Homeಎಂಟರ್ತೈನ್ಮೆಂಟ್ರಾಜ್ - ಎಂದೂ ಮಾಸದ ನೆನಪು: ಭವಾನಿ ಕ್ಯಾಮರಾ ಕಣ್ಣಲ್ಲಿ ರಾಜ್!

ರಾಜ್ – ಎಂದೂ ಮಾಸದ ನೆನಪು: ಭವಾನಿ ಕ್ಯಾಮರಾ ಕಣ್ಣಲ್ಲಿ ರಾಜ್!

- Advertisement -
- Advertisement -

ವರನಟ ಡಾ.ರಾಜಕುಮಾರ್ ಅಗಲಿ ಇಂದಿಗೆ ಹದಿನಾಲ್ಕು ವರ್ಷ. ಏಕೀಕರಣದ ನಂತರ ಕನ್ನಡ ನಾಡು-ನುಡಿಯ ಬಗ್ಗೆ ಕನ್ನಡಿಗರಲ್ಲಿ ಒಲವು ಮೂಡಿಸಿದ ಸಾಂಸ್ಕೃತಿಕ ವ್ಯಕ್ತಿತ್ವ ರಾಜ್. ಹಿರಿಯ ಸ್ಥಿರಚಿತ್ರ ಛಾಯಾಗ್ರಾಹಕ ಭವಾನಿ ಲಕ್ಷ್ಮೀನಾರಾಯಣ ಅವರು ರಾಜ್ ಅವರ ಆತ್ಮೀಯರೊಲ್ಲಬ್ಬರು. ತಾವು ಕಂಡ ನಟನನ್ನು ಅಪರೂಪದ ಸಂದರ್ಭಗಳೊಂದಿಗೆ ಅವರಿಲ್ಲಿ ಸ್ಮರಿಸಿಕೊಂಡಿದ್ದಾರೆ.

ನಾನು ರಾಜ್‌ರ ನೂರಾರು ಫೋಟೋಗಳನ್ನು ಸೆರೆಹಿಡಿದ್ದೇನೆ. ಸೂಕ್ಷ್ಮವಾಗಿ ಗಮನಿಸಿ ನೋಡಿದರೆ, ಪ್ರತೀ ಚಿತ್ರದಲ್ಲೂ ಅವರಲ್ಲಿನ ಸರಳತೆ ಕಾಣಿಸುತ್ತದೆ. ನಾನು ಹತ್ತಾರು ವರ್ಷಗಳ ಕಾಲ ಕಂಡಂತೆ ಸೆಟ್‌ನಲ್ಲೂ ಅವರು ಎಲ್ಲರೊಂದಿಗೂ ಸರಳವಾಗಿ ಬೆರೆಯುತ್ತಿದ್ದರು. ಸಹಕಲಾವಿದರೊಂದಿಗೆ ಅವರದು ಉತ್ತಮ ಬಾಂಧವ್ಯ. ಹಿರಿಯರನ್ನು ಗೌರವಿಸುತ್ತಿದ್ದ ರಾಜ್, ಕಿರಿಯರಿಗೆ ಸಲಹೆ – ಸೂಚನೆ ಕೊಡುತ್ತಿದ್ದರು. ಕ್ಯಾಮರಾ ಎದುರು ಕೂಡ ಅವರು ಅಷ್ಟೇ ಸಂಯಮಿ. ಟೇಕ್ ಹೆಚ್ಚಾದರೆ ಒಂದಿಷ್ಟೂ ಬೇಸರಿಸಿಕೊಳ್ಳದೆ ಮತ್ತೊಂದು ಟೇಕ್‌ಗೆ ರೆಡಿಯಾಗುತ್ತಿದ್ದರು. ತಪ್ಪನ್ನು ಒಪ್ಪಿಕೊಳ್ಳುವ ಗುಣ ಅವರದು. ಸನ್ನಿವೇಶ ಮತ್ತಷ್ಟು ಚೆನ್ನಾಗಿ ಮೂಡಿಬರಬೇಕೆಂದು ನಿರ್ದೇಶಕರ ಸಲಹೆಯನ್ನು ಕ್ರೀಡಾಮನೋಭಾವದಿಂದ ಸ್ವೀಕರಿಸುತ್ತಿದ್ದರು. ಅವರು ನಿರ್ದೇಶಕರಿಗೆ ಎದುರಾಡಿದ್ದನ್ನು ನಾನಂತೂ ಒಮ್ಮೆಯೂ ನೋಡಿಲ್ಲ. ಶೂಟಿಂಗ್ ಬಿಡುವಿನ ವೇಳೆಯಲ್ಲಿ ನಾನು ಕೊಡುತ್ತಿದ್ದ ತೊಂದರೆಗೂ ಅವರು ಬೇಸರ ಮಾಡಿಕೊಂಡವರಲ್ಲ. ಒಳ್ಳೆಯ ಮೂಡ್‌ನ ನಿರೀಕ್ಷೆಯಲ್ಲಿರುವ ಛಾಯಾಗ್ರಾಹಕನಿಗೆ ಮತ್ತೇನು ಬೇಕು ಹೇಳಿ?

ಕೂಸು ಮರಿ

ನಾನು ನೋಡಿದಂತೆ ರಾಜ್ ಮತ್ತು ಚಿತ್ರಸಾಹಿತಿ ಚಿ.ಉದಯಶಂಕರ್ ಅಪರೂಪದ ಸ್ನೇಹಿತರು. ಇಬ್ಬರಿಗೂ ಪರಸ್ಪರರಲ್ಲಿ ಅಪಾರ ಪ್ರೀತಿ, ಗೌರವ. ಒಂದು ಹಂತದ ಸಲಿಗೆಯೂ ಇತ್ತು. ಉದಯಶಂಕರ್ ಚಿತ್ರಕಥೆ, ಸಂಭಾಷಣೆಯಲ್ಲಿಯೇ ಅಲ್ಲವೇ ರಾಜ್ ಜನರನ್ನು ಸೆಳೆದದ್ದು? ರಾಜ್‌ರನ್ನು ಹತ್ತಿರದಿಂದ ಒಡನಾಡಿದ್ದರಿಂದ ಅವರ ಇಮೇಜ್‌ಗೆ ಸರಿಹೊಂದುವಂತೆ ಬರೆಯಲು ಉದಯಶಂಕರ್ ಅವರಿಗೆ ಸಾಧ್ಯವಾಗಿರಬಹುದು. ರಾಜ್ ಸಿನಿಮಾಗಳ ಚಿತ್ರೀಕರಣಗಳಿಗೆ ಹೋದ ಬಹಳಷ್ಟು ಸಂದರ್ಭಗಳಲ್ಲಿ ಚಿ.ಉದಯಶಂಕರ್ ಅವರನ್ನು ಭೇಟಿಯಾಗಿದ್ದೇನೆ. ಸಾಕಷ್ಟು ಬಾರಿ ಅವರು ನನ್ನ ಕ್ಯಾಮರಾಗೆ ರೂಪದರ್ಶಿಯಾಗಿದ್ದಾರೆ.

ನಂದಿಬೆಟ್ಟದಲ್ಲೊಮ್ಮೆ ರಾಜ್ ಮತ್ತು ಉದಯಶಂಕರ್ ಜೋಡಿಯ ಚಿತ್ರ ತೆಗೆದದ್ದು ನನಗೆ ಬಹುವಾಗಿ ಕಾಡುತ್ತದೆ. ರಾಜ್‌ರ ಚಿತ್ರವೊಂದಕ್ಕೆ ನಂದಿಬೆಟ್ಟದ ಟಿಪ್ಪು ಡ್ರಾಪ್‌ನಲ್ಲಿ ಶೂಟಿಂಗ್ ನಡೆಯುತ್ತಿತ್ತು. ಚಿ.ಉದಯಶಂಕರ್ ಕೂಡ ಸೆಟ್‌ನಲ್ಲಿದ್ದರು. ನಾನಲ್ಲಿಗೆ ಹೋದಾಗ ಇಬ್ಬರೂ ಸನ್ನಿವೇಶವೊಂದರ ಬಗ್ಗೆ ಚರ್ಚಿಸುತ್ತಿದ್ದರೆಂದು ಕಾಣುತ್ತದೆ. ಅವರ ಗಂಭೀರ ಮಾತುಕತೆ ಮುಗಿಯುತ್ತಿದ್ದಂತೆ ನಾನಲ್ಲಿಗೆ ಹೋದೆ. ಅಪರೂಪದ ಪೋಸ್ ಬೇಕೆಂದಾಗ, ಉತ್ಸಾಹಿ ರಾಜ್ ಕ್ಷಣಕಾಲ ಯೋಚಿಸಿದರು.ಉದಯಶಂಕರ್‌ರನ್ನು ಕೂಸು ಮರಿ ಮಾಡಿದರೆ ಹೇಗೆ?’ ಎಂದು ಕೇಳಿದ ರಾಜ್, ಅದಕ್ಕೆ ಸಜ್ಜಾದರು. ಚಿ.ಉದಯಶಂಕರ್ ನಗುತ್ತಲೇ ರಾಜ್ ಬೆನ್ನೇರಿದರು. ಸ್ಥೂಲಕಾಯದ ಅವರನ್ನು ಹೊರುತ್ತಲೇ ರಾಜ್ ಒಂದೆಡೆ ಕೊಂಚ ವಾಲಿದರು. ಆಕಸ್ಮಾತ್ ಇಬ್ಬರೂ ಬಿದ್ದರೇನು ಗತಿ ಎಂದು ನನಗೆ ಗಾಬರಿಯಾಯ್ತು. ಯಾಕಾದರೂ ಭಿನ್ನ ಪೋಸ್ ಕೊಡಿ ಎಂದು ಕೇಳಿದೆನೋ ಎಂದು ಪರಿತಪಿಸಿದೆ. ಹಾಗೇನೂ ಆಗಲಿಲ್ಲ. ರಾಜ್ ತಮ್ಮ ಸ್ನೇಹಿತನನ್ನು ಕೂಸು ಮರಿ ಮಾಡುವ ಅಪರೂಪದ ಪೋಸ್ ನನ್ನ ಕ್ಯಾಮರಾಗೆ ದಕ್ಕಿತು. ಮುಂದೆ ಈ ಫೋಟೋ ನೋಡಿ ಅವರಿಬ್ಬರೂ ತುಂಬಾ ಖುಷಿಪಟ್ಟಿದ್ದರು.

ರಾಜ್ ನೃತ್ಯಕ್ಕೆ ಮನಸೋತ ಹನುಮ!

ನಂದಿಬೆಟ್ಟದಲ್ಲಿ ರಾಜ್ ಸಿನಿಮಾಗೆ ಚಿತ್ರೀಕರಣ ನಡೆಯಲಿದೆ ಎನ್ನುವ ವಿಷಯ ಕಿವಿಗೆ ಬಿದ್ದಿತ್ತು. ಯಾವ ಸಿನಿಮಾ ಎನ್ನುವ ಕುತೂಹಲದಿಂದಲೇ ಹೋಗಿದ್ದೆ. ಸೆಟ್‌ಗೆ ಹೋಗುತ್ತಿದ್ದಂತೆ ನೃತ್ಯ ನಿರ್ದೇಶಕ ಉಡುಪಿ ಜಯರಾಂ ಎದುರಾದರು. `ಓ, ನೀವು ಬಂದ್ಬಿಟ್ರಾ, ಇನ್ನು ಅಣ್ಣಾವ್ರು ನಮಗೆ ಸಿಗೋಲ್ಲ ಬಿಡಿ..’ ಎಂದು ನಗುತ್ತಲೇ ನನ್ನನ್ನು ಸ್ವಾಗತಿಸಿದರು. ಅವರೊಂದಿಗೆ ಲೋಕಾಭಿರಾಮವಾಗಿ ಮಾತನಾಡುತ್ತಿರುವಾಗ ನಿರ್ದೇಶಕ ಗೀತಪ್ರಿಯ ಅವರ ಪದಾರ್ಪಣೆಯಾಯ್ತು. ರಾಜ್ ಅಭಿನಯದ `ಭೂಪತಿ ರಂಗ’ ಸಿನಿಮಾ ಹಾಡಿನ ಚಿತ್ರೀಕರಣ ಎನ್ನುವುದು ಗೊತ್ತಾಯಿತು. ಕೊಂಚ ಹೊತ್ತಿನಲ್ಲಿಯೇ ಶಾಟ್‌ಗೆ ಸಿದ್ಧರಾಗಿ ರಾಜ್ ನನ್ನೆಡೆ ಕೈಬೀಸುತ್ತಾ ಬಂದರು.
ತಮಿಳಿನಲ್ಲಿ ಆಗ ಹೆಸರು ಮಾಡಿದ್ದ ಉದಯ ಚಂದ್ರಿಕಾ ಈ ಚಿತ್ರದ ನಾಯಕಿ. ರಾಜ್ – ಉದಯ ಚಂದ್ರಿಕಾ ಜೋಡಿಯ `ಓಹೋ ಮುದ್ದಿನ ಮಲ್ಲಿಗೆ..’ ಯುಗಳ ಗೀತೆಗೆ ಅಂದು ಚಿತ್ರೀಕರಣ ನಡೆದದ್ದು. ಮಧ್ಯಾಹ್ನದಿಂದ ಸಂಜೆ ನಾಲ್ಕರವರೆಗೆ ಸತತವಾಗಿ ಚಿತ್ರೀಕರಣ ನಡೆಸಿದರು. ಕೊನೆಯಲ್ಲೊಂದು ತಮಾಷೆ ನಡೆಯಿತು. ಆಗ ನಂದಿ ಬೆಟ್ಟದಲ್ಲಿ ಕೋತಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು. ರಾಜ್ ಮುಂದಿನ ಶಾಟ್‌ಗೆಂದು ಕ್ಯಾಮರಾ ಎದುರು ಬರುತ್ತಿದ್ದಂತೆ ಕೋತಿಯೊಂದು ಅವರ ಬಳಿ ಓಡಿಬಂತು. ಚಿತ್ರತಂಡದ ಹುಡುಗರು ಓಡಿಸಿದರೂ ಅದು ಹೋಗಲೊಲ್ಲದು. ತಮ್ಮ ಕಾಲ ಬಳಿಯೇ ಸುಳಿದಾಡುತ್ತಿದ್ದ ಕೋತಿಯನ್ನು ರಾಜ್ ಪ್ರೀತಿಯಿಂದ ಮಾತನಾಡಿಸತೊಡಗಿದರು. ಕ್ಯಾಮರಾಮನ್ ಪಿ.ಎಸ್.ಪ್ರಕಾಶ್ ತಮ್ಮ ಕ್ಯಾಮರಾ ಆಫ್ ಮಾಡಿ ನಗುತ್ತಾ ಕುಳಿತರು. ನಾನು ಕ್ಯಾಮರಾ ಎತ್ತಿಕೊಂಡು ಅಲ್ಲಿಗೆ ಓಡಿದೆ. ಕೋತಿ ಎದುರು ರಾಜ್ ನೃತ್ಯದ ಬಂಗಿಯಲ್ಲಿ ಕೊಟ್ಟ ಪೋಸುಗಳನ್ನು ಕ್ಲಿಕ್ಕಿಸಿಕೊಂಡೆ. ಹೀಗೆ, ರಾಜ್ ಅವರೊಂದಿಗಿನ ಒಡನಾಟ ನನ್ನ ಬದುಕಿನ ಮಧುರ ನೆನಪುಗಳಾಗಿ ಉಳಿದಿವೆ.

ನಿರೂಪಣೆ: ಶಶಿಧರ ಚಿತ್ರದುರ್ಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...