Homeಕರ್ನಾಟಕರಾಜೀನಾಮೆ ನೀಡಿರುವ ಶಾಸಕರು ಈ ವಿಧಾನಸಭೆಯ ಅವಧಿ ಮುಗಿಯುವವರೆಗೆ ಸ್ಪರ್ಧಿಸುವಂತಿಲ್ಲ.: ಇಂದು ಅನರ್ಹತೆ ಘೋಷಿಸಲಿರುವ ಸ್ಪೀಕರ್

ರಾಜೀನಾಮೆ ನೀಡಿರುವ ಶಾಸಕರು ಈ ವಿಧಾನಸಭೆಯ ಅವಧಿ ಮುಗಿಯುವವರೆಗೆ ಸ್ಪರ್ಧಿಸುವಂತಿಲ್ಲ.: ಇಂದು ಅನರ್ಹತೆ ಘೋಷಿಸಲಿರುವ ಸ್ಪೀಕರ್

ನಾಳೆ ಅತೃಪ್ತ ಶಾಸಕರಿಗೆ ಈ ವಿಧಾನಸಭೆಯ ಅವಧಿಯಲ್ಲಿ ಚುನಾವಣೆಗೆ ನಿಲ್ಲದಂತೆ ಅನರ್ಹತೆ ಘೋಷಿಸಲಿರುವ ಸ್ಪೀಕರ್

- Advertisement -
- Advertisement -

ಕಾಂಗ್ರೆಸ್-ಜೆಡಿಎಸ್ ಪಕ್ಷ ತ್ಯಜಿಸಿ ಇಷ್ಟು ದಿನ ಮುಂಬೈನಲ್ಲಿ ಬೀಡುಬಿಟ್ಟಿದ್ದ ಶಾಸಕರಿಗೆ ನಾಳೆ (ಜುಲೈ25) ಈ ವಿಧಾನಸಭಾ ಅವಧಿಪೂರ್ತಿಯ ಅನರ್ಹತೆ ಶಿಕ್ಷೆ ಕಾದು ಕೂತಿದೆ. ಈ ಸರ್ಕಾರ ಬಿದ್ದಿದ್ದಕ್ಕೆ ಸಂತಸವಾಗಿದೆ ಎಂದವರಿಗೆ ನಾಳೆ ಬಿಗ್ ಶಾಕ್ ಕಾದಿರುವುದಂತೂ ಸತ್ಯ.

ಈ ಕುರಿತು ಸ್ಪೀಕರ್ ಕೆ.ಆರ್ ರಮೇಶ್ ಕುಮಾರ್ ರವರು ಇಂದು ಸುಳಿವು ನೀಡಿದ್ದಾರೆ. ಫೇಸ್ ಬುಕ್ ನಲ್ಲಿ “ನನ್ನ ತೀರ್ಪು ತಪ್ಪು ಆಗಿದ್ದಲ್ಲಿ ಕ್ಷಮಿಸಿ,. ಸರಿಯಾಗಿದ್ದರೆ ಅನುಭವಿಸಬೇಕಾಗುತ್ತದೆ. ನನ್ನನ್ನು ನಂಬಿರುವ ಎಲ್ಲಾ ಕರ್ನಾಟಕ ಜನತೆಗೆ ಕೃತಜ್ಞತೆಗಳು” ಎಂದು ಸ್ಪೀಕರ್ ರವರು ಒಂದು ಗಂಟೆಯ ಹಿಂದೆಯಷ್ಟೇ ಬರೆದುಕೊಂಡಿದ್ದಾರೆ.

ನಾನು ಗೌರಿ.ಕಾಂ ಸಿಕ್ಕ ಖಚಿತ ಮಾಹಿತಿಗಳ ಪ್ರಕಾರ 17ಜನ ಶಾಸಕರಿಗೂ ನಾಳೆ ಬೆಳಿಗ್ಗೆಯೇ ಅನರ್ಹತೆಯ ಶಿಕ್ಷೆ ಘೋಷಣೆಯಾಗುತ್ತದೆ. ಅದು ಕೂಡ ಈ ವಿಧಾಸಭಾ ಅವಧಿಪೂರ್ತಿ ಅವರನ್ನು ಅನರ್ಹರನ್ನಾಗಿ ಮಾಡಲಾಗುತ್ತದೆ. ಅಂದರೆ ಈ ವಿಧಾನಸಭೆಯ ಅವಧಿ ಮುಗಿಯುವ 2023ರವರೆಗೂ ಅವರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಈ ಮಟ್ಟದ ದೊಡ್ಡ ಶಿಕ್ಷೆ ನಾಳೆ ಘೋಷಣೆಯಾಗುವುದಷ್ಟೇ ಬಾಕಿ ಉಳಿದಿದೆ.

ಕಾಂಗ್ರೆಸ್ ನಿಂದ 13 ಜನ ಮತ್ತು ಜೆಡಿಎಸ್ ನಿಂದ 03 ಜನ ಶಾಸಕರಿಗೆ ನಾಳೆ ಶಿಕ್ಷೆಯಾಗುವುದು ನಿಕ್ಕಿಯಾಗಿದೆ.

ನಾಳೆ ಅನರ್ಹತೆ ಘೋಷಿಸಿ, ಕಚೇರಿ ವ್ಯವಹಾರ ಎಲ್ಲಾ ಮುಗಿಸಿದ ನಂತರ ನಾಳಿದ್ದು ಸ್ಪೀಕರ್ ರವರು ಬಹಿರಂಗ ಪತ್ರಿಕಾ ಗೋಷ್ಟಿ ನಡೆಸಿ ತಮ್ಮ ರಾಜೀನಾಮೆಯನ್ನು ಸಹ ಘೋಷಿಸಲಿದ್ದಾರೆ. ಅನರ್ಹರಿಗೆ ಸರಿಯಾಗಿ ಬುದ್ದಿ ಕಲಿಸಿಯೇ ತಾನು ಸ್ಪೀಕರ್ ಸ್ಥಾನದಿಂದ ನಿರ್ಗಮಿಸಬೇಕೆಂದು ಸ್ಪೀಕರ್ ದೃಢಸಂಕಲ್ಪ ಮಾಡಿದ್ದಾರೆ.

ಪಕ್ಷಾಂತರ ಮಾಡಲು ಹೊರಟವರಿಗೆ ತಕ್ಕ ಶಾಸ್ತಿಯಾಯಿತು ಎಂಬ ಭಾವನೆ ಜನರಲ್ಲಿ ಮೂಡುವಂತೆ ಮಾಡುವುದು, ಆ ಮೂಲಕ ಶಾಸಕರಿಗೆ ಕಠಿಣ ಎಚ್ಚರಿಕೆ ನೀಡುವುದು ರಮೇಶ್ ಕುಮಾರ್ ರವರ ಗುರಿಯಾಗಿದೆ. ಆದರೆ ಸ್ಫೀಕರ್ ಅವರ ಈ ಆದೇಶದ ವಿರುದ್ಧ ಸುಪ್ರೀಂಕೋರ್ಟಿಗೆ ಹೋಗುವ ಅವಕಾಶ ಅನರ್ಹಗೊಂಡ ಶಾಸಕರಿಗೆ ಇದ್ದೇ ಇದೆ. ಅದೇನೇ ಆದರೂ ಸಾರ್ವಜನಿಕವಾಗಿ ಒಂದು ಸಂದೇಶ ಹೋಗುವಮಟ್ಟಿಗಂತೂ ಇದರ ಪರಿಣಾಮ ಇರಲಿದೆ.

ಅಂತೂ ಸರ್ಕಾರ ಬಿದ್ದಾಯಿತು. ನಾಳೆ ಅನರ್ಹತೆಯೂ ಘೋಷಣೆಯಾಗಿ ರಾಜ್ಯ ರಾಜ್ಯಕಾರಣ ಒಂದು ಹಂತಕ್ಕೆ ಬಂದು ನಿಲ್ಲಲಿದೆ.

.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

    • ಕೆಳಗಿನ ಬ್ಯಾಂಕ್ ಖಾತೆಯ ಮೂಲಕವೂ ಹಣ ಸಂದಾಯ ಮಾಡಬಹುದು)

      Account Name: Gauri Media Trust

      Account No.: 510101006500878

      Bank: Corporation bank

      Branch: Srinivasa nagara/Srinagara, Bengaluru

      IFSC Code: CORP0000215

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...