Homeಕರ್ನಾಟಕರಾಜೀನಾಮೆ ನೀಡಿರುವ ಶಾಸಕರು ಈ ವಿಧಾನಸಭೆಯ ಅವಧಿ ಮುಗಿಯುವವರೆಗೆ ಸ್ಪರ್ಧಿಸುವಂತಿಲ್ಲ.: ಇಂದು ಅನರ್ಹತೆ ಘೋಷಿಸಲಿರುವ ಸ್ಪೀಕರ್

ರಾಜೀನಾಮೆ ನೀಡಿರುವ ಶಾಸಕರು ಈ ವಿಧಾನಸಭೆಯ ಅವಧಿ ಮುಗಿಯುವವರೆಗೆ ಸ್ಪರ್ಧಿಸುವಂತಿಲ್ಲ.: ಇಂದು ಅನರ್ಹತೆ ಘೋಷಿಸಲಿರುವ ಸ್ಪೀಕರ್

ನಾಳೆ ಅತೃಪ್ತ ಶಾಸಕರಿಗೆ ಈ ವಿಧಾನಸಭೆಯ ಅವಧಿಯಲ್ಲಿ ಚುನಾವಣೆಗೆ ನಿಲ್ಲದಂತೆ ಅನರ್ಹತೆ ಘೋಷಿಸಲಿರುವ ಸ್ಪೀಕರ್

- Advertisement -
- Advertisement -

ಕಾಂಗ್ರೆಸ್-ಜೆಡಿಎಸ್ ಪಕ್ಷ ತ್ಯಜಿಸಿ ಇಷ್ಟು ದಿನ ಮುಂಬೈನಲ್ಲಿ ಬೀಡುಬಿಟ್ಟಿದ್ದ ಶಾಸಕರಿಗೆ ನಾಳೆ (ಜುಲೈ25) ಈ ವಿಧಾನಸಭಾ ಅವಧಿಪೂರ್ತಿಯ ಅನರ್ಹತೆ ಶಿಕ್ಷೆ ಕಾದು ಕೂತಿದೆ. ಈ ಸರ್ಕಾರ ಬಿದ್ದಿದ್ದಕ್ಕೆ ಸಂತಸವಾಗಿದೆ ಎಂದವರಿಗೆ ನಾಳೆ ಬಿಗ್ ಶಾಕ್ ಕಾದಿರುವುದಂತೂ ಸತ್ಯ.

ಈ ಕುರಿತು ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ರವರು ಇಂದು ಸುಳಿವು ನೀಡಿದ್ದಾರೆ. ಫೇಸ್ ಬುಕ್ ನಲ್ಲಿ “ನನ್ನ ತೀರ್ಪು ತಪ್ಪು ಆಗಿದ್ದಲ್ಲಿ ಕ್ಷಮಿಸಿ,. ಸರಿಯಾಗಿದ್ದರೆ ಅನುಭವಿಸಬೇಕಾಗುತ್ತದೆ. ನನ್ನನ್ನು ನಂಬಿರುವ ಎಲ್ಲಾ ಕರ್ನಾಟಕ ಜನತೆಗೆ ಕೃತಜ್ಞತೆಗಳು” ಎಂದು ಸ್ಪೀಕರ್ ರವರು ಒಂದು ಗಂಟೆಯ ಹಿಂದೆಯಷ್ಟೇ ಬರೆದುಕೊಂಡಿದ್ದಾರೆ.

ನಾನು ಗೌರಿ.ಕಾಂ ಸಿಕ್ಕ ಖಚಿತ ಮಾಹಿತಿಗಳ ಪ್ರಕಾರ 17ಜನ ಶಾಸಕರಿಗೂ ನಾಳೆ ಬೆಳಿಗ್ಗೆಯೇ ಅನರ್ಹತೆಯ ಶಿಕ್ಷೆ ಘೋಷಣೆಯಾಗುತ್ತದೆ. ಅದು ಕೂಡ ಈ ವಿಧಾಸಭಾ ಅವಧಿಪೂರ್ತಿ ಅವರನ್ನು ಅನರ್ಹರನ್ನಾಗಿ ಮಾಡಲಾಗುತ್ತದೆ. ಅಂದರೆ ಈ ವಿಧಾನಸಭೆಯ ಅವಧಿ ಮುಗಿಯುವ 2023ರವರೆಗೂ ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಈ ಮಟ್ಟದ ದೊಡ್ಡ ಶಿಕ್ಷೆ ನಾಳೆ ಘೋಷಣೆಯಾಗುವುದಷ್ಟೇ ಬಾಕಿ ಉಳಿದಿದೆ.

ಕಾಂಗ್ರೆಸ್ ನಿಂದ 13 ಜನ ಮತ್ತು ಜೆಡಿಎಸ್ ನಿಂದ 03 ಜನ ಶಾಸಕರಿಗೆ ನಾಳೆ ಶಿಕ್ಷೆಯಾಗುವುದು ನಿಕ್ಕಿಯಾಗಿದೆ.

ನಾಳೆ ಅನರ್ಹತೆ ಘೋಷಿಸಿ, ಕಚೇರಿ ವ್ಯವಹಾರ ಎಲ್ಲಾ ಮುಗಿಸಿದ ನಂತರ ನಾಳಿದ್ದು ಸ್ಪೀಕರ್ ರವರು ಬಹಿರಂಗ ಪತ್ರಿಕಾ ಗೋಷ್ಟಿ ನಡೆಸಿ ತಮ್ಮ ರಾಜೀನಾಮೆಯನ್ನು ಸಹ ಘೋಷಿಸಲಿದ್ದಾರೆ. ಅನರ್ಹರಿಗೆ ಸರಿಯಾಗಿ ಬುದ್ದಿ ಕಲಿಸಿಯೇ ತಾನು ಸ್ಪೀಕರ್ ಸ್ಥಾನದಿಂದ ನಿರ್ಗಮಿಸಬೇಕೆಂದು ಸ್ಪೀಕರ್ ದೃಢಸಂಕಲ್ಪ ಮಾಡಿದ್ದಾರೆ.

ಪಕ್ಷಾಂತರ ಮಾಡಲು ಹೊರಟವರಿಗೆ ತಕ್ಕ ಶಾಸ್ತಿಯಾಯಿತು ಎಂಬ ಭಾವನೆ ಜನರಲ್ಲಿ ಮೂಡುವಂತೆ ಮಾಡುವುದು, ಆ ಮೂಲಕ ಶಾಸಕರಿಗೆ ಕಠಿಣ ಎಚ್ಚರಿಕೆ ನೀಡುವುದು ರಮೇಶ್ ಕುಮಾರ್ ರವರ ಗುರಿಯಾಗಿದೆ. ಆದರೆ ಸ್ಫೀಕರ್ ಅವರ ಈ ಆದೇಶದ ವಿರುದ್ಧ ಸುಪ್ರೀಂಕೋರ್ಟಿಗೆ ಹೋಗುವ ಅವಕಾಶ ಅನರ್ಹಗೊಂಡ ಶಾಸಕರಿಗೆ ಇದ್ದೇ ಇದೆ. ಅದೇನೇ ಆದರೂ ಸಾರ್ವಜನಿಕವಾಗಿ ಒಂದು ಸಂದೇಶ ಹೋಗುವಮಟ್ಟಿಗಂತೂ ಇದರ ಪರಿಣಾಮ ಇರಲಿದೆ.

ಅಂತೂ ಸರ್ಕಾರ ಬಿದ್ದಾಯಿತು. ನಾಳೆ ಅನರ್ಹತೆಯೂ ಘೋಷಣೆಯಾಗಿ ರಾಜ್ಯ ರಾಜ್ಯಕಾರಣ ಒಂದು ಹಂತಕ್ಕೆ ಬಂದು ನಿಲ್ಲಲಿದೆ.

.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

    • ಕೆಳಗಿನ ಬ್ಯಾಂಕ್ ಖಾತೆಯ ಮೂಲಕವೂ ಹಣ ಸಂದಾಯ ಮಾಡಬಹುದು)

      Account Name: Gauri Media Trust

      Account No.: 510101006500878

      Bank: Corporation bank

      Branch: Srinivasa nagara/Srinagara, Bengaluru

      IFSC Code: CORP0000215

LEAVE A REPLY

Please enter your comment!
Please enter your name here

- Advertisment -

SIR: 2ಲಕ್ಷ ಮತದಾರರಲ್ಲಿ ಬಸವನಗುಡಿಯಲ್ಲಿ ಉಳಿಯುವುದು 88 ಸಾವಿರ ಮಾತ್ರಾ?: SIR ಪರಿಷ್ಕರಣೆಯ ಆಘಾತಕಾರಿ ಲೆಕ್ಕಾಚಾರ

2023ರ ಚುನಾವಣೆಯಲ್ಲಿ ಬಸವನಗುಡಿಯಲ್ಲಿ 1.28 ಲಕ್ಷ ಮತಗಳು ಚಲಾಯಿಸಲ್ಪಟ್ಟಿದ್ದವು. ಆದರೆ ಪ್ರಸ್ತುತ SIR ಪ್ರಕ್ರಿಯೆಯಲ್ಲಿ 1.13 ಲಕ್ಷ ಜನರನ್ನು ಹೊರಗಿಟ್ಟು, ಕರಡು ಪಟ್ಟಿಯಲ್ಲಿ ಕೇವಲ 1.35 ಲಕ್ಷ ಮತದಾರರನ್ನು ಮಾತ್ರ ಉಳಿಸಿಕೊಳ್ಳಲಾಗಿದೆ. ಇದರ...

ಕರ್ನಾಟಕ ಎಸ್ಐಆರ್: 43.81 ಲಕ್ಷ ಜನರಿಗೆ SIR ನೋಟಿಸ್: ಗಣ್ಯರ ಹೆಸರು ಸರಿಪಡಿಸುವ ಚುನಾವಣಾ ಆಯೋಗಕ್ಕೆ ಜನ-ಸಾಮಾನ್ಯರ ನೋವು ಕಾಣುತ್ತಿಲ್ಲವೇ?

ಕರ್ನಾಟಕದಲ್ಲಿ SIR ವೇಳೆ 43.81 ಲಕ್ಷ ಮತದಾರರ ಪ್ರಕರಣಗಳಿಗೆ ನೋಟಿಸ್‌ಗಳನ್ನು ಸೃಷ್ಟಿಸಲಾಗಿದ್ದು, ಅವರ ದಾಖಲೆಗಳ ಪರಿಶೀಲನೆಗೆ ಕ್ರಮ ಕೈಗೊಳ್ಳಲಾಗಿದೆ. ಈ ಪೈಕಿ 23.45 ಲಕ್ಷ ಪ್ರಕರಣಗಳಲ್ಲಿ 2002ರ ಮತದಾರರ ಪಟ್ಟಿಯೊಂದಿಗೆ ಮ್ಯಾಪಿಂಗ್ ಆಗದಿರುವುದು...

ಪಿಣರಾಯಿ ವಿಜಯನ್ ವಿರುದ್ಧ ಎಫ್‌ಐಆರ್‌ಗೆ ಇಡಿ ಪತ್ರ: ಕಾನೂನು ಪರಿಶೀಲನೆ ನಡೆಸಲಾಗುವುದು ಎಂದ ಸಿಎಂ ವಿ.ಡಿ. ಸತೀಶನ್

ಆರೋಪಿತ ಸಿಎಂಆರ್‌ಎಲ್ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಪಿಐ(ಎಂ) ಹಿರಿಯ ನಾಯಕ ಪಿಣರಾಯಿ ವಿಜಯನ್ ಮತ್ತು ಇತರರ ವಿರುದ್ಧ ಎಫ್‌ಐಆರ್ ದಾಖಲಿಸಲು ಜಾರಿ ನಿರ್ದೇಶನಾಲಯ (ಇಡಿ) ನೀಡಿರುವ ಪತ್ರವನ್ನು ಕಾನೂನುಬದ್ಧವಾಗಿ ಪರಿಶೀಲಿಸಲಾಗುವುದು, ಅದರ ನಂತರ...

‘ಸಿಇಸಿ ಜ್ಞಾನೇಶ್ ಕುಮಾರ್ ಮಗಳು’ : ನೋಯ್ಡಾ ಜಿಲ್ಲಾಧಿಕಾರಿಗೆ ಅಲಹಾಬಾದ್ ಹೈಕೋರ್ಟ್ ತಪರಾಕಿ ಬೆನ್ನಲ್ಲೇ ವಿಪಕ್ಷ ನಾಯಕರ ವಾಗ್ದಾಳಿ

ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ (NSA) ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಯೊಬ್ಬರನ್ನು ಮುನ್ನೆಚ್ಚರಿಕೆ ಕ್ರಮವಾಗಿ ವಶಕ್ಕೆ ಪಡೆದಿದ್ದಕ್ಕಾಗಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ಮಗಳು ಹಾಗೂ ನೋಯ್ಡಾ ಜಿಲ್ಲಾಧಿಕಾರಿ ಮೇಧಾ ರೂಪಮ್ ಅವರನ್ನು...

ಮಲ್ಲಿಕಾರ್ಜುನ ಖರ್ಗೆ ಸಭೆಯ ನಂತರ ‘ಶುದ್ಧೀಕರಣ’ ವಿವಾದ: ಅಪರಿಚಿತರ ವಿರುದ್ಧ ಎಫ್‌ಐಆರ್, ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕಾಂಗ್ರೆಸ್!

ಉತ್ತರಾಖಂಡದ ಹಲ್ದ್ವಾನಿಯ ರಾಮಲೀಲಾ ಮೈದಾನದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಸಾರ್ವಜನಿಕ ಸಭೆ ನಡೆದ ನಂತರ, ಆ ಮೈದಾನವನ್ನು 'ಶುದ್ಧೀಕರಣ' (ಶುದ್ಧೀಕರಣ ಯಜ್ಞ) ಗೊಳಿಸಿದ ವಿವಾದಾತ್ಮಕ ಪ್ರಕರಣಕ್ಕೆ ಸಂಬಂಧಿಸಿದಂತೆ ಹಲ್ದ್ವಾನಿಯ ಕೊತ್ವಾಲಿ...

ದೆಹಲಿ ಮತದಾರರ ಪಟ್ಟಿಗೆ ರಾಘವ್ ಚಡ್ಡಾ ಹೆಸರು ಸೇರ್ಪಡೆ; ಸೂಕ್ತ ಪ್ರಕ್ರಿಯೆ ಅನುಸರಿಸಿಲ್ಲ ಎಂದು ಎಎಪಿ ಆರೋಪ

ರಾಷ್ಟ್ರ ರಾಜಧಾನಿಯ ಮತದಾರರ ಪಟ್ಟಿಯ ಪ್ರಸ್ತುತ ನಡೆಯುತ್ತಿರುವ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಅಡಿಯಲ್ಲಿ, ಪಂಜಾಬ್‌ನ ಬಿಜೆಪಿ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರ ಹೆಸರನ್ನು ದೆಹಲಿಯ ಮತದಾರರ ಪಟ್ಟಿಗೆ ಸೇರಿಸಲಾಗಿದೆ ಎಂದು ಚುನಾವಣಾ...

ಮಲ್ಲಿಕಾರ್ಜುನ ಖರ್ಗೆ ಭಾಷಣ ಮಾಡಿದ ವೇದಿಕೆ ‘ಶುದ್ಧೀಕರಣ’ : 29 ದಿನಗಳ ನಂತರ ಎಫ್‌ಐಆರ್ ದಾಖಲು

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ್ದ ಉತ್ತರಾಖಂಡದ ಹಲ್ದ್ವಾನಿಯ ವೇದಿಕೆಯೊಂದರಲ್ಲಿ 'ಶುದ್ಧೀಕರಣ' ನಡೆದ ಇಪ್ಪತ್ತೊಂಬತ್ತು ದಿನಗಳ ನಂತರ, ಪೊಲೀಸರು ಮಂಗಳವಾರ (ಸೆಪ್ಟೆಂಬರ್ 8) ಎಸ್‌ಸಿ/ಎಸ್‌ಟಿ ಕಾಯ್ದೆಯ ನಿಬಂಧನೆಗಳ ಅಡಿಯಲ್ಲಿ...

‘ಪ್ರೊ. ಸಿಎನ್ಆರ್ ರಾವ್‌ ಅವರಿಗೆ ನೋಟಿಸ್ ಕೊಟ್ಟಿಲ್ಲ..’; ಚುನಾವಣಾ ಆಯೋಗದ ಸ್ಪಷ್ಟನೆ

ಕರ್ನಾಟಕದ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ವೇಳೆ ಹೆಸರಿನ ಕಾಗುಣಿತದಲ್ಲಿನ ವ್ಯತ್ಯಾಸ ಕಂಡುಬಂದ ಹಿನ್ನೆಲೆಯಲ್ಲಿ, ದೇಶದ ಪ್ರಸಿದ್ಧ ವಿಜ್ಞಾನಿಗಳಲ್ಲಿ ಒಬ್ಬರಾದ ಭಾರತರತ್ನ ಪ್ರೊ. ಸಿ.ಎನ್.ಆರ್. ರಾವ್ ಅವರಿಗೆ ತಮ್ಮ ಗುರುತನ್ನು ಸಾಬೀತುಪಡಿಸಲು...

‘ಬಂಗಾಳಿಗಳು ಮೀನು ಇಲ್ಲದೆ ಬದುಕಲು ಸಾಧ್ಯವಿಲ್ಲ’; ಆಹಾರ ಪದ್ಧತಿ ನಿರ್ಧಾರ ಬಿಜೆಪಿ ಕೆಲಸವಲ್ಲ: ಬಿಜೆಪಿ ಮುಖ್ಯಸ್ಥ ಸಮಿಕ್ ಭಟ್ಟಾಚಾರ್ಯ 

ಕೊಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ಕೆಲವೇ ತಿಂಗಳುಗಳಲ್ಲಿ ದುರ್ಗಾ ಪೂಜೆ ಮತ್ತು ನವರಾತ್ರಿ ಆಚರಣೆಗಳ ಸಂದರ್ಭದಲ್ಲಿ ಆಹಾರ ಪದ್ಧತಿಯ ಕುರಿತು ಕೆಲವು ಧಾರ್ಮಿಕ ನಾಯಕರು ಹಾಗೂ ವಿಶ್ವ ಹಿಂದೂ...

ಮತದಾರ ಇರುವುದು ವಿದೇಶದಲ್ಲಿ, ಆದರೆ ವಿಚಾರಣೆ ನಡೆಯುತ್ತಿರುವುದು ಇಲ್ಲಿ: ಕರ್ನಾಟಕ SIR ತಂದಿಟ್ಟ ಧರ್ಮಸಂಕಟ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ, ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದ ಅನೇಕ ಅನಿವಾಸಿ ಕನ್ನಡಿಗರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಹೆಸರಿನಲ್ಲಿನ ವ್ಯತ್ಯಾಸ, ವಯಸ್ಸಿನ ವ್ಯತ್ಯಾಸ...