Homeಅಂಕಣಗಳುರಾಜಕೀಯ ರಣಹದ್ದುಗಳಿಗೆ ಆಹಾರವಾಗಬೇಡಿ!

ರಾಜಕೀಯ ರಣಹದ್ದುಗಳಿಗೆ ಆಹಾರವಾಗಬೇಡಿ!

- Advertisement -
- Advertisement -

ಕುಮಾರಸ್ವಾಮಿಯವರ ನೇತೃತ್ವದಲ್ಲಿ ಆಡಳಿತ ನಡೆಸುತ್ತಿರುವ ಸಂಯುಕ್ತ ಸರ್ಕಾರ ದಕ್ಷತೆಯಿಂದ ನಡೆಯಬೇಕೆಂಬುದು ನಮ್ಮೆಲ್ಲರ ಬಯಕೆ. ಎರಡೂ ಪಕ್ಷಗಳು ಕ್ಯಾತೆ ತೆಗೆದು ಬೀದಿ ಹಗರಣ ಮಾಡುವುದನ್ನು ಕೂಡಲೆ ಬಂದ್ ಮಾಡಬೇಕು. ಪ್ರಣಾಳಿಕೆಗಳ ಅನುಷ್ಠಾನ ಸಮಿತಿ ಹಾಗೂ ಸಮನ್ವಯ ಸಮಿತಿಗಳು ಅನುಷ್ಠಾನಕ್ಕೆ ಬಂದಿವೆ. ಈ ಎರಡು ಸಮಿತಿಗಳು ಕಾಲಕಾಲಕ್ಕೆ ಸಭೆ ಸೇರಿ ಮುಖ್ಯಮಂತ್ರಿಯವರಿಗೆ ಸೂಕ್ತ ಸಲಹೆ, ಸೂಚನೆಗಳನ್ನು ನೀಡಿ ಕಾರ್ಯ ನಿರ್ವಹಿಸಲು ಅವಕಾಶ ಮಾಡಿಕೊಡಬೇಕು. ಯಾವುದೇ ಕಾರಣಕ್ಕೆ ಶಾಸಕರಾಗಲಿ, ಮಂತ್ರಿಗಳಾಗಲಿ, ಪುಢಾರಿಗಳಾಗಲಿ ಸುದ್ದಿ ಮಾಧ್ಯಮ ಮತ್ತು ದೃಶ್ಯ ಮಾಧ್ಯಮಗಳಿಗೆ ದೂರುಕೊಡುವ ಹೇಳಿಕೆಗಳನ್ನು ನೀಡಬಾರದು. ಸಂಯುಕ್ತ ಸರ್ಕಾರದಲ್ಲಿ ತಪ್ಪುಗಳಾದಾಗ ಈ ಸಮಿತಿಗಳು ಮುಖ್ಯಮಂತ್ರಿಯವರನ್ನು ಕರೆದು ಕೂರಿಸಿಕೊಂಡು ಸೌಹಾರ್ದದಿಂದ ತಪ್ಪನ್ನು ಸರಿಪಡಿಸುವ ಕೆಲಸ ಆಗಬೇಕು.
ಈ ಸಂಯುಕ್ತ ಸರ್ಕಾರ ಆದರ್ಶ ರೀತಿಯಲ್ಲಿ ನಡೆಯಬೇಕು. ಉಭಯ ಪಕ್ಷಗಳಲ್ಲಿರುವ ಕಳಂಕಿತ ಶಾಸಕರಿಗೆ ಸರ್ಕಾರದ ಕೆಲಸದಲ್ಲಿ ಹಸ್ತಕ್ಷೇಪ ಮಾಡದಂತೆ ತಾಕೀತು ಮಾಡಬೇಕು. ಕ್ರಿಮಿನಲ್ ಕೇಸುಗಳಲ್ಲಿ ಸಿಕ್ಕಿಹಾಕಿಕೊಂಡಿರುವ ಸಚಿವರಿಗೆ ತಪ್ಪುದಾರಿಗೆ ಹೋದರೆ, ಭ್ರಷ್ಟಾಚಾರದಲ್ಲಿ ತೊಡಗಿದರೆ ಅಧಿಕಾರಿಗಳನ್ನು ದಾರಿತಪ್ಪಿಸಿದರೆ, ಅವರಿಗೆ ಮಾಡಬಾರದ್ದನ್ನು ಮಾಡಲು ಯತ್ನಿಸಿದರೆ ಕೂಡಲೇ ಅಂತಹ ಕಳಂಕಿತರನ್ನು ಮಂತ್ರಿಮಂಡಲದಿಂದ ಹೊರದೂಡಲು ಹಿಂದು-ಮುಂದು ನೋಡಬಾರದು. ಆಗ ರಾಜ್ಯಾಡಳಿತಕ್ಕೆ ಒಳ್ಳೆಯ ಹೆಸರು ಬರುತ್ತದೆ ಮತ್ತು ಈ ಎರಡೂ ಸಂಸ್ಥೆಗಳ ಬಗೆಗೆ ಮತದಾರರು ಒಲವು ತೋರಿಸುತ್ತಾರೆ.
ಮಂತ್ರಿಗಳ, ಶಾಸಕರ ತಪ್ಪುಗಳನ್ನು ಮುಚ್ಚಿ ಹಾಕಲು ಸರ್ಕಾರ ತೊಡಗಿದರೆ ಈ ಸರ್ಕಾರದ ಬಗೆಗೆ ಜನ ತಿರಸ್ಕಾರ ಸೂಚಿಸುತ್ತಾರೆ ಮತ್ತು ಸರ್ಕಾರದ ವಿರುದ್ಧ ತಿರುಗಿ ಬೀಳುತ್ತಾರೆ. ಇದು ಜ್ಞಾಪಕವಿರರಲಿ.
ಭಾರತೀಯ ಜನತಾ ಪಕ್ಷ ರಣಹದ್ದಿನಂತೆ ಕಾಯುತ್ತಿದೆ. ಸರ್ಕಾರದಲ್ಲಿ ಒಡಕು ಬಂದು ಛಿದ್ರವಾಗಿ ಬಿಡಲಿ ಎಂದು ಭಜನೆ ಮಾಡುತ್ತಿದ್ದಾರೆ. ಆ ರಣಹದ್ದುಗಳಿಗೆ ಆಹಾರವಾಗದಂತೆ ನಡೆÀದುಕೊಳ್ಳಿ. ನೀವು ಅಧಿಕಾರ ಕಳೆದುಕೊಳ್ಳುವುದಷ್ಟೇ ಆದರೆ ಪ್ರಜೆಗಳಿಗೆ ಅಷ್ಟೇನೂ ನಷ್ಟವಿಲ್ಲ. ಆದರೆ ನಿಮ್ಮ ಕಾರ್ಯವಿಧಾನದಿಂದ ಸಾರ್ವಜನಿಕರು ತಲೆತಗ್ಗಿಸಬೇಕಾಗುತ್ತದೆ. ಇದಕ್ಕೆ ಅವಕಾಶ ಕೊಡಬೇಡಿ.
ಮುಖ್ಯಮಂತ್ರಿಗಳಿಗೊಂದು ವಿನಂತಿ. ನೀವು ಯಾವುದೇ ಕಾರಣಕ್ಕೂ ನಿಮ್ಮ ಆಡಳಿತ ಕಳಂಕಿತವಾಗುವುದಕ್ಕೆ ಎಡೆ ಮಾಡಿಕೊಡಬೇಡಿ. ದುಷ್ಟ, ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ ನೀಡಬೇಡಿ. ಲೋಕಾಯುಕ್ತರು, ಎಸಿಬಿ ಹಲವಾರು ಭ್ರಷ್ಟ ಅಧಿಕಾರಿಗಳು ನ್ಯಾಯಯುತರಾದವರಿಗಿಂತ ಹೆಚ್ಚಿನ ಆಸ್ತಿಯನ್ನು ಹೊಂದಿರುವವರ ಮನೆಗಳ ಮೇಲೆ ದಾಳಿ ಮಾಡಿ ಅವರ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದಾರೆ. ಈ ಅಧಿಕಾರಿಗಳ ಮೇಲೆ ಅಪರಾಧದ ಪಟ್ಟಿ ಸಿದ್ಧಮಾಡಿ ನ್ಯಾಯಾಲಯಕ್ಕೆ ಒಪ್ಪಿಸಲು ಸರ್ಕಾರದ ಅನುಮತಿ ಕೇಳಿದ್ದಾರೆ. ಲೋಕಾಯುಕ್ತರ ಈ ಪಟ್ಟಿ ಸರ್ಕಾರಕ್ಕೆ ತಲುಪಿ ನಾಲ್ಕು ವರ್ಷಗಳೇ ಆಗಿದ್ದರೂ ಅವುಗಳನ್ನು ತಮ್ಮಲ್ಲೇ ಇಟ್ಟುಕೊಂಡು ಆ ಭ್ರಷ್ಟ ಅಧಿಕಾರಿಗಳಿಗೆ ರಕ್ಷಣೆ ನೀಡಲಾಗುತ್ತಿದೆ. ಆ ಫೈಲುಗಳನ್ನು ತರಿಸಿ ಪರಾಂಬರಿಸಿ ಶೀಘ್ರದಲ್ಲೇ ಲೋಕಾಯುಕ್ತರಿಗೆ ಅವರ ಮೇಲೆ ಖಟ್ಲೆ ಹೂಡಬಹುದೆಂದು ಪತ್ರ ಬರೆಯಿರಿ. ಈ ಕೆಲಸ ಕೂಡಲೇ ನೀವು ಮಾಡಲಿಲ್ಲವಾದರೆ…? ನೀವೂ ಕೂಡ ಭ್ರಷ್ಟ ಅಧಿಕಾರಿಗಳ ರಕ್ಷಣೆಗೆ ನಿಂತಿದ್ದೀರಿ ಎಂಬ ಕಳಂಕ ಹೊರಬೇಕಾದೀತು.
ಎ.ಟಿ ರಾಮಸ್ವಾಮಿ ವರದಿಯನ್ನು ಸರ್ಕಾರ ಅಂಗೀಕರಿಸಿದ್ದರೂ ವರದಿಯಲ್ಲಿ ಉಲ್ಲೇಖಿತವಾಗಿರುವ ಯಾವ ಭೂಗಳ್ಳರಿಗೂ ಇದುವರೆಗೆ ಶಿಕ್ಷೆಯಾಗಿಲ್ಲ. ಈ ಭೂಗಳ್ಳರಲ್ಲಿ ಶಾಸಕರಿದ್ದಾರೆ. ಸರ್ಕಾರದ ಉನ್ನತಾಧಿಕಾರಿಗಳಿದ್ದಾರೆ, ಬಿಲ್ಡರ್‍ಗಳಿದ್ದಾರೆ, ರಿಯಲ್‍ಎಸ್ಟೇಟ್ ಮಾಫಿಯಾದವರಿದ್ದಾರೆ. ಈ ಹತ್ತು ವರ್ಷಗಳ ಕಾಲದಿಂದ ಅಧಿಕಾರದಲ್ಲಿದ್ದ ಯಾವ ಮಂತ್ರಿಯಾಗಲಿ, ಮುಖ್ಯಮಂತ್ರಿಯಾಗÀಲಿ ಈ ಹಗರಣಗಳನ್ನು ತೀವ್ರವಾಗಿ ಗಮನಿಸಿಲ್ಲ. ಸಿದ್ದರಾಮಯ್ಯನವರು ಮುಖ್ಯಮಂತ್ರಿಗಳಾಗಿದ್ದ ಕಾಲದಲ್ಲಿ ಎ.ಟಿ ರಾಮಸ್ವಾಮಿಯವರ ನೇತೃತ್ವದಲ್ಲಿ ನಾವು 39 ದಿನ ಸತತ ಧರಣಿ ನಡೆಸಿ ವಿಶೇಷ ನ್ಯಾಯಾಲಯವನ್ನು ಸ್ಥಾಪಿಸಲು ಸಿದ್ದರಾಮಯ್ಯರನ್ನು ಒಪ್ಪಿಸಿದೆವು. ಅವರು ಅರೆಮನಸ್ಸಿನಿಂದ ನ್ಯಾಯಾಲಯ ಸ್ಥಾಪನೆ ಮಾಡಿಸಿ, ತಾವೇ ಅದರ ಉದ್ಘಾಟನೆಯನ್ನು ನೆರವೇರಿಸಿದರು. ಆದರೆ ಒಂದು ವರ್ಷಗಳ ಕಾಲ ನ್ಯಾಯಾಧೀಶರಿಗೆ ನೌಕರರಿಗೆ ಸಂಬಳವನ್ನೇ ನೀಡಲಿಲ್ಲ. ನ್ಯಾಯಾಲಯದ ಖರ್ಚಿಗೆ ಹಣ ಬಿಡುಗಡೆ ಮಾಡಲಿಲ್ಲ. ಅಷ್ಟೇ ಅಲ್ಲ, ಜಿಲ್ಲಾಧಿಕಾರಿಗಳು ಯಾವುದೇ ಕೇಸನ್ನು ಅವರ ಮುಂದೆ ಮಂಡಿಸಲಿಲ್ಲ. ಮೂರು ವರ್ಷದ ಅವಧಿಗೆ ನೇಮಕರಾದ ನ್ಯಾಯಾಧೀಶರು ಎರಡು ವರ್ಷಕಾಲ ನ್ಯಾಯಾಲಯವನ್ನು ನಡೆಸಲು ಸಾಧ್ಯವಾಯಿತು. ಈಗ ಈ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಅವಧಿ ಮುಗಿಯುತ್ತಾ ಬಂದಿದೆ. ಕುಮಾರಸ್ವಾಮಿಯವರು ಈ ಖಾಲಿಯಾಗುವ ಸ್ಥಾನಗಳಿಗೆ ದಕ್ಷರನ್ನು ಭರ್ತಿಮಾಡಿ ಎ.ಟಿ ರಾಮಸ್ವಾಮಿಯವರ ವರದಿಯಲ್ಲಿ ನಮೂದಾಗಿರುವ ಭೂಗಳ್ಳರ ವಿಚಾರಣೆಯನ್ನು ನಿಮ್ಮ ಅಧಿಕಾರದ ಅವಧಿಯಲ್ಲಿ ಮುಗಿಯಲು ಕ್ರಮ ಕೈಗೊಳ್ಳಬೇಕೆಂದು ಪ್ರಾರ್ಥನೆ.
ಭಾಜಪ ಸರ್ಕಾರ ನಡೆದಾಗ ವಿಶೇಷ ಜಿಲ್ಲಾಧಿಕಾರಿಗಳನ್ನು ಸರ್ಕಾರ ನೇಮಿಸಿತು. ಅವರೆಲ್ಲ ಬೆಂಗಳೂರು ನಗರ ಜಿಲ್ಲೆ ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಸರ್ಕಾರಕ್ಕೆ ಸೇರಿದ ಸುಮಾರು 40 ಸಾವಿರ ಎಕರೆ ಹುಲ್ಲುಗಾವಲು, ಕೆರೆ ಅಂಗಳ, ಗುಂಡುತೋಪು, ಖರಾಬ್ ಜಮೀನು ಕೊನೆಗೆ ಸ್ಮಶಾನಗಳನ್ನೂ ಹಂಚಿಬಿಟ್ಟರು. ಉಚ್ಛನ್ಯಾಯಾಲಯಕ್ಕೆ ವಿಶೇಷ ಜಿಲ್ಲಾಧಿಕಾರಿಗಳನ್ನು ಸೃಷ್ಟಿಸಿ ಅವರಿಗೆ ಜಿಲ್ಲಾಧಿಕಾರಿಗಳ ಅಧಿಕಾರ ನೀಡುವ ಅಧಿಕಾರವೇ ಇಲ್ಲ. ಅಲ್ಲದೆ ಕಾನೂನು ಮೀರಿ ನಡೆಯುವ ಈ ವಿಶೇಷ ಜಿಲ್ಲಾಧಿಕಾರಿಗಳು, cordoned the limelight in a prominent way. The frequency of their indulgence in passing arbitrary, whimsical and utracious orders have been passed ಎಂದು ಕರ್ನಾಟಕ ಉಚ್ಛನ್ಯಾಯಾಲಯ ತಿಳಿಸಿದೆ.
ಈಗ ಈ ವಿಶೇಷ ಜಿಲ್ಲಾಧಿಕಾರಿಗಳ ಹುದ್ದೆಗಳು ರದ್ದಾಗಿವೆ, ಅವರ ಸ್ಥಾನದಲ್ಲಿ ಇಬ್ಬರು ವಿಶೇಷ ಜಿಲ್ಲಾಧಿಕಾರಿಗಳು ಜಿಲ್ಲಾಧಿಕಾರಿಗಳ ಜೊತೆಗೆ ಕೆಲಸ ಮಾಡುತ್ತಿದ್ದಾರೆ. ಅವರು ಮಂದಗತಿಯಲ್ಲಿ ತೆರವು ಕಾರ್ಯ ನಡೆಸುತ್ತಿದ್ದಾರೆ. ಅವರಿಗೆ ಒಂದು ನಿರ್ದಿಷ್ಟ ಕಾಲಾವಧಿಯಲ್ಲಿ ಈ ಕೆಲಸ ಮುಗಿಸಬೇಕೆಂದು ಕುಮಾರಸ್ವಾಮಿಯವರು ಅವರಿಗೆ ಆಜ್ಞೆ ಮಾಡಬೇಕು. ಈ ವಿಶೇಷ ಜಿಲ್ಲಾಧಿಕಾರಿಗಳನ್ನು ಪದೇಪದೇ ವರ್ಗಾವಣೆ ಮಾಡುತ್ತಿರುವುದೂ, ಶನಿವಾರ ದಿನ ಮಾತ್ರ ತೆರವುಗೊಳಿಸುವ ಕೆಲಸ ನಡೆಯುತ್ತಿರುವುದೂ ಈ ಕೆಲಸ ಸುಸೂತ್ರವಾಗಿ ನಡೆಯದಿರಲು ಕಾರಣವಾಗಿದೆ. ಈ ವಿಶೇಷ ಜಿಲ್ಲಾಧಿಕಾರಿಗಳನ್ನು ಈ ಕೆಲಸ ಮುಗಿಸುವವರೆಗೂ ವರ್ಗ ಮಾಡದೆ ಬಿಟ್ಟರೆ ಕ್ಷಿಪ್ರವಾಗಿ ಗುರಿಮುಟ್ಟಬಹುದು ಎಂಬುದು ನನ್ನ ಅನಿಸಿಕೆ.

– ಹೆಚ್.ಎಸ್.ದೊರೆಸ್ವಾಮಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...