Homeಎಂಟರ್ತೈನ್ಮೆಂಟ್ರಾಜ್ - ಎಂದೂ ಮಾಸದ ನೆನಪು: ಭವಾನಿ ಕ್ಯಾಮರಾ ಕಣ್ಣಲ್ಲಿ ರಾಜ್!

ರಾಜ್ – ಎಂದೂ ಮಾಸದ ನೆನಪು: ಭವಾನಿ ಕ್ಯಾಮರಾ ಕಣ್ಣಲ್ಲಿ ರಾಜ್!

- Advertisement -
- Advertisement -

ವರನಟ ಡಾ.ರಾಜಕುಮಾರ್ ಅಗಲಿ ಇಂದಿಗೆ ಹದಿನಾಲ್ಕು ವರ್ಷ. ಏಕೀಕರಣದ ನಂತರ ಕನ್ನಡ ನಾಡು-ನುಡಿಯ ಬಗ್ಗೆ ಕನ್ನಡಿಗರಲ್ಲಿ ಒಲವು ಮೂಡಿಸಿದ ಸಾಂಸ್ಕೃತಿಕ ವ್ಯಕ್ತಿತ್ವ ರಾಜ್. ಹಿರಿಯ ಸ್ಥಿರಚಿತ್ರ ಛಾಯಾಗ್ರಾಹಕ ಭವಾನಿ ಲಕ್ಷ್ಮೀನಾರಾಯಣ ಅವರು ರಾಜ್ ಅವರ ಆತ್ಮೀಯರೊಲ್ಲಬ್ಬರು. ತಾವು ಕಂಡ ನಟನನ್ನು ಅಪರೂಪದ ಸಂದರ್ಭಗಳೊಂದಿಗೆ ಅವರಿಲ್ಲಿ ಸ್ಮರಿಸಿಕೊಂಡಿದ್ದಾರೆ.

ನಾನು ರಾಜ್‌ರ ನೂರಾರು ಫೋಟೋಗಳನ್ನು ಸೆರೆಹಿಡಿದ್ದೇನೆ. ಸೂಕ್ಷ್ಮವಾಗಿ ಗಮನಿಸಿ ನೋಡಿದರೆ, ಪ್ರತೀ ಚಿತ್ರದಲ್ಲೂ ಅವರಲ್ಲಿನ ಸರಳತೆ ಕಾಣಿಸುತ್ತದೆ. ನಾನು ಹತ್ತಾರು ವರ್ಷಗಳ ಕಾಲ ಕಂಡಂತೆ ಸೆಟ್‌ನಲ್ಲೂ ಅವರು ಎಲ್ಲರೊಂದಿಗೂ ಸರಳವಾಗಿ ಬೆರೆಯುತ್ತಿದ್ದರು. ಸಹಕಲಾವಿದರೊಂದಿಗೆ ಅವರದು ಉತ್ತಮ ಬಾಂಧವ್ಯ. ಹಿರಿಯರನ್ನು ಗೌರವಿಸುತ್ತಿದ್ದ ರಾಜ್, ಕಿರಿಯರಿಗೆ ಸಲಹೆ – ಸೂಚನೆ ಕೊಡುತ್ತಿದ್ದರು. ಕ್ಯಾಮರಾ ಎದುರು ಕೂಡ ಅವರು ಅಷ್ಟೇ ಸಂಯಮಿ. ಟೇಕ್ ಹೆಚ್ಚಾದರೆ ಒಂದಿಷ್ಟೂ ಬೇಸರಿಸಿಕೊಳ್ಳದೆ ಮತ್ತೊಂದು ಟೇಕ್‌ಗೆ ರೆಡಿಯಾಗುತ್ತಿದ್ದರು. ತಪ್ಪನ್ನು ಒಪ್ಪಿಕೊಳ್ಳುವ ಗುಣ ಅವರದು. ಸನ್ನಿವೇಶ ಮತ್ತಷ್ಟು ಚೆನ್ನಾಗಿ ಮೂಡಿಬರಬೇಕೆಂದು ನಿರ್ದೇಶಕರ ಸಲಹೆಯನ್ನು ಕ್ರೀಡಾಮನೋಭಾವದಿಂದ ಸ್ವೀಕರಿಸುತ್ತಿದ್ದರು. ಅವರು ನಿರ್ದೇಶಕರಿಗೆ ಎದುರಾಡಿದ್ದನ್ನು ನಾನಂತೂ ಒಮ್ಮೆಯೂ ನೋಡಿಲ್ಲ. ಶೂಟಿಂಗ್ ಬಿಡುವಿನ ವೇಳೆಯಲ್ಲಿ ನಾನು ಕೊಡುತ್ತಿದ್ದ ತೊಂದರೆಗೂ ಅವರು ಬೇಸರ ಮಾಡಿಕೊಂಡವರಲ್ಲ. ಒಳ್ಳೆಯ ಮೂಡ್‌ನ ನಿರೀಕ್ಷೆಯಲ್ಲಿರುವ ಛಾಯಾಗ್ರಾಹಕನಿಗೆ ಮತ್ತೇನು ಬೇಕು ಹೇಳಿ?

ಕೂಸು ಮರಿ

ನಾನು ನೋಡಿದಂತೆ ರಾಜ್ ಮತ್ತು ಚಿತ್ರಸಾಹಿತಿ ಚಿ.ಉದಯಶಂಕರ್ ಅಪರೂಪದ ಸ್ನೇಹಿತರು. ಇಬ್ಬರಿಗೂ ಪರಸ್ಪರರಲ್ಲಿ ಅಪಾರ ಪ್ರೀತಿ, ಗೌರವ. ಒಂದು ಹಂತದ ಸಲಿಗೆಯೂ ಇತ್ತು. ಉದಯಶಂಕರ್ ಚಿತ್ರಕಥೆ, ಸಂಭಾಷಣೆಯಲ್ಲಿಯೇ ಅಲ್ಲವೇ ರಾಜ್ ಜನರನ್ನು ಸೆಳೆದದ್ದು? ರಾಜ್‌ರನ್ನು ಹತ್ತಿರದಿಂದ ಒಡನಾಡಿದ್ದರಿಂದ ಅವರ ಇಮೇಜ್‌ಗೆ ಸರಿಹೊಂದುವಂತೆ ಬರೆಯಲು ಉದಯಶಂಕರ್ ಅವರಿಗೆ ಸಾಧ್ಯವಾಗಿರಬಹುದು. ರಾಜ್ ಸಿನಿಮಾಗಳ ಚಿತ್ರೀಕರಣಗಳಿಗೆ ಹೋದ ಬಹಳಷ್ಟು ಸಂದರ್ಭಗಳಲ್ಲಿ ಚಿ.ಉದಯಶಂಕರ್ ಅವರನ್ನು ಭೇಟಿಯಾಗಿದ್ದೇನೆ. ಸಾಕಷ್ಟು ಬಾರಿ ಅವರು ನನ್ನ ಕ್ಯಾಮರಾಗೆ ರೂಪದರ್ಶಿಯಾಗಿದ್ದಾರೆ.

ನಂದಿಬೆಟ್ಟದಲ್ಲೊಮ್ಮೆ ರಾಜ್ ಮತ್ತು ಉದಯಶಂಕರ್ ಜೋಡಿಯ ಚಿತ್ರ ತೆಗೆದದ್ದು ನನಗೆ ಬಹುವಾಗಿ ಕಾಡುತ್ತದೆ. ರಾಜ್‌ರ ಚಿತ್ರವೊಂದಕ್ಕೆ ನಂದಿಬೆಟ್ಟದ ಟಿಪ್ಪು ಡ್ರಾಪ್‌ನಲ್ಲಿ ಶೂಟಿಂಗ್ ನಡೆಯುತ್ತಿತ್ತು. ಚಿ.ಉದಯಶಂಕರ್ ಕೂಡ ಸೆಟ್‌ನಲ್ಲಿದ್ದರು. ನಾನಲ್ಲಿಗೆ ಹೋದಾಗ ಇಬ್ಬರೂ ಸನ್ನಿವೇಶವೊಂದರ ಬಗ್ಗೆ ಚರ್ಚಿಸುತ್ತಿದ್ದರೆಂದು ಕಾಣುತ್ತದೆ. ಅವರ ಗಂಭೀರ ಮಾತುಕತೆ ಮುಗಿಯುತ್ತಿದ್ದಂತೆ ನಾನಲ್ಲಿಗೆ ಹೋದೆ. ಅಪರೂಪದ ಪೋಸ್ ಬೇಕೆಂದಾಗ, ಉತ್ಸಾಹಿ ರಾಜ್ ಕ್ಷಣಕಾಲ ಯೋಚಿಸಿದರು.ಉದಯಶಂಕರ್‌ರನ್ನು ಕೂಸು ಮರಿ ಮಾಡಿದರೆ ಹೇಗೆ?’ ಎಂದು ಕೇಳಿದ ರಾಜ್, ಅದಕ್ಕೆ ಸಜ್ಜಾದರು. ಚಿ.ಉದಯಶಂಕರ್ ನಗುತ್ತಲೇ ರಾಜ್ ಬೆನ್ನೇರಿದರು. ಸ್ಥೂಲಕಾಯದ ಅವರನ್ನು ಹೊರುತ್ತಲೇ ರಾಜ್ ಒಂದೆಡೆ ಕೊಂಚ ವಾಲಿದರು. ಆಕಸ್ಮಾತ್ ಇಬ್ಬರೂ ಬಿದ್ದರೇನು ಗತಿ ಎಂದು ನನಗೆ ಗಾಬರಿಯಾಯ್ತು. ಯಾಕಾದರೂ ಭಿನ್ನ ಪೋಸ್ ಕೊಡಿ ಎಂದು ಕೇಳಿದೆನೋ ಎಂದು ಪರಿತಪಿಸಿದೆ. ಹಾಗೇನೂ ಆಗಲಿಲ್ಲ. ರಾಜ್ ತಮ್ಮ ಸ್ನೇಹಿತನನ್ನು ಕೂಸು ಮರಿ ಮಾಡುವ ಅಪರೂಪದ ಪೋಸ್ ನನ್ನ ಕ್ಯಾಮರಾಗೆ ದಕ್ಕಿತು. ಮುಂದೆ ಈ ಫೋಟೋ ನೋಡಿ ಅವರಿಬ್ಬರೂ ತುಂಬಾ ಖುಷಿಪಟ್ಟಿದ್ದರು.

ರಾಜ್ ನೃತ್ಯಕ್ಕೆ ಮನಸೋತ ಹನುಮ!

ನಂದಿಬೆಟ್ಟದಲ್ಲಿ ರಾಜ್ ಸಿನಿಮಾಗೆ ಚಿತ್ರೀಕರಣ ನಡೆಯಲಿದೆ ಎನ್ನುವ ವಿಷಯ ಕಿವಿಗೆ ಬಿದ್ದಿತ್ತು. ಯಾವ ಸಿನಿಮಾ ಎನ್ನುವ ಕುತೂಹಲದಿಂದಲೇ ಹೋಗಿದ್ದೆ. ಸೆಟ್‌ಗೆ ಹೋಗುತ್ತಿದ್ದಂತೆ ನೃತ್ಯ ನಿರ್ದೇಶಕ ಉಡುಪಿ ಜಯರಾಂ ಎದುರಾದರು. `ಓ, ನೀವು ಬಂದ್ಬಿಟ್ರಾ, ಇನ್ನು ಅಣ್ಣಾವ್ರು ನಮಗೆ ಸಿಗೋಲ್ಲ ಬಿಡಿ..’ ಎಂದು ನಗುತ್ತಲೇ ನನ್ನನ್ನು ಸ್ವಾಗತಿಸಿದರು. ಅವರೊಂದಿಗೆ ಲೋಕಾಭಿರಾಮವಾಗಿ ಮಾತನಾಡುತ್ತಿರುವಾಗ ನಿರ್ದೇಶಕ ಗೀತಪ್ರಿಯ ಅವರ ಪದಾರ್ಪಣೆಯಾಯ್ತು. ರಾಜ್ ಅಭಿನಯದ `ಭೂಪತಿ ರಂಗ’ ಸಿನಿಮಾ ಹಾಡಿನ ಚಿತ್ರೀಕರಣ ಎನ್ನುವುದು ಗೊತ್ತಾಯಿತು. ಕೊಂಚ ಹೊತ್ತಿನಲ್ಲಿಯೇ ಶಾಟ್‌ಗೆ ಸಿದ್ಧರಾಗಿ ರಾಜ್ ನನ್ನೆಡೆ ಕೈಬೀಸುತ್ತಾ ಬಂದರು.
ತಮಿಳಿನಲ್ಲಿ ಆಗ ಹೆಸರು ಮಾಡಿದ್ದ ಉದಯ ಚಂದ್ರಿಕಾ ಈ ಚಿತ್ರದ ನಾಯಕಿ. ರಾಜ್ – ಉದಯ ಚಂದ್ರಿಕಾ ಜೋಡಿಯ `ಓಹೋ ಮುದ್ದಿನ ಮಲ್ಲಿಗೆ..’ ಯುಗಳ ಗೀತೆಗೆ ಅಂದು ಚಿತ್ರೀಕರಣ ನಡೆದದ್ದು. ಮಧ್ಯಾಹ್ನದಿಂದ ಸಂಜೆ ನಾಲ್ಕರವರೆಗೆ ಸತತವಾಗಿ ಚಿತ್ರೀಕರಣ ನಡೆಸಿದರು. ಕೊನೆಯಲ್ಲೊಂದು ತಮಾಷೆ ನಡೆಯಿತು. ಆಗ ನಂದಿ ಬೆಟ್ಟದಲ್ಲಿ ಕೋತಿಗಳು ಹೆಚ್ಚಿನ ಸಂಖ್ಯೆಯಲ್ಲಿದ್ದವು. ರಾಜ್ ಮುಂದಿನ ಶಾಟ್‌ಗೆಂದು ಕ್ಯಾಮರಾ ಎದುರು ಬರುತ್ತಿದ್ದಂತೆ ಕೋತಿಯೊಂದು ಅವರ ಬಳಿ ಓಡಿಬಂತು. ಚಿತ್ರತಂಡದ ಹುಡುಗರು ಓಡಿಸಿದರೂ ಅದು ಹೋಗಲೊಲ್ಲದು. ತಮ್ಮ ಕಾಲ ಬಳಿಯೇ ಸುಳಿದಾಡುತ್ತಿದ್ದ ಕೋತಿಯನ್ನು ರಾಜ್ ಪ್ರೀತಿಯಿಂದ ಮಾತನಾಡಿಸತೊಡಗಿದರು. ಕ್ಯಾಮರಾಮನ್ ಪಿ.ಎಸ್.ಪ್ರಕಾಶ್ ತಮ್ಮ ಕ್ಯಾಮರಾ ಆಫ್ ಮಾಡಿ ನಗುತ್ತಾ ಕುಳಿತರು. ನಾನು ಕ್ಯಾಮರಾ ಎತ್ತಿಕೊಂಡು ಅಲ್ಲಿಗೆ ಓಡಿದೆ. ಕೋತಿ ಎದುರು ರಾಜ್ ನೃತ್ಯದ ಬಂಗಿಯಲ್ಲಿ ಕೊಟ್ಟ ಪೋಸುಗಳನ್ನು ಕ್ಲಿಕ್ಕಿಸಿಕೊಂಡೆ. ಹೀಗೆ, ರಾಜ್ ಅವರೊಂದಿಗಿನ ಒಡನಾಟ ನನ್ನ ಬದುಕಿನ ಮಧುರ ನೆನಪುಗಳಾಗಿ ಉಳಿದಿವೆ.

ನಿರೂಪಣೆ: ಶಶಿಧರ ಚಿತ್ರದುರ್ಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...