Homeರಾಜಕೀಯರಾಫೇಲ್‌ನ ಜಡ್ಜ್ಮೆಂಟ್‌ನಲ್ಲಿ ತಪ್ಪು ನುಸುಳಿದೆ: ಕೇಂದ್ರ ಸರ್ಕಾರದಿಂದಲೇ ಅರ್ಜಿ ಸಲ್ಲಿಕೆ

ರಾಫೇಲ್‌ನ ಜಡ್ಜ್ಮೆಂಟ್‌ನಲ್ಲಿ ತಪ್ಪು ನುಸುಳಿದೆ: ಕೇಂದ್ರ ಸರ್ಕಾರದಿಂದಲೇ ಅರ್ಜಿ ಸಲ್ಲಿಕೆ

- Advertisement -
- Advertisement -

ಇದನ್ನು ತಮಾಷೆ ಎನ್ನುವುದೋ, ನಮ್ಮ ದೇಶ ತಲುಪಿರುವ ದುರಂತದ ಸ್ಥಿತಿ ಎನ್ನುವುದೋ ಹೇಳುವುದು ಕಷ್ಟ. ನಿನ್ನೆ ಸುಪ್ರೀಂಕೋರ್ಟಿನಲ್ಲಿ ರಾಫೇಲ್ ಡೀಲ್‌ಗೆ ಸಂಬಂಧಿಸಿದಂತೆ ‘ತಮಗೆ ವಿಜಯ, ಪ್ರತಿಪಕ್ಷ ಕ್ಷಮೆ ಕೇಳಬೇಕು’, ‘ಮೋದಿಗೆ ಕ್ಲೀನ್‌ಚಿಟ್’, ‘ರಾಫೇಲ್ ಡೀಲ್‌ನಲ್ಲಿ ಏನೂ ತಪ್ಪಿಲ್ಲ’ ಎಂದೆಲ್ಲಾ ಬಿಜೆಪಿ ಮತ್ತು ಅದರ ಪಟಾಲಂ ಹಾಗೂ ಗೋದಿ ಮೀಡಿಯಾಗಳು ಕೂಗಾಡಿದ್ದವು. ವಾಸ್ತವದಲ್ಲಿ ಕೋರ್ಟಿಗೆ ಹೋಗಿದ್ದದ್ದು ಪ್ರತಿಪಕ್ಷವಲ್ಲ; ಅವು ಜಂಟಿ ಸಂಸದೀಯ ಸಮಿತಿಯ ರಚನೆಗೆ ಒತ್ತಾಯಿಸಿದ್ದವು. ಸುಪ್ರೀಂಕೋರ್ಟ್ ಏನೂ ತಪ್ಪಾಗಿಲ್ಲ ಎಂದು ಹೇಳುವುದಕ್ಕಿಂತ ಹೆಚ್ಚಾಗಿ ತಾನು ಮಧ್ಯಪ್ರವೇಶ ಮಾಡಲು ಸಾಧ್ಯವಿಲ್ಲ ಎಂದು ಹೇಳಲೇ ಹೆಚ್ಚು ಒತ್ತು ಕೊಟ್ಟಿತ್ತು.

ಈಗ ನೋಡಿದರೆ, ‘ಆ ಜಡ್ಜ್ಮೆಂಟ್‌ನಲ್ಲಿ ತಪ್ಪು ನುಸುಳಿದೆ, ತಾನು ಸೀಲ್ ಮಾಡಿದ ಕವರ್‌ನಲ್ಲಿ ಹೇಳಿದ್ದ ವಾಕ್ಯಗಳ ಆಧಾರದಿಂದಲೇ ಈ ತಪ್ಪು ಆಗಿದೆ’ ಎಂದು ಸ್ವತಃ ಕೇಂದ್ರ ಸರ್ಕಾರವು ಇಂದು ಸುಪ್ರೀಂಕೋರ್ಟಿನಲ್ಲಿ ಅರ್ಜಿ ಸಲ್ಲಿಸಿದೆ. ಇದೇಕೆ ನಡೆಯಿತು ಎಂಬುದನ್ನು ನೋಡೋಣ.

ಈ ಡೀಲ್‌ಗೆ ಸಂಬಂಧಿಸಿದಂತೆ ಸುಪ್ರೀಂಕೋರ್ಟು ಹೇಳಿದ್ದು 3 ಅಂಶ.

1. ಬೆಲೆಯ ಕುರಿತು ತಾನೇನೂ ಹೇಳಲಾರೆ, ಅದು ಪರಿಣಿತರಿಗೆ ಬಿಟ್ಟಿದ್ದು.
2. ಆಫ್‌ಸೆಟ್ ಪಾರ್ಟ್ನರ್ (ಅಂದರೆ ಅನಿಲ್ ಅಂಬಾನಿಯನ್ನೇ ಡಸಾಲ್ಟ್ನವರು ತೆಗೆದುಕೊಂಡಿದ್ದು) ಆಯ್ದುಕೊಂಡಿದ್ದು ಎರಡು ಕಾರ್ಪೋರೇಟ್ ಕಂಪೆನಿಗಳ ನಡುವಿನ ವ್ಯವಹಾರ.
3. ನಿಯಮಗಳನ್ನು ಸರಿಯಾಗಿ ಪಾಲಿಸಿಯೇ ವ್ಯವಹಾರ ನಡೆದಿದೆ.

ಅಂದರೆ ಮೊದಲೆರಡು ವಿಚಾರಗಳಲ್ಲಿ ಸರಿ ತಪ್ಪು ಏನು ನಡೆದಿದೆ ಎಂದು ಕೋರ್ಟ್ ಏನೂ ಹೇಳಿಲ್ಲ; ಇದರಲ್ಲಿ ಮಧ್ಯಪ್ರವೇಶಿಸುವುದು ಆಗದು ಎಂದು ಹೇಳಿದೆ. ಆದರೆ, ನಿಯಮಗಳನ್ನು ಸರಿಯಾಗಿ ಪಾಲಿಸಲಾಗಿದೆ ಎಂಬ ಅಭಿಪ್ರಾಯಕ್ಕೆ ಬರಲು ಅದು ಮುಂದಿಟ್ಟ ಪ್ರಮುಖ ಅಂಶವೆಂದರೆ 25ನೇ ಪ್ಯಾರಾ.

ಅದರ ಪ್ರಕಾರ ಈ ವ್ಯವಹಾರದ ಕುರಿತು ಸಿಎಜಿ ಪರಿಶೀಲಿಸಿದೆ, ಅದನ್ನು ಸಂಸತ್ತಿನ ಲೆಕ್ಕಪತ್ರ ಸಮಿತಿಯು (ಪಿಎಸಿ) ಪರಿಶೀಲಿಸಿದೆ ಮತ್ತು ಪಾರ್ಲಿಮೆಂಟ್‌ನಲ್ಲಿ ಅದರ ಸಾರಾಂಶವು ಮಂಡನೆಯಾಗುವುದರ ಮೂಲಕ ಸಾರ್ವಜನಿಕರಿಗೂ ವಿಷಯ ತಿಳಿಯುತ್ತದೆ.

ಇದು ಹೊರಬಿದ್ದ ಕೂಡಲೇ ಸಂಸತ್ತಿನ ಲೆಕ್ಕಪತ್ರ ಸಮಿತಿಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರ ಜೊತೆ ರಾಹುಲ್‌ಗಾಂಧಿ ಪತ್ರಿಕಾಗೋಷ್ಠಿ ನಡೆಸಿದ್ದರು. ಅಂತಹದೊಂದು ವರದಿಯೇ ತಮ್ಮ ಸಮಿತಿಯ ಮುಂದೆ ಬಂದಿಲ್ಲ ಎಂದು ಖರ್ಗೆ ಸ್ಪಷ್ಟಪಡಿಸಿದ್ದರು.

ಅಷ್ಟೇ ಅಲ್ಲದೇ, ಸಿಎಜಿಯನ್ನು ಮತ್ತು ಸುಪ್ರೀಂಕೋರ್ಟಿಗೆ ಈ ಸುಳ್ಳು ಹೇಳಿದ ಅಟಾರ್ನಿ ಜನರಲ್‌ರನ್ನು ಸಮಿತಿಯ ಮುಂದೆ ಕರೆಸಲು, ಇತರ ಸದಸ್ಯರಿಗೂ ಕೇಳುತ್ತೇನೆ ಎಂದು ಖರ್ಗೆ ಗುಡುಗಿದ್ದರು. ಅಲ್ಲಿಗೆ ತಾವು ಸೀಲ್ಡ್ ಕವರ್‌ನಲ್ಲಿ ಸುಪ್ರೀಂಕೋರ್ಟಿಗೆ ಹೇಳಿದ್ದ ಸುಳ್ಳನ್ನು ಆದೇಶದಲ್ಲೂ ಕೋರ್ಟು ಬಿಚ್ಚಿಟ್ಟದ್ದರಿಂದ ಸಿಕ್ಕಿ ಹಾಕಿಕೊಂಡ ಕೇಂದ್ರ ಸರ್ಕಾರವು ಅಡಕತ್ತರಿಗೆ ಸಿಕ್ಕಿಬಿಟ್ಟಿತು. ಇನ್ನು ತಾನು ಪೂರ್ಣ ಸಿಕ್ಕಿಹಾಕಿಕೊಳ್ಳುತ್ತೇನೆ ಎಂದು ಅದಕ್ಕೆ ಗೊತ್ತಾಯಿತು.

ಹಾಗಾಗಿ ಇಂದು ಸ್ವತಃ ತಾನೇ ಅಫಿಡವಿಟ್ ಸಲ್ಲಿಸಿತು. ಅದರಲ್ಲಿ `ತಾನು ನೀಡಿದ ಮಾಹಿತಿಯಲ್ಲಿ ಇಂಗ್ಲಿಷಿನಲ್ಲಿ ವಿವರಿಸಿದ ವಾಕ್ಯಗಳಲ್ಲಿ ತಪ್ಪು ಅರ್ಥ ಉಂಟಾಗಿರಬಹುದು. ಸಾಮಾನ್ಯವಾಗಿ ಸಿಎಜಿ ವರದಿಯನ್ನು ಪಿಎಸಿ ಪರಿಶೀಲಿಸುತ್ತದೆ ಮತ್ತು ಸಾಮಾನ್ಯವಾಗಿ ಅದರ ಸಾರಾಂಶವು ಸಂಸತ್ತಿನಲ್ಲಿ ಮಂಡನೆಯಾಗುತ್ತದೆ ಎಂಬ ಅರ್ಥದಲ್ಲಿ ಹೇಳಿದ್ದೇ ಹೊರತು, ಈಗಾಗಲೇ ಸಲ್ಲಿಸಲಾಗಿದೆ ಎಂದಲ್ಲ’ ಎಂದು ಹೇಳಿಕೊಂಡಿದೆ.

ಅಂದರೆ ವಿಚಾರ ಸ್ಪಷ್ಟವಾಗಿದೆ. ಬಿಜೆಪಿ ಪಕ್ಷವು, ಈ ಡೀಲ್‌ನಲ್ಲಿ ನೇರವಾಗಿ ಭಾಗಿಯಾದ ನರೇಂದ್ರ ಮೋದಿಯವರನ್ನು ಬಚಾವು ಮಾಡಲು ಒಂದಾದ ಮೇಲೆ ಒಂದರಂತೆ ಸುಳ್ಳುಗಳನ್ನು ಹೇಳತೊಡಗಿದೆ. ಪ್ರತೀ ಸುಳ್ಳೂ ಅನುಮಾನಗಳನ್ನು ಗಟ್ಟಿ ಮಾಡಿದೆಯೇ ಹೊರತು ಎಲ್ಲಿಯೂ ಅನುಮಾನ ನಿವಾರಣೆಯಾಗುವಂತೆ ಆಗಿಲ್ಲ.

ಹೀಗಾಗಿ
1. ಸುದೀರ್ಘ ಇತಿಹಾಸವುಳ್ಳ ಎಚ್‌ಎಎಲ್‌ನಿಂದ ಕಿತ್ತುಕೊಂಡು ಅನಿಲ್ ಅಂಬಾನಿಗೆ ಕೊಟ್ಟಿದ್ದೇಕೆ?
2. ಅದನ್ನು ನೀಡಬೇಕಾಗಿ ಬಂದಿದ್ದು ಭಾರತದ ಪ್ರಧಾನಿಯ ಕೋರಿಕೆಯ ಮೇರೆಗೆ ಎಂಬ ಹೇಳಿಕೆಯು ಫ್ರಾನ್ಸ್ನಿಂದ ಬಂದಿದ್ದನ್ನು ನೀವು ಮುಚ್ಚಿಹಾಕಲು ಪ್ರಯತ್ನಿಸುತ್ತಿರುವುದೇಕೆ?
3. ಮೂರು ಪಟ್ಟು ಹೆಚ್ಚು ಬೆಲೆಗೆ ಕೊಂಡುಕೊಳ್ಳುತ್ತಿರುವುದೇಕೆ?
4. ಹಿಂದೆ ಭಾರತದಲ್ಲೇ ತಂತ್ರಜ್ಞಾನವನ್ನೂ ಪಡೆದುಕೊಂಡು ಮೇಕ್‌ಇನ್ ಇಂಡಿಯಾ ಮಾಡಲು ಆಗಿದ್ದ ಒಪ್ಪಂದ ಬಿಟ್ಟು ಈಗ ತಂತ್ರಜ್ಞಾನ ವರ್ಗಾವಣೆಯೂ ಇಲ್ಲದೇ ಹೋಗುವಂತಾಗಲು ಹೇಗೆ ಒಪ್ಪಿಕೊಂಡಿರಿ?
5. ರಕ್ಷಣಾ ಸಚಿವರನ್ನೂ ಒಳಗೊಂಡಂತೆ ಯಾರಿಗೂ ಗೊತ್ತಿಲ್ಲದ ವ್ಯವಹಾರವನ್ನು ಪ್ರಧಾನಿ ಕಾರ್ಯಾಲಯ ಮಾತ್ರ ದಿಢೀರ್ ಎಂದು ಮಾಡಿದ್ದು ಏಕೆ?

ಈ ಎಲ್ಲಾ ಪ್ರಶ್ನೆಗಳಿಗೆ ಉತ್ತರ ಸಿಗಬೇಕೆಂದರೆ ಜಂಟಿ ಸಂಸದೀಯ ಸಮಿತಿಯ ತನಿಖೆ ಅಥವಾ ಸುಪ್ರೀಂಕೋರ್ಟ್ ಉಸ್ತುವಾರಿಯಲ್ಲಿ ತನಿಖೆ ನಡೆಯಬೇಕಲ್ಲದೇ ಬೇರೆ ದಾರಿಯಿಲ್ಲ.

ಅದನ್ನು ಬಿಟ್ಟು ಮತ್ತಷ್ಟು ಮುಚ್ಚಿ ಹಾಕಲು ಹೊರಟರೆ, ‘ಚೌಕೀದಾರ್ ಚೋರ್ ಹೈ’ ಮಾತು ನಿಜವೆಂದು ಜನರು ಹೆಚ್ಚೆಚ್ಚು ನಂಬುತ್ತಾ ಹೋಗುತ್ತಾರೆ. ಬಿಜೆಪಿಯು ಜಂಟಿ ಸಂಸದೀಯ ಸಮಿತಿಗೆ ಒಪ್ಪಿಸಿ ಧೈರ್ಯವನ್ನು ಮೆರೆಯಬೇಕು. ಅದೊಂದೇ ಪರಿಹಾರ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...