದ್ರವಾಗಿ ಬಿಡಲಿ ಎಂದು ಭಜನೆ ಮಾಡುತ್ತಿದ್ದಾರೆ. ಆ ರಣಹದ್ದುಗಳಿಗೆ ಆಹಾರವಾಗದಂತೆ ನಡೆÀದುಕೊಳ್ಳಿ. ನೀವು ಅಧಿಕಾರ ಕಳೆದುಕೊಳ್ಳುವುದಷ್ಟೇ ಆದರೆ ಪ್ರಜೆಗಳಿಗೆ ಅಷ್ಟೇನೂ ನಷ್ಟವಿಲ್ಲ. ಆದರೆ ನಿಮ್ಮ ಕಾರ್ಯವಿಧಾನದಿಂದ ಸಾರ್ವಜನಿಕರು ತಲೆತಗ್ಗಿಸಬೇಕಾಗುತ್ತದೆ. ಇದಕ್ಕೆ ಅವಕಾಶ ಕೊಡಬೇಡಿ.
ಮುಖ್ಯಮಂತ್ರಿಗಳಿಗೊಂದು ವಿನಂತಿ. ನೀವು ಯಾವುದೇ ಕಾರಣಕ್ಕೂ ನಿಮ್ಮ ಆಡಳಿತ ಕಳಂಕಿತವಾಗುವುದಕ್ಕೆ ಎಡೆ ಮಾಡಿಕೊಡಬೇಡಿ. ದುಷ್ಟ, ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ ನೀಡಬೇಡಿ. ಲೋಕಾಯುಕ್ತರು, ಎಸಿಬಿ ಹಲವಾರು ಭ್ರಷ್ಟ ಅಧಿಕಾರಿಗಳು ನ್ಯಾಯಯುತರಾದವರಿಗಿಂತ ಹೆಚ್ಚಿನ ಆಸ್ತಿಯನ್ನು ಹೊಂದಿರುವವರ ಮನೆಗಳ ಮೇಲೆ ದಾಳಿ ಮಾಡಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಈ ಅಧಿಕಾರಿಗಳ ಮೇಲೆ ಅಪರಾಧದ ಪಟ್ಟಿ ಸಿದ್ಧಮಾಡಿ ನ್ಯಾಯಾಲಯಕ್ಕೆ ಒಪ್ಪಿಸಲು ಸರ್ಕಾರದ ಅನುಮತಿ ಕೇಳಿದ್ದಾರೆ. ಲೋಕಾಯುಕ್ತರ ಈ ಪಟ್ಟಿ ಸರ್ಕಾರಕ್ಕೆ ತಲುಪಿ ನಾಲ್ಕು ವರ್ಷಗಳೇ ಆಗಿದ್ದರೂ ಅವುಗಳನ್ನು ತಮ್ಮಲ್ಲೇ ಇಟ್ಟುಕೊಂಡು ಆ ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ ನೀಡಲಾಗುತ್ತಿದೆ. ಆ ಫೈಲುಗಳನ್ನು ತರಿಸಿ ಪರಾಂಬರಿಸಿ ಶೀಘ್ರದಲ್ಲೇ ಲೋಕಾಯುಕ್ತರಿಗೆ ಅವರ ಮೇಲೆ ಖಟ್ಲೆ ಹೂಡಬಹುದೆಂದು ಪತ್ರ ಬರೆಯಿರಿ. ಈ ಕೆಲಸ ಕೂಡಲೇ ನೀವು ಮಾಡಲಿಲ್ಲವಾದರೆ…? ನೀವೂ ಕೂಡ ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ನಿಂತಿದ್ದೀರಿ ಎಂಬ ಕಳಂಕ ಹೊರಬೇಕಾದೀತು.
ಎ.ಟಿ ರಾಮಸ್ವಾಮಿ ವರದಿಯನ್ನು ಸರ್ಕಾರ ಅಂಗೀಕರಿಸಿದ್ದರೂ ವರದಿಯಲ್ಲಿ ಉಲ್ಲೇಖಿತವಾಗಿರುವ ಯಾವ ಭೂಗಳ್ಳರಿಗೂ ಇದುವರೆಗೆ ಶಿಕ್ಷೆಯಾಗಿಲ್ಲ. ಈ ಭೂಗಳ್ಳರಲ್ಲಿ ಶಾಸಕರಿದ್ದಾರೆ. ಸರ್ಕಾರದ ಉನ್ನತಾಧಿಕಾರಿಗಳಿದ್ದಾರೆ, ಬಿಲ್ಡರ್‍ಗಳಿದ್ದಾರೆ, ರಿಯಲ್‍ಎಸ್ಟೇಟ್ ಮಾಫಿಯಾದವರಿದ್ದಾರೆ. ಈ ಹತ್ತು ವರ್ಷಗಳ ಕಾಲದಿಂದ ಅಧಿಕಾರದಲ್ಲಿದ್ದ ಯಾವ ಮಂತ್ರಿಯಾಗಲಿ, ಮುಖ್ಯಮಂತ್ರಿಯಾಗÀಲಿ ಈ ಹಗರಣಗಳನ್ನು ತೀವ್ರವಾಗಿ ಗಮನಿಸಿಲ್ಲ. ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಕಾಲದಲ್ಲಿ ಎ.ಟಿ ರಾಮಸ್ವಾಮಿಯವರ ನೇತೃತ್ವದಲ್ಲಿ ನಾವು 39 ದಿನ ಸತತ ಧರಣಿ ನಡೆಸಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲು ಸಿದ್ದರಾಮಯ್ಯರನ್ನು ಒಪ್ಪಿಸಿದೆವು. ಅವರು ಅರೆಮನಸ್ಸಿನಿಂದ ನ್ಯಾಯಾಲಯ ಸ್ಥಾಪನೆ ಮಾಡಿಸಿ, ತಾವೇ ಅದರ ಉದ್ಘಾಟನೆಯನ್ನು ನೆರವೇರಿಸಿದರು. ಆದರೆ ಒಂದು ವರ್ಷಗಳ ಕಾಲ ನ್ಯಾಯಾಧೀಶರಿಗೆ ನೌಕರರಿಗೆ ಸಂಬಳವನ್ನೇ ನೀಡಲಿಲ್ಲ. ನ್ಯಾಯಾಲಯದ ಖರ್ಚಿಗೆ ಹಣ ಬಿಡುಗಡೆ ಮಾಡಲಿಲ್ಲ. ಅಷ್ಟೇ ಅಲ್ಲ, ಜಿಲ್ಲಾಧಿಕಾರಿಗಳು ಯಾವುದೇ ಕೇಸನ್ನು ಅವರ ಮುಂದೆ ಮಂಡಿಸಲಿಲ್ಲ. ಮೂರು ವರ್ಷದ ಅವಧಿಗೆ ನೇಮಕರಾದ ನ್ಯಾಯಾಧೀಶರು ಎರಡು ವರ್ಷಕಾಲ ನ್ಯಾಯಾಲಯವನ್ನು ನಡೆಸಲು ಸಾಧ್ಯವಾಯಿತು. ಈಗ ಈ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಅವಧಿ ಮುಗಿಯುತ್ತಾ ಬಂದಿದೆ. ಕುಮಾರಸ್ವಾಮಿಯವರು ಈ ಖಾಲಿಯಾಗುವ ಸ್ಥಾನಗಳಿಗೆ ದಕ್ಷರನ್ನು ಭರ್ತಿಮಾಡಿ ಎ.ಟಿ ರಾಮಸ್ವಾಮಿಯವರ ವರದಿಯಲ್ಲಿ ನಮೂದಾಗಿರುವ ಭೂಗಳ್ಳರ ವಿಚಾರಣೆಯನ್ನು ನಿಮ್ಮ ಅಧಿಕಾರದ ಅವಧಿಯಲ್ಲಿ ಮುಗಿಯಲು ಕ್ರಮ ಕೈಗೊಳ್ಳಬೇಕೆಂದು ಪ್ರಾರ್ಥನೆ.
ಭಾಜಪ ಸರ್ಕಾರ ನಡೆದಾಗ ವಿಶೇಷ ಜಿಲ್ಲಾಧಿಕಾರಿಗಳನ್ನು ಸರ್ಕಾರ ನೇಮಿಸಿತು. ಅವರೆಲ್ಲ ಬೆಂಗಳೂರು ನಗರ ಜಿಲ್ಲೆ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಸರ್ಕಾರಕ್ಕೆ ಸೇರಿದ ಸುಮಾರು 40 ಸಾವಿರ ಎಕರೆ ಹುಲ್ಲುಗಾವಲು, ಕೆರೆ ಅಂಗಳ, ಗುಂಡುತೋಪು, ಖರಾಬ್ ಜಮೀನು ಕೊನೆಗೆ ಸ್ಮಶಾನಗಳನ್ನೂ ಹಂಚಿಬಿಟ್ಟರು. ಉಚ್ಛನ್ಯಾಯಾಲಯಕ್ಕೆ ವಿಶೇಷ ಜಿಲ್ಲಾಧಿಕಾರಿಗಳನ್ನು ಸೃಷ್ಟಿಸಿ ಅವರಿಗೆ ಜಿಲ್ಲಾಧಿಕಾರಿಗಳ ಅಧಿಕಾರ ನೀಡುವ ಅಧಿಕಾರವೇ ಇಲ್ಲ. ಅಲ್ಲದೆ ಕಾನೂನು ಮೀರಿ ನಡೆಯುವ ಈ ವಿಶೇಷ ಜಿಲ್ಲಾಧಿಕಾರಿಗಳು, cordoned the limelight in a prominent way. The frequency of their indulgence in passing arbitrary, whimsical and utracious orders have been passed ಎಂದು ಕರ್ನಾಟಕ ಉಚ್ಛನ್ಯಾಯಾಲಯ ತಿಳಿಸಿದೆ.
ಈಗ ಈ ವಿಶೇಷ ಜಿಲ್ಲಾಧಿಕಾರಿಗಳ ಹುದ್ದೆಗಳು ರದ್ದಾಗಿವೆ, ಅವರ ಸ್ಥಾನದಲ್ಲಿ ಇಬ್ಬರು ವಿಶೇಷ ಜಿಲ್ಲಾಧಿಕಾರಿಗಳು ಜಿಲ್ಲಾಧಿಕಾರಿಗಳ ಜೊತೆಗೆ ಕೆಲಸ ಮಾಡುತ್ತಿದ್ದಾರೆ. ಅವರು ಮಂದಗತಿಯಲ್ಲಿ ತೆರವು ಕಾರ್ಯ ನಡೆಸುತ್ತಿದ್ದಾರೆ. ಅವರಿಗೆ ಒಂದು ನಿರ್ದಿಷ್ಟ ಕಾಲಾವಧಿಯಲ್ಲಿ ಈ ಕೆಲಸ ಮುಗಿಸಬೇಕೆಂದು ಕುಮಾರಸ್ವಾಮಿಯವರು ಅವರಿಗೆ ಆಜ್ಞೆ ಮಾಡಬೇಕು. ಈ ವಿಶೇಷ ಜಿಲ್ಲಾಧಿಕಾರಿಗಳನ್ನು ಪದೇಪದೇ ವರ್ಗಾವಣೆ ಮಾಡುತ್ತಿರುವುದೂ, ಶನಿವಾರ ದಿನ ಮಾತ್ರ ತೆರವುಗೊಳಿಸುವ ಕೆಲಸ ನಡೆಯುತ್ತಿರುವುದೂ ಈ ಕೆಲಸ ಸುಸೂತ್ರವಾಗಿ ನಡೆಯದಿರಲು ಕಾರಣವಾಗಿದೆ. ಈ ವಿಶೇಷ ಜಿಲ್ಲಾಧಿಕಾರಿಗಳನ್ನು ಈ ಕೆಲಸ ಮುಗಿಸುವವರೆಗೂ ವರ್ಗ ಮಾಡದೆ ಬಿಟ್ಟರೆ ಕ್ಷಿಪ್ರವಾಗಿ ಗುರಿಮುಟ್ಟಬಹುದು ಎಂಬುದು ನನ್ನ ಅನಿಸಿಕೆ.

– ಹೆಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...